Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಗರದಲ್ಲಿ ವಿದ್ಯುತ್ ದರ ಹೆಚ್ಚಳ, ಹಾಲಿನ ದರ ಹೆಚ್ಚಳ ಸೇರಿದಂತೆ ಅಗತ್ಯ ವಸ್ತುಗಳ ದರ ಏರಿಕೆಯಿಂದ ಜನರು ತತ್ತರಿಸಿ ಹೋಗಿದ್ದಾರೆ. ಇದರ ನಡುವೆ ಶೀಘ್ರವೇ ನೀರಿನ ದರ ಏರಿಕೆ ಮಾಡುವಂತ ಸುಳಿವನ್ನು ಡಿಸಿಎಂ ಡಿಕೆ ಶಿವಕುಮಾರ್ ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು 2014ರಿಂದ ಬೆಂಗಳೂರಲ್ಲಿ ಕಾವೇರಿ ನೀರಿನ ದರವನ್ನು ಹೆಚ್ಚಳ ಮಾಡಿಲ್ಲ. ಹೀಗಾಗಿ ನೀರು ನಿರ್ವಹಣೆಯ ಹೊರೆ ಹೆಚ್ಚಾಗುತ್ತಿದೆ. ಇದರಿಂದ ನಷ್ಟ ಉಂಟಾಗುತ್ತಿದೆ ಎಂದರು. ತಿಂಗಳಿಗೆ ನೀರಿನ ದರ ಕಡಿಮೆ ಇದ್ದು, ನಿರ್ವಹಣಾ ವೆಚ್ಚ ಹೆಚ್ಚಿರುವ ಕಾರಣ 85 ಕೋಟಿ ಹೊರೆಯಾಗುತ್ತಿದೆ. ವರ್ಷಕ್ಕೆ 1 ಸಾವಿರ ಕೋಟಿ ನಷ್ಟವಾಗುತ್ತಿದೆ. ಈ ಹಿನ್ನಲೆಯಲ್ಲಿ ಬೆಂಗಳೂರಲ್ಲಿ ಶೀಘ್ರವೇ ನೀರಿನ ದರ ಹೆಚ್ಚಳ ಮಾಡುವುದು ಅನಿವಾರ್ಯವಾಗಿದೆ ಎಂದರು. ಕಳೆಗ ಬಾರಿ ನೀರಿನ ಅಭಾವದಿಂದ ದೊಡ್ಡ ಸಮಸ್ಯೆ ಆಗಿತ್ತು. ಈ ಬಾರಿ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ. ಜಲಮಂಡಳಿಗೆ ವಾರ್ಷಿಕ 1 ಸಾವಿರ ಕೋಟಿ ನಷ್ಟ ಉಂಟಾಗುತ್ತಿದೆ. ಈ ನಟ್ಟವನ್ನು…
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿಧಾನಸೌಧ ಸಭಾಂಗಣದಲ್ಲಿ ನಡೆದ ರಾಜ್ಯಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆಯ ಮುಖ್ಯಾಂಶಗಳನ್ನು ಮುಂದಿದೆ ಓದಿ. • ಅಟ್ರಾಸಿಟಿ ಪ್ರಕರಣಗಳಲ್ಲಿ ಸರ್ಕಾರಿ ಪ್ರಾಸಿಕ್ಯೂಟರ್ಗಳು ಸರಿಯಾಗಿ ವಾದಿಸಿ ದೌರ್ಜನ್ಯಕ್ಕೀಡಾದವರಿಗೆ ನ್ಯಾಯ ಒದಗಿಸಬೇಕು. ದೌರ್ಜನ್ಯ ಮಾಡಿದವರು ಸುಲಭವಾಗಿ ಜಾಮೀನು ಪಡೆಯದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು. ತಪ್ಪಿತಸ್ಥರಿಗೆ ಕಠಿಣ ಶಿಕ್ಷೆ ಒದಗಿಸುವುದು ಎಲ್ಲರ ಜವಾಬ್ದಾರಿ. • ದೌರ್ಜನ್ಯ ಪ್ರಕರಣಗಳಲ್ಲಿ ದೋಷಾರೋಪಣೆ ಪಟ್ಟಿಯನ್ನು ನಿಗದಿತ ಅವಧಿಯ ಒಳಗಾಗಿ ಸಲ್ಲಿಸಬೇಕು. • ಬ್ಯಾಕ್ಲಾಗ್, ನೇಮಕಾತಿ ಮತ್ತು ಮುಂಬಡ್ತಿ ಪ್ರಕರಣಗಳಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳಿಗೆ ಅನ್ಯಾಯವಾಗದಂತೆ ಎಚ್ಚರಿಕೆ ವಹಿಸಬೇಕು. ಈ ಕುರಿತು ಇಲಾಖೆವಾರು ಸಭೆ ನಡೆಸಲು ಮುಖ್ಯಕಾರ್ಯದರ್ಶಿಯವರಿಗೆ ಸೂಚನೆ. • ದೇವದಾಸಿ ಪದ್ದತಿ ಯಾವುದೇ ಜಿಲ್ಲೆಗಳಲ್ಲಿ ನಡೆದರೆ ಅದಕ್ಕೆ ಜಿಲ್ಲಾಧಿಕಾರಿ ಮತ್ತು ಪೊಲೀಸ್ ವರಿಷ್ಠಾಧಿಕಾರಿ ಅವರೇ ನೇರ ಹೊಣೆ. ದೇವದಾಸಿಯರಿಗೆ ಪುನರ್ವಸತಿ ಕಲ್ಪಿಸುವುದು ಜಿಲ್ಲಾಡಳಿತದ ಜವಾಬ್ದಾರಿ. ಈ ಕುರಿತು ಯಾವುದೇ ದೂರಿಗೆ ಅವಕಾಶವಿಲ್ಲದಂತೆ ಕಾರ್ಯ ನಿರ್ವಹಿಸಬೇಕು. • ಅರಣ್ಯ ಹಕ್ಕು…
ನವದೆಹಲಿ: ಅಲ್ಲು ಅರ್ಜುನ್ ಮತ್ತು ರಶ್ಮಿಕಾ ಮಂದಣ್ಣ ಅವರ ಬ್ಲಾಕ್ಬಸ್ಟರ್ ಹಿಟ್ ಚಿತ್ರ ಪುಷ್ಪ 2: ದಿ ರೂಲ್ ಈ ತಿಂಗಳು ಒಟಿಟಿ ಪ್ಲಾಟ್ಫಾರ್ಮ್ನಲ್ಲಿ ಬಿಡುಗಡೆಯಾಗಲಿದೆ. ನೀವು ಚಿತ್ರಮಂದಿರಗಳಲ್ಲಿ ಸುಕುಮಾರ್ ನಿರ್ದೇಶನದ ಮೇರುಕೃತಿಯನ್ನು ಮಿಸ್ ಮಾಡಿಕೊಂಡರೆ ಅಥವಾ ಅದನ್ನು ಮತ್ತೆ ನೋಡಲು ಬಯಸಿದರೆ, 2024 ರ ಅತಿದೊಡ್ಡ ಬ್ಲಾಕ್ಬಸ್ಟರ್ ಸ್ಟ್ರೀಮಿಂಗ್ ಪ್ಲಾಟ್ಫಾರ್ಮ್ಗಳಲ್ಲಿ ದಾಖಲೆಗಳನ್ನು ಮುರಿಯಲು ಸಜ್ಜಾಗಿರುವುದರಿಂದ ಪಾಪ್ಕಾರ್ನ್ ಟಬ್ ತೆಗೆದುಕೊಳ್ಳಿ. ಅಲ್ಲು ಅರ್ಜುನ್ ಅಭಿನಯದ ಪುಷ್ಪಾ 2: ದಿ ರೂಲ್ ಡಿಸೆಂಬರ್.5 ರಂದು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಯಿತು. 2024 ರ ಮೂರನೇ ಅತಿ ಹೆಚ್ಚು ಗಳಿಕೆಯ ಭಾರತೀಯ ಚಿತ್ರವಾಯಿತು. ಈ ಚಿತ್ರವು ದೇಶೀಯ ಗಲ್ಲಾಪೆಟ್ಟಿಗೆಯಲ್ಲಿ 1,233 ಕೋಟಿ ರೂ ಮತ್ತು ವಿಶ್ವಾದ್ಯಂತ 1,738 ಕೋಟಿ ರೂ. ಗಳಿಸಿತು. ಚಿತ್ರದ ಅಧಿಕೃತ ಒಟಿಟಿ ಬಿಡುಗಡೆಯ ದಿನಾಂಕವನ್ನು ಈಗ ಖಚಿತಪಡಿಸುವುದರೊಂದಿಗೆ, ನಾವು ಕೆಲವು ರೋಮಾಂಚಕಾರಿ ವಿವರಗಳನ್ನು ಅನ್ವೇಷಿಸೋಣ. ಪುಷ್ಪಾ 2 ಒಟಿಟಿ ರಿಲೀಸ್ ಡೇಟ್ ಫಿಕ್ಸ್ ಆನ್ಲೈನ್ ಸ್ಟ್ರೀಮಿಂಗ್ ದೈತ್ಯ ನೆಟ್ಫ್ಲಿಕ್ಸ್ ಜನವರಿ 30 ರಿಂದ…
ಬೆಂಗಳೂರು : ರಾಜ್ಯದಲ್ಲಿ ವಿದ್ಯುತ್ ಪರಿವರ್ತಕಗಳಿಗೆ ಕೊರತೆ ಇಲ್ಲ. ವಿದ್ಯುತ್ ಪರಿವರ್ತಕಗಳ ಬ್ಯಾಂಕ್ ಸ್ಥಾಪನೆ ಮಾಡಿ ದಾಸ್ತಾನು ಮಾಡಲಾಗಿದೆ ಎಂದು ಇಂಧನ ಸಚಿವರಾದ ಕೆ.ಜೆ ಜಾರ್ಜ್ ತಿಳಿಸಿದ್ದಾರೆ. ಈ ಕುರಿತು ಮಾಹಿತಿ ನೀಡಿರುವ ಸಚಿವರು, ಸಮಸ್ಯೆ ಉಂಟಾದಲ್ಲಿ ಟೋಲ್ ಫ್ರೀ ನಂಬರ್ 1912ಗೆ ಕರೆ ಮಾಡಿದಲ್ಲಿ ಕರೆ ರೆಕಾರ್ಡ್ ಆಗಲಿದೆ. 72 ಗಂಟೆಗಳೊಳಗೆ ವಿದ್ಯುತ್ ಪರಿವರ್ತಕಗಳ ಅಳವಡಿಕೆಗೆ ಕ್ರಮ ಕೈಗೊಳ್ಳಲಾಗುತ್ತಿದೆ ಎಂದು ಹೇಳಿದರು. ರಾಜ್ಯದಲ್ಲಿ ದಿನೇದಿನೆ ವಿದ್ಯುತ್ ಬೇಡಿಕೆ ಹೆಚ್ಚಾಗುತ್ತಿದೆ. ಪ್ರತಿ ದಿನ 17,500 ಮೆಗಾವ್ಯಾಟ್ ವಿದ್ಯುತ್ ಬೇಡಿಕೆ ಇದೆ. ವಿದ್ಯುತ್ ಸಮರ್ಪಕ ಪೂರೈಕೆ ಹಿನ್ನೆಲೆಯಲ್ಲಿ ಕುಸುಮ್ ಬಿ ಹಾಗೂ ಕುಸುಮ್ ಸಿ ಯೋಜನೆಯಡಿ ಸೌರ ವಿದ್ಯುತ್ ಉತ್ಪಾದಿಸಲು ಖಾಸಗಿ ಸಹಭಾಗಿತ್ವದಲ್ಲಿ ಸೌರ ವಿದ್ಯುತ್ ಉತ್ಪಾದನೆ ಮಾಡಲು ಕ್ರಮ ಕೈಗೊಳ್ಳಲಾಗಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/veteran-kannada-writer-g-krishnappa-passes-away-minister-shivaraj-tandaragi/ https://kannadanewsnow.com/kannada/breaking-woman-attempts-suicide-by-consuming-pills-in-mandya/
ಬೆಂಗಳೂರು: ಕನ್ನಡದ ಹಿರಿಯ ಸಾಹಿತಿ, ಸಂಶೋಧಕ ಜಿ ಕೃಷ್ಣಪ್ಪ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಹಾಗೂ ಸಂಸ್ಕೃತಿ ಸಚಿವ ಶಿವರಾಜ ತಂಗಡಗಿ ಶೋಕ ವ್ಯಕ್ತಪಡಿಸಿದ್ದಾರೆ. ಬೇಂದ್ರೆ ಕೃಷ್ಣಪ್ಪ ಎಂದೆ ಚಿರಪರಿಚಿತರಾಗಿದ್ದ ಜಿ ಕೃಷ್ಣಪ್ಪ ದ. ರಾ ಬೇಂದ್ರೆ ಅವರ ಗಾಢ ಪ್ರಭಾವಕ್ಕೆ ಒಳಗಾಗಿದ್ದವರು.ಅವರ ಸಾಹಿತ್ಯ ಅಧ್ಯಯನವೇ ಕೃಷ್ಣಪ್ಪ ಅವರ ಜೀವನದ ಬಹುಮುಖ್ಯ ಅಧ್ಯಾಯವಾಗಿತ್ತು. ಮಕ್ಕಳ ಸಾಹಿತ್ಯ, ವಿಮರ್ಶೆ, ಬೇಂದ್ರೆ ಕೃತಿಗಳ ವಿವಿಧ ಆಯಾಮಗಳ ಕೃತಿ ರಚನೆ ಹೀಗೆ ಜಿ ಕೃಷ್ಣಪ್ಪ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಕೊಡುಗೆಗಳ ಮೂಲಕ ಹೆಸರಾಗಿದ್ದವರು. ರಾಜ್ಯಾದ್ಯಂತ ಶಾಲಾ ,ಕಾಲೇಜುಗಳಲ್ಲಿ ಬೇಂದ್ರೆ ಕಾವ್ಯ ಗಾಯನ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡುತ್ತಾ ಬೇಂದ್ರೆ ಕಾವ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಒಲವು ಮೂಡಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರದ ಜಿ ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ಹಾಗೂ ಹಂಪಿ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದ ಜಿ ಕೃಷ್ಣಪ್ಪ ನವರ ನಿಧನ ಸಾಹಿತ್ಯ…
ಬೆಂಗಳೂರು: ಕನ್ನಡದ ಖ್ಯಾತ ಹಿರಿಯ ಸಾಹಿತಿ, ಸಂಶೋಧಕ ಜಿ.ಕೃಷ್ಣಪ್ಪ ಅವರು ನಿಧನರಾಗುವ ಮೂಲಕ, ಇನ್ನಿಲ್ಲವಾಗಿದ್ದಾರೆ. ಬೇಂದ್ರೆ ಕೃಷ್ಣಪ್ಪ ಎಂದೆ ಚಿರಪರಿಚಿತರಾಗಿದ್ದ ಜಿ ಕೃಷ್ಣಪ್ಪ ದ. ರಾ ಬೇಂದ್ರೆ ಅವರ ಗಾಢ ಪ್ರಭಾವಕ್ಕೆ ಒಳಗಾಗಿದ್ದವರು. ಅವರ ಸಾಹಿತ್ಯ ಅಧ್ಯಯನವೇ ಕೃಷ್ಣಪ್ಪ ಅವರ ಜೀವನದ ಬಹುಮುಖ್ಯ ಅಧ್ಯಾಯವಾಗಿತ್ತು. ಮಕ್ಕಳ ಸಾಹಿತ್ಯ, ವಿಮರ್ಶೆ, ಬೇಂದ್ರೆ ಕೃತಿಗಳ ವಿವಿಧ ಆಯಾಮಗಳ ಕೃತಿ ರಚನೆ ಹೀಗೆ ಜಿ ಕೃಷ್ಣಪ್ಪ ಸಾಹಿತ್ಯ ಲೋಕದಲ್ಲಿ ತಮ್ಮದೇ ಆದ ಕೊಡುಗೆಗಳ ಮೂಲಕ ಹೆಸರಾಗಿದ್ದವರು. ರಾಜ್ಯಾದ್ಯಂತ ಶಾಲಾ ,ಕಾಲೇಜುಗಳಲ್ಲಿ ಬೇಂದ್ರೆ ಕಾವ್ಯ ಗಾಯನ ಸ್ಪರ್ಧೆ ಏರ್ಪಡಿಸಿ ಬಹುಮಾನ ನೀಡುತ್ತಾ ಬೇಂದ್ರೆ ಕಾವ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಒಲವು ಮೂಡಿಸುವಲ್ಲಿ ಮುಖ್ಯ ಪಾತ್ರವಹಿಸಿದ್ದರು. ಕನ್ನಡ ಪುಸ್ತಕ ಪ್ರಾಧಿಕಾರದ ಜಿ ಪಿ ರಾಜರತ್ನಂ ಸಾಹಿತ್ಯ ಪರಿಚಾರಕ ಪ್ರಶಸ್ತಿ, ಕೆಂಪೇಗೌಡ ಪ್ರಶಸ್ತಿ ಹಾಗೂ ಹಂಪಿ ವಿಶ್ವ ವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದಿದ್ದರು. ಕನ್ನಡದ ಹಿರಿಯ ಸಾಹಿತಿ, ಸಂಶೋಧಕ ಜಿ ಕೃಷ್ಣಪ್ಪ ಅವರ ನಿಧನಕ್ಕೆ ಹಿಂದುಳಿದ ವರ್ಗಗಳ ಕಲ್ಯಾಣ ಕನ್ನಡ ಹಾಗೂ…
ಬೆಂಗಳೂರು: ರಾಜ್ಯದ ಜನರಿಗೆ ಉಪಯುಕ್ತ ಮಾಹಿತಿ ಎನ್ನುವಂತೆ ಹಕ್ಕು ಬದಲಾವಣೆ, ನೀರಿನ ಸಂಪರ್ಕ, ನಮೂನೆ 3, ಕಟ್ಟಡ ಪರವಾನಿಗೆ ಪಡೆಯಲು ಈ ದಾಖಲೆಗಳು ಕಡ್ಡಾಯವಾಗಿದೆ. ನೀವು ಈ ದಾಖಲೆಗಳನ್ನು ಹಿಡಿದು ಸಂಬಂಧಪಟ್ಟಂತ ಸರ್ಕಾರಿ ಕಚೇರಿಗೆ ತೆರಳಿದರೇ, ನಿಮ್ಮ ಕೆಲಸ ಸುಲಭವಾಗಿ ಆಗಲಿದೆ. ಹೌದು.. ಸಾರ್ವಜನಿಕರು ನಿಮ್ಮ ಆಸ್ತಿಯ ಹಕ್ಕು ಬದಲಾವಣೆ ಇರಲಿ, ನೀರಿನ ಸಂಪರ್ಕ ಪಡೆಯೋದಿರಲಿ, ನಮೂನೆ 3ಕ್ಕೆ, ಕಟ್ಟಡ ಪರವಾನಿಗೆಗೆ ಈ ದಾಖಲೆಗಳನ್ನು ಸರ್ಕಾರ ಕಡ್ಡಾಯಗೊಳಿಸಿದೆ. ಆ ದಾಖಲೆಗಳನ್ನು ಹೊಂದಿಸಿಕೊಂಡು ಸರ್ಕಾರಿ ಕಚೇರಿಗೆ ತೆರಳಿದ್ರೇ, ನಿಮ್ಮ ಯಾವುದೇ ಕೆಲಸವಾಗಿರಲಿ, ಸಮಸ್ಯೆ ಇಲ್ಲದೇ ಮುಗಿಯಲಿದೆ. ನೀರಿನ ಸಂಪರ್ಕಕ್ಕೆ ಅರ್ಜಿ ಸಲ್ಲಿಸಲು ಬೇಕಾಗಿರುವ ದಾಖಲಾತಿಗಳು 1) ಪ್ರಸ್ತುತ ವರ್ಷದ ತೆರಿಗೆ ಪಾವತಿ ರಸೀದಿ. 2) ಪ್ರಸ್ತುತ ವರ್ಷದ ನಮೂನೆ-03. 3) ಕಟ್ಟಡ ಪರವಾನಿಗೆ ಪ್ರತಿ 4) ಆಧಾರ್ ಕಾರ್ಡ್, 5) ಜಲನಿಧಿ ತಂತ್ರಾಂಷದಲ್ಲಿನ ಅನ್ ಲೈನ್ ಆಪ್ಲಿಕೇಶನ್ ಪ್ರತಿ. 6) ನಳದ ನೀಲಿ ನಕ್ಷೆ. 7) ಅರ್ಜಿ. ಕಟ್ಟಡ ಪರವಾನಿಗೆಗೆ ಅರ್ಜಿ ಸಲ್ಲಿಸಲು…
ವಿಜಯಪುರ: ಹಾಡಹಗಲೇ ವ್ಯಕ್ತಿಯೊಬ್ಬರ ಕಾರಿನ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡೋದಕ್ಕೆ ಯತ್ನಿಸಿದಂತ ಘಟನೆ ವಿಜಯಪುರದಲ್ಲಿ ನಡೆದಿದೆ. ಈ ದಾಳಿಯಲ್ಲಿ ಓರ್ವ ವ್ಯಕ್ತಿಯ ಕಿವಿ ಕೂಡ ಕಟ್ ಆಗಿರೋದಾಗಿ ತಿಳಿದು ಬಂದಿದೆ. ವಿಜಯಪುರ ಜಿಲ್ಲೆಯ ತಿಕೋಟಾ ತಾಲ್ಲೂಕಿನ ಅರಕೇರಿ ಗ್ರಾಮದಲ್ಲಿ ರಮೇಶ್ ಚಾವ್ಹಾಣ್ ಹಾಗೂ ಇತರರಿಂದ ಸತೀಶ್ ಠಾಗೋರ್ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಿ ಪರಾರಿಯಾಗಿರುವಂತ ಘಟನೆ ನಡೆದಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಎಸ್ಪಿ ಲಕ್ಷ್ಮಣ ನಿಂಬರಗಿ ಆಗಮಿಸಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಪೊಲೀಸರು ಪ್ರಕರಣ ದಾಖಲಿಸಿಕೊಂಡು, ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/violation-of-seniority-list-in-police-department-is-unfair-to-scs-cm-siddaramaiah/ https://kannadanewsnow.com/kannada/breaking-woman-attempts-suicide-by-consuming-pills-in-mandya/
ಬೆಂಗಳೂರು: ದೇವದಾಸಿ ಪದ್ಧತಿ ನಿಷೇಧ ಆಗಿದೆ. ಎಲ್ಲಿಯಾದರೂ ನಡೆದದ್ದು ಗಮನಕ್ಕೆ ಬಂದರೆ SP-DC ವಿರುದ್ಧ ಮುಲಾಜಿಲ್ಲದೆ ಕ್ರಮಕೊಳ್ಳುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಎಚ್ಚರಿಕೆ ನೀಡಿದ್ದಾರೆ. ಇಂದು ವಿಧಾನಸೌಧದಲ್ಲಿ ರಾಜ್ಯ ಮಟ್ಟದ ಜಾಗೃತ ಮತ್ತು ಉಸ್ತುವಾರಿ ಸಮಿತಿ ಸಭೆ ನಡೆಸಿದಂತ ಅವರು, ಜಾತಿ ದೌರ್ಜನ್ಯ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಬೇಲ್ ಸಿಕ್ಕರೆ ಅದು ನಿಮ್ಮ ದೌರ್ಬಲ್ಯ. ಹೀಗಾದರೆ ಜಾತಿ ದೌರ್ಜನ್ಯ ತಡೆಗಟ್ಟುವುದು ಸಾಧ್ಯವಿಲ್ಲ ಎಂದರು. ಗಂಭೀರ ಪ್ರಕರಣಗಳಲ್ಲಿ ಆರೋಪಿಗಳಿಗೆ ಸಲೀಸಾಗಿ ಜಾಮೀನು ಸಿಕ್ಕರೆ, ಮೇಲ್ಮನವಿ ಹೋಗಿ ಜಾಮೀನು ರದ್ದುಪಡಿಸಿ ಆರೋಪಿಗೆ ಶಿಕ್ಷೆ ಕೊಡಿಸಿದ ಪ್ರಕರಣಗಳು ಎಷ್ಟಿವೆ ? ಈ ಬಗ್ಗೆ ವಿವರ ಕೊಡಿ ಎಂದು ಗರಂ ಆಗಿ ಅಧಿಕಾರಿಗಳಿಗೆ ಸಿಎಂ ಸಿದ್ಧರಾಮಯ್ಯ ಪ್ರಶ್ನಿಸಿದರು. ಪೊಲೀಸ್ ಇಲಾಖೆಯಲ್ಲಿ ಸೀನಿಯರಿಟಿ ಲೀಸ್ಟ್ ಉಲ್ಲಂಘನೆ ಆಗಿ ಪರಿಶಿಷ್ಠರಿಗೆ ಅನ್ಯಾಯ ಆಗುತ್ತಿದೆ. ಸಮಿತಿ ಮುಂದೆ ದೂರು ಬಂದು ನಾವು ಹಿರಿಯ ಅಧಿಕಾರಿಗಳ ಗಮನಕ್ಕೂ ತಂದರೂ ಸಮಸ್ಯೆ ಬಗೆಹರಿಸುತ್ತಿಲ್ಲ ಏಕೆ ? ADGP ಅಡ್ಮಿನ್ ಅವರು ಸರಿಯಾಗಿ ನಡೆದುಕೊಳ್ಳುತ್ತಿಲ್ಲ ಎಂದು ಸಂಸದ ಈ.ತುಕಾರಾಮ್…
ಸಾಮಾನ್ಯವಾಗಿ ಶ್ರೀಚಕ್ರದ ಹೆಸರು ಕೇಳಿರುತ್ತೀವಿ, ದೇವಿ ದೇವಾಲಯಗಳಲ್ಲಿ ಹೆಚ್ಚಾಗಿ ಶ್ರೀಚಕ್ರ ಸ್ಥಾಪಿಸಿರುತ್ತಾರೆ. ಕೆಲವಾರು ಮನೆಗಳಲ್ಲಿಯೂ ಸಹ ಶ್ರೀಚಕ್ರವನ್ನು ಇಟ್ಟು ಪೂಜಿಸುತ್ತಾರೆ, ಆರಾಧಿಸುತ್ತಾರೆ. ಇಂತಹ ಮನೆಗಳಲ್ಲಿ ದೇವಿ ನೆಲೆಸಿರುತ್ತಾಳೆ, ಇದರಿಂದ ದಾರಿದ್ರ್ಯ ನಾಶವಾಗಿ, ಸುಖ ,ಸಮೃದ್ಧಿ, ಶಾಂತಿ ನೆಲಸುತ್ತದೆ. ಅಂತಹ ಮನೆಗಳಲ್ಲಿ ನಕಾರಾತ್ಮಕವಾಗಿ ಶಕ್ತಿಯ ಪ್ರವೇಶಕ್ಕೆ ಅಸ್ಪದವಿರುವುದಿಲ್ಲ. ಈ ಯಂತ್ರವು ಸ್ತ್ರೀ ಹಾಗೂ ಪುರುಷ ಶಕ್ತಿ (ಶಿವಶಕ್ತಿ)ಗಳೆರಡರ ಪ್ರತೀಕ. ಇದರ ಬಗ್ಗೆ ಉಪನಿಷತ್ಗಳ ಕಾಲದಿಂದಲೂ ಉಲ್ಲೇಖವಿದೆ. ಇದರ ಪೂಜೆ ಸಂಪತ್ತಿನ ಜೊತೆಗೆ ಇಹಪರಗಳೆರಡರ ಉನ್ನತಿಗೆ ಸಾಧನವಾಗಿದೆ. ಇದನ್ನು ಪೂರ್ವಾಭಿಮುಖವಾಗಿ ಇಟ್ಟು, ಪೂಜಿಸುವವರು ಉತ್ತರಾಭಿಮುಖವಾಗಿ ಕುಳಿತು ಪೂಜಿಸಬೇಕು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ…