Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಜಾತಿ ದತ್ತಾಂಶವು ಮುಂಬರುವ ಜನಗಣತಿಯ ಒಂದು ಭಾಗವಾಗಲಿದೆ ಎಂದು ಕೇಂದ್ರವು ಬುಧವಾರ ಘೋಷಿಸಿದ್ದು, ಜಾತಿ ಸಮೀಕ್ಷೆಗಳನ್ನು ರಾಜಕೀಯ ಲಾಭಕ್ಕಾಗಿ ಬಳಸುತ್ತಿರುವುದಕ್ಕಾಗಿ ಪ್ರತಿಪಕ್ಷಗಳನ್ನು ತರಾಟೆಗೆ ತೆಗೆದುಕೊಂಡಿದೆ. ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ನಡೆದ ರಾಜಕೀಯ ವ್ಯವಹಾರಗಳ ಕೇಂದ್ರ ಸಮಿತಿ (ಸಿಸಿಪಿಎ) ಸಭೆಯಲ್ಲಿ ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಮುಂಬರುವ ಜನಗಣತಿಯಲ್ಲಿ ಜಾತಿ ಗಣತಿಯನ್ನು ಸೇರಿಸಬೇಕು ಎಂದು ರಾಜಕೀಯ ವ್ಯವಹಾರಗಳ ಕ್ಯಾಬಿನೆಟ್ ಸಮಿತಿ ಇಂದು ನಿರ್ಧರಿಸಿದೆ ಎಂದು ಕೇಂದ್ರ ಸಚಿವ ಅಶ್ವಿನಿ ವೈಷ್ಣವ್ ಇಂದು ಕ್ಯಾಬಿನೆಟ್ ಬ್ರೀಫಿಂಗ್ನಲ್ಲಿ ಹೇಳಿದರು. https://twitter.com/ANI/status/1917531309255049427 https://kannadanewsnow.com/kannada/neet-ug-2025-admit-card-release/ https://kannadanewsnow.com/kannada/big-news-merger-of-15-banks-in-the-country-from-may-1-what-will-be-the-impact-on-account-holders/
ನವದೆಹಲಿ: ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿ ಹತ್ಯೆಗೈದಿದ್ದಂತ ಆರೋಪಿಯನ್ನು ಪೊಲೀಸರು ಎನ್ ಕೌಂಟರ್ ಮಾಡಿದ್ದರು. ಈ ಘಟನೆಯ ಸಂಬಂಧ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದಿಂದ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡು ತನಿಖೆಗೆ ಇಳಿದಿದೆ. ಕರ್ನಾಟಕದ ಹುಬ್ಬಳ್ಳಿಯಲ್ಲಿ ನಡೆದ ಪೊಲೀಸ್ ಎನ್ಕೌಂಟರ್ನಲ್ಲಿ ಬಂಧಿತ ಆರೋಪಿಗಳ ಸಾವು ಮತ್ತು ಅಪ್ರಾಪ್ತ ಬಾಲಕಿಯ ಅಪಹರಣ, ಅತ್ಯಾಚಾರ ಮತ್ತು ಕೊಲೆ ಪ್ರಕರಣದ ಮಾಧ್ಯಮ ವರದಿಯನ್ನು ಆಧರಿಸಿ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (NHRC) ಸ್ವಯಂಪ್ರೇರಿತವಾಗಿ ಪ್ರಕರಣ ದಾಖಲಿಸಿಕೊಂಡಿದೆ. ವರದಿಯ ಪ್ರಕಾರ, ಇದು ಏಪ್ರಿಲ್ 14 ರಂದು ನಡೆದ ಘಟನೆ ಇದಾಗಿದೆ. ಅಂದಹಾಗೇ ಹುಬ್ಬಳ್ಳಿಯಲ್ಲಿ ಅಪ್ರಾಪ್ತ ಬಾಲಕಿಯನ್ನು ಅಪಹರಿಸಿದ್ದಂತ ಬಿಹಾರ ಮೂಲದ ವ್ಯಕ್ತಿಯೊಬ್ಬ, ಆಕೆಯನ್ನು ಹತ್ಯೆಗೈದಿದ್ದನು. ಪೊಲೀಸರು ಬಂಧನಕ್ಕೆ ತೆರಳಿದಂತ ವೇಳೆಯಲ್ಲಿ ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಯಾಗೋದಕ್ಕೆ ಯತ್ನಿಸಿದಂತ ಸಂದರ್ಭದಲ್ಲಿ ಗುಂಡೇಟು ನೀಡಿದ್ದರು. ಈ ಗುಂಡು ಆರೋಪಿಯ ಎದೆಯನ್ನೇ ಸೀಳಿ, ಎನ್ ಕೌಂಟರ್ ಗೆ ಕಾರಣವಾಗಿತ್ತು. https://twitter.com/ANI/status/1917517508078170572 https://kannadanewsnow.com/kannada/steps-to-include-biofuel-in-non-polluting-fuel-category-chairman-s-e-sudhindra/ https://kannadanewsnow.com/kannada/big-news-merger-of-15-banks-in-the-country-from-may-1-what-will-be-the-impact-on-account-holders/
ಬೆಂಗಳೂರು: ಪರಿಸರ ಸ್ನೇಹಿ ಜೈವಿಕ ಇಂಧನವನ್ನು “ಮಾಲಿನ್ಯಕಾರಕವಲ್ಲ ಇಂಧನದ ಗುಂಪಿಗೆ” (ವೈಟ್ಕ್ಯಾಟಗರಿ) ಸೇರ್ಪಡೆ ಮಾಡುವ ನಿಟ್ಟಿನಲ್ಲಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಸಹಕಾರದೊಂದಿಗೆ ಕ್ರಮ ಕೈಗೊಳ್ಳಲಾಗುವುದು ಎಂದು ಜೈವಿಕ ಇಂಧನ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಸ್.ಈ. ಸುಧೀಂದ್ರ ಹೇಳಿದರು. ರಾಜ್ಯ ಜೈವಿಕ ಇಂಧನ ಅಭಿವೃದ್ಧಿ ಮಂಡಳಿ ವತಿಯಿಂದ “ಜೈವಿಕ ಇಂಧನ ನೀತಿ ನಿರೂಪಣೆಯಲ್ಲಿನ ಬದಲಾವಣೆ ಹಾಗೂ ನಿಲುವುಗಳ ಕುರಿತು ಖಾಸಗಿ ಹೋಟೆಲ್ನಲ್ಲಿ ಆಯೋಜಿಸಲಾಗಿದ್ದ ಸಂವಾದದಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಸಂವಾದದ ವೇಳೆ ಜೈವಿಕ ಇಂಧನವನ್ನು ರಾಜ್ಯದಲ್ಲಿ ಮಾಲಿನ್ಯಕಾರಕವಲ್ಲದ ಇಂಧನ (ವೈಟ್ ಕ್ಯಾಟಗರಿ)ಗೆ ಸೇರ್ಪಡೆ ಮಾಡುವ ಕುರಿತು ಸಂವಾದಕರೊಬ್ಬರು ಪ್ರಸ್ತಾಪಿಸಿದರು. ಕೇಂದ್ರ ಮಾಲಿನ್ಯ ನಿಯಂತ್ರಣ ಮಂಡಳಿಯು ಈಗಾಗಲೇ ಎಲ್ಲಾ ಮಾದರಿಯ ಜೈವಿಕ ಇಂಧವನ್ನು ಮಾಲಿನ್ಯಕಾರಕವಲ್ಲದ ಇಂಧನದ ಗುಂಪಿಗೆ ಸೇರಿಸಿದೆ, ರಾಜ್ಯದಲ್ಲೂ ಈ ಕೆಲಸ ಆಗಬೇಕು ಎಂದು ಪ್ರಸ್ತಾಪಿಸಿದರು, ಪ್ರಸ್ತುತದಲ್ಲಿ ಜೈವಿಕ ಇಂಧನ ಬಳಕೆ ಮಾಡುವವರ ಸಂಖ್ಯೆ ಹೆಚ್ಚಿಸಬೇಕು ಎಂಬುದು ಅನಿವಾರ್ಯ ಹೀಗಾಗಿ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಅಧ್ಯಕ್ಷರನ್ನೂ ಸಂವಾದನಕ್ಕೆ ಆಹ್ವಾನಿಸಿ, ಕೂಡಲೇ…
ನವದೆಹಲಿ: ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ಮೇಲೆ ಪ್ರತಿಭಟನೆ ನಡೆಸಿದ್ದಕ್ಕಾಗಿ ದಾಖಲಾಗಿದ್ದಂತ ಪ್ರಕರಣಕ್ಕೆ ಸುಪ್ರೀಂ ಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಸಿಎಂ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. 2022ರಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸಿದ್ದರು. ಈ ಹಿನ್ನಲೆಯಲ್ಲಿ ಕೋವಿಡ್ ನಿಯಮ ಉಲ್ಲಂಘಿಸಿ, ಪ್ರತಿಭಟನೆ ಮಾಡಿದ್ದಂತ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ನಾಯಕರ ವಿರುದ್ಧ ಪೊಲೀಸರು ಪ್ರಕರಣ ದಾಖಲಿಸಿದ್ದರು. ಈ ಪ್ರಕರಣ ರದ್ದುಗೊಳಿಸುವಂತೆ ಸುಪ್ರೀಂ ಕೋರ್ಟ್ ಗೆ ಕಾಂಗ್ರೆಸ್ ನಾಯಕರು ಮನವಿ ಮಾಡಿದ್ದರು. ಇಂದು ಪ್ರಕರಣದ ಅರ್ಜಿಯ ವಿಚಾರಣೆ ನಡೆಸಿದಂತ ಸುಪ್ರೀಂ ಕೋರ್ಟ್ ನ್ಯಾಯಪೀಠವು ಸಿಎಂ ಸಿದ್ಧರಾಮಯ್ಯ ಸೇರಿದಂತೆ ಇತರೆ ಕಾಂಗ್ರೆಸ್ ಮುಖಂಡರ ವಿರುದ್ಧ ದಾಖಲಾಗಿದ್ದಂತ ಪ್ರಕರಣಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಿದೆ. ಈ ಮೂಲಕ ಸಿಎಂ ಸೇರಿದಂತೆ ಕಾಂಗ್ರೆಸ್ ನಾಯಕರಿಗೆ ಸುಪ್ರೀಂ ಕೋರ್ಟ್ ಬಿಗ್ ರಿಲೀಫ್ ನೀಡಿದೆ. https://kannadanewsnow.com/kannada/iskcon-chinmay-das-arrested-on-sedition-charges-granted-bail/ https://kannadanewsnow.com/kannada/big-news-merger-of-15-banks-in-the-country-from-may-1-what-will-be-the-impact-on-account-holders/
ನವದೆಹಲಿ: ಇಸ್ಕಾನ್ ಮಾಜಿ ನಾಯಕ ಚಿನ್ಮಯ್ ಕೃಷ್ಣ ದಾಸ್ ಅವರನ್ನು ಕಳೆದ ವರ್ಷ ಬಂಧನವು ಕೋಲಾಹಲಕ್ಕೆ ಕಾರಣವಾದ ನಂತರ ಬಾಂಗ್ಲಾದೇಶ ಹೈಕೋರ್ಟ್ ಬುಧವಾರ ಜಾಮೀನು ನೀಡಿದೆ. ಅಂತರರಾಷ್ಟ್ರೀಯ ಸಮುದಾಯವು “ನ್ಯಾಯಾಂಗ ಕಿರುಕುಳ” ಎಂದು ಪರಿಗಣಿಸುವ ದೇಶದ್ರೋಹದಂತಹ ಗಂಭೀರ ಆರೋಪಗಳನ್ನು ಎದುರಿಸುತ್ತಿರುವ ದಾಸ್ ಅವರನ್ನು ನವೆಂಬರ್ 25, 2024 ರಂದು ಬಾಂಗ್ಲಾದೇಶದಲ್ಲಿ ಬಂಧಿಸಲಾಯಿತು. ಈ ಪ್ರಕರಣದಲ್ಲಿ ಜಾಮೀನು ಕೋರಿ ಚಿನ್ಮಯ್ ದಾಸ್ ಅವರು ಬಾಗ್ಲಾದೇಶದ ಹೈಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ವಿಚಾರಣೆ ನಡೆಸಿದಂತ ಹೈಕೋರ್ಟ್, ಇಂದು ದೇಶದ್ರೋಹ ಆರೋಪದಲ್ಲಿ ಬಂಧನಕ್ಕೆ ಒಳಗಾಗಿದ್ದಂತ ಇಸ್ಕಾನ್ ಚಿನ್ಮಯ್ ದಾಸ್ ಗೆ ಜಾಮೀನು ಮಂಜೂರು ಮಾಡಿದೆ. https://kannadanewsnow.com/kannada/pm-modis-visit-to-russia-cancelled-due-to-tension-simmering-along-india-pakistan-border/ https://kannadanewsnow.com/kannada/big-news-merger-of-15-banks-in-the-country-from-may-1-what-will-be-the-impact-on-account-holders/
ನವದೆಹಲಿ: ಮಾಸ್ಕೋದಲ್ಲಿ ಮೇ 9 ರಂದು ನಡೆಯಲಿರುವ ರಷ್ಯಾದ ವಿಜಯ ದಿನಾಚರಣೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗವಹಿಸುವುದಿಲ್ಲ ಎಂದು ಕ್ರೆಮ್ಲಿನ್ ವಕ್ತಾರರು ಬುಧವಾರ ಸುದ್ದಿ ಸಂಸ್ಥೆ ರಾಯಿಟರ್ಸ್ಗೆ ತಿಳಿಸಿದ್ದಾರೆ. ಪ್ರಧಾನಿಯವರ ನಿರ್ಧಾರದ ಹಿಂದಿನ ಕಾರಣವನ್ನು ರಷ್ಯಾದ ಅಧಿಕಾರಿಗಳು ನಿರ್ದಿಷ್ಟಪಡಿಸದಿದ್ದರೂ, ಪಹಲ್ಗಾಮ್ನಲ್ಲಿ ನಡೆದ ಭಯೋತ್ಪಾದಕ ದಾಳಿಯ ನಂತರ ಭಾರತ ಮತ್ತು ಪಾಕಿಸ್ತಾನ ಗಡಿಯಲ್ಲಿ ಯುದ್ಧ ಭೀತಿ ನಿರ್ಮಾಣವಾಗಿದೆ. ಈ ಕಾರಣದಿಂದ ಪ್ರಧಾನಿ ನರೇಂದ್ರ ಮೋದಿಯವರು ರಷ್ಯಾ ಪ್ರವಾಸ ರದ್ದುಗೊಳಿಸಿದ್ದಾಗಿ ಹೇಳಲಾಗುತ್ತಿದೆ. ಈ ಬೆಳವಣಿಗೆಯ ಬಗ್ಗೆ ಭಾರತ ಯಾವುದೇ ಪ್ರತಿಕ್ರಿಯೆ ನೀಡಿಲ್ಲ. ಎರಡನೇ ಮಹಾಯುದ್ಧದಲ್ಲಿ ನಾಜಿ ಜರ್ಮನಿಯ ವಿರುದ್ಧದ ವಿಜಯದ 80ನೇ ವಾರ್ಷಿಕೋತ್ಸವದ ಅಂಗವಾಗಿ ಚೀನಾದ ಅಧ್ಯಕ್ಷ ಕ್ಸಿ ಜಿನ್ಪಿಂಗ್ ಸೇರಿದಂತೆ ಹಲವಾರು ಅಂತರರಾಷ್ಟ್ರೀಯ ನಾಯಕರು ರಷ್ಯಾಕ್ಕೆ ಬರುವ ನಿರೀಕ್ಷೆಯಿದೆ. ವಿಕ್ಟರಿ ಡೇ ಎಂಬುದಾಗಿ ರಷ್ಯಾ ಆಚರಣೆ ಮಾಡುತ್ತಿದೆ. ಇಂತಹ ಆಚರಣೆಯಲ್ಲಿ ಪ್ರಧಾನಿ ಮೋದಿ ಭಾಗವಹಿಸಬೇಕಾಗಿತ್ತು. https://kannadanewsnow.com/kannada/youth-killed-in-mangaluru-an-act-of-evil-forces-to-disturb-peace-in-society-minister-dinesh-gundu-rao/ https://kannadanewsnow.com/kannada/big-news-merger-of-15-banks-in-the-country-from-may-1-what-will-be-the-impact-on-account-holders/
ಮಂಗಳೂರು: ಇಲ್ಲಿನ ಹೊರವಲಯದ ಕುಡುಪು ಬಳಿ ಅಶ್ರಫ್ ಎಂಬ ಯುವಕನ ಹತ್ಯೆ ಸಮಾಜದ ಶಾಂತಿ ಕದಡುವ ದುಷ್ಟ ಶಕ್ತಿಗಳ ಕೃತ್ಯವಾಗಿದೆ. ದಕ್ಷಿಣ ಕನ್ನಡ ಜಿಲ್ಲೆ ಹಿಂದೆ ಸಾಮರಸ್ಯ ಮತ್ತು ಭಾವೈಕ್ಯತೆಯ ನೆಲೆಯಾಗಿತ್ತು. ಆದರೆ ಕೆಲ ಸಮಾಜಘಾತುಕ ಶಕ್ತಿಗಳು ಹಲವು ವರ್ಷಗಳಿಂದ ಜಿಲ್ಲೆಯ ಕೋಮು ಸೌರ್ಹಾದಕ್ಕೆ ಕೊಳ್ಳಿ ಇಡುವ ಯತ್ನ ಮಾಡುತ್ತಿವೆ. ಮೊನ್ನೆಯ ಕುಡುಪು ಘಟನೆ ಇದರ ಒಂದು ಭಾಗ. ಯುವಕನ ಕೊಲೆ ಸಂಬಂಧ ಈಗಾಗಲೇ ಮಂಗಳೂರು ಪೊಲೀಸರು ಶೀಘ್ರ ಕ್ರಮ ತೆಗೆದುಕೊಂಡಿದ್ದಾರೆ. ಕೃತ್ಯದಲ್ಲಿ ಭಾಗಿಯಾದ 15 ಆರೋಪಿಗಳನ್ನು ಬಂಧಿಸಿದ್ದಾರೆ. ಇನ್ನೂ ಕೆಲವು ದುಷ್ಕರ್ಮಿಗಳು ಈ ಕೃತ್ಯದಲ್ಲಿ ಭಾಗಿಯಾಗಿದ್ದು ಅವರ ಹೆಡೆಮುರಿ ಕಟ್ಟುವುದು ಖಂಡಿತ ಎಂಬುದಾಗಿ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ತಿಳಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಕೊಲೆ ಪ್ರಕರಣವನ್ನು ತ್ವರಿತವಾಗಿ ಬೇಧಿಸಿ ಆರೋಪಗಳನ್ನು ಬಂಧಿಸಿದ ಮಂಗಳೂರು ಪೊಲೀಸರಿಗೆ ನಾನು ಅಭಿನಂದನೆ ಸಲ್ಲಿಸುತ್ತೇನೆ. ಅದೇ ರೀತಿ ಜಿಲ್ಲೆಯ ಸೌರ್ಹಾದತೆ ಕಾಪಾಡುವುದು ಕೂಡ ಪೊಲೀಸರ ಜವಾಬ್ದಾರಿ. ಈ ಘಟನೆಯ ಬಳಿಕ ಕೆಲ ಸಮಾಜಘಾತಕ…
ಬೆಂಗಳೂರು: ರಾಜ್ಯದ ಮಾಜಿ ಮುಖ್ಯಮಂತ್ರಿಗಳು ಹಾಗೂ ಹಿರಿಯ ಮುತ್ಸದ್ದಿ ನಾಯಕರಾಗಿದ್ದ ಎಸ್.ಎಂ.ಕೃಷ್ಣ ರವರು 1932ರ ಮೇ 1ರಂದು ಜನಿಸಿದ್ದು, ಅವರ 93ನೇ ಹುಟ್ಟುಹಬ್ಬದ ಸವಿನೆನಪಿನಲ್ಲಿ ಮಂಡ್ಯ ಜಿಲ್ಲೆಯ ಜನಪ್ರತಿನಿಧಿಗಳು ಮತ್ತು ಅವರ ಅಭಿಮಾನಿಗಳು ಅವರ ಹೆಸರನ್ನು ಚಿರಸ್ಥಾಯಿಗೊಳಿಸಲು ಪ್ರತಿವರ್ಷ ವಿವಿಧ ಕ್ಷೇತ್ರದ ಸಾಹಿತಿಗಳು, ಗಣ್ಯರು. ರೈತರು, ವಿದ್ಯಾರ್ಥಿಗಳಿಗೆ ಪ್ರಶಸ್ತಿ ನೀಡಲು ದತ್ತಿನಿಧಿಗಳನ್ನು ಸ್ಥಾಪಿಸಿದ್ದಾರೆ. ಈ ಬಗ್ಗೆ ವಿಧಾನ ಪರಿಷತ್ ಸದಸ್ಯ ದಿನೇಶ್ ಗೂಳಿಗೌಡ ಮಾಹಿತಿ ಹಂಚಿಕೊಂಡಿದ್ದು, ಮಂಡ್ಯ ಜಿಲ್ಲೆಯಲ್ಲಿ ಹುಟ್ಟಿ ಅದನ್ನು ಕರ್ಮ ಭೂಮಿಯಾಗಿಸಿಕೊಂಡು ರಾಜ್ಯ ಹಾಗೂ ರಾಷ್ಟ್ರದ ಹಲವು ಸಾಂವಿಧಾನಿಕ ಹುದ್ದೆಗಳನ್ನು ಅಲಂಕರಿಸಿದ್ದ ಎಸ್.ಎಂ. ಕೃಷ್ಣ ರವರು ಒಬ್ಬ ಆದರ್ಶನೀಯ ಜನನಾಯಕರಾಗಿ ಬೆಳೆದವರು. ಬೆಂಗಳೂರನ್ನು ಐಟಿ ರಾಜಧಾನಿಯಾಗಿ ಮಾಡಿ ಪ್ರಪಂಚವನ್ನು ಬೆಂಗಳೂರು ಕಡೆಗೆ ತಿರುಗುವಂತೆ ಮಾಡಿ ಲಕ್ಷಾಂತರ ಉದ್ಯೋಗ ಸೃಷ್ಟಿಸಿ ರಾಜ್ಯದ ಅಭಿವೃದ್ಧಿಗೆ ಹೊಸ ಭಾಷ್ಯ ಬರೆದ ಶ್ರೀಯುತರ ಜೀವನ ಯುವ ಪೀಳಿಗೆಗೆ ದಾರಿದೀಪ. ತುಂಬು ಜೀವನ ನಡೆಸಿ ಕಳೆದ ಡಿಸೆಂಬರ್’ನಲ್ಲಿ ಭೌತಿಕವಾಗಿ ಅಗಲಿದ ಎಸ್.ಎಂ. ಕೃಷ್ಣ ರವರ ಸಾಧನೆ…
ಬೆಂಗಳೂರು: ಪಾಕಿಸ್ತಾನದ ಪರವಾಗಿ ಯಾರಾದರೂ ಮಾತನಾಡುವುದು ತಪ್ಪು ಮತ್ತು ಅದು ದೇಶದ್ರೋಹ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಆದಾಗ್ಯೂ, ಮಂಗಳೂರಿನಲ್ಲಿ ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ ಆರೋಪದ ಮೇಲೆ ವ್ಯಕ್ತಿಯೊಬ್ಬನನ್ನು ಗುಂಪು ಥಳಿಸಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಯುತ್ತಿದೆ ಎಂದು ಅವರು ಹೇಳಿದರು. ಪಾಕಿಸ್ತಾನ ಜಿಂದಾಬಾದ್ ಘೋಷಣೆ ಕೂಗಿದ್ದರೆ ಅದು ತಪ್ಪು, ಅದು ಯಾರೇ ಆಗಿರಲಿ. ವಿಚಾರಣೆ ಇನ್ನೂ ನಡೆಯುತ್ತಿದೆ. ಪ್ರಕರಣ ದಾಖಲಿಸಲಾಗಿದೆ. ವರದಿ ಬರಲಿ. ಯಾರ ವಿರುದ್ಧ ಯಾವ ಕ್ರಮ ತೆಗೆದುಕೊಳ್ಳಬೇಕು ಎಂಬುದು ಸ್ಪಷ್ಟವಾಗುತ್ತದೆ ಎಂದು ‘ಪಾಕಿಸ್ತಾನ್ ಜಿಂದಾಬಾದ್’ ಘೋಷಣೆ ಕೂಗಿದ್ದಕ್ಕಾಗಿ ಮಂಗಳೂರಿನಲ್ಲಿ ವ್ಯಕ್ತಿಯೊಬ್ಬನನ್ನು ಹತ್ಯೆ ಮಾಡಿದ ಬಗ್ಗೆ ಸುದ್ದಿಗಾರರ ಪ್ರಶ್ನೆಗೆ ಸಿದ್ದರಾಮಯ್ಯ ಉತ್ತರಿಸಿದರು. ಯಾರಾದರೂ ಪಾಕಿಸ್ತಾನದ ಪರವಾಗಿ ಮಾತನಾಡಿದರೆ, ಅದು ತಪ್ಪು, ಅದು ದೇಶದ್ರೋಹ ಎಂದು ಅವರು ಹೇಳಿದರು. ಗೃಹ ಸಚಿವ ಜಿ ಪರಮೇಶ್ವರ ಮಾತನಾಡಿ, ಮಂಗಳೂರಿನಲ್ಲಿ ಒಬ್ಬ ವ್ಯಕ್ತಿಯನ್ನು ಗುಂಡು ಹಾರಿಸಿ ಕೊಲ್ಲಲಾಗಿದೆ ಎಂದು ಹೇಳಿದರು. ಈ ಘಟನೆಯ ಹಿಂದಿನವರನ್ನು ವಿಚಾರಿಸಿದಾಗ, ಹತ್ಯೆಗೀಡಾದ ವ್ಯಕ್ತಿ…
ನವದೆಹಲಿ: ಮಧ್ಯಸ್ಥಿಕೆ ಮತ್ತು ಸಂಧಾನ ಕಾಯ್ದೆ, 1996 ರ ಸೆಕ್ಷನ್ 34 ಅಥವಾ 37 ರ ಅಡಿಯಲ್ಲಿ ಅಧಿಕಾರವನ್ನು ಚಲಾಯಿಸುವಾಗ ಮಧ್ಯಸ್ಥಿಕೆ ತೀರ್ಪುಗಳನ್ನು ಮಾರ್ಪಡಿಸಲು ಮೇಲ್ಮನವಿ ನ್ಯಾಯಾಲಯಗಳಿಗೆ ಸೀಮಿತ ಅಧಿಕಾರಗಳಿವೆ ಎಂದು ಸುಪ್ರೀಂ ಕೋರ್ಟ್ನ ಸಂವಿಧಾನ ಪೀಠ ಅಭಿಪ್ರಾಯಪಟ್ಟಿದೆ. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ ಅವರ ಬಹುಮತದ ತೀರ್ಪು ಈ ಕೆಳಗಿನ ಸಂದರ್ಭಗಳಲ್ಲಿ ಮಧ್ಯಸ್ಥಿಕೆ ತೀರ್ಪುಗಳನ್ನು ಮಾರ್ಪಡಿಸಲು ನ್ಯಾಯಾಲಯಗಳಿಗೆ ಸೀಮಿತ ಅಧಿಕಾರವಿದೆ ಎಂದು ಅಭಿಪ್ರಾಯಪಟ್ಟಿದೆ. 1. ಪ್ರಶಸ್ತಿಯನ್ನು ಬೇರ್ಪಡಿಸಬಹುದಾದಾಗ. 2. ಯಾವುದೇ ಕ್ಲೆರಿಕಲ್, ಲೆಕ್ಕಾಚಾರ ಅಥವಾ ಮುದ್ರಣದ ದೋಷಗಳನ್ನು ಸರಿಪಡಿಸಲು. 3. ಕೆಲವು ಸಂದರ್ಭಗಳಲ್ಲಿ ಪ್ರಶಸ್ತಿ ನಂತರದ ಹಿತಾಸಕ್ತಿಯನ್ನು ಮಾರ್ಪಡಿಸಲು. 4. ಸಂವಿಧಾನದ 142 ನೇ ವಿಧಿಯಿಂದ ನೀಡಲಾದ ಅಧಿಕಾರವನ್ನು ಬಳಸಿಕೊಂಡು ಮಾರ್ಪಾಡುಗಳನ್ನು ಬಹಳ ಎಚ್ಚರಿಕೆಯಿಂದ ಮಾಡಬಹುದು. ನ್ಯಾಯಮೂರ್ತಿ ಕೆ.ವಿ. ವಿಶ್ವನಾಥನ್ ಅವರು ಭಿನ್ನಾಭಿಪ್ರಾಯದ ಅಭಿಪ್ರಾಯವನ್ನು ನೀಡಿದರು. ಭಾರತದ ಮುಖ್ಯ ನ್ಯಾಯಮೂರ್ತಿ ಸಂಜೀವ್ ಖನ್ನಾ, ನ್ಯಾಯಮೂರ್ತಿಗಳಾದ ಬಿ.ಆರ್. ಗವಾಯಿ, ಸಂಜಯ್ ಕುಮಾರ್, ಎ.ಜಿ. ಮಸಿಹ್ ಮತ್ತು ಕೆ.ವಿ. ವಿಶ್ವನಾಥನ್ ಅವರನ್ನೊಳಗೊಂಡ…













