Author: kannadanewsnow09

ಬೆಂಗಳೂರು: ಕಳೆದ ವರ್ಷದಂತೆ ಈ ವರ್ಷ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳಿಗೆ ಶೇ.10ರಷ್ಟು ಗ್ರೇಸ್ ಮಾರ್ಕ್ಸ್ ನೀಡುವುದಿಲ್ಲ. ಈ ವರ್ಷ ಗ್ರೇಸ್ ಮಾರ್ಕ್ಸ್ ರದ್ದು ಮಾಡಲಾಗಿದೆ. ಗ್ರೇಸ್ ಮಾರ್ಕ್ಸ್ ಕೊಡೋದಿಲ್ಲ ಎಂಬುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಘೋಷಿಸಿದ್ದಾರೆ. ಇಂದು ಎಸ್ ಎಸ್ ಎಲ್ ಸಿ ಪರೀಕ್ಷೆ ಪೂರ್ವ ತಯಾರಿ ಕುರಿತಂತೆ ಸುದ್ದಿಗೋಷ್ಠಿ ನಡೆಸಿ ಮಾತನಾಡಿದಂತ ಅವರು, ಮೂರು ಬಾರಿ ಪಾರ್ಷಿಕ ಪರೀಕ್ಷೆಯ ಬಗ್ಗೆ ವಿದ್ಯಾರ್ಥಿಗಳಿಗೆ ಅರ್ಥವಾಗಿದೆ. ಒಂದು ವೇಳೆ ಫೇಲ್ ಆದರೂ ಮತ್ತೆ ಶಾಲೆಗೆ ಸೇರುವ ವ್ಯವಸ್ಥೆಯೂ ಕೂಡ ಈಗ ಮಕ್ಕಳಿಗೆ ಅರ್ಥವಾಗಿದೆ. ಇವತ್ತು ವಿದ್ಯಾರ್ಥಿಗಳಿಗೆ ಇರುವಂತ ಸಮಸ್ಯೆಗಳ ಬಗ್ಗೆ ಚರ್ಚಿಸಲು ಸಭೆ ನಡೆಸಲಾಯಿತು ಎಂದರು. ಎಸ್ ಎಸ್ ಎಲ್ ಸಿ ಪರೀಕ್ಷೆ ಸಂಬಂಧ ಎಲ್ಲಾ ಜಿಲ್ಲೆಯ ಡಿಸಿ, ಸಿಇಓಗಳ ಜೊತೆಗೆ ಚರ್ಚೆ ಮಾಡಲಾಗಿದೆ. ಈ ಬಾರಿ ಫಲಿತಾಂಶ ಜಾಸ್ತಿ ಆಗುವ ನಿರೀಕ್ಷೆಯಿದೆ. ಶಿಕ್ಷಕರಿಗೆ ಮಕ್ಕಳಿಗೆ ಪರೀಕ್ಷಾ ಒತ್ತಡ ಹಾಕದಂತೆ ಸೂಚಿಸಿದ್ದೇನೆ ಎಂದರು. ಸಿಎಂ ಸಿದ್ಧರಾಮಯ್ಯ ಅವರು ಈ…

Read More

ಬೆಂಗಳೂರು: ಬಿಬಿಎಂಪಿ ವ್ಯಾಪ್ತಿಯಲ್ಲಿ 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳಿಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸುವ ಅವಧಿಯನ್ನು 25ನೇ ಫೆ. 2025 ರವೆರೆಗೆ ವಿಸ್ತರಣೆ ಮಾಡಲಾಗಿದೆ ಎಂದು ಕಲ್ಯಾಣ ವಿಭಾಗದ ವಿಶೇಷ ಆಯುಕ್ತರಾದ ಸುರಳ್ಕರ್ ವಿಕಾಸ್ ಕಿಶೋರ್ ರವರು ತಿಳಿಸಿದ್ದಾರೆ. 2024-25ನೇ ಸಾಲಿನ ಕಲ್ಯಾಣ ಕಾರ್ಯಕ್ರಮಗಳನ್ನು ಅನುಷ್ಠಾನಗೊಳಿಸಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು 4ನೇ ಫೆಬ್ರವರಿ 2025 ರೊಳಗಾಗಿ ಸಲ್ಲಿಸಲು ತಿಳಿಸಲಾಗಿತ್ತು. ಅರ್ಹ ಫಲಾನುಭವಿಗಳಿಗೆ ಇನ್ನೂ ಹೆಚ್ಚಿನ ಮಟ್ಟದಲ್ಲಿ ಅನುಕೂಲವಾಗುವ ದೃಷ್ಟಿಯಿಂದ ಆ ಅವಧಿಯನ್ನು 25ನೇ ಫೆಬ್ರವರಿ 2025 ರವರೆಗೆ ವಿಸ್ತರಿಸಲಾಗಿದೆ. ನಗರದ ಎಲ್ಲಾ ವರ್ಗಗಳ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳು, ಪೌರಕಾರ್ಮಿಕರು, ಆರ್ಥಿಕವಾಗಿ ಹಿಂದುಳಿದ ಮತ್ತು ಅಲ್ಪಸಂಖ್ಯಾತ ವರ್ಗ, ವಿಶೇಷ ಚೇತನರ ವರ್ಗ, ತೃತೀಯ ಲಿಂಗಿಗಳು ಮತ್ತು ಮಹಿಳಾ ವರ್ಗದ ಅರ್ಹ ಅಭ್ಯರ್ಥಿಗಳಿಂದ ಭೌತಿಕ ಹಾಗೂ ಅಂತರ್ಜಾಲ ತಂತ್ರಾಂಶದ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಸಬಹುದಾದ ಕಲ್ಯಾಣ ಕಾರ್ಯಕ್ರಮಗಳ ವಿವರ: 1. ಒಂಟಿ ಮನೆ ನಿರ್ಮಾಣ / ಅಮೃತ ಮಹೋತ್ಸವ ಯೋಜನೆ. 2.…

Read More

ಕಾರವಾರ: ಇನ್ಮುಂದೆ ಗೋಹತ್ಯೆ ಏನಾದರೂ ನಡೆದರೇ ಸರ್ಕಲ್ ನಲ್ಲಿ ಗುಂಡು ಹಾಕ್ತೀವಿ ಎಂಬುದಾಗಿ ಮೀನುಗಾರಿಕಾ ಸಚಿವ ಮಂಕಾಳು ವೈದ್ಯ ಅವರು ಗುಡುಗಿದ್ದಾರೆ. ಇಂದು ಉತ್ತರ ಕನ್ನಡ ಜಿಲ್ಲೆಯ ಹೊನ್ನಾವರದ ಸಾಲಕೋಡು ಅರಣ್ಯದಲ್ಲಿ ಗರ್ಭ ಧರಿಸಿದ ಗೋವನ್ನು ಹತ್ಯೆ ಮಾಡಿದ ಪ್ರಕರಣ ಸಂಬಂಧ ಮಾತನಾಡಿದಂತ ಅವರು, ಗೋಹತ್ಯೆ ಹಿಂದಿನಿಂದಲೂ ನಡೆಯುತ್ತಿದೆ. ಬಿಜೆಪಿ ಅವಧಿಯಲ್ಲೂ ನಡೆದಿದೆ ಎಂದರು. ಕುಮಟಾ ಶಾಸಕ ದಿನಕರ ಶೆಟ್ಟಿ ಅವರು ಮಾತನಾಡುವಾಗ ನಾಲಿಗೆ ಮೇಲೆ ಹಿಡಿತವಿಟ್ಟುಕೊಂಡು ಮಾತನಾಡಬೇಕು. ದಿನಕರ ಶೆಟ್ಟಿ ಏನು ಈಗ ದಿನಕರ ಖಾನ್ ಆಗಿದ್ದಾರಾ ಎಂಬುದಾಗಿ ಪ್ರಶ್ನಿಸಿದರು. ದಿನಕರ ಶೆಟ್ಟಿ ಅವರೇ ನೀವು ನಮ್ಮ ಸಿಎಂ, ಸಚಿವರ ಬಗ್ಗೆ ಬಾಯಿಗೆ ಬಂದಂತೆ ಮಾತನಾಡಬೇಡಿ. ನಾವು ಗೋವುಗಳ ಹಂತಕರನ್ನು ಯಾವುದೇ ಕಾರಣಕ್ಕೂ ರಕ್ಷಇಸೋದಲಿಲ್. ಆರೋಪಿಗಳನ್ನು ಕೂಡಲೇ ಬಂಧಿಸಿ ಶಿಕ್ಷೆ ನೀಡುವಂತೆ ಹೇಳಿದ್ದೇವೆ. ಇನ್ಮುಂದೆ ಯಾವುದೇ ಕಾರಣಕ್ಕೂ ಗೋವು ಕಳ್ಳತನ, ಹತ್ಯೆ ಆಗಬಾರದು. ಗೋಹತ್ಯೆ ಏನಾದರೂ ನಡೆದರೇ ಸರ್ಕಲ್ ನಲ್ಲಿ ನಿಲ್ಲಿ ಗುಂಡು ಹಾಕ್ತೀವಿ ಎಂಬುದಾಗಿ ಎಚ್ಚರಿಸಿದರು. https://kannadanewsnow.com/kannada/ordinance-to-curb-harassment-of-microfinance-companies-dk-shivakumar/ https://kannadanewsnow.com/kannada/big-news-minister-ishwar-khandre-asks-hd-kumaraswamy-whether-hmt-should-be-allowed-to-sell-forest-land-for-real-estate/

Read More

ಬೆಂಗಳೂರು: ಸಾಲ ವಸೂಲಾತಿ ಹೆಸರಿನಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಬಡವರಿಗೆ ಕಿರುಕುಳ ನೀಡುವುದನ್ನು ತಡೆಯಲು ಸುಗ್ರೀವಾಜ್ಞೆ ಹೊರಡಿಸಲು ಸರ್ಕಾರ ಚಿಂತನೆ ನಡೆಸಿದೆ ಎಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ. ಸದಾಶಿವನಗರದ ತಮ್ಮ ನಿವಾಸದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಕ್ರೋಫೈನಾನ್ಸ್ ಕಂಪನಿಗಳು ಕಾನೂನನ್ನು ತಮ್ಮ ಕೈಗೆ ತೆಗೆದುಕೊಳ್ಳಲು ಮತ್ತು ಗೂಂಡಾಗಳನ್ನು ಬಳಸಿಕೊಂಡು ಬಡವರಿಗೆ ಚಿತ್ರಹಿಂಸೆ ನೀಡಲು ನಮ್ಮ ಸರ್ಕಾರ ಅವಕಾಶ ನೀಡುವುದಿಲ್ಲ. ಇದನ್ನು ನಿಭಾಯಿಸಲು ನಾವು ಪೊಲೀಸರಿಗೆ ಹೆಚ್ಚಿನ ಅಧಿಕಾರವನ್ನು ನೀಡುತ್ತೇವೆ” ಎಂದು ಹೇಳಿದರು. ಸರ್ಕಾರದ ಎಚ್ಚರಿಕೆಯ ಹೊರತಾಗಿಯೂ ಚಿತ್ರಹಿಂಸೆ ಮುಂದುವರಿಯುತ್ತಿರುವ ಬಗ್ಗೆ ಕೇಳಿದಾಗ, “ಬೆಳಗಾವಿ, ಬೀದರ್, ಮೈಸೂರು, ರಾಮನಗರದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳ ವಿರುದ್ಧ ಅನೇಕ ಎಫ್ಐಆರ್ಗಳನ್ನು ದಾಖಲಿಸಲಾಗಿದೆ. ಈ ನಿಟ್ಟಿನಲ್ಲಿ ಸಿಎಂ ಮತ್ತು ಸಹಕಾರ ಸಚಿವರು ಈಗಾಗಲೇ ಕಠಿಣ ಎಚ್ಚರಿಕೆ ನೀಡಿದ್ದಾರೆ. ಸುಗ್ರೀವಾಜ್ಞೆ ಸಿದ್ಧವಾಗಿದೆ ಮತ್ತು ಅದನ್ನು ಒಂದೆರಡು ದಿನಗಳಲ್ಲಿ ರಾಜ್ಯಪಾಲರಿಗೆ ಕಳುಹಿಸಲಾಗುವುದು. ನಾವು ಪ್ರತಿ ಜಿಲ್ಲಾ ಕೇಂದ್ರಗಳಲ್ಲಿ ಸಹಾಯವಾಣಿಗಳನ್ನು ಪ್ರಾರಂಭಿಸಿದ್ದೇವೆ. ಈ ಬಗ್ಗೆ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಿಎಂ ಸಭೆ ನಡೆಸಲಿದ್ದಾರೆ ಎಂದರು.…

Read More

ಬೆಂಗಳೂರು: ಬೆಂಗಳೂರು ವಿವಿಯಲ್ಲಿ ಎಂಎ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿಯೊಬ್ಬಳು ಹಾಸ್ಟೆಲ್ ನಲ್ಲಿ ನೇಣುಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವಂತ ಘಟನೆ ನಡೆದಿದೆ. ಬೆಂಗಳೂರು ವಿವಿಯಲ್ಲಿ ದ್ವಿತೀಯ ವರ್ಷದ ಎಂಎ ವ್ಯಾಸಂಗ ಮಾಡುತ್ತಿದ್ದಂತ ವಿದ್ಯಾರ್ಥಿನಿ ಪಾವನ ಎಂಬುವರು ಹಾಸ್ಟೆಲ್ ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದಾರೆ. ಆಕೆಯ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಅಂದಹಾಗೆ ಮೈಸೂರಿನ ಹೆಚ್.ಡಿ ಕೋಟೆ ತಾಲ್ಲೂಕಿನ ಹೆಬ್ಬಲಗುಪ್ಪೆ ಗ್ರಾಮ ಪಾವನ, ಬೆಂಗಳೂರು ವಿವಿಯಲ್ಲಿ ಎಂಎ ವ್ಯಾಸಂಗ ಮಾಡುತ್ತಿದ್ದರು. ಇಂದು ಬೆಳಿಗ್ಗೆ ಆತ್ಮಹತ್ಯೆಗೆ ಹಾಸ್ಟೆಲ್ ನಲ್ಲಿ ಶರಣಾಗಿದ್ದಾರೆ. ಸ್ಥಳಕ್ಕೆ ಆಗಮಿಸಿರುವಂತ ಜ್ಞಾನಭಾರತಿ ಠಾಣೆಯ ಪೊಲೀಸರು, ಪರಿಶೀಲಿಸಿ ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/big-news-minister-ishwar-khandre-asks-hd-kumaraswamy-whether-hmt-should-be-allowed-to-sell-forest-land-for-real-estate/ https://kannadanewsnow.com/kannada/breaking-stampede-at-maha-kumbh-mela-unfortunate-supreme-court-refuses-to-hear-pil/

Read More

ಗಣಪತಿ ಅಥರ್ವಶೀರ್ಷ ಮಂತ್ರವನ್ನು ಪಠಿಸಿ ಅದೃಷ್ಟವು ಒಲಿಯುದು ಇಷ್ಟಾರ್ಥ ಕಾರ್ಯ ಪೂರ್ಣ ಸಿದ್ದಿಯಾಗಲಿದೆ..! ಬುಧವಾರ ಗಣೇಶನನ್ನು ಅಥವಾ ಗಣಪತಿ ದೇವರನ್ನು ಸಂಪೂರ್ಣ ವಿಧಿ – ವಿಧಾನಗಳ ಮೂಲಕ ಪೂಜಿಸಲಾಗುತ್ತದೆ. ಶುಕ್ರವಾರ ಈ ಮಂತ್ರಗಳನ್ನು ಜಪಿಸುವುದರಿಂದ ವ್ಯಕ್ತಿಯು ತನ್ನ ಜೀವನದಲ್ಲಿ ಸಂತೋಷ ಮತ್ತು ಸಮೃದ್ಧಿಯನ್ನು ಪಡೆಯುತ್ತಾನೆ ಮತ್ತು ಅವನ ಎಲ್ಲಾ ದುಃಖಗಳನ್ನು ತೆಗೆದುಹಾಕಲಾಗುತ್ತದೆ. ಆ 3 ಮಂತ್ರಗಳು ಯಾವುವು..? ಬುಧವಾರ ಈ 3 ಗಣಪತಿ ಮಂತ್ರ ಪಠಿಸಿದರೆ ಗಣಪತಿ ಒಲಿಯುವನು..! ಮಂತ್ರಗಳಾವುವು..? ಗಣೇಶನನ್ನು ಯಾರು ಸಂತೋಷಗೊಳಿಸುತ್ತಾರೋ ಅವರ ನೋವುಗಳನ್ನು ಗಣೇಶನು ದೂರಾಗಿಸುತ್ತಾನೆ ಮತ್ತು ಅವರ ಆಸೆಗಳು ಪರಿಪೂರ್ಣಗೊಳ್ಳುವಂತೆ ಮಾಡುತ್ತಾನೆ. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ ದೈವಜ್ಞ ಪ್ರಧಾನ ತಾಂತ್ರಿಕ್ ಹಾಗೂ ಮಾಂತ್ರಿಕರು 9686268564 ನಿಮ್ಮ ಮನಸ್ಸಿನಲ್ಲಿ ಆಡಚಣೆ ಉಂಟಾಗುವ ಯಾವುದೇ ಪ್ರಶ್ನೆ ಅಥವಾ ಸಮಸ್ಯೆ ಇದೆಯೇ ಮತ್ತು ನೀವುಉತ್ತರ ತಿಳಿಯಲು ಬಯಸುವಿರಾ? ಜ್ಯೋತಿಷ್ಯವು ನಿಮ್ಮಅನುಮಾನ ಹಾಗೂ ಆತಂಕಗಳನ್ನು ಅಳಿಸಬಹುದು ಮತ್ತು ಪ್ರಶ್ನೆಗಳಿಗೆ ಉತ್ತರಿಸಬಹುದು ಏಷ್ಟೇ…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ನೀವು ಎಷ್ಟೇ ಪ್ರಯತ್ನಿಸಿದರೂ ನಿದ್ರೆ ಮಾಡಲು ಹೆಣಗಾಡುತ್ತಿದ್ದೀರಾ? ಹಾಗಿದ್ದರೇ ಈ ಸರಳ ಮಾನಸಿಕ ತಂತ್ರವು ಉತ್ತಮ ವಿಶ್ರಾಂತಿ ಪಡೆಯುವ ರಹಸ್ಯವಾಗಿರಬಹುದು. ಅದೇನು ಅಂತ ಮುಂದೆ ಓದಿ. ಹಾಗೆ ಮಾಡಿದ್ರೇ ನೀವು ಮನೋವೈದ್ಯರ ಈ ಕೆಳಗಿನ ಸಲಹೆ ಪಾಲಿಸಿ, ಪಕ್ಕಾ ನಿದ್ದೆ ಮಾಡ್ತೀರಿ. ನಿಮ್ಮ ಹಾಸಿಗೆ ಮತ್ತು ಎಚ್ಚರದ ನಡುವಿನ ಸಂಪರ್ಕವನ್ನು ಮುರಿಯುವುದು ನಿರ್ಣಾಯಕ ಎಂದು ಡಾ. ಲು ವಿವರಿಸುತ್ತಾರೆ. “ರೋಗಿಗಳು ನಿದ್ರೆ ಮಾಡಲು ಹೆಣಗಾಡುತ್ತಿದ್ದರೆ ಹಾಸಿಗೆಯಿಂದ ಎದ್ದೇಳಲು ನಾನು ಯಾವಾಗಲೂ ಸಲಹೆ ನೀಡುತ್ತೇನೆ. ನಿದ್ರಾಹೀನತೆಗೆ ಅರಿವಿನ ವರ್ತನೆಯ ಚಿಕಿತ್ಸೆಯಲ್ಲಿ ಈ ತಂತ್ರವನ್ನು ಪ್ರಚೋದಕ ನಿಯಂತ್ರಣ ಎಂದು ಕರೆಯಲಾಗುತ್ತದೆ” ಎಂದು ಅವರು ಹೇಳಿದರು. ಕೆಲವು ತಜ್ಞರು ನೆಲದ ಮೇಲೆ ಮಲಗಲು ಸೂಚಿಸಿದರೆ, ಮಂಚ ಅಥವಾ ಆರಾಮದಾಯಕ ಕುರ್ಚಿಯ ಮೇಲೆ ಕುಳಿತುಕೊಳ್ಳುವುದು ಸಹ ಕಾರ್ಯನಿರ್ವಹಿಸುತ್ತದೆ ಎಂದು ಲು ಭರವಸೆ ನೀಡುತ್ತಾರೆ. “ಹಾಸಿಗೆಯಿಂದ ಎದ್ದೇಳಲು ಕಾರಣವೆಂದರೆ ಹಾಸಿಗೆಯಲ್ಲಿ ಇರುವುದು ಮತ್ತು ಎಚ್ಚರವಾಗಿರುವುದರ ನಡುವಿನ ನಮ್ಮ ಸಂಬಂಧವನ್ನು ಕಡಿಮೆ ಮಾಡುವುದು. ಹೆಚ್ಚು ತೀವ್ರವಾದ…

Read More

ಮಂಡ್ಯ : ಜಿಲ್ಲಾ ಹಾಲು ಒಕ್ಕೂಟದ ನಿರ್ದೇಶಕರ ಸ್ಥಾನಕ್ಕೆ ಭಾನುವಾರ ಚುನಾವಣೆ ನಡೆದು ಫಲಿತಾಂಶ ಪ್ರಕಟವಾಗಿದೆ. ಬಹುತೇಕ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳು ಭರ್ಜರಿ ಜಯಭೇರಿ ಬಾರಿಸಿದ್ದು, ಮನ್ ಮುಲ್ ಆಡಳಿತ ಮಂಡಳಿಯನ್ನುಕೈ ತೆಕ್ಕೆಗೆ ತೆಗೆದುಕೊಳ್ಳಲು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕರು ಯಶಸ್ವಿಯಾಗಿದ್ದಾರೆ. ಕಾಂಗ್ರೆಸ್ ಬೆಂಬಲಿತ ನೂತನ ನಿರ್ದೇಶಕರನ್ನು ಸಚಿವ ಎನ್.ಚಲುವರಾಯಸ್ವಾಮಿ ಹಾಗೂ ಶಾಸಕ ಗಣಿಗ ರವಿಕುಮಾರ್ ಅಭಿನಂದಿಸಿ ಸಿಹಿ ತಿನ್ನುಸುವ ಮೂಲಕ ಮುಖಂಡರು ಹಾಗೂ ಕಾರ್ಯಕರ್ತರ ಜೊತೆ ಸಂಭ್ರಮಾಚರಣೆ ಆಚರಿಸಿದರು. ಮಂಡ್ಯದಲ್ಲಿ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳಾದ ಮಾಜಿ ಅಧ್ಯಕ್ಷ ಬಿ.ಎಸ್.ರಾಮಚಂದ್ರ, ಮಾಜಿ ಉಪಾಧ್ಯಕ್ಷ ಎಂ.ಎಸ್.ರಘುನಂದನ್ ಹಾಗೂ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಹಾಲಿ ನಿರ್ದೇಶಕ ಶಿವಕುಮಾರ್ (ಶಿವಪ್ಪ) ಭರ್ಜರಿ ಜಯಭೇರಿ ಬಾರಿಸಿದರು. ನಾಗಮಂಗಲದಲ್ಲಿ ಮಾಜಿ ವಿಧಾನ ಪರಿಷತ್ ಸದಸ್ಯ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿಗಳಾದ ಎನ್.ಅಪ್ಪಾಜಿಗೌಡ ಹಾಗೂ ಲಕ್ಷ್ಮಿ ನಾರಾಯಣ್ ಗೆಲುವು ಸಾಧಿಸಿದರು. ಪಾಂಡವಪುರದಿಂದ ಜೆಡಿಎಸ್ ಬೆಂಬಲಿತ ಅಭ್ಯರ್ಥಿ ಶಿವಕುಮಾರ್ ಗೆಲುವಿನ ನಗೆ ಬೀರಿದರು. ಶ್ರೀರಂಗಪಟ್ಟಣದ ಕಾಂಗ್ರೆಸ್ ಬೆಂಬಲಿತ ಅಭ್ಯರ್ಥಿ ಬೋರೆಗೌಡ…

Read More

ದಾವಣಗೆರೆ: ನ್ಯಾಕ್ ರೇಟಿಂಗ್ ನೀಡಲು ಲಂಚಕ್ಕೆ ಬೇಡಿಕೆ ಇಟ್ಟು, ಲಂಚದ ಹಣ ಪಡೆಯುತ್ತಿದ್ದಾಗಲೇ ಸಿಬಿಐ ಬಲೆಗೆ ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಬಿದ್ದಿದ್ದಾರೆ. ಅವರನ್ನು ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ದಾವಣಗೆರೆ ವಿವಿಯ ಮೈಕ್ರೋ ಬಯಾಲಜಿ ಪ್ರಾಧ್ಯಾಪಕಿಯಾಗಿದ್ದಂತ ಪ್ರೊ.ಗಾಯತ್ರಿ ದೇವರಾಜ್ ಅವರು, ನ್ಯಾಕ್ ಸಮಿತಿಯ ಸದಸ್ಯೆ ಕೂಡ ಆಗಿದ್ದಾರೆ. ಆಂಧ್ರಪ್ರದೇಶದ ಗುಂಟೂರಿನ ಕೆ ಎಲ್ ಇ ಎಫ್ ವಿವಿಯ ನ್ಯಾಯ್ ಕಮಿಟಿ ಪರಿಶೀಲನೆ ವೇಳೆ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಈ ಸಂಬಂಧ ಆಂಧ್ರದ ಕೆ ಎಲ್ ಇ ಎಫ್ ವಿವಿಯು ಸಿಬಿಐಗೆ ದೂರು ನೀಡಿತ್ತು. ಇಂದು ಲಂಚದ ಹಣವನ್ನು ಪಡೆಯುತ್ತಿದ್ದಂತ ಸಂದರ್ಭದಲ್ಲಿ ದಾವಣಗೆರೆ ವಿವಿಯ ಮೈಕ್ರೋ ಬಯಾಲಜಿ ವಿಭಾಗದ ಪ್ರಾಧ್ಯಾಪಕಿ ಪ್ರೊ.ಗಾಯತ್ರಿ ದೇವರಾಜ್ ಅವರನ್ನು ಸಿಬಿಐ ಅಧಿಕಾರಿಗಳು ಬಂದಿಸಿದ್ದಾರೆ. ಬಂಧಿತ ದಾವಣಗೆರೆ ವಿವಿಯ ಪ್ರೊ.ಗಾಯತ್ರಿ ದೇವರಾಜ್ ಅವರಿಂದ ಸಿಬಿಐ 37 ಲಕ್ಷ ನಗದು, 6 ಲ್ಯಾಪ್ ಟಾಪ್, ಐಪೋನ್ ವಶಕ್ಕೆ ಪಡೆದಿದೆ. ಈ ಸಂಬಂಧ ಭ್ರಷ್ಟಾಚಾರ, ಲಂಚ ಪ್ರಕರಣ ದಾಖಲಿಸಿಕೊಂಡಿರುವಂತ ಸಿಬಿಐ, ತನಿಖೆ…

Read More

ಶಿವಮೊಗ್ಗ: ಜಿಲ್ಲೆಯ ಸೊರಬ ತಾಲ್ಲೂಕಿನಲ್ಲಿ ಹಿಂದಿನ ಕಣಬ್ಬಕ್ಕೂ ಈಗಿನ ಕಣಬ್ಬಕ್ಕೂ ತುಂಬಾ ವ್ಯತ್ಯಾಸವಿದೆ. ಆದರೂ ಈ ಸಂಸ್ಕೃತಿಯನ್ನು ಉಳಿಸುವ ಮತ್ತು ಮುಂದಿನ ತಲೆಮಾರಿನವರಿಗೆ ನೆನಪು ಬಿತ್ತುವ ಕೆಲಸವನ್ನು ಸೊರಬ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ಮಾಡುತ್ತಿರುವುದು ನಾಡಿಗೇ ಮಾದರಿಯಾಗಿದೆ. ಅದೇ ಕಸಾಪದಿಂದ ಅಧ್ದೂರಿಯಾಗಿ ಸುಗ್ಗಿ ಸಂಭ್ರಮ ಅಂದರೆ ಕಣಬ್ಬ ಕಾರ್ಯಕ್ರಮವನ್ನು ನಡೆಸಲಾಯಿತು. ಶಿವಮೊಗ್ಗ ಜಿಲ್ಲೆಯ ಸೊರಬ ತಾಲ್ಲೂಕಿನ ಗಣಪತಿ ಹಿರೇಶಕುನ ಇವರ ಜಮೀನಿನ ಕಣದಲ್ಲಿ ನಡೆದ ಸುಗ್ಗಿ ಸಂಭ್ರಮ (ಕಣಬ್ಬ) ಕಾರ್ಯಕ್ರಮ ನಡೆಯಿತು. ಈ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದಂತ ರಾಜ್ಯೋತ್ಸವ ಪ್ರಶಸ್ತಿ ಪುರಸ್ಕೃತರಾದಂತ ಚಂದ್ರಶೇಖರ ಸಿರಿವಂತೆ ಅವರು,  ಮಾದ್ಯಮಗಳು ಇಂಥಾ ಕಾಯ೯ಕ್ರಮಗಳಿಗೆ ಒತ್ತು ನೀಡಬೇಕು. ಎಲ್ಲಾ ಕಡೆಗೂ ಪ್ರಚಾರ ಮಾಡಬೇಕು. ಈ ನಿಟ್ಟಿನಲ್ಲಿ ಇಂಥಾ ಒಳ್ಳೆಯ ಬೆಳವಣಿಗೆಗೆ ಕಾರಣರಾದ ಅಧ್ಯಕ್ಷರಾದ ಷಣ್ಮುಖಾಚಾರ್ ಮತ್ತು ಅವರ ತಂಡದವರನ್ನು ಅಭಿನಂದಿಸುತ್ತೇನೆ ಎಂದರು. ದೇಶೀ ಸಂಸ್ಕೃತಿಯನ್ನು ಯಾರೂ ಮರಯಬಾರದು. ಈ ನಿಟ್ಟಿನಲ್ಲಿ ಪರಿಷತ್ತಿನ ಉದ್ದೇಶ ಅತ್ಯಂತ ಯಶಸ್ವಿಯಾಗಿದೆ ಎಂದು ಹೇಳಿದರಲ್ಲದೇ, ಪರಿಷತ್ತಿನ ಇಂಥಾ ನೂತನ ಕಾಯ೯ಕ್ರಮಗಳು…

Read More