Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಮೊದಲ ಹಂತದಲ್ಲಿ ರಾಜ್ಯದ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ವಿತರಣೆಯನ್ನು ಮಾಡಲಾಗುತ್ತಿದೆ. ಮಕ್ಕಳಲ್ಲಿ ವೈಜ್ಞಾನಿಕ ಮನೋಭಾವ ಹಾಗೂ ವೈಚಾರಿಕತೆ ಹೆಚ್ಚಿಸಲು ರಾಜ್ಯ ಸರ್ಕಾರ ಅದ್ಯತೆ ನೀಡುತ್ತಿದೆ. ಮೊದಲ ಹಂತದಲ್ಲಿ 833 ವಸತಿ ಶಾಲೆಗಳಿಗೆ ಟೆಲಿಸ್ಕೋಪ್ ನೀಡಲಾಗುತ್ತಿದೆ. ಮಕ್ಕಳು ಬಾಹ್ಯಾಕಾಶ ಕ್ಷೇತ್ರದ ಬಗ್ಗೆ ಆಸಕ್ತಿ ಹೆಚ್ಚಿಸಿಕೊಳ್ಳಬೇಕು ಮತ್ತು ಆ ಕ್ಷೇತ್ರದಲ್ಲಿ ಸಂಶೋಧನೆಗೆ ಪ್ರೋತ್ಸಾಹ ನೀಡುವ ಉದ್ದೇಶ ಹೊಂದಿದ್ದೇವೆ ಎಂದು ವಿಜ್ಞಾನ ಮತ್ತು ತಂತ್ರಜ್ಞಾನ ಸಚಿವರಾದ ಎನ್.ಎಸ್.ಭೋಸರಾಜು ಅವರು ತಿಳಿಸಿದ್ದಾರೆ. ಕರ್ನಾಟಕ ರಾಜ್ಯ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆಯ ಮಹತ್ವಾಕಾಂಕ್ಷಿ ಯೋಜನೆಯಾದ ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಟೆಲಿಸ್ಕೊಪ್ ಒದಗಿಸುವ ಯೋಜನೆ ಬಹಳ ವಿಶೇಷವಾಗಿದ್ದು, ಭವಿಷ್ಯದ ವೈಜ್ಞಾನಿಕ ಕ್ಷೇತ್ರಕ್ಕೆ ಉತ್ತಮ ಕೊಡುಗೆ ನೀಡಲಿದೆ ಎಂದು ಇಸ್ರೋ ಚೇರ್ಮನ್ ಸೋಮನಾಥ್ ಅಭಿಪ್ರಾಯ ವ್ಯಕ್ತ ಪಡಿಸಿದ್ದಾರೆ. https://twitter.com/KarnatakaVarthe/status/1856661255806972072 https://kannadanewsnow.com/kannada/no-one-will-be-allowed-to-do-business-on-road-bbmp-chief-commissioner-tushar-girinath/ https://kannadanewsnow.com/kannada/give-question-paper-for-kset-eligibility-test-in-kannada-dr-purushothama-bilimale-to-kea/
ಬೆಂಗಳೂರು: ನಗರದಲ್ಲಿ ರಸ್ತೆ ಮೇಲೆ ವ್ಯಾಪಾರ ನಡೆಸಲು ಯಾರಿಗೂ ಅವಕಾಶ ನೀಡುವುದಿಲ್ಲ. ಬೀದಿಬದಿ ವ್ಯಾಪಾರಿಗಳ ಸಮೀಕ್ಷೆ ನಡೆಯುತ್ತಿದ್ದು, ಅದು ಮುಗಿಯುವವರೆಗೆ ಪಾದಚಾರಿ ಮಾರ್ಗದ ಚಿಕ್ಕ ಜಾಗದಲ್ಲಿ ವ್ಯಾಪಾರಕ್ಕೆ ಅವಕಾಶ ಮಾಡಿಕೊಡಲಾಗುವುದು ಎಂದು ಬಿಬಿಎಂಪಿ ಮುಖ್ಯ ಆಯುಕ್ತರಾದ ತುಷಾರ್ ಗಿರಿನಾಥ್ ತಿಳಿಸಿದ್ದಾರೆ. ಪಾದಚಾರಿ ಮಾರ್ಗದಲ್ಲಿ ಖಾಯಂ ನಿರ್ಮಾಣ ಮಾಡಿ ಅಥವಾ ಪೂರ್ಣ ಒತ್ತುವರಿ ಮಾಡಿಕೊಂಡು ವ್ಯಾಪಾರ ಮಾಡಲು ಅವಕಾಶ ನೀಡುವುದಿಲ್ಲ. 5 ಅಡಿ x 5 ಅಡಿ ಜಾಗದಲ್ಲಿ ವ್ಯಾಪಾರ ಮಾಡಿಕೊಳ್ಳಬಹುದು ಎಂದು ಅವರು ತಿಳಿಸಿದ್ದಾರೆ. https://twitter.com/KarnatakaVarthe/status/1856648676657312025 https://kannadanewsnow.com/kannada/give-question-paper-for-kset-eligibility-test-in-kannada-dr-purushothama-bilimale-to-kea/ https://kannadanewsnow.com/kannada/bengaluru-power-outages-in-these-areas-on-november-15/
ಶಿವಮೊಗ್ಗ: ಜಿಲ್ಲೆಯ ಸಾಗರದ ಸಂತೋಷ್ ಸದ್ಗುರು ನಟನೆಯ ಮಲ್ನಾಡ್ ಯಾನ ಚಿತ್ರದ ಮೊದಲ ಲುಕ್ ರಿಲೀಸ್ ಮಾಡಲಾಗಿದೆ. ಮಲೆನಾಡಿನ ಝುಳು ಝುಳು ನದಿಯ ಹರಿವಿನ ನಿನಾದದೊಂದಿಗೆ ಫಸ್ಟ್ ಲುಕ್ ನಲ್ಲಿ ತೋರಿಸಲಾಗಿದೆ. ಸಂತೋಷ್ ಸದ್ಗುರು ಅಭಿನಯದ ಮಲೆನಾಡಿನ ಯಾನ ದೂರ ಬಲು ದೂರ ಈ ಬದುಕು ಬಲು ಸನಿಹ ಎನ್ನುವಂತ ಕನ್ನಡ ವೀಡಿಯೋ ಆಲ್ಬಮ್ ಶೀಘ್ರದಲ್ಲೇ ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನಾ ಆಲ್ಬಂನ ಫಸ್ಟ್ ಲುಕ್ ರಿಲೀಸ್ ಮಾಡಲಾಗಿದ್ದು, ಯೂಟ್ಯೂಬ್ ನಲ್ಲಿ ನೋಡುಗರ ಮನ ಸೆಳೆದಿದೆ. ಈ ಕೆಳಗಿನ ಲಿಂಕ್ ಕ್ಲೀಕ್ ಮಾಡಿ. ಆ ಮಲ್ನಾಡ್ ಯಾನದ ಫಸ್ಟ್ ಲುಕ್ ಸಾಂಗ್ ತಪ್ಪದೇ ನೋಡಿ.. https://youtu.be/rDUrVqygf28?si=lWzUac6NX2ViqC86 ಅಂದಹಾಗೇ ಮಲ್ನಾಡ್ ಯಾನದ ಕಾನ್ಸೆಪ್ಟ್ ಹಾಗೂ ಮೇಕಿಂಗ್ ಮಂಜುನಾಥ ವಿ.ಎಂ ಅವರದ್ದು. ಮಲೆನಾಡಿನ ಯಾನದ ಅದ್ಬುತ ಚಿತ್ರಗಳನ್ನು ಕ್ಯಾಮರಾದಲ್ಲಿ ಅಷ್ಟೇ ಚೆಂದವಾಗಿ ಸೆರೆ ಹಿಡಿದು ಕೊಟ್ಟಿರೋದು ಛಾಯಾಗ್ರಾಹಕ ಸುಮಂತ್ ಶರ್ಮಾ. ಈ ದೃಶ್ಯಾವಳಿಯಲ್ಲಿನ ಬೇಕು ಬೇಡಗಳಿಗೆ ಕತ್ತರಿ ಹಾಕಿ, ನೋಡುಗರನ್ನು ಸೆರೆ ಹಿಡಿಯೋದಕ್ಕೆ ಹೊರಟಿರೋದು ಎಡಿಟರ್…
ಬೆಂಗಳೂರು: ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ನವೆಂಬರ್ 24, 2024ರಂದು ನಡೆಸಲು ಉದ್ದೇಶಿಸಿರುವ ಕೆಸೆಟ್ ಪ್ರಾಧ್ಯಾಪಕರುಗಳ ಅರ್ಹತಾ ಪರೀಕ್ಷೆಯ ಮನೋವಿಜ್ಞಾನ ವಿಷಯದ ಪ್ರಶ್ನೆ ಪತ್ರಿಕೆಯನ್ನು ಕೇವಲ ಆಂಗ್ಲ ಭಾಷೆಯಲ್ಲಿ ನೀಡುತ್ತಿರುವ ನಿರ್ಧಾರವನ್ನು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾದ ಡಾ.ಪುರುಷೋತ್ತಮ ಬಿಳಿಮಲೆ ತೀವ್ರವಾಗಿ ಖಂಡಿಸಿದ್ದಾರೆ. ಈ ಕುರಿತಂತೆ ಇಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕರಿಗೆ ಪತ್ರ ಬರೆದಿರುವ ಡಾ.ಬಿಳಿಮಲೆ, ಪರೀಕ್ಷಾ ಪ್ರಾಧಿಕಾರದ ನಿರ್ಣಯ ಕನ್ನಡ ಮಾಧ್ಯಮ ವಿದ್ಯಾರ್ಥಿಗಳಿಗೆ ಮಾಡುತ್ತಿರುವ ಅನ್ಯಾಯವಷ್ಟೇ ಅಲ್ಲ, ಈ ನೆಲದ ಕಾನೂನನ್ನು ಉಲ್ಲಂಘಿಸುವ ವಿಷಯವಾಗಿರುತ್ತದೆ. ಈ ಕುರಿತಂತೆ ಅದು ಕೂಡಲೇ ಕ್ರಮವಹಿಸಿ ಕನ್ನಡ ಭಾಷೆಯಲ್ಲಿ ಪ್ರಶ್ನೆ ಪತ್ರಿಕೆಗಳನ್ನು ಒದಗಿಸುವುದು ಮತ್ತು ಈ ಅಚಾತುರ್ಯಕ್ಕೆ ಕಾರಣವೇನು ಎಂಬ ಕುರಿತು ವರದಿ ಸಲ್ಲಿಸುವುದು ಎಂದು ಸೂಚಿಸಿದ್ದಾರೆ. ಒಂದು ವೇಳೆ ಆಂಗ್ಲಭಾಷೆಯಲ್ಲಿ ಮಾತ್ರ ಪರೀಕ್ಷೆಯನ್ನು ನಿರ್ವಹಿಸಿ ಕನ್ನಡ ಭಾಷಾ ವಿದ್ಯಾರ್ಥಿಗಳಿಗೆ ಅನ್ಯಾಯವಾದಲ್ಲಿ ಮುಂದಿನ ಆಗುಹೋಗುಗಳಿಗೆ ತಾವೇ ಜವಾಬ್ದಾರಿಯನ್ನು ಹೊರಬೇಕಾಗುತ್ತದೆ ಎಂದು ಡಾ.ಬಿಳಿಮಲೆ ಪರೀಕ್ಷಾ ಪ್ರಾಧಿಕಾರದ ಮುಖ್ಯಸ್ಥರಿಗೆ ಎಚ್ಚರಿಸಿದ್ದಾರೆ. https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/ https://kannadanewsnow.com/kannada/important-information-for-the-public-follow-this-step-and-apply-online-to-get-e-khata/ https://kannadanewsnow.com/kannada/bengaluru-power-outages-in-these-areas-on-november-15/
ಮೈಸೂರು : ಬಿಜೆಪಿಯವರ ಮೇಲೆ ಅನೇಕ ಆರೋಪಗಳಿವೆ. ಕರೋನಾ ಸಂದರ್ಭದಲ್ಲಿ ಬಿಜೆಪಿ ಸರ್ಕಾರ ಮಾಡಿರುವ ಅವ್ಯವಹಾರಗಳ ಬಗ್ಗೆ ನಿವೃತ್ತ ನ್ಯಾಯಮೂರ್ತಿ ಡಿ.ಕುನ್ಹಾ ಆಯೋಗ ವರದಿ ಸಲ್ಲಿಸಿದ್ದು, 330 ರೂಪಾಯಿಗೆ ಸಿಗುವ ಪಿಪಿಇ ಕಿಟ್ ನ್ನು 2140 ರೂಪಾಯಿಗಳಿಗೆ ಖರೀದಿ ಮಾಡಿದ್ದಾರೆ. ಇದಕ್ಕೆ ನರೇಂದ್ರ ಮೋದಿ ಏನು ಹೇಳುತ್ತಾರೆ? ಭ್ರಷ್ಟಾಚಾರ ಮಾ ಡಿರುವುದು ಅವರ ಸರ್ಕಾರ ನಮ್ಮ ಸರ್ಕಾರದಲ್ಲಿ ಯಾವುದೇ ಭ್ರಷ್ಟಾಚಾರವಾಗಿಲ್ಲ.ಭ್ರಷ್ಟಾಚಾರ ಮಾಡುವುದೂ ಇಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಮೈಸೂರಿನಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಪ್ರಧಾನಮಂತ್ರಿಗಳು ಕಾಂಗ್ರೆಸ್ ಪಕ್ಷ ಹಗಲು ದರೋಡೆ ಮಾಡುತ್ತಿದೆ. ಸುಳ್ಳು ಹೇಳಿಕೊಂಡು ಅಧಿಕಾರಕ್ಕೆ ಬಂದಿದ್ದಾರೆ ಎಂದಿರುವ ಬಗ್ಗೆ ಮಾಧ್ಯಮದವರಿಗೆ ಮೇಲಿನಂತೆ ಪ್ರತಿಕ್ರಿಯೆ ನೀಡಿದರು. ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ನರೇಂದ್ರ ಮೋದಿ ಅವರು ಅಬಕಾರಿ ಇಲಾಖೆಯಲ್ಲಿ 700 ಕೋಟಿ ವಸೂಲಿ ಮಾಡಿದ್ದಾರೆ ಎಂದು ಸುಳ್ಳು ಹೇಳುತ್ತಿದ್ದಾರೆ. ಒಂದೇ ಒಂದು ರೂಪಾಯಿ ವಸೂಲಿ ಮಾಡಿರುವುದನ್ನು ನಿರೂಪಿಸಿದರೆ ನಾನು ರಾಜಕೀಯ ನಿವೃತ್ತಿ ಪಡೆಯುತ್ತೇನೆ ಎಂದು ಸವಾಲು…
ಬೆಂಗಳೂರು : 66/11 kV ರಾಜನಕುಂಟೆ ಸಬ್ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 15.11.2024 ರಂದು ಬೆಳಗ್ಗೆ 10:00 ಯಿಂದ ಮಧ್ಯಾಹ್ನ 04:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಗ್ರಾಹಕರು ಸಹಕರಿಸಬೇಕಾಗಿ ವಿನಂತಿಸಿದೆ. “ಹೊನ್ನೇನಹಳ್ಳಿ, ಸಿಂಗನಾಯಕನಹಳ್ಳಿ, ರಾಜನಕುಂಟೆ, ಅಡ್ದೇವಿಶ್ವನಾಥಪುರ, ಮಾರಸಂದ್ರ, ಶ್ರೀರಾಮನಹಳ್ಳಿ, ನೆಲಕುಂಟೆ, ಹನಿಯೂರು, ಚೆಲ್ಲಹಳ್ಳಿ, ಕರ್ಲಾಪುರ, ಕೆಎಂಎಫ್, ಇಟಗಲ್ಪುರ, ಅರ್ಕೇರಿ, ಬೈರಾಪುರ, ಬೂದಮನಹಳ್ಳಿ, ದಿಬ್ಬೂರು, ಕಾಕೋಲು, ಸೊನ್ನೇನಹಳ್ಳಿ. ಸೆಂಚುರ್ ಲೇಔಟ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. https://kannadanewsnow.com/kannada/important-information-for-the-public-follow-this-step-and-apply-online-to-get-e-khata/ https://kannadanewsnow.com/kannada/big-relief-to-satish-sail-in-belekeri-port-missing-case-hc-orders-suspension-of-sentence/
ಬೆಂಗಳೂರು: ಬೇಲೆಕೇರಿ ಬಂದರನಿಂದ ಅಕ್ರಮವಾಗಿ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಹಾಗೂ ಇತರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಪ್ರಕರಣದಲ್ಲಿ ನ್ಯಾಯಾಲಯ ವಿಧಿಸಿದ್ದಂತ ಶಿಕ್ಷೆಯ ಪ್ರಮಾಣವನ್ನು ಹೈಕೋರ್ಟ್ ಅಮಾನತ್ತಿನಲ್ಲಿಡಲು ಆದೇಶಿಸಿದೆ. ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಗೆ ಬೇಲೆಕೇರಿ ಬಂದರಿನಿಂದ ಅಕ್ರಮವಾಗಿ ಅದಿರು ಸಾಗಾಣಿಕೆ ಪ್ರಕರಣ ಸಂಬಂಧ 7 ವರ್ಷ ಜೈಲು ಶಿಕ್ಷೆಯನ್ನು ಕೋರ್ಟ್ ವಿಧಿಸಿತ್ತು. ಈ ತೀರ್ಪು ಪ್ರಶ್ನಿಸಿ ಹೈಕೋರ್ಟ್ ಗೆ ಮೇಲ್ಮನವಿಯನ್ನು ಸಲ್ಲಿಸಲಾಗಿತ್ತು. ಇಂದು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಅರ್ಜಿಯ ವಿಚಾರಣೆ ನಡೆಸಿ, ಶಿಕ್ಷೆಯ ಪ್ರಮಾಣವನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ. ಅಲ್ಲದೇ 6 ವಾರಗಳಲ್ಲಿ ದಂಡದ ಮೊತ್ತದಲ್ಲಿ ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡೋದಕ್ಕೆ ಸೂಚಿಸಿದೆ. ಹೈಕೋರ್ಟ್ ನ ಈ ಆದೇಶಸಿಂದ ಶಾಸಕ ಸತೀಶ್ ಸೈಲ್ ಹಾಗೂ ಇತರೆ ಆರೋಪಿಗಳಿಗೆ ಬಿಗ್ ರಿಲೀಫ್ ಸಿಕ್ಕಂತೆ ಆಗಿದೆ. ಅಲ್ಲದೇ ಜೈಲುಪಾಲಾಗಿರುವಂತ ಆರೋಪಿಗಳು ನಾಳೆ ಬಿಡುಗಡೆಯಾಗುವ ಸಾಧ್ಯತೆ ಇದೆ. https://kannadanewsnow.com/kannada/important-information-for-the-public-follow-this-step-and-apply-online-to-get-e-khata/ https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/
ಬೆಂಗಳೂರು: ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ ಸತೀಶ್ ಸೈಲ್ ಸೇರಿದಂತೆ ಇತರೆ ಆರೋಪಿಗಳಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅದೇ ಶಿಕ್ಷೆಯನ್ನು ಅಮಾನತ್ತಿನಲ್ಲಿಡಲು ಆದೇಶಿಸಿದೆ. ಇಂದು ಈ ಸಂಬಂಧ ಸಲ್ಲಿಸಿದ್ದಂತ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್ ನ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರನ್ನೊಳಗೊಂಡ ನ್ಯಾಯಪೀಠವು ಬೇಲೆಕೇರಿ ಬಂದರಿನಿಂದ ಅದಿರು ನಾಪತ್ತೆ ಪ್ರಕರಣದ ಶಿಕ್ಷೆಯನ್ನು ಅಮಾನತ್ತಿನಲ್ಲಿ ಇಡಲು ಆದೇಶಿಸಿದೆ. ಇನ್ನೂ ಹೈಕೋರ್ಟ್ ನಿಂದ ದಂಡದ ಮೊತ್ತವನ್ನು ಶೇ.25ರಷ್ಟು ಕೋರ್ಟ್ ಗೆ ಠೇವಣಿ ಇಡಲು ಸೂಚಿಸಿದೆ. ಈ ಮೂಲಕ ಶಾಸಕ ಸತೀಶ್ ಸೈಲ್ ಹಾಗೂ ಇತರರಿಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ. ಅಂದಹಾಗೇ ಈ ಕೇಸಲ್ಲಿ ಸತೀಶ್ ಸೈಲ್ ಗೆ 7 ವರ್ಷ ಶಿಕ್ಷೆಯನ್ನು ಕೋಟಿ ಕೋಟಿ ದಂಡವನ್ನು ವಿಧಿಸಲಾಗಿತ್ತು. https://kannadanewsnow.com/kannada/muda-case-fir-registered-against-complainant-snehamayi-krishna/ https://kannadanewsnow.com/kannada/important-information-for-the-public-follow-this-step-and-apply-online-to-get-e-khata/
ಬೆಂಗಳೂರು: ಸಾರ್ವಜನಿಕರಿಗೆ ಮಹತ್ವದ ಮಾಹಿತಿ ಎನ್ನುವಂತೆ ಬಿಬಿಎಂಪಿಯಿಂದ ಅಂತಿಮ ಇ-ಖಾತಾ ಪಡೆಯಲು ಆನ್ ಲೈನ್ ಮೂಲಕ ಅರ್ಜಿ ಸಲ್ಲಿಕೆ ಆರಂಭಿಸಿದೆ. ಅದು ಹೇಗೆ ಅಂತ ಮುಂದೆ ಓದಿ. ಬಿಬಿಎಂಪಿಯ ಅಂತಿಮ ಇ-ಖಾತಾ ಪಡೆಯಲು ಬಹು ವಿಧಾನಗಳು: 1. ಉಪ ನೊಂದಣಾಧಿಕಾರಿ ಕಚೇರಿಯಲ್ಲಿ ಆಸ್ತಿಗಳನ್ನು ತಕ್ಷಣವೇ ಮಾರಾಟ ಮಾಡಲು ಅಥವಾ ವರ್ಗಾಯಿಸಲು ಅಗತ್ಯವಿಲ್ಲದ ನಾಗರಿಕರು ಅಂತಿಮ ಇಖಾತಾ ಪಡೆಯಲು ಆತುರ ಅಗತ್ಯವಿಲ್ಲ. ಕರಡು ಇ-ಖಾತಾವನ್ನು ಡೌನ್ಲೋಡ್ ಮಾಡಿ ಮತ್ತು ನಂತರ ನಿಮ್ಮ ಅನುಕೂಲಕರ ಸಮಯದಲ್ಲಿ ಅಂತಿಮ ಇ-ಖಾತಾ ಪಡೆಯಲು ಹೆಚ್ಚುವರಿ ಮಾಹಿತಿಯನ್ನು ಆನ್ಲೈನ್ನಲ್ಲಿ ಸಲ್ಲಿಸಿ. ತುರ್ತಾಗಿ ಮಾರಾಟ/ವ್ಯವಹಾರ ಮಾಡಬೇಕಾದವರು, ತ್ವರಿತ ಅಂತಿಮ ಇಖಾತಾಗಾಗಿ ಪಾಲಿಕೆಯ ಸಹಾಯವಾಣಿ ಲಭ್ಯವಿರುತ್ತದೆ. 2. ಪಾಲಿಕೆಯು ಪ್ರತಿಯೊಬ್ಬ ನಾಗರಿಕರು ತಾವೇ ತಮ್ಮ ಇಖಾತಾವನ್ನು ಆನ್ಲೈನ್ನಲ್ಲಿ https://BBMPeAasthi.karnataka.gov.in ನಲ್ಲಿ ಪಡೆದುಕೊಳ್ಳಲು ಪ್ರೋತ್ಸಾಹಿಸುತ್ತದೆ ಮತ್ತು ವಿನಂತಿಸುತ್ತದೆ. 2. ತರಬೇತಿ ವೀಡಿಯೊ ಮೂಲಕ ಸ್ವತಃ ನೀವೇ ಇ-ಖಾತಾ ಪಡೆಯಿರಿ. (ನಾಗರಿಕನು ತಮ್ಮ ಸುತ್ತಲಿನಲ್ಲಿರುವ ಯಾರಿಂದಾದರೂ ಸಹಾಯ ಪಡೆದುಕೊಳ್ಳಬಹುದು) ಇಂಗ್ಲೀಷ್: https://youtu.be/GL8CWsdn3wo?si=Zu_EMs3SCw5-wQwT ಕನ್ನಡ: https://youtu.be/JR3BxET46po?si=jDoSKqy2V1IFUpf6…
ಬೆಂಗಳೂರು: ಮಾಜಿ ಸಿಎಂ ದಿವಂಗತ ಎಸ್.ನಿಜಲಿಂಗಪ್ಪ ಅವರ ಮನೆ ಮಾರಾಟಕ್ಕಿಟ್ಟಿರುವಂತ ಸುದ್ದಿ ವೈರಲ್ ಆಗಿತ್ತು. ಈಗ ಆ ಮನೆಯನ್ನು ರಾಜ್ಯ ಸರ್ಕಾರವೇ ಖರೀದಿಸಲು ನಿರ್ಧರಿಸಿದೆ. ರಾಜ್ಯ ಸರ್ಕಾರದಿಂದ ಇದಕ್ಕಾಗಿ 2020-21ನೇ ಸಾಲಿನ ಬಜೆಟ್ ನಲ್ಲಿ ಮಾಜಿ ಸಿಎಂ ಎಸ್ ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು 5 ಕೋಟಿ ಅನುದಾನ ಘೋಷಿಸಿತ್ತು. ಅದರಂತೆ 5 ಕೋಟಿ ರೂಪಾಯಿಯನ್ನು ನೀಡಿ ಎಸ್.ನಿಜಲಿಂಗಪ್ಪ ಅವರ ಮನೆಯನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. ಅಂದಹಾಗೇ ಚಿತ್ರದುರ್ಗದಲ್ಲಿರುವಂತ ಮಾಜಿ ಸಿಎಂ ದಿವಂಗತ ಎಸ್.ನಿಜಲಿಂಗಪ್ಪ ಅವರ ನಿವಾಸವನ್ನು ಮಾರಾಟಕ್ಕೆ ಇಟ್ಟಂತ ವಿಚಾರ ವೈರಲ್ ಆಗಿತ್ತು. ಅಲ್ಲದೇ ಸ್ಮಾರಕವಾಗಿ ಮಾಡಬೇಕಿದ್ದಂತ ರಾಜ್ಯ ಸರ್ಕಾರದ ನಿರ್ಲಕ್ಷ್ಯವನ್ನು ಸಾರ್ವಜನಿಕರು ಆಕ್ರೋಶದ ಮೂಲಕ ಹೊರ ಹಾಕಿದ್ರು. ಈ ಬೆನ್ನಲ್ಲೇ 5 ಕೋಟಿಯಲ್ಲಿ ಎಸ್.ನಿಜಲಿಂಗಪ್ಪ ಮನೆಯನ್ನು ಖರೀದಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ. https://kannadanewsnow.com/kannada/muda-case-fir-registered-against-complainant-snehamayi-krishna/ https://kannadanewsnow.com/kannada/breaking-marakumbi-dalit-atrocities-case-high-court-grants-bail-to-97-sentenced-to-life-imprisonment/