Author: kannadanewsnow09

ಬೆಂಗಳೂರು: ನಮ್ಮ ಮೆಟ್ರೋ ( Namma Metro ) ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಈವರೆಗೆ ಐದು ನಿಮಿಷಕ್ಕೆ ಒಂದು ಸಂಚರಿಸುತ್ತಿದ್ದಂತ ನಮ್ಮ ಮೆಟ್ರೋ ರೈಲುಗಳು, ಮೆಜೆಸ್ಟಿಕ್ ಹಾಗೂ ವೈಟ್ ಫೀಲ್ಡ್ ನಡುವೆ ಇನ್ಮುಂದೆ 3 ನಿಮಿಷಕ್ಕೆ ಒಂದರಂತೆ ಸಂಚರಿಸಲಿದ್ದಾವೆ. ಈ ಕುರಿತಂತೆ ಬಿಎಂಆರ್ ಸಿಎಲ್ ನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 25.02.2024 ರಿಂದ ಬೆಳಗಿನ ದಟ್ಟಣೆಯ ಸಮಯದಲ್ಲಿ ನಾಡಪ್ರಭು ಕೆಂಪೇಗೌಡ ನಿಲ್ದಾಣ -ಮೆಜೆಸ್ಟಿಕ್ ಮತ್ತು ಗರುಡಾಚಾರ್ಪಾಳ್ಯ ಮೆಟ್ರೋ ನಿಲ್ದಾಣಗಳ ನಡುವೆ ಹೆಚ್ಚುವರಿ ಮೆಟ್ರೋ ರೈಲು ಸೇವೆಗಳನ್ನು ಒದಗಿಸಲಾಗುತ್ತದೆ ಎಂದಿದೆ. ಇದು ಟ್ರಿನಿಟಿ, ಇಂದಿರಾನಗರ, ಬೆನ್ನಿಗಾನಹಳ್ಳಿ ಮತ್ತು ಕೆಆರ್ ಪುರ ಮೆಟ್ರೋ ನಿಲ್ದಾಣಗಳ ಕಡೆಗೆ ಹೋಗುವ ಪಯಾಣಿಕರ ಅವಶ್ಯಕತೆಗಳನ್ನು ಪೂರೈಸಲು ಸಹಾಯವಾಗಲಿದೆ. ಈ ಮಾರ್ಗದಲ್ಲಿ ಬೆಳಿಗೆ 8.45 ರಿಂದ 10.20 ಗಂಟೆಯವರೆಗೆ, ಪ್ರತಿ ಮೂರು ನಿಮಿಷಕ್ಕೆ ಮೆಟ್ರೋ ರೈಲು ಸೇವೆಗಳು ವಾರದ ಎಲ್ಲಾ ದಿನಗಳಲ್ಲಿ (ಶನಿವಾರ, ಭಾನುವಾರ ಮತ್ತು ಸಾಮಾನ್ಯ ರಜಾದಿನಗಳನ್ನು ಹೊರತುಪಡಿಸಿ) ಲಭ್ಯವಿರುತ್ತವೆ ಎಂದು ತಿಳಿಸಿದೆ. ಇದಲ್ಲದೆ, ಭಾರತೀಯ…

Read More

ಉತ್ತರಪ್ರದೇಶ: ಪ್ರಧಾನಿ ನರೇಂದ್ರ ಮೋದಿ ( Prime Minister Narendra Modi ) ಅವರು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರೊಂದಿಗೆ ವಾರಣಾಸಿಯಲ್ಲಿ ಸಂತ ಗುರು ರವಿದಾಸ್ ( Sant Guru Ravidas ) ಅವರ ಪ್ರತಿಮೆಯನ್ನು ಅನಾವರಣಗೊಳಿಸಿದರು. ಸಂತ ರವಿದಾಸ್ ಅವರ 647 ನೇ ಜನ್ಮ ದಿನಾಚರಣೆಯ ಅಂಗವಾಗಿ ನಡೆದ ಸಾರ್ವಜನಿಕ ಸಮಾರಂಭದಲ್ಲಿ ಇಬ್ಬರೂ ನಾಯಕರು ಪುಷ್ಪ ನಮನ ಸಲ್ಲಿಸುವ ಮೂಲಕ ಗೌರವ ಸಲ್ಲಿಸಿದರು. ಪ್ರಧಾನಿ ನರೇಂದ್ರ ಮೋದಿ ಅವರು ಗುರುವಾರ ಸಂಜೆ ವಾರಣಾಸಿಗೆ ಆಗಮಿಸಿದರು. ಅವರ ಭೇಟಿಯ ಕಾರ್ಯಸೂಚಿಯಲ್ಲಿ ಒಟ್ಟು 13,000 ಕೋಟಿ ರೂ.ಗಳ ಹಲವಾರು ಅಭಿವೃದ್ಧಿ ಯೋಜನೆಗಳ ಉದ್ಘಾಟನೆಯೂ ಸೇರಿದೆ. https://twitter.com/ANI/status/1760920291415298478 ಇದಲ್ಲದೆ ಅವರು ಸಾರ್ವಜನಿಕ ಸಭೆಗಳಲ್ಲಿ ಭಾಗವಹಿಸಲಿದ್ದಾರೆ ಮತ್ತು ಅಭಿವೃದ್ಧಿ ಉಪಕ್ರಮಗಳ ವಿಷಯದಲ್ಲಿ ತಮ್ಮ ಸಂಸದೀಯ ಕ್ಷೇತ್ರದಲ್ಲಿ ಸಾಧಿಸಿದ ಪ್ರಗತಿಯನ್ನು ಒತ್ತಿಹೇಳಲಿದ್ದಾರೆ. ಈ ಪ್ರದೇಶದಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಉತ್ತೇಜನ ನೀಡಲು, ಅವರು ಸೇವಾಪುರಿಯಲ್ಲಿ ಎಚ್ಪಿಸಿಎಲ್ ಎಲ್ಪಿಜಿ ಬಾಟ್ಲಿಂಗ್ ಘಟಕ, ಯುಪಿಎಸ್ಐಡಿಎ ಆಗ್ರೋ ಪಾರ್ಕ್ ಕಾರ್ಖಿಯಾನ್ನಲ್ಲಿ…

Read More

ಬೆಂಗಳೂರು: ನಟ ದರ್ಶನ್ ಅವರಿಗೆ ಮತ್ತೆ ಮತ್ತೆ ಸಂಕಷ್ಟ ಎದುರಾಗಿದೆ. ಇದೀಗ ಅವರ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ 2ನೇ ದೂರು ದಾಖಲಾಗಿದೆ. ಸ್ಯಾಂಡಲ್ ವುಡ್ ಸ್ಟಾರ್ ದರ್ಶನ್ ಗೆ ಸಂಕಷ್ಟ ಎನ್ನುವಂತೆ ಈಗಾಗಲೇ ಅವರ ವಿರುದ್ಧ ದೂರು ದಾಖಲಾಗಿವೆ. ಈಗ ಮುಂದುವರೆದು 2ನೇ ದೂರೊಂದು ದಾಖಲಾಗಿದ್ದು, ಅವರಿಗೆ ತಪ್ಪದ ಸಂಕಷ್ಟಗಳು ಎದುರಾದಂತೆ ಆಗಿದೆ. ನಟ ದರ್ಶನ್ ವಿರುದ್ಧ ಬೆಂಗಳೂರಿನ ರಾಜರಾಜೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಹೆಣ್ಣುಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಸಂಬಂಧ 2ನೇ ದೂರು ದಾಖಲಾಗಿದೆ. ಡಿ ಬಾಸ್ ಗೆ ಮತ್ತೊಂದು ಸಂಕಷ್ಟ : ‘ಶ್ರೀ ಶಕ್ತಿ ಸಂಘದಿಂದ’ ನಟ ದರ್ಶನ್ ವಿರುದ್ಧ ದೂರು ದಾಖಲು ಬೆಂಗಳೂರು : ಸ್ಯಾಂಡಲ್ವುಡ್ ಸ್ಟಾರ್ ನಟ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಇದೀಗ ಶ್ರೀಶಕ್ತಿ ಸ್ವ ಸಹಾಯ ಸಂಘದ ಸುಮಾರು 35 ಮಹಿಳೆಯರು ಆಗಮಿಸಿ ದರ್ಶನ್ ವಿರುದ್ಧ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ದೂರು ದಾಖಲಿಸಿದ್ದಾರೆ. https://kannadanewsnow.com/kannada/bengaluru-brother-kills-brother-by-pouring-petrol-over-car-dispute/ ಶ್ರೀ…

Read More

ಮಂಡ್ಯ: ನಾನು ಈ ಬಾರಿ ಲೋಕಸಭೆಗೆ ನನ್ನ ಸ್ಪರ್ಧೆ ಖಚಿತ. ಮಂಡ್ಯದಿಂದಲೇ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದಾಗಿ ಸಂಸದೆ ಸುಮಲತಾ ಅಂಬರೀಶ್ ಘೋಷಣೆ ಮಾಡಿದರು. ಮಂಡ್ಯದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಕಳೆದ 5 ವರ್ಷಗಳ ದಿಶಾ ಸಭೆಗಳಲ್ಲಿ ಹಲವು ವಿಷಯ ಚರ್ಚೆಯಾಗಿದೆ. ಚರ್ಚೆಯಾದ ವಿಷಯ ಎಷ್ಟರ ಮಟ್ಟಿಗೆ ಜಾರಿಯಾಗಿದೆ ಅನ್ನೋ ಬಗ್ಗೆ ವಿವರ ಕೇಳಬೇಕು. ಭ್ರೂಣ ಹತ್ಯೆ ಬಗ್ಗೆ ನಾನು 4 ವರ್ಷಗಳ ಹಿಂದೆಯೆ ಪ್ರಸ್ತಾಪ ಮಾಡಿದ್ದೆ. ಆದರೆ ಅದರ ವಿರುದ್ಧ ಸರಿಯಾದ ಕ್ರಮ ಆಗಲಿಲ್ಲ. ಭ್ರೂಣ ಹತ್ಯೆ ತಡೆಯಲು ಜಿಲ್ಲಾಡಳಿತ ವಿಫಲವಾಗಿದ್ದು ಬೇಸರ ತಂದಿದೆ. ಇಂದಿನ ಸಭೆಯಲ್ಲಿ ಕೇಂದ್ರದ ಯೋಜನೆಗಳ ಬಗ್ಗೆ ಚರ್ಚೆ ಮಾಡಲಾಗುತ್ತದೆ ಎಂದರು. ಬೇಬಿಬೆಟ್ಟ ಟ್ರಯಲ್ ಬ್ಲಾಸ್ಟ್ ವಿಚಾರವಾಗಿ ಮಾತನಾಡಿದಂತ ಅವರು, ಟ್ರಯಲ್ ಬ್ಲಾಸ್ಟ್‌ಗೆ ಕೋರ್ಟ್ ಆದೇಶ ಇದೆ. ಆದರೆ ವಾಸ್ತವ ಮಾಹಿತಿಯನ್ನು ಅಧಿಕಾರಗಳಿಗೆ ತಿಳಿಸಿದ್ದೇನೆ. ಟ್ರಯಲ್ ಬ್ಲಾಸ್ಟ್‌ಗೆ ರೈತರ ವಿರೋಧ ಇದೆ‌. ರೈತರ ಮನವಿಯಲ್ಲಿ ನ್ಯಾಯ ಇದೆ, ನಾನು ಅವರೊಂದಿಗಿದ್ದೇನೆ. ಟ್ರಯಲ್ ಬ್ಲಾಸ್ಟ್ ನಡೆಸಿದರೆ ಅನುಕೂಲಕಕ್ಕಿಂತ ಅನಾನುಕೂಲ ಜಾಸ್ತಿ. ಟ್ರಯಲ್ ಬ್ಲಾಸ್ಟ್‌ಗೆ ಸ್ಟೇ ಆರ್ಡರ್ ತರಲು ರೈತ ಸಂಘ ಮುಂದಾಗಿದೆ. ಜಿಲ್ಲಾಡಳಿತಕ್ಕೆ ಮೇಲ್ಮನವಿ ಸಲ್ಲಿಸುವ…

Read More

ಬೆಂಗಳೂರು: ನಮ್ಮ ಬತ್ತಳಿಕೆಯಲ್ಲೂ ಅಸ್ತ್ರಗಳಿವೆ. ಸಮಯ ಬಂದಾಗ ಪ್ರಯೋಗ ಮಾಡುತ್ತೇವೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಹೇಳಿದ್ದಾರೆ. ಇಂದು ವಿಧಾನಸೌಧದ ಬಳಿಯಲ್ಲಿ ರಾಜ್ಯಸಭೆಯಲ್ಲಿ 3ನೇ ಅಭ್ಯರ್ಥಿ ಗೆಲ್ಲಿಸಲು ರಣತಂತ್ರದ ಬಗ್ಗೆ ಮಾತನಾಡಿದಂತ ಅವರು, ನಮ್ಮ ಬತ್ತಳಿಕೆಯಲ್ಲೂ ಅಸ್ತ್ರಗಳಿವೆ. ನಮ್ಮ ಅಸ್ತ್ರಗಳು ಏನೆಂದು ಅವರಿಗೂ ಕೂಡ ಗೊತ್ತಿದೆ. ಅವರ ಬತ್ತಳಿಕೆಯಲ್ಲಿ ಏನಿವೆ ಎಂಬುದು ನಮಗೆ ಗೊತ್ತಿದೆ ಎಂದರು. ನಾನು ರೆಡ್ಡಿ ಸೇರಿ ಪಕ್ಷೇತರರ ಜೊತೆಗೂ ಮಾತನಾಡಿದ್ದೇನೆ. ಅದರ ಬಗ್ಗೆ ನಾನು ಬಹಿರಂಗ ಪಡಿಸೋದಿಲ್ಲ. ನಾನು ತಕ್ಷಣ ಶಾಸಕಾಂಗಸಭೆ ನಡೆಸುತ್ತೇವೆ. ನಾವು ನಮ್ಮ ಮನೆಯನ್ನು ಬಿಗಿಯಾಗಿ ಇಟ್ಟುಕೊಳ್ಳುತ್ತೇವೆ ಎಂದರು. https://kannadanewsnow.com/kannada/kannada-actor-shafi-withdraws-complaint-against-darshan-apologises-to-fans/ https://kannadanewsnow.com/kannada/bengaluru-brother-kills-brother-by-pouring-petrol-over-car-dispute/

Read More

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ನಟ ದರ್ಶನ್ ವಿರುದ್ಧ ನೀಡಲಾಗಿದ್ದಂತ ದೂರನ್ನು ಕನ್ನಡ ಪ್ರಜಾಪರ ವೇದಿಕೆಯ ಕನ್ನಡದ ಶಫಿ ವಾಪಾಸ್ ಪಡೆದಿದ್ದಾರೆ. ಅಲ್ಲದೇ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ. ನಟ ದರ್ಶನ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳುವಂತೆ ಕನ್ನಡ ಪ್ರಜಾಪರ ವೇದಿಕೆಯ ಕನ್ನಡದ ಶಫಿ ಅವರು, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದೂರು ನೀಡಿದ್ದರು. ಹೀಗೆ ಅವರು ನಟ ದರ್ಶನ್ ವಿರುದ್ಧ ನೀಡುತ್ತಿದ್ದಂತೇ, ಅವರ ವಿರುದ್ಧ ದರ್ಶನ್ ಅಭಿಮಾನಿಗಳು ಕೆಂಡಾಮಂಡಲರಾಗಿದ್ದರು. ಈ ಬೆನ್ನಲ್ಲೇ ಪರಿಸ್ಥಿತಿ ವಿಕೋಪತೆಯನ್ನು ಅರಿತಂತ ಕನ್ನಡದ ಶಫಿ ಅವರು, ನಮ್ಮ ಸಂಘಟನೆಯಿಂದ ಆತುರಕ್ಕೆ ಬಿದ್ದು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಗೆ ದರ್ಶನ್ ವಿರುದ್ಧ ದೂರು ನೀಡಲಾಗಿದೆ. ಇದಕ್ಕಾಗಿ ನಾನು ಕ್ಷಮೆಯಾಚಿಸುತ್ತೇನೆ ಎಂದಿದ್ದಾರೆ. ನಮ್ಮ ದೂರಿನಿಂದ ಕನ್ನಡ ಮನಸ್ಸುಗಳಿಗೆ, ನಟ ದರ್ಶನ್ ಅಭಿಮಾನಿಗಳಿಗೆ ನೋವಾಗಿದ್ದರೇ ಕ್ಷಮಿಸಬೇಕು. ನಾವು ನೀಡಲಾಗಿದ್ದಂತ ದೂರನ್ನು ಹಿಂಪಡೆಯುತ್ತಿದ್ದೇವೆ ಎಂಬುದಾಗಿ ವೀಡಿಯೋ ಸಂದೇಶದಲ್ಲಿ ಹೇಳಿಕೆ ಬಿಡುಗಡೆ ಮಾಡಿದ್ದಾರೆ. https://kannadanewsnow.com/kannada/bengaluru-brother-kills-brother-by-pouring-petrol-over-car-dispute/ https://kannadanewsnow.com/kannada/applications-invited-for-distribution-of-vegetable-seed-kits/

Read More

ಬೆಂಗಳೂರು,: 56 ವರ್ಷದ ಮಹಿಳೆಯೊಬ್ಬರಿಗೆ ಅಪರೂಪದ ಸಂಕೀರ್ಣ ಕ್ಯಾನ್ಸರ್‌ಗೆ ಯಶಸ್ವಿಯಾಗಿ ಚಿಕಿತ್ಸೆ ನೀಡುವ ಮೂಲಕ ಪ್ರಮುಖ ಮೈಲಿಗಲ್ಲನ್ನು ಸಾಧಿಸಿದೆ. ಡಾ. ಗಣೇಶ್ ಶೆಣೈ ಮತ್ತು ಡಾ. ರುಬಿನಾ ಶಾನವಾಜ್, ಶಸ್ತ್ರಚಿಕಿತ್ಸೆಯ ಭಾಗವಾಗಿ ಒಟ್ಟು ಲ್ಯಾಪರೊಸ್ಕೋಪಿಕ್ ಗರ್ಭಕಂಠ, ಸಾಲ್ಪಿಂಗೊ-ಊಫೊರೆಕ್ಟಮಿ ಮತ್ತು ಲ್ಯಾಪರೊಸ್ಕೋಪಿಕ್ ಲೆಫ್ಟ್ ಕೋಲೆಕ್ಟಮಿ ನಡೆಸಿದರು. ಕನಿಷ್ಠ ಆಕ್ರಮಣಕಾರಿ ವಿಧಾನವನ್ನು ಬಳಸಿಕೊಂಡು ಈ ಸಂಯೋಜಿತ ವಿಧಾನವು ಅನೇಕ ಬಾರಿ ಅರಿವಳಿಕೆ ನೀಡದೇ, ರೋಗಿಯ ಚಿಕಿತ್ಸಾ ಪ್ರಯಾಣವನ್ನು ಸುವ್ಯವಸ್ಥಿತಗೊಳಿಸಿತು. ಗೆಡ್ಡೆಯನ್ನು ತೆಗೆದುಹಾಕುವುದರ ಜೊತೆಗೆ, ಇದು ಕೊಲೊನ್ ಮತ್ತು ಗರ್ಭಾಶಯದಲ್ಲಿನ ಸಂಭಾವ್ಯ ಮಾರಣಾಂತಿಕತೆಯನ್ನು ಕಡಿಮೆ ಮಾಡಿದ್ದು ಮತ್ತು ರೋಗಿಯಲ್ಲಿ ವೇಗವಾಗಿ ಚೇತರಿಸಿಕೊಳ್ಳಲು ದಾರಿ ಮಾಡಿಕೊಟ್ಟಿತು. ನಿರಂತರವಾದ ಕಿಬ್ಬೊಟ್ಟೆಯ ನೋವು ಮತ್ತು ತೀವ್ರವಾದ ಮುಟ್ಟಿನ ರಕ್ತಸ್ರಾವವು ರೋಗಿಯ ಜೀವನದ ಗುಣಮಟ್ಟವನ್ನು ಗಮನಾರ್ಹವಾಗಿ ಪರಿಣಾಮ ಬೀರಿತು. ಈ ಸಮಸ್ಯೆಯಿಂದ ಪರಿಹಾರವನ್ನು ಪಡೆಯಲು, ರೋಗಿಯು ಫೋರ್ಟಿಸ್ ಆಸ್ಪತ್ರೆ ಕನ್ನಿಂಗ್ಹ್ಯಾಮ್ ರಸ್ತೆಯಲ್ಲಿ ದಾಖಲಾದರು. ಪ್ರವೇಶದ ನಂತರ, ಸಂಪೂರ್ಣ ಪರೀಕ್ಷೆಯು ರೋಗಿಯಲ್ಲಿ ಎಂಡೊಮೆಟ್ರಿಯಲ್ ಮತ್ತು ಕೊಲೊನಿಕ್ ಗೆಡ್ಡೆಗಳ ಅಪರೂಪದ ಡ್ಯುಯಲ್ ಪ್ರಕರಣವನ್ನು ಬಹಿರಂಗಪಡಿಸಿತು.…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಅಮೆಜಾನ್ ಮಳೆಕಾಡಿನ ಹೃದಯಭಾಗದಲ್ಲಿ ವಿಜ್ಞಾನಿಗಳು ವಿಶ್ವದ ಅತಿದೊಡ್ಡ ಹಾವನ್ನು ಕಂಡುಹಿಡಿದಿದ್ದಾರೆ. ಈ ಹಿಂದೆ ದಾಖಲೆಯಿಲ್ಲದ ದೈತ್ಯ ಅನಕೊಂಡವನ್ನು ಇತ್ತೀಚೆಗೆ ಟಿವಿ ವನ್ಯಜೀವಿ ನಿರೂಪಕ ಪ್ರೊಫೆಸರ್ ಫ್ರೀಕ್ ವೊಂಕ್ ಅವರು ನ್ಯಾಷನಲ್ ಜಿಯಾಗ್ರಫಿಕ್ ಅನ್ವೇಷನೆಯ ಸಮಯದಲ್ಲಿ ಕಂಡುಹಿಡಿದರು. ಈ ಬೃಹತ್ ಅನಕೊಂಡ 26 ಅಡಿ ಉದ್ದ, 440 ಪೌಂಡ್ ತೂಕ ಮತ್ತು ಮನುಷ್ಯನ ತಲೆಗೆ ಸಮನಾಗಿದೆ ಎಂದು ಇಂಡಿಪೆಂಡೆಂಟ್ ವರದಿ ಮಾಡಿದೆ. ಈ ಹಾವು ಪ್ರಭೇದವನ್ನು ವಿಶ್ವದ ಅತಿದೊಡ್ಡ ಮತ್ತು ಭಾರವಾದ ಹಾವು ಎಂದು ಹೇಳಲಾಗುತ್ತದೆ. ವಿಲ್ ಸ್ಮಿತ್ ಅವರೊಂದಿಗೆ ನ್ಯಾಷನಲ್ ಜಿಯಾಗ್ರಫಿಕ್ಸ್ ಡಿಸ್ನಿ + ಸರಣಿ ‘ಪೋಲ್ ಟು ಪೋಲ್’ ಚಿತ್ರೀಕರಣದ ಸಮಯದಲ್ಲಿ ಈ ಪ್ರಭೇದ ಕಂಡುಬಂದಿದೆ. ಸಂಶೋಧಕರು ಹೊಸ ಪ್ರಭೇದಕ್ಕೆ ಲ್ಯಾಟಿನ್ ಹೆಸರನ್ನು ‘ಯುನೆಕ್ಟೆಸ್ ಅಕಾಯಿಮಾ’ ಎಂದು ಹೆಸರಿಟ್ಟಿದ್ದಾರೆ. ಇದರರ್ಥ ಉತ್ತರ ಹಸಿರು ಅನಕೊಂಡ ಎಂದಾಗಿದೆ. ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿರುವ ವೀಡಿಯೊದಲ್ಲಿ, ಪ್ರೊಫೆಸರ್ ವೊಂಕ್ ಅವರು ಬೃಹತ್ ಅನಕೊಂಡದ ಪಕ್ಕದಲ್ಲಿ ನಿರ್ಭೀತಿಯಿಂದ ಈಜುತ್ತಿರುವುದನ್ನು ಕಾಣಬಹುದು. “ನಾನು…

Read More

ಬೆಂಗಳೂರು: ಮುಖ್ಯಮಂತ್ರಿಗಳ ವಿಶೇಷ ಅನುದಾನದಡಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ಸಮುದಾಯ ಭವನ ನಿರ್ಮಾಣ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ನೀಡಿ ಆದೇಶಿಸಲಾಗಿದೆ. ಈ ಕುರಿತಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ವಿವಿಧ ಸಮುದಾಯಗಳ ಅಭಿವೃದ್ಧಿ ಕಾರ್ಯಕ್ರಮದಡಿ ರಾಜ್ಯ ವಲಯ ಯೋಜನೆ ಲೆಕ್ಕಶೀರ್ಷಿಕೆ 2225-03-001-0-05ರಡಿ ಸಮುದಾಯ ಭವನ/ವಿದ್ಯಾರ್ಥಿನಿಲಯ ಕಟ್ಟಡ ನಿರ್ಮಾಣಕ್ಕಾಗಿ ಪಟ್ಟಣ ಪಂಚಾಯಿತಿ/ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ರೂ.10.00 ಲಕ್ಷಗಳು, ತಾಲ್ಲೂಕು ಕೇಂದ್ರಸ್ಥಾನಗಳಿಗೆ ರೂ.25.00 ಲಕ್ಷಗಳು ಹಾಗೂ ಜಿಲ್ಲಾ ಕೇಂದ್ರಸ್ಥಾನಕ್ಕೆ ರೂ.50.00 ಲಕ್ಷಗಳಂತೆ ಗರಿಷ್ಠ ಮಿತಿಗೊಳಪಟ್ಟು ಪ್ರವರ್ಗ-1, 2ಎ, 3ಎ ಮತ್ತು ಪ್ರವರ್ಗ-3ಬಿಗೆ ಸೇರಿದ ಜಾತಿಗಳ ನೋಂದಾಯಿತ ಸಂಘ/ಸ್ವಯಂ ಸೇವಾ ಸಂಸ್ಥೆ/ಟ್ರಸ್ಟ್‌ಗಳಿಗೆ ಸಹಾಯಧನವನ್ನು ಮಂಜೂರು ಮಾಡಲು ಆದೇಶಿಸಲಾಗಿರುತ್ತದೆ ಎಂದಿದ್ದಾರೆ. ದಿನಾಂಕ:05.11.2014ರ ಸರ್ಕಾರದ ಆದೇಶದಲ್ಲಿ ತಿಳಿಸಿರುವ ಅನುದಾನದ ಮಿತಿಯನ್ನು ಅಗತ್ಯ ಸಂದರ್ಭಗಳಲ್ಲಿ ಸಡಿಲಗೊಳಿಸಿ ವಿಶೇಷ ಪಕರಣವೆಂದು ಪರಿಗಣಿಸಿ ಹೆಚ್ಚುವರಿಯಾಗಿ ಮಂಜೂರು ಮಾಡಲು ಅವಕಾಶ ಕಲ್ಪಿಸಲಾಗಿದೆ ಎಂದು ಹೇಳಿದ್ದಾರೆ. ಆರ್ಥಿಕ ಇಲಾಖೆ ಅನಧಿಕೃತ ಟಿಪ್ಪಣಿಗಳಲ್ಲಿ…

Read More

ಬೆಂಗಳೂರು: ಮುಂಬರುವಂತ ಲೋಕಸಭಾ ಚುನಾವಣೆಯಲ್ಲಿ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಸ್ಪರ್ಧೆ ಫಿಕ್ಸ್ ಆಗಿದೆ. ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಕಣಕ್ಕೆ ಇಳಿಯಲಿಯೋದು ಪಕ್ಕಾ ಎಂಬುದಾಗಿ ತಿಳಿದು ಬಂದಿದೆ. ಈ ಬಗ್ಗೆ ಬಿಜೆಪಿಯ ಉನ್ನತ ಮೂಲಗಳಿಂದ ಮಾಹಿತಿ ತಿಳಿದು ಬಂದಿದ್ದು, ಕಾಂಗ್ರೆಸ್ ಸಂಸದ ಡಿ.ಕೆ ಸುರೇಶ್ ಅವರನ್ನು ಮಣಿಸೋದಕ್ಕೆ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳ ನಾಯಕರು ತಂತ್ರಗಾರಿಕೆ ಸಲುವಾಗಿ, ಡಾ. ಮಂಜುನಾಥ್ ಅವರನ್ನು ಬೆಂಗಳೂರು ಗ್ರಾಮಾಂತರ ಕ್ಷೇತ್ರದಿಂದ ಕಣಕ್ಕೆ ಇಳಿಸಲಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಈಗಾಗಲೇ ದೆಹಲಿಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಹಾಗೂ ಮಾಜಿ ಸಿಎಂ ಹೆಚ್.ಡಿ ಕುಮಾರಸ್ವಾಮಿ ಅವರು ಈ ಬಗ್ಗೆ ಮಾತುಕತೆ ನಡೆಸಿದ್ದಾರೆ ಎನ್ನಲಾಗಿದೆ. ಇನ್ನೇನು ಕೆಲವೇ ದಿನಗಳಲ್ಲಿ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್ ಅವರನ್ನು ಬಿಜೆಪಿ ಟೀಂ ಈ ಸಂಬಂಧ ಅಂತಿಮ ಮಾತುಕತೆಗಾಗಿ ಅವರನ್ನು ಭೇಟಿಯಾಗಿ ಚರ್ಚೆ ನಡೆಸಲಿದೆ ಎಂಬುದಾಗಿ ತಿಳಿದು ಬಂದಿದೆ. ಒಟ್ಟಾರೆಯಾಗಿ ಜಯದೇವ ಆಸ್ಪತ್ರೆಯ ಮಾಜಿ ನಿರ್ದೇಶಕ ಡಾ.ಮಂಜುನಾಥ್…

Read More