Author: kannadanewsnow09

ಬೆಂಗಳೂರು: 2025-26ನೇ ಸಾಲಿನ ಪ್ರತಿಭಾ ಕಾರಂಜಿ ಹಾಗೂ ಕಲೋತ್ಸವ ಕಾರ್ಯಕ್ರಮ ಆಯೋಜನೆಯ ಸಂಬಂಧ ವೇಳಾಪಟ್ಟಿಯನ್ನು ಬದಲಾವಣೆ ಮಾಡಿ ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ. ಈ ಸಂಬಂಧ ಶಾಲಾ ಶಿಕ್ಷಣ ಇಲಾಖೆಯಿಂದ ಆದೇಶ ಹೊರಡಿಸಿದ್ದು, 2025-26ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಆಯೋಜನೆ ಸಂಬಂಧ ಸುತ್ತೋಲೆಯನ್ನು ಹೊರಡಿಸಿ, ವಿವಿಧ ಹಂತದ ಕಾರ್ಯಕ್ರಮವನ್ನು ಆಯೋಜಿಸಲು ವೇಳಾಪಟ್ಟಿಯನ್ನು ನಿಗದಿಪಡಿಸಲಾಗಿತ್ತು ಎಂದು ತಿಳಿಸಿದೆ. ಇದೀಗ ವಿದ್ಯಾರ್ಥಿಗಳ ಶೈಕ್ಷಣಿಕ ಮತ್ತು ಆಡಳಿತಾತ್ಮಕ ಹಿತದೃಷ್ಟಿಯಿಂದ ಅಲ್ಲದೇ ಶೈಕ್ಷಣಿಕ ವರ್ಷದ ಮೊದನೇ ಅವಧಿಯಲ್ಲಿ ವಿವಿಧ ಹಂತದ ಕ್ರೀಡಾಕೂಟ ಆಯೋಗಿಸಲಾಗುತ್ತಿರುವ ಕಾರಣ, 2025-26ನೇ ಸಾಲಿನ ಪ್ರತಿಭಾ ಕಾರಂಜಿ, ಕಲೋತ್ಸವ ಕಾರ್ಯಕ್ರಮ ಕ್ಲಸ್ಟರ್, ತಾಲ್ಲೂಕು, ಜಿಲ್ಲಾ ಹಾಗೂ ರಾಜ್ಯ ಮಟ್ಟದಲ್ಲಿ ಸ್ಪರ್ಧೆ ನಡೆಸಲು ಈ ಕೆಳಕಂಡಂತೆ ವೇಳಾಪಟ್ಟಿ ಬದಲಾವಣೆ ಮಾಡಲಾಗಿದೆ ಎಂದಿದೆ. ಹೀಗೆದೆ ಬದಲಾವಣೆಗೊಂಡ ವೇಳಾಪಟ್ಟಿ ಕ್ಲಸ್ಟರ್ ಹಂತದಲ್ಲಿ ದಿನಾಂಕ 10-10-2025 ರಿಂದ 25-10-2025ರವರೆಗೆ ನಡೆಸಲು ತಿಳಿಸಿದೆ. ತಾಲ್ಲೂಕು ಹಂತದಲ್ಲಿ ದಿನಾಂಕ 27-10-2025 ರಿಂದ 10-11-2025ರವರೆಗೆ ನಡೆಸಲು ನಿಗದಿಪಡಿಸಿದೆ. ಜಿಲ್ಲಾ ಹಂತದಲ್ಲಿ ದಿನಾಂಕ…

Read More

ಬೆಂಗಳೂರು : ನಗರಾಭಿವೃದ್ಧಿ ಮತ್ತು ನಗರ ಯೋಜನೆ ಸಚಿವ ಬಿ.ಎಸ್.ಸುರೇಶ ಅವರು ಮಹಾನಗರಪಾಲಿಕೆಗಳ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ನಡೆಸಿದ ಸಂಧಾನ ಸಭೆ ಫಲಪ್ರದವಾಗಿದ್ದು, ಮುಷ್ಕರ ಕೈಬಿಡುವುದಾಗಿ ನೌಕರರು ಪ್ರಕಟಿಸಿದ್ದಾರೆ. ವಿಕಾಸಸೌಧದಲ್ಲಿ ಮಂಗಳವಾರ ರಾಜ್ಯದ ಮಹಾನಗರ ಪಾಲಿಕೆ ನೌಕರರ ಸಂಘದ ಅಧ್ಯಕ್ಷ ಅಮೃತರಾಜ್ ಮತ್ತು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಷಡಕ್ಷರಿ ನೇತೃತ್ವದ ಪದಾಧಿಕಾರಿಗಳೊಂದಿಗೆ ಸಚಿವರು ಸಭೆ ನಡೆಸಿದರು. ಮಹಾನಗರ ಪಾಲಿಕೆಗಳ ಸಾಮಾನ್ಯ ನೇಮಕಾತಿ ನಿಯಮಗಳು 2011 ಕ್ಕೆ ಸಮಗ್ರ ತಿದ್ದುಪಡಿ ಮಾಡುವುದು, ಮಹಾನಗರ ಪಾಲಿಕೆ ನೌಕರರನ್ನು ಪೂರ್ಣ ಪ್ರಮಾಣದಲ್ಲಿ ಸರ್ಕಾರಿ ನೌಕರರೆಂದು ಪರಿಗಣಿಸುವುದು, ಸರ್ಕಾರಿ ನೌಕರರ ರೀತಿಯಲ್ಲಿ ಮಹಾನಗರ ಪಾಲಿಕೆಗಳ ಅಧಿಕಾರಿಗಳು/ನೌಕರರಿಗೂ ಕೆಜಿಐಡಿ, ಜಿಐಎಸ್ ಮತ್ತು ಜಿಪಿಎಫ್ ಸೌಲಭ್ಯಗಳನ್ನು ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ನೌಕರರ ಸಂಘಗಳು ಸರ್ಕಾರ ಮುಂದಿಟ್ಟಿದ್ದವು. ಈ ಬಗ್ಗೆ ಸಭೆ ನಡೆಸಿದ ಬಳಿಕ ಸಭೆಯ ಬಗ್ಗೆ ಮಾಹಿತಿ ನೀಡಿದ ಸಚಿವ ಬೈರತಿ ಸುರೇಶ ಅವರು, ಪಾಲಿಕೆ ನೌಕರರಿಗೆ ಸಕಾಲಕ್ಕೆ ವೇತನ ನೀಡುವುದು, ಸಿ & ಆರ್ ನಿಯಮಗಳಿಗೆ…

Read More

ಬೆಂಗಳೂರು : “ಗ್ರೇಟರ್ ಬೆಂಗಳೂರು ಪ್ರಾಧಿಕಾರದ ಅಡಿಯಲ್ಲಿ ಐದು ಪಾಲಿಕೆ ರಚನೆ ಮಾಡಿ, ಶೀಘ್ರ ಚುನಾವಣೆ ನಡೆಸುತ್ತೇವೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿಳಿಸಿದರು. ಕೆಪಿಸಿಸಿ ಕಚೇರಿ ಭಾರತ್ ಜೋಡೋ ಭವನದಲ್ಲಿ ಮಂಗಳವಾರ ನಡೆದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ರಾಜ್ಯ, ಜಿಲ್ಲೆ, ತಾಲೂಕು ಮಟ್ಟದ ಪದಾಧಿಕಾರಿಗಳ ಸಮಾವೇಶದಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಾತನಾಡಿದರು. “ಜಿಬಿಎ ರಚನೆ ಮಾಡಲಾಗಿದೆ ಈ ಮೂಲಕ ಐದು ಪಾಲಿಕೆಗಳನ್ನು ನಾವು ಮಾಡಿಯೇ ತೀರುತ್ತೇವೆ. ಈ ಕುರಿತು ಶಾಸಕ ರಿಜ್ವಾನ್ ನೇತೃತ್ವದಲ್ಲಿ ಸಮಿತಿ ಮಾಡಲಾಗಿದೆ. ಕೆಲವರು ಸಾರ್ವಜನಿಕವಾಗಿ ವಿರೋಧ ಮಾಡಬಹುದು ಆದರೆ ಆಡಳಿತ ದೃಷ್ಟಿಯಿಂದ ಇದನ್ನು ಮಾಡಲೇಬೇಕಾಗಿದೆ. ಪಾಲಿಕೆಗಳು ರಚನೆಯಾದರೆ ನಮ್ಮ ಕಾರ್ಯಕರ್ತರಿಗೆ ಹೆಚ್ಚಿನ ಸ್ಥಾನ ಮಾನ ನೀಡಲೇಬೇಕು ಎಂದು ನಾವು ತೀರ್ಮಾನಿಸಿದ್ದೇವೆ. ಇದಕ್ಕೆ ಅಡಿಪಾಯ ತಯಾರು ಮಾಡಬೇಕಿದೆ. ಏಕೆಂದರೆ ಡಿ.ಕೆ.ಶಿವಕುಮಾರ್ ಒಬ್ಬನೇ ಸರ್ಕಾರ ತರಲು ಆಗುವುದಿಲ್ಲ. ಕಾರ್ಯಕರ್ತರೇ ಇಲ್ಲಿ ಜೀವಾಳ. ನಾವು ವಿಧಾನಸೌಧದಲ್ಲಿ ತೀರ್ಮಾನ ಮಾಡಬಹುದು ಆದರೆ ಸರ್ಕಾರದ ರಾಯಭಾರಿಗಳು ನೀವು.…

Read More

ಬೆಂಗಳೂರು: ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿದ ಹಿನ್ನಲೆಯಲ್ಲಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ಸರ್ಕಾರ ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿದೆ. ಈ ಹಿಂದೆ ಶ್ರೀಮತಿ ವಾಸಂತಿ ಅಮರ್ (ಭಾ.ಆ.ಸೇ) ಹಿಂದಿನ ವಿಶೇಷ ಜಿಲ್ಲಾಧಿಕಾರಿ-3 ಬೆಂಗಳೂರು ಉತ್ತರ ಉಪ ವಿಭಾಗ ರವರು ಬೆಂಗಳೂರು ಉತ್ತರ ತಾಲೂಕು, ದಾಸನಪುರ ಹೋಬಳಿ, ಹುಚ್ಚನಪಾಳ್ಯ ಗ್ರಾಮದ ಸರ್ವೇ ನಂ.8 ರಲ್ಲಿ, 10 ಎಕರೆ 20 ಗುಂಟೆ ಸರ್ಕಾರಿ ಜಮೀನಿಗೆ ನಿಯಮ ಬಾಹಿರವಾಗಿ ಆದೇಶ ಹೊರಡಿಸಿರುತ್ತಾರೆ. ಈ ಪ್ರಕರಣ ಕಾನೂನು ಬಾಹೀರವಾಗಿದ್ದು ಇದೀಗ ಅವರ ವಿರುದ್ಧ FIR ದಾಖಲಾಗಿದೆ. ಇಂದು ಬೆಂಗಳೂರಿನ 48ನೇ ಎಸಿಎಂಎಂ ನ್ಯಾಯಾಲಯದಲ್ಲಿ ದಾಖಲಾಗಿದ್ದಂತ ಎನ್ ಸಿ ಆರ್ ನಂ 112/2025ರ ಅನುಸಾರ ತನಿಖೆ ಕೈಗೊಳ್ಳಲು ಕೋರಿದ್ದು, ಅದರಂತೆ ನ್ಯಾಯಾಲಯವು ತನಿಖೆ ಕೈಗೊಳ್ಳಲು ಆದೇಶಿಸಿದೆ. ಹೀಗಾಗಿ ಕೆಎಎಸ್ ಅಧಿಕಾರಿ ಪ್ರಶಾಂತ್ ಖಾನಗೌಡ ಪಾಟೀಲ್ ಹಲಸೂರು ಗೇಟ್ ಪೊಲೀಸ್ ಠಾಣೆಗೆ ತೆರಳಿ ಐಎಎಸ್ ಅಧಿಕಾರಿ ವಾಸಂತಿ ಅಮರ್ ವಿರುದ್ಧ ದೂರು ನೀಡಿದ್ದಾರೆ.…

Read More

ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ದಂಪತಿಗಳಿಗೆ ಹೆಣ್ಣು ಮಗು ಜನಿಸಿದೆ.  ಕಿಯಾರಾ ಅಡ್ವಾಣಿ ಮತ್ತು ಸಿದ್ಧಾರ್ಥ್ ಮಲ್ಹೋತ್ರಾ ಫೆಬ್ರವರಿಯಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಗರ್ಭಧಾರಣೆಯ ಸುದ್ದಿಯನ್ನು ಹಂಚಿಕೊಂಡರು. ಈ ಸುದ್ದಿಯನ್ನು ಇನ್‌ಸ್ಟಾಗ್ರಾಮ್‌ನಲ್ಲಿ ಮುದ್ದಾದ ಮಗುವಿನ ಸಾಕ್ಸ್‌ಗಳ ಫೋಟೋದೊಂದಿಗೆ ಹಂಚಿಕೊಳ್ಳಲಾಗಿದೆ. ಕಿಯಾರಾ ಅಡ್ವಾಣಿ ನಮ್ಮ ಜೀವನದ ಶ್ರೇಷ್ಠ ಉಡುಗೊರೆ. ಶೀಘ್ರದಲ್ಲೇ ಬರಲಿದೆ ಎಂದು ಬರೆದಿದ್ದರು. ಸಿದ್ಧಾರ್ಥ್ ಮಲ್ಹೋತ್ರಾ ಮತ್ತು ಕಿಯಾರಾ ಅಡ್ವಾಣಿ ಫೆಬ್ರವರಿ, 2023 ರಲ್ಲಿ ರಾಜಸ್ಥಾನದಲ್ಲಿ ನಡೆದ ಖಾಸಗಿ ಸಮಾರಂಭದಲ್ಲಿ ವಿವಾಹವಾದರು. ಕಿಯಾರಾ ಅಡ್ವಾಣಿ ‘ವಾರ್ 2’ ನಲ್ಲಿ ಕಾಣಿಸಿಕೊಳ್ಳಲಿದ್ದಾರೆ. ಇದು ಆಗಸ್ಟ್ 15ರ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾಗಲಿದೆ. ಏತನ್ಮಧ್ಯೆ, ಜಾನ್ವಿ ಕಪೂರ್ ಎದುರು ಸಿದ್ಧಾರ್ಥ್ ಮಲ್ಹೋತ್ರಾ ಅವರ ‘ಪರಮ್ ಸುಂದರಿ’ ಜುಲೈ 25 ರಂದು ಚಿತ್ರಮಂದಿರಗಳಿಗೆ ಬರಲಿದೆ. ಅವರು ಏಕ್ತಾ ಕಪೂರ್ ಅವರ ‘ವಿವಿಎಎನ್: ಫೋರ್ಸ್ ಆಫ್ ದಿ ಫಾರೆಸ್ಟ್’ ಅನ್ನು ಸಹ ಪೈಪ್‌ಲೈನ್‌ನಲ್ಲಿ ಹೊಂದಿದ್ದಾರೆ.

Read More

ಶಿವಮೊಗ್ಗ : ಜಿಲ್ಲೆಯ ಸಾಗರ ತಾಲ್ಲೂಕಿನ ಉಳ್ಳೂರು ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿಯನ್ನು ವರ್ಗಾಯಿಸುವಂತೆ ಒತ್ತಾಯಿಸಿ ಮಂಗಳವಾರ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆಯಿಂದ ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಣಾಧಿಕಾರಿ ಗುರುಕೃಷ್ಣ ಶೆಣೈಗೆ ಮನವಿ ಮಾಡಲಾಯಿತು. ಈ ಮನವಿಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಕರ್ನಾಟಕ ರಕ್ಷಣಾ ನವಶಕ್ತಿ ವೇದಿಕೆ ತಾಲ್ಲೂಕು ಅಧ್ಯಕ್ಷ ವಸೀಮ್ ಉಳ್ಳೂರು, ಗ್ರಾಮಾಡಳಿತ ದೇಶದ ಅಭಿವೃದ್ದಿಗೆ ಸಂಕೇತವಾಗಿರುತ್ತದೆ. ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಉತ್ತಮವಾಗಿ ಕೆಲಸ ಮಾಡಿದರೆ ಗ್ರಾಮಗಳು ಅಭಿವೃದ್ದಿಯಾಗತ್ತದೆ. ಆದರೆ ಉಳ್ಳೂರು ಗ್ರಾಮ ಪಂಚಾಯ್ತಿ ಅಭಿವೃದ್ದಿ ಅಧಿಕಾರಿ ಕರ್ತವ್ಯಲೋಪದಿಂದಾಗಿ ಪಂಚಾಯ್ತಿ ಆಡಳಿತ ವ್ಯವಸ್ಥೆಯೆ ತಲೆಕೆಳಗಾಗಿದೆ ಎಂದು ಆಕ್ರೋಶ ವ್ಯಕ್ತ ಪಡಿಸಿದರು. ಪಂಚಾಯ್ತಿಯಲ್ಲಿ ಕಸವಿಲೇವಾರಿ ವಾಹನ ಇದ್ದರೂ ಅದರ ನಿರ್ವಹಣೆಗೆ ಸೂಕ್ತ ಕ್ರಮ ಕೈಗೊಂಡಿಲ್ಲ. ಮಳೆಯಲ್ಲಿ ವಾಹನ ನಿಲ್ಲಿಸುತ್ತಿರುವುದರಿಂದ ವಾಹನ ತುಕ್ಕು ಹಿಡಿಯುತ್ತಿದೆ. ಊರಿನ ಸ್ವಚ್ಚತೆಗೆ ಆದ್ಯತೆ ನೀಡುತ್ತಿಲ್ಲ. ಆಸ್ಪತ್ರೆ ರಸ್ತೆಯಲ್ಲಿ ಹೊಂಡಗುAಡಿಗಳು ಹೆಚ್ಚಿದ್ದು ಓಡಾಟಕ್ಕೆ ತೀವೃ ಅಡಚಣೆ ಉಂಟಾಗುತ್ತಿದೆ. ಈ-ಸ್ವತ್ತು ಸರಿಯಾದ ಸಮಯಕ್ಕೆ ಮಾಡಿಕೊಡದೆ ಗ್ರಾಮಸ್ಥರು ಪಂಚಾಯ್ತಿಗೆ ಹತ್ತಾರು ಬಾರಿ…

Read More

ನವದೆಹಲಿ” ಭಾರತೀಯ ಕಂಪನಿ ಕಾರ್ಯದರ್ಶಿಗಳ ಸಂಸ್ಥೆ (ICSI) ಜುಲೈ 2025 ರ ICSI ಕಂಪನಿ ಕಾರ್ಯದರ್ಶಿ ಕಾರ್ಯನಿರ್ವಾಹಕ ಪ್ರವೇಶ ಪರೀಕ್ಷೆಯ (CSEET) ಅಂಕಪಟ್ಟಿಗಳನ್ನು ಪ್ರಕಟಿಸುವ ದಿನಾಂಕವನ್ನು ಬಿಡುಗಡೆ ಮಾಡಿದೆ. ಅಧಿಕೃತ ಪ್ರಕಟಣೆಯ ಪ್ರಕಾರ, ಜುಲೈ 16 (ಬುಧವಾರ) ಮಧ್ಯಾಹ್ನ 2 ಗಂಟೆಗೆ CSEET ಜುಲೈ 2025 ಫಲಿತಾಂಶಗಳನ್ನು ಪ್ರಕಟಿಸಲಾಗುವುದು. ಜುಲೈ 05, 2025 ಮತ್ತು ಜುಲೈ 07, 2025 ರಂದು ನಡೆದ ಕಂಪನಿ ಕಾರ್ಯದರ್ಶಿ ಕಾರ್ಯನಿರ್ವಾಹಕ ಪ್ರವೇಶ ಪರೀಕ್ಷೆಯ (CSEET) ಫಲಿತಾಂಶವನ್ನು ಬುಧವಾರ, ಜುಲೈ 16, 2025 ರಂದು ಮಧ್ಯಾಹ್ನ 02:00 ಗಂಟೆಗೆ ಘೋಷಿಸಲಾಗುವುದು. ವೈಯಕ್ತಿಕ ಅಭ್ಯರ್ಥಿಗಳ ವಿಷಯವಾರು ಅಂಕಗಳ ವಿವರಗಳೊಂದಿಗೆ ಫಲಿತಾಂಶವನ್ನು ಸಂಸ್ಥೆಯ ವೆಬ್‌ಸೈಟ್: www.icsi.edu ನಲ್ಲಿ ಲಭ್ಯವಾಗುವಂತೆ ಮಾಡಲಾಗುತ್ತದೆ” ಎಂದು ಅಧಿಕೃತ ಅಧಿಸೂಚನೆ ತಿಳಿಸಿದೆ. CSEET ಜುಲೈ 2025 ರ ಅವಧಿಯ ಔಪಚಾರಿಕ ಇ-ಫಲಿತಾಂಶ-ಕಮ್-ಅಂಕಗಳ ಹೇಳಿಕೆಯನ್ನು ICSI – icsi.edu ವೆಬ್‌ಸೈಟ್‌ನಲ್ಲಿಯೂ ಅಪ್‌ಲೋಡ್ ಮಾಡಲಾಗುತ್ತದೆ ಎಂಬುದನ್ನು ವಿದ್ಯಾರ್ಥಿಗಳು ನೆನಪಿನಲ್ಲಿಡಬೇಕು. ಜುಲೈ, 2025 ರ ಕಂಪನಿ ಕಾರ್ಯದರ್ಶಿ ಕಾರ್ಯನಿರ್ವಾಹಕ ಪ್ರವೇಶ…

Read More

ಬೆಂಗಳೂರು: ಇಂದು ಬೆಂಗಳೂರಿನ ಕೆಪಿಸಿಸಿ ಕಚೇರಿಯ ಭಾರತ ಜೋಡೋ ಸಭಾಂಗಣದಲ್ಲಿ ಮಂಗಳವಾರ ನಡೆದ ಎಐಸಿಸಿಯ ಹಿಂದುಳಿದ ವರ್ಗಗಳ ಸಲಹಾ ಸಮಿತಿ ಸಭೆ ಬಳಿಕ ನಡೆದ ಮಾಧ್ಯಮಗೋಷ್ಠಿಯ ಮುಖ್ಯಾಂಶಗಳನ್ನು ಮುಂದೆ ಓದಿ. ಎಐಸಿಸಿ ಒಬಿಸಿ ಅಧ್ಯಕ್ಷರಾದ ಅನಿಲ್ ಜೈಹಿಂದ್: ಇಂದು ಎಐಸಿಸಿ ಹಿಂದುಳಿದ ವರ್ಗಗಳ ಸಲಹಾ ಸಮಿತಿಯ ಆರಂಭಿಕ ಸಭೆಯನ್ನು ಸಿಎಂ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆಯಿತು. ಈ ಸಮಿತಿಯನ್ನು ಇತ್ತೀಚೆಗೆ ಆಯೋಜಿಸಲಾಗಿದ್ದು, ಎಐಸಿಸಿ ಹಿಂದುಳಿದ ವರ್ಗಗಳ ವಿಭಾಗದ ಅಧ್ಯಕ್ಷನಾಗಿರುವ ನಾನು ಈ ಸಮಿತಿಯ ಸಂಚಾಲಕನಾಗಿದ್ದೇನೆ. ಇಂದಿನ ಸಭೆಯಲ್ಲಿ ಕೆಲ ವಿಚಾರಗಳನ್ನು ಚರ್ಚೆ ಮಾಡಲಾಗಿದ್ದು, ಪಕ್ಷದ ಎಲ್ಲಾ ಹಿಂದುಳಿದ ವರ್ಗಗಳ ನಾಯಕರು ಸಭೆಯಲ್ಲಿ ಭಾಗವಹಿಸಿದ್ದರು. ಈ ಸಭೆ ಬುಧವಾರವೂ ಮುಂದುವರಿಯುವುದರಿಂದ ಇಂದಿನ ಸಭೆಯಲ್ಲಿ ಚರ್ಚೆಯಾದ ವಿಚಾರಗಳ ಬಗ್ಗೆ ನಾನು ಯಾವುದೇ ಅಂಶ ಬಹಿರಂಗಪಡಿಸುವುದಿಲ್ಲ. ಬುಧವಾರ ಸಭೆ ಬಳಿಕ ಈ ಸಭೆಯಲ್ಲಿ ಚರ್ಚಿಸಲಾದ ಅಂಶಗಳು ಹಾಗೂ ಕೈಗೊಂಡ ನಿರ್ಣಯಗಳ ಬಗ್ಗೆ ಮಾಹಿತಿ ನೀಡಲಾಗುವುದು. ಎಐಸಿಸಿ ಅಧ್ಯಕ್ಷರಾದ ಮಲ್ಲಿಕಾರ್ಜುನ ಖರ್ಗೆ ಅವರು ಹಾಗೂ ರಾಹುಲ್ ಗಾಂಧಿ…

Read More

ಬೆಂಗಳೂರು: ನಗರದಲ್ಲಿ ರೌಡಿ ಶೀಟರ್ ಶಿವಕುಮಾರ್ ಎಂಬಾತನನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಬೆಂಗಳೂರಿನ ಹಲಸೂರು ಕೆರೆ ಬಳಿಯ ಮನೆಯ ಮುಂದೆ ರೌಡಿ ಶೀಟರ್ ಶಿವಕುಮಾರ್ ಆಲಿಯಾಸ್ ಬಿಕ್ಲು ಶಿವ ಎಂಬಾತನನ್ನು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಗೈದಿದ್ದಾರೆ. ಮನೆ ಮುಂದೆ ನಿಂತಿದ್ದಾಗಲೇ ನಾಲ್ಕೈದು ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ದಾಳಿ ಮಾಡಿ ಬರ್ಬರವಾಗಿ ಕೊಚ್ಚಿ ಕೊಲೆ ಗೈದಿದ್ದಾರೆ. ಬಿಕ್ಲು ಶಿವನನ್ನು ಕೊಚ್ಚಿ ಕೊಲೆಗೈದು ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ. ಈ ವಿಷಯ ತಿಳಿದು ಸ್ಥಳಕ್ಕೆ ಡಿಸಿಪಿ ಡಿ.ದೇವರಾಜ, ಜಂಟಿ ಪೊಲೀಸ್ ಆಯುಕ್ತ ರಮೇಶ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. https://kannadanewsnow.com/kannada/good-news-for-those-waiting-for-mds-admission-opportunity-to-pay-fees-until-july-17/ https://kannadanewsnow.com/kannada/illegal-order-for-government-land-fir-registered-against-ias-officer-vasanti-amar/

Read More

ಬೆಂಗಳೂರು: 2025ನೇ ಸಾಲಿನ ಸ್ನಾತಕೋತ್ತರ ದಂತ ವೈದ್ಯಕೀಯ ಕೋರ್ಸ್ ಪ್ರವೇಶಕ್ಕೆ ಸಂಬಂಧಿಸಿದಂತೆ ಮೊದಲ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶವನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಪ್ರಕಟಿಸಿದ್ದು, ಆಸಕ್ತರಿಗೆ ತಮಗೆ ಸೂಕ್ತ ಎನಿಸುವ ಛಾಯ್ಸ್ ದಾಖಲಿಸಿ, ಶುಲ್ಕ ಪಾವತಿಸಲು ಜುಲೈ 17 ಕೊನೆ ದಿನವಾಗಿದೆ. ಛಾಯ್ಸ್-1 ಮತ್ತು 2 ಆಯ್ಕೆ ಮಾಡಿದ ಅಭ್ಯರ್ಥಿಗಳು ಮಾತ್ರ ಶುಲ್ಕ ಪಾವತಿಸಬೇಕು. ಛಾಯ್ಸ್- 1 ಆಯ್ಕೆ ಮಾಡಿದವರು ಜು.16 ಮತ್ತು 17 ರಂದು ಮೂಲ ದಾಖಲೆಗಳ ಸಮೇತ ಕೆಇಎ ಕಚೆರಿಗೆ ಬಂದು ಸಲ್ಲಿಸಿ, ಪ್ರವೇಶ ಪತ್ರಗಳನ್ನು ಪಡೆಯಬಹುದು ಎಂದು ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಅಭ್ಯರ್ಥಿಗಳು ಜು.18ರೊಳಗೆ ಕಾಲೇಜುಗಳಿಗೆ ವರದಿ ಮಾಡಿಕೊಳ್ಳಬೇಕು ಎಂದೂ ಅವರು ವಿವರಿಸಿದ್ದಾರೆ. ಎನ್ ಆರ್ ಐ ವಾರ್ಡ್ ಕ್ಯಾಟಗರಿಯಡಿ ಸೀಟು ಪಡೆದವರ ಶುಲ್ಕವನ್ನು ಪ್ರಾಯೋಜಿಸಿದ ವ್ಯಕ್ತಿಯ ಬ್ಯಾಂಕ್ ಖಾತೆಯಿಂದಲೇ ಕೆಇಎ ಖಾತೆಗೆ ಹಣ ಸಂದಾಯ‌ ಮಾಡಬೇಕು. ಒಂದು ವೇಳೆ ಸದ್ಯಕ್ಕೆ ಆ ರೀತಿ ಹಣ ವರ್ಗಾವಣೆ ಮಾಡಿಸಲು ಸಾಧ್ಯವಾಗದಿದ್ದರೆ ಕೆಇಎಗೆ ಡಿ.ಡಿ ಸಲ್ಲಿಸಿ, ಪ್ರವೇಶ…

Read More