Author: kannadanewsnow09

ಬೆಂಗಳೂರು: ಭದ್ರಾವತಿಯ ಮೈಸೂರು ಕಾಗದ ಕಾರ್ಖಾನೆ (ಎಂಪಿಎಂ) ಪುನಶ್ಚೇತನಕ್ಕೆ ಅತ್ಯಗತ್ಯವಾಗಿರುವ ನೀಲಗಿರಿ ಬೆಳೆಯ ಮೇಲೆ ಹೇರಿರುವ ನಿಷೇಧವನ್ನು ರದ್ದು ಮಾಡಬೇಕೋ ಅಥವಾ ಇದಕ್ಕೆ ಬೇರೆ ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕೋ ಎನ್ನುವ ಕುರಿತು ತೀರ್ಮಾನಿಸಲು ಉನ್ನತ ಮಟ್ಟದ ತಜ್ಞರ ಸಮಿತಿ ರಚಿಸಲು ಬುಧವಾರ ನಿರ್ಧರಿಸಲಾಗಿದೆ. ಎಂಪಿಎಂ ಪುನಶ್ಚೇತನ ಕುರಿತು ವಿಧಾನಸೌಧದಲ್ಲಿ ಭಾರೀ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಸಭೆಯಲ್ಲಿ ಅರಣ್ಯ ಸಚಿವ ಈಶ್ವರ ಖಂಡ್ರೆ, ಭದ್ರಾವತಿ ಶಾಸಕ ಸಂಗಮೇಶ್ ಉಪಸ್ಥಿತರಿದ್ದರು. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಮತ್ತು ಜಿಲ್ಲಾಧಿಕಾರಿ ವರ್ಚುಯಲ್ ಆಗಿ ಭಾಗವಹಿಸಿದ್ದರು. ಅರಣ್ಯ ಇಲಾಖೆ ವತಿಯಿಂದ ನಾಳೆಯೇ ತಜ್ಞರ ಸಮಿತಿ ರಚಿಸಲಾಗುವುದು. ಒಂದು ತಿಂಗಳಲ್ಲಿ ವರದಿ ನೀಡುವಂತೆ ಸಮಿತಿಗೆ ಸೂಚಿಸಲಾಗುವುದು ಎಂದು ಸಚಿವ ಈಶ್ವರ ಖಂಡ್ರೆ ಸಭೆಗೆ ತಿಳಿಸಿದರು. ಭದ್ರಾವತಿ ಕಾಗದ ಕಾರ್ಖಾನೆಗೆ 20,005 ಹೆಕ್ಟೇರ್ ಅರಣ್ಯ ಭೂಮಿಯನ್ನು ನೀಲಗಿರಿ ಬೆಳೆಯಲು 2020ರಲ್ಲಿ 40 ವರ್ಷಗಳ ಅವಧಿಗೆ…

Read More

ಕಲಬುರ್ಗಿ: ಜಿಲ್ಲೆಯ ಜನರು ಬೆಚ್ಚಿ ಬೀಳಿಸುವಂತೆ ಘಟನೆಯೊಂದು ನಡೆದಿದೆ. ಅದೇ ಅಪ್ರಾಪ್ತೆ ತೆರಳುತ್ತಿದ್ದಂತ ಬಸ್ಸನ್ನು ತಡೆದು, ಆಕೆಯ ಕತ್ತುಕೊಯ್ದು ಪರಾರಿಯಾಗಿರೋ ಘಟನೆ ನಡೆದಿದೆ. ಕಲಬುರ್ಗಿ ಜಿಲ್ಲೆಯ ಅಟ್ಟೂರು ಕ್ರಾಸ್ ಬಳಿಯಲ್ಲಿ ಬೆಳಮಗಿ ಗ್ರಾಮದಿಂದ ವಿಕೆ ಸಲಗಕ್ಕೆ ಅಪ್ರಾಪ್ತೆಯೊಬ್ಬರು ತೆರಳುತ್ತಿದ್ದರು. ಇಂತಹ ಬಸ್ ಅನ್ನು ಬೈಕ್ ನಲ್ಲಿ ಹಿಂಬಾಲಿಸಿ ತೆರಳಿದಂತ ಯುವಕರು, ನಿಲ್ಲಿಸಿ ಅಪ್ರಾಪ್ತೆಯ ಕತ್ತು ಕೊಯ್ದು ಪರಾರಿಯಾಗಿರೋದಾಗಿ ತಿಳಿದು ಬಂದಿದೆ. ತೀವ್ರವಾಗಿ ಗಾಯಗೊಂಡಿದ್ದಂತ ಅಪ್ರಾಪ್ತೆಯನ್ನು ಕೂಡಲೇ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಅಪ್ರಾಪ್ತೆಯ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. ಈ ವಿಷಯ ತಿಳಿದು ಸ್ಥಳಕ್ಕೆ ಆಗಮಿಸಿದಂತ ನರೋಣ ಠಾಣೆಯ ಪೊಲೀಸರು, ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಇದೆಲ್ಲವೂ ಸಿನಿಮೀಯ ರೀತಿಯಲ್ಲಿ ನಡೆದಿದ್ದು, ಬಸ್ಸಿನಲ್ಲಿದ್ದಂತ ಜನರು ಕಣ್ ಮುಂದೆಯೇ ನಡೆದಂತ ಘಟನೆಯಿಂದ ಬೆಚ್ಚಿ ಬೀಳುವಂತೆ ಮಾಡಿದೆ. ಈ ಬಗ್ಗೆ ಮತ್ತಷ್ಟು ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/parents-are-you-giving-bombay-mithai-to-your-children-heres-the-shocking-news/ https://kannadanewsnow.com/kannada/former-footballer-dani-alves-sentenced-to-4-5-years-in-prison-in-sexual-assault-case/

Read More

ನವದೆಹಲಿ: ಸಂದೇಶ್ಖಾಲಿ ಸುತ್ತ ಭಾರಿ ವಿವಾದದ ಮಧ್ಯೆ ಪ್ರಧಾನಿ ನರೇಂದ್ರ ಮೋದಿ ಮಾರ್ಚ್ 6 ರಂದು ಪಶ್ಚಿಮ ಬಂಗಾಳಕ್ಕೆ ಭೇಟಿ ನೀಡಲಿದ್ದಾರೆ. ಆಡಳಿತಾರೂಢ ತೃಣಮೂಲ ಕಾಂಗ್ರೆಸ್ ನಾಯಕರ ವಿರುದ್ಧ ಲೈಂಗಿಕ ಕಿರುಕುಳ ಮತ್ತು ಸುಲಿಗೆ ಆರೋಪಗಳನ್ನು ಮಾಡಿರುವ ದ್ವೀಪದ ಸಂತ್ರಸ್ತರನ್ನು ಅವರು ಭೇಟಿ ಮಾಡುವ ಸಾಧ್ಯತೆಯಿದೆ. “ಮಾರ್ಚ್ 6 ರಂದು ಪ್ರಧಾನಿ ಮೋದಿ ರಾಜ್ಯಕ್ಕೆ ಭೇಟಿ ನೀಡಲಿದ್ದಾರೆ ಮತ್ತು ಬರಾಸತ್ನಲ್ಲಿ ಮಹಿಳಾ ರ್ಯಾಲಿಯನ್ನುದ್ದೇಶಿಸಿ ಮಾತನಾಡಲಿದ್ದಾರೆ ಎಂದು ಇಂದು ನಮಗೆ ತಿಳಿದುಬಂದಿದೆ” ಎಂದು ರಾಜ್ಯ ಬಿಜೆಪಿ ಅಧ್ಯಕ್ಷ ಸುಕಾಂತ ಮಜುಂದಾರ್ ಸುದ್ದಿಗಾರರಿಗೆ ತಿಳಿಸಿದರು. ಕೇಂದ್ರ ಗೃಹ ಸಚಿವ ಅಮಿತ್ ಶಾ ಫೆಬ್ರವರಿ 28 ರಂದು ಪಶ್ಚಿಮ ಬಂಗಾಳಕ್ಕೆ ಎರಡು ದಿನಗಳ ಭೇಟಿ ನೀಡುವ ಸಾಧ್ಯತೆಯಿದೆ. ಸಂದೇಶ್ಖಾಲಿಯಲ್ಲಿ ಹೆಚ್ಚಿನ ಸಂಖ್ಯೆಯ ಮಹಿಳೆಯರು ತೃಣಮೂಲ ಕಾಂಗ್ರೆಸ್ನ ಪ್ರಬಲ ವ್ಯಕ್ತಿ ಶಹಜಹಾನ್ ಶೇಖ್ ಮತ್ತು ಅವರ ಬೆಂಬಲಿಗರು “ಭೂ ಕಬಳಿಕೆ ಮತ್ತು ಬಲವಂತದಿಂದ ಲೈಂಗಿಕ ದೌರ್ಜನ್ಯ” ಎಸಗಿದ್ದಾರೆ ಎಂದು ಆರೋಪಿಸಿದ್ದಾರೆ. ಜನವರಿ 5 ರಂದು ಪಡಿತರ ಹಗರಣಕ್ಕೆ…

Read More

ಬೆಂಗಳೂರು: ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರಿಗೆ ಆಮಿಷ ಹಾಗೂ ಬೆದರಿಕೆ ಆರೋಪದಡಿ ರಾಜ್ಯಸಭಾ ಚುನಾವಣೆಯ ಬಿಜೆಪಿ-ಕಾಂಗ್ರೆಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ವಿರುದ್ಧ ಎಫ್ಐಆರ್ ದಾಖಲಾಗಿದೆ. ರಾಜ್ಯಸಭಾ ಚುನಾವಣಾ ಬಿಜೆಪಿ-ಜೆಡಿಎಸ್ ಅಭ್ಯರ್ಥಿ ಕುಪೇಂದ್ರ ರೆಡ್ಡಿ ಹಾಗೂ ಇತರರು ಕಾಂಗ್ರೆಸ್ ಮತ್ತು ಪಕ್ಷೇತರ ಶಾಸಕರಿಗೆ ಆಮಿಷ, ಬೆದರಿಕೆ ಹಾಕುತ್ತಿದ್ದಾರೆ ಎಂಬುದಾಗಿ ಪೊಲೀಸ್ ಕಮೀಷನರ್ ಅವರಿಗೆ ಮಂಡ್ಯ ಕಾಂಗ್ರೆಸ್ ಶಾಸಕ ರವಿಕುಮಾರ್ ಗಣಿಗ ಅವರು ದೂರು ನೀಡಿದ್ದರು. ಈ ದೂರನ್ನು ವಿಧಾನಸೌಧ ಠಾಣೆಗೆ ವರ್ಗಾಯಿಸಲಾಗಿತ್ತು. ಶಾಸಕ ರವಿಕುಮಾರ್ ಗಣಿಗ ಅವರ ದೂರಿನ ಹಿನ್ನಲೆಯಲ್ಲಿ ವಿಧಾನಸೌಧ ಠಾಣೆಯಲ್ಲಿ ಕುಪೇಂದ್ರ ರೆಡ್ಡಿ, ಕ್ರೆಸೆಂಟ್ ಹೋಟೆಲ್ ಮಾಲೀಕ ರವಿ, ಡಾ.ಮಹಂತೇಶ್ ಹಾಗೂ ಹರಿಹರದ ಮಾಜಿ ಶಾಸಕ ಶಿವಶಂಕರ್ ವಿರುದ್ಧ ಐಪಿಸಿ ಸೆಕ್ಷನ್ 171ಇ, 506, 171ಎಫ್ ಅಡಿಯಲ್ಲಿ ಪ್ರಕರಣ ದಾಖಲಾಗಿದೆ. ಅಂದಹಾಗೇ ರವಿಕುಮಾರ್ ಗಣಿಗ ನೀಡಿದಂತ ದೂರಿನಲ್ಲಿ ಕುಪೇಂದ್ರ ರೆಡ್ಡಿ ಹಾಗೂ ಇತರರು ಹರಪನಹಳ್ಳಿ ಪಕ್ಷೇತ್ರ ಶಾಸಕಿ ಎಂ.ಪಿ ಲತಾ, ಗೌರಿಬಿದನೂರು ಪಕ್ಷೇತರ ಶಾಸಕ ಪುಟ್ಟಸ್ವಾಮಿ ಹಾಗೂ ಮೇಲುಕೋಟೆ ಶಾಸಕ…

Read More

ಶ್ರೀನಗರ: ಜಮ್ಮು-ಕಾಶ್ಮೀರದ ಗುಲ್ ಮಾರ್ಗ್ ನಲ್ಲಿ ಇಂದು ದಿಢೀರ್ ಭಾರೀ ಹಿಮಪಾತವೇ ಉಂಟಾಗಿದೆ ಎನ್ನಲಾಗುತ್ತಿದೆ. ಈ ಹಿಮಪಾತದಿಂದಾಗಿ ಇಬ್ಬರು ವಿದೇಶಿ ಪ್ರಜೆಗಳು ನಾಪತ್ತೆಯಾಗಿರೋದಾಗಿ ತಿಳಿದು ಬಂದಿದೆ. ಜಮ್ಮು-ಕಾಶ್ಮೀರದ ಗುಲ್ಮಾರ್ಗ್ ನಲ್ಲಿ ಭಾರೀ ಹಿಮಪಾತ ಉಂಟಾಗಿದೆ. ಭೀಕರ ಹಿಮಪಾತದಿಂದಾಗಿ ಇಬ್ಬರು ವಿದೇಶಿ ಪ್ರಜೆಗಳು ನಾಪತ್ತೆಯಾಗಿದ್ದಾರೆ. ಇನ್ನೂ ಮತ್ತಿಬ್ಬರನ್ನು ರಕ್ಷಣೆ ಮಾಡಲಾಗಿದೆ. ಹಿಮಪಾತದ ವಿಷಯ ತಿಳಿದಂತ ಸೇನೆ, ಸ್ಥಳೀಯ ಪೊಲೀಸರಿಂದ ರಕ್ಷಣಾ ಕಾರ್ಯಾಚರಣೆ ನಡೆಸಲಾಗುತ್ತಿದೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/ANI/status/1760598427551826008 https://kannadanewsnow.com/kannada/it-is-mandatory-for-private-hospitals-across-the-state-to-install-treatment-tariff-boards-state-govt/ https://kannadanewsnow.com/kannada/open-book-exam-for-cbse-9th-to-12th-standard-students/

Read More

ಬೆಂಗಳೂರು: ಮಕ್ಕಳ ಅಚ್ಚುಮೆಚ್ಚಿನ ಕ್ಯಾಂಡಿಯಲ್ಲಿ ಬೆಚ್ಚಿ ಬೀಳಿಸೋ ಕ್ಯಾನ್ಸರ್ ಕಾರಕ ಅಂಶ ಪರೀಕ್ಷೆಯಲ್ಲಿ ಪತ್ತೆಯಾಗಿದೆ. ಈ ಹಿನ್ನಲೆಯಲ್ಲಿ ಕರ್ನಾಟಕದಲ್ಲೂ ಮಕ್ಕಳ ಫೇವರಿಟ್ ಬಾಂಬೆ ಮಿಠಾಯಿ ನಿಷೇಧಕ್ಕೆ ಚಿಂತನೆಯನ್ನು ಸರ್ಕಾರ ನಡೆಸಿದೆ ಎಂಬುದಾಗಿ ಹೇಳಲಾಗುತ್ತಿದೆ. ತಮಿಳುನಾಡು ಹಾಗೂ ಪುದುಚೇರಿಯಲ್ಲಿ ಈಗಾಗಲೇ ಬಣ್ಣದ ಬಾಂಬೆ ಮಿಠಾಯಿಯನ್ನು ಬ್ಯಾನ್ ಮಾಡಲಾಗಿದೆ. ಇದಕ್ಕೆ ಕಾರಣ ತಮಿಳುನಾಡು ಸರ್ಕಾರ ನಡೆಸಿದಂತ ಪರೀಕ್ಷೆಯಲ್ಲಿ ಕ್ಯಾನ್ಸರ್ ಕಾರಕ ಅಂಶ ಪತ್ತೆಯಾಗಿರೋದಾಗಿದೆ. ಈ ಹಿನ್ನಲೆಯಲ್ಲೇ ತಮಿಳುನಾಡು, ಪುದುಚೇರಿ ಸರ್ಕಾರದಿಂದ ಬಣ್ಣದ ಬಾಂಬೆ ಮಿಠಾಯಿ ಮಾರಾಟವನ್ನು ನಿಷೇಧಿಸಲಾಗಿದೆ. ಈ ಬೆನ್ನಲ್ಲೇ ಕರ್ನಾಟಕದಲ್ಲೂ ಕ್ಯಾಂಡಿ ನಿಷೇಧಕ್ಕೆ ಚಿಂತನೆ ನಡೆಸಿರೋದಾಗಿ ಹೇಳಲಾಗುತ್ತಿದೆ. ಇದಕ್ಕೂ ಮುನ್ನಾ ಬಾಂಬೆ ಮಿಠಾಯಿಯಲ್ಲಿ ಕ್ಯಾನ್ಸರ್ ಕಾರಕ ಅಂಶ ಇದ್ಯಾ ಎಂಬುದಾಗಿ ಪತ್ತೆ ಹಚ್ಚೋದಕ್ಕೆ ಪರೀಕ್ಷೆಗಾಗಿ ಪ್ರಯೋಗಾಲಯಕ್ಕೂ ಕಳುಹಿಸಲಾಗಿದೆ ಸರ್ಕಾರ ಎನ್ನಲಾಗುತ್ತಿದೆ. ಈ ಪ್ರಯೋಗಾಲಯದ ಪರೀಕ್ಷೆಯ ವರದಿಯ ಬಳಿಕ ಕರ್ನಾಟಕದಲ್ಲೂ ಕ್ಯಾಂಡಿ ಬ್ಯಾನ್ ಆಗೋದು ಫಿಕ್ಸ್ ಎನ್ನಲಾಗುತ್ತಿದೆ. ಆ ಬಗ್ಗೆ ಕಾದು ನೋಡಬೇಕಿದೆ. https://kannadanewsnow.com/kannada/ghazni-then-siddaramaiah-government-looted-temples-today-bjp/ https://kannadanewsnow.com/kannada/breaking-%e0%b2%b6%e0%b2%be%e0%b2%b2%e0%b2%be-%e0%b2%ae%e0%b2%95%e0%b3%8d%e0%b2%95%e0%b2%b3%e0%b2%bf%e0%b2%97%e0%b3%86-%e0%b2%b0%e0%b2%be%e0%b2%97%e0%b2%bf-%e0%b2%ae%e0%b2%be%e0%b2%b2%e0%b3%8d/

Read More

ಬೆಂಗಳೂರು: ಇತಿಹಾಸದ ಪುಟಗಳಲ್ಲಿ ಸೇರಿರುವಂತ ಘಜ್ನಿ ಮೊಹಮ್ಮದ್ ಅಂದು ದೇವಸ್ಥಾನಗಳನ್ನು ನಿರಂತರವಾಗಿ ಲೂಟಿ ಮಾಡಿದ್ದರು. ಇದೀಗ ಸಿದ್ಧರಾಮಯ್ಯ ಸರ್ಕಾರ ದೇವಾಲಗಳನ್ನು ಲೂಟಿ ಮಾಡುತ್ತಿದೆ ಎಂಬುದಾಗಿ ಕರ್ನಾಟಕ ಬಿಜೆಪಿ ಕಿಡಿಕಾರಿದೆ. ಈ ಕುರಿತಂತೆ ಎಕ್ಸ್ ಮಾಡಿರುವಂತ ರಾಜ್ಯ ಬಿಜೆಪಿ ಘಟಕವು, ಅಂದು ಘಜ್ನಿ ದೇವಸ್ಥಾನಗಳನ್ನು ನಿರಂತರವಾಗಿ ಲೂಟಿ ಮಾಡಿದ್ದ. ಇಂದು ಸಿದ್ಧರಾಮಯ್ಯ  ಸರ್ಕಾರ ದೇವಾಲಯಗಳ ಲೂಟಿಗಿಳಿದು ತಮ್ಮ ಕುರ್ಚಿಯನ್ನು ಭದ್ರ ಮಾಡಿಕೊಳ್ಳಲು ನೋಡುತ್ತಿದೆ‌. ಭಕ್ತರ ಕಾಣಿಕೆ ಹುಂಡಿಗೆ ಕನ್ನ ಹಾಕಿದ ಕಾಂಗ್ರೆಸ್ ಸರ್ಕಾರ ಶಾಪಗ್ರಸ್ಥವಾಗುವುದು ನಿಶ್ಚಿತ ಎಂಬುದಾಗಿ ಭವಿಷ್ಯ ನುಡಿದಿದೆ. https://twitter.com/BJP4Karnataka/status/1760573171982324215 ರಾಜ್ಯದ ಕಾಂಗ್ರೆಸ್ ಸರ್ಕಾರದ ಎಡವಟ್ಟುಗಳಿಗೆ ಮಿತಿ ಇಲ್ಲ – ಭ್ರಷ್ಟಾಚಾರಕ್ಕೆ ಕೊನೆಯಿಲ್ಲ. ಶಾಲಾ ಮಕ್ಕಳು ಪರೀಕ್ಷಾ ಶುಲ್ಕವೆಂದು ₹50 ನೀಡಿದರೂ, ಪೂರ್ವ ಸಿದ್ಧತಾ ಪರೀಕ್ಷೆಗೆ ಮನೆಯಿಂದಲೇ ಉತ್ತರ ಪತ್ರಿಕೆ ತರಬೇಕು ಎಂದು ಆದೇಶಿಸಿದೆ. ಮಕ್ಕಳಿಗೆ ಉತ್ತರ ಪತ್ರಿಕೆ ನೀಡಲು ಸಹ ಸಾಧ್ಯವಾಗದ ರೀತಿಯಲ್ಲಿ ಕರ್ನಾಟಕವನ್ನು ದಿವಾಳಿ ಮಾಡಿದೆ ಕಾಂಗ್ರೆಸ್. ಸರ್ಕಾರವೊಂದು ಈ ಪರಿ ದಿವಾಳಿಯಾಗಿರುವುದು ಕರ್ನಾಟಕದ ಇತಿಹಾಸದಲ್ಲಿ ಇದೇ ಮೊದಲು. ಸಿಎಂ…

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಎಡ ಪಾದದ ಗಾಯದಿಂದಾಗಿ ಭಾರತದ ವೇಗದ ಬೌಲರ್ ಮೊಹಮ್ಮದ್ ಶಮಿ ಐಪಿಎಲ್ 2024 ರಿಂದ ಹೊರಗುಳಿದಿದ್ದಾರೆ. ಇದಕ್ಕಾಗಿ ಇಂಗ್ಲೆಂಡ್ನಲ್ಲಿ ಶಸ್ತ್ರಚಿಕಿತ್ಸೆಯ ಅಗತ್ಯವಿದೆ ಎಂದು ಬಿಸಿಸಿಐ ಮೂಲಗಳು ಸುದ್ದಿ ಸಂಸ್ಥೆ ಪಿಟಿಐಗೆ ತಿಳಿಸಿವೆ. ಎಡ ಪಾದದ ಗಾಯದಿಂದಾಗಿ ಹಿರಿಯ ವೇಗಿ ಮೊಹಮ್ಮದ್ ಶಮಿ ಮುಂದಿನ ತಿಂಗಳು ನಡೆಯಲಿರುವ ಇಂಡಿಯನ್ ಪ್ರೀಮಿಯರ್ ಲೀಗ್ನಿಂದ ಹೊರಗುಳಿದಿದ್ದು, ಇದಕ್ಕಾಗಿ ಅವರು ಇಂಗ್ಲೆಂಡ್ನಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಲಿದ್ದಾರೆ ಎಂದು ಬಿಸಿಸಿಐ ಮೂಲಗಳು ಗುರುವಾರ ಪಿಟಿಐಗೆ ತಿಳಿಸಿವೆ. ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಟೆಸ್ಟ್ ಸರಣಿಯ ಭಾಗವಾಗಿಲ್ಲದ 33 ವರ್ಷದ ಯುವರಾಜ್ ಸಿಂಗ್, ನವೆಂಬರ್ನಲ್ಲಿ ಆಸ್ಟ್ರೇಲಿಯಾ ವಿರುದ್ಧದ ಏಕದಿನ ವಿಶ್ವಕಪ್ ಫೈನಲ್ನಲ್ಲಿ ಕೊನೆಯ ಬಾರಿಗೆ ಭಾರತಕ್ಕಾಗಿ ಆಡಿದ್ದರು. “ಶಮಿ ಜನವರಿ ಕೊನೆಯ ವಾರದಲ್ಲಿ ವಿಶೇಷ ಪಾದದ ಚುಚ್ಚುಮದ್ದನ್ನು ತೆಗೆದುಕೊಳ್ಳಲು ಲಂಡನ್ನಲ್ಲಿದ್ದರು ಮತ್ತು ಮೂರು ವಾರಗಳ ನಂತರ, ಅವರು ಲಘು ಓಟವನ್ನು ಪ್ರಾರಂಭಿಸಬಹುದು ಮತ್ತು ಅಲ್ಲಿಂದ ಅದನ್ನು ತೆಗೆದುಕೊಳ್ಳಬಹುದು ಎಂದು ಅವರಿಗೆ ತಿಳಿಸಲಾಯಿತು. ಆದರೆ ಚುಚ್ಚುಮದ್ದು ಕೆಲಸ ಮಾಡಲಿಲ್ಲ ಮತ್ತು…

Read More

ಬೆಂಗಳೂರು: ಬೆಂಗಳೂರಿನ ಖ್ಯಾತ ಉದ್ಯಮಿ ಸುನಿತಾ ತಿಮ್ಮೇಗೌಡ ಮತ್ತು ಅಶೋಕ್ ಶಂಕರ್ ಅವರ ಪುತ್ರ ಯುವ ಉದ್ಯಮಿ ಆರ್ಯಮನ್ ಅವರು, ಅಜ್ಜಿ ದಿ. ಸಾವಿತ್ರಮ್ಮ ತಿಮ್ಮೇಗೌಡ ಅವರ ಸ್ವಂತ ಊರಾದ ಕೊಳ್ಳೆಗಾಲದ ಸೆವೆನ್ತ್-ಡೇ ಅಡ್ವೆಂಟಿಸ್ಟ್ ಸ್ಕೂಲ್ ಫಾರ್ ಸ್ಪೀಚ್ ಆ್ಯಂಡ್ ಹಿಯರಿಂಗ್ (Seventh-Day Adventist School for Speech and Hearing) ಶಾಲೆಗೆ ಕ್ರೀಡಾ ಪರಿಕರಗಳು ಸೇರಿದಂತೆ ಹಲವು ವಸ್ತುಗಳನ್ನು ವಿತರಿಸಿದರು. ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ತಮ್ಮ ಸಹಪಾಠಿಗಳೊಂದಿಗೆ ಕೊಳ್ಳೆಗಾಲಕ್ಕೆ ತೆರಳಿದ ಆರ್ಯಮನ್ ಅವರು ಕಾವೇರಿಪುರದಲ್ಲಿ ಬಂದಿಳಿದರು. ಅಲ್ಲಿಂದ ಅವರು ರಸ್ತೆ ಮಾರ್ಗವಾಗಿ ಸೆವೆನ್ತ್-ಡೇ ಅಡ್ವೆಂಟಿಸ್ಟ್ ಸ್ಕೂಲ್ ಫಾರ್ ಸ್ಪೀಚ್ ಆ್ಯಂಡ್ ಹಿಯರಿಂಗ್ ಶಾಲೆಗೆ ಭೇಟಿ ನೀಡಿ ಅವರೊಂದಿಗೆ ಸಮಯ ಕಳೆದರು. ಬಳಿಕ ಅಗತ್ಯ ಪರಿಕರಗಳನ್ನು ಆಶ್ರಮದ ಮಕ್ಕಳಿಗಾಗಿ ವಿತರಿಸಿದರು. ಯುವ ಉದ್ಯಮಿ ಆರ್ಯಮನ್‌ ಅವರು 11ನೇ ವರ್ಷದಲ್ಲಿ ಸಿಂಗಾಪುರಕ್ಕೆ ಶಿಕ್ಷಣಕ್ಕಾಗಿ ತೆರಳಿದ್ದರು. ವಿದ್ಯಾಭ್ಯಾಸದ ಅವಧಿಯಲ್ಲೇ ಅವರು ಉದ್ಯಮ ಕ್ಷೇತ್ರಕ್ಕೆ ಧುಮುಕಿದ್ದರು. 13ನೇ ವರ್ಷದಲ್ಲಿ ಅವರು ಲಿಮಿಟೆಡ್ ಎಡಿಷನ್ ಶೂಗಳ ಉದ್ಯಮ…

Read More

ಬೆಂಗಳೂರು : ಅರಣ್ಯದಲ್ಲಿ ಸಸ್ಯಹಾರಿ ಪ್ರಾಣಿಗಳಿಗೆ ಮಾರಕವಾಗಿರುವ ಲಾಂಟನಾ ಕಳೆಯಿಂದ ಆನೆ, ಕಾಡೆಮ್ಮೆ, ಪೀಠೋಪಕರಣ ಮತ್ತು ಅಲಂಕಾರಿಕ ವಸ್ತುಗಳನ್ನು ತಯಾರಿಸುವ ಆದಿವಾಸಿ ಸಮುದಾಯದವರಿಗೆ ತರಬೇತಿ ಮತ್ತು ಪೋತ್ಸಾಹ ನೀಡಲು 1 ಕೋಟಿ ರೂ. ನೆರವು ನೀಡುವ ಬಗ್ಗೆ ಪರಿಶೀಲಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಬೆಂಗಳೂರಿನ ಲಾಲ್ ಬಾಗ್ ನಲ್ಲಿಂದು ಲಾಂಟನಾ ಕಡ್ಡಿಗಳಿಂದ ತಯಾರಿಸಿದ ಕಾಡೆಮ್ಮೆ ಮತ್ತು ಆನೆಯ ಆಕೃತಿಗಳನ್ನು ಅನಾವರಣ ಮಾಡಿ ಮಾತನಾಡಿದ ಅವರು, ಮುಳ್ಳಿನಿಂದ ಕೂಡಿದ ಲಾಂಟನಾ ರಾಜ್ಯದ ಬಂಡೀಪುರ, ನಾಗರಹೊಳೆ, ಬಿಳಿಗಿರಿ ರಂಗನ ಬೆಟ್ಟ ಮೊದಲಾದ ಅರಣ್ಯ ಪ್ರದೇಶಗಳಲ್ಲಿ ವ್ಯಾಪಕವಾಗಿ ವ್ಯಾಪಿಸಿದ್ದು, ಇದರಿಂದ ಆನೆ, ಜಿಂಕೆ ಇತ್ಯಾದಿ ಸಸ್ಯಹಾರಿ ಪ್ರಾಣಿಗಳಿಗೆ ಹುಲ್ಲೂ ಸಿಗದಂತಾಗಿದೆ. ಹೀಗಾಗಿ ಈ ಕಳೆಯನ್ನು ತೆಗೆಯುವುದು ಅನಿವಾರ್ಯವಾಗಿದ್ದು, ಆದಿವಾಸಿಗಳ ನೆರವಿನಿಂದ ಈ ಕಳೆ ತೆಗೆಸಿ, ಅಲಂಕಾರಿಕ ವಸ್ತು ತಯಾರಿಸಿದರೆ ಅದರಿಂದ ಜೀವನೋಪಾಯವೂ ಆಗುತ್ತದೆ, ಕಾಡಿನ ಕಳೆಯ ಸಮಸ್ಯೆಗೂ ಪರಿಹಾರ ಲಭಿಸುತ್ತದೆ ಎಂದು ಅಭಿಪ್ರಾಯಪಟ್ಟರು. ಲಾಂಟನಾದಿಂದ ತಯಾರಿಸಿದ ಪೀಠೋಪಕರಣ,…

Read More