Author: kannadanewsnow09

ಯಾದಗಿರಿ: ಸುರಪುರ ಕ್ಷೇತ್ರದಿಂದ ಕಾಂಗ್ರೆಸ್ ಶಾಸಕರಾಗಿ ಆಯ್ಕೆಯಾಗಿದ್ದಂತ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತಕ್ಕೆ ಒಳಗಾಗಿ ನಿಧನರಾಗಿದ್ದರು. ಇಂತಹ ಅವರ ಸಾವಿನ ಸುದ್ದಿಯನ್ನು ಕೇಳಿದಂತ ಅವರ ಅಭಿಮಾನಿಯೊಬ್ಬರು ಹೃದಯಾಘಾತಕ್ಕೆ ಒಳಗಾಗಿ ಸಾವನ್ನಪ್ಪಿರೋದಾಗಿ ತಿಳಿದು ಬಂದದಿದೆ. ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ನಿಧನರಾಗಿದ್ದಾರೆ ಎಂಬ ಸುದ್ದಿಯನ್ನು ಕೇಳಿದಂತ ಅವರ ಮಂಗಳೂರು ಗ್ರಾಮದ ಅಭಿಮಾನ ಹನುಮಂತ ಹವಾಲ್ದಾರ್(65) ಎಂಬುವರು ಹೃದಯಾಘಾತಕ್ಕೆ ಒಳಗಾಗಿದ್ದಾರೆ. ಕೂಡಲೇ ಅವರನ್ನು ಆಸ್ಪತ್ರೆಗೆ ಸಾಗಿಸಲಾಯಿತಾದರೂ, ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಮೃತ ಹನುಮಂತ ಹವಾಲ್ದಾರ್ ಅವರು ಶಾಸಕ ರಾಜಾ ವೆಂಕಟಪ್ಪ ನಾಯಕ ಅವರ ಅಪ್ಪಟ ಅಭಿಮಾನಿಯಾಗಿದ್ದರು. ಇಂತಹ ಅವರು ಹೃದಯಾಘಾತದಿಂದ ಸಾವನ್ನಪ್ಪಿರೋ ಸುದ್ದಿ ಕೇಳಿ, ತಾವು ಕೂಡ ಹೃದಯಾಘಾತಕ್ಕೆ ಒಳಗಾಗಿ ಇಂದು ಸಾವನ್ನಪ್ಪಿದ್ದಾರೆ. https://kannadanewsnow.com/kannada/suo-motu-case-filed-against-anantkumar-hegde-for-sidramullah-khans-remarks/ https://kannadanewsnow.com/kannada/bigg-news-elections-to-surapura-assembly-in-the-state-along-with-lok-sabha-elections/

Read More

ನವದೆಹಲಿ: ವಾಲ್ಟ್ ಡಿಸ್ನಿ ಮತ್ತು ರಿಲಯನ್ಸ್ ಇಂಡಸ್ಟ್ರೀಸ್ ಭಾರತದಲ್ಲಿ ತಮ್ಮ ಮಾಧ್ಯಮ ಕಾರ್ಯಾಚರಣೆಗಳನ್ನು ವಿಲೀನಗೊಳಿಸಲು ಒಪ್ಪಂದಕ್ಕೆ ಸಹಿ ಹಾಕಿವೆ ಎಂದು ಬ್ಲೂಮ್ಬರ್ಗ್ ವರದಿ ಮಾಡಿದೆ. ತೀವ್ರ ಸ್ಪರ್ಧೆಯ ನಡುವೆ ಡಿಸ್ನಿ ಭಾರತದಲ್ಲಿ ತನ್ನ ಕಾರ್ಯತಂತ್ರವನ್ನು ಮರುಪರಿಶೀಲಿಸುತ್ತಿರುವುದರಿಂದ ಮುಖೇಶ್ ಅಂಬಾನಿ ನೇತೃತ್ವದ ರಿಲಯನ್ಸ್ ಇಂಡಸ್ಟ್ರೀಸ್ ವಿಲೀನಗೊಂಡ ಘಟಕದಲ್ಲಿ 61% ಪಾಲನ್ನು ಹೊಂದುವ ನಿರೀಕ್ಷೆಯಿದೆ ಎಂದು ವರದಿ ತಿಳಿಸಿದೆ. ಡಿಸ್ನಿ ಮತ್ತು ರಿಲಯನ್ಸ್ ಪ್ರತಿನಿಧಿಗಳು ವಿಲೀನ ಒಪ್ಪಂದದ ವರದಿಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದರು. ಒಪ್ಪಂದವನ್ನು ಅಂತಿಮಗೊಳಿಸುವ ಸಮಯದಲ್ಲಿ ಡಿಸ್ನಿಯ ಹೆಚ್ಚುವರಿ ಸ್ಥಳೀಯ ಸ್ವತ್ತುಗಳನ್ನು ಸೇರಿಸುವ ಆಧಾರದ ಮೇಲೆ ಪಾಲುದಾರರ ನಡುವಿನ ಷೇರುಗಳ ವಿತರಣೆಯು ಬದಲಾವಣೆಗಳಿಗೆ ಒಳಗಾಗಬಹುದು ಎಂದು ವರದಿ ತಿಳಿಸಿದೆ. ಪ್ರಸಾರ ಸೇವಾ ಪೂರೈಕೆದಾರ ಟಾಟಾ ಪ್ಲೇ ಲಿಮಿಟೆಡ್ ಅನ್ನು ಸ್ವಾಧೀನಪಡಿಸಿಕೊಳ್ಳಲು ರಿಲಯನ್ಸ್ ಇಂಡಸ್ಟ್ರೀಸ್ ಮುಂದಾಗಿದೆ, ಇದರಲ್ಲಿ ಡಿಸ್ನಿ ಅಲ್ಪಸಂಖ್ಯಾತ ಪಾಲನ್ನು ಹೊಂದಿದೆ. ಪ್ರಸ್ತುತ, ಟಾಟಾ ಸನ್ಸ್ ಮಾಲೀಕತ್ವದ ಆಸಕ್ತಿಯನ್ನು ಹೊಂದಿದ್ದು, ಟಾಟಾ ಪ್ಲೇನಲ್ಲಿ 50.2% ಪಾಲನ್ನು ಹೊಂದಿದ್ದರೆ, ಉಳಿದ ಷೇರುಗಳನ್ನು ಸಿಂಗಾಪುರ ಮೂಲದ…

Read More

ಹುಬ್ಬಳ್ಳಿ: ಮಹಾದಾಯಿ ಯೋಜನೆಗೆ ಹಿನ್ನಡೆಯಾಗಲು ಕಾಂಗ್ರೆಸ್ ಪಕ್ಷವೇ ನೇರ ಕಾರಣವಾಗಿದ್ದು, ಅವರು ಟ್ರಿಬ್ಯುನಲ್ ಗೆ ಹೋಗಿದ್ದರಿಂದ 8-10 ವರ್ಷ ವಿಳಂಬವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಆರೋಪಿಸಿದ್ದಾರೆ. ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮಹದಾಯಿ ಯೋಜನೆಗೆ ಹಿನ್ನಡೆಯಾಗಿದ್ದರೇ ಅದಕ್ಕೆ ನೇರವಾದ ಕಾಂಗ್ರೆಸ್ ಪಕ್ಷವೇ, ಈ ಹಿಂದೆ ಮೊಟ್ಟಮೊದಲ ಟ್ರಿಬ್ಯೂನಲ್ ಹೋಗುವ ಅವಶ್ಯಕತೆ ಇರಲಿಲ್ಲ, ಮನಮೋಹನ್ ಸಿಂಗ್ ಪ್ರಧಾನಿಗಳಿದ್ದಾಗ ಟ್ರಿಬ್ಯೂನಲ್ ಮಾಡಿದ್ದು ಕಾಂಗ್ರೆಸ್ ಪಕ್ಷ, ಅದರಿಂದ 8-10 ವರ್ಷ ವಿಳಂಬವಾಯಿತು. ಅತ್ಯಂತ ದೊಡ್ಡ ತಪ್ಪು ಮಾಡಿದ್ದು ಕಾಂಗ್ರೆಸ್ ಪಕ್ಷ ಎಂದು ಆರೋಪಿಸಿದರು. ಕಾಂಗ್ರೆಸ್ ನವರು ಗೋಡೆ ಕಟ್ಟಿದರು ಟ್ರಿಬ್ಯೂನಲ್’ನಲ್ಲಿ ಬರೆದು ಕೊಟ್ಟು ಮಹದಾಯಿಯಿಂದ ಮಲಪ್ರಭಾ ಇಂಟರ್ ಲಿಂಕಿಂಗ್ ಜೋಡನೆಗೆ ಕಾಂಗ್ರೆಸ್’ನವರು ಗೋಡೆ ಕಟ್ಟಿದ್ದರು, ನೀರಾವರಿ ಯೋಜನೆಗೆ ಗೋಡೆಕಟ್ಟಿದ ಅಪಖ್ಯಾತಿ ಇದ್ದರೆ ಅದು ಕಾಂಗ್ರೆಸ್ ಪಕ್ಷಕ್ಕೆ ಇದೆ. ನಾವು ಕಾಲುವೆ ಮಾಡಿದರೆ ಕಾಂಗ್ರೆಸ್ ನವರು ಗೋಡೆ ಕಟ್ಟಿದರು ಎಂದರು. ಗೋವಾದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರದಲ್ಲಿ ಇದ್ದಾಗ ಸಂಪೂರ್ಣವಾಗಿ ವಿರೋಧ ಮಾಡತ್ತ ಬಂದರು. ನಮ್ಮ…

Read More

ಬೆಂಗಳೂರು: ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಮಹತ್ವದ ಸಭೆಯನ್ನು ತಮ್ಮ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ನಡೆಸುತ್ತಿದ್ದಾರೆ. ಈ ಸಭೆಗೆ ನಟ ದರ್ಶನ್ ಕೂಡ ಸರ್ಪ್ರೈಸ್ ಆಗಿ ಬಾಗಿಯಾಗಿದ್ದಾರೆ. ಇಂದು ಬೆಂಗಳೂರಿನ ಜೆಪಿ ನಗರದಲ್ಲಿರುವಂತ ತಮ್ಮ ನಿವಾಸದಲ್ಲಿ ಸಂಸದೆ ಸುಮಲತಾ ಅಂಬರೀಶ್ ಅವರು ಮಂಡ್ಯ ಲೋಕಸಭಾ ಕ್ಷೇತ್ರದ ಚುನಾವಣೆ ಸಂಬಂಧ ಚರ್ಚಿಸೋದಕ್ಕೆ ಮಹತ್ವದ ಸಭೆಯನ್ನು ನಡೆಸುತ್ತಿದ್ದಾರೆ. ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧೆ ಬಗ್ಗೆ ತಮ್ಮ ಬೆಂಬಲಿಗರ ಜೊತೆಗೆ ಸಭೆ ನಡೆಸುತ್ತಿದ್ದಾರೆ. ಈ ಸಭೆಯ ಆರಂಭದಲ್ಲಿ ನಟ ದರ್ಶನ್, ನಿರ್ಮಾಪಕ ರಾಕ್ ಲೈನ್ ವೆಂಕಟೇಶ್, ಇಂಡವಾಳ ಸಚ್ಚಿದಾನಂದ ಆಪ್ತರ ಜೊತೆ ಸುಮಲತಾ ಚರ್ಚೆ ನಡೆಸುತ್ತಿದ್ದಾರೆ. ಬೆಂಬಲಿಗರ ಜೊತೆಗಿನ ಸಭೆಯ ಬಳಿಕ ಮಂಡ್ಯ ಕ್ಷೇತ್ರದ ಮುಖಂಡರು, ಕಾರ್ಯಕರ್ತರ ಜೊತೆಗೆ ಸಭೆಯನ್ನು ನಡೆಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/minister-dr-sharan-prakash-patil-condoles-the-death-of-mla-raja-venkatappa/ https://kannadanewsnow.com/kannada/suo-motu-case-filed-against-anantkumar-hegde-for-sidramullah-khans-remarks/

Read More

ಬೆಂಗಳೂರು: ಯಾದಗಿರಿ ಜಿಲ್ಲೆ ಸುರಪುರ ವಿಧಾನಸಭಾ ಕ್ಷೇತ್ರದ ಶಾಸಕರಾಗಿದ್ದ ರಾಜವೆಂಕಟಪ್ಪ ನಾಯಕ್ ಅವರ ಹಠಾತ್ ನಿಧನಕ್ಕೆ ವೈದ್ಯಕೀಯ ಶಿಕ್ಷಣ, ಕೌಶಲ್ಯಭಿವೃದ್ದಿ, ಜೀವನೋಪಾಯ ಇಲಾಖೆ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಶರಣ್ ಪ್ರಕಾಶ್ ಪಾಟೀಲ್ ಅವರು ತೀವ್ರ ಕಂಬನಿ ಮಿಡಿದಿದ್ದಾರೆ. ಕಲ್ಯಾಣ ಕರ್ನಾಟಕದ ಅಭಿವೃದ್ಧಿಯ ಬಗ್ಗೆ ವಿಶೇಷ ಕಾಳಜಿ ವಹಿಸಿದ್ದ ಅವರ ನಿಧನ ಕಾಂಗ್ರೆಸ್ ಪಕ್ಷಕ್ಕೆ ತುಂಬಲಾರದ ನಷ್ಟ ಎಂದು ಸಂತಾಪ ಸೂಚಿಸಿದ್ದಾರೆ. ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿ,ಸುರಪುರ ಕ್ಷೇತ್ರದ ಅಭಿವೃದ್ಧಿಗೆ ತಮ್ಮದೆಯಾದ ಕನಸು ಕಂಡಿದ್ದರು.ಅವರ ಕಂಡ ಕನಸು ಈಡೇರುವ ಮೊದಲೇ ಇಹಲೋಕ ತ್ಯಜಿಸಿದ್ದು,ವೈಯಕ್ತಿಕವಾಗಿ ನನಗೆ ನಮ್ಮ ಕುಟುಂಬದ ಸದಸ್ಯರನ್ನೇ ಕಳೆದುಕೊಂಡಷ್ಟೇ ನೋವು ಉಂಟಾಗಿದೆ ಎಂದು ಹೇಳಿದ್ದಾರೆ. ಕಲಬುರಗಿ- ಯಾದಗಿರಿ ಅವಳಿ ಜಿಲ್ಲೆಯ ಅಭಿವೃದ್ಧಿಯಲ್ಲಿ ತಮ್ಮದೇಯಾದ ಸೇವೆಯನ್ನು ಸಲ್ಲಿಸಿದ್ದ ಅವರು, ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯಾಗಬೇಕು ಎಂಬ ಕನಸು ಕಂಡಿದ್ದರು. ಆದರೆ, ನಾನೊಂದು ಬಯಸಿದರೆ, ದೇವರು ಇನ್ನೊಂದು ಬಗೆದ ಎಂಬಂತಾಗಿದೆ ಎಂದು ಪಾಟೀಲ್ ಆಘಾತ ವ್ಯಕ್ತಪಡಿಸಿದ್ದಾರೆ. ಅವರ ಪಕ್ಷ ನಿಷ್ಠೆ, ಹಿರಿತನವನ್ನು ಪರಿಗಣಿಸಿ…

Read More

ಬೆಂಗಳೂರು: ರಾಜ್ಯಾಧ್ಯಂತ ಕನ್ನಡ ಕಡ್ಡಾಯಗೊಳಿಸಿದರೇ ಸಾಲದು. ಅದನ್ನು ಜಾರಿಗೊಳಿಸಬೇಕು. ಫೆಬ್ರವರಿ.28ರೊಳಗೆ ಆದೇಶ ಜಾರಿಯಾಗದೇ ಇದ್ದರೇ ರಾಜ್ಯಾಧ್ಯಂತ ಹೋರಾಟ ಮಾಡುವುದಾಗಿ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷ ಟಿ.ಎ ನಾರಾಯಣಗೌಡ ಎಚ್ಚರಿಸಿದ್ದಾರೆ. ಈ ಕುರಿತಂತೆ ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ರಾಜ್ಯದ ಎಲ್ಲಾ ನಾಮಫಲಕಗಳಲ್ಲಿ ಸರ್ಕಾರದ ಆದೇಶದಂತೆ ಶೇ.60 ಸ್ಥಳಾವಕಾಶ ಕನ್ನಡ ಭಾಷೆಗೆ ನೀಡಬೇಕು. ಫೆ.28ರೊಳಗೆ ಆದೇಶ ಜಾರಿಯಾಗದೇ ಇದ್ದರೇ ಕರವೇಯಿಂದ ರಾಜ್ಯಾದ್ಯಂತ ಬೆಂಗಳೂರು ಮಾದರಿಯಲ್ಲೇ ಅಭಿಯಾನ ಆರಂಭಿಸೋದಾಗಿ ತಿಳಿಸಿದರು. ನಾಮಫಲಕಗಳಲ್ಲಿ ಕನ್ನಡ ಕಡ್ಡಾಯ ಎಂದು ಘೋಷಿಸಿದರೇ ಮಾತ್ರ ಸಾಲದು. ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು. ಸಿಎಂ ಸಿದ್ಧರಾಮಯ್ಯ ಸರ್ಕಾರ ಬದ್ಧತೆ ತೋರಿಸಬೇಕು. ಕನ್ನಡಿಕರ ಬಗ್ಗೆ ಕಾಳಜಿ ತೋರಿಸಬೇಕು ಎಂಬುದಾಗಿ ಇದೇ ಸಂದರ್ಭದಲ್ಲಿ ಒತ್ತಾಯಿಸಿದರು. https://kannadanewsnow.com/kannada/congress-committed-big-crime-on-mahadayi-issue-former-cm-basavaraj-bommai/ https://kannadanewsnow.com/kannada/suo-motu-case-filed-against-anantkumar-hegde-for-sidramullah-khans-remarks/

Read More

ಬೆಂಗಳೂರು: ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಇಂದು ಹೃದಯಾಘಾತದಿಂದ ನಿಧನರಾಗಿದ್ದಾರೆ. ಅವರ ನಿಧನದ ಹಿನ್ನಲೆಯಲ್ಲಿ ನಾಳೆಯ ವಿಧಾನಮಂಡಲದ ಕಲಾಪವನ್ನು ಬುಧವಾರಕ್ಕೆ ಮುಂದೂಡಲಾಗಿದೆ. ಇಂದು ಶಾಸಕ ವೆಂಕಟಪ್ಪ ನಾಯಕ ಅವರ ಅಂತಿಮ ದರ್ಶನ ಪಡೆದ ಬಳಿಕ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂತಾಪ ನುಡಿಗಳನ್ನು ಆಡಿದಂತ ಅವರು, ಬಹಳ ಸಂಭಾವಿತ ರಾಜಕಾರಣಿ. ಕ್ಷೇತ್ರದ ಅಭಿವೃದ್ಧಿ, ಜನರ ಸಮಸ್ಯೆಗಳ ಬಗ್ಗೆಯೇ ಹೆಚ್ಚೆಚ್ಚು ಕಾಳಜಿ ವಹಿಸಿದ್ದರು. ಸೋತಾಗಲೂ ಜನರ ನಡುವೆಯೇ ಇದ್ದು ಅವರ ಸಮಸ್ಯೆಗಳಿಗೆ ಸ್ಪಂದಿಸುತ್ತಿದ್ದರು. ವೇರ್ ಹೌಸಿಂಗ್ ಕಾರ್ಪೊರೇಷನ್ ಅಧ್ಯಕ್ಷರಾಗಿ ಕೆಲಸ ಮಾಡಲು ಸಾಧ್ಯವಾಗಲಿಲ್ಲ ಎನ್ನುವ ಬೇಸರ ನನಗಿದೆ. ಮೊನ್ನೆ ಸ್ವಲ್ಪ ಗುಣಮುಖರಾಗುತ್ತಿದ್ದರು. ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎನ್ನುವ ನಿರೀಕ್ಷೆ ಇರಲಿಲ್ಲ. ಅವರ ಆತ್ಮಕ್ಕೆ ಚಿರಶಾಂತಿ ದೊರಕಲಿ ಎಂದರು. ಶಾಸಕರ ನಿಧನದ ಹಿನ್ನೆಲೆಯಲ್ಲಿ ಸೋಮವಾರದ ಅಧಿವೇಶನವನ್ನು ಸಂತಾಪ ಸೂಚಕವಾಗಿ ಒಂದು ದಿನ ಮುಂದೂಡಲಾಗುವುದು. ಮಂಗಳವಾರ ರಾಜ್ಯಸಭಾ ಚುನಾವಣೆ ಇರುವುದರಿಂದ ಬುಧವಾರಕ್ಕೆ ಅಧಿವೇಶನ ಮುಂದೂಡಬೇಕಾಗುತ್ತದೆ ಎಂದು ಸಿಎಂ ಸಿದ್ಧರಾಮಯ್ಯ ತಿಳಿಸಿದರು. https://kannadanewsnow.com/kannada/congress-committed-big-crime-on-mahadayi-issue-former-cm-basavaraj-bommai/ https://kannadanewsnow.com/kannada/suo-motu-case-filed-against-anantkumar-hegde-for-sidramullah-khans-remarks/

Read More

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ್ದಂತ ಸುರಪುರ ಕ್ಷೇತ್ರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರು ಚಿಕಿತ್ಸೆ ಫಲಿಸದೇ ಇಂದು ಸಾವನ್ನಪ್ಪಿದ್ದಾರೆ. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಇಂದು ಎಕ್ಸ್ ಮಾಡಿರುವಂತ ಅವರು, ಸುರಪುರದ ಶಾಸಕರು, ಬಹುಕಾಲದ ನನ್ನ ರಾಜಕೀಯ ಒಡನಾಡಿ ರಾಜ ವೆಂಕಟಪ್ಪ ನಾಯಕ ಅವರ ನಿಧನದ ಸುದ್ದಿ ಅತೀವ ನೋವುಂಟುಮಾಡಿದೆ. ಮೂರು ದಿನದ ಹಿಂದೆಯಷ್ಟೇ ಅವರನ್ನು ಭೇಟಿಮಾಡಿ ಆರೋಗ್ಯ ವಿಚಾರಿಸಿದ್ದೆ ಎಂದು ತಿಳಿಸಿದ್ದಾರೆ. ಜನಾನುರಾಗಿ ವ್ಯಕ್ತಿತ್ವದ ರಾಜಾ ವೆಂಕಟಪ್ಪ ನಾಯಕ ಅವರ ಅಗಲಿಕೆ ವೈಯಕ್ತಿಕವಾಗಿ ಮತ್ತು ರಾಜ್ಯ ರಾಜಕಾರಣಕ್ಕೆ ತುಂಬಿಬಾರದ ನಷ್ಟ. ಮೃತರ ಆತ್ಮಕ್ಕೆ ಶಾಂತಿ ದೊರಕಲಿ, ಅವರ ಕುಟುಂಬ ವರ್ಗ ಮತ್ತು ಅಭಿಮಾನಿಗಳಿಗೆ ನೋವು ಭರಿಸುವ ಶಕ್ತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂದಿದ್ದಾರೆ. https://twitter.com/siddaramaiah/status/1761689626605936653 https://kannadanewsnow.com/kannada/congress-mla-raja-venkatappa-nayaka-passes-away-due-to-cardiac-arrest/ https://kannadanewsnow.com/kannada/congress-committed-big-crime-on-mahadayi-issue-former-cm-basavaraj-bommai/

Read More

ಬೆಂಗಳೂರು: ಹೃದಯಾಘಾತಕ್ಕೆ ಒಳಗಾಗಿದ್ದಂತ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಇಂತಹ ಅವರು ಚಿಕಿತ್ಸೆ ಫಲಿಸದೇ ನಿಧರಾಗಿರೋದಾಗಿ ತಿಳಿದು ಬಂದಿದೆ. ಯಾದಗಿರಿ ಜಿಲ್ಲೆಯ ಸುರಪುರದ ಕಾಂಗ್ರೆಸ್ ಶಾಸಕ ರಾಜಾ ವೆಂಕಟಪ್ಪ ನಾಯಕ(67) ಅವರು ನಾಲ್ಕು ಬಾರಿ ಶಾಸಕರಾಗಿದ್ದರು. ಅವರಿಗೆ ಇಂದು ಹೃದಯಾಘಾತವಾಗಿತ್ತು. ಕೂಡಲೇ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರು ಇದೀಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಅಂದಹಾಗೇ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಮೊನ್ನಯಷ್ಟೇ ನಿಗಮ-ಮಂಡಳಿ ನೇಮಕಾತಿ ಆದೇಶ ಮಾಡಲಾಗಿತ್ತು. ಈ ವೇಳೆಯಲ್ಲಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರನ್ನು ಉಗ್ರಾಣ ನಿಗಮದ ಅಧ್ಯಕ್ಷರಾಗಿ ನೇಮಕ ಮಾಡಲಾಗಿತ್ತು. ಮೊನ್ನೆಯಷ್ಟೇ ಅವರು ಉಗ್ರಾಣ ನಿಗಮದ ಅಧ್ಯಕ್ಷರಾಗಿ ಅಧಿಕಾರ ಸ್ವೀಕರಿಸಿದ್ದರು. ಇಂತಹ ಅವರು ಇಂದು ಹೃದಯಾಘಾತದಿಂದ ನಿಧನರಾಗಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/big-shock-to-primary-and-secondary-school-hindi-co-teachers-in-the-state-school-education-department-withdraws-promotions/ https://kannadanewsnow.com/kannada/congress-committed-big-crime-on-mahadayi-issue-former-cm-basavaraj-bommai/

Read More

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ಅವರು ಭಾನುವಾರ ಗುಜರಾತ್ನ ಆಳ ಸಮುದ್ರದಲ್ಲಿ ನೀರಿನಲ್ಲಿ ಮುಳುಗಿದ್ದು, ಭಗವಾನ್ ಕೃಷ್ಣನ ನಿಧನದ ನಂತರ ಅರೇಬಿಯನ್ ಸಮುದ್ರದ ಅಡಿಯಲ್ಲಿ ಮುಳುಗಿದೆ ಎಂದು ನಂಬಲಾದ ಪ್ರಾಚೀನ ನಗರ ದ್ವಾರಕಾದಲ್ಲಿ ಪ್ರಾರ್ಥನೆ ಸಲ್ಲಿಸಿದರು. ಪ್ರಾಚೀನ ನಗರವು ಭಗವಾನ್ ಕೃಷ್ಣನೊಂದಿಗೆ ನಿಕಟ ಸಂಪರ್ಕ ಹೊಂದಿತ್ತು ಮತ್ತು ಭವ್ಯತೆ ಮತ್ತು ಸಮೃದ್ಧಿಯ ಕೇಂದ್ರವಾಗಿತ್ತು ಎಂದು ನಂಬಲಾಗಿದೆ. ಶ್ರೀಮಂತ ಸಾಂಸ್ಕೃತಿಕ ಮತ್ತು ಆಧ್ಯಾತ್ಮಿಕ ಪರಂಪರೆಯಿಂದ ಕಲ್ಪನೆಗಳನ್ನು ಆಕರ್ಷಿಸುತ್ತಿರುವ ದ್ವಾರಕಾ ನಗರಕ್ಕೆ ಮೋದಿ ಗೌರವ ಸಲ್ಲಿಸಿದರು. ನೀರೊಳಗೆ, ನವಿಲು ತಂದೆಯರಿಗೆ ಗೌರವ ಸಲ್ಲಿಸುತ್ತೇನೆ ಎಂದು ಮೋದಿ ಹೇಳಿದರು. “ನೀರಿನಲ್ಲಿ ಮುಳುಗಿರುವ ದ್ವಾರಕಾ ನಗರದಲ್ಲಿ ಪ್ರಾರ್ಥಿಸುವುದು ಬಹಳ ದೈವಿಕ ಅನುಭವವಾಗಿದೆ. ಆಧ್ಯಾತ್ಮಿಕ ಭವ್ಯತೆ ಮತ್ತು ಕಾಲಾತೀತ ಭಕ್ತಿಯ ಪ್ರಾಚೀನ ಯುಗದೊಂದಿಗೆ ನಾನು ಸಂಪರ್ಕ ಹೊಂದಿದ್ದೇನೆ ಎಂದು ನಾನು ಭಾವಿಸಿದೆ. ಭಗವಾನ್ ಶ್ರೀ ಕೃಷ್ಣ ನಮ್ಮೆಲ್ಲರನ್ನೂ ಆಶೀರ್ವದಿಸಲಿ” ಎಂದು ಮೋದಿ ಬರೆದಿದ್ದಾರೆ. https://twitter.com/narendramodi/status/1761663670373769451 ಪ್ರಾಚೀನ ನಗರವಾದ ದ್ವಾರಕಾ ಹಿಂದೂ ಪುರಾಣ ಮತ್ತು ಇತಿಹಾಸದಲ್ಲಿ ಅಪಾರ ಪ್ರಾಮುಖ್ಯತೆಯನ್ನು ಹೊಂದಿರುವ…

Read More