Author: kannadanewsnow09

ಬೆಂಗಳೂರು: ಬಿಬಿಎಂಪಿಯ ಯಲಹಂಕ ವಲಯ ಆಯುಕ್ತರಾದ ಕರೀಗೌಡ ರವರ ನಿರ್ದೇಶನದಂತೆ ನಗರದ ಯಲಹಂಕ ವಲಯದಲ್ಲಿ ಇಂದು ಪಾದಚಾರಿ ಮಾರ್ಗಗಳ ಒತ್ತುವರಿ ತೆರವು ಕಾರ್ಯಾಚರಣೆ ಮಾಡಲಾಯಿತು. ಅಂಗಡಿ-ಮುಂಗಟ್ಟುಗಳು ಹಾಗೂ ಬೀದಿಬದಿ ವ್ಯಾಪಾರಿಗಳು ಪಾದಚಾರಿ ಮಾರ್ಗವನ್ನು ಅನಧಿಕೃತವಾಗಿ ಒತ್ತುವರಿ ಮಾಡಿಕೊಂಡಿರುವುದರಿಂದ ಸಾರ್ವಜನಿಕರ ಸುರಕ್ಷಿತ ಓಡಾಟಕ್ಕೆ ತೊಂದರೆಯಾಗುತ್ತಿರುವುದನ್ನು ಪಾಲಿಕೆಯು ಗಮನಿಸಲಾಗಿ, ಪಾದಚಾರಿ ಮಾರ್ಗ ಒತ್ತುವರಿ ತೆರವು ಕಾರ್ಯಾಚರಣೆಯನ್ನು ಮಾಡಲಾಗುತ್ತಿದೆ. ಇಂದು ಯಲಹಂಕ ವಲಯ ಯಲಹಂಕ ಉಪ ವಿಭಾಗದ ವಾರ್ಡ್ ನಂ.1ಕೆಂಪೇಗೌಡ ವಾರ್ಡ್ ವ್ಯಾಪ್ತಿಯಲ್ಲಿ ಬರುವ ಯಲಹಂಕ ರೈತರ ಸಂತೆ (ಜಕ್ಕೂರು ಮುಖ್ಯರಸ್ತೆ), ಬಿ.ಬಿ.ರಸ್ತೆ, ಸರ್ಕಾರಿ ಆಸ್ಪತ್ರೆ ರಸ್ತೆ, ಯಲಹಂಕ ಮತ್ತು ಡೌನ್ ಬಜಾರ್ ರಸ್ತೆಗಳಲ್ಲಿ ರಸ್ತೆಬದಿ ಮತ್ತು ಪಾದಚಾರಿ ಮಾರ್ಗಗಳಲ್ಲಿ ಇಟ್ಟಿರುವ ಅಂಗಡಿ ಮುಂಗಟ್ಟುಗಳನ್ನು ಮಾರ್ಷಲ್ ಗಳು ಹಾಗು ಪೊಲೀಸ್ ಸಿಬ್ಬಂದಿಗಳ ಸಹಯೋಗದೊಂದಿಗೆ ತೆರವುಗೊಳಿಸಿ, ಪಾದಚಾರಿ ಮಾರ್ಗಗಳನ್ನು ಸಾರ್ವಜನಿಕರ ಓಡಾಟಕ್ಕೆ ಸುಗಮಗೊಳಿಸಲಾಯಿತು. ಈ ಸಮಯದಲ್ಲಿ ಅಂಗಡಿ ಮುಂಗಟ್ಟುಗಳಿಗೆ ದಂಡ ವಿಧಿಸಿ, ದಂಡದ ರೂಪದಲ್ಲಿ ರೂ.12000/- ಗಳನ್ನು ವಸೂಲಿ ಮಾಡಲಾಯಿತು. ಈ ವೇಳೆ ಸಹಾಯಕ ಕಾರ್ಯಪಾಲಕ ಅಭಿಯಂತರರು, ಸಹಾಯಕ…

Read More

ಬೆಳಗಾವಿ : ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸುವ ಕೂಗು ಕುರಿತಂತೆ ಮಾಧ್ಯಮದವರ ಪ್ರಶ್ನೆಗೆ ಅವರು ಇಂದು ಬೆಳಗಾವಿಯಲ್ಲಿ ಈ ರೀತಿ ಪ್ರತಿಕ್ರಿಯೆ ನೀಡಿದರು. ಹೋರಾಟಕ್ಕೆ ವಿರೋಧವಿಲ್ಲ ಪಂಚಮಸಾಲಿ ಸಮುದಾಯದ ಮೀಸಲಾತಿ ಹೋರಾಟದ ಬಗ್ಗೆ ಪ್ರತಿಕ್ರಿಯೆ ನೀಡಿ, ಪಂಚಮಸಾಲಿ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂದರು. ನಾಳೆ ಅಂತ್ಯಕ್ರಿಯೆಯಲ್ಲಿ ಭಾಗಿ ಹಿರಿಯ ನಾಯಕ ಎಸ್ ಎಂ ಕೃಷ್ಣ ಅವರು ಅವರು ದಕ್ಷ ಆಡಳಿತಗಾರ . ವಿಧಾನ ಸಭೆ, ವಿಧಾನ ಪರಿಷತ್ತು, ಲೋಕಸಭೆ ಹಾಗೂ ರಾಜ್ಯಸಭೆಗಳ ಸದಸ್ಯರಾಗಿದ್ದ ಎಸ್ ಎಂ ಕೃಷ್ಣ ಅವರು ಸುದೀರ್ಘ ರಾಜಕೀಯ ಅನುಭವ ಹೊಂದಿದ್ದರು. ರಾಜ್ಯದ ಮುಖ್ಯಮಂತ್ರಿಯಾಗಿ, ಕೇಂದ್ರ ಸಚಿವರಾಗಿ, ವಿಧಾನಸಭೆ…

Read More

ಬೆಂಗಳೂರು: ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾರ್ಯವನ್ನು ಹಮ್ಮಿಕೊಂಡಿರುವುದರಿಂದ ಕೋರಮಂಗಲ ವಿಭಾಗದ ದೇವರಬೀಸನಹಳ್ಳಿ ಮತ್ತು ಆಡುಗೋಡಿ ಉಪಕೇಂದ್ರ ದಲ್ಲಿನ ಈ ಕೆಳಕಂಡ ಪ್ರದೇಶಗಳಲ್ಲಿ 11.12.2024 (ಬುಧವಾರ) ಮತ್ತು 12.12.2024 (ಗುರುವಾರ) ರಂದು ಬೆಳಗ್ಗೆ 10:00 ರಿಂದ ಮಧ್ಯಾಹ್ನ 03:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. “ಬೆಳ್ಳಂದೂರು, ಆರ್ ಎಮ್ ಜೆಡ್, ಎಕ್ಸೊಸ್ಪೇಸ್ ಎಕೋವರ್ಲ್ಡ, ದೇವರಬೀಸನಹಳ್ಳಿ, ಕರಿಯಮ್ಮನ ಅಗ್ರಹಾರ, ಸಕ್ರ ಆಸ್ಪತ್ರೆ, ಪಾಸ್ ಪೋರ್ಟ್ ಆಫೀಸ್, ಶೋಭ ಅಪಾರ್ಟಮೆಂಟ್, ಹೊರ ವರ್ತುಲ ರಸ್ತೆ, 5ನೇ ಇಂಡಸ್ಟ್ರಿಯಲ್ ಲೇಔಟ್, ಕೋರಮಂಗಲ, ಮಡಿವಾಳ ವೆಂಕಟೇಶ್ವರ ಬಡಾವಣೆ, ಚಿಕ್ಕ ಆಡುಗೋಡಿ, ಜೋಗಿ ಕಾಲೋನಿ, ಈಸ್ಟ್ ಲ್ಯಾಂಡ್ ಹೊಲ್ಡಿಂಗ್ ಬಿಲ್ಡಿಂಗ್, ಸೈಂಟ್ ಜಾನ್ ಸ್ಟಾಫ್ ಕ್ವಾಟ್ರಸ್, ಮಾರುತಿನಗರ, ಆಡುಗೋಡಿ 7ನೇ ಮತ್ತು 8ನೇ ಬ್ಲಾಕ್, ಸಿ.ಎ.ಆರ್. ಪೊಲೀಸ್ ಕ್ವಾಟ್ರಸ್, ಆಡುಗೊಡಿ ಮುಖ್ಯ ರಸ್ತೆ, ಸೈಂಟ್ ಜಾನ್ ಆಸ್ಪತ್ರೆ, ಮಡಿವಾಳ, ಮಾರುತಿ ನಗರ, ಡಾಲರ್ಸ್ ಕಾಲೋನಿ, 100 ಫೀಟ್ ರಿಂಗ್ ರಸ್ತೆ, ಆರ್ಯಾಕಲ್ ಕಂಪನಿ, ಬಿ.ಜಿ.ರಸ್ತೆ, ಕೆ.ಹೆಚ್.ಬಿ. ಕಾಲೋನಿ,…

Read More

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ನಿಧನ ಹಿನ್ನಲೆಯಲ್ಲಿ ನಾಳೆ ರಾಜ್ಯ ಸರ್ಕಾರದಿಂದ ಸರ್ಕಾರಿ ರಜೆ ಘೋಷಿಸಿ ಆದೇಶಿಸಿದೆ. ಈ ಕಾರಣದಿಂದಾಗಿ ಕೆ ಎಸ್ ಆರ್ ಟಿ ನಿಗಮಗಳ ಅಧಿಕಾರಿ, ಸಿಬ್ಬಂದಿಗಳಿಗೆ ನಾಳೆ ಸರ್ಕಾರಿ ರಜೆ ಘೋಷಿಸಿ ಆದೇಶಿಸಲಾಗಿದೆ. ಈ ಕುರಿತಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕರು ಆದೇಶ ಹೊರಡಿಸಿದ್ದು, ಮಾಜಿ ಸಿಎಂ ಹಾಗೂ ಕೇಂದ್ರ ಸಚಿವ ಎಸ್ ಎಂ ಕೃಷ್ಣ ಅವರ ನಿಧನದ ಪ್ರಯುಕ್ತ ದಿವಂಗತರ ಗೌರವಾರ್ಥವಾಗಿ ರಾಜ್ಯಾಧ್ಯಂತ ಎಲ್ಲಾ ಸರ್ಕಾರಿ ಕಚೇರಿಗಳಿಗೆ ಮತ್ತು ಶಾಲಾ ಕಾಲೇಜುಗಳಿಗೆ ದಿನಾಂಕ 11-12-2024ರಂದು ಸಾರ್ವಜನಿಕ ರಜೆಯನ್ನು ಸರ್ಕಾರ ಘೋಷಿಸಲಾಗಿರುತ್ತದೆ ಎಂದಿದ್ದಾರೆ. ಕೆ ಎಸ್ ಆರ್ ಟಿ ಸಿ ನಿಗಮದ ಕೇಂದ್ರ ಕಚೇರಿ, ವಿಭಾಗೀಯ ಕಚೇರಿಗಳು, ತರಬೇತಿ ಕೇಂದ್ರಗಳಿಗೆ ಅನ್ವಯಿಸುವಂತೆ ದಿನಾಂಕ 11-12-2024ರಂದು ರಜೆ ಘೋಷಿಸಲು ಸೂಕ್ತಾಧಿಕಾರಿಗಳು ಅನುಮೋದಿಸಿರುತ್ತಾರೆ. ಅದರಂತೆ ಕ್ರಮ ಕೈಗೊಳ್ಳುವಂತೆ ತಿಳಿಸಿದ್ದಾರೆ. ಇನ್ನೂ ಕೆ ಎಸ್ ಆರ್ ಟಿಸಿಯ ನಂತ್ರ ಇತರೆ ಸಾರಿಗೆ ನಿಗಮಗಳು…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಮಾಜಿ ಸಿಎಂ ಎಸ್.ಎಂ ಕೃಷ್ಣ ನಿಧನದ ಹಿನ್ನಲೆಯಲ್ಲಿ ನಾಳೆ ಸರ್ಕಾರಿ ರಜೆ ಘೋಷಣೆ ಮಾಡಲಾಗಿದೆ. ಈ ಕಾರಣದಿಂದ ಬೆಂಗಳೂರಿನ ನಮ್ಮ ಮೆಟ್ರೋ ಅಧಿಕಾರಿ, ಸಿಬ್ಬಂದಿಗಳಿಗೂ ಬಿಎಂಆರ್ ಸಿಎಲ್ ರಜೆ ಘೋಷಿಸಿ ಆದೇಶಿಸಿದೆ. ಈ ಸಂಬಂಧ ಕಚೇರಿ ಆದೇಶವನ್ನು ಹೊರಡಿಸಿರುವಂತ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು, ದಿನಾಂಕ 10.12.2024ರಂತೆ, ಕರ್ನಾಟಕ ರಾಜ್ಯದ ಮಾಜಿ ಮುಖ್ಯಮಂತ್ರಿ ಹಾಗೂ ಕೇಂದ್ರ ಸಚಿವರಾಗಿದ್ದ ಎಸ್ ಎಂ ಕೃಷ್ಣ ರವರ ನಿಧನರಾದ ವಿಷಯವನ್ನು ಕರ್ನಾಟಕ ರಾಜ್ಯ ಸರ್ಕಾರವು ತೀವು ಸಂತಾಪದಿಂದ ಪ್ರಕಟಿಸಿದೆ ಎಂದಿದೆ. ದಿವಂಗತರ ಗೌರವಾರ್ಥವಾಗಿ ದಿನಾಂಕ:11.12.2024ರ ಬುಧವಾರದಂದು ರಾಜ್ಯಾದ್ಯಂತ ಎಲ್ಲಾ ಸರ್ಕಾರಿ ಕಛೇರಿಗಳಿಗೆ ಮತ್ತು ಎಲ್ಲಾ ಶಾಲಾ ಕಾಲೇಜುಗಳಿಗೆ (ಎಲ್ಲಾ ಅನುದಾನಿತ ವಿದ್ಯಾ ಸಂಸ್ಥೆಗಳು ಸೇರಿದಂತೆ ಸಾರ್ವಜನಿಕ ರಜೆಯನ್ನು ಘೋಷಿಸಲಾಗಿದೆ ಎಂದು ಹೇಳಿದೆ. ಈ ಹಿನ್ನೆಲೆಯಲ್ಲಿ ಬೆಂಗಳೂರು ಮೆಟ್ರೋ ರೈಲು ನಿಗಮ ನಿಯಮಿತವು ದಿನಾಂಕ:11.12.2024ರ ಬುಧವಾರದಂದು ರಜೆಯನ್ನು ಘೋಷಿಸಿದೆ ಎಂದು ತಿಳಿಸಿದೆ. https://kannadanewsnow.com/kannada/india-blocks-over-59000-whatsapp-accounts-linked-to-online-frauds/ https://kannadanewsnow.com/kannada/karnatakas-suit-boot-cm-sm-krishna-its-a-journey-of-ups-and-downs/

Read More

ನವದೆಹಲಿ: ಗೃಹ ವ್ಯವಹಾರಗಳ ಸಚಿವಾಲಯದ ಭಾಗವಾಗಿರುವ ಭಾರತೀಯ ಸೈಬರ್ ಅಪರಾಧ ಸಮನ್ವಯ ಕೇಂದ್ರ (ಐ 4 ಸಿ) ಡಿಜಿಟಲ್ ವಂಚನೆಯನ್ನು ಎದುರಿಸಲು ಮತ್ತು ಸೈಬರ್ ಅಪರಾಧಗಳಿಂದ ನಾಗರಿಕರನ್ನು ರಕ್ಷಿಸಲು ಮಹತ್ವದ ಕ್ರಮಗಳನ್ನು ಕೈಗೊಂಡಿದೆ. ಮಂಗಳವಾರ ಲೋಕಸಭೆಯಲ್ಲಿ ನೀಡಿದ ಹೇಳಿಕೆಯ ಪ್ರಕಾರ, ಡಿಜಿಟಲ್ ವಂಚನೆಗಾಗಿ ಬಳಸಲಾಗುತ್ತಿದ್ದ 1,700 ಕ್ಕೂ ಹೆಚ್ಚು ಸ್ಕೈಪ್ ಐಡಿಗಳು ಮತ್ತು 59,000 ಕ್ಕೂ ಹೆಚ್ಚು ವಾಟ್ಸಾಪ್ ಖಾತೆಗಳನ್ನು (  WhatsApp accounts ) ಐ 4 ಸಿ ನಿರ್ಬಂಧಿಸಿದೆ. ಈ ಉಪಕ್ರಮವು ಸೈಬರ್ ಅಪರಾಧವನ್ನು ನಿಗ್ರಹಿಸುವ ಮತ್ತು ತನ್ನ ನಾಗರಿಕರನ್ನು ಆನ್ಲೈನ್ ಬೆದರಿಕೆಗಳಿಂದ ರಕ್ಷಿಸುವ ಭಾರತದ ವಿಶಾಲ ಪ್ರಯತ್ನಗಳ ಭಾಗವಾಗಿದೆ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ ಬಂಡಿ ಸಂಜಯ್ ಕುಮಾರ್ ಅವರು ಐ 4 ಸಿ ಅಡಿಯಲ್ಲಿ 2021 ರಲ್ಲಿ ಪ್ರಾರಂಭಿಸಲಾದ ‘ಸಿಟಿಜನ್ ಫೈನಾನ್ಷಿಯಲ್ ಸೈಬರ್ ಫ್ರಾಡ್ ರಿಪೋರ್ಟಿಂಗ್ ಮತ್ತು ಮ್ಯಾನೇಜ್ಮೆಂಟ್ ಸಿಸ್ಟಮ್’ ನ ಮಹತ್ವವನ್ನು ಒತ್ತಿ ಹೇಳಿದರು. ಈ ವ್ಯವಸ್ಥೆಯು ನಾಗರಿಕರಿಗೆ ನೈಜ ಸಮಯದಲ್ಲಿ ಹಣಕಾಸು…

Read More

ಬೆಂಗಳೂರು: ಹೃದಯಾಘಾತದಿಂದ ನಿಧನರಾಗಿದ್ದಂತ ಮಾಜಿ ಸಿಎಂ ಎಸ್ ಎಂ ಕೃಷ್ಣ ಅವರ ಪಾರ್ಥೀವ ಶರೀರದ ಅಂತಿಮ ದರ್ಶವನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಪಡೆದರು. ಬೆಂಗಳೂರಿನ ಸದಾಶಿವನಗರದಲ್ಲಿರುವಂತ ಅವರ ನಿವಾಸಕ್ಕೆ ತೆರಳಿದಂತ ಸಿಎಂ ಸಿದ್ಧರಾಮಯ್ಯ ಅವರು, ಎಸ್ ಎಂ ಕೃಷ್ಣ ಪಾರ್ಥೀವ ಶರೀರಕ್ಕೆ ಹೂಗುಚ್ಚ ಅರ್ಪಿಸಿ, ಕೈಮುಗಿದು ಅಂತಿಮ ದರ್ಶನವನ್ನು ಪಡೆದರು. ಈ ವೇಳೆ ಮಾತನಾಡಿದಂತ ಅವರು, ಎಸ್ ಎಂ ಕೃಷ್ಣ ಅವರು ಸಿಎಂ ಆಗಿದ್ದಾಗ ಅನೇಕ ಸವಾಲುಗಳನ್ನು ಎದುರಿಸಿದ್ದರು. ಒಬ್ಬ ದೂರದೃಷ್ಠಿ ಇದ್ದಂತ ಮುತ್ಸದ್ದಿ ರಾಜಕಾರಣಿಯಾಗಿದ್ದರು. ದೀರ್ಘ ಕಾಲ ರಾಜ್ಯ, ರಾಷ್ಟ್ರ ರಾಜಕಾರಣದಲ್ಲಿದ್ದರು. 6 ದಶಕಗಳ ಕಾಲ ಸಾರ್ವಜನಿಕ ಜೀವನದಲ್ಲಿ ಇದ್ದರು ಎಂದರು. ಎಸ್ ಎಂ ಕೃಷ್ಣ ಅವರು ಸಮರ್ಥ ಆಡಳಿತಗಾರರಾಗಿದ್ದರು. ಬೆಂಗಳೂರು ಸಿಂಗಾಪುರ ಮಾಡಬೇಕೆಂದು ಕನಸು ಕಂಡಿದ್ರು. ಐಟಿ ಕ್ಷೇತ್ರ ಬೆಳವಣಿಗೆಗೆ ಅಪಾರ ಕೊಡುಗೆಯನ್ನು ನೀಡಿದ್ದಾರೆ. ಇಂದು ಬೆಂಗಳೂರು ಅಂತರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರೋದಕ್ಕೆ ಎಸ್ ಎಂ ಕೃಷ್ಣ ಅವರ ಕೊಡುಗೆ ಕಾರಣ. ಬೆಂಗಳೂರು ಐಟಿ-ಬಿಟಿ ಸಿಟಿಯಾಗಲು ಎಸ್ ಎಂ ಕೃಷ್ಣ ಅಪಾರ…

Read More

ಬೆಳಗಾವಿ: ಬೆಳಗಾವಿಯನ್ನು ಕೇಂದ್ರಾಡಳಿತ ಪ್ರದೇಶವನ್ನಾಗಿಸಬೇಕು ಎನ್ನುವ ವಿಚಾರವೇ ಅಪ್ರಸ್ತುತ. ಬೆಳಗಾವಿಯ ಕುರಿತು ಮಹಾಜನ್ ಆಯೋಗದ ವರದಿಯೇ ಅಂತಿಮವಾಗಿದ್ದು, ಪದೇ ಪದೇ ಜಿಲ್ಲೆಯನ್ನು ಮಹಾರಾಷ್ಟ್ರಕ್ಕೆ ಸೇರಿಸಬೇಕು ಎನ್ನುವುದು ಅವರ ಮೂರ್ಖತನ. ಈ ಬಗ್ಗೆ ನೀಡಲಾಗುತ್ತಿರುವ ಬಾಲಿಶವಾದ ಹೇಳಿಕೆಗಳನ್ನು ಕರ್ನಾಟಕ ಸರ್ಕಾರ ಸಹಿಸುವುದಿಲ್ಲ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಗುಡುಗಿದ್ದಾರೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಪಂಚಮಸಾಲಿ ಸಮುದಾಯದ ಮೀಸಲಾತಿ ಬೇಡಿಕೆ ಸಂಬಂಧ ಸಮುದಾಯದ ಮುಖಂಡರನ್ನು ಚರ್ಚೆಗೆ ಕರೆದಿದ್ದರೂ, ಅವರು ಆಗಮಿಸಿಲ್ಲ. ಪ್ರಜಾಪ್ರಭುತ್ವದಲ್ಲಿ ಹೋರಾಟ ಕೈಗೊಳ್ಳಲು ಅವಕಾಶವಿದ್ದು, ಶಾಂತಿಯುತ ಹೋರಾಟಕ್ಕೆ ನಮ್ಮ ವಿರೋಧವಿಲ್ಲ ಎಂಬುದಾಗಿ ತಿಳಿಸಿದ್ದಾರೆ. ಮಾಜಿ ಮುಖ್ಯಮಂತ್ರಿ ಎಸ್.ಎಂ. ಕೃಷ್ಣ ಅವರ ನಿಧನದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ನಾಳೆ ಸರ್ಕಾರಿ ರಜೆಯನ್ನು ಘೋಷಣೆ ಮಾಡಲಾಗಿದ್ದು, ಮೂರು ದಿನ ಶೋಕಾಚರಣೆ ಇರಲಿದೆ. ನಾಳೆ ಅವರ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳುತ್ತೇನೆ. ಎರಡು ತಿಂಗಳ ಹಿಂದೆ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗ ಕೃಷ್ಣರನ್ನು ಭೇಟಿಯಾಗಿದ್ದೆ ಎಂದಿದ್ದಾರೆ. https://twitter.com/siddaramaiah/status/1866435222104924384 https://kannadanewsnow.com/kannada/aicc-mallikarjun-kharge-condoles-sm-krishnas-death/ https://kannadanewsnow.com/kannada/karnatakas-suit-boot-cm-sm-krishna-its-a-journey-of-ups-and-downs/

Read More

ದೆಹಲಿ: ಪಂಚಮಸಾಲಿ ಸಮುದಾಯದವರು 2 ಎ ಮೀಸಲಾತಿಗಾಗಿ ನಡೆಸುತ್ತಿದ್ದ ಶಾಂತಿಯುತ ಪ್ರತಿಭಟನೆ ಮೇಲೆ ರಾಜ್ಯ ಸರ್ಕಾರ ಪೋಲಿಸರ ಮೂಲಕ ಲಾಠಿಚಾರ್ಜ್ ಮಾಡಿಸುವ ಮೂಲಕ ಕ್ಷಮಿಸಲಾರದ ತಪ್ಪು ಮಾಡಿದ್ದು, ಇದಕ್ಕೆ ಬೆಲೆ ತೆರಬೇಕಾಗುತ್ತದೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ನವ ದೆಹಲಿಯಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಇದು ಜನ ವಿರೋಧಿ ಸರ್ಕಾರ ಅಂತ ಮತ್ತೆ ಮತ್ತೆ ಸಾಬೀತು ಮಾಡುತ್ತಿದೆ. ವಿಶೇಷವಾಗಿ ರೈತರ ವಿರುದ್ದ ಹಲವಾರು ಕ್ರಮಗಳನ್ನು ತೆಗೆದುಕೊಂಡಿದ್ದಾರೆ. ಕಾಲಕಾಲಕ್ಕೆ ಪ್ರವಾಹ, ಬರಗಾಲದ ಪರಿಹಾರ ಕೊಟ್ಟಿಲ್ಲ, ನಾವು ಜಾರಿ ತಂದ ಯೋಜನೆಗಳಿಗೆ ತಿಲಾಂಜಲಿ ಇಟ್ಟಿದ್ದಾರೆ. ರಾಜ್ಯ ಸರ್ಕಾರ ನೀಡುತ್ತಿದ್ದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ಯೋಜನೆ ಸ್ಥಗಿತಗೊಳಿಸಿದ್ದಾರೆ. ನಾನು ಸಿಎಂ ಆಗಿದ್ದಾಗ ರೈತರ ಮಕ್ಕಳಿಗಾಗಿ ಜಾರಿಗೆ ತಂದಿದ್ದ ರೈತ ವಿದ್ಯಾನಿಧಿ ಯೋಜನೆ ನಿಲ್ಲಿಸಿದ್ದಾರೆ. ಒಂದು ರೀತಿಯಲ್ಲಿ ರೈತ ವಿರೋಧಿ ಮತ್ತು ಜನ ವಿರೋಧಿ ಸರ್ಕಾರ ಇದಾಗಿದೆ ಎಂದು ವಾಗ್ದಾಳಿ ನಡೆಸಿದರು. ಸಾಮಾಜಿಕ ನ್ಯಾಯದ ಬಗ್ಗೆ ಮಾತನಾಡುವ ಮುಖ್ಯಮಂತ್ರಿಗಳು ಅದೇ…

Read More

ಬೆಂಗಳೂರು: ಬೆಳಗಾವಿ ಮತ್ತು ಮಣುಗೂರು ನಿಲ್ದಾಣಗಳ ನಡುವೆ ವಾರದಲ್ಲಿ ನಾಲ್ಕು ದಿನ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (ರೈಲು ಸಂಖ್ಯೆ 07335/07336) ರೈಲು ಸೇವೆ ಕಾರ್ಯಾಚರಣೆಯ ಕಾರಣಗಳಿಂದಾಗಿ ಮುಂದಿನ ಸೂಚನೆವರೆಗೆ ರದ್ದುಪಡಿಸಲಾಗುತ್ತಿದೆ. 1. ಡಿಸೆಂಬರ್ 18, 2024 ರಿಂದ ಮುಂದಿನ ಆದೇಶದವರೆಗೆ ಬೆಳಗಾವಿಯಿಂದ ಮಣುಗೂರು ನಿಲ್ದಾಣದವರೆಗೆ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (07335) ರೈಲು ಸಂಚಾರ ರದ್ದುಪಡಿಸಲಾಗಿದೆ. 2. ಡಿಸೆಂಬರ್ 19, 2024 ರಿಂದ ಮುಂದಿನ ಆದೇಶದವರೆಗೆ ಮಣುಗೂರುದಿಂದ ಬೆಳಗಾವಿ ತನಕ ಸಂಚರಿಸುವ ವಿಶೇಷ ಎಕ್ಸ್ ಪ್ರೆಸ್ (07336) ರೈಲು ಸಂಚಾರ ರದ್ದುಪಡಿಸಲಾಗಿದೆ. https://kannadanewsnow.com/kannada/union-minister-hd-kumaraswamy-slams-lathicharge-on-panchamasali-seers-leaders/ ಕರ್ನಾಟಕದ ‘ಸೂಟ್-ಬೂಟ್’ ಸಿಎಂ ಎಸ್.ಎಂ ಕೃಷ್ಣ: ಇದು ಅವರ ಪ್ರಯಾಣದ ಏರಿಳಿತಗಳ ಹಾದಿ | SM Krishna Biography – Kannada News | India News | Breaking news | Live news | Kannada | Kannada News | Karnataka News | Karnataka News

Read More