Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇನ್ಮುಂದೆ ಸಾರ್ವಜನಿಕರನ್ನು ಭೇಟಿ ಮಾಡಲು, ಅವರ ಕುಂದುಕೊರತೆಯನ್ನು ನಿವಾರಿಸುವುದು ಕಡ್ಡಾಯವಾಗಿದೆ. ಈ ಸಮಯಲ್ಲಿ ಯಾವುದೇ ಸಭೆಗಳನ್ನು ನಡೆಸದಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಖಡಕ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವಂತ ಅವರು,ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿರುವುದರಿಂದ ಹಿರಿಯ ಅಧಿಕಾರಿಗಳು ಎಲ್ಲಾ ಹಂತಗಳಲ್ಲಿ ಅರ್ಜಿದಾರರಿಗೆ ನಿಯಮಿತವಾಗಿ ಆಲಿಸಿದರ ಮಾತ್ರ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುವುದು ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು / ಪ್ರಧಾನ ಕಾರ್ಯದರ್ಶಿಗಳು / ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಘಂಟೆಯಿಂದ 5.30 ಘಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಆದಾಗ್ಯೂ, ಈ ಸಮಯದಲ್ಲಿ ಸಾರ್ವಜನಿಕರಿಗೆ ಸಮಯಾವಕಾಶ ಕಲ್ಪಿಸದ ಇಲಾಖೆಗಳ ಸಭೆಗಳನ್ನು/ಕಛೇರಿಯ ಹೊರಗೆ ಹೋಗುವ ಪ್ರಕರಣಗಳನ್ನು ಗಮನಿಸಲಾಗಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ, ಇನ್ನು ಮುಂದ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು…
ಶಿವಮೊಗ್ಗ: ಮೀಸಲಾತಿ ವಿವಾದದಿಂದ ನಡಯಬೇಕಿದ್ದ ಸಾಗರ ನಗರಸಭೆಯ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಚುನಾವಣೆ ನೆನೆಗುದಿಗೆ ಬಿದ್ದಿತ್ತು. ಹಾಲಿ ವಿದಾದಕ್ಕೆ ತೆರೆ ಬಿದ್ದು ಫೆಬ್ರವರಿ 25ರಂದು ಅದಿಕೃತ ಚುನಾವಣೆ ಘೋಷಣೆಯಾಗಿದೆ. ಈ ಚುನಾವಣೆಯಲ್ಲಿ ಅಧಿಕಾರ ಗದ್ದುಗೆಗೆ ಏರಲು ಕಾಂಗ್ರೆಸ್ ಪಕ್ಷದಿಂದ ಆಪರೇಷನ್ ಹಸ್ತ ಆರಂಭಿಸಲು ತೆರೆ ಮರೆಯಲ್ಲಿ ಕಸರತ್ತು ಶುರುವಾಗಿ ಎನ್ನಲಾಗುತ್ತಿದೆ. ಸಾಗರ ನಗರಸಭೆಯಲ್ಲಿ ಹಾಲಿ ಬಿಜೆಪಿ 16 ಸದಸ್ಯರ ಮೂಲಕ ಬಹುಮತ ಹೊಂದಿದೆ. ಕಾಂಗ್ರೆಸ್ 10 ಸದಸ್ಯರನ್ನು ಹೊಂದಿದ್ದರೆ ಪಕ್ಷೇತರರು 5 ಜನರಿದ್ದಾರೆ. ಕಾಂಗ್ರೇಸ್, ಪಕ್ಷೇತರರು ಒಟ್ಟಾಗಿ ಶಾಸಕ ಜಿಕೆಬಿ ಮತ ಚಲಾವಣೆ ಮಾಡಿದರೂ ಸದಸ್ಯರ ಸಂಖ್ಯೆ 15 ಆಗುತ್ತದೆ. ಸಂಸದ ಬಿ.ವೈ.ವಿಜಯೇಂದ್ರ ಬಿಡುವು ಮಾಡಿಕೊಂಡು ಬಂದು ಮತ ಚಲಾವಣೆ ಮಾಡಿದರೆ ಬಿಜೆಪಿಯ ಸಂಖ್ಯೆ 17 ಆಗುತ್ತದೆ. ಯಾವುದೇ ರೀತಿಯಲ್ಲಿ ಲೆಕ್ಕ ಹಾಕಿದರೂ ಬಿಜೆಪಿ ಕೈಯಲ್ಲಿ ಅಧಿಕಾರ ಉಳಿಯುತ್ತದೆ ಎನ್ನುವುದು ಸಾಮಾನ್ಯ ಲೆಕ್ಕಾಚಾರ. ಆದರೆ ಹಾಲಿ ನಗರಸಭೆ ಆವರಣದಲ್ಲಿ ನಡೆಯುತ್ತಿರುವ ಚರ್ಚೆ ನೋಡಿದರೆ ಶಾಸಕ ಗೋಪಾಲಕೃಷ್ಣ ಬೇಳೂರು ನೇತ್ರತ್ವದಲ್ಲಿ ಆಪರೇಸಷನ್ ಹಸ್ತದ ಚಟುವಟಿಕೆ…
ಬೆಂಗಳೂರು: ಸಾರ್ವಜನಿಕರಿಗೆ ಭೇಟಿಗೆ ಅವಕಾಶ ಇರುವ ಅವಧಿಯಲ್ಲಿ ಸರ್ಕಾರಿ ಅಧಿಕಾರಿಗಳು ಯಾವುದೇ ಸಭೆ ನಡೆಸದೆ ಕುಂದುಕೊರತೆಗಳನ್ನು ನಿವಾರಿಸಬೇಕು ಎಂದು ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಸುತ್ತೋಲೆ ಹೊರಡಿಸಿರುವ ಅವರು, ಜನಸ್ಪಂದನ ಕಾರ್ಯಕ್ರಮದಲ್ಲಿ ಅಪಾರ ಸಂಖ್ಯೆಯಲ್ಲಿ ನಾಗರೀಕರು ಅವರ ಅಹವಾಲುಗಳೊಂದಿಗೆ ಬರುತ್ತಿದ್ದಾರೆ. ಇದನ್ನು ಗಮನಿಸಿದರೆ ಹಿರಿಯ ಅಧಿಕಾರಿಗಳು ಸಾರ್ವಜನಿಕರಿಗೆ ಲಭ್ಯವಾಗುತ್ತಿಲ್ಲ ಎಂಬುದು ಗೊತ್ತಾಗುತ್ತದೆ. ಇದನ್ನು ಕಡಿಮೆ ಮಾಡಲು ಅಧಿಕಾರಿಗಳು ಎಲ್ಲ ಹಂತಗಳಲ್ಲಿ ಅರ್ಜಿದಾರರ ದೂರುಗಳನ್ನು ನಿಯಮಿತವಾಗಿ ಆಲಿಸಿದರೆ ಕುಂದುಕೊರತೆಗಳನ್ನು ಗಣನೀಯವಾಗಿ ಕಡಿಮೆ ಮಾಡಲು ಸಾಧ್ಯವಾಗುತ್ತದೆ ಎಂದಿದ್ದಾರೆ. ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು, ಕಾರ್ಯದರ್ಶಿಗಳು ಹಾಗೂ ಇತರ ಕ್ಷೇತ್ರ ಅಧಿಕಾರಿಗಳು ಮಧ್ಯಾಹ್ನ 3.30 ಗಂಟೆಯಿಂದ 5.30 ಗಂಟೆಯವರೆಗೆ ಸಾರ್ವಜನಿಕರು ಹಾಗೂ ಜನಪ್ರತಿನಿಧಿಗಳನ್ನು ಭೇಟಿ ಮಾಡಲು ಸಮಯವನ್ನು ಕಲ್ಪಿಸುವ ಬಗ್ಗೆ ನಿರ್ದೇಶನ ನೀಡಲಾಗಿದೆ. ಈ ಹಿನ್ನೆಲೆಯಲ್ಲಿ, ಇನ್ನು ಮುಂದೆ ಎಲ್ಲಾ ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿಗಳು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಕಾರ್ಯದರ್ಶಿಗಳು ಮತ್ತು ಇತರ ಅಧಿಕಾರಿಗಳು…
ಚಿತ್ರದುರ್ಗ: ಹೊಸದುರ್ಗದಲ್ಲಿ ಕಾಡುಗೊಲ್ಲ ಜನಪದ ಸೊಗಡು ವತಿಯಿಂದ ನಮ್ಮ ನಡಿಗೆ ಗೊಲ್ಲರಹಟ್ಟಿ ಜನಪದ ಕಲೆ ಕಡೆಗೆ ಕಾರ್ಯಕ್ರಮ ಯಶಸ್ವಿಯಾಗಿ ನಡೆಯಿತು. ನಮ್ಮ ಕಾಡುಗೊಲ್ಲ ಜಾನಪದ ಅತ್ಯಂತ ಶ್ರೀಮಂತವಾದದ್ದು. ಕೋಲಾಟದ ಪದಗಳು,ಸೋಬಾನೆ ಪದಗಳು, ಗಗ್ರಿ ಪದಗಳು, ದೇವರ ಉತ್ಸವಗಳು,ಬುಡಕಟ್ಟು ವೀರರ ಕತೆಗಳು,ಗಣೆ ಪದ, ಮುಂತಾದ ವಿವಿಧ ಪ್ರಕಾರದ ಜಾನಪದ ಸಾಂಸ್ಕೃತಿಯನ್ನು ನಮ್ಮ ಸಮುದಾಯದಲ್ಲಿ ಕಾಣಬಹುದು. ಕಾಡುಗೊಲ್ಲರ ಸಂಸ್ಕೃತಿಯು ಒಂದು ಭಾಗವಾದ ಜಾನಪದ ಅತ್ಯಂತ ವೈವಿಧ್ಯಮಯವಾಗಿದೆ ಹುಟ್ಟಿನಿಂದ ಹಿಡಿದು ಸಾಯುವ ತನಕ ಅನೇಕ ಪದಗಳನ್ನು ನಮ್ಮ ಜನಪದದಲ್ಲಿ ಕಾಣಬಹುದು ಇವು ಹಳ್ಳಿಯು ಸಾಮಾನ್ಯ ಜನರ ನಡುವೆ ಹುಟ್ಟಿ ಬಾಯಿಂದ ಬಾಯಿಗೆ ಹರಿದು ಬಂದಿರುವ ಸಿರಿನುಡಿ ಎನ್ನಬಹುದು. ನಮ್ಮ ಕಾಡುಗೊಲ್ಲರ ಜನಪದವನ್ನು ಉಳಿಸುವ ನಿಟ್ಟಿನಲ್ಲಿ ಮತ್ತು ಮುಂದಿನ ಪೀಳಿಗೆಗೆ ಪರಿಚಯಿಸುವ ನಿಟ್ಟಿನಲ್ಲ ಗೊಲ್ಲರಹಟ್ಟಿಗಳ ಜನಪದವನ್ನು ರಾಜ್ಯದ ದೇಶದ ಮೂಲೆ ಮೂಲೆಗೂ ತಲುಪಿಸುವ ನಿಟ್ಟಿನಲ್ಲಿ ಕಾಡುಗೊಲ್ಲರ ಜನಪದ ಸೊಗಡು ವತಿಯಿಂದ “ನಮ್ಮ ನಡಿಗೆ ಗೊಲ್ಲರಹಟ್ಟಿಯ ಜನಪದ ಕಲೆ ಕಡೆಗೆ” ಎಂಬುವ ಕಾರ್ಯಕ್ರಮದ ಅಡಿಯಲ್ಲಿ ಎಲ್ಲಾ ಜನಪದ ಕಲಾವಿದರನ್ನು…
ಬೆಂಗಳೂರು: ನಮ್ಮ ಮೆಟ್ರೋ ದರವನ್ನು ಶೇ.47ರಷ್ಟು ಹೆಚ್ಚಳ ಮಾಡಿ ಪ್ರಯಾಣಿಕರಿಗೆ ಬಿಗ್ ಶಾಕ್ ನೀಡಲಾಗಿತ್ತು. ಈ ಬೆನ್ನಲ್ಲೇ ಅಷ್ಟೇ ಸಲೀಸಾಗಿ ಪ್ರಯಾಣಿಕರು ಬಿಎಂಆರ್ ಸಿಎಲ್ ಗೆ ಶಾಕ್ ಎನ್ನುವಂತೆ ಬರೋಬ್ಬರಿ 6 ಲಕ್ಷ ಪ್ರಯಾಣಿಕರು ಮೆಟ್ರೋ ಪ್ರಯಾಣವನ್ನೇ ತ್ಯಜಿಸಿದ್ದಾರೆ. ಫೆಬ್ರವರಿ 9ರಿಂದ ಜಾರಿಗೆ ಬರುವಂತೆ ಬಿಎಂಆರ್ ಸಿಎಲ್ ನಮ್ಮ ಮೆಟ್ರೋ ಪ್ರಯಾಣದರವನ್ನು ಏರಿಕೆ ಮಾಡಲಾಗಿತ್ತು. ದುಪ್ಪಟ್ಟು ಪ್ರಯಾಣ ದರ ಹೆಚ್ಚಳದ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರಹಾಕಿದ್ದರು. ಅಲ್ಲದೇ ಮೆಟ್ರೋ ಪ್ರಯಾಣವನ್ನು ಬಾಯ್ ಕಾಟ್ ಮಾಡುವುದಾಗಿ ಘೋಷಿಸಿದ್ದರು. ಈ ಬೆನ್ನಲ್ಲೇ ಕೆಲ ಸ್ಟೇಜ್ ಗಳಲ್ಲಿ ವ್ಯತ್ಯಾಸವಾಗಿದ್ದಂತ ದರವನ್ನು ಬಿಎಂಆರ್ ಸಿಎಲ್ ಸರಿ ಪಡಿಸಿತ್ತು. ಆದರೂ ಶೇ.47ರಷ್ಟು ಪ್ರಯಾಣ ದರ ಹೆಚ್ಚಳ ಹಾಗೆಯೇ ಮುಂದುವರಿದಿತ್ತು. ಈ ಹಿನ್ನಲೆಯಲ್ಲಿ ಸುಮಾರು 6.26 ಲಕ್ಷ ಪ್ರಯಾಣಿಕರು ಮೆಟ್ರೋವನ್ನು ತ್ಯಜಿಸಿದ್ದಾರೆ. ಆ ನಂತ್ರ ಪರ್ಯಾಯ ಸಾರಿಗೆಗಳತ್ತ ಮುಖ ಮಾಡಿರುವುದಾಗಿ ತಿಳಿದು ಬಂದಿದೆ. https://kannadanewsnow.com/kannada/class-10-student-dies-of-heart-attack/ https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/
ತುಮಕೂರು: ರಾಜ್ಯದಲ್ಲಿ ಮಕ್ಕಳ ಹಠಾತ್ ಸಾವು ಪ್ರಕರಣಗಳು ಮುಂದುವರೆದಿವೆ. ತುಮಕೂರಲ್ಲಿ ಹೃದಯಾಘಾತದಿಂದ 10ನೇ ತರಗತಿ ವಿದ್ಯಾರ್ಥಿ ದಿಢೀರ್ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ನಡೆದಿದೆ. ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲ್ಲೂಕಿನ ಭೈರಾಪುರದಲ್ಲಿ ಈ ಘಟನೆ ನಡೆದಿದೆ. ನಿನ್ನೆ ರಾತ್ರಿ 9.30ಕ್ಕೆ 16 ವರ್ಷದ ಎಸ್ ಎಸ್ ಎಲ್ ಸಿ ಓದುತ್ತಿದ್ದಂತ ವಿದ್ಯಾರ್ಥಿ ರಾಹುಲ್ ಕುಸಿದು ಬಿದ್ದಿದ್ದಾನೆ. ಆತನನ್ನು ಹುಳಿಯಾರಿನ ಆಸ್ಪತ್ರೆಗೆ ಕರೆದೊಯ್ದು ಚಿಕಿತ್ಸೆ ಕೊಡಿಸಲಾಗಿದೆ. ಆದರೇ ಹೃದಯಾಘಾತಕ್ಕೆ ಒಳಗಾಗಿದ್ದಂತ ರಾಹುಲ್ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ವೈದ್ಯರು ತಿಳಿಸಿದ್ದಾರೆ. ಮೃತ ರಾಹುಲ್ ಭೈರಾಪುರ ಗ್ರಾಮದ ಜಯರಾಂ ಎಂಬುವರ ಪುತ್ರನಾಗಿದ್ದಾನೆ. https://kannadanewsnow.com/kannada/what-are-the-benefits-of-ayushman-card-who-is-eligible-how-to-get-it-heres-the-information/ https://kannadanewsnow.com/kannada/bommai-ji-what-have-you-cut-down-as-cm-minister-dinesh-gundu-rao/
ನವದೆಹಲಿ: ಬಡತನ ರೇಖೆಗಿಂತ ಕೆಳಗಿರುವಂತ ಜನರ ಅನಾರೋಗ್ಯದ ಸಂದರ್ಭದಲ್ಲಿ ಚಿಕಿತ್ಸೆಗಾಗಿ ನೀಡಲಾಗುತ್ತಿರುವಂತ ಸರ್ಕಾರದ ಹೆಲ್ತ್ ಕಾರ್ಡ್ ನಲ್ಲಿ ಆಯುಷ್ಮಾನ್ ಕಾರ್ಡ್ ಕೂಡ ಒಂದಾಗಿದೆ. ಈ ಕಾರ್ಡ್ ಪ್ರಯೋಜನವೇನು? ಯಾರು ಅರ್ಹರು? ಹೇಗೆ ಪಡೆಯೋದು ಎನ್ನುವ ಬಗ್ಗೆ ಮುಂದೆ ಓದಿ. ಭಾರತದ ಆರೋಗ್ಯ ಕ್ಷೇತ್ರವು ಚಿಕಿತ್ಸೆಗೆ ಯಾವುದೇ ಉಪಕರಣಗಳಿಲ್ಲದಿರುವಿಕೆಯಿಂದ ಹಿಡಿದು ನಮ್ಮ ಹೈಟೆಕ್ ಉಪಕರಣಗಳು ಮತ್ತು ಔಷಧಿಗಳನ್ನು ಅಭಿವೃದ್ಧಿಪಡಿಸುವವರೆಗೆ ಬಹಳ ದೂರಸಾಗಿದೆ. ಆದರೆ ಅಂತಹ ಅಭಿವೃದ್ಧಿಯೊಂದಿಗೆ, ಚಿಕಿತ್ಸಾ ವಿಧಾನಗಳ ವೆಚ್ಚವೂ ಬೆಳೆಯುತ್ತಿದೆ. ಸಮಾಜದ ಆರ್ಥಿಕವಾಗಿ ದುರ್ಬಲ ವರ್ಗದ ಜನರು ಅಗತ್ಯವಿದ್ದಾಗ ವೈದ್ಯಕೀಯ ಚಿಕಿತ್ಸೆ ಪಡೆಯಲು ಸಾಧ್ಯವಾಗದಿರುವುದಕ್ಕೆ ಇದು ಒಂದು ಪ್ರಮುಖ ಕಾರಣವಾಗಿದೆ. ಅವರಿಗೆ ಅಗತ್ಯವಾದ ಚಿಕಿತ್ಸೆಯನ್ನು ಒದಗಿಸಲು ಸರ್ಕಾರಿ ಆಸ್ಪತ್ರೆಗಳು ಅಸ್ತಿತ್ವದಲ್ಲಿವೆ. ಆದರೆ ಅಸಮರ್ಪಕ ಸಿಬ್ಬಂದಿ, ಉಪಕರಣಗಳು ಮತ್ತು ಔಷಧಿಗಳಂತಹ ಕಾರ್ಯಾಚರಣೆಯ ಅಸಮರ್ಪಕ ಕಾರ್ಯಗಳು ಜನರ ಜೀವನವನ್ನು ನೇತಾಡುವಂತೆ ಮಾಡುತ್ತವೆ. ಅಂತಹ ಎಲ್ಲಾ ಸಮಸ್ಯೆಗಳನ್ನು ಪರಿಹರಿಸಲು ಮತ್ತು ಪ್ರತಿಯೊಬ್ಬರೂ ಅಗತ್ಯವಿದ್ದಾಗ ಚಿಕಿತ್ಸೆ ಪಡೆಯುವುದನ್ನು ಖಚಿತಪಡಿಸಿಕೊಳ್ಳಲು, ಭಾರತ ಸರ್ಕಾರವು ಪ್ರಧಾನ ಮಂತ್ರಿ ಜನ ಆರೋಗ್ಯ…
5 ಲಕ್ಷ ರೂ.ವರೆಗೆ ಉಚಿತ ಚಿಕಿತ್ಸೆ: `ಆಯುಷ್ಮಾನ್ ಕಾರ್ಡ್’ಗೆ ಅರ್ಜಿ ಸಲ್ಲಿಕೆ ಹೇಗೆ? ದಾಖಲೆಗಳೇನು? ಇಲ್ಲಿದೆ ಡೀಟೆಲ್ಸ್
ಕೇಂದ್ರ ಸರ್ಕಾರವು 70 ವರ್ಷ ಮೇಲ್ಪಟ್ಟ ಹಿರಿಯ ನಾಗರಿಕರಿಗೆ ಸಿಹಿಸುದ್ದಿ ನೀಡಿದ್ದು, ಇತ್ತೀಚೆಗೆ ಆಯುಷ್ಮಾನ್ ಭಾರತ್ ಯೋಜನೆಯನ್ನು ಪರಿಷ್ಕರಿಸಿ 70 ವರ್ಷ ಮೇಲ್ಪಟ್ಟ ಹಿರಿಯರಿಗೆ 5 ಲಕ್ಷ ರೂ.ವರೆಗೆ ಪ್ರತ್ಯೇಕ ವಿಮಾ ಸೌಲಭ್ಯವನ್ನು ಜಾರಿಗೆ ತಂದಿದ್ದು, ಅರ್ಹರನ್ನು ಈ ಯೋಜನೆಗೆ ನೋಂದಣಿ ಮಾಡಿಕೊಳ್ಳಿ ಎಂದು ರಾಜ್ಯಗಳಿಗೆ ಸೂಚನೆ ನೀಡಿದೆ. ಆಯುಷ್ಮಾನ್ ಭಾರತ್ ಯೋಜನೆಯಡಿ 70 ವರ್ಷಕ್ಕಿಂತ ಮೇಲ್ಪಟ್ಟ ವ್ಯಕ್ತಿಗಳು ಈಗ ₹ 5 ಲಕ್ಷದವರೆಗೆ ಉಚಿತ ಚಿಕಿತ್ಸೆಯನ್ನು ಪಡೆಯುತ್ತಾರೆ ಎಂದು ಭಾರತ ಸರ್ಕಾರ ಘೋಷಿಸಿದೆ. ನಿಮ್ಮ ಕುಟುಂಬವು ಯೋಜನೆಗೆ ಅರ್ಹವಾಗಿದೆಯೇ ಅಥವಾ ಇಲ್ಲವೇ ಎಂಬುದರ ಹೊರತಾಗಿಯೂ, ಹಿರಿಯ ನಾಗರಿಕರು ಇದರ ಪ್ರಯೋಜನವನ್ನು ಪಡೆಯುತ್ತಾರೆ. ಆದಾಗ್ಯೂ, ಈ ಪ್ರಯೋಜನಗಳನ್ನು ಪಡೆಯಲು ಯೋಜನೆಯಲ್ಲಿ ನೋಂದಣಿ ಅಗತ್ಯವಿದೆ. ನೋಂದಣಿ ನಂತರ, ಹಿರಿಯ ನಾಗರಿಕರಿಗೆ ಹೊಸ ಕಾರ್ಡ್ ನೀಡಲಾಗುತ್ತದೆ. ಈ ಯೋಜನೆಯು ಬಡವರು ಮತ್ತು ಶ್ರೀಮಂತರು ಇಬ್ಬರಿಗೂ ಲಭ್ಯವಿದೆ. ಆಯುಷ್ಮಾನ್ ಭಾರತ್ ಯೋಜನೆಗೆ ಹೇಗೆ ನೋಂದಾಯಿಸಿಕೊಳ್ಳುವುದು ಮತ್ತು ಆಯುಷ್ಮಾನ್ ಭಾರತ್ ಕಾರ್ಡ್ ಪಡೆಯಲು ಅಗತ್ಯವಾದ ದಾಖಲೆಗಳ ಕುರಿತು…
ಬೆಂಗಳೂರು: ನಗರದಲ್ಲಿ ಮತ್ತೊಂದು ಪೈಶಾಚಿಕ ಕೃತ್ಯವೆಸಗಲಾಗಿದೆ. ಸ್ನೇಹಿತನಿಂದಲೇ ಗೆಳತಿಯ ಮೇಲೆ ಅತ್ಯಾಚಾರ ನಡೆಸಿದಂತ ಆರೋಪ ಕೇಳಿ ಬಂದಿದೆ. ಬೆಂಗಳೂರಿನ ಮೈಕೋ ಲೇಔಟ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಪ್ರತಿಷ್ಠಿತ ಖಾಸಗಿ ಕಾಲೇಜು ವಿದ್ಯಾರ್ಥಿನಿ ಮೇಲೆ ಸ್ನೇಹಿತನೇ ಅತ್ಯಾಚಾರ ಎಸಗಿದ ಆರೋಪದಡಿ ಕೇಸ್ ದಾಖಲಾಗಿದೆ. ವಿದ್ಯಾರ್ಥಿನಿ ನೀಡಿದಂತ ದೂರಿನ ಹಿನ್ನಲೆಯಲ್ಲಿ ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಈ ದೂರಿನ ಬಳಿಕ ಅತ್ಯಾಚಾರ ಎಸಗಿದಂತ ಆರೋಪಿಯನ್ನು ವಶಕ್ಕೆ ಪಡೆದು, ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ. https://kannadanewsnow.com/kannada/pocso-case-registered-against-conductor-for-assaulting-conductor-for-speaking-kannada/ https://kannadanewsnow.com/kannada/bommai-ji-what-have-you-cut-down-as-cm-minister-dinesh-gundu-rao/
ಬೆಳಗಾವಿ: ಮರಾಠಿಯಲ್ಲಿ ಟಿಕೆಟ್ ಕೇಳ್ತೀಯಲ್ಲ ಕನ್ನಡ ಬರೋದಿಲ್ವ? ಕನ್ನಡ ಮಾತನಾಡು ಎಂದ ಕೆ ಎಸ್ ಆರ್ ಟಿಸಿ ಕಂಡಕ್ಟರ್ ಮೇಲೆ ಹಲ್ಲೆ ಪ್ರಕರಣದಕ್ಕೆ ಈಗ ಬಿಗ್ ಟ್ವಿಸ್ಟ್ ಸಿಕ್ಕಿದೆ. ಯುವತಿಯಿಂದ ನಿರ್ವಾಹಕನ ವಿರುದ್ಧ ಪೋಕ್ಸೋ ಕೇಸ್ ದಾಖಲಿಸಲಾಗಿದೆ. ಕೆ ಎಸ್ ಆರ್ ಟಿ ಸಿ ಬಸ್ಸಿನಲ್ಲಿ ಟಿಕೆಟ್ ನೀಡುವಂತೆ ಮರಾಠಿಯಲ್ಲೇ ಕೇಳಿದಂತ ಯುವತಿಗೆ ಕನ್ನಡ ಬರೋದಿಲ್ವ ಕನ್ನಡದಲ್ಲೇ ಕೇಳಿ ಎಂಬುದಾಗಿ ಕಂಡಕ್ಟರ್ ತಿಳಿಸಿದ್ದರು. ಇಷ್ಟಕ್ಕೇ ಮರಾಠಿ ಯುವಕರು ಬಸ್ ನಿಲ್ಲಿಸಿ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದರು. ಈ ಸಂಬಂಧ ಮೂವರನ್ನು ಪೊಲೀಸರು ಬಂಧಿಸಿದ್ದರು. ಬೆಳಗಾವಿಯ ಸುಳೇಬಾವಿ ಹಾಗೂ ಬಾಳೆಕುಂದ್ರಿ ಮಾಗ್ರ ಮಧ್ಯದಲ್ಲಿ ಕನ್ನಡ ಮಾತನಾಡಿ ಎಂದಿದ್ದಕ್ಕೆ ಮರಾಠಿ ಯುವಕರು ಕೆ ಎಸ್ ಆರ್ ಟಿ ಸಿ ಬಸ್ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ್ದರು. ಹಲ್ಲೆಗೊಳಗಾಗಿದ್ದಂತ ಕಂಡಕ್ಟರ್ ಮಹದೇವ ಹುಕ್ಕೇರಿ ಅವರನ್ನು ಬಿಮ್ಸ್ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿತ್ತು. ಈ ಪ್ರಕರಣ ಸಂಬಂಧ ನಿರ್ವಾಹಕ ನೀಡಿದಂತ ದೂರಿನ ಹಿನ್ನಲೆಯಲ್ಲಿ ಬೆಳಗಾವಿಯ ಮಾರಿಹಾಳ ಠಾಣೆಯ…