Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಭಾರತೀಯ ರಾಷ್ಟ್ರೀಯ ಲೋಕದಳದ ಹರಿಯಾಣ ರಾಜ್ಯ ಘಟಕದ ಮುಖ್ಯಸ್ಥ ನಫೆ ಸಿಂಗ್ ರಾಠಿ ಅವರನ್ನು ರಾಜ್ಯದ ಝಜ್ಜರ್ ಜಿಲ್ಲೆಯಲ್ಲಿ ಕೆಲವು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪಕ್ಷದ ಹಿರಿಯ ಮುಖಂಡರೊಬ್ಬರು ಭಾನುವಾರ ತಿಳಿಸಿದ್ದಾರೆ. ಮಾಜಿ ಶಾಸಕರಾಗಿರುವ ರಾಠಿ ಅವರು ಎಸ್ಯುವಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಾಗ ಝಜ್ಜರ್ನ ಬಹದ್ದೂರ್ಗಢ ಪಟ್ಟಣದಲ್ಲಿ ದಾಳಿಕೋರರು ಅವರ ಮೇಲೆ ಹಲ್ಲೆ ನಡೆಸಿದ್ದಾರೆ. ಹರಿಯಾಣ ಐಎನ್ಎಲ್ಡಿ ಮುಖ್ಯಸ್ಥ ಮತ್ತು ಮಾಜಿ ಶಾಸಕ ನಫೆ ಸಿಂಗ್ ರಾಠಿ ಅವರನ್ನು ಭಾನುವಾರ (ಫೆಬ್ರವರಿ 25) ಝಜ್ಜರ್ ಜಿಲ್ಲೆಯ ಬಹದ್ದೂರ್ಗಢದಲ್ಲಿ ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಈ ಘಟನೆಯಲ್ಲಿ ರಾಠಿ ಅವರ ಸಹವರ್ತಿ ಕೂಡ ಸಾವನ್ನಪ್ಪಿದ್ದಾರೆ. ಮಾಜಿ ಶಾಸಕರ ಕುತ್ತಿಗೆ, ಸೊಂಟ ಮತ್ತು ತೊಡೆಗಳ ಬಳಿ ಸೇರಿದಂತೆ ಹಲವಾರು ಗುಂಡು ಗಾಯಗಳಾಗಿವೆ. ಎಸ್ ಟಿಎಫ್ ಮತ್ತು ಸಿಐಎ ತಂಡಗಳು ಈ ವಿಷಯದಲ್ಲಿ ಕೆಲಸ ಮಾಡುತ್ತಿವೆ ಮತ್ತು ಆರೋಪಿಗಳನ್ನು ಶೀಘ್ರದಲ್ಲೇ ಬಂಧಿಸಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. “ಗುಂಡಿನ ದಾಳಿಯ…
ಕೌಶಾಂಬಿ: ಉತ್ತರ ಪ್ರದೇಶದ ಕೌಶಾಂಬಿ ಜಿಲ್ಲೆಯ ಪಟಾಕಿ ಕಾರ್ಖಾನೆಯಲ್ಲಿ ಭಾನುವಾರ ಸಂಭವಿಸಿದ ಸ್ಫೋಟದಲ್ಲಿ ಕನಿಷ್ಠ ಏಳು ಜನರು ಸಾವನ್ನಪ್ಪಿದ್ದಾರೆ. ಏಳು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೊಖ್ರಾಜ್ ಪೊಲೀಸ್ ಠಾಣೆ ಪ್ರದೇಶದ ಮಹೇವಾ ಗ್ರಾಮದಲ್ಲಿ ಮಧ್ಯಾಹ್ನ 12 ಗಂಟೆ ಸುಮಾರಿಗೆ ಸ್ಫೋಟ ಸಂಭವಿಸಿದ್ದು, ಕಾರ್ಖಾನೆಯಿಂದ ಹಲವಾರು ಕಿಲೋಮೀಟರ್ ದೂರದಲ್ಲಿ ಸ್ಫೋಟದ ಸದ್ದು ಕೇಳಿದೆ ಎಂದು ಅವರು ತಿಳಿಸಿದ್ದಾರೆ. ಸ್ಫೋಟದ ಬಗ್ಗೆ ಮಾಹಿತಿ ಪಡೆದ ಕೂಡಲೇ 10 ಅಗ್ನಿಶಾಮಕ ಟೆಂಡರ್ಗಳು ಮತ್ತು ಆಂಬ್ಯುಲೆನ್ಸ್ಗಳು ಸ್ಥಳಕ್ಕೆ ಧಾವಿಸಿದವು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರಯಾಗ್ರಾಜ್ ವಲಯದ ಹೆಚ್ಚುವರಿ ಪೊಲೀಸ್ ಮಹಾನಿರ್ದೇಶಕ (ಎಡಿಜಿಪಿ) ಭಾನು ಭಾಸ್ಕರ್ ಮಾತನಾಡಿ, ಪಟಾಕಿ ಕಾರ್ಖಾನೆ ಶಾಹಿದ್ (35) ಎಂಬಾತನಿಗೆ ಸೇರಿದ್ದು. ಸ್ಫೋಟದಲ್ಲಿ ಇತರ ಆರು ಜನರೊಂದಿಗೆ ಅವರು ಸಹ ಕೊಲ್ಲಲ್ಪಟ್ಟರು. ಯುಪಿ ಪರಿಹಾರ ಆಯುಕ್ತರ ಕಚೇರಿ ಹಂಚಿಕೊಂಡ ಮಾಹಿತಿಯ ಪ್ರಕಾರ, ಇತರ ನಾಲ್ವರನ್ನು ಶಿವ ನಾರಾಯಣ್, ಶಿವಕಾಂತ್, ಅಶೋಕ್ ಕುಮಾರ್ ಮತ್ತು ಜೈಚಂದ್ರ ಎಂದು ಗುರುತಿಸಲಾಗಿದೆ. ಮೃತಪಟ್ಟ ಇತರ ಇಬ್ಬರನ್ನು…
ಒಂದು ಮಂತ್ರ ಸಾಕು ಸಾಲ ತೀರುತ್ತೆ. ಈ ಮಂತ್ರ ಹೇಳಿದರೆ ಮೂವತ್ತು ದಿನಗಳಲ್ಲಿ ಸಾಲ ತೀರುತ್ತೆ ಅನ್ನೋ ಕುತೂಹಲಕಾರಿ ಮತ್ತು ರಹಸ್ಯ ಮಾಹಿತಿಯನ್ನು ಇಲ್ಲಿ ನಾವು ನಿಮಗೆ ತಿಳಿಸಿಕೊಡುತ್ತೇವೆ. ಕಾಲಭೈರವ ಅಂದ್ರೆ ಶಿವನ ಸ್ವರೂಪ. 64 ಭೈರವ ರೂಪದಲ್ಲಿ ಕಾಲಭೈರವನೇ ಪ್ರಮುಖವಾದವನು. ಕಾಲ ಅಂದ್ರೆ ಸಮಯವನ್ನು ಸೂಚಿಸುವವನು ಎಂದರ್ಥ. ಭೈರವನ ಪೂಜೆ ಮಾಡೋದ್ರಿಂದ ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ ಪೂಜೆ ಪ್ರಯತ್ನ ಮಾಡಿದರು ನಿಮ್ಮ ಸಮಸ್ಯೆಗಳು ಬಗೆಹರಿದಿಲ್ಲವೇ..?ನಿಮ್ಮ ಯಾವುದೇಘೋರ ನಿಗೂಢ ಗುಪ್ತ ಸಮಸ್ಯೆಗಳಿಗೆ 2 ದಿನಗಳಲ್ಲಿ ಪರಿಹಾರ ಶತಸಿದ್ಧ ಧನವಶ, ಜನವಶ, ಶತ್ರುನಾಶ, ಸ್ತ್ರೀ– ಪುರುಷ ವಶೀಕರಣ, ದಿಗ್ಭಂಧನ, ಸ್ತಂಭನ, ವುಚ್ಛಾಟನೆಯಂತಹ ಸಮಸ್ಯೆಗಳಿಗೆ…
ಬೆಂಗಳೂರು: ಇಂದು ಹೃದಯಾಘಾತದಿಂದ ನಿಧನರಾದಂತ ಸುರಪುರ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆಯನ್ನು ನಾಳೆ ಸ್ವಗ್ರಾಮದಲ್ಲಿ ನಡೆಸಲಾಗುತ್ತಿದೆ. ಇಂತಹ ಅವರ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿ ನೆರವೇರಿಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಯಾದಗಿರಿ ಜಿಲ್ಲೆಯ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾದಂತ ರಾಜಾ ವೆಂಕಟಪ್ಪ ನಾಯಕ್ ಅವರು ಇಂದು ನಿಧನರಾಗಿರುತ್ತಾರೆ ಎಂದಿದ್ದಾರೆ. ಕರ್ನಾಟಕ ರಾಜ್ಯ ಉಗ್ರಾಣ ನಿಗಮದ ಅಧ್ಯಕ್ಷರು ಆಗಿದ್ದಂತ ಅವರ ನಿಧನಕ್ಕೆ ಸರ್ಕಾರವು ತೀವ್ರ ಸಂತಾಪವನ್ನು ವ್ಯಕ್ತಪಡಿಸುತ್ತದೆ. ಮೃತರ ಗೌರವಾರ್ಥ ಅಂತ್ಯಕ್ರಿಯೆಯನ್ನು ಸಕಲ ಸರ್ಕಾರಿ ಗೌರವಗಳೊಂದಿಗೆ ನೆರೆವೇರಿಸಲು ಆದೇಶಿಸಿದ್ದಾರೆ.
ಯಾದಗಿರಿ: ಸುರಪುರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಂತ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದರು. ಇಂತಹ ಅವರ ಸಾವಿನ ಸುದ್ದಿಯನ್ನು ಕೇಳಿದಂತ ಅವರ ಅಭಿಮಾನಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರೋದಾಗಿ ತಿಳಿದು ಬಂದದಿದೆ. ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಕೇಳಿದಂತ ಅವರ ಮಂಗಳೂರು ಗ್ರಾಮದ ಅಭಿಮಾನ ಹನುಮಂತ ಹವಾಲ್ದಾರ್(65) ಎಂಬುವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಮೃತ ಹನುಮಂತ ಹವಾಲ್ದಾರ್ ಅವರು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಪ್ಪಟ ಅಭಿಮಾನಿಯಾಗಿದ್ದರು. ಇಂತಹ ಅವರು ಹೃದಯಾಘಾತದಿಂದ ಸಾವನ್ನಪ್ಪಿರೋ ಸುದ್ದಿ ಕೇಳಿ, ತಾವು ಕೂಡ ಹೃದಯಾಘಾತಕ್ಕೆ ಒಳಗಾಗಿ ಇಂದು ಸಾವನ್ನಪ್ಪಿದ್ದಾರೆ. https://kannadanewsnow.com/kannada/suo-motu-case-filed-against-anantkumar-hegde-for-sidramullah-khans-remarks/ https://kannadanewsnow.com/kannada/bigg-news-elections-to-surapura-assembly-in-the-state-along-with-lok-sabha-elections/
ನವದೆಹಲಿ: ವಾಲ್ಟ್ ಡಿಸ್ನಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಭಾರತದಲ್ಲಿ ತಮ್ಮ ಮಾಧ್ಯಮ ಕಾರ್ಯಾಚರಣೆಗಳನ್ನು ವಿಲೀನಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಬ್ಲೂಮ್ಬರ್ಗ್ ವರದಿ ಮಾಡಿದೆ. ತೀವ್ರ ಸ್ಪರ್ಧೆಯ ನಡುವೆ ಡಿಸ್ನಿ ಭಾರತದಲ್ಲಿ ತನ್ನ ಕಾರ್ಯತಂತ್ರವನ್ನು ಮರುಪರಿಶೀಲಿಸುತ್ತಿರುವುದರಿಂದ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ವಿಲೀನಗೊಂಡ ಘಟಕದಲ್ಲಿ 61% ಪಾಲನ್ನು ಹೊಂದುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ. ಡಿಸ್ನಿ ಮತ್ತು ರಿಲಯನ್ಸ್ ಪ್ರತಿನಿಧಿಗಳು ವಿಲೀನ ಒಪ್ಪಂದದ ವರದಿಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಒಪ್ಪಂದವನ್ನು ಅಂತಿಮಗೊಳಿಸುವ ಸಮಯದಲ್ಲಿ ಡಿಸ್ನಿಯ ಹೆಚ್ಚುವರಿ ಸ್ಥಳೀಯ ಸ್ವತ್ತುಗಳನ್ನು ಸೇರಿಸುವ ಆಧಾರದ ಮೇಲೆ ಪಾಲುದಾರರ ನಡುವಿನ ಷೇರುಗಳ ವಿತರಣೆಯು ಬದಲಾವಣೆಗಳಿಗೆ ಒಳಗಾಗಬಹುದು ಎಂದು ವರದಿ ತಿಳಿಸಿದೆ. ಪ್ರಸಾರ ಸೇವಾ ಪೂರೈಕೆದಾರ ಟಾಟಾ ಪ್ಲೇ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಳ್ಳಲು ರಿಲಯನ್ಸ್ ಇಂಡಸ್ಟ್ರೀಸ್ ಮುಂದಾಗಿದೆ, ಇದರಲ್ಲಿ ಡಿಸ್ನಿ ಅಲ್ಪಸಂಖ್ಯಾತ ಪಾಲನ್ನು ಹೊಂದಿದೆ. ಪ್ರಸ್ತುತ, ಟಾಟಾ ಸನ್ಸ್ ಮಾಲೀಕತ್ವದ ಆಸಕ್ತಿಯನ್ನು ಹೊಂದಿದ್ದು, ಟಾಟಾ ಪ್ಲೇನಲ್ಲಿ 50.2% ಪಾಲನ್ನು ಹೊಂದಿದ್ದರೆ, ಉಳಿದ ಷೇರುಗಳನ್ನು ಸಿಂಗಾಪುರ ಮೂಲದ…
ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ ನೇರವಾದ ಕಾಂಗ್ರೆಸ್ ಪಕ್ಷವೇ, ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ, ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ, ಅದರಿಂದ 8-10 ವರ್ಷ ವಿಳಂಬವಾಯಿತು. ಅತ್ಯಂತ ದೊಡ್ಡ ತಪ್ಪು ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಆರೋಪಿಸಿದರು. ಕಾಂಗ್ರೆಸ್ ನವರು ಗೋಡೆ ಕಟ್ಟಿದರು ಟ್ರಿಬ್ಯೂನಲ್’ನಲ್ಲಿ ಬರೆದು ಕೊಟ್ಟು ಮಹದಾಯಿಯಿಂದ ಮಲಪ್ರಭಾ ಇಂಟರ್ ಲಿಂಕಿಂಗ್ ಜೋಡನೆಗೆ ಕಾಂಗ್ರೆಸ್’ನವರು ಗೋಡೆ ಕಟ್ಟಿದ್ದರು, ನೀರಾವರಿ ಯೋಜನೆಗೆ ಗೋಡೆಕಟ್ಟಿದ ಅಪಖ್ಯಾತಿ ಇದ್ದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಇದೆ. ನಾವು ಕಾಲುವೆ ಮಾಡಿದರೆ ಕಾಂಗ್ರೆಸ್ ನವರು ಗೋಡೆ ಕಟ್ಟಿದರು ಎಂದರು. ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಸಂಪೂರ್ಣವಾಗಿ ವಿರೋಧ ಮಾಡತ್ತ ಬಂದರು. ನಮ್ಮ…
ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಮಹತ್ವದ ಸಭೆಯನ್ನು ತಮ್ಮ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ನಡೆಸುತ್ತಿದ್ದಾರೆ. ಈ ಸಭೆಗೆ ನಟ ದರ್ಶನ್ ಕೂಡ ಸರ್ಪ್ರೈಸ್ ಆಗಿ ಬಾಗಿಯಾಗಿದ್ದಾರೆ. ಇಂದು ಬೆಂಗಳೂರಿನ ಜೆಪಿ ನಗರದಲ್ಲಿರುವಂತ ತಮ್ಮ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಚರ್ಚಿಸೋದಕ್ಕೆ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ತಮ್ಮ ಬೆಂಬಲಿಗರ ಜೊತೆಗೆ ಸಭೆ ನಡೆಸುತ್ತಿದ್ದಾರೆ. ಈ ಸಭೆಯ ಆರಂಭದಲ್ಲಿ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಇಂಡವಾಳ ಸಚ್ಚಿದಾನಂದ ಆಪ್ತರ ಜೊತೆ ಸುಮಲತಾ ಚರ್ಚೆ ನಡೆಸುತ್ತಿದ್ದಾರೆ. ಬೆಂಬಲಿಗರ ಜೊತೆಗಿನ ಸಭೆಯ ಬಳಿಕ ಮಂಡ್ಯ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಜೊತೆಗೆ ಸಭೆಯನ್ನು ನಡೆಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/minister-dr-sharan-prakash-patil-condoles-the-death-of-mla-raja-venkatappa/ https://kannadanewsnow.com/kannada/suo-motu-case-filed-against-anantkumar-hegde-for-sidramullah-khans-remarks/
ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ರಾಜವೆಂಕಟಪ್ಪ ನಾಯಕ್ ಅವರ ಹಠಾತ್ ನಿಧನಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ, ಜೀವನೋಪಾಯ ಇಲಾಖೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದ ಅವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ,ಸುರಪುರ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೆಯಾದ ಕನಸು ಕಂಡಿದ್ದರು.ಅವರ ಕಂಡ ಕನಸು ಈಡೇರುವ ಮೊದಲೇ ಇಹಲೋಕ ತ್ಯಜಿಸಿದ್ದು,ವೈಯಕ್ತಿಕವಾಗಿ ನನಗೆ ನಮ್ಮ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಷ್ಟೇ ನೋವು ಉಂಟಾಗಿದೆ ಎಂದು ಹೇಳಿದ್ದಾರೆ. ಕಲಬುರಗಿ- ಯಾದಗಿರಿ ಅವಳಿ ಜಿಲ್ಲೆಯ ಅಭಿವೃದ್ಧಿಯಲ್ಲಿ ತಮ್ಮದೇಯಾದ ಸೇವೆಯನ್ನು ಸಲ್ಲಿಸಿದ್ದ ಅವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಾಗಬೇಕು ಎಂಬ ಕನಸು ಕಂಡಿದ್ದರು. ಆದರೆ, ನಾನೊಂದು ಬಯಸಿದರೆ, ದೇವರು ಇನ್ನೊಂದು ಬಗೆದ ಎಂಬಂತಾಗಿದೆ ಎಂದು ಪಾಟೀಲ್ ಆಘಾತ ವ್ಯಕ್ತಪಡಿಸಿದ್ದಾರೆ. ಅವರ ಪಕ್ಷ ನಿಷ್ಠೆ, ಹಿರಿತನವನ್ನು ಪರಿಗಣಿಸಿ…
ಬೆಂಗಳೂರು: ರಾಜ್ಯಾಧ್ಯಂತ ಕನ್ನಡ ಕಡ್ಡಾಯಗೊಳಿಸಿದರೇ ಸಾಲದು. ಅದನ್ನು ಜಾರಿಗೊಳಿಸಬೇಕು. ಫೆಬ್ರವರಿ.28ರೊಳಗೆ ಆದೇಶ ಜಾರಿಯಾಗದೇ ಇದ್ದರೇ ರಾಜ್ಯಾಧ್ಯಂತ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ ನಾರಾಯಣಗೌಡ ಎಚ್ಚರಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ರಾಜ್ಯದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ಆದೇಶದಂತೆ ಶೇ.60 ಸ್ಥಳಾವಕಾಶ ಕನ್ನಡ ಭಾಷೆಗೆ ನೀಡಬೇಕು. ಫೆ.28ರೊಳಗೆ ಆದೇಶ ಜಾರಿಯಾಗದೇ ಇದ್ದರೇ ಕರವೇಯಿಂದ ರಾಜ್ಯಾದ್ಯಂತ ಬೆಂಗಳೂರು ಮಾದರಿಯಲ್ಲೇ ಅಭಿಯಾನ ಆರಂಭಿಸೋದಾಗಿ ತಿಳಿಸಿದರು. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂದು ಘೋಷಿಸಿದರೇ ಮಾತ್ರ ಸಾಲದು. ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಸಿಎಂ ಸಿದ್ಧರಾಮಯ್ಯ ಸರ್ಕಾರ ಬದ್ಧತೆ ತೋರಿಸಬೇಕು. ಕನ್ನಡಿಕರ ಬಗ್ಗೆ ಕಾಳಜಿ ತೋರಿಸಬೇಕು ಎಂಬುದಾಗಿ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. https://kannadanewsnow.com/kannada/congress-committed-big-crime-on-mahadayi-issue-former-cm-basavaraj-bommai/ https://kannadanewsnow.com/kannada/suo-motu-case-filed-against-anantkumar-hegde-for-sidramullah-khans-remarks/