Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: 2024-25ನೇ ಸಾಲಿನ ಡಾ.ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದ ವತಿಯಿಂದ ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ, ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ನಿಗಮದ ವ್ಯಾಪ್ತಿಯಲ್ಲಿ ಬರುವ ಸಮುದಾಯಗಳು ಅರ್ಜಿ ಸಲ್ಲಿಸಬೇಕಾದ ವೆಬ್ಸೈಟ್ ವಿಳಾಸ https://sevasindhu.karnataka.gov.in ಆಗಿದೆ. ಸ್ವಯಂ ಉದ್ಯೋಗ ನೇರಸಾಲ-ಕುರಿ ಸಾಕಾಣಿಕೆ ಯೋಜನೆ : ಸ್ವಯಂ ಉದ್ಯೋಗ ನೇರಸಾಲ ಯೋಜನೆಯಡಿ ಎಲ್ಲಾ ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕುರಿ ಸಾಕಾಣಿಕೆ ಉದ್ದೇಶಕ್ಕಾಗಿ ಸಹಾಯಧನ ಹಾಗೂ ಸಾಲ ಮಂಜೂರು ಮಾಡಲಾಗುವುದು. ಘಟಕ ವೆಚ್ಚ ರೂ.1 ಲಕ್ಷ, ಸಹಾಯಧನ ರೂ. 50 ಸಾವಿರ, ಸಾಲ ರೂ. 50 ಸಾವಿರ. ಸ್ವಾವಲಂಬಿತ ಸಾರಥಿ-ಫುಡ್ ಕಾರ್ಟ್ : ಸ್ವಾವಲಂಬಿತ ಸಾರಥಿ ಯೋಜನೆಯಡಿ ಫುಡ್ಕಾರ್ಟ್ ಉದ್ದೇಶಕ್ಕಾಗಿ ಜಿಲ್ಲಾ ಕೇಂದ್ರಗಳ ವ್ಯಾಪ್ತಿಯಲ್ಲಿ ಮಾತ್ರ ಬ್ಯಾಂಕ್ಗಳ ಸಹಯೋಗದೊಂದಿಗೆ ಯೋಜನೆ ಅನುಷ್ಟಾನ. ಸಾಲದ ಮೊತ್ತಕ್ಕೆ ಶೇ.75 ರಷ್ಟು ಅಥವಾ ಗರಿಷ್ಟ ರೂ.4 ಲಕ್ಷಗಳ ಸಹಾಯಧನ. ಉಳಿದ ಮೊತ್ತ ಬ್ಯಾಂಕ್ ಸಾಲ ಆಗಿರುತ್ತದೆ. ಅರ್ಜಿ…
ಬೆಂಗಳೂರು: 500 ಅಸಿಸ್ಟೆಂಟ್ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ನ್ಯೂ ಇಂಡಿಯ ಅಶುರನ್ಸ್ ಕಂಪನಿ ಲಿಮಿಟೆಡ್ ತಿಳಿಸಿದೆ. 21 ರಿಂದ 30 ವರ್ಷದೊಳಗಿನ ಪದವೀಧರ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು. ಅರ್ಹ ಅಭ್ಯರ್ಥಿಗಳು 2025 ರ ಜನವರಿ, 01 ರೊಳಗೆ ವೆಬ್ಸೈಟ್ ವಿಳಾಸ https://www.newindia.co.in/ ಕ್ಕೆ ಭೇಟಿ ನೀಡಿ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ. ಡಿಸೆಂಬರ್, 27 ರಂದು ಹಾಸನದ ಸಾಲಗಾಮೆ ರಸ್ತೆಯಲ್ಲಿರುವ ಕೃಷಿಕ್ ಸರ್ವೋದಯ ಫೌಂಡೇಶನ್ನಲ್ಲಿ ಈ ನೇಮಕಾತಿ ಪರೀಕ್ಷೆ ಹಾಗೂ ವಿವಿಧ ಬ್ಯಾಂಕ್ ಮತ್ತು ಇನ್ಶುರೆನ್ಸ್ ಕಂಪನಿಗಳ ನೇಮಕಾತಿ ಪರೀಕ್ಷೆಗಳ ಬಗ್ಗೆ ಉಚಿತ ಜಾಗೃತಿ ಮತ್ತು ಮಾರ್ಗದರ್ಶನ ಕಾರ್ಯಕ್ರಮ ಆಯೋಜಿಸಲಾಗಿದೆ. ಹೆಚ್ಚಿನ ಮಾಹಿತಿಗೆ 8660217739 ಸಂಖ್ಯೆಗೆ ಕರೆ ಅಥವಾ ವಾಟ್ಸಾಪ್ ಮಾಡಬಹುದಾಗಿದೆ ಎಂದು ಕೃಷಿಕ್ ಸರ್ವೋದಯ ಫೌಂಡೇಶನ್ ಗೌರವ ಕಾರ್ಯದರ್ಶಿ ಎಚ್.ಪಿ.ಮೋಹನ್ ಅವರು ತಿಳಿದ್ದಾರೆ. https://kannadanewsnow.com/kannada/officials-who-made-an-elderly-couple-wait-were-sentenced-to-30-minutes-of-standing-and-working/ https://kannadanewsnow.com/kannada/union-minister-dharmendra-pradhan-said-that-neet-exam-will-be-conducted-online/
ನೋಯ್ಡಾ: ನೋಯ್ಡಾ ಪ್ರಾಧಿಕಾರದ ಕಚೇರಿಗೆ ತಮ್ಮ ಕೆಲಸಕ್ಕಾಗಿ ಭೇಟಿ ನೀಡಿದ ವೃದ್ಧ ದಂಪತಿಗೆ ಹಾಜರಾಗದ ಕಾರಣ ಶಿಕ್ಷೆಯಾಗಿ ನೋಯ್ಡಾ ಪ್ರಾಧಿಕಾರದ ಅಧಿಕಾರಿಗಳನ್ನು 30 ನಿಮಿಷಗಳ ಕಾಲ ನಿಂತ ಸ್ಥಿತಿಯಲ್ಲಿ ಕೆಲಸ ಮಾಡುವಂತೆ ಶಿಕ್ಷೆಯನ್ನು ಕಚೇರಿಯ ಸಿಬ್ಬಂದಿಗಳಿಗೆ ನೀಡಿದಂತ ಘಟನೆ ನಡೆದಿದೆ. ನೋಯ್ಡಾ ಪ್ರಾಧಿಕಾರದ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ (ಸಿಇಒ) ಲೋಕೇಶ್ ಎಂ ಅವರು ಡಿಸೆಂಬರ್ 16 ರಂದು ವಸತಿ ಪ್ಲಾಟ್ ವಿಭಾಗದ ಅಧಿಕಾರಿಗಳಿಗೆ 50 ನಿಮಿಷಗಳ ಕಾಲ ವೃದ್ಧ ದಂಪತಿಯನ್ನು ನಿರ್ಲಕ್ಷಿಸಿದ್ದನ್ನು ಗಮನಿಸಿದ ನಂತರ ಶಿಕ್ಷೆ ವಿಧಿಸಿದ್ದಾರೆ. ಸಿಸಿಟಿವಿ ದೃಶ್ಯಾವಳಿಗಳಲ್ಲಿ, ವೃದ್ಧ ದಂಪತಿಗಳು ನಿಂತಿರುವುದು ಕಂಡುಬಂದಿದೆ. ಆದಾಗ್ಯೂ, ಸಿಇಒ 15-20 ನಿಮಿಷಗಳ ನಂತರ ಮತ್ತೆ ಸಿಸಿಟಿವಿಯನ್ನು ಪರಿಶೀಲಿಸಿದಾಗ, ವೃದ್ಧ ದಂಪತಿಗಳು ಇನ್ನೂ ನಿಂತಿರುವುದು ಕಂಡುಬಂದಿತು. ನಂತರ ಅವರು 30 ನಿಮಿಷಗಳ ಕಾಲ ಕುರ್ಚಿಗಳ ಮೇಲೆ ಕುಳಿತುಕೊಳ್ಳದೆ ಕೆಲಸ ಮಾಡುವಂತೆ ವಸತಿ ನಿವೇಶನ ಇಲಾಖೆಯ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು. ನೋಯ್ಡಾ ಪ್ರಾಧಿಕಾರದ ಕಚೇರಿಯೊಳಗಿನ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದ್ದು, ಅಧಿಕೃತ ಕರ್ತವ್ಯಗಳಲ್ಲಿ…
ಬೆಳಗಾವಿ ಸುವರ್ಣಸೌಧ: ಇಂದು ವಿಧಾನಸಭೆಯಲ್ಲಿ ಅಂಗೀಕಾರಗೊಂಡ “ಸರಕು ಮತ್ತು ಸೇವೆಗಳ ತೆರಿಗೆ 2024ನೇ ಸಾಲಿನ ಎರಡನೇ ತಿದ್ದುಪಡಿ ವಿಧೇಯಕ” ಹಾಗೂ “ಹಣಕಾಸು ಸಂಸ್ಥೆಗಳಲ್ಲಿ ಠೇವಣಿದಾರರ ಹಿತಾಸಕ್ತಿ ಸಂರಕ್ಷಣಾ ವಿಧೇಯಕ 2024” ಅನ್ನು ಇಂದು (17/12/2024) ವಿಧಾನ ಪರಿಷತ್ ನಲ್ಲೂ ಸಹ ಕೂಲಂಕುಷ ಚರ್ಚೆಯ ನಂತರ ಅಂಗೀಕಾರ ನೀಡಲಾಗಿದೆ. ತೆರಿಗೆದಾರರ ಹಾಗೂ ತೆರಿಗೆ ಸಂಗ್ರಹಿಸುವ ಅಧಿಕಾರಿಗಳ ನಡುವಿನ ಗೊಂದಲಕ್ಕೆ ತೆರೆ ಎಳೆಯುವ ಹಾಗೂ ರಾಜ್ಯದಲ್ಲಿ ವ್ಯಾಪಾರ-ವಹಿವಾಟು ಸ್ನೇಹಿ ಹೆಜ್ಜೆಯ ಭಾಗವಾಗಿ ಸರಕು ಮತ್ತು ಸೇವೆಗಳ ತೆರಿಗೆ 2024 ವಿಧೇಯಕಕ್ಕೆ ಎರಡನೇ ತಿದ್ದುಪಡಿ ಮಾಡಲಾಗುತ್ತಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸ್ಪಷ್ಟಪಡಿಸಿದರು. ಸೋಮವಾರ ವಿಧಾನಸಭೆಯಲ್ಲಿ ಸರಕು ಮತ್ತು ಸೇವೆಗಳ ತೆರಿಗೆ 2024ನೇ ಸಾಲಿನ ಎರಡನೇ ತಿದ್ದುಪಡಿ ವಿಧೇಯಕ ಮಂಡಿಸಿ ಮಾತನಾಡಿದ ಅವರು, “ಎಲ್ಲೆಲ್ಲಿ ತೆರಿಗೆದಾರರ ಹಾಗೂ ತೆರಿಗೆ ಅಧಿಕಾರಿಗಳ ನಡುವೆ ಗೊಂದಲ ಇದೆ, ಈ ಗೊಂದಲಗಳಿಗೆ ತೆರೆ ಎಳೆಯುವ ಹಾಗೂ ಪ್ರಕ್ರಿಯೆಯನ್ನು ಸರಳೀಕರಣಗೊಳಿಸುವುದು ಈ ತಿದ್ದುಪಡಿಯ ಪ್ರಮುಖ ಉದ್ದೇಶ. ಕಳೆದ ನಾಲ್ಕೈದು ವರ್ಷಗಳ…
ಬೆಂಗಳೂರು: ಚುನಾವಣಾ ಬಾಂಡ್ ಹೆಸರಲ್ಲಿ ಸುಲಿಕೆ ಆರೋಪದಲ್ಲಿ ರಾಜ್ಯ ಬಿಜೆಪಿ ಅಧ್ಯಕ್ಷ ಬಿವೈ ವಿಜಯೇಂದ್ರ ವಿರುದ್ಧ ದಾಖಲಿಸಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್ ಗಳ ಸೋಗಿನಲ್ಲಿ ಹಣ ಸುಲಿಗೆ ಮಾಡಿದ ಆರೋಪದ ಮೇಲೆ ಆಗಿನ ಉಪರಾಷ್ಟ್ರಪತಿ ಹಾಗೂ ಹಾಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ವಿರುದ್ಧ ದಾಖಲಾಗಿದ್ದ ಎಫ್ ಐಆರ್ ಅನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಪ್ರಕರಣದಲ್ಲಿ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಮತ್ತು ಇತರರು ಸಹ ಆರೋಪಿಯಾಗಿದ್ದಾರೆ. ಅಂದಹಾಗೇ ಬೆಂಗಳೂರಿನ ತಿಲಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಈ ಪ್ರಕರಣ ರದ್ದು ಕೋರಿ ಹೈಕೋರ್ಟ್ ಗೆ ಬಿವೈ ವಿಜಯೇಂದ್ರ ಅರ್ಜಿ ಸಲ್ಲಿಸಿದ್ದರು. ಇದೀಗ ಹೈಕೋರ್ಟ್ ಎಫ್ಐಆರ್ ರದ್ದುಗೊಳಿಸಿ ಆದೇಶಿಸಿದೆ. ಈ ಮೂಲಕ ಬಿವೈ ವಿಜಯೇಂದ್ರಗೆ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/breaking-pm-modi-condoles-the-death-of-tree-mother-tulsi-gowda-in-kannada-pm-modi/ https://kannadanewsnow.com/kannada/union-minister-dharmendra-pradhan-said-that-neet-exam-will-be-conducted-online/
ನವದೆಹಲಿ: ವೈದ್ಯಕೀಯ ಪ್ರವೇಶ ಪರೀಕ್ಷೆ ನೀಟ್-ಯುಜಿಯನ್ನು ಪೆನ್ ಮತ್ತು ಪೇಪರ್ ಮೋಡ್ ಅಥವಾ ಆನ್ಲೈನ್ ಮೋಡ್ನಲ್ಲಿ ನಡೆಸಬೇಕೇ ಎಂಬ ಬಗ್ಗೆ ಶಿಕ್ಷಣ ಮತ್ತು ಆರೋಗ್ಯ ಸಚಿವಾಲಯ ಚರ್ಚಿಸುತ್ತಿದೆ.ತ್ತು ಈ ನಿಟ್ಟಿನಲ್ಲಿ ಶೀಘ್ರದಲ್ಲೇ ನಿರ್ಧಾರ ತೆಗೆದುಕೊಳ್ಳುವ ನಿರೀಕ್ಷೆಯಿದೆ ಎಂದು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಮಂಗಳವಾರ ಹೇಳಿದ್ದಾರೆ. ಶಿಕ್ಷಣ ಸಚಿವಾಲಯವು ಕೇಂದ್ರ ಸಚಿವ ಜೆ.ಪಿ.ನಡ್ಡಾ ನೇತೃತ್ವದ ಆರೋಗ್ಯ ಸಚಿವಾಲಯದೊಂದಿಗೆ ಎರಡು ಸುತ್ತಿನ ಮಾತುಕತೆ ನಡೆಸಿದೆ. ಪ್ರಸ್ತುತ, ನೀಟ್-ಯುಜಿಯನ್ನು ಆಫ್ಲೈನ್ನಲ್ಲಿ – ಪೆನ್ ಮತ್ತು ಪೇಪರ್ ಮೋಡ್ನಲ್ಲಿ ನಡೆಸಲಾಗುತ್ತದೆ. ಇದರಲ್ಲಿ ವಿದ್ಯಾರ್ಥಿಗಳು ಒಎಂಆರ್ ಶೀಟ್ನಲ್ಲಿ ಬಹು ಆಯ್ಕೆಯ ಪ್ರಶ್ನೆಗಳನ್ನು ಪರಿಹರಿಸಬೇಕಾಗುತ್ತದೆ. ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆ (ನೀಟ್) ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ಸಂಖ್ಯೆಯ ದೃಷ್ಟಿಯಿಂದ ದೇಶದ ಅತಿದೊಡ್ಡ ಪ್ರವೇಶ ಪರೀಕ್ಷೆಯಾಗಿದೆ. 2024ರಲ್ಲಿ ದಾಖಲೆಯ 24 ಲಕ್ಷ ಅಭ್ಯರ್ಥಿಗಳು ಪರೀಕ್ಷೆ ಬರೆದಿದ್ದರು. ನೀಟ್ನ ಆಡಳಿತ ಸಚಿವಾಲಯವು ಆರೋಗ್ಯ ಸಚಿವಾಲಯವಾಗಿದೆ ಮತ್ತು ಆದ್ದರಿಂದ ನೀಟ್ ಅನ್ನು ಪೆನ್ ಮತ್ತು ಪೇಪರ್ ಮೋಡ್ನಲ್ಲಿ ನಡೆಸಬೇಕೇ ಅಥವಾ…
ಬೆಂಗಳೂರು: ನಗರದಲ್ಲಿನ ವ್ಯಕ್ತಿಯೊಬ್ಬ ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಟಿಕೆಟ್ ಕೊಡಿಸುವುದಾಗಿ ಜನರಿಂದ ಹಣ ಪಡೆದು ವಂಚಿಸುತ್ತಿದ್ದಂತ ವಂಚಕನನ್ನು ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರಿನ ಯಲಹಂಕ ಮೂಲಕ ಮಾರುತಿ ಎಂಬಾತನೇ ಬಂಧನಕ್ಕೆ ಒಳಗಾದಂತ ಆಸಾಮಿ. ವೃತ್ತಿಯಲ್ಲಿ ಸಿವಿಲ್ ಕಾಂಟ್ರಾಕ್ಟರ್ ಆಗಿದ್ದಂತ ಮಾರುತಿ, ಹಲವು ಸಚಿವರು, ರಾಜಕೀಯ ಮುಖಂಡರ ನಕಲಿ ಲೆಟರ್ ಹೆಡ್ ಬಳಸಿ, ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಟಿಕೆಟ್ ಕೊಡಿಸುವುದಾಗಿ ಭಕ್ತಾಧಿಗಳಿಂದ ಹಣ ಪಡೆದು ವಂಚಿಸುತ್ತಿದ್ದರಂತೆ. ಇದಷ್ಟೇ ಅಲ್ಲದೇ ಕೆಲ ದಿನಗಳ ಹಿಂದಷ್ಟೇ ಆಂಧ್ರಪ್ರದೇಶ ಮುಖ್ಯಮಂತ್ರಿ ಕಚೇರಿಗೂ ಕರೆ ಮಾಡಿದ್ದಂತ ವಂಚಕ ಮಾರುತಿ, ತಾನು ಗೃಹ ಸಚಿವ ಡಾ.ಜಿ ಪರಮೇಶ್ವರ್ ಮಾತನಾಡುತ್ತಿದ್ದೇನೆ. ನನಗೆ ಪರಿಚಯಸ್ಥ ಕುಟುಂಬಸ್ಥರು ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ಬರುತ್ತಿದ್ದಾರೆ. ಅವರಿಗೆ ವಿಐಪಿ ಟಿಕೆಟ್ ಕೊಡಿಸುವಂತೆ ಸೂಚಿಸಿದ್ದಾನೆ. ಅಲ್ಲದೇ ಕೊಡಿಸದೇ ಇದ್ದರೇ ಅಧಿಕಾರಿ, ಸಿಬ್ಬಂದಿಗಳನ್ನು ಅಮಾನತುಗೊಳಿಸುವುದಾಗಿಯೂ ಬೆದರಿಕೆ ಹಾಕಿದ್ದನಂತೆ. ತಿರುಪತಿ ತಿಮ್ಮಪ್ಪನ ದರ್ಶನಕ್ಕೆ ವಿಐಪಿ ಟಿಕೆಟ್ ಸಿಗಲಿದೆ ಎಂಬುದಾಗಿ ನಕಲಿ ಗೃಹ ಸಚಿವರ ಲೆಟರ್ ಹೆಡ್ ಕೊಟ್ಟು ಕಳುಹಿಸಿದ್ದನಂತೆ. ಭಕ್ತರಿಂದ…
ಬೆಳಗಾವಿ: ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಪೂರ್ಣಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಇಂದು ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ರಡಿ ಭೂಸ್ವಾಧೀನ, ಪುನರ್ವಸತಿ ಮತ್ತು ಪುನರ್ ನಿರ್ಮಾಣ ಕುರಿತ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಆಲಮಟ್ಟಿ ಜಲಾಶಯದ ನೀರಿನ ಸಂಗ್ರಹ ಮಟ್ಟವನ್ನು ಆರ್.ಎಲ್. 519.60 ಮೀ. ನಿಂದ 524.26 ಮೀ. ರವರೆಗೆ ಎತ್ತರಿಸಿ ಕೃಷ್ಣಾ ಮೇಲ್ದಂಡೆ ಯೋಜನೆ ಹಂತ-3 ಹಂತ ಹಂತವಾಗಿ ಯೋಜನೆಯನ್ನು ಪೂರ್ಣಗೊಳಿಸಲಾಗುವುದು ಎಂದರು. ಯೋಜನೆಗಾಗಿ ಮುಳುಗಡೆ ಹೊಂದಲಿರುವ ಜಮೀನು, ಪುನರ್ವಸತಿ ಹಾಗೂ ಕಾಲುವೆ ನಿರ್ಮಾಣಕ್ಕಾಗಿ ಅಂದಾಜು ಒಟ್ಟಾರೆ 1,33,867 ಎಕರೆ ಜಮೀನು ಸ್ವಾಧೀನಪಡಿಸಬೇಕಾಗಿದೆ. – ಇದುವರೆಗೆ 28,967 ಎಕರೆ ಸ್ವಾಧೀನಪಡಿಸಲಾಗಿದ್ದು, 1,04,963 ಎಕರೆ ಸ್ವಾಧೀನಪಡಿಸಲು ಬಾಕಿಯಿದೆ ಎಂದು ತಿಳಿಸಿದರು. ಜಲಾಶಯದ ಹಿನ್ನೀರಿನಿಂದ ಮುಳುಗಡೆಯಾಗಲಿರುವ 188 ಗ್ರಾಮಗಳಿಗೆ ಸಂಬಂಧಿಸಿದಂತೆ 73,020 ಎಕರೆ ಜಮೀನು ಭೂಸ್ವಾಧೀನಕ್ಕೆ ಬಾಕಿಯಿದೆ. …
ಬೆಳಗಾವಿ ಸುವರ್ಣಸೌಧ: ಕೈಗಾರಿಕಾ ಪ್ರದೇಶಗಳಲ್ಲಿ ಸಾರ್ವಜನಿಕ ಹಿತಾಸಕ್ತಿಯ ಉದ್ದೇಶಗಳಿಗೆಂದು ಮೀಸಲಿಟ್ಟಿರುವ ಸಿ.ಎ. ನಿವೇಶನಗಳನ್ನು ಪಾರದರ್ಶಕವಾಗಿ ಮತ್ತು ನಿಯಮಗಳಿಗೆ ಅನುಸಾರವಾಗಿ ಹಂಚಲಾಗುತ್ತಿದೆ. ಜೊತೆಗೆ ಇದರಲ್ಲಿ ಎಸ್ಸಿ-ಎಸ್ಟಿ ಸಮುದಾಯಗಳ ಅರ್ಹರಿಗೂ ಅವಕಾಶ ಸಿಗಬೇಕೆಂದು ಮೀಸಲಾತಿಯನ್ನು ಕಡ್ಡಾಯಗೊಳಿಸಲಾಗಿದೆ. ಇದರಲ್ಲಿ ಸ್ವಜನ ಪಕ್ಷಪಾತವಾಗಲಿ, ಅಕ್ರಮವಾಗಲಿ ಏನೂ ನಡೆದಿಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಮಂಗಳವಾರ ಇಲ್ಲಿ ಸ್ಪಷ್ಟಪಡಿಸಿದರು. ವಿಧಾನ ಪರಿಷತ್ ನಲ್ಲಿ ಬಿಜೆಪಿಯ ಸಿ.ಟಿ.ರವಿ ಅವರು ಕೇಳಿದ ಪ್ರಶ್ನೆಗೆ ಅವರು ವಿವರವಾದ ಉತ್ತರ ನೀಡಿದರು. ಕೈಗಾರಿಕಾ ಪ್ರದೇಶಗಳಲ್ಲಿ ಶಾಲೆ, ಆಸ್ಪತ್ರೆ, ವಸತಿ ಸಮುಚ್ಚಯಗಳು, ಬ್ಯಾಂಕು, ಪೆಟ್ರೋಲ್ ಬಂಕ್, ಕ್ಯಾಂಟೀನ್, ಸಮುದಾಯ ಭವನ, ಆರ್ & ಡಿ ಮತ್ತು ನಾವೀನ್ಯತಾ ಕೇಂದ್ರಗಳು ಇತ್ಯಾದಿ ಉದ್ದೇಶಗಳಿಗೆಂದು ಸಿ.ಎ. ನಿವೇಶನಗಳನ್ನು ಇಟ್ಟುಕೊಳ್ಳಲಾಗಿದೆ. ಹೋಟೆಲುಗಳು ಕೂಡ ಇದರಡಿಯಲ್ಲಿಯೇ ಬರುತ್ತವೆ. ಆದರೆ, ಒಬ್ಬರಿಗೆ ಒಂದೇ ಸಿ.ಎ. ನಿವೇಶನವನ್ನು ಮಾತ್ರ ಕೊಡಬೇಕೆಂಬ ನಿರ್ಬಂಧ ಕೂಡ ಇಲ್ಲ. ಅರ್ಹ ಸಂಸ್ಥೆಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗುತ್ತದೆ ಎಂದು ಸಚಿವರು ಸ್ಪಷ್ಟಪಡಿಸಿದರು. ಈ…
ಬೆಂಗಳೂರು: 101 ಉದ್ಯೋಗಿಗಳು ಮತ್ತು ಅಧಿಕಾರಿಗಳಿಗೆ ಅತಿ ವಿಶಿಷ್ಟ ರೈಲು ಸೇವಾ ಪುರಸ್ಕಾರ ನೀಡಲು ಭಾರತೀಯ ರೈಲ್ವೆ ನಿರ್ಧರಿಸಿದೆ. ಆಯ್ಕೆಯಾದ ನೌಕರರು ಮತ್ತು ಅಧಿಕಾರಿಗಳನ್ನು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಅವರು ಡಿಸೆಂಬರ್ 21, 2024 ರಂದು ನವದೆಹಲಿಯ ಭಾರತ್ ಮಂಟಪಂನಲ್ಲಿ ನಡೆಯುವ ಭವ್ಯ ಸಮಾರಂಭದಲ್ಲಿ ಗೌರವಿಸಲಿದ್ದಾರೆ. ನೈಋತ್ಯ ರೈಲ್ವೆಯಿಂದ ಅವರ ಅತ್ಯುತ್ತಮ ಪ್ರಯತ್ನಗಳಿಗಾಗಿ ನಾಲ್ವರು ರೈಲ್ವೆ ಸಿಬ್ಬಂದಿಯನ್ನು ಈ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ನಾವಿನ್ಯತೆ, ರೈಲ್ವೆ ಆದಾಯವನ್ನು ಹೆಚ್ಚಿಸುವುದು, ಉತ್ಪಾದಕತೆಯನ್ನು ಸುಧಾರಿಸುವುದು, ಆಮದಿನ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡುವುದು ಮತ್ತು ಸ್ಥಳೀಯ ತಂತ್ರಜ್ಞಾನದ ಬಳಕೆಯನ್ನು ಉತ್ತೇಜಿಸುವುದು ಮತ್ತು ರೈಲ್ವೆಯ ಜೀವ ಮತ್ತು ಆಸ್ತಿಯ ರಕ್ಷಣೆಯಲ್ಲಿ ಈ ಉದ್ಯೋಗಿಗಳ ಶ್ರಮಕ್ಕೆ ಪ್ರತಿಫಲಿಸಿದೆ. ಶಿವಾನಂದ ಟಿ (ಹೆಡ್ ಕಾನ್ಸ್ಟೇಬಲ್, ದಾವಣಗೆರೆ, ಮೈಸೂರು ವಿಭಾಗ) 07.07.2023 ರಂದು ದಾವಣಗೆರೆ ನಿಲ್ದಾಣದಲ್ಲಿ ಪ್ಲಾಟ್ ಫಾರ್ಮ್ ಕರ್ತವ್ಯದಲ್ಲಿದ್ದಾಗ, ರೈಲು ಸಂಖ್ಯೆ 12778 ಸಮೀಪಿಸುತ್ತಿದ್ದಂತೆ ವೃದ್ಧರೊಬ್ಬರು ಹಳಿಯ ಮೇಲೆ ಸಿಲುಕಿಕೊಂಡಿರುವುದನ್ನು ಗಮನಿಸಿದರು. ತ್ವರಿತವಾಗಿ ಕಾರ್ಯಪ್ರವೃತ್ತರಾಗಿ, ಟ್ರ್ಯಾಕ್ ಗೆ ಹಾರಿ…