Author: kannadanewsnow09

ಬೆಂಗಳೂರು: ರಾಜ್ಯದ ಗ್ರಾಮೀಣ ಭಾಗದ ವಿದ್ಯಾರ್ಥಿಗಳಿಗೆ ಉನ್ನತ ಗುಣಮಟ್ಟದ ಶಿಕ್ಷಣ ನೀಡುವ ಉದ್ದೇಶದಿಂದ ರೂಪಿಸಲಾಗಿರುವ ಸಿಎಸ್ ಆರ್ ಅನುದಾನದಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳ ನಿರ್ಮಾಣ ಯೋಜನೆಗೆ ನೋಡಲ್ ಅಧಿಕಾರಿಗಳನ್ನು ಸರಕಾರ ನೇಮಿಸಿದೆ. ಈ ಯೋಜನೆಯನ್ನು ಯಶಸ್ವಿಯಾಗಿ ಕಾರ್ಯರೂಪಕ್ಕೆ ತರಲು ವಿವಿಧ ಸಂಸ್ಥೆಗಳ ಸಿಎಸ್ ಆರ್ ಹಣ ಕ್ರೂಢೀಕರಿಸಲು ಕೈಗಾರಿಕೆ ಅಭಿವೃದ್ಧಿ ಆಯುಕ್ತರಾದ ಶ್ರೀಮತಿ ಗುಂಜನ್ ಕೃಷ್ಣ ಅವರನ್ನು ಸಮನ್ವಯ ಅಧಿಕಾರಿಯನ್ನಾಗಿ ಹಾಗೂ ಕರ್ನಾಟಕ ರಾಜ್ಯ ಕೈಗಾರಿಕಾ ಮೂಲಸೌಕರ್ಯ ಅಭಿವೃದ್ಧಿ ನಿಗಮದ ವ್ಯವಸ್ಥಾಪಕ ನಿರ್ದೇಶಕರಾದ ಶ್ರೀಮತಿ ಖುಷ್ಬೂ ಜಿ. ಚೌಧರಿ ಅವರನ್ನು ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರದೇಶಗಳಲ್ಲಿ ಸರ್ಕಾರ ಸೂಚಿಸಿದ ಕಡೆಗಳಲ್ಲಿ ಕೆಪಿಎಸ್ ಶಾಲೆಗಳ ಕಟ್ಟಡ ಹಾಗೂ ಮೂಲಸೌಕರ್ಯಗಳನ್ನು ಖಾಸಗಿ ಸಂಸ್ಥೆಗಳು ತಮ್ಮ ಸಿಎಸ್ ಆರ್ ಹಣದಲ್ಲಿ ನಿರ್ಮಿಸಿ ಕೊಡಬೇಕಾಗಿದೆ. ರಾಜ್ಯ ಶಿಕ್ಷಣ ಕ್ಷೇತ್ರದಲ್ಲಿ ಕ್ರಾಂತಿಕಾರಕ ಬದಲಾವಣೆ ತರಲು ಡಿಸಿಎಂ ಡಿ.ಕೆ. ಶಿವಕುಮಾರ್ ಅವರ ಈ ಕನಸಿನ ಯೋಜನೆ ನಿರೀಕ್ಷಿತ ಮಟ್ಟದಲ್ಲಿ ಜಾರಿಯಾಗದ ಹಿನ್ನೆಲೆಯಲ್ಲಿ ಈ ಯೋಜನೆಯನ್ನು ತ್ವರಿತವಾಗಿ…

Read More

ಬೆಂಗಳೂರು: ಬೆಂಗಳೂರಿನ ಚೆನ್ನೈಸ್ ಅಮಿರ್ತಾ ಇಂಟರ್‌ನ್ಯಾಷನಲ್ ಇನ್‌ಸ್ಟಿಟ್ಯೂಟ್ ಆಫ್ ಹಾಸ್ಪಿಟಾಲಿಟಿ ಮ್ಯಾನೇಜ್‌ಮೆಂಟ್ (IIHM) ತನ್ನ 15 ವರ್ಷಗಳ ಆತಿಥ್ಯ ಶಿಕ್ಷಣದ ಶ್ರೇಷ್ಠತೆಯನ್ನು ಆಚರಿಸಲು ‘ಕಲಾಕೃತಿ 4.0’ ಎಂಬ ಭವ್ಯ ಕಾರ್ಯಕ್ರಮ ಆಯೋಜಿಸಿತ್ತು. ಖ್ಯಾತ ನಟ ವಸಿಷ್ಠ ನಿರಂಜನ್ ಸಿಂಹ ಅವರು ಈ ಕಾರ್ಯಕ್ರಮದ ಆಕರ್ಷಣೆಯಾಗಿದ್ದರೆ, ಸಂಸ್ಥೆಯ ಅಧ್ಯಕ್ಷ ಬೂಮೀ ನಾಥನ್ ಅವರ ನೇತೃತ್ವದಲ್ಲಿ ಚೆನ್ನೈಸ್ ಅಮಿರ್ತಾದ ಶ್ರೇಷ್ಠತೆಯ ಪಯಣವನ್ನು ಸಂಸ್ಕೃತಿ ಮತ್ತು ಪ್ರತಿಭೆಯ ಮೂಲಕ ಅನಾವರಣಗೊಳಿಸಲಾಯಿತು. ಈ ಕಾರ್ಯಕ್ರಮವನ್ನು ಮುಖ್ಯ ಅತಿಥಿ ನಟ ವಶಿಷ್ಠ ಸಿಂಹ ಅವರು ಸಂಸ್ಥೆಯ ಗಣ್ಯರೊಂದಿಗೆ ಸಾಂಪ್ರದಾಯಿಕ ದೀಪ ಬೆಳಗಿಸುವುದರೊಂದಿಗೆ ಉದ್ಘಾಟಿಸಿದರು. ಭಾರತೀಯ ಶಾಸ್ತ್ರೀಯ ನೃತ್ಯದಿಂದ ಹಿಡಿದು ಸಮಕಾಲೀನ ಮತ್ತು ಪಾಶ್ಚಿಮಾತ್ಯ ಶೈಲಿಗಳವರೆಗಿನ ಮನಮೋಹಕ ಪ್ರದರ್ಶನಗಳು ನಡೆದವು. ಈ ಸಾಂಸ್ಕೃತಿಕ ಪ್ರದರ್ಶನಗಳು ವಿದ್ಯಾರ್ಥಿಗಳ ಬಹುಮುಖ ಪ್ರತಿಭೆಯನ್ನು ಎತ್ತಿ ತೋರಿಸಿತು. ಸಂಸ್ಥೆಯ 100ಕ್ಕೂ ಹೆಚ್ಚು ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯ ಸಾಧನೆಗಳನ್ನು ಗೌರವಿಸುವ ಭವ್ಯ ಸನ್ಮಾನ ಸಮಾರಂಭ ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿತ್ತು. ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ವೇದಿಕೆಗಳಲ್ಲಿ ಅವರ ಶ್ರೇಷ್ಠ…

Read More

ನವದೆಹಲಿ: ಭಾರತದಲ್ಲಿ ವಿವಾಹಿತ ಮಹಿಳೆಯರು 500 ಗ್ರಾಂ ವರೆಗೆ ಚಿನ್ನ, ಅವಿವಾಹಿತ ಮಹಿಳೆಯರು 250 ಗ್ರಾಂ ವರೆಗೆ ಮತ್ತು ಪುರುಷರು 100 ಗ್ರಾಂ ವರೆಗೆ ಚಿನ್ನವನ್ನು ಇಟ್ಟುಕೊಳ್ಳಬಹುದು. ಈ ಮಿತಿಯನ್ನು ಮೀರಿದರೆ, ಆದಾಯ ತೆರಿಗೆ ಪುರಾವೆಯನ್ನು ಒದಗಿಸಬೇಕು. ಸಂತೋಷದ ಸಂದರ್ಭಗಳಲ್ಲಿ ಉಡುಗೊರೆಗಳನ್ನು ಉಡುಗೊರೆಯಾಗಿ ನೀಡುವುದು ಮತ್ತು ಸ್ವೀಕರಿಸುವುದು ಅಪಾರ ಸಂತೋಷವನ್ನು ತರುತ್ತದೆ. ವಿಶೇಷವಾಗಿ ಚಿನ್ನದ ಆಭರಣಗಳ ವಿಷಯಕ್ಕೆ ಬಂದಾಗ, ನೀಡುವವರಿಗೆ ಮತ್ತು ಸ್ವೀಕರಿಸುವವರಿಗೆ ಸಂತೋಷವು ದ್ವಿಗುಣಗೊಳ್ಳುತ್ತದೆ. ಭಾರತದಲ್ಲಿ, ಚಿನ್ನವನ್ನು ಖರೀದಿಸುವುದು ಭಾವನಾತ್ಮಕ ವಿಷಯವಾಗಿದೆ. ಮದುವೆಗಳು, ಹಬ್ಬಗಳು ಮತ್ತು ಹೊಸ ವರ್ಷದಂತಹ ವಿವಿಧ ಶುಭ ದಿನಗಳಲ್ಲಿ ಚಿನ್ನದ ಮಾರಾಟದ ಉತ್ತುಂಗ. ಮದುವೆಗಳು ಮತ್ತು ಹೆರಿಗೆ ಸೇರಿದಂತೆ ಎಲ್ಲಾ ರೀತಿಯ ಆಚರಣೆಗಳಿಗೆ ಚಿನ್ನದ ಆಭರಣಗಳು ವಾಡಿಕೆಯಾಗಿದೆ. ಚಿನ್ನ ಮತ್ತು ಚಿನ್ನದ ಆಭರಣಗಳನ್ನು ವಿಶ್ವಾಸಾರ್ಹ ಮತ್ತು ಸುರಕ್ಷಿತ ಹೂಡಿಕೆ ಎಂದು ಪರಿಗಣಿಸಲಾಗುತ್ತದೆ. ಹಬ್ಬಗಳ ಸಮಯದಲ್ಲಿ ಚಿನ್ನವನ್ನು ಖರೀದಿಸುವುದನ್ನು ಶುಭವೆಂದು ಪರಿಗಣಿಸಲಾಗುತ್ತದೆ. ಸುರಕ್ಷತೆಗಾಗಿ, ಚಿನ್ನದ ಆಭರಣಗಳನ್ನು ಸಾಮಾನ್ಯವಾಗಿ ಬ್ಯಾಂಕ್ ಲಾಕರ್‌ಗಳಲ್ಲಿ ಇಡಲಾಗುತ್ತದೆ, ನಿರ್ದಿಷ್ಟ ಮೊತ್ತವನ್ನು ಮನೆಯಲ್ಲಿ ಇಡಲಾಗುತ್ತದೆ.…

Read More

ಹುಬ್ಬಳ್ಳಿ: ಟಿಕೆಟ್ ಕೌಂಟರ್‌ಗಳಲ್ಲಿನ ಜನದಟ್ಟಣೆ ಕಡಿಮೆ ಮಾಡುವ ಉದ್ದೇಶದಿಂದ ನೈಋತ್ಯ ರೈಲ್ವೆ (SWR) ಹುಬ್ಬಳ್ಳಿ ವಿಭಾಗವು ತನ್ನ ವಿಭಾಗದ ವ್ಯಾಪ್ತಿಯಲ್ಲಿನ ರೈಲು ನಿಲ್ದಾಣಗಳಲ್ಲಿ ಸ್ವಯಂಚಾಲಿತ ಟಿಕೆಟ್ ವಿತರಣಾ ಯಂತ್ರಗಳನ್ನು Automatic Ticket Vending Machine (ATVM) ಅಳವಡಿಸಿದೆ. ಭಾರತೀಯ ರೈಲ್ವೆಯ ಡಿಜಿಟಲ್ ಟಿಕೆಟ್ ವ್ಯವಸ್ಥೆಯ ಪ್ರೋತ್ಸಾಹದ ಭಾಗವಾಗಿ ATVM ಅಳವಡಿಸಲಾಗಿದ್ದು, ಪ್ರಸ್ತುತ ಹುಬ್ಬಳ್ಳಿ ರೈಲು ನಿಲ್ದಾಣದಲ್ಲಿ 8, ಬೆಳಗಾವಿ , ಬಳ್ಳಾರಿಯಲ್ಲಿ ತಲಾ 03, ಬಾಗಲಕೋಟೆ, ವಿಜಯಪುರ, ಗದಗ ಮತ್ತು ಹೊಸಪೇಟೆಯಲ್ಲಿ ತಲಾ 02, ಧಾರವಾಡ, ಕೊಪ್ಪಳ ಮತ್ತು ಘಟಪ್ರಭಾದಲ್ಲಿ ತಲಾ 1 ರಂತೆ ಒಟ್ಟು 25 ATVM ಕಾರ್ಯ ನಿರ್ವಹಿಸುತ್ತಿವೆ. ಪ್ರಯಾಣಿಕರಲ್ಲಿ ಬಹುಪಾಲು ಮಂದಿ ಕಾಯ್ದಿರಿಸಲಾಗದ ಟಿಕೆಟ್‌ಗಳ ಮೇಲೆ ಹೆಚ್ಚು ಅವಲಂಭಿತರಾಗಿದ್ದಾರೆ. ಕೆಲವೊಮ್ಮೆ ಕಾರ್ಮಿಕರು, ವಿದ್ಯಾರ್ಥಿಗಳು ಹಾಗೂ ದೈನಂದಿನ ಪ್ರಯಾಣಿಕರು ಸಾಲಿನಲ್ಲಿ ನಿಲ್ಲದೆ, ಈ ಯಂತ್ರದಿಂದ ಸುಲಭವಾಗಿ ಮತ್ತು ತ್ವರಿತವಾಗಿ ಟಿಕೆಟ್ ಪಡೆಯಲು ಸಹಕಾರಿಯಾಗಿದೆ. ಒಟ್ಟು 31 ATVM ಸಹಾಯಕರನ್ನು (facilitators) ವಿಭಿನ್ನ ನಿಲ್ದಾಣಗಳಲ್ಲಿ ಪ್ರಯಾಣಿಕರಿಗೆ ಯಂತ್ರಗಳನ್ನು ಬಳಸುವಲ್ಲಿ ನೆರವಾಗುವಂತೆ ನೇಮಕ…

Read More

ಬೆಂಗಳೂರು: ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ(RTE) ಅಡಿ ಶಾಲಾ ದಾಖಲಾತಿಗೆ ಅರ್ಜಿ ಸಲ್ಲಿಸಿದ್ದಂತ ಪೋಷಕರಿಗೆ ಶಾಲಾ ಶಿಕ್ಷಣ ಇಲಾಖೆ ಮಹತ್ವದ ಮಾಹಿತಿ ಬಿಡುಗಡೆ ಮಾಡಿದೆ. ಮೊದಲ ಸುತ್ತಿನ ಸೀಟು ಹಂಚಿಕೆ ಮಾಡಿರುವುದಾಗಿ ತಿಳಿಸಿದೆ. ಪ್ರಾಥಮಿಕ ಶಿಕ್ಷಣದ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2025-26ನೇ ಶೈಕ್ಷಣಿಕ ಸಾಲಿನಲ್ಲಿ ಮಕ್ಕಳ ಉಚಿತ ಮತ್ತು ಕಡ್ಡಾಯ ಶಿಕ್ಷಣ ಹಕ್ಕು ಕಾಯಿದೆ- 2009ರ ಸೆಕ್ಷನ್ 12(1)(ಬಿ) ಹಾಗೂ 12(1)(ಸಿ) ಅಡಿಯಲ್ಲಿ ಖಾಸಗಿ ಅನುದಾನಿತ ಹಾಗೂ ಮೊದಲನೇ ಅನುದಾನ ರಹಿತ ಶಾಲೆಗಳಲ್ಲಿ ಉಚಿತ ಪವೇಶಕ್ಕಾಗಿ ಅರ್ಹ 11096 ಸುತ್ತಿನ ಲಾಟರಿಗೆ ಪರಿಗಣಿಸಿದ್ದು ದಿನಾಂಕ:30.05.2025 ರಂದು ಆನ್‌ಲೈನ್ ಮೂಲಕ ಲಾಟರಿ ನಡೆಸಲಾಗಿದೆ ಎಂದಿದ್ದಾರೆ. ಈ ಮೊದಲನೇ ಸುತ್ತಿನ ಲಾಟರಿ ಪುಕ್ರಿಯೆಯಲ್ಲಿ 3769 ಅರ್ಹ ಮಕ್ಕಳನ್ನು ಶಾಲೆಗಳಿಗೆ ಹಂಚಿಕೆ ಮಾಡಲಾಗಿದೆ. ಆಯ್ಕೆಯಾದ ಮಕ್ಕಳ ಪೋಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಎಸ್‌.ಎಂ.ಎಸ್ ಮೂಲಕ ಸೀಟು ಹಂಚಿಕೆ ಮಾಹಿತಿಯನ್ನು ನೀಡಲಾಗಿದೆ ಎಂದು ತಿಳಿಸಿದ್ದಾರೆ. ಈ ಸಂಬಂಧಿಸಿದ ಪೋಷಕರು ದಿನಾಂಕ:31.05.2025…

Read More

ಮಂಡ್ಯ : ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭ ಮಾಡಲು ರೂಪುರೇಷೆಯ ಬಗ್ಗೆ ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಲಾಗಿದ್ದು, ಆದಷ್ಟು ಬೇಗ ಕಾರ್ಯರೂಪಕ್ಕೆ ತರಲಾಗುವುದು ಎಂದು ಮದ್ದೂರು ಶಾಸಕ ಕೆ.ಎಂ.ಉದಯ್ ಹೇಳಿದರು. ಮದ್ದೂರು ತಾಲೂಕಿನ ಕದಲೂರು ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶುಕ್ರವಾರ ನಡೆದ ಶಾಲಾ ಪ್ರಾರಂಭೋತ್ಸವ ಹಾಗೂ ಉಚಿತ ಪಠ್ಯಪುಸ್ತಕ, ಸಮವಸ್ತ್ರ ವಿತರಣಾ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಮೂಲಕ ಆಧುನಿಕ ಶಿಕ್ಷಣಕ್ಕೆ ಒತ್ತು ನೀಡಬೇಕೆಂಬುದು ಮಾಜಿ ಮುಖ್ಯಮಂತ್ರಿ ಎಸ್.ಎಂ.ಕೃಷ್ಣ ಅವರ ಮಹದಾಸೆಯಾಗಿತ್ತು. ಆದರೆ, ಬದಲಾದ ರಾಜಕೀಯ ಸನ್ನಿವೇಶದಿಂದ ಅದು ಈಡೇರಲಿಲ್ಲ. ಹೀಗಾಗಿ ಕ್ಷೇತ್ರದ ಎಲ್ಲಾ ಸರ್ಕಾರಿ ಶಾಲೆಗಳಲ್ಲಿ ಸ್ಮಾರ್ಟ್ ಕ್ಲಾಸ್ ಆರಂಭ ಮಾಡಲು ಚಿಂತನೆ ನಡೆಸಲಾಗಿದೆ ಎಂದರು. ಸರ್ಕಾರಿ ಶಾಲೆ ಎಂಬ ಕೀಳಿರಿಮೆ ಬೇಡ ಸರ್ಕಾರಿ ಶಾಲೆಗಳಲ್ಲಿಯೇ ವ್ಯಾಸಂಗ ಮಾಡಿದ ಹಲವರು ಇಂದು ರಾಷ್ಟ್ರ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಗಮನ ಸೆಳೆದಿದ್ದಾರೆ ಹಾಗೂ ಮಹಾನ್ ವ್ಯಕ್ತಿಗಳಾಗಿ ಸಮಾಜದಲ್ಲಿ ಗುರುತಿಸಿಕೊಂಡಿದ್ದಾರೆ ಎಂದು ಮೆಚ್ಚುಗೆ…

Read More

ಬೆಂಗಳೂರು: ಎಲ್ಲಾ ಸಾರಿ ಪ್ರಕರಣಗಳಿಗೆ ಕಡ್ಡಾಯವಾಗಿ ಕೋವಿಡ್ ಪತ್ತೆ ಪರೀಕ್ಷೆ ನಡೆಸುವಂತೆ ರಾಜ್ಯ ಸರ್ಕಾರ ಆದೇಶಿಸಿದೆ. ಈ ಮೂಲಕ ಕರ್ನಾಟಕದಲ್ಲಿ ಕೊರೋನಾ ಕೇಸ್ ನಿಯಂತ್ರಣ, ಪತ್ತೆಗೆ ಕ್ರಮ ವಹಿಸಲಾಗಿದೆ. ಈ ಕುರಿತಂತೆ ರಾಷ್ಟ್ರೀಯ ಆರೋಗ್ಯ ಅಭಿಯಾನ ಹಾಗೂ ಕೋವಿಡ್ ಪರೀಕ್ಷೆಯ ನೋಡಲ್ ಅಧಿಕಾರಿ ಸುತ್ತೋಲೆ ಹೊರಡಿಸಿದ್ದು, ಕೋವಿಡ್-19 ರ ಪರೀಕ್ಷೆಯನ್ನು ಎಲ್ಲಾ SARI ಪ್ರಕರಣಗಳಲ್ಲಿ ಹಾಗೂ ಶೇಕಡ 5 ರಷ್ಟು ILI ಪ್ರಕರಣಗಳಲ್ಲಿ ಮಾತ್ರ ಕೋವಿಡ್-19 ಸೋಂಕನ್ನು ಧೃಡ ಪಡಿಸಿಕೊಳ್ಳಲು ಗಂಟಲು ದ್ರವ ಮಾದರಿಗಳನ್ನು RT-PCR ಪರೀಕ್ಷೆಗಾಗಿ ನಿಗದಿ ಪಡಿಸಿರುವ ಪ್ರಯೋಗಾಲಯಗಳಿಗೆ ಸಲ್ಲಿಸುವುದು. ಎಲ್ಲಾ ಪರೀಕ್ಷೆಗಳನ್ನು ಕಡ್ಡಾಯವಾಗಿ ಸರ್ಕಾರಿ ಪ್ರಯೋಗ ಶಾಲೆಗಳಲ್ಲಿಯೇ ನಡೆಸುವುದು ಹಾಗೂ ಲಭ್ಯವಿರುವ ಕೋವಿಡ್-19ರ ಪರೀಕ್ಷಾ ಕಿಟ್‌ಗಳನ್ನು FIFO (First-In – First-Out) ಮಾದರಿಯಲ್ಲಿ ಉಪಯೋಗಿಸಿ ಕೋವಿಡ್-19 ರ ಕಿಟ್ / ಪರಿಕರಗಳು ಅನುಪಯುಕ್ತವಾಗದಂತೆ ಕೋವಿಡ್-19ರ ಪರೀಕ್ಷೆಯನ್ನು ಈ ಕೆಳಕಂಡಂತೆ ಕ್ರಮವಹಿಸುವುದು. 1. ಎಲ್ಲಾ SARI ಪಕರಣಗಳಿಗೆ ಕಡ್ಡಾಯವಾಗಿ ಕೋವಿಡ್-19 ರ ಪರೀಕ್ಷೆ ನಡೆಸುವುದು. 2. ಶೇಕಡ 5…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಕಳೆದ ಕೆಲವು ವರ್ಷಗಳಿಂದ ಗಾಯದ ಸಮಸ್ಯೆಗಳಿಂದ ಬಳಲುತ್ತಿದ್ದ ಜಸ್ಪ್ರೀತ್ ಬುಮ್ರಾ ತಮ್ಮ ಭವಿಷ್ಯದ ಬಗ್ಗೆ ಆಸಕ್ತಿದಾಯಕ ಅಭಿಪ್ರಾಯವನ್ನು ಹೊರ ಹಾಕಿದ್ದಾರೆ. ಬುಮ್ರಾ ಪ್ರಸ್ತುತ ನಡೆಯುತ್ತಿರುವ ಐಪಿಎಲ್ 2025 ರಲ್ಲಿ ಆಡುತ್ತಿದ್ದಾರೆ ಮತ್ತು ಇಂಗ್ಲೆಂಡ್ ವಿರುದ್ಧದ ಅತ್ಯಂತ ಪ್ರಮುಖ ಟೆಸ್ಟ್ ಸರಣಿಯಲ್ಲಿ ಭಾರತ ಪರ ಆಡಲಿದ್ದಾರೆ. ಇದರ ನಡುವೆ ಅವರು ಇಂಗ್ಲೆಂಡ್ ಟೆಸ್ಟ್ ಪಂದ್ಯಗಳಿಗೂ ಮುನ್ನವೇ ಕ್ರಿಕೆಟ್ ನಿಂದ ನಿವೃತ್ತರಾಗುವಂತ ಸುಳಿವು ನೀಡಿದ್ದಾರೆ. ಐದು ಪಂದ್ಯಗಳ ಸರಣಿಯು ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (WTC) 2025-27 ಚಕ್ರದಲ್ಲಿ ಭಾರತದ ಅಭಿಯಾನದ ಆರಂಭವನ್ನು ಗುರುತಿಸುತ್ತದೆ. ಸರಣಿ ಪ್ರಾರಂಭವಾಗುವ ಮೊದಲು, ರೋಹಿತ್ ಶರ್ಮಾ ಮತ್ತು ವಿರಾಟ್ ಇಬ್ಬರೂ ಆಟದ ದೀರ್ಘ ಸ್ವರೂಪದಿಂದ ನಿವೃತ್ತಿ ಘೋಷಿಸಿದರು. ಇಂಗ್ಲೆಂಡ್ ಪ್ರವಾಸಕ್ಕಾಗಿ ಬುಮ್ರಾ ಭಾರತ ತಂಡದ ನಿರ್ಣಾಯಕ ಸದಸ್ಯರಾಗಿದ್ದಾರೆ. ಆದಾಗ್ಯೂ, ಫಿಟ್ನೆಸ್ ಸಮಸ್ಯೆಗಳಿಂದಾಗಿ ಅವರು ಎಲ್ಲಾ ಐದು ಪಂದ್ಯಗಳನ್ನು ಆಡುವುದಿಲ್ಲ ಎಂದು ದೃಢಪಡಿಸಲಾಗಿದೆ. ಅವರು ಕೂಡ ಈಗ ಭಾರಿ ನಿವೃತ್ತಿ ಸುಳಿವನ್ನು ನೀಡಿದ್ದಾರೆ. ಆಸ್ಟ್ರೇಲಿಯಾದ ಮಾಜಿ ನಾಯಕ ಮೈಕೆಲ್…

Read More

ಬೆಂಗಳೂರು: ಅನ್ನದಾತರ ಬದುಕಲ್ಲಿ ಭರವಸೆಯ ಬೆಳಕು ಚೆಲ್ಲಿದೆ. ಈ ಪರಿಣಾಮ ರಾಜ್ಯದಲ್ಲಿ ರೈತರ ಆತ್ಮಹತ್ಯೆ ಪ್ರಕರಣದಲ್ಲಿ ಗಣನೀಯ ಇಳಿಕೆ ಆಗಿರುವುದಾಗಿ ಸರ್ಕಾರ ಮಾಹಿತಿ ನೀಡಿದೆ. ನಮ್ಮ ಸರ್ಕಾರವು ರೈತರ ಪರವಾಗಿದ್ದು, ಅವರ ಕಾಳಜಿಯನ್ನು ವಹಿಸುತ್ತಿದೆ. ಇದನ್ನು ಭಾಷಣಕ್ಕೆ ಸೀಮಿತವಾಗಿಸದೆ, ಕಾರ್ಯರೂಪಕ್ಕೆ ತಂದು ಅವರಿಗಾಗಿ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಿ ನೆಮ್ಮದಿಯ ಬದುಕನ್ನು ಕಲ್ಪಿಸಿದ್ದೇವೆ ಎಂದು ತಿಳಿಸಿದೆ. ರಾಜ್ಯಾದ್ಯಂತ ಬೀಜ, ಗೊಬ್ಬರ, ರಾಸಾಯನಿಕಗಳ ಲಭ್ಯತೆಯನ್ನು ಖಾತ್ರಿಪಡಿಸಲಾಗಿದೆ. ನೀರಾವರಿ ಯೋಜನೆಗಳು ಹಾಗೂ ಕೃಷಿ ಭಾಗ್ಯದಂತಹ ಕಾರ್ಯಕ್ರಮಗಳ ಮೂಲಕ ನೀರಿನ ಪೂರೈಕೆ ಮಾಡಲಾಗಿದೆ, ಕೃಷಿ ಸಾಲ ಯೋಜನೆ, ಬೆಳೆನಷ್ಟ ಪರಿಹಾರ ವಿತರಣೆ ಮಾಡಿ ರೈತರಲ್ಲಿ ಆರ್ಥಿಕ ಬಲ ತುಂಬಲಾಗಿದೆ. ಹಾರ್ವೆಸ್ಟರ್ ಹಬ್‌ಗಳ ಸ್ಥಾಪನೆ ಮೂಲಕ ಆಧುನಿಕ ಯಂತ್ರೋಪಕರಣಗಳ ಬಳಕೆಗೆ ಉತ್ತೇಜನ ನೀಡಲಾಗಿದೆ. ಕೃಷಿ ಸಂಸ್ಕರಣೆ, ರಿಯಾಯಿತಿ ದರದಲ್ಲಿ ಜೈವಿಕ ಕೀಟ ನಾಶಕ ವಿತರಣೆ, ಹಸಿರೆಲೆ ಗೊಬ್ಬರ, ಸಿರಿಧಾನ್ಯ ಬೆಳೆಯಲು ಪ್ರೋತ್ಸಾಹ ಮತ್ತು ಸಕಾಲದಲ್ಲಿ ಬೆಂಬಲ ಬೆಲೆ ಖರೀದಿ ಕೇಂದ್ರಗಳ ಸ್ಥಾಪನೆಯಂತಹ ಅನೇಕ ಕಾರ್ಯಕ್ರಮಗಳು ರೈತರ ಮನೋಬಲ ಹೆಚ್ಚಿಸಿದೆ. ರೈತರನ್ನು…

Read More

ಬೆಂಗಳೂರು: ಪಂಚಾಯತ್‌ ವಿಕೇಂದ್ರೀಕರಣ ಕುರಿತು ದೇಶದ ಎಲ್ಲ ರಾಜ್ಯಗಳಲ್ಲಿ ನಡೆಸಿರುವ ಅಧ್ಯಯನ ವರದಿಯನ್ನು ಕೇಂದ್ರದ ಪಂಚಾಯತ್‌ ರಾಜ್‌ ಸಚಿವಾಲಯ ಬಿಡುಗಡೆಗೊಳಿಸಿದ್ದು, ಸೂಚ್ಯಂಕ ಪಟ್ಟಿಯಲ್ಲಿ ಕರ್ನಾಟಕ ಅಗ್ರಸ್ಥಾನದಲ್ಲಿದೆ. ಪಂಚಾಯತ್‌ ಸಬಲೀಕರಣ, ಆರ್ಥಿಕ ಸ್ವಾಯತ್ತತೆ ಮತ್ತು ಆಡಳಿತ ಸುಧಾರಣೆಗಳ ಕುರಿತು ರಾಜ್ಯಗಳನ್ನು ಮೌಲ್ಯಮಾಪನ ಮಾಡುವ ಪಿಡಿಐ ಚೌಕಟ್ಟು, ಕಾರ್ಯಗಳು, ಹಣಕಾಸು, ಕಾರ್ಯನಿರ್ವಾಹಕರು, ಸಾಮರ್ಥ್ಯ ವೃದ್ಧಿ ಮತ್ತು ಹೊಣೆಗಾರಿಕೆ ಸೇರಿ ಆರು ಪ್ರಮುಖ ನಿಯತಾಂಕಗಳನ್ನು ಆಧರಿಸಿ ಮೌಲ್ಯಮಾಪನ ಮಾಡಿದ್ದು, ಹಣಕಾಸು ಮತ್ತು ಹೊಣೆಗಾರಿಕೆಯ ನಿರ್ಣಾಯಕ ನಿಯತಾಂಕಗಳಲ್ಲಿ ಅತ್ಯಧಿಕ ಅಂಕಗಳನ್ನು ಗಳಿಸಿದೆ. ಶ್ರೇಯಾಂಕದಲ್ಲಿ ಹಣಕಾಸು ಗರಿಷ್ಠ ಪ್ರಾಮುಖ್ಯ ಹೊಂದಿದೆ. ಎರಡು ವರ್ಷಗಳಲ್ಲಿ ಗ್ರಾಮೀಣಾಭಿವೃದ್ಧಿಗಾಗಿ ಹತ್ತು ಹಲವು ನೂತನ ಯೋಜನೆಗಳನ್ನು ಪರಿಚಯಿಸಿ ಅನುಷ್ಠಾನಗೊಳಿಸಲಾಗುತ್ತಿದೆ. ಪ್ರಮುಖವಾಗಿ ಕೂಸಿನ ಮನೆ, ಅರಿವು ಕೇಂದ್ರ, ಘನತ್ಯಾಜ್ಯ ನಿರ್ವಹಣೆ, ರಾಜೀವ್‌ಗಾಂಧಿ ಪಂಚಾಯತ್‌ರಾಜ್‌ ಫೆಲೋಶಿಪ್‌, ಪ್ರಗತಿಪಥ, ಕಲ್ಯಾಣಪಥ, ಹೊಂಬೆಳಕು ಮುಂತಾದವುಗಳು ಗ್ರಾಮೀಣರ ಬದುಕಿಗೆ ಸಹಕಾರಿಯಾಗಿದೆ. ಇದರ ಜೊತೆಗೆ ನರೇಗಾ, ಗ್ರಾಮೀಣ ಕುಡಿಯುವ ನೀರು ಮುಂತಾದ ಕಾರ್ಯಕ್ರಮಗಳನ್ನು ಜನರಿಗೆ ಉಪಯೋಗವಾಗುವಂತೆ ಅನುಷ್ಠಾನಗೊಳಿಸಲಾಗುತ್ತಿದೆ ಎಂದು ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌…

Read More