Author: kannadanewsnow09

ಉಡುಪಿ: ಸ್ವ ಉದ್ಯೋಗಾಕಾಂಕ್ಷಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಟೈಲರಿಂಗ್ ಸೇರಿದಂತೆ ವಿವಿಧ ಉಚಿತ ತರಬೇತಿಗೆ ಅರ್ಜಿಯನ್ನು ಬ್ರಹ್ಮಾವರದಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಆಹ್ವಾನಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಸಂಸ್ಥೆಯು, ಉಡುಪಿಯ ಬ್ರಹ್ಮಾವರ ಬಳಿಯಲ್ಲಿರುವಂತ ರುಡ್ ಸೆಟ್ ಸಂಸ್ಥೆಯಿಂದ ಮಹಿಳಾ 30 ದಿನಗಳ ಟೈಲರಿಂಗ್ ತರಬೇತಿಯನ್ನು ದಿನಾಂಕ 25.11.2024 ರಿಂದ 24.12.2024ರವರೆಗೆ ಆಯೋಜಿಸಲಾಗಿದೆ ಎಂದಿದೆ. ಇದಲ್ಲದೇ ಹಪ್ಪಳ, ಉಪ್ಪಿನಕಾಯಿ ಮತ್ತು ಮಸಾಲ ಪೌಡರ್‌ ತಯಾರಿಕೆ ತರಬೇತಿಯನ್ನು ಆಯೋಜಿಸಲಾಗಿದೆ. ಆ ತರಬೇತಿಯು ದಿನಾಂಕ 15.12.2024 ರಿಂದ 24.12.24ರ ವರೆಗೆ (10ದಿನ) ನಡೆಯುತ್ತದೆ ಎಂದು ಮಾಹಿತಿ ನೀಡಿದೆ. ತರಬೇತಿಯ ಅವಧಿಯಲ್ಲಿ ವಸತಿ, ಊಟ, ತರಬೇತಿ ಉಚಿತವಾಗಿರುತ್ತದೆ. ಆಸಕ್ತ 18-45 ವರ್ಷದ ಒಳಗಿನವರು ಉಚಿತ ಸ್ವ ಉದ್ಯೋಗ ತರಬೇತಿಗೆ ಅರ್ಜಿಯನ್ನು ಸಲ್ಲಿಸಬಹುದಾಗಿದೆ ಎಂದಿದೆ. ಆಸಕ್ತರು  https://forms.gle/ks4rqz9kFq89FKKPA ಕ್ಲಿಕ್ ಮಾಡುವ ಮೂಲಕ ಅರ್ಜಿಯನ್ನು ಸಲ್ಲಿಸಿ ನೋಂದಾಯಿಸಿಕೊಳ್ಳಬಹುದು. ಈ ಸಂಬಂಧದ ಹೆಚ್ಚಿನ ಮಾಹಿತಿಗಾಗಿ 9844086383, 7022560492 ಸಂಖ್ಯೆಗಳಿಗೆ ಕರೆಮಾಡಿ ಪಡೆಯಬಹುದು. ಅಲ್ಲದೇ ಸಂಸ್ಥೆಯ ಅಧಿಕೃತ ವೆಬ್…

Read More

ನವದೆಹಲಿ: ಹೆಚ್ಚಿನ ಸೇವೆಗಳನ್ನು ಆನ್ಲೈನ್ನಲ್ಲಿ ಪ್ರವೇಶಿಸಬಹುದಾದ ಯುಗದಲ್ಲಿ, ಆಧಾರ್ ಕಾರ್ಡ್ ನಿರ್ಣಾಯಕ ಗುರುತಿನ ದಾಖಲೆಯಾಗಿ ಉಳಿದಿದೆ. ಇದು ನೋಂದಣಿಗೆ ಹೆಚ್ಚು ನೇರ ವಿಧಾನದ ಅಗತ್ಯವಿದೆ. ಈ ಪ್ರಕ್ರಿಯೆಯು ಸಂಪೂರ್ಣವಾಗಿ ಡಿಜಿಟಲ್ ಆಗದಿದ್ದರೂ, ವ್ಯವಸ್ಥೆಯು ವಿಕಸನಗೊಳ್ಳುತ್ತಲೇ ಇದೆ. ಇದು ಭಾರತದ ಎಲ್ಲಾ ನಿವಾಸಿಗಳಿಗೆ ಸುಲಭ ಪ್ರವೇಶವನ್ನು ಖಚಿತಪಡಿಸುತ್ತದೆ. ಆದರೆ ಈ ಪ್ರಮುಖ ದಾಖಲೆಯನ್ನು ಪಡೆಯಲು ಏನು ಬೇಕು? ಮೊದಲ ಬಾರಿಗೆ ಆಧಾರ್ ಕಾರ್ಡ್ ಪಡೆಯುವಲ್ಲಿ ಒಳಗೊಂಡಿರುವ ಪ್ರಮುಖ ಹಂತಗಳನ್ನು ನೋಡೋಣ. ಡಿಜಿಟಲ್ ಕ್ರಾಂತಿಯ ಹೊರತಾಗಿಯೂ, ಆಧಾರ್ ಕಾರ್ಡ್ ಅನ್ನು ಮೊದಲಿನಿಂದ ಸಂಪೂರ್ಣವಾಗಿ ಆನ್ ಲೈನ್ ನಲ್ಲಿ ರಚಿಸಲು ಸಾಧ್ಯವಿಲ್ಲ. ಆದಾಗ್ಯೂ, ನೀವು ಭಾರತದ ನಿವಾಸಿಯಾಗಿದ್ದರೆ ಮತ್ತು ಮೊದಲ ಬಾರಿಗೆ ಆಧಾರ್ ಕಾರ್ಡ್ಗೆ ಅರ್ಜಿ ಸಲ್ಲಿಸಲು ಬಯಸಿದರೆ, ಪ್ರಕ್ರಿಯೆಯನ್ನು ಸರಳ ಮತ್ತು ಹೆಚ್ಚು ಪ್ರವೇಶಿಸುವಂತೆ ಮಾಡಲಾಗಿದೆ. ಒಳಗೊಂಡಿರುವ ಹಂತಗಳನ್ನು ಅರ್ಥಮಾಡಿಕೊಳ್ಳಲು ನಿಮಗೆ ಸಹಾಯ ಮಾಡಲು ತ್ವರಿತ ಮಾರ್ಗದರ್ಶಿ ಇಲ್ಲಿದೆ. ಆಧಾರ್ ಕಾರ್ಡ್ ಪಡೆಯುಲು ಈ ಹಂತ ಅನುಸರಿಸಿ ಹಂತ 1: ನೋಂದಣಿ ಕೇಂದ್ರಕ್ಕೆ ಭೇಟಿ…

Read More

ಬೆಂಗಳೂರು: ರಾಜ್ಯ ಸರ್ಕಾರಿ ನೌಕರರಿಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿನ ಸರ್ಕಾರಿ ನೌಕರನ ಸಾಮಾನ್ಯ ಭವಿಷ್ಯ ನಿಧಿ ಖಾತೆಯಲ್ಲಿ ಇರುವ ಉಳಿಕೆ ಮೊತ್ತದ ಗರಿಷ್ಠ 90% ಅನ್ನು ಮಂಜೂರಿಗೆ ಅವಕಾಶ ನೀಡಲಾಗಿದೆ. ಈ ಮೂಲಕ ಶೇ.90ರಷ್ಟು GPF ಹಣವನ್ನು ಹಿಂಪಡೆಯಲು ಅವಕಾಶ ಕಲ್ಪಿಸಲಾಗಿದೆ. ಈ ಕುರಿತಂತೆ ಆರ್ಥಿಕ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿಯವರು ಅಧಿಸೂಚನೆಯನ್ನು ಹೊರಡಿಸಿದ್ದಾರೆ. ಅದರಲ್ಲಿ ಭವಿಷ್ಯ ನಿಧಿಗಳ ಅಧಿನಿಯಮ, 1925 (1925 ರ ಕೇಂದ್ರ ಅಧಿನಿಯಮ XIX) ರ 8 ನೇ ಪ್ರಕರಣವನ್ನು ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ, 1978 (1990ರ ಕರ್ನಾಟಕ ಅಧಿನಿಯಮ 14)ರ 8 ರೊಂದಿಗೆ ಓದಿಕೊಂಡು ಅದೇ ಅಧಿನಿಯಮದ (3)ನೇ ಪ್ರಕರಣದ (1)ನೇ ಉಪ ಪ್ರಕರಣದ ಮೂಲಕ ಪ್ರದತ್ತವಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಸರ್ಕಾರವು, ಕರ್ನಾಟಕ ಸಾಮಾನ್ಯ ಭವಿಷ್ಯ ನಿಧಿ 2016 ನ್ನು ಮತ್ತಷ್ಟು ತಿದ್ದುಪಡಿ ಮಾಡಲು ಈ ಮುಂದಿನ ಕರಡನ್ನು ರಚಿಸಲು…

Read More

ಕೆಎನ್ಎನ್ ಸಿನಿಮಾ ಡೆಸ್ಕ್: ನಟ ರಿಷಬ್ ಶೆಟ್ಟಿ ಅವರ ಬಹು ನಿರೀಕ್ಷಿತ ಕಾಂತಾರಾ: ಚಾಪ್ಟರ್ 1 2025 ರ ದಸರಾ ಸಮಯದಲ್ಲಿ ಬಿಡುಗಡೆಯಾಗಲಿದೆ. ರಾಷ್ಟ್ರೀಯ ಪ್ರಶಸ್ತಿ ವಿಜೇತ ಚಿತ್ರ ಕಾಂತಾರಾ ತಯಾರಕರು ನವೆಂಬರ್.17ರಂದು ಈ ಸುದ್ದಿಯನ್ನು ಘೋಷಿಸಿದರು. ಕಾಂತಾರಾ ಅವರ ಅಧಿಕೃತ ನಿರ್ಮಾಣ ಸಂಸ್ಥೆಯಾದ ಹೊಂಬಾಳೆ ಫಿಲ್ಮ್ಸ್ ಮುಂಬರುವ ಚಿತ್ರದ ಕುತೂಹಲಕಾರಿ ಪೋಸ್ಟರ್ ಅನ್ನು ಹಂಚಿಕೊಂಡಿದೆ ಮತ್ತು ಕಾಂತಾರಾ: ಚಾಪ್ಟರ್ 1 ಅಕ್ಟೋಬರ್ 2, 2025 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ಎಂದು ಘೋಷಿಸಿತು. https://twitter.com/hombalefilms/status/1858094631000449074 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಗಳಲ್ಲಿ ಆರೋಗ್ಯಕರ ಮನರಂಜನೆಯನ್ನು ಒದಗಿಸಿದ್ದಕ್ಕಾಗಿ ಕಾಂತಾರಾ ರಿಷಬ್ ಶೆಟ್ಟಿಗೆ ಅತ್ಯುತ್ತಮ ನಟ ಪ್ರಶಸ್ತಿಯನ್ನು ಗಳಿಸಿತು ಮತ್ತು ಅತ್ಯುತ್ತಮ ಜನಪ್ರಿಯ ಚಿತ್ರವೆಂದು ಗುರುತಿಸಲ್ಪಟ್ಟಿತು. https://kannadanewsnow.com/kannada/nhm-contractual-outsourced-employees-of-health-department-protest-against-state-government-decide-to-go-on-strike/ https://kannadanewsnow.com/kannada/big-news-only-ineligible-bpl-cards-returned-cm-siddaramaiah-clarified/

Read More

ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಕಾರ್ಯ ನಿರ್ವಹಿಸುತ್ತಿರುವಂತ NHM ಗುತ್ತಿಗೆ, ಹೊರಗುತ್ತಿಗೆ ನೌಕರರು, ತಮ್ಮ ಬೇಡಿಕೆ ಈಡೇರಿಸಲು ಆಗ್ರಹಿಸಿ, ಮುಷ್ಕರ ನಡೆಸಲು ಮುಂದಾಗಿದ್ದಾರೆ. ಈಗಾಗಲೇ ಸಿಬ್ಬಂದಿಗಳ ಬೇಡಿಕೆಗಳನ್ನು ಈಡೇರಿಸಲು ಅನಿರ್ಧಿಷ್ಠಾವಧಿ ಮುಷ್ಕರ ಮಾಡಲು ನೋಟಿಸನ್ನು ಸರ್ಕಾರಕ್ಕೆ ಸಲ್ಲಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘದ ಅಧ್ಯಕ್ಷ ಶ್ರೀಕಾಂತ್ ಸ್ವಾಮಿ ಅವರು, ಆರೋಗ್ಯ ಇಲಾಖೆ, ರಾಷ್ಟ್ರೀಯ ಆರೋಗ್ಯ ಅಭಿಯಾನದ (NHM) ಗುತ್ತಿಗೆ ಮತ್ತು ಹೊರಗುತ್ತಿಗೆ ನೌಕರರ ಬೇಡಿಕೆಗಳನ್ನು ಈಡೇರಿಸುವಂತೆ ಈಗಾಗಲೇ ಸಾಕಷ್ಟು ಬಾರಿ ಹೋರಾಟಗಳನ್ನು ಮಾಡಿದ್ದು ಸರ್ಕಾರದಿಂದ ಸಚಿವರ ಅಧ್ಯಕ್ಷತೆಯಲ್ಲಿ ಸಭೆ ನಡೆಸಲಾಗಿತ್ತು. ಆದರೆ ಇಲ್ಲಿಯವರೆಗೂ ಬೇಡಿಕೆಗಳ ಅನುಷ್ಟಾನದಲ್ಲಿ ಸರ್ಕಾರ ಯಾವುದೇ ಕ್ರಮಗಳನ್ನು ಕೈಗೊಂಡಿರುವುದಿಲ್ಲ. ನಿವೃತ್ತ ಐಎಎಸ್ ಅಧಿಕಾರಿ ಶ್ರೀನಿವಾಸಾಚಾರಿ ವರದಿಯನ್ನೂ ಸಂಪೂರ್ಣವಾಗಿ ಅನುಷ್ಠಾನಗೊಳಿಸಿರುವುದಿಲ್ಲ ಎಂಬುದಾಗಿ ಹೇಳಿದ್ದಾರೆ. ಕಾನೂನಿನಲ್ಲಿ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳನ್ನು ನೇಮಕಾತಿ ಮಾಡಿಕೊಳ್ಳಲು ಅವಕಾಶ ಇದೆ ಎಂದಾದ…

Read More

ಮಂಗಳೂರು: ರೆಸಾರ್ಟ್ ನಲ್ಲಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಆಳ ತಿಳಿಯದೇ ಈಜು ಬಾರದಂತ ಮೂವರು ಯುವತಿಯರು ಸಾವನ್ನಪ್ಪಿದ ಘಟನೆಯ ನಂತ್ರ, ಜಿಲ್ಲಾ ಆಡಳಿತವು ರೆಸಾರ್ಟ್ ನ ಪರವಾನಗಿಯನ್ನು ರದ್ದುಗೊಳಿಸಿದೆ. ಈ ಕುರಿತಂತೆ ಮಂಗಳೂರು ಎಸಿ ಹರ್ಷವರ್ಧನ್ ಸುದ್ದಿಗಾರರೊಂದಿಗೆ ಮಾತನಾಡಿ, ಅವೈಜ್ಞಾನಿಕವಾಗಿ ಸ್ವಿಮ್ಮಿಂಗ್ ಪೂಲ್ ನಿರ್ಮಿಸಿ, ಮೂವರು ಯುವತಿಯರ ಸಾವಿಗೆ ಕಾರಣವಾದಂತ ರೆಸಾರ್ಟ್ ಲೈಸೆನ್ಸ್ ತಾತ್ಕಾಲಿಕವಾಗಿ ರದ್ದುಗೊಳಿಸುತ್ತಿರುವುದಾಗಿ ತಿಳಿಸಿದರು. ಮಂಗಳೂರಿನ ಉಳ್ಳಾಲ ಸಮೀಪದ ಸಾಯಿರಾಂ ವಾಝ್ಕೋ ರೆಸಾರ್ಟ್ ಗೆ ಮೈಸೂರಿನಿಂದ ಪ್ರವಾಸಕ್ಕೆಂದು ಶನಿವಾರದಂದು ಮೂವರು ಯುವತಿಯರಿ ತೆರಳಿದ್ದರು. ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಕೊಠಡಿಯಲ್ಲಿ ಉಳಿದುಕೊಂಡು, ಆ ಬಳಿಕ ಈಜು ಕೊಳದಲ್ಲಿ ಈಜಲು ತೆರಳಿದ್ದರು. ಈವೇಳೆ ಅವೈಜ್ಞಾನಿಕತೆಯಿಂದ ಕೂಡಿದ್ದಂತ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ಆಳ ತಿಳಿಯದೇ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ್ದರು. ಈ ಸಂಬಂಧ ಉಳ್ಳಾಲ ಠಾಣೆಯ ಪೊಲೀಸರು ಮಾಲೀಕ ಮನೋಹರ್ ಹಾಗೂ ಪುತ್ರನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/big-news-only-ineligible-bpl-cards-returned-cm-siddaramaiah-clarified/

Read More

ಮಂಗಳೂರು: ಇಲ್ಲಿನ ಉಳ್ಳಾಲ ಸಮೀಪದ ಖಾಸಗಿ ರೆಸಾರ್ಟ್ ಒಂದರಲ್ಲಿನ ಸ್ವಿಮ್ಮಿಂಗ್ ಪೂಲ್ ನಲ್ಲಿ ಈಜಲು ಇಳಿದಿದ್ದಂತ ಮೈಸೂರು ಮೂಲದ ಮೂವರು ಇಂಜಿನಿಯರಿಂಗ್ ವಿದ್ಯಾರ್ಥಿನಿಯರು ಮುಳುಗಿ ಸಾವನ್ನಪ್ಪಿದ್ದರು. ಈ ಸಂಬಂಧ ರೆಸಾರ್ಟ್ ಮಾಲೀಕ ಸೇರಿದಂತೆ ಇಬ್ಬರನ್ನು ಉಳ್ಳಾರ ಠಾಣೆಯ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಮಂಗಳೂರಿನ ಉಳ್ಳಾಲ ಸಮೀಪದ ಸಾಯಿರಾಂ ವಾಝ್ಕೋ ರೆಸಾರ್ಟ್ ಗೆ ಮೈಸೂರಿನಿಂದ ಪ್ರವಾಸಕ್ಕೆಂದು ಶನಿವಾರದಂದು ಮೂವರು ಯುವತಿಯರಿ ತೆರಳಿದ್ದರು. ಇಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿದ್ದ ಮೂವರು ಯುವತಿಯರು ಕೊಠಡಿಯಲ್ಲಿ ಉಳಿದುಕೊಂಡು, ಆ ಬಳಿಕ ಈಜು ಕೊಳದಲ್ಲಿ ಈಜಲು ತೆರಳಿದ್ದರು. ಈವೇಳೆ ಅವೈಜ್ಞಾನಿಕತೆಯಿಂದ ಕೂಡಿದ್ದಂತ ರೆಸಾರ್ಟ್ ನ ಸ್ವಿಮ್ಮಿಂಗ್ ಪೂಲ್ ಆಳ ತಿಳಿಯದೇ ಮುಳುಗಿ ಮೂವರು ಯುವತಿಯರು ಸಾವನ್ನಪ್ಪಿದ್ದರು. ಈ ಸಂಬಂಧ ಉಳ್ಳಾಲ ಠಾಣೆಯ ಪೊಲೀಸರು ಮಾಲೀಕ ಮನೋಹರ್ ಹಾಗೂ ಪುತ್ರನನ್ನು ವಶಕ್ಕೆ ಪಡೆದು, ವಿಚಾರಣೆ ನಡೆಸುತ್ತಿದ್ದಾರೆ. ಇನ್ನೂ ಮಂಗಳೂರು ನಗರ ಎಸಿ ಹರ್ಷವರ್ಧನ್ ಅವರು ತಾತ್ಕಾಲಿಕವಾಗಿ ರೆಸಾರ್ಟ್ ಪರವಾನಗಿಯನ್ನು ರದ್ದುಗೊಳಿಸುತ್ತಿರುವುದಾಗಿ ತಿಳಿಸಿದ್ದಾರೆ. https://kannadanewsnow.com/kannada/big-news-only-ineligible-bpl-cards-returned-cm-siddaramaiah-clarified/ https://kannadanewsnow.com/kannada/drinking-too-much-water-is-dangerous-can-be-life-threatening-doctors/

Read More

ನೀರು ಕುಡಿಯುವುದು ಎಷ್ಟು ಮುಖ್ಯ ಎಂಬುದರ ಬಗ್ಗೆ ನಾವು ಬಹಳಷ್ಟು ಕೇಳುತ್ತೇವೆ, ಸಾಮಾಜಿಕ ಮಾಧ್ಯಮಗಳಿಂದ ಅಥವಾ ಪೋಷಕರು ನಮಗೆ ನೆನಪಿಸುವುದರಿಂದ (ಅಥವಾ ಬೈಯುವುದರಿಂದ). ಆದರೆ ಹೆಚ್ಚು ನೀರು ಕುಡಿಯುವುದು ಅಪಾಯಕಾರಿ ಎಂದು ತಿಳಿದುಕೊಳ್ಳುವುದು ಸಹ ಮುಖ್ಯ. ಆದ್ದರಿಂದ, ಹೈಡ್ರೇಟ್ ಆಗಿ ಉಳಿಯುವುದು ಅತ್ಯಗತ್ಯವಾದರೂ, ಸರಿಯಾದ ಸಮತೋಲನವನ್ನು ಕಂಡುಹಿಡಿಯುವುದು ಮುಖ್ಯವಾಗಿದೆ. ನೀರಿನ ಮಾದಕತೆ ನಿಜ ಗುರುಗ್ರಾಮದ ಸಿಕೆ ಬಿರ್ಲಾ ಆಸ್ಪತ್ರೆಯ ಆಂತರಿಕ ಔಷಧ ಸಲಹೆಗಾರ ಡಾ.ತುಷಾರ್ ತಯಾಲ್, “ಹೈಪೋನಾಟ್ರೇಮಿಯಾ ಎಂದೂ ಕರೆಯಲ್ಪಡುವ ನೀರಿನ ಮಾದಕತೆಯು ಅಲ್ಪಾವಧಿಯಲ್ಲಿ ಅತಿಯಾದ ನೀರನ್ನು ಸೇವಿಸಿದಾಗ ಸಂಭವಿಸುತ್ತದೆ, ಇದು ರಕ್ತದಲ್ಲಿನ ಸೋಡಿಯಂ ಸಾಂದ್ರತೆಯನ್ನು ದುರ್ಬಲಗೊಳಿಸುತ್ತದೆ” ಎಂದು ಹೇಳಿದರು. ಸೋಡಿಯಂ ಒಂದು ನಿರ್ಣಾಯಕ ಎಲೆಕ್ಟ್ರೋಲೈಟ್ ಆಗಿದ್ದು, ಇದು ಜೀವಕೋಶಗಳ ಒಳಗೆ ಮತ್ತು ಹೊರಗೆ ದ್ರವಗಳ ಸಮತೋಲನವನ್ನು ನಿಯಂತ್ರಿಸಲು ಸಹಾಯ ಮಾಡುತ್ತದೆ ಎಂದು ಅವರು ವಿವರಿಸುತ್ತಾರೆ. “ಮೂತ್ರಪಿಂಡಗಳು ಹೆಚ್ಚುವರಿ ನೀರನ್ನು ಪರಿಣಾಮಕಾರಿಯಾಗಿ ತೆಗೆದುಹಾಕಲು ಸಾಧ್ಯವಾಗದಿದ್ದರೆ, ಹೆಚ್ಚುವರಿ ನೀರು ಜೀವಕೋಶಗಳನ್ನು ಪ್ರವೇಶಿಸುತ್ತದೆ, ಇದರಿಂದಾಗಿ ಅವು ಉಬ್ಬಿಕೊಳ್ಳುತ್ತವೆ” ಎಂದು ವೈದ್ಯರು ಹೇಳುತ್ತಾರೆ. ಇದಕ್ಕೆ ಗುರುಗ್ರಾಮದ…

Read More

ಹೃದಯಾಘಾತದ ನೋವನ್ನು ಹೆಚ್ಚಾಗಿ ತಪ್ಪಾಗಿ ಅರ್ಥೈಸಲಾಗುತ್ತದೆ, ಏಕೆಂದರೆ ಇದು ಸಾಮಾನ್ಯ ತೀಕ್ಷ್ಣವಾದ ನೋವು ಅಲ್ಲ ಆದರೆ ಹರಡಿದ ಅಸ್ವಸ್ಥತೆಯ ಸಂವೇದನೆಯಾಗಿದೆ. ಈ ಅಸ್ವಸ್ಥತೆಯು ವಿಶಾಲವಾಗಿದೆ ಮತ್ತು ನಿರ್ದಿಷ್ಟ ಸ್ಥಳಕ್ಕೆ ಗುರುತಿಸಲಾಗುವುದಿಲ್ಲ. ಹೃದಯಾಘಾತದ ರೋಗಲಕ್ಷಣಗಳನ್ನು ಅನುಭವಿಸುವ ವ್ಯಕ್ತಿಗಳು ಸಾಮಾನ್ಯವಾಗಿ ನಿಖರವಾದ ಸ್ಥಳವನ್ನು ಸೂಚಿಸುವ ಬದಲು ತಮ್ಮ ಎದೆಯ ಮೇಲೆ ಮುಚ್ಚಿದ ಮುಷ್ಟಿಯನ್ನು ಇರಿಸುತ್ತಾರೆ. ಹೃದಯಾಘಾತದ ನೋವನ್ನು ಆಮ್ಲೀಯತೆಯಿಂದ ಹೇಗೆ ಪ್ರತ್ಯೇಕಿಸುವುದು ಎಂಬುದನ್ನು ಅರ್ಥಮಾಡಿಕೊಳ್ಳುವುದು ನಿರ್ಣಾಯಕವಾಗಿದೆ, ಆದರೂ ಇದು ಸವಾಲಿನದ್ದಾಗಿರಬಹುದು. ಆಂಟಾಸಿಡ್ ಗಳನ್ನು ತೆಗೆದುಕೊಳ್ಳಿ ಆಂಟಾಸಿಡ್ಗಳು ಮತ್ತು ನೀರಿಗೆ ಅಸ್ವಸ್ಥತೆಯು ಹೇಗೆ ಪ್ರತಿಕ್ರಿಯಿಸುತ್ತದೆ ಎಂಬುದು ಒಂದು ಪ್ರಮುಖ ಸೂಚಕವಾಗಿದೆ. ಆಂಟಾಸಿಡ್ ಅಥವಾ ನೀರನ್ನು ಸೇವಿಸಿದ ನಂತರ ಅಸ್ವಸ್ಥತೆಯನ್ನು ನಿವಾರಿಸಿದರೆ, ಅದು ಆಮ್ಲೀಯತೆಯಿಂದಾಗಿರುವ ಸಾಧ್ಯತೆಯಿದೆ. ಈ ಪರಿಹಾರವು ಸಮಸ್ಯೆಯು ಹೃದಯಕ್ಕಿಂತ ಹೊಟ್ಟೆಗೆ ಸಂಬಂಧಿಸಿದೆ ಎಂದು ಸೂಚಿಸುತ್ತದೆ. ಆದಾಗ್ಯೂ, ಆಂಟಾಸಿಡ್ಗಳನ್ನು ತೆಗೆದುಕೊಂಡ ನಂತರ ಯಾವುದೇ ಪರಿಹಾರವಿಲ್ಲದಿದ್ದರೆ, ಅದು ತಕ್ಷಣದ ವೈದ್ಯಕೀಯ ಆರೈಕೆಯ ಅಗತ್ಯವಿರುವ ಹೃದಯದ ಸಮಸ್ಯೆಯನ್ನು ಸೂಚಿಸುತ್ತದೆ. ದೈಹಿಕ ಶ್ರಮವನ್ನು ಪರೀಕ್ಷಿಸಿ ಗುರುಗ್ರಾಮದ ಮರೆಂಗೊ ಏಷ್ಯಾ ಆಸ್ಪತ್ರೆಯ…

Read More

ಹಾವೇರಿ: ಇಲ್ಲಿನ ಎಪಿಎಂಸಿಯೊಂದರ ಗೋದಾಮಿನಲ್ಲಿ ಇರಿಸಿದ್ದಂತ ಹಳೆಯ ಬ್ಯಾಲೆಟ್ ಬಾಕ್ಸ್ ಗಳನ್ನು ಕದ್ದಿದ್ದಂತ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ನವೆಂಬರ್.13ರಂದು ಶಿಗ್ಗಾವಿ ಕ್ಷೇತ್ರದ ಯತ್ನಿನಹಳ್ಳಿ ಬಳಿಯ ಕಾಲುವೆಯಲ್ಲಿ ಹಳೆಯ ಬ್ಯಾಲೆಟ್ ಬಾಕ್ಸ್ ಗಳು ಪತ್ತೆಯಾಗಿದ್ದವು. ಹಾವೇರಿಯ ಶಿಗ್ಗಾಂವಿ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆಯ ಸಂದರ್ಭದಲ್ಲೇ ಪತ್ತೆಯಾದಂತ ಬ್ಯಾಲೆಟ್ ಬಾಕ್ಸ್ ಗಳಿಂದಾಗಿ ಹಲವು ಅನುಮಾನಗಳಿಗೂ ಕಾರಣವಾಗಿತ್ತು. ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದಂತ ಹಾವೇರಿ ನಗರ ಠಾಣೆಯ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದ್ದರು. ಹಾವೇರಿಯ ಎಪಿಎಂಸಿ ಗೋದಾಮಿನಲ್ಲಿ ಸಂಗ್ರಹಿಸಿ ಇರಿಸಲಾಗಿದ್ದಂತ ಹಳೆಯ ಬ್ಯಾಲೆಟ್ ಬಾಕ್ಸ್ ಗಳು ಎಂಬುದಾಗಿ ಪತ್ತೆಯಾಗಿತ್ತು. ಈ ಬಳಿಕ ಆರೋಪಿಗಳ ಪತ್ತೆಗೆ ಇಳಿದಿದ್ದರು. ಇಂದು ಪ್ರಕರಣ ಸಂಬಂಧ ಆರೋಪಿಗಳಾದಂತ ಸಂತೋಷ್ ಮಾಳಗಿ, ಮುತಪ್ಪ ದೇವಿ ಹೊಸೂರು, ಗಣೇಶ್ ಹರಿಜನ, ಕೃಷ್ಣ ಹರಿಜನ ಹಾಗೂ ಮೊಹಮ್ಮದ್ ಜಾವೆದ್ ಎಂಬುವರನ್ನು ಬಂಧಿಸಿದ್ದಾರೆ. ಬಂಧಿತ ಐವರು ಆರೋಪಿಗಳಿಂದ 27 ಬ್ಯಾಲೆಟ್ ಬಾಕ್ಸ್, ಕೃತ್ಯಕ್ಕೆ ಬಳಸಿದಂತ 1 ಆಟೋವನ್ನು ಜಪ್ತಿ ಮಾಡಿದ್ದಾರೆ. https://kannadanewsnow.com/kannada/udupi-congress-leaders-son-hits-and-runs-away-man-dies-on-the-spot/ https://kannadanewsnow.com/kannada/big-news-forcing-wife-to-leave-work-is-equal-to-cruelty-high-court-important-verdict/

Read More