Author: kannadanewsnow09

ಶಿವಮೊಗ್ಗ : ಜಿಲ್ಲೆಯ ಗಾಜನೂರು ಜವಾಹರ ನವೋದಯ ವಿದ್ಯಾಲಯದ 2025-26ನೇ ಶೈಕ್ಷಣಿಕ ಸಾಲಿನ 9 ಮತ್ತು 11 ನೇ ತರಗತಿಗೆ ಪ್ರವೇಶ ಪರೀಕ್ಷೆಗೆ ಆನ್‌ಲೈನ್ ಅರ್ಜಿ ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ನ.09 ರವರೆಗೆ ವಿಸ್ತರಿಸಲಾಗಿದೆ. ಆಸಕ್ತ ವಿದ್ಯಾರ್ಥಿಗಳು ವೆಬ್‌ಸೈಟ್ 9 ನೇ ತರಗತಿಗೆ https://cbseitms.nic.in/2024/nvsix ಮತ್ತು 11 ನೇ ತರಗತಿಗೆ https://cbseitms.nic.in/2024/nvsxi_11ರ ಮೂಲಕ ನವೆಂಬರ್ 09 ರೊಳಗಾಗಿ ಅರ್ಜಿ ಸಲ್ಲಿಸುವಂತೆ ಜವಾಹರ ನವೋದಯ ವಿದ್ಯಾಲಯದ ಪ್ರಾಚಾರ್ಯರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಮಾಜಿ ಸೈನಿಕರ ಮಕ್ಕಳ ವಿದ್ಯಾಭ್ಯಾಸದ ಶಿಷ್ಯವೇತನ ಹಾಗೂ ಆರ್ಥಿಕ ಅನುದಾನಕ್ಕಾಗಿ ಅರ್ಜಿ ಆಹ್ವಾನ ಕೇಂದ್ರೀಯ ಸೈನಿಕ ಮಂಡಳಿಯು ಭಾರತೀಯ ಸೇನೆಯ ಜೆ.ಸಿ.ಓ ರ‍್ಯಾಂಕ್‌ವರೆಗಿನ ಅಥವಾ ವಾಯು ಸೇನೆ, ನೌಕಾ ಸೇನೆಯ ತತ್ಸಮಾನ ರ‍್ಯಾಂಕ್‌ವರೆಗಿನ ಮಾಜಿ ಸೈನಿಕರ ಮಕ್ಕಳು, ದ್ವಿತೀಯ ಪಿ.ಯು.ಸಿ ಯಲ್ಲಿ ಶೇ.60 ಕ್ಕಿಂತ ಅಧಿಕ ಅಂಕಗಳನ್ನು ಪಡೆದು, ಇಂಜಿನಿಯರಿAಗ್, ಮೆಡಿಕಲ್ ಮತ್ತು ಇತರೆ ವೃತ್ತಿಪರ ಶಿಕ್ಷಣದಲ್ಲಿ ಪದವಿ ವ್ಯಾಸಂಗಕ್ಕಾಗಿ 2024-25ನೇ ಸಾಲಿನಲ್ಲಿ ಪ್ರವೇಶಾತಿ (ಅಡ್ಮಿಷನ್) ಪಡೆದು ಪ್ರಥಮ…

Read More

ರಾಶಿ – ದಿಕ್ಕು – ಗ್ರಹ 1.ಮೇಷ-ಪೂರ್ವ-ಮಂಗಳ. 2.ವೃಷಭ-ಪೂರ್ವ-ಶುಕ್ರ. 3.ಮಿಥುನ-ಆಗ್ನೇಯ-ಬುಧ. 4.ಕರ್ಕಾಟಕ-ದಕ್ಷಿಣ-ಚಂದ್ರ . 5.ಸಿಂಹ-ದಕ್ಷಿಣ-ಸೂರ್ಯ. 6.ಕನ್ಯಾ-ನ್ಯೆರುತ್ಯ-ಬುಧ. 7.ತುಲಾ-ಪಶ್ಚಿಮ-ಶುಕ್ರ. 8.ವೃಶ್ಚಿಕ-ಪಶ್ಚಿಮ-ಮಂಗಳ. 9.ಧನಸ್ಸು-ವಾಯುವ್ಯ-ಗುರು. 10.ಮಕರ-ಉತ್ತರ-ಶನಿ. 11.ಕುಂಭ-ಉತ್ತರ-ಶನಿ. 12.ಮೀನ-ಈಶಾನ್ಯ-ಗುರು. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ…

Read More

ಚಿತ್ರದುರ್ಗ: ಜಿಲ್ಲೆಯ ಪೊಲೀಸರಿಂದ ಜೂಜಾಟದಲ್ಲಿ ತೊಡಗಿದ್ದವರ ವಿರುದ್ಧ ಭರ್ಜರಿ ಕಾರ್ಯಾಚರಣೆಯನ್ನು ನಡೆಸಲಾಗಿದೆ. ಇಸ್ಪಿಟ್ ಆಟದಲ್ಲಿ ತೊಡಗಿದ್ದಂತ 9 ಮಂದಿಯನ್ನು ಬಂಧಿಸಲಾಗಿದೆ. ಈ ಕುರಿತಂತೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಚಿತ್ರದುರ್ಗ ಗ್ರಾಮಾಂತರ ಠಾಣೆ ವ್ಯಾಪ್ತಿಯ ಗುಡ್ಡವೊಂದರಲ್ಲಿ ಜೂಜಾಟದಲ್ಲಿ ತೊಡಗಿರುವ ಬಗ್ಗೆ ಖಚಿತ ಮಾಹಿತಿ ಸಿಕ್ಕಿತ್ತು. ಎಸ್ ಪಿ ರಂಜಿತ್ ಕುಮಾರ್ ಬಂಡಾರು ಮಾರ್ಗದರ್ಶನದಲ್ಲಿ ಐಮಂಗಲ ವೃತ್ತ ನಿರೀಕ್ಷಕರು ಹಾಗೂ ಜಿಲ್ಲಾ ಪೊಲೀಸ್ ಕಚೇರಿಯ ವಿಶೇಷ ವಿಭಾಗದ ಪ್ರಭಾರ ಪೊಲೀಸ್ ನಿರೀಕ್ಷಕರಾದ ಗುಡ್ಡಪ್ಪ ಎನ್ ನೇತೃತ್ವದಲ್ಲಿ, ಪಿಎಸ್ಐ ದಾದಪೀರ್, ಎಎಸ್ಐ ತಿಪ್ಪೇಸ್ವಾಮಿ, ಸಿಬ್ಬಂದಿಗಳಾದ ಪ್ರದೀಪ್, ಮಧು, ಐಮಂಗಲ ಠಾಣೆಯ ಎಹೆಚ್ ಸಿ ಪ್ರವೀಣ್, ಖದರ್ ಬಾಷಾ, ಎಪಿಸಿ ಹರ್ಷ, ಭೀಮಣ್ಣ ತಂಡದಿಂದ ದಾಳಿಯನ್ನು ನಡೆಸಲಾಗಿತ್ತು. ಕಾನೂನು ಬಾಹಿರವಾಗಿ ಅಂದರ್ ಬಾಹರ್ ಇಸ್ಪೀಟ್ ಜೂಜಾಟದಲ್ಲಿ ತೊಡಗಿದ್ದಂತ ದೀಪು @ ದೀಪಕ್ ತಂದೆ ಗಂಗಾಧರ, ಮಲ್ಲಿಕಾರ್ಜನ ಮತ್ತು ಇತರರು ಸೇರಿದಂತೆ 7 ಮಂದಿಯನ್ನು ವಶಕ್ಕೆ ಪಡೆಯಲಾಗಿದೆ. ಬಂಧಿತ ಆರೋಪಿಗಳಿಂದ 5,30,160…

Read More

ಬೆಳಗಾವಿ: ಜಿಲ್ಲೆಯ ಅಥಣಿ ತಾಲ್ಲೂಕಿನ ರೈತರಿಗೂ 7 ಎಕರೆ ಜಮೀನು ತನ್ನದು ಎಂಬುದಾಗಿ ವಕ್ಫ್ ಬೋರ್ಡ್ ನೋಟಿಸ್ ನೀಡಿ ಶಾಕ್ ನೀಡಿರುವುದಾಗಿ ತಿಳಿದು ಬಂದಿದೆ. ಬೆಳಗಾವಿ ಜಿಲ್ಲೆಯ ಚಿಕ್ಕೋಡಿ ತಾಲ್ಲೂಕಿನ ಶಿರಹಟ್ಟಿ ಗ್ರಾಮದ ರೈತ ಬಸವರಾಜ ಅಡಿವೆಪ್ಪ ಕೊಹಳ್ಳಿ ಅವರ ಪಹಣಿ ಪತ್ರದಲ್ಲಿ ವಕ್ಫ್ ಆಸ್ತಿ ನಮ್ಮದೆಂದು ನಮೂದಿಸಲಾಗಿದೆ. ರೈತ ಬಸವರಾಜ ಅವರು ಹಾಗೂ ಅವರ ಅಣ್ಣ ತಮ್ಮಂದಿರಿಗೆ ಸೇರಿದಂತ 7 ಎಕರೆ 31 ಗುಂಟೆ ಜಮೀನಿನ ಪಹಣಡಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಲಾಗಿದೆ. ಇದೀಗ ಪಹಣಿಯಲ್ಲಿ ವಕ್ಫ್ ಆಸ್ತಿ ಎಂಬುದಾಗಿ ನಮೂದಿಸಿದ್ದರಿಂದ ರೈತ ಬಸವರಾಜ ಅಡಿವೆಪ್ಪ ಅವರ ಕುಟುಂಬ ಆತಂಕದಲ್ಲಿದ್ದು, ತಕ್ಷಣವೇ ಸಮಸ್ಯೆ ಪರಿಹರಿಸುವಂತ ಸರ್ಕಾರಕ್ಕೆ ಒತ್ತಾಯಿಸಿದೆ. https://kannadanewsnow.com/kannada/i-have-developed-without-any-discrimination-basavaraj-bommai/ https://kannadanewsnow.com/kannada/waqf-row-bjp-to-stage-protest-across-the-state-tomorrow/

Read More

ಬೆಂಗಳೂರು: ರಾಜ್ಯದಲ್ಲಿ ಮಠ, ಮಂದಿರಗಳು, ರೈತರ ಆಸ್ತಿಗಳನ್ನು ವಕ್ಫ್ ಆಸ್ತಿ ಎಂದು ನಮೂದಿಸಿದ್ದರ ವಿರುದ್ಧ ಬಿಜೆಪಿ ಜನಾಂದೋಲನ ರೂಪಿಸಲಿದೆ ಎಂದು ಮಾಜಿ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥನಾರಾಯಣ್ ಅವರು ತಿಳಿಸಿದರು. ನಗರದ ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಮಾಧ್ಯಮ ಗೋಷ್ಠಿಯಲ್ಲಿ ಮಾತನಾಡಿದ ಅವರು, 1974ರ ವಕ್ಫ್ ಆಸ್ತಿ ಕುರಿತ ಗಜೆಟ್ ಅಧಿಸೂಚನೆ ಹಿಂಪಡೆಯಲು ಆಗ್ರಹಿಸಿ ಮತ್ತು ಅಧಿಕಾರ ದುರ್ಬಳಕೆಯ ಕುರಿತು ಸಿಬಿಐ ತನಿಖೆಗೆ ಆಗ್ರಹಿಸಿ ನಾಳೆ ರಾಜ್ಯದೆಲ್ಲೆಡೆ ಪ್ರತಿಭಟನೆ ನಡೆಸಲಾಗುವುದು ಎಂದು ಪ್ರಕಟಿಸಿದರು. ಕರ್ನಾಟಕದ ವಕ್ಫ್ ನಲ್ಲಿ ನಡೆದಿರುವ ಖೊಟ್ಟಿ (ನಕಲಿ) ದಾಖಲೆಗಳ ಸೃಷ್ಟಿ, ಆ ಮೂಲಕ ಮಾಡಿಕೊಂಡಿರುವ ಲಾಭದ ಕುರಿತು ಇ.ಡಿ. (ಜಾರಿ ನಿರ್ದೇಶನಾಲಯ) ತನಿಖೆಯಾಗಬೇಕು. 50 ವರ್ಷದ ಹಿಂದಿನ ಗೆಜೆಟ್ ನೆಪ ಒಡ್ಡಿ 50 ವರ್ಷ ಯಾವುದೇ ಕ್ರಮ ಕೈಗೊಳ್ಳದೇ, ಈಗ ಅಲ್ಪಸಂಖ್ಯಾತರ ಮತ ಬ್ಯಾಂಕ್ ರಾಜಕಾರಣಕ್ಕಾಗಿ, ಅಲ್ಪಸಂಖ್ಯಾತರ ತುಷ್ಟೀಕರಣಕ್ಕಾಗಿ, ಕರ್ನಾಟಕ ವಕ್ಫ್ ಬೋರ್ಡ್ ಮೂಲಕ ಮಾಡಿರುವ ಬೃಹತ್ ದಾಖಲೆಗಳ ಸೃಷ್ಟಿಯ ಎಲ್ಲಾ ವ್ಯವಹಾರಗಳನ್ನು ಸಿಬಿಐ…

Read More

ಹಾವೇರಿ : ಸವಣೂರಿನಲ್ಲಿ ನಮ್ಮ ಸಂಸ್ಕೃತಿ ಗಟ್ಟಿಯಾಗಿ ಉಳಿಯಲು ಭಾವಸಾರ ಕ್ಷತ್ರಿಯ ಸಮಾಜ ಕಾರಣ. ನಿಮ್ಮ ಪ್ರೀತಿ ವಿಶ್ವಾಸದ ಮುಂದೆ ನಾನು ಮಾಡಿರುವ ಅಭಿವೃದ್ಧಿ ಕಾರ್ಯ ದೊಡ್ಡದಲ್ಲ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದರು. ಸವಣೂರಿನಲ್ಲಿ ಇಂದು ಭಾವಸಾರ ಕ್ಷತ್ರಿಯ ಸಮಾಜದ ಸಭೆಯಲ್ಲಿ ಬಿಜೆಪಿ ಅಭ್ಯರ್ಥಿ ಭರತ್ ಬೊಮ್ಮಾಯಿ ಪರ ಚುನಾವಣಾ ಪ್ರಚಾರ ಮಾಡಿದರು. ಸವಣೂರಿನಲ್ಲಿ ತಾವು ಯಾವ ಪರಿಸ್ಥಿತಿಯಲ್ಲಿ ವ್ಯಾಪಾರ ವ್ಯವಹಾರ ಮಾಡುತ್ತಿದ್ದೀರಾ ಎಂದು ನಮಗೆ ಅರಿವಿದೆ. ಆದರೂ, ನೀವು ಎದೆಗುಂದದೆ ಮುನ್ನಡೆಯುತ್ತಿದ್ದೀರಿ ನಮ್ಮನ್ನೂ ಮುನ್ನಡೆಸುತ್ತಿದ್ದೀರಿ, ನಾಲ್ಕು ಚುನಾವಣೆಯಿಂದಲೂ ನನ್ನನ್ನು ಗೆಲ್ಕಿಸುತ್ತ ಬಂದಿದ್ದೀರಿ, ನನ್ನ ಮೇಲೆ ಅಷ್ಟೊಂದು ಪ್ರೀತಿ ವಿಶ್ವಾಸ ಇಟ್ಟುಕೊಂಡಿದ್ದೀರಿ, ನಾನೇನಾದರೂ ಅಭಿವೃದ್ಧಿ ಕೆಲಸ ಮಾಡಿದ್ದರೆ ನಿಮ್ಮ‌ ಪ್ರೀತಿ ವಿಶ್ವಾಸದ ಮುಂದೆ ಅದು ದೊಡ್ಡ ಕೆಲಸವಲ್ಲ ಎಂದರು. ಒಂದು ಬಾರಿ ಕೃಷ್ಣನ ಮೇಲೆ ಯಾರ ಪ್ರೀತಿ ದೊಡ್ಡದಿದೆ ಅಂತ ಪರೀಕ್ಷೆ ಮಾಡಲು ಸುಭದ್ರಾ ರುಕ್ಮಿಣಿ ನಡುವೆ ಸ್ಪರ್ಧೆ ಏರ್ಪಟ್ಟಿತು. ಒಂದು ತಕ್ಕಡಿಯಲ್ಲಿ ಕೃಷ್ಣನನ್ನು ಕೂಡಿಸಿ…

Read More

ಶ್ರೀನಗರ: ಶ್ರೀನಗರ ಗ್ರೆನೇಡ್ ದಾಳಿಗೆ ಪ್ರತಿಕ್ರಿಯಿಸಿದ ಜಮ್ಮು ಮತ್ತು ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಮನೋಜ್ ಸಿನ್ಹಾ ಅವರು ಭಯೋತ್ಪಾದಕರಿಗೆ ಬಲವಾದ ಪ್ರತಿಕ್ರಿಯೆ ನೀಡುವಂತೆ ಮತ್ತು ಕೇಂದ್ರಾಡಳಿತ ಪ್ರದೇಶದಲ್ಲಿ ಕಾರ್ಯನಿರ್ವಹಿಸುತ್ತಿರುವ ಭಯೋತ್ಪಾದಕ ಸಂಘಟನೆಗಳನ್ನು “ಹತ್ತಿಕ್ಕಲು” ಭದ್ರತಾ ಪಡೆಗಳಿಗೆ ಸೂಚಿಸಿದ್ದಾರೆ. “ಶ್ರೀನಗರದಲ್ಲಿ ನಡೆದ ಗ್ರೆನೇಡ್ ದಾಳಿಯ ಬಗ್ಗೆ ಲೆಫ್ಟಿನೆಂಟ್ ಗವರ್ನರ್ ಡಿಜಿಪಿ ನಳಿನ್ ಪ್ರಭಾತ್ ಮತ್ತು ಭದ್ರತಾ ಸಂಸ್ಥೆಗಳ ಹಿರಿಯ ಅಧಿಕಾರಿಗಳೊಂದಿಗೆ ಮಾತನಾಡಿದ್ದಾರೆ. ಭಯೋತ್ಪಾದಕರು ಮತ್ತು ಅವರ ಸಹಚರರನ್ನು ಶಿಕ್ಷಿಸಲು ಪರಿಣಾಮಕಾರಿ ಮತ್ತು ಬಲವಾದ ಪ್ರತಿಕ್ರಿಯೆಗಾಗಿ ಅವರು ಭದ್ರತಾ ಅಧಿಕಾರಿಗಳಿಗೆ ನಿರ್ದೇಶನ ನೀಡಿದರು” ಎಂದು ಅಧಿಕೃತ ವಕ್ತಾರರು ತಿಳಿಸಿದ್ದಾರೆ. ನಾಗರಿಕರ ಮೇಲೆ ದಾಳಿ ಮಾಡಿದವರು ತಮ್ಮ ಕೃತ್ಯಕ್ಕೆ ಭಾರಿ ಬೆಲೆ ತೆರಬೇಕಾಗುತ್ತದೆ ಎಂದು ಅವರು ಹೇಳಿದರು. ಭಯೋತ್ಪಾದಕ ಸಂಘಟನೆಗಳನ್ನು ಹತ್ತಿಕ್ಕಲು ಭದ್ರತಾ ಪಡೆಗಳಿಗೆ ಸಂಪೂರ್ಣ ಸ್ವಾತಂತ್ರ್ಯವಿದೆ ಎಂದು ಅವರು ಹೇಳಿದರು. “ಭಯೋತ್ಪಾದಕ ಸಂಘಟನೆಗಳನ್ನು ಹತ್ತಿಕ್ಕಲು ನಿಮಗೆ ಸಂಪೂರ್ಣ ಸ್ವಾತಂತ್ರ್ಯವಿದೆ ಮತ್ತು ಈ ಕಾರ್ಯಾಚರಣೆಯನ್ನು ಪೂರ್ಣಗೊಳಿಸಲು ಯಾವುದೇ ಅವಕಾಶವನ್ನು ಬಿಡುವುದಿಲ್ಲ” ಎಂದು ಅವರು ಹೇಳಿದರು. ಶ್ರೀನಗರದ…

Read More

ನವದೆಹಲಿ: ದೇಶಾದ್ಯಂತ ಸಂತ್ರಸ್ತರಿಂದ 159 ಕೋಟಿ ರೂ.ಗಳ ಹಣವನ್ನು ವಂಚಿಸಲು ಮಾಡಿದ ವಿವಿಧ ಡಿಜಿಟಲ್ ಬಂಧನ ಹಗರಣಗಳನ್ನು ಒಳಗೊಂಡಿದೆ. ವಂಚಕರು ಶೆಲ್ ಕಂಪನಿಗಳ ಬ್ಯಾಂಕ್ ಖಾತೆಗಳಿಗೆ ಲಿಂಕ್ ಮಾಡಲಾದ ನೂರಾರು ಸಿಮ್ ಕಾರ್ಡ್ಗಳನ್ನು ಪಡೆದರು ಮತ್ತು ನಕಲಿ ವಾಟ್ಸಾಪ್ ಖಾತೆಗಳನ್ನು ರಚಿಸಲು ಈ ಸಿಮ್ ಕಾರ್ಡ್ಗಳನ್ನು ಸಹ ಬಳಸಿದರು. ಪತ್ತೆಯಾಗದ ಈ ಸಿಮ್ಗಳು ನೀಡುವ ಅನಾಮಧೇಯತೆಯು ಸ್ಕ್ಯಾಮರ್ಗಳಿಗೆ ತಕ್ಷಣದ ಪತ್ತೆಯ ಕಡಿಮೆ ಅಪಾಯದೊಂದಿಗೆ ಸಂತ್ರಸ್ತರನ್ನು ವಂಚಿಸಲು ಅನುವು ಮಾಡಿಕೊಡುತ್ತದೆ. ಸೈಬರ್ ಅಪರಾಧಗಳಿಂದ ಬರುವ ಆದಾಯವನ್ನು ಸ್ವಾಧೀನಪಡಿಸಿಕೊಳ್ಳಲು ಮತ್ತು ಲಾಂಡರಿಂಗ್ ಮಾಡಲು ಅನುಕೂಲವಾಗುವಂತೆ ಸ್ಕ್ಯಾಮರ್ಗಳು ತಮಿಳುನಾಡು, ಕರ್ನಾಟಕ ಮತ್ತು ಇತರ ಕೆಲವು ರಾಜ್ಯಗಳಲ್ಲಿ 24 ಶೆಲ್ ಕಂಪನಿಗಳನ್ನು ರಚಿಸಿದ್ದಾರೆ ಎಂದು ಜಾರಿ ನಿರ್ದೇಶನಾಲಯ ತಿಳಿಸಿದೆ. ಈ ಶೆಲ್ ಕಂಪನಿಗಳನ್ನು ಸಹ-ಕೆಲಸದ ಸ್ಥಳಗಳ ವಿಳಾಸಗಳಲ್ಲಿ ನೋಂದಾಯಿಸಲಾಗಿದೆ (ಅಲ್ಲಿ ನಿಜವಾದ ವ್ಯವಹಾರ ಉಪಸ್ಥಿತಿ ಅಸ್ತಿತ್ವದಲ್ಲಿಲ್ಲ) ಮತ್ತು ಅವರು ವ್ಯವಹಾರವನ್ನು ಪ್ರಾರಂಭಿಸಿದ್ದಕ್ಕೆ ಪುರಾವೆಯಾಗಿ ಕಂಪನಿಗಳ ರಿಜಿಸ್ಟ್ರಾರ್ ಮುಂದೆ ಫೈಲಿಂಗ್ಗಳಲ್ಲಿ ನಕಲಿ ಬ್ಯಾಂಕ್ ಸ್ಟೇಟ್ಮೆಂಟ್ಗಳನ್ನು ಬಳಸಿದ್ದಾರೆ. ಅಪರಾಧದ ಆದಾಯವನ್ನು…

Read More

ಬೆಂಗಳೂರು: ನಾವು ವಕ್ಫ್ ಆಸ್ತಿ ವಿವಾದದ ನಂತ್ರ ರೈತರಿಗೆ ನೀಡಿದ್ದಂತ ನೋಟಿಸ್ ಹಿಂಪಡೆಯಲು ನಿರ್ಧರಿಸಿದ್ದೇವೆ. ಹೀಗಿದ್ದರೂ ನಾಳೆ ಬಿಜೆಪಿ ವಕ್ಫ್ ವಿವಾದದ ಬಗ್ಗೆ ಪ್ರತಿಭಟನೆ ನಡೆಸುತ್ತಿದೆ. ಇದರಲ್ಲಿ ರೈತರ ಹಿತಾಸಕ್ತಿ ಇಲ್ಲ. ಯಾವ ಸದುದ್ದೇಶವೂ ಇಲ್ಲ. ಇದನ್ನು ರಾಜ್ಯದ ಜನತೆ ಅರ್ಥ ಮಾಡಿಕೊಳ್ಳಬೇಕು ಎಂಬುದಾಗಿ ಸಿಎಂ ಸಿದ್ಧರಾಮಯ್ಯ ಮನವಿ ಮಾಡಿದ್ದಾರೆ. ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾಧ್ಯಮ ಪ್ರಕಟಣೆ ಹೊರಡಿಸಿದ್ದು, ವಕ್ಫ್ ಆಸ್ತಿಯ ವಿವಾದಕ್ಕೆ ಸಂಬಂಧಿಸಿದಂತೆ ರೈತರಿಗೆ ನೀಡಲಾಗಿರುವ ನೋಟಿಸ್ ಗಳನ್ನು ತಕ್ಷಣ ವಾಪಸ್ ಪಡೆಯಲು ನಮ್ಮ ಸರ್ಕಾರ ಸೂಚನೆ ನೀಡಿದ ನಂತರವೂ ಬಿಜೆಪಿ ನಾಯಕರು ಪ್ರತಿಭಟನೆಗೆ ಮುಂದಾಗಿರುವುದಕ್ಕೆ ರಾಜಕೀಯ ಲಾಭದ ದುರುದ್ದೇಶ ಇದೆಯೇ ಹೊರತು ಇದರಲ್ಲಿ ರೈತರ ಹಿತಾಸಕ್ತಿ ರಕ್ಷಣೆಯ ಯಾವ ಸದುದ್ದೇಶ ಇಲ್ಲ ಎನ್ನುವುದನ್ನು ರಾಜ್ಯದ ಜನತೆ ಅರ್ಥಮಾಡಿಕೊಳ್ಳಬೇಕೆಂದು ಮನವಿ ಮಾಡುತ್ತೇನೆ ಎಂದಿದ್ದಾರೆ. ವಕ್ಫ್‌ ವಿಚಾರದಲ್ಲಿ ರೈತರಿಗೆ ನೀಡಲಾಗಿರುವ ನೋಟಿಸ್‌ಗಳನ್ನು ತಕ್ಷಣದಿಂದಲೇ ವಾಪಸ್‌ ಪಡೆಯಬೇಕು. ರೈತರ ಪಹಣಿ ಬದಲಾವಣೆ ಸಂಬಂಧ ಈಗಾಗಲೇ ನೀಡಿರುವ ನೋಟೀಸ್‌ಗಳನ್ನು ತಕ್ಷಣ ವಾಪಸ್‌ ಪಡೆಯಬೇಕು. ಕಾನೂನು ಬಾಹಿರವಾಗಿ…

Read More

ಬೆಂಗಳೂರು: ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಅವರು ಇಂದು ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಪಾರ್ಥೀವ ಶರೀರದ ಅಂತ್ಯಕ್ರಿಯೆ ಕೂಡ ನೆರವೇರಿಸಲಾಗಿದೆ. ಇದೀಗ ಅವರ ಮೃತದೇಹದ ಮರಣೋತ್ತರ ಪರೀಕ್ಷೆ ವರದಿ ಬಹಿರಂಗಗೊಂಡಿದ್ದು, ಅದರಲ್ಲಿ ಏನಿದೆ ಅಂತ ಮುಂದೆ ಓದಿ. ಕನ್ನಡದ ಎದ್ದೇಳು ಮಂಜುನಾಥ, ಮಠ ಸಿನಿಮಾಗಳನ್ನು ನಿರ್ದೇಶಿಸಿದ್ದಂತ ಖ್ಯಾತ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಸಾಲದ ಹೊಡೆತಕ್ಕೆ ಸಿಕ್ಕಿ ಆತ್ಮಹತ್ಯೆಗೆ ಶರಣಾಗಿದ್ದರು. ಅವರ ಮೃತದೇಹ ನೇಣುಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿತ್ತು. ಅಲ್ಲದೇ ಹಲವು ಅನುಮಾನಗಳಿಗೂ ಕಾರಣವಾಗಿತ್ತು. ಮಾದನಾಯಕನಹಳ್ಳಿಯ ಅಪಾರ್ಮೆಂಟ್ ನಲ್ಲಿ ಕೊಳೆತ ಸ್ಥಿತಿಯಲ್ಲಿ ಪತ್ತೆಯಾದಂತ ಅವರ ಮೃತದೇಹವನ್ನು ವಿಕ್ಟೋರಿಯಾ ಆಸ್ಪತ್ರೆಗೆ ಮರಣೋತ್ತರ ಪರೀಕ್ಷೆಗಾಗಿ ಕಳುಹಿಸಿಕೊಡಲಾಗಿತ್ತು. ಅಲ್ಲಿ ವೈದ್ಯರು ಮರಣೋತ್ತರ ಪರೀಕ್ಷೆಯನ್ನು ನಡೆಸಿದ್ದರು. ಇದೀಗ ವೈದ್ಯರ ಮರಣೋತ್ತರ ಪರೀಕ್ಷೆಯ ವರದಿ ಬಂದಿದ್ದು, ಅದರಲ್ಲಿ ಸ್ಯಾಂಡಲ್ ವುಡ್ ನಿರ್ದೇಶಕ ಗುರುಪ್ರಸಾದ್ ಅವರ ದೇಹಲು ಉಸಿರುಗಟ್ಟಿ ಮರಣಹೊಂದಿರುವುದಾಗಿ ತಿಳಿಸಿದೆ. https://kannadanewsnow.com/kannada/waqf-row-mp-basavaraj-bommai-demands-sit-or-cbi-probe/ https://kannadanewsnow.com/kannada/bollywood-actor-shah-rukh-khan-announces-quitting-smoking/

Read More