Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪ್ರತಿಭಟನೆಯ ಸಂದರ್ಭದಲ್ಲಿ ದಾಖಲಾಗಿದ್ದಂತ ಪ್ರಕರಣ ಸಂಬಂಧ ಕೋರ್ಟ್ ಗೆ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮೊಹಮ್ಮದ್ ನಲಪಾಟ್ ಅವರು ಹಾಜರಾಗಿರಲಿಲ್ಲ. ಕೋರ್ಟ್ ಗೆ ಗೈರು ಹಾಜರಾದಂತ ಇಂತಹ ನಾಯಕರಿಗೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸುವ ಮೂಲಕ, ಶಾಕ್ ನೀಡಲಾಗಿದೆ. ಈ ಕುರಿತಂತೆ ವಿಚಾರಣೆ ನಡೆಸಿದಂತ ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್ 2022ರ ಆಗಸ್ಟ್ ನಲ್ಲಿ ನಡೆಸಿದಂತ ಪ್ರತಿಭಟನೆ ಸಂಬಂಧದ ಪ್ರಕರಣದಲ್ಲಿ ಕೋರ್ಟ್ ಗೆ ಗೈರಾಗಿರುವಂತ ಮಾಜಿ ಸಿಎಂ ವೀರಪ್ಪ ಮೊಯ್ಲಿ ಹಾಗೂ ಮೊಹಮ್ಮದ್ ನಲಪಾಡ್ ವಿರುದ್ಧ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿದೆ. ಅಂದಹಾಗೇ 2022ರ ಆಗಸ್ಟ್ ನಲ್ಲಿ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಸಂಬಂಧ ಶಿವಾಜಿನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಇಂತಹ ಪ್ರಕರಣ ಸಂಬಂಧ ನಿರಂತರವಾಗಿ ಕೋರ್ಟ್ ಗೆ ಗೈರು ಹಾಜರಿ ಆಗಿದ್ದರು. ಈ ಹಿನ್ನಲೆಯಲ್ಲಿ ವೀರಪ್ಪ ಮೊಯ್ಲಿ ಹಾಗೂ ಮೊಹಮ್ಮದ್ ನಲಪಾಡ್ ವಿರುದ್ಧ ಜಾಮೀನು ರಹಿತ ವಾರೆಂಟ್ ಅನ್ನು ಬೆಂಗಳೂರಿನ 42ನೇ ಎಸಿಎಂಎಂ ಕೋರ್ಟ್…
ದಿನವೂ ಈ ಸಮಯದಲ್ಲಿ ಕಸಗುಡಿಸುವುದರಿಂದ ಎಲ್ಲಕ್ಕಿಂತ ಅಧಿಕ ಲಾಭ ಸಿಗುತ್ತದೆ ಲಕ್ಷ್ಮೀದೇವಿ ಆಶೀರ್ವಾದ ನಿಮಗೆ ಸಿಗುತ್ತದೆ ನಮ್ಮ ಜೀವನದಲ್ಲಿ ತಿಳಿಯದೇಯೊ ತಿಳಿದೊ ಕೆಲವೊಂದು ತಪ್ಪುಗಳು ಆಗಿ ಹೋಗುತ್ತದೆ. ಅವುಗಳ ಪ್ರಭಾವ ನಮ್ಮ ಮನೆಯವರ ಮೇಲೆ ಕುಟುಂಬದ ಮೇಲೆ ಬೀಳುತ್ತದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು ನಾಶ, ಶತ್ರು ವಶೀಕರಣ, ಭಾನಮತಿ ಕೃತಿಮ…
ಬೆಂಗಳೂರು: ತೀವ್ರ ಕುತೂಹಲ ಕೆರಳಿಸಿದ್ದಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನ ಪರಿಷತ್ ಉಪ ಚುನಾವಣೆಯ ಫಲಿತಾಂಶ ಹೊರ ಬಿದ್ದಿದೆ. ಬಿಜೆಪಿ-ಜೆಡಿಎಸ್ ಮೈತ್ರಿಯ ಮೊದಲ ಚುನಾವಣೆಯಲ್ಲಿ ಭಾರೀ ಮುಖಭಂಗ ಉಂಟಾಗುವಂತೆ ಸೋಲು ಕಂಡು, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಗೆಲುವು ಸಾಧಿಸಿದಂತೆ ಆಗಿದೆ. ಇಂದು ವಿಧಾನಪರಿಷತ್ ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಗೆ ನಡೆದಿದ್ದಂತ ಮತದಾನದ ಮತಗಳ ಏಣಿಕೆ ಕಾರ್ಯ ನಡೆಯಿತು. ಬೆಂಗಳೂರು ಶಿಕ್ಷಕರ ಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಅಂದಹಾಗೇ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು 8,260 ಮತಗಳನ್ನು ಪಡೆದರೇ, ಜೆಡಿಎಸ್-ಬಿಜೆಪಿ ಅಭ್ಯರ್ಥಿ ಎ.ಪಿ ರಂಗನಾಥ್ ಅವರು 6,753 ಮತಗಳನ್ನು ಪಡೆದಿದ್ದಾರೆ. ಒಟ್ಟಾರೆಯಾಗಿ 1,507 ಮತಗಳ ಅಂತರದಿಂದ ಬಿಜೆಪಿ-ಜೆಡಿಎಸ್ ಮೈತ್ರಿ ಅಭ್ಯರ್ಥಿ ಎ.ಪಿ ರಂಗನಾಥ್ ವಿರುದ್ಧ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಗೆಲುವು ಸಾಧಿಸಿದ್ದಾರೆ. ಇನ್ನೂ 1239 ಮತಗಳು ತಿರಸ್ಕೃತಗೊಂಡಿದ್ದಾರೆ. https://kannadanewsnow.com/kannada/another-good-news-for-the-people-of-the-state-free-yoga-training-twice-a-day/ https://kannadanewsnow.com/kannada/congress-candidate-puttanna-wins-by-election-in-bengaluru-teachers-constituency/
ಬೆಂಗಳೂರು: ವಿಧಾನಸಭೆಯಲ್ಲಿ ರಾಮನಗರ ವಕೀಲರ ಮೇಲೆ ಎಫ್ಐಆರ್ ಕುರಿತಂತೆ ವಿಷಯವಿಟ್ಟುಕೊಂಡು ಬಿಜೆಪಿಯಿಂದ ಧರಣಿ, ಪ್ರತಿಭಟನೆ ನಡೆಸಲಾಗುತ್ತಿದೆ. ಇದರ ನಡುವೆಯೂ ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ವಿಧಾನಸಭೆಯಲ್ಲಿ ಬಿಬಿಎಂಪಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಅಂಗೀಕಾರ ಪಡೆಯಲಾಗಿದೆ. ರಾಮನಗರದಲ್ಲಿ ವಕೀಲರ ಪ್ರತಿಭಟನೆಯ ವಿಚಾರವನ್ನು ವಿಧಾನಸಭೆಯಲ್ಲಿ ಪ್ರಸ್ತಾಪಿಸಿದಂತ ವಿಪಕ್ಷ ನಾಯಕರು ಧರಣಿಯನ್ನು ನಡೆಸುತ್ತಿದ್ದಾರೆ. ವಿಪಕ್ಷಗಳ ಧರಣಿಯ ನಡುವೆಯೂ ವಿಧಾನಸಭೆಯಲ್ಲಿ ಬಿಬಿಎಂಪಿ ತಿದ್ದುಪಡಿ ವಿಧೇಯಕವನ್ನು ಮಂಡಿಸಿ ಸರ್ಕಾರ ಅಂಗೀಕಾರ ಪಡೆದಿದೆ. ಬಿಬಿಎಂಪಿ ತಿದ್ದುಪಡಿ ವಿಧೇಯಕ ಅಂಗೀಕಾರದ ಬಳಿಕ ಐದು ವರ್ಷಗಳಲ್ಲಿ ಬಾಕಿ ಇಳಿಸುಕೊಂಡಿರುವಂತ ಹಿಂದಿನ ತೆರಿಗೆ ಮನ್ನಾಗೆ ಅವಕಾಶ ನೀಡಲಾಗುತ್ತಿದೆ. ಸ್ವಯಂ ಘೋಷಿತ ಆಸ್ತಿತೆರಿಗೆದಾರರು ತಪ್ಪು ಮಾಡಿದಿ ನೀಡಿದವರಿಗೆ, ತೆರಿಗೆ ಬಾಕಿ ಉಳಿಸಿಕೊಂಡಿರುವವರಿಗೆ ವಿಧಿಸುವ ದಂಡ ಮತ್ತು ಬಡ್ಡಿಯನ್ನು ತಿದ್ದುಪಡಿ ವಿಧೇಯಕದ ಮೂಲಕ ಅವಕಾಶ ನೀಡಲಾಗುತ್ತಿದೆ. ಒಟ್ಟಾರೆಯಾಗಿ ಐದು ವರ್ಷಗಳ ಹಿಂದಿನ ತೆರಿಗೆ ಮನ್ನಾಕೆ ಅವಕಾಶ ನೀಡುವ ಬಿಬಿಎಂಪಿ ತಿದ್ದುಪಡಿ ವಿಧೇಯಕ ವಿಧಾನಸಭೆಯಲ್ಲಿ ಅಂಗೀಕಾರಗೊಂಡಿದೆ. ಇದರೊಂದಿಗೆ ಮನ್ನಾ ತೆರಿಗೆ ಬಾಕಿ ಉಳಿಸಿಕೊಂಡಿರುವಂತ ದಂಡ ಮತ್ತು ಬಡ್ಡಿಯನ್ನು ಸರ್ಕಾರ ಮನ್ನ…
ಬೆಂಗಳೂರು : ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುತ್ತಿರುವುದು good economics. ನಾನು good economics ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಇಂದು ವಿಧಾನಸಭೆಯಲ್ಲಿ ಮುಖ್ಯಮಂತ್ರಿಗಳು ಉತ್ತರ ನೀಡಿದರು. 15 ನೇ ಹಣಕಾಸು ಆಯೋಗ ರಾಜ್ಯಕ್ಕೆ ಒಟ್ಟಾರೆ 11495 ಕೋಟಿ ರೂ. ಶಿಫಾರಸ್ಸು ಮಾಡಿದ್ದನ್ನು ರಾಜ್ಯಕ್ಕೆ ಒತ್ತಾಯಿಸಿ ತನ್ನಿ ಎಂದು ಅಂದಿನ ಸರ್ಕಾರಕ್ಕೆ ತಿಳಿಸಿದ್ದೆ. ಕೇಂದ್ರದ ಬಜೆಟ್ 2023-24 ರಲ್ಲಿ ಭದ್ರಾ ಮೇಲ್ದಂಡೆಗೆ 5300 ಕೋಟಿ ರೂ. ನೀಡಲಾಗುವುದು ಎಂದು ಹೇಳಿ ಇದಕ್ಕೆ ಯಾವುದೇ ಷರತ್ತುಗಳನ್ನು ಆಗ ಉಲ್ಲೇಖಿಸಿರಲಿಲ್ಲ. ಈ ಬಗ್ಗೆ ಆ ಸಾಲಿನ ರಾಜ್ಯ ಬಜೆಟ್ ನಲ್ಲಿ ಅಂದಿನ ಮುಖ್ಯಮಂತ್ರಿ ಬೊಮ್ಮಾಯಿಯವರೂ ಉಲ್ಲೇಖಿಸಿದ್ದಾರೆ. ಆದರೆ ಈ ವರೆಗೂ ಒಂದು ರೂಪಾಯಿ ಕೂಡ ಬಂದಿಲ್ಲ. ಹೀಗಾಗಿ ಕೇಂದ್ರದಿಂದ 5300 ಕೋಟಿ ಸಹಾಯಧನವನ್ನು ಬೊಮ್ಮಾಯಿಯವರು ಕೊಡಿಸಲಿ ಎಂದು…
ಬೆಂಗಳೂರು: ಬಿಜೆಪಿ ಮತ್ತು ಜೆಡಿಎಸ್ ನಾಯಕರ ನಡುವೆ ಮೈತ್ರಿಯಾಗಿದೆಯೇ ವಿನಃ ಇದಕ್ಕೆ ಮತದಾರರ ಒಪ್ಪಿಗೆ ಇಲ್ಲ ಎಂಬುದನ್ನು ವಿಧಾನ ಪರಿಷತ್ ಉಪಚುನಾವಣೆ ಫಲಿತಾಂಶ ಸ್ಪಷ್ಟಪಡಿಸಿದೆ. ಬಿಜೆಪಿ ಜೊತೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ನ ಜಾತ್ಯತೀತ ಮುಖವಾಡ ಕಳಚಿದೆ, ಜೆಡಿಎಸ್ನ ಕೋಮುವಾದಿ ಅವತಾರಕ್ಕೆ ಮತದಾರ ಕಪಾಳಮೋಕ್ಷ ಮಾಡಿದ್ದಾನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಹೇಳಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ವಿಧಾನಪರಿಷತ್ನ ಬೆಂಗಳೂರು ಶಿಕ್ಷಕರ ಕ್ಷೇತ್ರಕ್ಕೆ ನಡೆದ ಉಪ ಚುನಾವಣೆಯಲ್ಲಿ ಜಯಗಳಿಸಿರುವ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣನವರಿಗೆ ಅಭಿನಂದನೆಗಳು. ಇದು ನಮ್ಮ ಸರ್ಕಾರದ 9 ತಿಂಗಳ ಜನಪರವಾದ ಆಡಳಿತ ಮತ್ತು ಸರ್ಕಾರದ ಬಗ್ಗೆ ಪ್ರಜ್ಞಾವಂತ ಮತದಾರರು ಇಟ್ಟಿರುವ ವಿಶ್ವಾಸದ ಗೆಲುವಾಗಿದೆ ಎಂದಿದ್ದಾರೆ. ಬಿಜೆಪಿ ಮತ್ತು ಜೆಡಿಎಸ್ ಪಕ್ಷಗಳು ಒಟ್ಟಾಗಿ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದ ಹೊರತಾಗಿಯೂ ಸೋಲು ಕಂಡಿವೆ. ಇದು ಮಾಜಿ ಪ್ರಧಾನಿ ಹೆಚ್.ಡಿ ದೇವೇಗೌಡರು, ಕುಮಾರಸ್ವಾಮಿ ಹಾಗೂ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್ ಶಾ ಅವರ ನಡುವಿನ ಮೈತ್ರಿಯೇ ಹೊರತು ಎರಡೂ ಪಕ್ಷಗಳ…
ಬೆಂಗಳೂರು: ರಾಜ್ಯದ 8.65 ಲಕ್ಷ ಹಾಲು ಉತ್ಪಾದಕರಿಗೆ 757 ಕೋಟಿ ರೂ. ಪ್ರೋತ್ಸಾಹ ಧನ ನೇರವಾಗಿ ವರ್ಗಾವಣೆ ಮಾಡಲಾಗಿದೆ ಎಂದು ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದು, ಆರು ತಿಂಗಳಿಂದ ಹಾಲು ಉತ್ಪಾದಕರಿಗೆ ಪ್ರೋತ್ಸಾಹಧನ ಬಿಡುಗಡೆ ಮಾಡಿಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಗೆ ಸಿಎಂ ಸಿದ್ದರಾಮಯ್ಯ ಉತ್ತರ ನೀಡುತ್ತ ರಾಜ್ಯಪಾಲರಿಂದ ಯಾವುದೇ ಸುಳ್ಳು ಹೇಳಿಸಿಲ್ಲ, ಸುಳ್ಳು ಹೇಳಿಸಿದ್ದರೆ ತೋರಿಸಿ ಎಂದು ಸವಾಲು ಹಾಕಿದರು. ಅವರ ಸವಾಲಿಗೆ ಪ್ರತ್ಯುತ್ತರ ನೀಡಿದ ಬಸವರಾಜ ಬೊಮ್ಮಾಯಿ, ಹಾಲು ಉತ್ಪಾದಕರು ಕಳೆದ ಆರು ತಿಂಗಳಿನಿಂದ ಯಾವುದೇ ಪ್ರೋತ್ಸಾಹ ಧನ ಬಂದಿಲ್ಲ ಅಂತ ಪ್ರತಿಭಟನೆ ಮಾಡುತ್ತಿದ್ದಾರೆ. ಸರ್ಕಾರ ಈ ವಿಚಾರದಲ್ಲೂ ರಾಜ್ಯಪಾಲರಿಂದ ಸುಳ್ಳು ಹೇಳಿಸಿದ್ದೀರಿ ಎಂದು ಹೇಳಿದರು. ಅಲ್ಲದೇ ಐದು ಗ್ಯಾರೆಂಟಿ ಯೋಜನೆಗಳ ಜೊತೆಗೆ ಬಜೆಟ್ ನಲ್ಲಿ ಘೋಷಿಸಿರುವ ಶೇ 97 ರಷ್ಟು ಘೋಷಣೆಗಳಿಗೆ ಅಧಿಸೂಚನೆ ಹೊರಡಿಸಲಾಗಿದೆ ಅಂತ ಹೇಳಿಸಿದ್ದೀರಿ. ಸರ್ಕಾರ ಅಧಿಸೂಚನೆ ಹೊರಡಿಸಿರುವ ಯೋಜನೆಗಳು ಆರಂಭವೇ ಆಗಿಲ್ಲ ಅದು ಸಳ್ಳಲ್ಲವಾ ಎಂದು…
ಬೆಂಗಳೂರು: ರಾಜ್ಯ ಸರ್ಕಾರದಿಂದ ಬಗರ್ ಹುಕುಂ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸರ್ಕಾರಿ ಜಮೀನು ಸಾಗುವಳಿಗಾಗಿ ಅರ್ಜಿ ಸಲ್ಲಿಸಿ, ತಿರಸ್ಕೃತಗೊಂಡ ಅರ್ಜಿಯನ್ನು ಪುನರ್ ಪರಿಶೀಲಿಸುವುದಾಗಿದೆ. ಈ ಬಗ್ಗೆ ಮಾಹಿತಿ ನೀಡಿರುವಂತ ಕಂದಾಯ ಸಚಿವ ಕೃಷ್ಣಬೈರೇಗೌಡ ಅವರು, ಸರ್ಕಾರಿ ಜಮೀನುಗಳಲ್ಲಿ ಅನಧಿಕೃತ ಸಾಗುವಳಿಯನ್ನು ಸಕ್ರಮಗೊಳಿಸುವ ಬಗರ್ ಹುಕುಂ ಯೋಜನೆಯಡಿಯಲ್ಲಿ ತಿರಸ್ಕೃತಗೊಂಡಿರುವ ಅರ್ಜಿಗಳನ್ನು ಪುನರ್ ಪರಿಶೀಲಿಸುವುದಾಗಿ ತಿಳಿಸಿದ್ದಾರೆ. ಕೆಲವರು ಬಗರ್ ಹುಕುಂ ಜಮೀನು ಮಂಜೂರಾತಿಗೆ 25ಕ್ಕೂ ಹೆಚ್ಚು ಅರ್ಜಿಗಳನ್ನು ಸಲ್ಲಿಸಿದ್ದಾರೆ. ಕಾನೂನಿನ ಪ್ರಕಾರ ಅರ್ಜಿದಾರರಿಗೆ 2005ಕ್ಕೆ ಕನಿಷ್ಠ 18 ವರ್ಷವಾಗಿರಬೇಕು. ಆದರೆ, ಈಗ 18 ವರ್ಷವಾದವರೂ ಅರ್ಜಿ ಸಲ್ಲಿಸಿದ್ದಾರೆ. ನಮೂನೆ 57ರ ಅಡಿಯಲ್ಲಿ ಒಟ್ಟಾರೆ 9,85,000 ಅರ್ಜಿಗಳು ಸಲ್ಲಿಕೆಯಾಗಿವೆ. ಈ ಎಲ್ಲರಿಗೂ ಜಮೀನು ಮಂಜೂರು ಮಾಡಬೇಕೆಂದರೆ 54 ಲಕ್ಷ ಎಕರೆ ಜಮೀನಿನ ಅಗತ್ಯವಿದೆ. ಆದರೆ, ರಾಜ್ಯದಲ್ಲಿ ಸರ್ಕಾರಿ ಜಮೀನೆ ಅಷ್ಟಿಲ್ಲ. ಅನರ್ಹರಿಗೆ ಭೂ ಮಂಜೂರುಗೊಳಿಸಬಾರದು ಎಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಲಾಗಿದೆ. ಹೀಗಾಗಿ ಅನೇಕರ ಅರ್ಜಿಗಳು ಅನರ್ಹಗೊಂಡಿವೆ. ಆದರೆ, ಅರ್ಜಿಗಳನ್ನು ತಿರಸ್ಕೃತಗೊಳಿಸುವ ಸಂದರ್ಭದಲ್ಲಿ…
ಶಿವಮೊಗ್ಗ : ಭದ್ರಾ ನಾಲಾ, ನದಿ ಪಾತ್ರ ಪ್ರದೇಶದಲ್ಲಿ ಅನಧಿಕೃತ ಪಂಪ್ಸೆಟ್ ಮತ್ತು ತೂಬುಗಳ ಮೂಲಕ ನೀರನ್ನು ಎತ್ತುವಳಿ ಮಾಡುವುದನ್ನು ನಿಷೇಧಿಸಿ ಭದ್ರಾ ನಾಲಾ ಮತ್ತು ನದಿಯ ಪಾತ್ರಗಳ ಸುತ್ತಮುತ್ತ 100 ಮೀ ವ್ಯಾಪ್ತಿಯಲ್ಲಿ ನಿಬಂಧನೆಗಳನ್ನು ವಿಧಿಸಿ ಫೆ.19 ರಿಂದ 26 ರವರೆಗೆ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಆದೇಶಿಸಿರುತ್ತಾರೆ. ಫೆ.5 ರ ರಾತ್ರಿಯಿಂದ ಕುಡಿಯುವ ನೀರಿನ ಉದ್ದೇಶಕ್ಕಾಗಿ ಹಾವೇರಿ ಮತ್ತು ಗದಗ ಜಿಲ್ಲೆಯ ಪಟ್ಟಣಗಳಿಗೆ ಇದುವರೆಗೂ ಒಟ್ಟು 1.00 ಟಿಎಂಸಿ ನೀರನ್ನು ಭದ್ರಾ ಜಲಾಶಯದಿಂದ ಹರಿಸಲಾಗಿರುತ್ತದೆ. ಆದರೆ ಸದರಿ ಜಿಲ್ಲೆಗಳ ನೀರು ಒದಗಿಸುವ ಜಾಕ್ವೆಲ್ ಸ್ಥಳವನ್ನು ನೀರು ತಲುಪಿರುವುದಿಲ್ಲವೆಂದು ತಿಳಿದುಬಂದಿದೆ. ನದಿಯ ಪಾತ್ರದಲ್ಲಿ ಸುಮಾರು 20 ಸಾವಿರಕ್ಕೂ ಹೆಚ್ಚು ಪಂಪ್ಸೆಟ್ಗಳನ್ನು ಅಳವಡಿಸಿ ಅಕ್ರಮವಾಗಿ ನೀರನ್ನೆತ್ತಿ ಬಳಸಿಕೊಳ್ಳುತ್ತಿರುವುದರಿಂದ ಹಾಗೂ ನದಿ ಪಾತ್ರದಲ್ಲಿ ಕೆಲವು ಗ್ರಾಮಗಳಲ್ಲಿ ನದಿಗೆ ಅಡ್ಡಲಾಗಿ ಅನಧಿಕೃತ ಮಣ್ಣಿನ/ಮರಳಿನ ಏರಿಯನ್ನು ನಿರ್ಮಿಸಿ ನೀರನ್ನು ಎತ್ತುತ್ತಿರುವುದರಿಂದ ನಿಗದಿತ ಪ್ರದೇಶಕ್ಕೆ ಜಲಾಶಯದಿಂದ ನೀರು ತಲುಪಿರುವುದಿಲ್ಲ. 2023-24 ನೇ ಸಾಲಿಗೆ ಭದ್ರಾ ಕಾಲುವೆಯಲ್ಲಿ…
ಬೆಂಗಳೂರು: ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಚುನಾವಣೆಗಾಗಿ ನಡೆದಂತ ಮತಏಣಿಕೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ. ಬೆಂಗಳೂರು ಶಿಕ್ಷಕರ ಕ್ಷೇತ್ರದ ವಿಧಾನಪರಿಷತ್ ಉಪಚುನಾವಣೆಗೆ ಇತ್ತೀಚೆಗೆ ಮತದಾನ ನಡೆದಿತ್ತು. ಆ ಮತಗಳ ಏಣಿಕೆ ಕಾರ್ಯ ಇಂದು ಬೆಂಗಳೂರಲ್ಲಿ ನಡೆಸಲಾಗಿತ್ತು. ಇಂತಹ ಮತಗಳ ಏಣಿಕೆ ಕಾರ್ಯ ಮುಕ್ತಾಯವಾಗಿದ್ದು ಫಲಿತಾಂಶ ಕೂಡ ಹೊರಬಿದ್ದಿದೆ. ಆರಂಭದಿಂದಲೂ ಮುನ್ನಡೇ ಕಾಯ್ದುಕೊಂಡಿದ್ದಂತ ಪುಟ್ಟಣ್ಣ ಅವರು, 1506 ಮತಗಳ ಅಂತರದಿಂದ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. 1506 ಮತಗಳಿಂದ ಜೆಡಿಎಸ್ ಹಾಗೂ ಬಿಜೆಪಿ ಬೆಂಬಲಿತ ಅಭ್ಯರ್ಥಿ ಎ.ಪಿ ರಂಗನಾಥ್ ಅವರು ಸೋಲು ಕಂಡರೇ, ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಭರ್ಜರಿ ಗೆಲುವು ಸಾಧಿಸಿದ್ದಾರೆ ಎಂಬುದಾಗಿ ತಿಳಿದು ಬಂದಿದೆ. ವಿಧಾನಪರಿಷತ್ ಉಪ ಚುನಾವಣೆಯ ಫಲಿತಾಂಶದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪುಟ್ಟಣ್ಣ ಅವರು ಭರ್ಜರಿ ಗೆಲುವು ಸಾಧಿಸಿರೋದಾಗಿ ತಿಳಿದು ಬಂದಿದೆ. ಎಷ್ಟು ಮತಗಳಿಂದ ಗೆಲುವು ಸಾಧಿಸಿದ್ದಾರೆ ಎನ್ನುವ ಅಂತಿಮ ಫಲಿತಾಂಶವನ್ನು ಚುನಾವಣಾ ಆಯೋಗ ಅಧಿಕೃತವಾಗಿ ಪ್ರಕಟಿಸಿದಾಗ ತಿಳಿದು ಬರಲಿದೆ. https://kannadanewsnow.com/kannada/now-for-every-rs-100-we-pay-only-rs-12-13-is-coming-back-from-the-centre-cm-siddaramaiah/…