Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಮೆಸೇಜಿಂಗ್ ಪ್ಲಾಟ್ಫಾರ್ಮ್ನಲ್ಲಿ ವಂಚನೆಗಳು ಮತ್ತು ವಂಚನೆಯ ಚಟುವಟಿಕೆಗಳನ್ನು ತಡೆಗಟ್ಟಲು ವಾಟ್ಸಾಪ್ ಬಲವಾದ ನೀತಿಗಳನ್ನು ಹೊಂದಿದೆ. ಇತ್ತೀಚಿನ ಮಾಸಿಕ ವರದಿಯಲ್ಲಿ, ಮೆಟಾ-ಮಾಲೀಕತ್ವದ ತ್ವರಿತ ಸಂದೇಶ ವೇದಿಕೆಯು ಜನವರಿ 1 ರಿಂದ ಜನವರಿ 30 ರ ನಡುವೆ ಭಾರತದಲ್ಲಿ 99 ಲಕ್ಷಕ್ಕೂ ಹೆಚ್ಚು ಖಾತೆಗಳನ್ನು ನಿಷೇಧಿಸಿದೆ. ಎಲ್ಲಾ ನಿಷೇಧಿತ ಖಾತೆಗಳಲ್ಲಿ, ಯಾವುದೇ ಬಳಕೆದಾರರ ವರದಿಗಳನ್ನು ಸ್ವೀಕರಿಸುವ ಮೊದಲು 13.27 ಲಕ್ಷ ಖಾತೆಗಳನ್ನು ಪೂರ್ವಭಾವಿಯಾಗಿ ನಿಷೇಧಿಸಲಾಗಿದೆ ಎಂದು ವರದಿ ಉಲ್ಲೇಖಿಸುತ್ತದೆ. ಪೂರ್ವಭಾವಿ ನಿಷೇಧಗಳ ಜೊತೆಗೆ, ವಾಟ್ಸಾಪ್ ತನ್ನ ಅಧಿಕೃತ ಕುಂದುಕೊರತೆ ಮಾರ್ಗಗಳ ಮೂಲಕ ಭಾರತದಲ್ಲಿ ಬಳಕೆದಾರರಿಂದ 9,474 ಕುಂದುಕೊರತೆ ವರದಿಗಳನ್ನು ಸ್ವೀಕರಿಸಿದೆ. ಆದಾಗ್ಯೂ, ಈ ದೂರುಗಳ ಆಧಾರದ ಮೇಲೆ ಕೇವಲ 239 ಖಾತೆಗಳ ಮೇಲೆ ಕ್ರಮ ಕೈಗೊಳ್ಳಲಾಗಿದೆ. ಬ್ಯಾನ್ ಮೇಲ್ಮನವಿಗಳು ಅತಿ ಹೆಚ್ಚು ವರದಿಗಳನ್ನು (4,212) ಹೊಂದಿದ್ದು, ಪರಿಶೀಲನೆಯ ನಂತರ 111 ಖಾತೆಗಳನ್ನು ಮರುಸ್ಥಾಪಿಸಲಾಗಿದೆ. ವಾಟ್ಸಾಪ್ ಖಾತೆಗಳನ್ನು ಏಕೆ ನಿಷೇಧಿಸಿದೆ ವರದಿಯ ಪ್ರಕಾರ, ಮಾಹಿತಿ ತಂತ್ರಜ್ಞಾನ (ಮಧ್ಯವರ್ತಿ ಮಾರ್ಗಸೂಚಿಗಳು ಮತ್ತು ಡಿಜಿಟಲ್ ಮಾಧ್ಯಮ ನೀತಿ…
ಬೆಂಗಳೂರು: ಸ್ಪೀಕರ್ ಅವರು ನಮ್ಮ ಶಾಸಕರನ್ನು ಅಮಾನತು ಮಾಡಿ ರಾಜ್ಯ ಸರಕಾರದ ತಾಳಕ್ಕೆ ತಕ್ಕಂತೆ ಕುಣಿದಿದ್ದಾರೆ. ಇದು ಖಂಡನೀಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಹಾಗೂ ಶಾಸಕ ಬಿ.ವೈ. ವಿಜಯೇಂದ್ರ ಅವರು ತಿಳಿಸಿದ್ದಾರೆ. 18 ಶಾಸಕರನ್ನು ಅಮಾನತು ಮಾಡುವ ಆದೇಶವನ್ನು ಸ್ಪೀಕರ್ ಅವರು ಹಿಂಪಡೆಯಬೇಕು ಎಂದು ಮನವಿ ಮಾಡಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ” ದಲ್ಲಿ ಮಾಧ್ಯಮ ಗೋಷ್ಠಿಯಲ್ಲಿ ಇಂದು ಮಾತನಾಡಿದ ಅವರು, ಬಿಜೆಪಿಯ 18 ಶಾಸಕರನ್ನು 6 ತಿಂಗಳ ಕಾಲ ಅಮಾನತುಗೊಳಿಸುವ ಕುರಿತ ನಿರ್ಧಾರವು ಸಂಪೂರ್ಣವಾಗಿ ಕಾನೂನುಬಾಹಿರ, ಅಸಾಂವಿಧಾನಾತ್ಮಕ, ಏಕಪಕ್ಷೀಯ ಹಾಗೂ ಮನಸೋಇಚ್ಛೆಯಿಂದ ತೆಗೆದುಕೊಂಡ ತೀರ್ಮಾನ ಎಂದು ಆಕ್ಷೇಪಿಸಿದರು. ಸ್ಪೀಕರ್ ಅವರು ಶಾಸಕರು ಮಾತ್ರವಲ್ಲ ಕ್ಷೇತ್ರದ ಜನರಿಗೆ ಅವಮಾನ ಮಾಡಿದ್ದಾರೆ ಎಂದು ಖಂಡಿಸಿದರು. ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಮೀಸಲಾತಿ ಕೊಟ್ಟ ಸರಕಾರದ ನಿರ್ಧಾರವನ್ನು ಬಿಜೆಪಿ ವಿರೋಧಿಸುತ್ತದೆ ಎಂದು ಪ್ರಕಟಿಸಿದರು. ಸದನದ ಒಳಗೆ ಮತ್ತು ಹೊರಗೆ ಇದರ ವಿರುದ್ಧ ಹೋರಾಟ ನಡೆಸಿ ಇದನ್ನು ತಾರ್ಕಿಕ ಅಂತ್ಯಕ್ಕೆ ಒಯ್ಯುತ್ತೇವೆ ಎಂದು ಘೋಷಿಸಿದರು.…
ಬೆಂಗಳೂರು: ರಾಜ್ಯದ ರೈತರಿಗೆ ಖುಷಿ ಸುದ್ದಿ ಎನ್ನುವಂತೆ ರೂ.5 ಲಕ್ಷದವರೆಗೆ ಬಡ್ಡಿ ರಹಿತ ಸಾಲಸೌಲಭ್ಯ ನೀಡುವುದಾಗಿ ಸಿಎಂ ಸಿದ್ಧರಾಮಯ್ಯ ಹೊಸ ಘೋಷಣೆ ಮಾಡಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿ ಮಾಹಿತಿ ಹಂಚಿಕೊಂಡಿರುವಂತ ಅವರು, ಹವಾಮಾನ ವೈಪರೀತ್ಯ, ಅನಿಶ್ಚಿತ ಫಸಲು ಹಾಗೂ ರೋಗರುಜಿನಗಳಿಂದ ತತ್ತರಿಸಿಹೋಗಿರುವ ಕೃಷಿ ಕ್ಷೇತ್ರದಲ್ಲಿ ಮತ್ತೆ ಉತ್ಸಾಹವನ್ನು ಕಾಣಲು ನಮ್ಮ ಸರ್ಕಾರ ಟೊಂಕ ಕಟ್ಟಿ ನಿಂತಿದೆ. ಅನ್ನದಾತರ ಕೈಗಳಿಗೆ ಹಣ ನೀಡಿ ಅದನ್ನು ಕೃಷಿಯಲ್ಲಿ ಹೂಡಿಕೆ ಮಾಡಲು ಪ್ರೋತ್ಸಾಹಿಸಿ, ಆ ಮೂಲಕ ನಾಡಿನ ಆರ್ಥಿಕತೆಗೆ ಬಲತುಂಬುವುದು ನಮ್ಮ ಸರ್ಕಾರದ ಆಶಯ ಎಂದು ಹೇಳಿದ್ದಾರೆ. 5 ಲಕ್ಷ ರೂ.ಗಳವರೆಗೆ ಶೂನ್ಯ ಬಡ್ಡಿ ರೂಪದಲ್ಲಿ ನೀಡಲಾಗುವ ಸಾಲವನ್ನು ಸಹಕಾರಿ ಕೃಷಿ ಬ್ಯಾಂಕ್ ಮತ್ತು ಗ್ರಾಮೀಣ ಅಭಿವೃದ್ಧಿ ಬ್ಯಾಂಕ್ಗಳಿಗೆ ವಿಸ್ತರಿಸಲಾಗಿದೆ. ಇದಕ್ಕಾಗಿ ಹೆಚ್ಚುವರಿಯಾಗಿ 38 ಕೋಟಿ ರೂ. ಮೀಸಲಿರಿಸಲಾಗಿದೆ ಎಂದು ತಿಳಿಸಿದ್ದಾರೆ. ರೈತರ ಕಾಳಜಿ ಎನ್ನುವುದು ನಮ್ಮ ಭಾಷಣದ ಸರಕಲ್ಲ, ಆಡಳಿತದ ಕೇಂದ್ರಬಿಂದು ಎಂಬುದನ್ನು ಮತ್ತೆ ಸಾಬೀತು ಮಾಡಿದ್ದೇವೆ ಎಂದಿದ್ದಾರೆ. https://twitter.com/siddaramaiah/status/1903363087744508057…
ಬೆಂಗಳೂರು: ರಾಜ್ಯದ ಶಕ್ತಿ ಯೋಜನೆಯ ಫಲಾನುಭವಿ ಮಹಿಳೆಯರಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಮತ್ತೊಂದು ಗುಡ್ ನ್ಯೂಸ್ ನೀಡಿದ್ದಾರೆ. ಅದೇ ಶೀಘ್ರದಲ್ಲೇ 2000 ಸಾರಿಗೆ ಬಸ್ ಗಳನ್ನು ಖರೀದಿ ಮಾಡಲಾಗುತ್ತಿದೆ ಎಂಬುದಾಗಿದೆ. ಹೀಗಾಗಿ ಹೊಸದಾಗಿ 2000 ಸರ್ಕಾರಿ ಸಾರಿಗೆ ಬಸ್ ಗಳು ರಸ್ತೆಗೆ ಇಳಿಯಲಿದ್ದು, ಮಹಿಳೆಯರು ಶಕ್ತಿ ಯೋಜನೆಯಡಿ ಉಚಿತ ಸಂಚಾರಕ್ಕೆ ಅವಕಾಶ ಸಿಗುವಂತೆ ಆಗಲಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಅವರು, ಶಕ್ತಿ ಯೋಜನೆಯಿಂದ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳಲ್ಲಿ ಪ್ರಯಾಣಿಸುವವರ ಸಂಖ್ಯೆ ಹೆಚ್ಚಾಗಿದೆ. ಹೀಗಾಗಿ ಪ್ರಯಾಣಿಕರಿಗೆ ಉತ್ತಮ ಸೇವೆ ಒದಗಿಸಲು ಬಸ್ಗಳ ಸಂಖ್ಯೆಯನ್ನು ಹೆಚ್ಚಿಸಲು ಕ್ರಮ ಕೈಗೊಂಡಿದ್ದೇವೆ ಎಂದು ತಿಳಿಸಿದ್ದಾರೆ. ಬಜೆಟ್ನಲ್ಲಿ ಸಾರಿಗೆ ನಿಗಮಗಳಿಗೆ 1,000 ಬಸ್ಗಳನ್ನು ಜಿಸಿಸಿ ಮೂಲಕ ಒದಗಿಸುವ ಬಗ್ಗೆ ಘೋಷಿಸಲಾಗಿತ್ತು. ಇದನ್ನು ಪರಿಷ್ಕರಿಸಿ 2,000 ಹೊಸ ಬಸ್ಗಳನ್ನು ಖರೀದಿಸಲು ನಿರ್ಧರಿಸಲಾಗಿದೆ. ಇದಕ್ಕೆ ಬೇಕಾಗಿರುವ ಅನುದಾನವನ್ನು ಒದಗಿಸಲಾಗುವುದು ಎಂದಿದ್ದಾರೆ. ಈ ಮೂಲಕ ನಿಮ್ಮ ಪ್ರಯಾಣವನ್ನು ಇನ್ನಷ್ಟು ಸುಖಕರ ಮತ್ತು ಆರಾಮದಾಯಕವಾಗಿಸಲು ನಮ್ಮ ಸರ್ಕಾರ ಬದ್ಧವಾಗಿದೆ…
ಬಿಹಾರ: ಬಿಹಾರದಲ್ಲಿ ಮತ್ತೊಂದು ಕೊಲೆ ಘಟನೆ ನಡೆದಿದೆ. ಈ ಬಾರಿ ಬಲಿಯಾದವರು ಸರ್ಕಾರಿ ಶಾಲಾ ಶಿಕ್ಷಕ. ಬೇಲಾ ಬಾಗ್ರೋಲಿ ಗ್ರಾಮದಲ್ಲಿ ಶಿಕ್ಷಕನನ್ನು ಅಪರಿಚಿತ ದುಷ್ಕರ್ಮಿಗಳು ಗುಂಡಿಕ್ಕಿ ಕೊಂದಿದ್ದಾರೆ. ಅವರು ತಮ್ಮ ಪೂರ್ವಜರ ಹಳ್ಳಿಯಿಂದ ಸಹರ್ಸಾದಲ್ಲಿರುವ ತಮ್ಮ ನಿವಾಸಕ್ಕೆ ಪ್ರಯಾಣಿಸುತ್ತಿದ್ದಾಗ ಈ ಘಟನೆ ಸಂಭವಿಸಿದೆ. ಮೃತರನ್ನು ರವೀಂದ್ರ ಪಾಸ್ವಾನ್ ಎಂದು ಗುರುತಿಸಲಾಗಿದೆ. ಅವರು ಸಿಸೈ ಹೈಯರ್ ಸೆಕೆಂಡರಿ ಶಾಲೆಯಲ್ಲಿ ಶಿಕ್ಷಕರಾಗಿದ್ದರು. ಬಿಹಾರದಲ್ಲಿ ಇತ್ತೀಚೆಗೆ ನಡೆದ ಪೊಲೀಸರ ಹತ್ಯೆ ಸೇರಿದಂತೆ ಹಲವಾರು ಕೊಲೆಗಳಲ್ಲಿ ಇದು ಇತ್ತೀಚಿನದು. ಸ್ಥಳೀಯ ಮಾಧ್ಯಮ ವರದಿಗಳ ಪ್ರಕಾರ, ಭೂ ವಿವಾದವೊಂದರಲ್ಲಿ ಪೊಲೀಸ್ ದೂರು ದಾಖಲಿಸಲು ಪಾಸ್ವಾನ್ ತಮ್ಮ ಮನೆಯಿಂದ ಹೊರಬಂದರು. ಅವರು ಕೇವಲ 500 ಮೀಟರ್ ದೂರ ಹೋಗಿದ್ದಾಗ ಬೈಕ್ನಲ್ಲಿ ಬಂದ ಇಬ್ಬರು ವ್ಯಕ್ತಿಗಳು ಅವರನ್ನು ಅಡ್ಡಗಟ್ಟಿ ಆರು ಸುತ್ತು ಗುಂಡು ಹಾರಿಸಿದರು. https://twitter.com/ians_india/status/1903365917482049775 2 ತಿಂಗಳ ಹಿಂದೆ ಗೋಪಾಲ್ಗಂಜ್ನಲ್ಲಿ ಶಿಕ್ಷಕನನ್ನು ಗುಂಡಿಕ್ಕಿ ಕೊಂದರು ಜನವರಿಯಲ್ಲಿಯೂ ಸಹ, ಗೋಪಾಲ್ಗಂಜ್ನ ಜಿರ್ವಾ ಗ್ರಾಮದಲ್ಲಿ ಶಿಕ್ಷಕನನ್ನು ಗುಂಡಿಕ್ಕಿ ಕೊಲ್ಲಲಾಯಿತು. ಮೃತ ಅಬಿಂದ್ ಕುಮಾರ್…
ಬೆಂಗಳೂರು: ರಾಜಧಾನಿಯಲ್ಲಿ 2ನೇ ಅಂತಾರಾಷ್ಟ್ರೀಯ ಹಸಿರು ವಿಮಾನ ನಿಲ್ದಾಣಕ್ಕೆ ಮೂರು ಸ್ಥಳಗಳನ್ನು ಆಖೈರು ಮಾಡಲಾಗಿದೆ. ಈ ಜಾಗಗಳ ಪೂರ್ವಕಾರ್ಯ ಸಾಧ್ಯತಾ ಅಧ್ಯಯನಕ್ಕೆಂದು ಭಾರತೀಯ ವಿಮಾನ ನಿಲ್ದಾಣಗಳ ಪ್ರಾಧಿಕಾರದ (ಎಎಐ) ಬಹುಶಿಸ್ತೀಯ ತಂಡವು ಏ.7ರಿಂದ 9ರೊಳಗೆ ರಾಜ್ಯಕ್ಕೆ ಆಗಮಿಸಲಿದೆ. ಈ ಸಂಬಂಧ ಈಗಾಗಲೇ ಪ್ರಾಧಿಕಾರಕ್ಕೆ ಕೆಎಸ್ಐಐಡಿಸಿ ವತಿಯಿಂದ ₹1.21 ಕೋಟಿ ಶುಲ್ಕವನ್ನು ಪಾವತಿಸಲಾಗಿದೆ ಎಂದು ಮೂಲಸೌಕರ್ಯ ಅಭಿವೃದ್ಧಿ ಸಚಿವ ಎಂ ಬಿ ಪಾಟೀಲ ಶನಿವಾರ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು ಕನಕಪುರ ರಸ್ತೆಯಲ್ಲಿ ಎರಡು ಮತ್ತು ನೆಲಮಂಗಲ- ಕುಣಿಗಲ್ ರಸ್ತೆಯಲ್ಲಿ ಒಂದು ಜಾಗವನ್ನು ಈ ಸಲುವಾಗಿ ಗುರುತಿಸಲಾಗಿದೆ ಎಂದರು. ಉದ್ದೇಶಿತ ವಿಮಾನ ನಿಲ್ದಾಣಕ್ಕೆ ಅಂತಿಮಪಡಿಸಿರುವ ತಾಣಗಳನ್ನು ಬಂದು ಪರಿಶೀಲಿಸುವಂತೆ ವಿಮಾನ ನಿಲ್ದಾಣ ಪ್ರಾಧಿಕಾರಕ್ಕೆ ನಮ್ಮ ಇಲಾಖೆಯಿಂದ ಈ ತಿಂಗಳ 5ರಂದು ಪತ್ರ ಬರೆಯಲಾಗಿತ್ತು. ಅದರಂತೆ ತಂಡವು ಬರುತ್ತಿದೆ. ತಂಡದ ಸೂಚನೆಯಂತೆ ನಾವು ಈ ತಾಣಗಳ ಕಂದಾಯ ನಕಾಶೆ, 10 ವರ್ಷಗಳ ಹವಾಮಾನ ವರದಿ, ಈ ಜಾಗಗಳ…
ಬೆಂಗಳೂರು: ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ ಹಲ್ಲೆ ಮಾಡಿದ್ದಾರೆ ಎಂಬುದಾಗಿ ಮಹಿಳಾ ಆಯೋಗಕ್ಕೆ ಕಾಂಗ್ರೆಸ್ ಕಾರ್ಯಕರ್ತೆ ನಂದಿನಿ ನಾಗರಾಜ್ ಎಂಬುವರು ದೂರು ನೀಡಿದ್ದರು. ಈ ಬೆನ್ನಲ್ಲೇ ನಂದಿನಿ ನಾಗರಾಜ್ ಅವರ ಮತ್ತೊಂದು ಮುಖ ಬಟಾ ಬಯಲಾಗಿದೆ. ನಂದಿನಿ ನಾಗರಾಜ್ ವ್ಯಕ್ತಿಯೊಬ್ಬರಿಗೆ ಹಣಕ್ಕೆ ಕಿರುಕುಳ ನೀಡಿದ ಆರೋಪದಡಿ ದೂರು ದಾಖಲಾಗಿದೆ. ಈ ಸಂಬಂಧ ವಿಜಯನಗರ ಪೊಲೀಸ್ ಠಾಣೆಗೆ ಚಂದ್ರಶೇಖರ್ ಎಂಬುವರು ದೂರು ನೀಡಿದ್ದಾರೆ. ಅವರು ನೀಡಿದಂತ ದೂರಿನಲ್ಲಿ ಬೆಂಗಳೂರಿನ ಶಾಸಕರ ಭವನದಲ್ಲಿ ನನಗೆ ಸುಮಾರು 2 ವರ್ಷಗಳಿಂದ ಸುನೀಲ್ ಕುಮಾರ್ ಎಂಬುವರು ಪರಿಚಯವಿರುತ್ತಾರೆ. ಅವರು ಸಮಾಜ ಸೇವೆಯಲ್ಲಿಯೂ ತೊಡಗಿಸಿಕೊಂಡಿರುತ್ತೇನೆ. ನನಗೆ ಎಲ್ಲಾ ಪಕ್ಷದ ಶಾಸಕರು ಮತ್ತು ಕೆಲವು ಮಂತ್ರಿಗಳು ಸಹ ಪರಿಚಯವಿರುತ್ತಾರೆೆ. ನಿಮಗೆ ಹಾಗೂ ನಿಮ್ಮ ಕಡೆಯವರಿಗೆ ಯಾರಿಗಾದರೂ ಏನಾದರೂ ಕೆಲಸಕಾರ್ಯಗಳು ಹಾಗೂ ವರ್ಗಾವಣೆ ಏನಾದರೂ ಆಗಬೇಕಾದರೆ ನಾನು ಸಹಾಯ ಮಾಡುತ್ತೇನೆಂದು ತಿಳಿಸಿರುತ್ತಾರೆ ಎಂದಿದ್ದಾರೆ. ಆದಾಗಿ ನನಗೆ ಪರಿಚಯಸ್ಥರಾದ ಶಿವಸ್ವಾಮಿಯವರಿಗೆ ಗೋಪಾಲ್ ಜಾಧವ್ ಎಂಬ ಅಧಿಕಾರಿಗಳು ಪರಿಚಯವಿರುತ್ತದೆ. ಗೋಪಾಲ್ ಜಾದವ್…
ಬೆಂಗಳೂರು: ರಾಜ್ಯಾಧ್ಯಂತ ಇಂದು ಕನ್ನಡಿಗರಿಗಾಗಿ ಕರೆ ನೀಡಿದ್ದಂತ ಅಖಂಡ ಕರ್ನಾಟಕ ಬಂದ್ ಯಶಸ್ವಿಯಾಗಿದೆ ಎಂಬುದಾಗಿ ಕನ್ನಡ ಒಕ್ಕೂಟದ ಹೋರಾಟಗಾರ ವಾಟಾಳ್ ನಾಗರಾಜ್ ಅವರು ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ ಬಂದ್ ಅವರದ್ದೇ ಆದಂತ ರೂಪದಲ್ಲಿ ನಡೆದಿದೆ. ಕೆಲವು ಕಡೆ ಬಸ್ ಓಡಾಡುತಿದ್ದಾವೆ. ಜನರೇ ಇಲ್ಲ. ಬಸ್ ನಿಲ್ದಾಣದಲ್ಲಿ ಜನ ಇಲ್ಲ. ಕನ್ನಡಿಗರಿಗಾಗಿ ಕರೆದ ಬಂದ್ ಯಶಸ್ವಿಯಾಗಿದೆ ಎಂದರು. ಬಂದ್ ಮಾಡಿದಂತ ನಮ್ಮವರನ್ನು ಬಂಧನ ಮಾಡಿದ್ದಾರೆ. ಬೆಂಗಳೂರು ಕಮೀಷನರ್ ವೈಯಕ್ತಿಕವಾಗಿ ತೆಗೆದುಕೊಂಡಿದ್ದಾರೆ. ಭಾಸ್ಕರ್ ರಾವ್ ರೀತಿ ಇವರು ರಾಜಕೀಯಕ್ಕೆ ಬರುತ್ತಾರೋ ಏನೋ ಗೊತ್ತಿಲ್ಲ. ನನಗೂ ನೋಟಿಸ್ ಕೊಟ್ಟಿದ್ದಾರೆ ಎಂದರು. ಟೌನ್ ಹಾಲ್ ನಿಂದ ಪ್ರತಿಭಟನಾ ಮೆರವಣಿಗೆಗೆ ಅನುಮತಿ ನೀಡಲಿಲ್ಲ. ಬಂದ್ ಹತ್ತಿಕೋ ಕೆಲಸ ಮಾಡಲಾಗಿತ್ತು. ಈ ಕೆಲಸ ಮಾಡಬಾರದು. ನಾವು ಮಾಡಿರೋ ಹೋರಾಟದಲ್ಲಿ ಒಂದು ಹನಿ ನೀರು ಸಿಗದ ರೀತಿ ಆಗಬೇಕಿತ್ತು. ಆದರೂ ಯಶಸ್ಸು ಸಿಕ್ಕಿದೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/we-are-united-for-the-survival-of-our-rights-existence-constitution-dk-shivakumar/ https://kannadanewsnow.com/kannada/nagpur-violence-14-more-held-number-of-arrests-reaches-105-3-fresh-firs-registered/
ಚೆನ್ನೈ : “ನಾವು ನಮ್ಮ ಹಕ್ಕು, ಅಸ್ತಿತ್ವಕ್ಕೆ ಹೋರಾಡಲು, ಸಂವಿಧಾನ ಉಳಿವಿಗಾಗಿ ನಾವು ಒಟ್ಟಾಗಿದ್ದೇವೆ. ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಚೆನ್ನೈ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳಿಗೆ ಶನಿವಾರ ಪ್ರತಿಕ್ರಿಯೆ ನೀಡಿದರು. “ನಮ್ಮ ಸಂಸತ್ ಸ್ಥಾನಗಳು ಕಡಿಮೆಯಾಗಲು ನಾವು ಬಿಡುವುದಿಲ್ಲ. ದಕ್ಷಿಣದ ರಾಜ್ಯಗಳು ದೇಶದ ಬೆಳವಣಿಗೆಗೆ ಸಾಕಷ್ಟು ಕೊಡುಗೆ ನೀಡುತ್ತಿವೆ. ಶೈಕ್ಷಣಿಕ ಗುಣಮಟ್ಟದಲ್ಲಿ, ಆರ್ಥಿಕ ಬೆಳವಣಿಗೆ ಸೇರಿದಂತೆ ಅನೇಕ ವಿಷಯಗಳಲ್ಲಿ ಸಾಕಷ್ಟು ಮುಂದಿದ್ದೇವೆ, ತೆರಿಗೆ ಪಾವತಿಯಲ್ಲಿ ಮುಂಚೂಣಿಯಲ್ಲಿದ್ದೇವೆ” ಎಂದು ಹೇಳಿದರು. “ಜೊತೆಗೂಡುವುದು ಆರಂಭ, ಜೊತೆಗೂಡಿ ಆಲೋಚಿಸುವುದು ಪ್ರಗತಿ, ಜೊತೆಗೂಡಿ ಕೆಲಸ ಮಾಡುವುದು ಪ್ರಗತಿ ಎನ್ನುವ ಮಾತಿನ ಮೇಲೆ ನಂಬಿಕೆಯನ್ನು ಇಟ್ಟಿರುವವರು ನಾವು. ಸ್ಟಾಲಿನ್ ಅವರ ನಾಯಕತ್ವದಲ್ಲಿ ದಕ್ಷಿಣ ಭಾರತ ರಾಜ್ಯಗಳು ಹಾಗೂ ಪಂಜಾಬ್ ರಾಜ್ಯ ಭಾಗವಹಿಸುತ್ತಿದ್ದು ಯಾವುದೇ ಕಾರಣಕ್ಕೂ ನಮ್ಮ ಹಕ್ಕುಗಳನ್ನು ಬಿಟ್ಟುಕೊಡಲು ಸಾಧ್ಯವಿಲ್ಲ. ಮಾಜಿ ಪ್ರಧಾನಿ ವಾಜಪೇಯ ಅವರು ಇದೇ ರೀತಿ 2002 ರಲ್ಲಿ 84 ನೇ ತಿದ್ದುಪಡಿ ಮೂಲಕ ಸಂವಿಧಾನ ಬದಲಾವಣೆಗೆ ಮುಂದಾಗಿದ್ದರು” ಎಂದರು. “ನಾವು ಕ್ಷೇತ್ರ ವಿಂಗಡಣೆ…
ಮಂಗಳೂರು: ಕೆಲಸಕ್ಕೆ ತೆರಳುತ್ತಿದ್ದಂತ ಸಂದರ್ಭದಲ್ಲಿ ಮಹಿಳೆಯೊಬ್ಬರಿಗೆ ಬೀದಿಯಲ್ಲಿ ಆಡುತ್ತಿದ್ದಂತ ನಾಯಿಮರಿಯೊಂದು ಕಚ್ಚಿದೆ. ಇದನ್ನು ತಾತ್ಸಾರ ಮಾಡಿದ್ದಂತ ಮಹಿಳೆಯೊಬ್ಬರು ರೆಬೀಸ್ ರೋಗದಿಂದ ಸಾವನ್ನಪ್ಪಿರುವಂತ ಘಟನೆ ಸುಳ್ಯದಲ್ಲಿ ನಡೆದಿದೆ. ಮಾರ್ಚ್.7ರಂದು ಸಂಪಾಜೆಯ ಕಲ್ಲುಗುಂಡಿ ಬಳಿಯಲ್ಲಿ ಅರಂತೋಡಿಗೆ ತೆರಳುತ್ತಿದ್ದಂತ 42 ವರ್ಷದ ಮಹಿಳೆಗೆ ಬೀದಿಯಲ್ಲಿದ್ದಂತ ನಾಯಿಮರಿಯೊಂದು ಕಚ್ಚಿದೆ. ಈ ಬಗ್ಗೆ ಯಾರಿಗೂ ಹೇಳದೇ, ಚಿಕಿತ್ಸೆಯನ್ನು ಪಡೆಯದೇ ಮಹಿಳೆ ತಾತ್ಸಾರ ಮಾಡಿದ್ದಾಳೆ. ಮಾರ್ಚ್.17ರಂದು ಮಹಿಳೆಗೆ ತೀವ್ರ ಹೊಟ್ಟೆ ನೋವು ಕಾಣಿಸಿಕೊಂಡಿದೆ. ಹೀಗಾಗಿ ಆಕೆಯನ್ನು ಸುಳ್ಯದ ಸರ್ಕಾರಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಈ ವೇಳೆಯಲ್ಲಿ ನೀರು ನೋಡಿದ್ರೇ ಕಿರುಚಾಡೋದಕ್ಕೆ ಮಹಿಳೆ ಆರಂಭಿಸಿದ್ದಾರೆ. ವಿಚಿತ್ರವಾಗಿ ವರ್ತನೆ ತೋರಿದಂತ ಮಹಿಳೆಯನ್ನು ವಿಚಾರಿಸಿದಾಗ ನಾಯಿಮರಿ ಕಚ್ಚಿದಂತ ವಿಷಯವನ್ನು ತಿಳಿಸಿದ್ದಾರೆ. ಈ ಹಿನ್ನಲೆಯಲ್ಲಿ ಮಹಿಳೆಯನ್ನು ಹೆಚ್ಚಿನ ಚಿಕಿತ್ಸೆಗಾಗಿ ಮಂಗಳೂರಿನ ವೆನ್ಲಾಕ್ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೇ ಮಾರ್ಚ್.22ರಂದು ಚಿಕಿತ್ಸೆ ಫಲಿಸದೇ ಮಹಿಳೆ ಸಾವನ್ನಪ್ಪಿದ್ದಾರೆ. ವೈದ್ಯಕೀಯ ಪರೀಕ್ಷೆಯಲ್ಲಿ ರೆಬೀಸ್ ತಗುಲಿದ್ದು ದೃಢಪಟ್ಟಿದೆ. ಮುಂಜಾಗ್ರತಾ ಕ್ರಮವಾಗಿ ಮಹಿಳೆ ವಾಸವಾಗಿದ್ದಂತ ಪ್ರದೇಶ ಮತ್ತು ಕುಟುಂಬದ ಹಲವಾರು ಜನರಿಗೆ ರೆಬೀಸ್ ವಿರೋಧಿ…












