Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಐ.ಎನ್.ಡಿ.ಐ.ಎ. ಬಣಕ್ಕೆ ಸೇರಿದ ಎಲ್ಲಾ ಪಕ್ಷಗಳು ಮಂಗಳವಾರ ರಾಜ್ಯಸಭಾ ಅಧ್ಯಕ್ಷ ಮತ್ತು ಉಪರಾಷ್ಟ್ರಪತಿ ಜಗದೀಪ್ ಧನ್ಕರ್ ವಿರುದ್ಧ ಅವಿಶ್ವಾಸ ನಿರ್ಣಯವನ್ನು ಸಲ್ಲಿಸಿವೆ. ಪ್ರತಿಪಕ್ಷಗಳ ಮೈತ್ರಿಕೂಟಕ್ಕೆ ಸೇರಿದ ಸುಮಾರು 60 ಸಂಸದರು ನೋಟಿಸ್ಗೆ ಸಹಿ ಹಾಕಿದ್ದಾರೆ ಎಂದು ಪಿಟಿಐ ವರದಿ ಮಾಡಿದೆ. ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್ ಅವರು ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಎಕ್ಸ್ನಲ್ಲಿ ಪೋಸ್ಟ್ ಮಾಡಿ, “ಭಾರತ ಗುಂಪಿಗೆ ಸೇರಿದ ಎಲ್ಲಾ ಪಕ್ಷಗಳಿಗೆ ರಾಜ್ಯಸಭೆಯ ಗೌರವಾನ್ವಿತ ಅಧ್ಯಕ್ಷರ ವಿರುದ್ಧ ಔಪಚಾರಿಕವಾಗಿ ಅವಿಶ್ವಾಸ ನಿರ್ಣಯವನ್ನು ಸಲ್ಲಿಸುವುದನ್ನು ಬಿಟ್ಟು ಬೇರೆ ಆಯ್ಕೆಯಿಲ್ಲ. ಇದು ಭಾರತೀಯ ಪಕ್ಷಗಳಿಗೆ ತೆಗೆದುಕೊಂಡ ಅತ್ಯಂತ ನೋವಿನ ನಿರ್ಧಾರವಾಗಿದೆ, ಆದರೆ ಸಂಸದೀಯ ಪ್ರಜಾಪ್ರಭುತ್ವದ ಹಿತದೃಷ್ಟಿಯಿಂದ ಅವರು ಈ ಕ್ರಮವನ್ನು ತೆಗೆದುಕೊಳ್ಳಬೇಕಾಯಿತು” ಎಂದು ಅವರು ಹೇಳಿದರು. ಈ ನಿರ್ಣಯವನ್ನು ರಾಜ್ಯಸಭೆಯ ಪ್ರಧಾನ ಕಾರ್ಯದರ್ಶಿಗೆ ಸಲ್ಲಿಸಲಾಯಿತು. https://kannadanewsnow.com/kannada/sm-krishna-statue-should-be-erected-in-vidhana-soudha-h-k-patil-to-cm-siddaramaiah/
ನವದೆಹಲಿ: ಹಿಮಾಚಲ ಪ್ರದೇಶದ ಕುಲ್ಲು ಜಿಲ್ಲೆಯ ಅನಿ ಉಪವಿಭಾಗದಲ್ಲಿ 25-30 ಪ್ರಯಾಣಿಕರನ್ನು ಹೊತ್ತ ಖಾಸಗಿ ಬಸ್ ಮಂಗಳವಾರ ಆಳವಾದ ಕಮರಿಗೆ ಬಿದ್ದಿದೆ ಎಂದು ಸುದ್ದಿ ಸಂಸ್ಥೆ ಎಎನ್ಐ ವರದಿ ಮಾಡಿದೆ. ಅಪಘಾತದ ನಂತರ ಬಸ್ ಚಾಲಕ ಸ್ಥಳದಲ್ಲೇ ಮೃತಪಟ್ಟಿದ್ದಾನೆ ಎಂದು ಕುಲ್ಲು ಜಿಲ್ಲಾಧಿಕಾರಿ ಟೊರುಲ್ ಎಸ್.ರವೀಶ್ ತಿಳಿಸಿದ್ದಾರೆ. ಪ್ರಯಾಣಿಕರನ್ನು ಪ್ರಾಥಮಿಕ ಚಿಕಿತ್ಸೆಗಾಗಿ ಆಸ್ಪತ್ರೆಗೆ ಸ್ಥಳಾಂತರಿಸಲಾಗಿದೆ. ನಮ್ಮ ತಂಡ ಸ್ಥಳದಲ್ಲೇ ಇದೆ. https://twitter.com/ANI/status/1866386961214390749 https://kannadanewsnow.com/kannada/minister-h-k-patil-condoles-the-death-of-former-cm-sm-krishna/
ಬೆಂಗಳೂರು: ಹೃದಯಾಘಾತದಿಂದ ಮಾಜಿ ಮುಖ್ಯಮಂತ್ರಿ ಎಸ್ಎಂ ಕೃಷ್ಣ ಅವರು ನಿಧನರಾಗಿದ್ದಾರೆ. ಅವರ ನಿಧನಕ್ಕೆ ಕಾನೂನು, ನ್ಯಾಯ, ಮಾನವ ಹಕ್ಕುಗಳು, ಸಂಸದೀಯ ವ್ಯವಹಾರಗಳು, ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಸಂತಾಪ ಸೂಚಿಸಿದ್ದಾರೆ. ಈ ಕುರಿತಂತೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿರುವಂತ ಅವರು, ಜನತೆಯ ಆರ್ಥಿಕ ಉತ್ಕರ್ಷಕ್ಕೆ ಕಾರಣವಾಗುವ ಕರ್ನಾಟಕದ ಅಭಿವೃದ್ಧಿಯ ಚಿಂತನೆ ಮತ್ತು ಅಭಿವೃದ್ಧಿ ಗತಿಯ ಚಲನ ಶೀಲತೆಯನ್ನು ಸವಾಲಾಗಿ ಸ್ವೀಕರಿಸಿ, ಪ್ರಾದೇಶಿಕ ಅಸಮತೋಲನವನ್ನು ಸಮತೋಲನಗೊಳಿಸುವ ನಿಟ್ಟಿನಲ್ಲಿ ಪ್ರಾದೇಶಿಕ ತಾರತಮ್ಯ ನಿವಾರಣೆಯ ಸದುದ್ದೇಶದಿಂದ ಡಿ.ಎಂ. ನಂಜುಂಡಪ್ಪ ಅವರ ನೇತೃತ್ವದಲ್ಲಿ ಉನ್ನತಾಧೀಕಾರ ಸಮಿತಿಯನ್ನು ನೇಮಿಸಿ ಉತ್ತರ ಕರ್ನಾಟಕದ ಅಭಿವೃದ್ಧಿಪರ ಚಿಂತನೆಯನ್ನು ಎತ್ತರಕ್ಕೆ ಕೊಂಡೊಯ್ದ ಕಾಲಘಟ್ಟದಲ್ಲಿ ಕರ್ನಾಟಕದ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ ಎಸ್.ಎಂ. ಕೃಷ್ಣ ಅವರ ನಿಧನದಿಂದ ಕನ್ನಡ ನಾಡು ಬಡವಾಗಿದೆ ಎಂದಿದ್ದಾರೆ. ಡಿ.ಎಂ. ನಂಜುಂಡಪ್ಪ ಸಮಿತಿಯನ್ನು ನೇಮಕ ಮಾಡಬೇಕೆಂಬ ಸಲಹೆಯನ್ನು ಅತ್ಯಂತ ಗೌರವದಿಂದ ಸ್ವೀಕರಿಸಿ ಉತ್ತರ ಕರ್ನಾಟಕಕ್ಕೆ ನ್ಯಾಯ ಒದಗಿಸಿದ ಎಸ್.ಎಂ. ಕೃಷ್ಣ ಅವರನ್ನು ನಾನು ಅತ್ಯಂತ ಕೃತಾಂಜಲಿಯಿಂದ ನೆನೆಯುವೆ.…
ಕಲಬುರಗಿ : ಕರ್ನಾಟಕದ ಮಾಜಿ ಮುಖ್ಯಮಂತ್ರಿ, ಕೇಂದ್ರದ ಮಾಜಿ ವಿದೇಶಾಂಗ ಸಚಿವರು, ಪಕ್ಷದ ಹಿರಿಯ ನಾಯಕ ಹಾಗೂ ಎಸ್.ಎಂ.ಕೃಷ್ಣ ಅವರ ಅಗಲಿಕೆಗೆ ಮಾಜಿ ಶಾಸಕ ರಾಜಕುಮಾರ ಪಟೀಲ್ ತೇಲ್ಕೂರ ಸಂತಾಪ ವ್ಯಕ್ತಪಡಿಸಿದ್ದರು. ಈ ಕುರಿತು ಪತ್ರಿಕಾ ಪ್ರಕಟಣೆ ಹೊರಡಿಸಿರುವ ಅವರು ”ಎಸ್.ಎಂ.ಕೃಷ್ಣ ಅವರು ನಮ್ಮನ್ನ ಅಗಲಿದ ಸುದ್ದಿ ಅತ್ಯಂತ ದುಖಃ ತಂದಿದೆ. ಹಿರಿಯ ಚೇತನಕ್ಕೆ ಭಾವಪೂರ್ಣ ಶ್ರದ್ಧಾಂಜಲಿ ಸಲ್ಲಿಸುತ್ತೇನೆ. ಎಸ್.ಎಂ. ಕೃಷ್ಣ ಅವರು ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಪಟ್ಟಿದ್ದಾರೆ. ಬಿಜೆಪಿಗೆ ಸೇರ್ಪಡೆಗೊಂಡ ಬಳಿಕ ಪ್ರೀತಿಯಿಂದ ನಮ್ಮ ಪಕ್ಷಕ್ಕೆ ಸಾಕಷ್ಟು ಸಲಹೆಗಳನ್ನ ನೀಡುತ್ತಿದ್ದರು. ಎಸ್.ಎಂ. ಕೃಷ್ಣ ಅವರು ರಾಷ್ಟ್ರ ಹಾಗೂ ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಶ್ರಮಪಟ್ಟಿದ್ದಾರೆ. ರಾಜ್ಯದ ಮುಖ್ಯಮಂತ್ರಿಯಾಗಿ ಅವರು ಜನ ಮಾನಸದಲ್ಲಿ ಉಳಿಯುವಂತಹ ಕೆಲಸವನ್ನು ಮಾಡಿದ್ದಾರೆ. ಬೆಂಗಳೂರನ್ನು ಸಿಂಗಾಪೂರ ಮಾಡಬೇಕೆಂಬ ಕನಸನ್ನು ಕಂಡವರು. ಬೆಂಗಳೂರನ್ನು ಐಟಿ ಬಿಟಿ ಸಿಟಿಯನ್ನಾಗಿ ಮಾಡಿದರು. ಕೇಂದ್ರದಲ್ಲಿ ಅನೇಕ ಹುದ್ದೆಗಳನ್ನು ಅಲಂಕರಿಸಿದ್ದರು. ಅವರು ಸಜ್ಜನ ರಾಜಕಾರಣಿಯಾಗಿದ್ದರು. ಸೌಮ್ಯ ಸ್ವಾಭವದ ರಾಜಕಾರಣಿಯನ್ನು ಕಳೆದುಕೊಂಡು ರಾಜ್ಯ ಬಡವಾಗಿದೆ…
ನವದೆಹಲಿ: ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸಿದ ನಂತರ ಮರಣದಂಡನೆ ಶಿಕ್ಷೆಗೊಳಗಾದ ಅಪರಾಧಿಗಳನ್ನು ಗಲ್ಲಿಗೇರಿಸುವಲ್ಲಿ ಯಾವುದೇ ಮಿತಿಮೀರಿದ ಮತ್ತು ಅಸಮಂಜಸ ವಿಳಂಬವು ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ಮೂಲಭೂತ ಹಕ್ಕುಗಳನ್ನು ಉಲ್ಲಂಘಿಸುತ್ತದೆ ಮತ್ತು ಶಿಕ್ಷೆಯನ್ನು ಜೀವಾವಧಿ ಶಿಕ್ಷೆಯಾಗಿ ಪರಿವರ್ತಿಸುವಲ್ಲಿ ನ್ಯಾಯಾಲಯವು ಸಮರ್ಥನೀಯವಾಗಿರುತ್ತದೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ. ನ್ಯಾಯಮೂರ್ತಿಗಳಾದ ಅಭಯ್ ಎಸ್ ಓಕಾ, ಅಹ್ಸಾನುದ್ದೀನ್ ಅಮಾನುಲ್ಲಾ ಮತ್ತು ಅಗಸ್ಟಿನ್ ಜಾರ್ಜ್ ಮಾಸಿಹ್ ಅವರ ನ್ಯಾಯಪೀಠವು ವಿಳಂಬದ ಉದ್ದಕ್ಕೆ ಸಂಬಂಧಿಸಿದಂತೆ ಯಾವುದೇ ಕಠಿಣ ಮತ್ತು ವೇಗದ ನಿಯಮವನ್ನು ವಿಧಿಸಲಾಗುವುದಿಲ್ಲ, ಇದು ಪ್ರಕರಣದ ವಾಸ್ತವಾಂಶಗಳನ್ನು ಅವಲಂಬಿಸಿರುವುದರಿಂದ ಇದು ಮಿತಿಮೀರಿದ ಎಂದು ಹೇಳಬಹುದು ಎಂದು ಹೇಳಿದರು. ಒಂದು ನಿರ್ದಿಷ್ಟ ಸಂದರ್ಭದಲ್ಲಿ, ಎರಡು ವರ್ಷಗಳ ವಿಳಂಬವು ಮಾರಣಾಂತಿಕವಲ್ಲ. ಮತ್ತೊಂದು ಪ್ರಕರಣದಲ್ಲಿ, ಆರು ತಿಂಗಳ ವಿಳಂಬವು ಶಿಕ್ಷೆಯನ್ನು ಕಡಿಮೆ ಮಾಡಲು ಕಾರಣವಾಗಬಹುದು ಎಂದು ನ್ಯಾಯಾಲಯ ಹೇಳಿದೆ. “ಕ್ಷಮಾದಾನ ಅರ್ಜಿಗಳನ್ನು ತಿರಸ್ಕರಿಸುವ ಆದೇಶವನ್ನು ಅಪರಾಧಿಗೆ ತಿಳಿಸಿದ ನಂತರ, ದಾಮೋಕ್ಲಿಸ್ನ ಖಡ್ಗವನ್ನು ಅವನ ಮೇಲೆ ಮಿತಿಮೀರಿದ ಸಮಯದವರೆಗೆ ತೂಗಾಡಲು ಸಾಧ್ಯವಿಲ್ಲ. ಇದು ಮಾನಸಿಕವಾಗಿ…
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ರಾಜ್ಯದಲ್ಲಿ ಮೂರು ದಿನ ಶೋಕಾಚರಣೆ ಘೋಷಣೆ ಮಾಡಲಾಗಿದೆ. ಜೊತೆಗೆ ನಾಳೆ ಒಂದು ದಿನ ಸರ್ಕಾರಿ ರಜೆಯನ್ನು ಘೋಷಿಸಿ ಡಿಸಿಎಂ ಡಿ.ಕೆ ಶಿವಕುಮಾರ್ ಆದೇಶಿಸಿದ್ದಾರೆ. ಇಂದು ತಡರಾತ್ರಿ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರು ಹೃದಯಾಘಾತದಿಂದ ನಿಧನರಾಗಿದ್ದರು. ಅವರ ನಿಧನಕ್ಕೆ ಮುಖ್ಯಮಂತ್ರಿ ಸಿದ್ಧರಾಮಯ್ಯ, ಪ್ರಧಾನಿ ಮೋದಿ, ರಾಷ್ಟ್ರಪತಿ ಮುರ್ಮು ಸೇರಿದಂತೆ ಹಲವು ಗಣ್ಯರು ಕಂಬನಿ ಮಿಡಿದು, ಸಂತಾಪ ಸೂಚಿಸಿದ್ದಾರೆ. ನಾಳೆ ಅವರ ಹುಟ್ಟೂರಲ್ಲಿ ಸಕಲ ಸರ್ಕಾರಿ ಗೌರವಗಳೊಂದಿಗೆ ಅಂತ್ಯಕ್ರಿಯೆಗೆ ಸರ್ಕಾರ ಆದೇಶಿಸಿದೆ. ಜೊತೆಗೆ ನಾಳೆ ಒಂದು ದಿನ ರಾಜ್ಯಾಧ್ಯಂತ ಸರ್ಕಾರಿ ರಜೆಯನ್ನು ಎಸ್ ಎಂ ಕೃಷ್ಣ ಅವರ ನಿಧನದ ಹಿನ್ನಲೆಯಲ್ಲಿ ಘೋಷಿಸಲಾಗುತ್ತಿದೆ ಎಂಬುದಾಗಿ ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ.
ಬೆಳಗಾವಿ ಸುವರ್ಣ ಸೌಧ: ರಾಜ್ಯದ ಸಾವಿರಾರು ರೈತರು ಸರ್ಕಾರಿ ಭೂಮಿಯಲ್ಲಿ ಕೃಷಿ ಮಾಡುತ್ತಿದ್ದಾರೆ. ಬಗರ್ ಹುಕುಂ ಅಡಿ ಸಾಗುವಳಿ ಚೀಟಿಗೂ ಅರ್ಜಿ ಸಲ್ಲಿಸಿದ್ದಾರೆ. ಆದರೇ ಹೀಗೆ ಸಾಗುವಳಿ ಚೀಟಿಗಾಗಿ ಅರ್ಜಿ ಸಲ್ಲಿಸಿದವರ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿದೆ. ಅದ್ಯಾಕೆ ಅಂತ ಮುಂದೆ ಓದಿ. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ ಖಾತೆ ನೀಡಿಲ್ಲ. ಅಲ್ಲದೆ, ಈ ವರ್ಷ ಬಗರ್ ಹುಕುಂ ಅಡಿಯಲ್ಲಿ ಸಾವಿರಾರು ರೈತರ ಅರ್ಜಿಗಳನ್ನೇ ವಜಾ ಮಾಡಲಾಗಿದೆ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದರು. ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈ ಹಿಂದೆ ನಮೂನೆ 50-53 ರ ಅಡಿ ಭೂ ಮಂಜೂರು ಪಡೆಯದವರೂ ಸಹ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಕೆಲವರು…
ಬೆಳಗಾವಿ: ಸದನಕ್ಕೆ ರಾಜ್ಯಾದ್ಯಂತ ಬಗರ್ ಹುಕುಂ ಅರ್ಜಿಗಳ ತಿರಸ್ಕೃತಕ್ಕೆ ಕಾರಣವೇನು? ಎಂಬ ಕುರಿತು ಸದನಕ್ಕೆ ಮಾಹಿತಿ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, ” ಬಗರ್ ಹುಕುಂ ಅಡಿ ಅರ್ಜಿ ಸಲ್ಲಿಸಲು ಕನಿಷ್ಟ 18 ವರ್ಷವಾಗಿರಬೇಕು. ಆದರೆ, 7000 ಅರ್ಜಿದಾರರಿಗೆ 18 ವರ್ಷ ಆಗೇ ಇಲ್ಲ. 3273 ಜನ ಅರ್ಜಿದಾರರು ಕೃಷಿಕರೇ ಅಲ್ಲ. ಸ್ಮಶಾನ, ರಸ್ತೆ, ಕೆರೆ, ಗುಂಡುತೋಪು ಮಂಜೂರಾತಿ ಕೋರಿ 27,452 ಜನ ಅರ್ಜಿ ಸಲ್ಲಿಸಿದ್ದಾರೆ. ನಗರ ವ್ಯಾಪ್ತಿಯಲ್ಲಿ 33,000 ಜನ ಅರ್ಜಿ ಸಲ್ಲಿಸಿದ್ದರೆ, 12,283 ಅರ್ಜಿಗಳು ಸಲ್ಲಿಕೆಯಾಗಿವೆ. ಇನ್ನೂ ಕುಟುಂಬದಲ್ಲಿ 5 ಜಮೀನು ಇದ್ದರೂ ಸಹ ಸಾವಿರಾರು ಜನ ಅರ್ಜಿ ಸಲ್ಲಿಸಿದ್ದಾರೆ. ಇಂತಹ ಅರ್ಜಿಯನ್ನಷ್ಟೇ ತಿರಸ್ಕೃತಗೊಳಿಸಲಾಗಿದೆಯೇ ವಿನಃ ಕಾನೂನು ರೀತ್ಯಾ ಅರ್ಹ ಅರ್ಜಿಗಳನ್ನು ತಿರಸ್ಕೃತಗೊಳಿಸಲಾಗಿಲ್ಲ. ಒಂದು ವೇಳೆ ಕಣ್ತಪ್ಪಿನಿಂದ ಹಾಗೆ ಆದಲ್ಲಿ ಉಪ ವಿಭಾಗಾಧಿಕಾರಿಗಳ ಕೋರ್ಟ್ನಲ್ಲಿ ದಾವೆ ಹೂಡಬಹುದು. ಅಥವಾ ನನ್ನ ಗಮನಕ್ಕೆ ತಂದರೆ ಕೂಡಲೇ ಕ್ರಮವಹಿಸಲಾಗುವುದು” ಎಂದು ಅವರು ಆಶ್ವಾಸನೆ ನೀಡಿದರು. Good News : ‘ಬಿಮಾ ಸಖಿ…
ಬೆಳಗಾವಿ : ರೈತರಿಗಾಗುತ್ತಿರುವ ಶೋಷಣೆಗಳನ್ನು ತಪ್ಪಿಸುವ ಸಲುವಾಗಿ ಜನವರಿ.01 ರಿಂದ ಈವರೆಗಿನ ಎಲ್ ಭೂ-ಮಂಜೂರು ದಾಖಲೆಗಳನ್ನು ಸ್ಕ್ಯಾನ್ ಮಾಡಿ ಡಿಜಿಟಲೀಕರಿಸಲು ಕ್ರಮವಹಿಸಲಾಗಿದೆ ಎಂದು ಸಚಿವ ಕೃಷ್ಣ ಬೈರೇಗೌಡ ಅವರು ಸದನಕ್ಕೆ ಮಾಹಿತಿ ನೀಡಿದರು. ಸೋಮವಾರ ವಿಧಾನಸಭೆಯ ಪ್ರಶ್ನೋತ್ತರ ಅವಧಿಯಲ್ಲಿ ಮಾತನಾಡಿದ್ದ ದೊಡ್ಡಬಳ್ಳಾಪುರ ಶಾಸಕ ಧೀರಜ್ ಮುನಿರಾಜು ಬಗರ್ ಹುಕುಂ ಯೋಜನೆ ಅಡಿಯಲ್ಲಿ 1999 ರಿಂದ 2004ರ ಅವಧಿಯಲ್ಲಿ ಜಮೀನು ಮಂಜೂರು ಮಾಡಲಾಗಿದ್ದರೂ ಸಾಗುವಳಿ ಚೀಟಿ ನೀಡಿಲ್ಲ, ಕೆಲವರಿಗೆ ಸಾಗುವಳಿ ಚೀಟಿ ನೀಡಿದ್ದರೂ ಖಾತೆ ನೀಡಿಲ್ಲ. ಅಲ್ಲದೆ, ಈ ವರ್ಷ ಬಗರ್ ಹುಕುಂ ಅಡಿಯಲ್ಲಿ ಸಾವಿರಾರು ರೈತರ ಅರ್ಜಿಗಳನ್ನೇ ವಜಾ ಮಾಡಲಾಗಿದೆ. ಪರಿಣಾಮ ರೈತರು ಸಂಕಷ್ಟಕ್ಕೆ ಒಳಗಾಗಿದ್ದಾರೆ” ಎಂದರು. ಶಾಸಕ ಧೀರಜ್ ಮುನಿರಾಜು ಅವರ ಪ್ರಶ್ನೆಗೆ ಉತ್ತರ ನೀಡಿದ ಸಚಿವ ಕೃಷ್ಣ ಬೈರೇಗೌಡ ಅವರು, “ಈ ಹಿಂದೆ ನಮೂನೆ 50-53 ರ ಅಡಿ ಭೂ ಮಂಜೂರು ಪಡೆಯದವರೂ ಸಹ ನಕಲಿ ದಾಖಲೆ ಸೃಷ್ಟಿ ಮಾಡಿದ್ದಾರೆ. ಕೆಲವರು ದಾಖಲೆ ಬಚ್ಚಿಟ್ಟು ರೈತರಿಗೆ ಸಮಸ್ಯೆ ನೀಡುತ್ತಿದ್ದಾರೆ. ಬಗರ್…
ಬೆಂಗಳೂರು: ಇತ್ತೀಚಿಗೆ ಕೆಲವು ಕಂಪನಿಗಳು ತಮ್ಮ ಹೂಡಿಕೆಯ ಶೇ.100ರಷ್ಟು ಮತ್ತು ಅದಕ್ಕಿಂತಲೂ ಹೆಚ್ಚು ಪ್ರಮಾಣದ ಸಬ್ಸಿಡಿ ಕೇಳುತ್ತಿವೆ. ಆದರೆ ಹೀಗೆ ಸಬ್ಸಿಡಿ ಕೊಡುವುದು ಕಾರ್ಯಸಾಧುವಲ್ಲ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ಸೋಮವಾರ ಹೇಳಿದ್ದಾರೆ. ರಾಜ್ಯ ಸರಕಾರವು ಖಾಸಗಿ ಹೂಡಿಕೆದಾರರಿಗೆ ಆಗಬಹುದಾದ ಅಪಾಯವನ್ನು ಕಡಿಮೆ ಮಾಡಲೆಂದು ಮತ್ತು ಯೋಜನೆಯ ಆರ್ಥಿಕ ಕಾರ್ಯಸಾಧ್ಯತೆಯನ್ನು ಹೆಚ್ಚಿಸುವ ಉದ್ದೇಶಗಳಿಂದ ಮಾತ್ರ ಸಬ್ಸಿಡಿ ಕೊಡುತ್ತದೆ. ಯೋಜಿತ ಹೂಡಿಕೆಗಿಂತ ಹೆಚ್ಚು ಸಬ್ಸಿಡಿ ಕೊಡುತ್ತ ಹೋದರೆ ಕೈಗಾರಿಕಾ ಯೋಜನೆಗಳ ಆರ್ಥಿಕ ಕಾರ್ಯಸಾಧ್ಯತೆಯ ಬಗ್ಗೆಯೇ ಪ್ರಶ್ನೆಗಳು ಏಳುತ್ತವೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ. ರಾಜ್ಯ ಸರಕಾರವು ಕೈಗಾರಿಕಾಸ್ನೇಹಿ ವಾತಾವರಣ ಸೃಷ್ಟಿಸಲು ಆದ್ಯತೆ ಕೊಟ್ಟಿದ್ದು, ಖಾಸಗಿ ಉದ್ದಿಮೆಗಳನ್ನು ಮುಕ್ತವಾಗಿ ಸ್ವಾಗತಿಸಲಾಗುತ್ತಿದೆ. ಈ ಮೂಲಕ ಕರ್ನಾಟಕವು ನಾವೀನ್ಯತೆ ಮತ್ತು ಅವಕಾಶಗಳ ಆಡುಂಬೊಲವಾಗಿ ಇರುವಂತೆ ನೋಡಿಕೊಳ್ಳಲಾಗುತ್ತಿದೆ ಎಂದು ಅವರು ವಿವರಿಸಿದ್ದಾರೆ. ಸರಕಾರ ಎಂದಮೇಲೆ ಎಲ್ಲವೂ ತೆರಿಗೆದಾರರ ಹಣವನ್ನೇ ಅವಲಂಬಿಸಿ ನಡೆಯುತ್ತದೆ. ಅವರ ಸಂಪನ್ಮೂಲಗಳ ಹಿತವನ್ನೂ ಕಾಯಬೇಕಾದ್ದು ನಮ್ಮ ಕೆಲಸವಾಗಿದೆ. ರಾಜ್ಯಕ್ಕೆ ದೀರ್ಘಾವಧಿ…