Author: kannadanewsnow09

ಮಂಡ್ಯ : ಸಿಎಂ ಸಿದ್ಧರಾಮಯ್ಯ ಅವರ ವಾರ್ನಿಂಗ್ ನಡುವೆಯೂ ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ಮುಂದುವರೆದಿದೆ. ಈಗ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ತಾಯಿ-ಮಗ ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ತಿಳಿದು ಬಂದಿದೆ. ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಕೊನ್ನಾಪುರ ಗ್ರಾಮದ ಪ್ರೇಮಾ (59) ಎಂಬುವರು ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಬೇಸತ್ತು ಮಾತ್ರೆ ನುಂಗಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಇನ್ನೂ ತಾಯಿಯ ಸಾವಿನ ಸುದ್ದಿಯನ್ನು ಕೇಳಿದಂತ ಪುತ್ರ ರಂಜಿತ್ ಎಂಬುವರು ಹಲಗೂರು ಕೆರೆಗೆ ಹಾರಿ ಸೂಸೈಡ್ ಮಾಡಿಕೊಂಡಿರುವ ಘಟನೆ ನಡೆದಿದೆ. ಅಂದಹಾಗೇ ಪ್ರೇಮಾ ಅವರು ಉಜ್ಜೀವನ್ ಬ್ಯಾಂಕ್ ನಿಂದ 6 ಲಕ್ಷ ಸಾಲ ಪಡೆದಿದ್ದರು ಎನ್ನಲಾಗಿದೆ. ಸಾಲದ ಕಂತು ಕಟ್ಟದ ಕಾರಣಕ್ಕೆ ಬ್ಯಾಂಕ್ ಸಿಬ್ಬಂದಿ ಪ್ರೇಮಾ ಅವರ ಮನೆ ಸೀಜ್ ಮಾಡಿದ್ದರಂತೆ. ಈ ಕಾರಣಕ್ಕೆ ಮನನೊಂದು ಪ್ರೇಮಾ ಮಾತ್ರೆ ಸೇವಿಸಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಸಾವಿನ ಸುದ್ದಿ ಕೇಳಿ ಪುತ್ರನೂ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಮೂಲಕ ಮೈಕ್ರೋ ಫೈನಾನ್ಸ್ ಕಿರುಕುಳಕ್ಕೆ ಮಂಡ್ಯದಲ್ಲಿ ತಾಯಿ-ಮಗ…

Read More

ಬೆಳಗಾವಿ : ಮುಂಬರುವ ಬಿಹಾರ ವಿಧಾನಸಭೆ ಚುನಾವಣೆ ದೃಷ್ಟಿಯಿಂದ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಕೇಂದ್ರ ಬಜೆಟ್ ಮಂಡಿಸಿದ್ದಾರೆ ಎನಿಸುತ್ತಿದೆ. ಬಜೆಟ್‌ನಿಂದ ರಾಜ್ಯಕ್ಕೆ ಸಂಪೂರ್ಣ ಅನ್ಯಾಯವಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಕಿಡಿಕಾರಿದ್ದಾರೆ. ಬಿಹಾರ ಜನರ ಒಲೈಕೆಗಾಗಿ ಪ್ರಮುಖ ಐದಾರು ಯೋಜನೆಗಳನ್ನು ಘೋಷಿಸಿದರೆ, ಕರ್ನಾಟಕಕ್ಕೆ ಒಂದು ನಯಾ ಪೈಸೆ ನೀಡಿಲ್ಲ. ಬೆಂಗಳೂರಿಗೆ ವಿಶೇಷ ಅನುದಾನ ನಿರೀಕ್ಷಿಸಲಾಗಿತ್ತು. ಈ ಬಜೆಟ್‌ನಿಂದ ಸಂಪೂರ್ಣ ನಿರಾಸೆ ಉಂಟಾಗಿದೆ ಎಂದು ಹೇಳಿದ್ದಾರೆ. ಕರ್ನಾಟಕದಿಂದ ನಿರ್ಮಲಾ ಸೀತಾರಾಮನ್ ರಾಜ್ಯಸಭೆಗೆ ಆಯ್ಕೆಯಾಗಿದ್ದರೂ ನಮ್ಮ ರಾಜ್ಯವನ್ನು ಸಂಪೂರ್ಣ ನಿರ್ಲಕ್ಷಿಸಿದ್ದಾರೆ. ಕೇಂದ್ರ ಬಜೆಟ್‌ನಿಂದ ರಾಜ್ಯಕ್ಕೆ ಯಾವುದೇ ಲಾಭವಿಲ್ಲ. ಇದೊಂದು ಸಂಪೂರ್ಣ ರೈತ ವಿರೋಧಿ, ಕರ್ನಾಟಕ ವಿರೋಧಿ ಬಜೆಟ್ ಎಂದು ಸಚಿವರು ತಿಳಿಸಿದರು. https://kannadanewsnow.com/kannada/the-government-has-taken-this-important-decision-to-curb-the-harassment-of-microfinance-in-the-state/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/

Read More

ಬೆಂಗಳೂರು: ರಾಜ್ಯದಲ್ಲಿ ಮೈಕ್ರೋ ಫೈನಾನ್ಸ್ ಕಿರುಕುಳ ತಪ್ಪಿಸಲು ಈಗಾಗಲೇ ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಜಾರಿಗೆ ಒಪ್ಪಿಗೆ ಸೂಚಿಸಲಾಗಿದೆ. ಈ ಸಂಬಂಧ ಇಂದು ಕಂದಾಯ ಸಚಿವ ಕೃಷ್ಣಭೈರೇಗೌಡ ನೇತೃತ್ವದಲ್ಲಿ ನಡೆದಂತ ಸಭೆಯಲ್ಲಿ ಮಹತ್ವದ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಅದೇನು ಅಂತ ಮುಂದೆ ಓದಿ. ಮೈಕ್ರೋ ಫೈನಾನ್ಸ್ ಗಳ ಆಟಾಟೋಪಗಳಿಗೆ ಕಡಿವಾಣ ಹಾಕಲು ಹೊಸ ಕಾನೂನು ರೂಪಿಸುವ ನಿಟ್ಟಿನಲ್ಲಿ ಇಂದು ಮಹತ್ವದ ಸಭೆ ನಡೆಸಲಾಯಿತು. 1. ಈ ಸಭೆಯಲ್ಲಿ ಸಾಮರ್ಥ್ಯಕ್ಕಿಂತ ಅಧಿಕ ಸಾಲ ನೀಡುವ ಮೂಲಕ ಬಡವರನ್ನ ಸಾಲದ ಸುಳಿಗೆ ಸಿಲುಕಿಸುತ್ತಿರುವ ಹುನ್ನಾರವನ್ನು ತಡೆಯಲು ಆನ್ಲೈನ್ ಪೋರ್ಟಲ್ ಮಾಡಿ ಯಾರಿಗೆ ಎಷ್ಟು ಸಾಲ ನೀಡಲಾಗಿದೆ ಎಂದು ಅಪ್ಡೇಟ್ ಮಾಡಬೇಕು. 2. ಸಾಲಕ್ಕಾಗಿ ಅರ್ಜಿ ಸಲ್ಲಿಕೆ ಹಾಗೂ ಸಾಲ ನೀಡುವ ಸಂಪೂರ್ಣ ಪ್ರಕ್ರಿಯೆಯನ್ನು ಆನ್ಲೈನ್ ಮೂಲಕವೇ ನಿಭಾಯಿಸಬೇಕು. 3. ಸಾಲಕ್ಕೆ ವಿಧಿಸುವ ಬಡ್ಡಿ ದರದ ಪ್ರಮಾಣ ಪಾರದರ್ಶಕ ಹಾಗೂ RBI ನೀತಿಗೆ ಅನುಗುಣವಾಗಿರಬೇಕು. 4. ಮೈಕ್ರೋ ಫೈನಾನ್ಸ್ ಕಂಪೆನಿಗಳು ಕಡ್ಡಾಯವಾಗಿ ರಾಜ್ಯದಲ್ಲಿ ನೋಂದಣಿಯಾಗಿರಬೇಕು. 5. ಯಾವುದೇ…

Read More

ನವದೆಹಲಿ: ಕಾಂಗ್ರೆಸ್ ಸಂಸದ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಕೇಂದ್ರ ಬಜೆಟ್ 2025 ಅನ್ನು “ಗುಂಡು ಗಾಯಗಳಿಗೆ ಬ್ಯಾಂಡ್-ಏಡ್” ಎಂದು ಕರೆದಿದ್ದಾರೆ. ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ಶನಿವಾರ ಮಂಡಿಸಿದ ಬಜೆಟ್ಗೆ ಪ್ರತಿಕ್ರಿಯಿಸಿದ ರಾಹುಲ್ ಗಾಂಧಿ, “ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ” ಎಂದು ಅವರು ಹೇಳಿದರು. https://twitter.com/RahulGandhi/status/1885625128450658337 fಇಂದಿನ ಕೇಂದ್ರ ಬಜೆಟ್ ಗುಂಡು ಗಾಯಗಳಿಗೆ ಬ್ಯಾಂಡ್-ಏಡ್! ಜಾಗತಿಕ ಅನಿಶ್ಚಿತತೆಯ ಮಧ್ಯೆ, ನಮ್ಮ ಆರ್ಥಿಕ ಬಿಕ್ಕಟ್ಟನ್ನು ಪರಿಹರಿಸಲು ಒಂದು ಮಾದರಿ ಬದಲಾವಣೆಯ ಅಗತ್ಯವಿದೆ. ಆದರೆ ಈ ಸರ್ಕಾರವು ಆಲೋಚನೆಗಳಿಂದ ದಿವಾಳಿಯಾಗಿದೆ ಎಂಬುದಾಗಿ ಹೇಳಿದ್ದಾರೆ. https://kannadanewsnow.com/kannada/this-is-a-very-disappointing-short-sighted-budget-siddaramaiah/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/

Read More

ಮೈಸೂರು: ಇಂದು ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮಾನ್ ಅವರು 2025-26ನೇ ಸಾಲಿನ ಕೇಂದ್ರ ಬಜೆಟ್ ಮಂಡಿಸಿದ್ದಾರೆ. ಆದರೇ ಇಂದು ಬಹಳ ನಿರಾಶಾದಾಯಕ, ದೂರದೃಷ್ಠಿಯಿಲ್ಲದ ಬಜೆಟ್ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನೀರಾವರಿ ಯೋಜನಗೆಳಇಗೆ ಅನುದಾನ ನೀಡಿಲ್ಲ. ರಾಜ್ಯದ ನೀರಾವರಿ ಯೋಜನಗೆಳ ಬಗ್ಗೆ ಪ್ರಸ್ತಾಪಿಸಿಲ್ಲ. ರಾಯಚೂರು ಏಮ್ಸ್ ಘೋಷಿಸೋ ನಿರೀಕ್ಷೆ ಇತ್ತು. ಕೇಂದ್ರ ಸಚಿವ ನಡ್ಡಾ ಕೂಡ ಭರವಸೆ ನೀಡಿದ್ದರು. ಬಜೆಟ್ ನಲ್ಲಿ ಏಮ್ಸ್ ಬಗ್ಗೆ ಯಾವ ಪ್ರಸ್ತಾಪವಿಲ್ಲ ಎಂದರು. ಬೆಂಗಳಊರು ರಾಜಕಾಲುವೆ ನಿರ್ವಹಣೆಗೆ ಬ್ಯುಸಿನೆಸ್ ಕಾರಿಡಾರ್ ಗೆ ನಾವು ಹಣ ಕೇಳಿದ್ದವು. ನಮಗೆ ಕೇಂದ್ರ ಸರ್ಕಾರ ಖಾಲಿ ಚೆಂಬು ಕೊಟ್ಟಿದೆ. ಇಂದಿನ ಕೇಂದ್ರ ಬಜೆಟ್ ದೂರದೃಷ್ಠಿಯಿಲ್ಲದ, ನಿರಾಶಾದಾಯಕ ಬಜೆಟ್ ಆಗಿದೆ ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಕಿಡಿಕಾರಿದ್ದಾರೆ. https://kannadanewsnow.com/kannada/increase-honorarium-for-anganwadi-workers-as-mentioned-in-manifesto-r-ashoka/ https://kannadanewsnow.com/kannada/union-budget-2025-new-income-tax-slab-released-heres-all-you-need-to-know/

Read More

ಕಲಿಯುಗದಲ್ಲಿ ಆಂಜನೇಯಸ್ವಾಮಿ ಆರಾಧನೆ ಮಾಡುವುದರಿಂದ ಉತ್ತಮ ಫಲಗಳು ಪ್ರಾಪ್ತಿಯಾಗುತ್ತದೆ ನಾವು ಅನೇಕ ದೇವರನ್ನು ಆರಾಧನೆ ಮಾಡುತ್ತೇವೆ ನಮ್ಮ ಕಷ್ಟಗಳು ನಿವಾರಣೆಯಾಗಲಿ ನಮ್ಮ ಇಷ್ಟಾರ್ಥಗಳು ಈಡೇರಬೇಕು ಎಂದು ಎಲ್ಲಾ ದೇವರಲ್ಲಿ ಮೊರೆ ಹೋಗುತ್ತೇವೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ ವಶೀಕರಣ ಇನ್ನೂ ನಿಮ್ಮ ಜೀವನದ ಗುಪ್ತ…

Read More

ಬೆಂಗಳೂರು: ಕಾಂಗ್ರೆಸ್‌ ಪಕ್ಷದ ಚುನಾವಣಾ ಪ್ರಣಾಳಿಕೆಯಲ್ಲಿ ಹೇಳಿದಂತೆಯೇ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವಧನ ಹೆಚ್ಚಳ ಮಾಡಬೇಕು ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಆಗ್ರಹಿಸಿದರು. ಸ್ವಾತಂತ್ರ್ಯ ಉದ್ಯಾನದಲ್ಲಿ ಅಂಗನವಾಡಿ ಕಾರ್ಯಕರ್ತೆಯರು ನಡೆಸುತ್ತಿರುವ ಪ್ರತಿಭಟನಾ ಸ್ಥಳಕ್ಕೆ ಆರ್‌.ಅಶೋಕ ಭೇಟಿ ನೀಡಿದರು. ನಂತರ ಮಾತನಾಡಿ, ಅಂಗನವಾಡಿ ಕಾರ್ಯಕರ್ತೆಯರು ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆ ಮಾಡುತ್ತಿದ್ದು, ಅವರ ಮೇಲೆ ಪೊಲೀಸರು ದೌರ್ಜನ್ಯ ಮಾಡಿದ್ದಾರೆ. ಗಂಟು ಮೂಟೆ ಕಟ್ಟಿಕೊಂಡು ಮನೆಗೆ ಹೋಗಿ ಎಂದು ಬೆದರಿಸಿದ್ದಾರೆ. ಅವರಿಗೆ ಪ್ರತಿಭಟನೆಗೆ ಅವಕಾಶ ನೀಡುತ್ತಿಲ್ಲ. ಅವರಿಗೆ ಕುಡಿಯುವ ನೀರು, ಶೌಚಾಲಯ, ಟೆಂಟ್‌ ಮೊದಲಾದ ಸೌಲಭ್ಯ ನೀಡುತ್ತಿಲ್ಲ. ಕಾಂಗ್ರೆಸ್‌ ಪಕ್ಷದ ಪ್ರಣಾಳಿಕೆಯಲ್ಲಿ ಅಂಗನವಾಡಿ ಕಾರ್ಯಕರ್ತೆಯರಿಗೆ 15,000 ರೂ. ಹಾಗೂ ಮಿನಿ ಅಂಗನವಾಡಿ ಕಾರ್ಯಕರ್ತೆಯರಿಗೆ 7,000 ರೂ. ನೀಡಲಾಗುವುದು ಎಂದು ಘೋಷಿಸಲಾಗಿದೆ. ಇದರಂತೆಯೇ ಈಗಲೇ ಸರ್ಕಾರ ಗೌರವಧನ ನೀಡಲಿ ಎಂದು ಆಗ್ರಹಿಸಿದರು. ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆಗೆ ಬಿಜೆಪಿ ಬೆಂಬಲ ನೀಡುತ್ತಿದೆ. ಅವರನ್ನು ಕರೆದು ಮಾತಾಡಿ ಭರವಸೆ ನೀಡಲಿ. ಇಲ್ಲದಿದ್ದರೆ ಸರ್ಕಾರದ ವಿರುದ್ಧ ಹೋರಾಟ ಮಾಡಲಾಗುವುದು. ಅಂಗನವಾಡಿ ಕಾರ್ಯಕರ್ತೆಯರಿಗೆ ಪ್ರತಿಭಟಿಸಲು ಅವಕಾಶ…

Read More

ನವದೆಹಲಿ: ದೆಹಲಿ ಮತ್ತು ರೈಲ್ವೇಸ್ ನಡುವಿನ ರಣಜಿ ಟ್ರೋಫಿ ಪಂದ್ಯದ ವೇಳೆ ದೆಹಲಿ ಕ್ರಿಕೆಟ್ ಅಭಿಮಾನಿಗಳು ಎರಡನೇ ಬಾರಿಗೆ ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭದ್ರತೆಯನ್ನು ಉಲ್ಲಂಘನೆಯಾಗಿದೆ. ವಿರಾಟ್ ಕೊಹ್ಲಿಯನ್ನು ಭೇಟಿಯಾಗಲು ಮೂವರು ಅಭಿಮಾನಿಗಳು ನುಗ್ಗಿ ಬಂದಿದ ಘಟನೆ ನಡೆದಿದೆ. ಮೂರನೇ ದಿನದಾಟದಲ್ಲಿ ಡೆಲ್ಲಿ 133 ರನ್ಗಳ ಮುನ್ನಡೆ ಸಾಧಿಸುತ್ತಿದ್ದಂತೆ ಮೂವರು ಅಭಿಮಾನಿಗಳು ಭದ್ರತೆಯಿಂದ ತಪ್ಪಿಸಿಕೊಂಡು ಕೊಹ್ಲಿಯ ಪಾದ ಮುಟ್ಟಿ ನಮಸ್ಕರಿಸಿದರು. ಭದ್ರತಾ ಸಿಬ್ಬಂದಿ ತ್ವರಿತವಾಗಿ ಮಧ್ಯಪ್ರವೇಶಿಸಿದರೂ, ಈ ಘಟನೆಯು ಕ್ರೀಡಾಂಗಣದಲ್ಲಿ ಜನಸಂದಣಿ ನಿರ್ವಹಣೆಯ ಬಗ್ಗೆ ಗಂಭೀರ ಕಳವಳವನ್ನು ಹುಟ್ಟುಹಾಕಿತು. ಮೊದಲ ದಿನ ಇದೇ ರೀತಿಯ ಅಡಚಣೆಯ ನಂತರ, ಅಭಿಮಾನಿಯೊಬ್ಬರು ಮೈದಾನಕ್ಕೆ ಧಾವಿಸಿ ಭದ್ರತಾ ಸಿಬ್ಬಂದಿಯಿಂದ ಹೊರಗೆ ಎಳೆದೊಯ್ದ ನಂತರ ಇದು ಎರಡನೇ ಉಲ್ಲಂಘನೆಯಾಗಿದೆ. ಪಂದ್ಯ ಆರಂಭಕ್ಕೂ ಮುನ್ನವೇ ಅಭಿಮಾನಿಗಳು ಕ್ರೀಡಾಂಗಣಕ್ಕೆ ನುಗ್ಗಲು ಮುಗಿಬಿದ್ದಿದ್ದರಿಂದ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಗಿತ್ತು. ಕ್ರೀಡಾಂಗಣದ ಗೇಟ್ ಬಳಿ, ಗಾಯಗೊಂಡ ಅಭಿಮಾನಿಗಳು ದೆಹಲಿ ಮತ್ತು ಜಿಲ್ಲಾ ಕ್ರಿಕೆಟ್ ಅಸೋಸಿಯೇಷನ್ (ಡಿಡಿಸಿಎ) ಭದ್ರತಾ ತಂಡ ಮತ್ತು ಪೊಲೀಸರಿಂದ ಚಿಕಿತ್ಸೆ ಪಡೆದರು.…

Read More

ನವದೆಹಲಿ: ಕೇಂದ್ರದ ಬಜೆಟ್‌ನಲ್ಲಿ ಮಧ್ಯಮ ವರ್ಗಕ್ಕೆ ಸರಪ್ರೈಸ್ ಗಿಫ್ಟ್ ಕೊಟ್ಟಿದ್ದು, ಇದರಿಂದ ಮಧ್ಯಮ ವರ್ಗದವರ ಉಳಿತಾಯ ಹೆಚ್ಚಲಿದೆ. ಇದೊಂದು ಆರ್ಥಿಕ ಮತ್ತು ಸಾಮಾಜಿಕ ವಲಯದಲ್ಲಿ ಸಮತೋಲನ ಕಾಯ್ದುಕೊಂಡಿರುವ ಬಜೆಟ್ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಅಭಿಪ್ರಾಯ ಪಟ್ಟಿದ್ದಾರೆ. ಕೇಂದ್ರದ ಬಜೆಟ್ ಮಂಡನೆ ನಂತರ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದೊಂದು ದೂರದೃಷ್ಟಿಯ ವಿಕಸಿತ ಭಾರತ 2047 ರ ಅಡಿಗೆ ತೆಗೆದುಕೊಂಡು ಹೋಗುವ ಅಭಿವೃದ್ಧಿ ಪರವಾಗಿರುವ ಬಜೆಟ್. ಆರ್ಥಿಕ ಮತ್ತು ಸಾಮಾಜಿಕ ಪರಿಸ್ಥಿತಿಗೆ ಸಮತೋಲನ ತೆಗೆದುಕೊಂಡು ಹೋಗುವ ಬಜೆಟ್. ಆತ್ಮನಿರ್ಭರ ಮಾಡುವ ಪ್ರಧಾನಿ ನರೇಂದ್ರ ಮೋದಿಯವರ ಕನಸಿಗೆ ಪೂರಕವಾದ ಬಜೆಟ್ ಆಗಿದೆ ಎಂದು ಹೇಳಿದರು. ಮಧ್ಯಮವರ್ಗದ ಜನರ ನಿರೀಕ್ಷೆಗಳಿಗೆ ಬೂಸ್ಟ್ ನೀಡಿದೆ. ಮದ್ಯಮ ವರ್ಗದ ಉಳಿತಾಯ ಹೆಚ್ಚಿಸಿದೆ. ಇದೊಂದು ಮಧ್ಯಮ ವರ್ಗದವರಿಗೆ ಸರ್ಪ ರೈಸ್ ಗಿಫ್ಟ್‌. ಎಲ್ಲರೂ 10 ಲಕ್ಷ ತೆರಿಗೆ ವಿನಾಯಿತಿ ನಿರೀಕ್ಷೆ ಮಾಡಿದ್ದರು. ಆದರೆ, ಪಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್…

Read More

ಬೆಂಗಳೂರು : ಕೇಂದ್ರ ಬಜೆಟ್ ರೈತರ ಬೇಡಿಕೆ ಈಡೇರಿಸುವಲ್ಲಿ ಸಂಪೂರ್ಣ ವಿಫಲವಾಗಿದ್ದು, ನಿರಾಶಾದಾಯಕವಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಹೇಳಿದ್ದಾರೆ. ನಿರ್ಮಲಾ ಸೀತಾರಾಮನ್ ಅವರು ಸಂಸತ್ತಿನಲ್ಲಿಂದು ಮಂಡಿಸಿದ ಬಜೆಟ್ ಬಗ್ಗೆ ಪ್ರತಿಕ್ರಿಯೆ ನೀಡಿರುವ ಅವರು, ರೈತರು ಬೆಳೆದ ಬೆಳೆಗೆ ನಿಶ್ಚಿತ ಬೆಲೆ ಬರಬೇಕು. ಇಂದು ಅನ್ನದಾತರ ಸ್ಥಿತಿ ಅನಿಶ್ಚಿತತೆಯಿಂದ ಕೂಡಿದೆ. ಎಲ್ಲ ವಸ್ತುಗಳಿಗೂ ಎಂ.ಎಸ್.ಪಿ. ಇರುವಾಗ ರೈತರ ಕಷ್ಟಾರ್ಜಿತಕ್ಕೆ ನಿರ್ದಿಷ್ಟ ಬೆಲೆ ನೀಡುವ ಎಂ.ಎಸ್.ಪಿ. ಕಾಯಿದೆ ಬಗ್ಗೆ ಪ್ರಕಟಿಸದ ಬಜೆಟ್ ಇದಾಗಿದೆ ಎಂದು ತಿಳಿಸಿದ್ದಾರೆ. ರೈತರು ಪ್ರಕೃತಿ ವಿಕೋಪದಿಂದ ತತ್ತರಿಸಿದ್ದು, ಸಾಲದ ಹೊರೆ ತಾಳದೆ ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದಾರೆ. ರೈತರ ಕೃಷಿ ಸಾಲ ಮನ್ನಾ ಬಗ್ಗೆ ಈ ಬಜೆಟ್ ನಲ್ಲಿ ಯಾವುದೇ ಘೋಷಣೆ ಮಾಡಿಲ್ಲ ಎಂದೂ ತಿಳಿಸಿದ್ದಾರೆ. ಬಜೆಟ್ ನಲ್ಲಿ ಬಿಜೆಪಿ ಮತ್ತು ಎನ್.ಡಿ.ಎ.ಯೇತರ ರಾಜ್ಯಗಳಿಗೆ ಘೋರ ಅನ್ಯಾಯ ಮಾಡಲಾಗಿದೆ. ಒಕ್ಕೂಟ ವ್ಯವಸ್ಥೆಯ ಭಾರತದಲ್ಲಿ ಇಂತಹ ತಾರತಮ್ಯ ಸರ್ವತ ಸಮರ್ಥನೀಯವಲ್ಲ. ಇಂತಹ ಒಂದು ಕೆಟ್ಟ ಸಂಪ್ರದಾಯಕ್ಕೆ ಬಜೆಟ್…

Read More