Subscribe to Updates
Get the latest creative news from FooBar about art, design and business.
Author: kannadanewsnow09
ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಸೋಮವಾರ ರಾತ್ರಿ ಲಘು ಭೂಕಂಪ ಸಂಭವಿಸಿದೆ. ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 5.5 ರಷ್ಟಿತ್ತು ಎಂದು ಕಾಶ್ಮೀರ ಹವಾಮಾನ ಇಲಾಖೆ ತಿಳಿಸಿದೆ. ಭೂಕಂಪದ ಆಳ 10 ಕಿ.ಮೀ. ರಾಷ್ಟ್ರೀಯ ಭೂಕಂಪಶಾಸ್ತ್ರ ಕೇಂದ್ರ 9ಎನ್ಸಿಎಸ್ ಪ್ರಕಾರ, ಭೂಕಂಪದ ಕೇಂದ್ರಬಿಂದು ಲಡಾಖ್ನ ಕಾರ್ಗಿಲ್ನ ವಾಯುವ್ಯಕ್ಕೆ 148 ಕಿ.ಮೀ ದೂರದಲ್ಲಿದೆ. ಶ್ರೀನಗರದಲ್ಲೂ ಭೂಕಂಪದ ಅನುಭವವಾಗಿದೆ. ಭೂಕಂಪನದ ನಂತರ ಈ ಪ್ರದೇಶವನ್ನು ಭೀತಿ ಆವರಿಸಿದೆ. ಭೂಕಂಪದಿಂದಾಗಿ ಯಾವುದೇ ಗಾಯಗಳು ಅಥವಾ ಹಾನಿಯ ಬಗ್ಗೆ ತಕ್ಷಣದ ವರದಿಗಳಿಲ್ಲ. ಈ ಬಗ್ಗೆ ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ. https://twitter.com/ANI/status/1759614105881555355
ನವದೆಹಲಿ: ಬೆಳೆಗಳಿಗೆ ಬೆಂಬಲ ಬೆಲೆ ಸೇರಿದಂತೆ ವಿವಿಧ ಬೇಡಿಕೆ ಈಡೇರಿಕೆಗೆ ಒತ್ತಾಯಿಸಿ ದೆಹಲಿಯಲ್ಲಿ ರೈತರು ಪ್ರತಿಭಟನೆ ನಡೆಸುತ್ತಿದ್ದಾರೆ. ಇಂತಹ ಪ್ರತಿಭಟನಾ ನಿರತ ರೈತರು ಕೇಂದ್ರ ಸರ್ಕಾರ ಮುಂದಿನ ಐದು ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ ಐದು ಬೆಳೆಗಳನ್ನು ಖರೀದಿಸುವುದಾಗಿ ರೈತರ ಮುಂದಿಟ್ಟ ಪ್ರಸ್ತಾವನೆಯನ್ನು ರೈತ ಸಂಘಟನೆಗಳು ತಿರಸ್ಕರಿಸಿದ್ದಾರೆ. ಈ ಕುರಿತಂತೆ ಶಂಭು ಗಡಿಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ರೈತ ಮುಖಂಡ ಜಗಜಿತ್ ಸಿಂಗ್ ದಲ್ಲೆವಾಲ್, “… ಎರಡೂ ವೇದಿಕೆಗಳ ಚರ್ಚೆಯ ನಂತರ, ನೀವು ವಿಶ್ಲೇಷಿಸಿದರೆ, ಸರ್ಕಾರದ ಪ್ರಸ್ತಾಪದಲ್ಲಿ ಏನೂ ಇಲ್ಲ ಎಂದು ನಿರ್ಧರಿಸಲಾಗಿದೆ… ಇದು ರೈತರ ಪರವಾಗಿಲ್ಲ. ನಾವು ಅದನ್ನು ತಿರಸ್ಕರಿಸುತ್ತೇವೆ ಎಂದಿದ್ದಾರೆ. https://twitter.com/ANI/status/1759610633937408178 ಮುಂದಿನ ಐದು ವರ್ಷಗಳಲ್ಲಿ ಕನಿಷ್ಠ ಬೆಂಬಲ ಬೆಲೆಯಲ್ಲಿ (ಎಂಎಸ್ಪಿ) ಐದು ಬೆಳೆಗಳನ್ನು ಖರೀದಿಸುವ ಕೇಂದ್ರದ ಪ್ರಸ್ತಾಪವನ್ನು ರೈತ ಮುಖಂಡರು ಸೋಮವಾರ ಸಂಜೆ ತಿರಸ್ಕರಿಸಿದರು ಮತ್ತು ಫೆಬ್ರವರಿ 21 ರಂದು ಪಂಜಾಬ್-ಹರಿಯಾಣ ಶಂಭು ಗಡಿಯಿಂದ ರಾಷ್ಟ್ರ ರಾಜಧಾನಿಗೆ ತಮ್ಮ ‘ದೆಹಲಿ ಚಲೋ’ ಮೆರವಣಿಗೆಯನ್ನು ಪುನರಾರಂಭಿಸುವುದಾಗಿ ಘೋಷಿಸಿದರು.
ಬೆಂಗಳೂರು: ಅನಾರೋಗ್ಯದಿಂದ ಅಕಾಲಿಕ ಮರಣಕ್ಕೆ ತುತ್ತಾದ ಈ ಬಡತಾಯಿಯ ಮಗನ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ. ಈ ಬಗ್ಗೆ ಎಕ್ಸ್ ಮಾಡಿರುವಂತ ಅವರು, ‘ಗೃಹಲಕ್ಷ್ಮಿ ಯೋಜನೆ ದುಡ್ಡು ನಿನಗೆ ಬರುತ್ತೆ, ನಾನಿಲ್ಲ ಎಂದು ಚಿಂತಿಸಬೇಡ’ ಎಂದು ಮಗನ ಮಾತನ್ನು ನೆನಪು ಮಾಡಿಕೊಂಡು ಆತನ ಶವದೆದುರು ತಾಯಿ ರೋದಿಸುತ್ತಿರುವುದನ್ನು ನೋಡಿ ಎದೆ ಭಾರವಾಯಿತು. ಯಾವ ತಾಯಿಗೂ ಎದೆಯೆತ್ತರಕ್ಕೆ ಬೆಳೆದ ಮಗನ ಚಿತೆಗೆ ಅಗ್ನಿಸ್ಪರ್ಶ ಮಾಡುವ ಸ್ಥಿತಿ ಬಾರದಿರಲಿ ಎಂದು ಕಂಬನಿ ಮಿಡಿದ್ದಾರೆ. ನಾವು ಗೃಹಲಕ್ಷ್ಮಿ ಯೋಜನೆ ಘೋಷಣೆ ಮಾಡಿದ ದಿನದಿಂದ ಇಂದಿನ ವರೆಗೆ ಕೆಲವರಿಂದ ಅಪಪ್ರಚಾರ, ಟೀಕೆ, ವ್ಯಂಗ್ಯಗಳು ವ್ಯಕ್ತವಾಗುತ್ತಲೇ ಇದೆ, ಇದಾವುದಕ್ಕೂ ನಾನು ತಲೆಕೆಡಿಕೊಂಡಿಲ್ಲ. ಕಾರಣ ಇಂತಹ ಲಕ್ಷಾಂತರ ಬಡತಾಯಂದಿರಿಗೆ ನಮ್ಮ ಯೋಜನೆ ಮೂರು ಹೊತ್ತು ನೆಮ್ಮದಿಯ ಅನ್ನ ನೀಡಿ ಬದುಕಿಗೆ ಆಧಾರವಾಗಿದೆ. ಬಡತನ, ಹಸಿವು, ಅನಾಥಭಾವ ಅನುಭವಿಸಿದವರಿಗಷ್ಟೇ ಅದರ ನೋವು, ಹತಾಶೆ ಅರಿವಾಗಲು ಸಾಧ್ಯ ಎಂದಿದ್ದಾರೆ. ಈ ತಾಯಿಯ ಜೊತೆ ನಮ್ಮ ಸರ್ಕಾರ ಇದೆ, ಮಗನ…
ಬೆಂಗಳೂರು: ಮಾರ್ಚ್, ಏಪ್ರಿಲ್ ನಲ್ಲಿ ನಡೆಯಲಿರುವಂತ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಬಗ್ಗೆ ಮಹತ್ವದ ಮಾಹಿತಿಯನ್ನು ನಾಳೆ ಶಿಕ್ಷಣ ಸಚಿವ ಮಧು ಬಂಗಾರಪ್ಪ ಸುದ್ದಿಗೋಷ್ಠಿಯಲ್ಲಿ ಹಂಚಿಕೊಳ್ಳಲಿದ್ದಾರೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿಯ ನಿರ್ದೇಶಕರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದಂತ ಮಧು ಬಂಗಾರಪ್ಪನವರು ದಿನಾಂಕ 20-02-2024ರಂದು ಬೆಳಿಗ್ಗೆ 11.30 ಗಂಟೆಗೆ ಕೊಠಡಿ ಸಂಖ್ಯೆ 112, ವಿಕಾಸಸೌಧ, ಬೆಂಗಳೂರು ಇಲ್ಲಿ 2024ರ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಕುರಿತು ವಿವರ ನೀಡುವರು. ನಾಳೆ ಬೆಳಿಗ್ಗೆ 11.30ಕ್ಕೆ ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆ-1ರ ಬಗ್ಗೆ ಮಹತ್ವದ ಮಾಹಿತಿಯನ್ನು ಸುದ್ದಿಗೋಷ್ಠಿಯಲ್ಲಿ ಹಂಚಿಕೊಳ್ಳಲಿದ್ದಾರೆ ಎಂದು ತಿಳಿಸಿದ್ದಾರೆ. https://kannadanewsnow.com/kannada/here-are-the-highlights-of-the-monkey-disease-control-meeting-chaired-by-todays-minister-dinesh-gundu-rao/ https://kannadanewsnow.com/kannada/hc-issues-notice-to-self-styled-godman-nithyananda-for-allegedly-holding-devotee-hostage-at-ashram/
ಬೆಂಗಳೂರು: ಇಂದು ರಾಜ್ಯದ ಮಲೆನಾಡಿನ ಬಾಗದಲ್ಲಿ ಹೆಚ್ಚಾಗುತ್ತಿರುವಂತ ಮಂಗನ ಕಾಯಿಲೆ ನಿಯಂತ್ರಣ ಸಂಬಂಧ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ನೇತೃತ್ವದಲ್ಲಿ ಮಹತ್ವದ ಸಭೆ ನಡೆಯಿತು. ಈ ಸಭೆಯಲ್ಲಿ ಏನೆಲ್ಲ ಚರ್ಚೆ ಆಯ್ತು ಅನ್ನೋ ಬಗ್ಗೆ ಹೈಲೈಟ್ಸ್ ಮುಂದೆ ಓದಿ. ಚಿಕ್ಕಮಗಳೂರು, ಉತ್ತರ ಕನ್ನಡ, ಶಿವಮೊಗ್ಗ ಜಿಲ್ಲೆಗಳ ತಾಲೂಕುಗಳಲ್ಲಿ ಮಂಗನ ಕಾಯಿಲೆ ನಿಯಂತ್ರಣ ಕುರಿತಂತೆ ಮಲೆನಾಡು ಭಾಗದ ಶಾಸಕರು ಹಾಗೂ ಆರೋಗ್ಯ ಇಲಾಖೆ ಅಧಿಕಾರಿಗಳೊಂದಿಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಇಂದು ಮಹತ್ವದ ಸಭೆ ನಡೆಸಿದರು. ಮಂಗನ ಕಾಯಿಲೆ ತಡೆಗಟ್ಟುವ ನಿಟ್ಟಿನಲ್ಲಿ ಆರೋಗ್ಯ ಇಲಾಖೆ ಕೈಗೊಂಡ ಕ್ರಮಗಳ ಕುರಿತು ಸಭೆಯಲ್ಲಿ ಚರ್ಚೆ ನಡೆಸಿದ ಸಚಿವರು, ಕಾಯಿಲೆ ನಿಯಂತ್ರಣಕ್ಕೆ ಹೆಚ್ಚಿನ ಕ್ರಮಗಳ ಕುರಿತು ಶಾಸಕರ ಅಭಿಪ್ರಾಯ ಆಲೀಸಿದರು. ಮಂಗನ ಕಾಯಿಲೆ ರೋಗಲಕ್ಷಣಗಳು ಕಂಡುಬಂದ ತಕ್ಷಣ ಟೆಸ್ಟಿಂಗ್ ಶೀಘ್ರಗತಿಯಲ್ಲಿ ನಡೆಸುವಂತೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು. ಅಲ್ಲದೇ ಕೆಎಫ್.ಡಿ ಪಾಸಿಟಿವ್ ಬಂದವರನ್ನ ಕಡ್ಡಾಯವಾಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡುವಂತೆ ಸೂಚನೆ ನೀಡಿದರು.…
ಬೆಂಗಳೂರು: ಇತ್ತೀಚೆಗೆ ವಿಧಾನಸೌಧ ಮುಂಭಾಗ ನಡೆದ ಮಾನ್ಯ ಮುಖ್ಯಮಂತ್ರಿಯವರ ಜನಸ್ಪಂದನ ಕಾರ್ಯಕ್ರಮವು ನಿರೀಕ್ಷೆಗೂ ಮೀರಿ ಯಶಸ್ವಿಯಾಗಿದ್ದು, ಸ್ವೀಕರಿಸಿದ ಅರ್ಜಿಗಳ ಸಕಾರಾತ್ಮಕ ವಿಲೇವಾರಿಗೆ ಕ್ರಮ ಕೈಗೊಳ್ಳುವಂತೆ ಮುಖ್ಯಮಂತ್ರಿಯವರ ಅಪರ ಮುಖ್ಯ ಕಾರ್ಯದರ್ಶಿ ಎಲ್.ಕೆ. ಅತೀಕ್ ಅವರು ಸೂಚಿಸಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಜನಸ್ಫಂದನ ಕಾರ್ಯಕ್ರಮದ ಪರಾಮರ್ಶೆಗಾಗಿ, ಆಯೋಜನೆಯಲ್ಲಿ ಭಾಗಿಯಾದ ಅಧಿಕಾರಿಗಳ ಸಭೆ ನಡೆಸಿ ಈ ಸೂಚನೆ ನೀಡಿದರು. ಜನಸ್ಪಂದನ ಕಾರ್ಯಕ್ರಮದ ಯಶಸ್ಸಿನ ಕುರಿತು ಮಾನ್ಯ ಮುಖ್ಯಮಂತ್ರಿಯವರೂ ಮೆಚ್ಚುಗೆ ವ್ಯಕ್ತಪಡಿಸಿದ್ದು, ಅವರು ಇದಕ್ಕೆ ಸಾಂಸ್ಥಿಕ ರೂಪ ನೀಡಿ ಇನ್ನಷ್ಟು ವ್ಯವಸ್ಥಿತವಾಗಿ ಕಾರ್ಯಕ್ರಮ ನಡೆಸಬೇಕೆಂದು ಅಪೇಕ್ಷಿಸಿದ್ದಾರೆ ಎಂದರು. ವಿಭಾಗ ಮಟ್ಟದಲ್ಲಿ ಜನಸ್ಪಂದನ ಜನಸ್ಪಂದನ ಕಾರ್ಯಕ್ರಮವನ್ನು ವಿಭಾಗ ಮಟ್ಟದಲ್ಲಿ ನಡೆಸುವ ಕುರಿತೂ ಸಹ ಚಿಂತನೆ ನಡೆದಿದೆ. ಮೊದಲಿಗೆ ಕಲಬುರ್ಗಿಯಲ್ಲಿ ವಿಭಾಗಮಟ್ಟದ ಜನಸ್ಪಂದನ ನಡೆಸಲು ಉದ್ದೇಶಿಸಿದೆ. ವಿಭಾಗ ಮಟ್ಟದಲ್ಲಿ ಸಂಬಂಧಿಸಿದ ಜಿಲ್ಲಾಧಿಕಾರಿಗಳು ಖುದ್ದು ಭಾಗವಹಿಸಲು ಸೂಚಿಸಲಾಗುವುದು ಎಂದು ತಿಳಿಸಿದರು. 11 ದಿನದಲ್ಲಿ 4321 ಅರ್ಜಿ ವಿಲೇವಾರಿ ಮೊನ್ನೆ ಸ್ವೀಕರಿಸಲಾದ 14,685 ಅರ್ಜಿಗಳ ಪೈಕಿ 4321 ಅರ್ಜಿಗಳನ್ನು ಈಗಾಗಲೇ ವಿಲೇವಾರಿ…
ತುಳಸಿ ಗಿಡವನ್ನು ಪ್ರತಿಯೊಬ್ಬರೂ ಪೂಜೆ ಮಾಡುತ್ತಾರೆ.ಬೆಳಗಿನ ಜಾವ ನೀರನ್ನು ಅರ್ಪಿಸಿ ಸಂಜೆಯ ವೇಳೆ ದೀಪವನ್ನು ಉರಿಸುತ್ತಾರೆ.ತುಳಸಿ ಪ್ರಭಾವವು ಅಧಿಕ ಪ್ರಭಾವ ಬಿರುತ್ತದೆ ಹಾಗೂ ತುಳಸಿ ಪೂಜೆ ಮಾಡುವುದರಿಂದ ಮನೆಯಲ್ಲಿ ಧನ ಸಂಪತ್ತು, ಸುಖ, ಶಾಂತಿ, ವೃದ್ಧಿಯಾಗುತ್ತದೆ. ಭಗವಂತನಾದ ಶ್ರೀವಿಷ್ಣು ಹಾಗೂ ತಾಯಿ ಲಕ್ಷ್ಮಿ ದೇವಿಯ ಕೃಪೆ ಆ ಮನೆಯಲ್ಲೂ ಕೂಡ ಇರುತ್ತದೆ.ಯಾರ ಮನೆಯಲ್ಲಿ ತುಳಸಿ ಇರುತ್ತದೆಯೋ ಹಾಗೂ ತುಳಸಿ ಪೂಜೆ ಮಾಡಿದರೆ ಅವರ ಮೇಲೆ ಎಲ್ಲಾ ದೇವನು ದೇವತೆಗಳ ಕೃಪೆ ಇರುತ್ತದೆ ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ ಆಗದೆ ನೋಂದಿದ್ದರೆ…
ಬೆಂಗಳೂರು: ಜ್ಞಾನ ದೇಗುಲವಿದು ಎಂಬ ಘೋಷವಾಕ್ಯ ಬದಲಾವಣೆಯನ್ನು ಮಾಡಿದ್ದು, ಈಗ ವಿವಾದಕ್ಕೆ ಕಾರಣವಾಗಿತ್ತು. ಆ ಬೆನ್ನಲ್ಲೇ ರಾಜ್ಯ ಸರ್ಕಾರ ವಿವಾದಕ್ಕೆ ತೆರೆ ಎಳೆಯುವಂತೆ ಘೋಷವಾಕ್ಯವನ್ನು ಬದಲಾವಣೆ ಮಾಡಲಾಗಿತ್ತು. ಈ ಬಗ್ಗೆ ಸಮಾಜ ಕಲ್ಯಾಣ ಸಚಿವ ಹೆಚ್.ಸಿ ಮಹದೇವಪ್ಪ ಏನು ಹೇಳಿದ್ರು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಜ್ಞಾನ ದೇಗುಲವಿದು ಎಂಬ ಘೋಷವಾಕ್ಯಕ್ಕೆ ಸಂಬಂಧಿಸಿದಂತೆ ಬೆಳಗಿನಿಂದ ಮಾಧ್ಯಮಗಳಲ್ಲಿ ಸುದ್ದಿಯು ಬಿತ್ತರವಾಗುತ್ತಿದೆ. ಈ ವಿಷಯಕ್ಕೆ ಸಂಬಂಧಿಸಿದಂತೆ ಹೇಳುವುದಾದರೆ, ಸರ್ಕಾರದ ವತಿಯಿಂದ ಈಗ ಪ್ರಸ್ತುತ ಇರುವ ಘೋಷವಾಕ್ಯವನ್ನು ತೆಗೆದುಹಾಕುವ ಯಾವುದೇ ಆದೇಶವನ್ನು ಹೊರಡಿಸಲಾಗಿಲ್ಲ ಎಂಬುದಾಗಿ ಸ್ಪಷ್ಟ ಪಡಿಸಿದ್ದಾರೆ. ಆದರೆ ಸೃಜನಾತ್ಮಕ ಕಲಿಕೆಯ ದೃಷ್ಟಿಯಿಂದ, ಮಕ್ಕಳಲ್ಲಿ ವೈಜ್ಞಾನಿಕತೆ ಹಾಗೂ ವೈಚಾರಿಕತೆಯನ್ನು ಮೂಡಿಸಿ ಅವರಲ್ಲಿ ಯೋಚನಾ ಶಕ್ತಿಯನ್ನು ಹರಡುವ ದೃಷ್ಟಿಯಿಂದ ಸಾಮಾಜಿಕ ಜಾಲತಾಣದ ಗುಂಪಿನಲ್ಲಿ ಚರ್ಚೆಯನ್ನು ನಡೆಸಿದ್ದು, ಜ್ಞಾನ ದೇಗುಲವಿದು – ಧೈರ್ಯವಾಗಿ ಪ್ರಶ್ನಿಸಿ ಎಂದು ಶಾಲೆಗಳಲ್ಲಿ ಹಾಕಿದರೆ ಹೇಗೆ? ಎಂಬ ಆಲೋಚನೆಯನ್ನು ಕೆಲವರು ಮುಂದಿಟ್ಟಾಗ, ಅದಕ್ಕೆ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿರುತ್ತದೆ. ಉತ್ತಮ…
ಬೆಂಗಳೂರು: ರಾಜ್ಯದ 1127 ಗ್ರಾಮ ಪಂಚಾಯತಿಗಳನ್ನು ಮೇಲ್ದರ್ಜೆಗೆ ಏರಿಸುವ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆಯ ಪ್ರಸ್ತಾವನೆ ಆರ್ಥಿಕ ಇಲಾಖೆಯಿಂದ ಹಿಂದಕ್ಕೆ ಬಂದಿದ್ದು, ಅಗತ್ಯ ಮಾಹಿತಿಗಳೊಂದಿಗೆ ಮತ್ತೊಮ್ಮೆ ಪ್ರಸ್ತಾಪವನ್ನು ಆರ್ಥಿಕ ಇಲಾಖೆಗೆ ಕಳುಹಿಸಿಕೊಡಲಾಗುವುದೆಂದು ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಮತ್ತು ಮಾಹಿತಿ ತಂತ್ರಜ್ಞಾನ ಸಚಿವರಾದ ಪ್ರಿಯಾಂಕ್ ಖರ್ಗೆ ತಿಳಿಸಿದರು. ಸಚಿವರು ಕರ್ನಾಟಕ ರಾಜ್ಯ ಗ್ರಾಮ ಪಂಚಾಯತಿ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಸಚಿವರು ಇಂದು ವಿಕಾಸಸೌಧದದಲ್ಲಿ ಸಭೆ ನಡೆಸಿ, ಸಂಘದ ಬೇಡಿಕೆಗಳನ್ನು ಆಲಿಸಿದರು. ಸೇವಾ ಹಿರಿತನದ ಬಗ್ಗೆ ಮಾಡಿದ ಮನವಿಗೆ ಉತ್ತರಿಸಿದ ಸಚಿವರು ಸಿ ಅಂಡ್ ಆರ್ ನಿಯಮಗಳನ್ನು ಅಂತಿಮಗೊಳಿಸಲಾಗುತ್ತಿದ್ದು ಅದರಂತೆ ಹಿರಿತನವನ್ನು ಪರಿಗಣಿಸಲಾಗುವುದು ಎಂದು ಹೇಳಿದರು. ನೌಕಕರು ಸೇವೆಯ ಮೇಲಿದ್ದಾಗ ಆಗುವ ಪ್ರಾಣಹಾನಿ ಸಮಯದಲ್ಲಿ ಸೂಕ್ತ ಪರಿಹಾರ ನೀಡುವ ಬಗ್ಗೆ ಪರಿಶೀಲನೆ ನಡೆಸಲು ಅಧಿಕಾರಿಗಳಿಗೆ ಸೂಚಿಸಿದರು. ಸಂಘದ ಅಡಿ ಗ್ರಾಮ ಪಂಚಾಯತಿಗಳ ವಾಟರ್ಮ್ಯಾನ್ಗಳು, ಬಿಲ್ ಕಲೆಕ್ಟರ್ಗಳು, ಡಾಟ ಎಂಟ್ರಿ ಆಪರೇಟರ್ಗಳು, ಅಟೆಂಡರ್ಗಳು ಹಾಗೂ ಸ್ವೀಪರ್ಗಳು ಬರಲಿದ್ದು ಈ ವೃಂದದ ನೌಕರರಿಗೆ ಇ-ಅಟೆಂಡೆನ್ಸ್ ವ್ಯಾಪ್ತಿಯಿಂದ ವಿನಾಯತಿ…
ಬೆಂಗಳೂರು: ದಿವಂಗತ ಜಯಲಲಿತಾ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ಕರ್ನಾಟಕಕ ಜಪ್ತಿ ಮಾಡಿದ್ದಂತ ಒಡವೆಗಳನ್ನು ತಮಿಳುನಾಡಿಗೆ ಹಿಂದಿರುಗಿಸಲು ಕೋರ್ಟ್ ದಿನಾಂಕ ಫಿಕ್ಸ್ ಮಾಡಿದೆ. ಈ ಪ್ರಕರಣ ಸಂಬಂಧ ವಿಚಾರಣೆ ನಡೆಸಿದಂತ ಬೆಂಗಳೂರಿನ ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದಂತ ಮೋಹನ್ ಅವರು, ದಿವಂಗತ ಜಯಲಲಿತಾ ಅವರ ವಿರುದ್ಧದ ಆದಾಯ ಮೀರಿ ಆಸ್ತಿ ಗಳಿಕೆ ಪ್ರಕರಣ ಸಂಬಂಧ ವಶಪಡಿಸಿಕೊಂಡಿರುವಂತ ಒಡವೆಗಳನ್ನು ತಮಿಳುನಾಡು ಸರ್ಕಾರಕ್ಕೆ ಹಿಂದಿರುಗಿಸಲು ದಿನಾಂಕ ನಿಗದಿ ಪಡಿಸಲಾಗಿದೆ. ಮಾರ್ಚ್.6 ಮತ್ತು 7ರಂದು ತಮಿಳುನಾಡು ಸರ್ಕಾರಕ್ಕೆ ಒಡವೆಗಳನ್ನು ಹಿಂದಿರುಗಿಸಲು ದಿನಾಂಕ ನಿಗದಿ ಪಡಿಸಿದೆ. ಅಲ್ಲದೇ ಒಡವೆ ಸ್ವೀಕರಿಸಲು ತಮಿಳುನಾಡಿನ ಇಬ್ಬರು ಅಧಿಕಾರಿಗಳನ್ನು ನೇಮಕ ಮಾಡಲಾಗಿದೆ. ತಮಿಳುನಾಡಿನ ಗೃಹ ಪ್ರಧಾನ ಕಾರ್ಯದರ್ಶಿ ಹಾಗೂ ಐಜಿಪಿ ವಿಜೆಲೆನ್ಸ್ ಹಾಜರಿರಬೇಕು. ಒಡವೆ ಒಯ್ಯಲು 6 ಟ್ರಂಕ್ ಗಳನ್ನು ತರಲು ಕೋರ್ಟ್ ಸೂಚಿಸಿದೆ. ವೀಡಿಯೋ ಗ್ರಾಫರ್, ಪೋಟೋ ಗ್ರಾಫರ್ ಕರೆತರಲು ಸೂಚಿಸಿದೆ. ಇನ್ನೂ ಎರಡು ದಿನಗಳು ಸಿಟಿ ಸಿವಿಲ್ ಕೋರ್ಟ್ ನಲ್ಲಿ ಭದ್ರತೆಯನ್ನು ಕೈಗೊಳ್ಳೋದಕ್ಕೆ ಸೂಚಿಸಿರುವಂತ ಕೋರ್ಟ್, ಮುಂದಿನ…