Author: kannadanewsnow09

ಶಿವಮೊಗ್ಗ: ಜಿಲ್ಲೆಯ ಹೊಸನಗರದಲ್ಲಿ ಟಿಪ್ಪರ್ ಲಾರಿಗೆ ಓಮ್ನಿ ಕಾರು ಡಿಕ್ಕಿಯಾದ ಪರಿಣಾಮ, 6 ಜನರು ಗಂಭೀರವಾಗಿ ಗಾಯಗೊಂಡು, 6 ಜನರು ಸಣ್ಣಪುಟ್ಟ ಗಾಯವಾಗಿರೋ ಘಟನೆ ನಡೆದಿದೆ. ಶಿವಮೊಗ್ಗ ಜಿಲ್ಲೆಯ ಹೊಸನಗರ ತಾಲೂಕಿನ ಎಂ.ಗುಡ್ಡೆಕೊಪ್ಪ ಬಳಿಯಲ್ಲಿ ಟಿಪ್ಪರ್ ಲಾರಿಗೆ ಓಮ್ನಿ ಕಾರು ಡಿಕ್ಕಿಯಾಗಿದೆ. ಈ ಪರಿಣಾಮ ಓಮ್ನಿಯಲ್ಲಿ ತೆರಳುತ್ತಿದ್ದಂತ 6 ಜನರು ಗಂಭೀರವಾಗಿ ಗಾಯಗೊಂಡಿದ್ದರೇ, ಇನ್ನೂ 6 ಜನರಿಗೆ ಸಣ್ಣಪುಟ್ಟ ಗಾಯವಾಗಿರೋದಾಗಿ ತಿಳಿದು ಬಂದಿದೆ. ಗಾಯಾಳುಗಳು ಎಲ್ಲರೂ ಹೊಸನಗರ ತಾಲೂಕಿನ ಬುಲ್ಡೋಜರ್ ಗುಡ್ಡ ಗ್ರಾಮದವರು. ಗಾಯಾಳುಗಳನ್ನು ಹೊಸನಗರ ತಾಲೂಕು ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಈ ಸಂಬಂಧ ಹೊಸನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/parents-are-you-giving-bombay-mithai-to-your-children-heres-the-shocking-news/ https://kannadanewsnow.com/kannada/aleart-union-health-ministry-issues-warning-against-antibiotic-tablets/

Read More

ಬೆಂಗಳೂರು: ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ಕರ್ನಾಟಕ ಬಿಜೆಪಿಯಿಂದ ಮಾಡಲಾಗಿದ್ದಂತ ಮಾನಹಾನಿ ಕೇಸ್ ರದ್ದು ಪಡಿಸಲು ಹೈಕೋರ್ಟ್ ನಕಾರ ವ್ಯಕ್ತ ಪಡಿಸಿದೆ. ಈ ಮೂಲಕ ಕರ್ನಾಟಕ ಬಿಜೆಪಿಗೆ ಬಿಗ್ ಶಾಕ್ ನೀಡಲಾಗಿದೆ. 2019ರಲ್ಲಿ ಶಿವಾಜಿನಗರದ ಕಾಂಗ್ರೆಸ್ ಶಾಸಕ ರಿಜ್ವಾನ್ ಅರ್ಹಷದ್ ಅವರ ಬಗ್ಗೆ ಕರ್ನಾಟಕ ಬಿಜೆಪಿಯಿಂದ ನಕಲಿ ವೋಟರ್ ಐಡಿ ಕುರಿತಂತೆ ಟ್ವಿಟ್ ಮಾಡಲಾಗಿತ್ತು. ಈ ಟ್ವಿಟ್ ಮೂಲಕ ನನ್ನ ಮಾನಹಾನಿಯಾಗಿದೆ ಎಂಬುದಾಗಿ ಕೇಸ್ ಹಾಕಿದ್ದರು. ಬಿಜೆಪಿ ವಿರುದ್ಧ ಶಾಸಕ ರಿಜ್ವಾನ್ ಅರ್ಷದ್ ವಿರುದ್ಧ ದೂರು ನೀಡಿದ್ದರು. ಆದ್ರೇ ಈ ಪ್ರಕರಣ ಪ್ರಶ್ನಿಸಿ ಅಂದು ಬಿಜೆಪಿ ರಾಜ್ಯಾಧ್ಯಕ್ಷರಾಗಿದ್ದಂತ ನಳೀನ್ ಕುಮಾರ್ ಕಟೀಲ್ ಅವರು ಹೈಕೋರ್ಟ್ ಮೆಟ್ಟಿಲೇರಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ನ್ಯಾಯಮೂರ್ತಿ ಕೃಷ್ಣಾ ದೀಕ್ಷಿತ್ ಅವರನ್ನೊಳಗೊಂಡ ನ್ಯಾಯಪೀಠವು, ರಾಜಕೀಯ ಪಕ್ಷದ ವಿರುದ್ಧ ಕೇಸ್ ಮುಂದುವರೆಸಬಹುದು ಎಂಬುದಾಗಿ ಅಭಿಪ್ರಾಯ ವ್ಯಕ್ತ ಪಡಿಸಿದೆ. ಅಲ್ಲದೇ ಕೇಸ್ ರದ್ದು ಪಡಿಸೋದಕ್ಕೆ ನಕಾರ ವ್ಯಕ್ತಪಡಿಸಿದೆ. https://kannadanewsnow.com/kannada/parents-are-you-giving-bombay-mithai-to-your-children-heres-the-shocking-news/ https://kannadanewsnow.com/kannada/aleart-union-health-ministry-issues-warning-against-antibiotic-tablets/

Read More

ಬೆಂಗಳೂರು : ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಕನಿಷ್ಠ 20 ಸ್ಥಾನಗಳನ್ನು ಈ ಬಾರಿ ಗೆದ್ದೇ ಗೆಲ್ಲುತ್ತೇವೆ. ಯಾರು ಏನೇ ಹೇಳಿದರೂ ನಾವು ನೂರಕ್ಕೆ ನೂರು ಗೆಲ್ಲುತ್ತೇವೆ. ಒಗ್ಗಟ್ಟಿನಿಂದ ಸಣ್ಣ ಪುಟ್ಟ ಭಿನ್ನಾಭಿಪ್ರಾಯಗಳಿದ್ದರೆ ಅದನ್ನು ಮರೆತು ಗೆಲ್ಲಲೇಬೇಕು ಎಂಬ ಛಲ ದಿಂದ ಕೆಲಸ ಮಾಡಬೇಕು ಎಂದು ಮುಖ್ಯ ಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಅವರು ಇಂದು ಕೆ.ಪಿ.ಸಿ.ಸಿ. ಕಛೇರಿಯಲ್ಲಿ ಮುದ್ದಹಮುಮೇಗೌಡ ಅವರ ಕಾಂಗ್ರೆಸ್ ಪಕ್ಷ ಸೇರ್ಪಡೆ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮಾತನಾಡಿದರು. ಮುದ್ದುಹನುಮೇ ಗೌಡರು ಮೂಲತಃ ಕಾಂಗ್ರೆಸ್ ನವರು. ಕಳೆದ ವಿಧಾನಸಭೆಗೂ ಮುನ್ನ ಕಾಂಗ್ರೆಸ್ ತೊರೆದು ಬಿಜೆಪಿ ಸೇರಿದ್ದರು. ಅವರ ತಪ್ಪಿನ ಅರಿವಾಗಿ ಕಾಂಗ್ರೆಸ್ ಪಕ್ಷಕ್ಕೆ ಮರಳಿ ಸೇರ್ಪಡೆಯಾಗಿದ್ದಾರೆ. ತಪ್ಪು ಮಾಡಿದ್ದೇನೆ, ಕ್ಷಮೆ ಇರಲಿ ಎಂದು ಅವರು ಹೇಳಿದ್ದಾರೆ. ತಪ್ಪು ಮಾಡಿದ ಮೇಲೆ ಪಶ್ಚಾತ್ತಾಪ ಮುಖ್ಯ. ಪಶ್ಚಾತ್ತಾಪಕ್ಕಿಂತ ದೊಡ್ಡ ಶಿಕ್ಷೆ ಮತ್ತೊಂದಿಲ್ಲ. ಪಕ್ಷಕ್ಕೆ ಯಾರೇ ಬಂದರೂ, ಬೇರೆ ನಮ್ಮ ಪಕ್ಷದವರನ್ನೂ ನಮ್ಮ ಪಕ್ಷಕ್ಕೆ ಸೇರಿಸಿಕೊಳ್ಳುತ್ತೇವೆ ಎಂದು ಪಕ್ಷದ ಅಧ್ಯಕ್ಷರು ಹೇಳಿದ್ದಾರೆ. ಎಲ್ಲಾ ಜಿಲ್ಲೆಯ…

Read More

ಬೆಂಗಳೂರು: ಆಡಳಿತ ಪಕ್ಷದವರು ಸದನದ ಎಲ್ಲ ನೀತಿ ನಿಯಮಗಳನ್ನು ಗಾಳಿಗೆ ತೂರಿದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಮತ್ತು ಶಾಸಕ ಬಿ.ವೈ.ವಿಜಯೇಂದ್ರ ಅವರು ಖಂಡಿಸಿದರು. ವಿಧಾನಸೌಧದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಸರಕಾರದ ಕ್ರಮಕ್ಕೆ ಸಭಾಧ್ಯಕ್ಷರು ಕೂಡ ಬೆಂಬಲ ನೀಡಿರುವುದು ದುರದೃಷ್ಟ ಎಂದು ಆಕ್ಷೇಪ ಸೂಚಿಸಿದರು. ಲೋಕಸಭಾ ಚುನಾವಣೆಯಲ್ಲಿ ಸೋಲನ್ನು ಎದುರು ನೋಡುತ್ತಿರುವ ಕಾಂಗ್ರೆಸ್ ಸರಕಾರವು, ರಾಜ್ಯದಲ್ಲಿ ಅಭಿವೃದ್ಧಿಯನ್ನೇ ಮಾಡದ ನಾಲಾಯಕ್ ಸರಕಾರವಾಗಿದೆ ಎಂದು ಅವರು ದೂರಿದರು. ಈ ನಾಲಾಯಕ್ ಕಾಂಗ್ರೆಸ್ ಸರಕಾರಕ್ಕೆ ಗ್ಯಾರಂಟಿಗಳಿಂದ ತಮ್ಮ ಗೆಲುವು ಸಾಧ್ಯವಿಲ್ಲ ಎಂಬ ಅರಿವಾಗಿದೆ. ಅದಕ್ಕಾಗಿಯೇ ಪದೇಪದೇ ನಿರ್ಣಯ ಮಂಡಿಸಿ, ಕೇಂದ್ರ ಸರಕಾರದ ಮೇಲೆ ಗೂಬೆ ಕೂರಿಸಿ ತಮ್ಮ ರಾಜಕೀಯ ಬೇಳೆ ಬೇಯಿಸುವ ಪ್ರಯತ್ನ ಮಾಡುತ್ತಿದ್ದಾರೆ ಎಂದು ಅವರು ತೀವ್ರವಾಗಿ ಖಂಡಿಸಿದರು. ಸದನದ ಗೌರವವನ್ನು ಆಡಳಿತ ಪಕ್ಷವಾದ ಕಾಂಗ್ರೆಸ್ ನಾಶ ಮಾಡುತ್ತಿದೆ. ಬಿಜೆಪಿ ಈ ವಿಷಯವನ್ನು ಬಹಳ ಗಂಭೀರವಾಗಿ ತೆಗೆದುಕೊಂಡಿದೆ. ಹಾಗಾಗಿ ನಾವು ಸದನದಲ್ಲಿ ಈ ಕುರಿತು ಧ್ವನಿ ಎತ್ತಿದ್ದೇವೆ. ಕಾನೂನು ಸಚಿವರ…

Read More

ಬೆಂಗಳೂರು: ಕಳೆದ ಲೋಕಸಭಾ ಚುನಾವಣೆಯ ಸಂದರ್ಭದಲ್ಲಿ ಟಿಕೆಟ್ ಸಿಗದ ಕಾರಣ ಬಿಜೆಪಿ ಪಕ್ಷಕ್ಕೆ ಮಾಜಿ ಸಂಸದ ಮುದ್ದಹನುಮೇಗೌಡ ಸೇರ್ಪಡೆಗೊಂಡಿದ್ದರು. ಇಂತಹ ಅವರು ಮತ್ತೆ ಘರ್ ವಾಪಸಿ ಎನ್ನುವಂತೆ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾರೆ. ಈ ಪಕ್ಷ ಸೇರ್ಪಡೆ ಕಾರ್ಯಕ್ರಮದ ಬಳಿಕ ಡಿಸಿಎಂ ಡಿ.ಕೆ ಶಿವಕುಮಾರ್ ಏನು ಹೇಳಇದ್ರು ಅಂತ ಮುಂದೆ ಓದಿ. ಮಾಜಿ ಸಂಸದ ಮುದ್ದಹನುಮೇಗೌಡ ಕಾಂಗ್ರೆಸ್ ಸೇರ್ಪಡೆಗೊಂಡ ನಂತ್ರ ಮಾತನಾಡಿದಂತ ಅವರು, ಮುದ್ದಹನುಮೇಗೌಡರು ಇಂದು ಯಾವುದೇ ಷರತ್ತು ಹಾಕದೇ ಪಕ್ಷಕ್ಕೆ ಸೇರಿದ್ದಾರೆ. ನಾವು ಯಾರಿಗೆ ಟಿಕೆಟ್ ನೀಡುತ್ತೇವೋ ಅವರ ಪರವಾಗಿ ಕೆಲಸ ಮಾಡಬೇಕು. ಇದು ಕಾಂಗ್ರೆಸ್ ಪಕ್ಷದ ಶಿಸ್ತು. ಮುದ್ದಹನುಮೇಗೌಡರ ಪಕ್ಷ ಸೇರ್ಪಡೆ ವಿಚಾರವಾಗಿ ರಾಜಣ್ಣ, ವಾಸು ಸೇರಿದಂತೆ ಜಿಲ್ಲೆಯ ಎಲ್ಲಾ ನಾಯಕರು ನಮ್ಮ ಜತೆ ಚರ್ಚೆ ಮಾಡಿ ಈ ತೀರ್ಮಾನಕ್ಕೆ ಬಂದಿದ್ದೇವೆ ಎಂದರು. ನಮಗೆ ಏನೇ ನೋವಾಗಿದ್ದರು ನಮಗೆ ವ್ಯಕ್ತಿಗಿಂತ ಪಕ್ಷ ಮುಖ್ಯ. ಮಹಾತ್ಮಾ ಗಾಂಧಿ ಅವರಿಂದ ನೆಹರೂ ಕುಟುಂಬ ಮಾಡಿರುವ ತ್ಯಾಗದ ಮುಂದೆ ನಮ್ಮ ತ್ಯಾಗ ಗೌಣ. ನೆಹರೂ ಹಾಗೂ…

Read More

ಬೆಂಗಳೂರು: ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ನಿರ್ಣಯಗಳನ್ನು ಕೈಗೊಂಡ ರಾಜ್ಯ ಸರ್ಕಾರದ ನಡೆಯನ್ನು ವಿಧಾನಸಭೆಯ ಪ್ರತಿಪಕ್ಷ ನಾಯಕ ಆರ್.ಅಶೋಕ ತೀವ್ರವಾಗಿ ಖಂಡಿಸಿದ್ದಾರೆ. ಬಜೆಟ್ ಮಂಡನೆಯ ಸಾಂವಿಧಾನಿಕ ಕರ್ತವ್ಯವನ್ನು ರಾಜಕೀಯ ಭಾಷಣವಾಗಿ ದುರ್ಬಳಕೆ ಮಾಡಿಕೊಂಡು ಸದನದ ಹಾಗೂ ಆಯವ್ಯಯದ ಪಾವಿತ್ರ್ಯತೆಯನ್ನು ಕಾಂಗ್ರೆಸ್ ಸರ್ಕಾರ ಹಾಳು ಮಾಡಿದೆ. ಈಗ ಕೇಂದ್ರ ಸರ್ಕಾರದ ವಿರುದ್ಧ ರಾಜಕೀಯ ಪ್ರೇರಿತ ನಿರ್ಣಯ ಮಂಡಿಸುವ ಮೂಲಕ ಮತೊಮ್ಮೆ ಸದನದ ಪಾವಿತ್ರ್ಯತೆಗೆ ಅಪಚಾರ ಮಾಡಲಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಒಂದು ಸುಳ್ಳನ್ನು ನೂರು ಬಾರಿ ಹೇಳಿದರೆ ಅದನ್ನು ಸತ್ಯ ಮಾಡಬಹುದು, ತಮ್ಮ ಸರ್ಕಾರದ ವೈಫಲ್ಯಗಳಿಂದ ಜನರ ಗಮನ ಬೇರೆಡೆ ಸೆಳೆಯಬಹುದು ಎಂಬ ಭ್ರಮೆಯಲ್ಲಿರುವ ಸಿಎಂ ಸಿದ್ದರಾಮಯ್ಯನವರು ಪದೇ ಪದೇ ಕೇಂದ್ರದ ಮೇಲೆ ಆರೋಪ ಹೊರಿಸುವ ಮೂಲಕ ಒಂದು ಕಪೋಲಕಲ್ಪಿತ, ಬೋಗಸ್ ರಾಜಕೀಯ ಕಥೆ ಸೃಷ್ಟಿಸಲು ಹೊರಟಿದ್ದಾರೆ. ಕಾಂಗ್ರೆಸ್ ಸರ್ಕಾರದ ಈ ಹುನ್ನಾರವನ್ನು ರಾಜ್ಯ ಬಿಜೆಪಿ ತೀವ್ರವಾಗಿ ಖಂಡಿಸುತ್ತದೆ ಮತ್ತು ಈ ರಾಜಕೀಯ ಪ್ರೇರಿತ ನಿರ್ಣಯವನ್ನು ವಿರೋಧಿಸುತ್ತದೆ ಎಂದು ಅವರು ಹೇಳಿದ್ದಾರೆ.…

Read More

ಬೆಂಗಳೂರು : ‘ಪ್ರೀಮಿಯಂ ಎಫ್ಎಆರ್’ ಖರೀದಿ ಮತ್ತು ಮಾರಾಟಕ್ಕೆ ಅವಕಾಶ ಕಲ್ಪಿಸುವ ಮಸೂದೆಗೆ ವಿಧಾನ ಪರಿಷತ್ತಿನಲ್ಲಿ ಸುದೀರ್ಘ ಚರ್ಚೆ ಹಾಗೂ ಬಿಜೆಪಿ ಸದಸ್ಯರ ಸಭಾತ್ಯಾಗದ ನಡುವೆ ಗುರುವಾರ ಅಂಗೀಕಾರ ದೊರೆಯಿತು. ಬೆಂಗಳೂರು ನಗರಾಭಿವೃದ್ಧಿ ಖಾತೆ ಹೊಂದಿರುವ ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ವಿಧಾನಸಭೆಯಲ್ಲಿ ಅಂಗೀಕಾರ ಸ್ವರೂಪದಲ್ಲಿರುವ ‘ಕರ್ನಾಟಕ ಪಟ್ಟಣ ಮತ್ತು ಗ್ರಾಮಾಂತರ ಯೋಜನೆ (ತಿದ್ದುಪಡಿ) ಮಸೂದೆ-2024’ ಅನ್ನು ವಿಧಾನ ಪರಿಷತ್ನಲ್ಲಿ ಮಂಡಿಸಿದರು. ಮಾರ್ಗಸೂಚಿ ದರದ ಶೇ 40 ರಷ್ಟು ಶುಲ್ಕವನ್ನು ಸ್ಥಳೀಯ ಯೋಜನಾ ಪ್ರಾಧಿಕಾರ ಅಥವಾ ನಗರ ಸ್ಥಳೀಯ ಸಂಸ್ಥೆಗಳಿಗೆ ಪಾವತಿಸುವ ಮೂಲಕ ಬಹುಮಹಡಿ ಕಟ್ಟಡಗಳಲ್ಲಿ ಹೆಚ್ಚುವರಿ ಅಂತಸ್ತುಗಳನ್ನು ನಿರ್ಮಿಸಬಹುದು ಹಾಗೂ ಎಫ್ಎಆರ್ ಗಳನ್ನು ಬೇರೆಯವರಿಗೆ ಮಾರಾಟ ಮಾಡುವ ಅವಕಾಶವನ್ನು ಈ ಮಸೂದೆಯಲ್ಲಿ ಕಲ್ಪಿಸಲಾಗಿದೆ. ಪ್ರೀಮಿಯಂ ಎಫ್ಎಆರ್ ಮಿತಿಯನ್ನು ಶೇ 0.4 ಕ್ಕೆ ನಿಗದಿಪಡಿಸಲಾಗಿದೆ. ಹಾಗೂ ಟಿಡಿಆರ್ (Transferable Development Rights) ಬಳಸಿ ನಿರ್ಮಿಸಿರುವ ಕಟ್ಟಡದ ಎಫ್ಎಆರ್ ಮಿತಿಯು ಶೇ 0.6 ರಷ್ಟನ್ನು ಮೀರುವಂತಿಲ್ಲ ಎಂದು ಹೇಳಲಾಗಿದೆ. ಇದರಿಂದಾಗಿ ಸ್ಥಳೀಯ ಸಂಸ್ಥೆಗಳ ಆದಾಯ ಹೆಚ್ಚಾಗುತ್ತದೆ…

Read More

ಬೆಂಗಳೂರು: ನಾನು ಬಿಜೆಪಿಯನ್ನು ತೊರೆಯುತ್ತಿದ್ದೇನೆ ಎಂಬುದು ಸುಳ್ಳು. ನಾನು ಬಿಜೆಪಿ ಬಿಡಲ್ಲ. ಕಾಂಗ್ರೆಸ್ ಸೇರುವ ಅವಶ್ಯಕತೆಯೂ ನನಗಿಲ್ಲ ಎಂಬುದಾಗಿ ಮಾಜಿ ಸಚಿವ ಡಾ.ಕೆ ಸುಧಾಕರ್ ಸ್ಪಷ್ಟ ಪಡಿಸಿದ್ದಾರೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ಅವರು, ಪ್ರಧಾನಿ ನರೇಂದ್ರ ಮೋದಿಯವರ  ನಾಯಕತ್ವ ಹಾಗೂ ಬಿಜೆಪಿ ಪಕ್ಷದ ರಾಷ್ಟ್ರೀಯತೆ, ಸಾಂಸ್ಕೃತಿಕ ಪುನರುತ್ಥಾನದ ತತ್ವ ಸಿದ್ಧಾಂತಗಳ ಮೇಲೆ ನಂಬಿಕೆ ಇಟ್ಟು ನಾನು ಬಿಜೆಪಿ ಪಕ್ಷ ಸೇರಿದ್ದು, ಬಿಜೆಪಿ ಪಕ್ಷ ತೊರೆಯುವ ಯೋಚನೆಯಾಗಲಿ, ಉದ್ದೇಶವಾಗಲಿ ಅಥವಾ ಅವಶ್ಯಕತೆಯಾಗಲಿ ನನಗಿಲ್ಲ ಎಂಬುದಾಗಿ ಹೇಳಿದ್ದಾರೆ. ಜನರ ದಿಕ್ಕು ತಪ್ಪಿಸುವ ಉದ್ದೇಶದಿಂದ ನಾನು ಪಕ್ಷ ತೊರೆಯುತ್ತೇನೆ ಎಂಬ ಊಹಾಪೋಹಗಳನ್ನು ಕೆಲವರು ಪದೇ ಪದೇ ಹುಟ್ಟುಹಾಕುತ್ತಿದ್ದು, ಮಾಧ್ಯಮಗಳು ಇಂತಹ ವದಂತಿಗಳಿಗೆ, ಗಾಳಿಸುದ್ದಿಗಳಿಗೆ ಕಿವಿಗೊಡಬಾರದು ಎಂದು ಮನವಿ ಮಾಡಿದ್ದಾರೆ. https://twitter.com/DrSudhakar_/status/1760593492026257656 https://kannadanewsnow.com/kannada/parents-are-you-giving-bombay-mithai-to-your-children-heres-the-shocking-news/ https://kannadanewsnow.com/kannada/aleart-union-health-ministry-issues-warning-against-antibiotic-tablets/

Read More

ಬೆಂಗಳೂರು: ವಿಧಾನಸಭೆಯಲ್ಲಿ ಇಂದು ಕೇಂದ್ರ ಸರ್ಕಾರದ ಅನುದಾನ ತಾರತಮ್ಯ ಖಂಡಿಸುವಂತ ನಿರ್ಣಯವನ್ನು ರಾಜ್ಯ ಸರ್ಕಾರ ಮಂಡಿಸಿ, ಅಂಗೀಕಾರ ಪಡೆದುಕೊಂಡಿದೆ. ವಿಧಾನಸಭೆಯಲ್ಲಿ ನಿರ್ಣಯ ಮಂಡಿಸಿ ಮಾತನಾಡಿದಂತ ಸಚಿವ ಹೆಚ್.ಕೆ ಪಾಟೀಲ್ ಅವರು,  ರೈತರು ಬೆಳೆದ ಬೆಳೆಗಳಿಗೆ ಲಾಭದಾಯಕ ಬೆಲೆ ನಿಗದಿಯಾಗಬೇಕೆಂಬುದು ಭಾರತ ದೇಶದ ಪ್ರತಿಯೊಬ್ಬ ರೈತನ ಆಶಯ. ಈ ಸದಾಶಯವನ್ನು ಅನುಷ್ಠಾನಗೊಳಿಸಬೇಕೆಂದು ಮತ್ತು ಕೃಷಿಯನ್ನು ಲಾಭದಾಯಕಗೊಳಿಸಬೇಕೆಂಬುದು ಎಲ್ಲಾ ಜನಪರ ಪ್ರಜಾಸತ್ತಾತ್ಮಕ ನಾಗರೀಕ ಸರ್ಕಾರಗಳ ಒತ್ತಾಸೆಯಾಗಿದೆ. ರೈತರ ಸ್ಥಿತಿಗತಿಗಳನ್ನು ಅಧ್ಯಯನ ಮಾಡಿದ ಡಾ. ಎಂ.ಎಸ್. ಸ್ವಾಮಿನಾಥನ್ ವರದಿಯನ್ವಯ ಕೃಷಿಕನ ಸಾಗುವಳಿ ವೆಚ್ಚದ ಶೇ.50% ರಷ್ಟನ್ನು ಸೇರಿಸಿ ಕನಿಷ್ಠ ಬೆಂಬಲ ಬೆಲೆಯನ್ನು ಘೋಷಿಸಬೇಕೆಂದು ತನ್ಮೂಲಕ ಹಸಿರು ಕ್ರಾಂತಿಯನ್ನು ಸಾಧಿಸಿ ರಾಷ್ಟçದಲ್ಲಿ ಕೃಷಿಯನ್ನು ಅವಲಂಬಿತ ಉದ್ಯೋಗವನ್ನಾಗಿ ನಿರೀಕ್ಷಿಸಬಹುದೆಂಬ ನಿರೀಕ್ಷೆಯನ್ನು ಸಾಧಿಸುವಲ್ಲಿ ಪ್ರಗತಿಯನ್ನು ಸಾಧಿಸಿಲ್ಲ ಅಥವಾ ನಿರೀಕ್ಷಿತ ಮಟ್ಟದಲ್ಲಿ ಬದಲಾವಣೆಯನ್ನು ತರುವಲ್ಲಿ ವಿಫಲವಾಗಿವೆ ಎಂದರು. “ಎಲ್ಲಾ ಕೃಷಿ ಉತ್ಪನ್ನಗಳಿಗೂ ಕನಿಷ್ಠ ಲಾಭಾಂಶದ ಬೆಂಬಲ ಬೆಲೆಯನ್ನು ಸುನಿಶ್ಚಿತಗೊಳಿಸುವ (ಗ್ಯಾರಂಟಿ) ಮತ್ತು ರೈತನ ಉತ್ಪನ್ನಗಳ ಬೆಲೆಯನ್ನು ಸ್ವಾಮಿನಾಥನ್ ಸಮಿತಿಯ ಶಿಫಾರಸ್ಸುಗಳ ಆಧಾರದ…

Read More

ಕಲಬುರ್ಗಿ: 10ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿನಿಯನ್ನು 9ನೇ ತರಗತಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಒನ್ ಸೈಡ್ ಪ್ರೀತಿ ಮಾಡಿದ್ದಾನೆ. ಆದರೇ ಆತನ ಪ್ರೀತಿಯನ್ನು ಅಪ್ರಾಪ್ತ ಬಾಲಕಿ ನಿರಾಕರಿಸಿದ್ದಾಳೆ. ಇಷ್ಟಕ್ಕೇ ಸಿಟ್ಟಾದಂತ ಆತ, ಆಕೆ ತೆರಳುತ್ತಿದ್ದಂತ ಬಸ್ ಹಿಂಬಾಲಿಸಿ ಬೈಕ್ ನಲ್ಲಿ ತೆರಳಿ, ಕೆಳಗೆ ಇಳಿಸಿಕೊಂಡು ಚಾಕುವಿನಿಂದ ಇರಿದಿರುವ ಘಟನೆ ಕಲಬುರ್ಗಿಯಲ್ಲಿ ನಡೆದಿದೆ. ಕಲಬುರ್ಗಿ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಅಟ್ಟೂರು ಕ್ರಾಸ್ ಬಳಿಯಲ್ಲಿ ಇಂದು ಜಿಲ್ಲೆಯ ಜನತೆ ಬೆಚ್ಚಿ ಬೀಳಿಸುವಂತ ಘಟನೆ ನಡೆದಿದೆ. ಅಲ್ಲದೇ ಸಿನಿಮೀಯ ರೀತಿಯಲ್ಲಿ ನಡೆದಂತ ಘಟನೆಯಿಂದ ಜನರು ಆಘಾತಗೊಳ್ಳುವಂತೆ ಮಾಡಿದೆ. ಅದೇ 9ನೇ ತರಗತಿಯಲ್ಲಿ ಓದುತ್ತಿದ್ದಂತ 17 ವರ್ಷದ ಬಾಲಕ, 10ನೇ ತರಗತಿಯಲ್ಲಿ ಓದುತ್ತಿದ್ದಂತ ಬಾಲಕಿಯನ್ನು ಪ್ರೀತಿಸುವಂತೆ ಮಾಡಿದ ಮನವಿ ನಿರಾಕರಿಸಿದಂತ ನಂತ್ರ ಆದಂತ ಘಟನೆಯಾಗಿದೆ. 9ನೇ ತರಗತಿ ಬಾಲಕ, 10ನೇ ತರಗತಿ ಬಾಲಕಿಯನ್ನು ಪ್ರೀತಿಸುವಂತೆ ಪೀಡಿಸಿದರೂ, ಆತನ ಪ್ರೀತಿಯನ್ನು ಒಪ್ಪಿಕೊಂಡಿಲ್ಲ. ಇಷ್ಟಕ್ಕೇ ಕೋಪಗೊಂಡ ಆ ಅಪ್ರಾಪ್ತ ಬಾಲಕ, ಇಂದು ಶಾಲೆಗೆ ತೆರಳುತ್ತಿದ್ದಂತ ಬಾಲಕಿಯ ಬಸ್ ಅನ್ನು ಬೈಕ್ ನಲ್ಲಿ…

Read More