Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು : ದಾನಗಳಲ್ಲಿ ಶ್ರೇಷ್ಠ ದಾನ ಅಂಗಾಂಗ ದಾನ. ವೈದ್ಯಕೀಯ ಶಿಕ್ಷಣ ಇಲಾಖೆಯು ಈ ಅಂಗಾಂಗ ದಾನ ಯೋಜನೆಗೆ ಹೊಸ ರೂಪ ನೀಡಲು ಕ್ರಮ ಕೈಗೊಂಡಿದೆ. ಮತ್ತೊಬ್ಬರ ಬಾಳಿಗೆ ಬೆಳಕಾಗುವ ಮಹತ್ವದ ಯೋಜನೆಗೆ ಇಲಾಖೆ ಮುಂದಾಗಿದೆ. ವೈದ್ಯಕೀಯ ಶಿಕ್ಷಣ ಇಲಾಖೆಯು ತನ್ನ ಅಸ್ತಿತ್ವದಲ್ಲಿರುವ ಸೌಲಭ್ಯಗಳನ್ನು ನವೀಕರಿಸಲು ಮತ್ತು ಅಂಗಾಂಗ ಮರು ಪಡೆಯುವ ಕೇಂದ್ರ ಸ್ಥಾಪಿಸಲು 1 ಕೋಟಿ ರೂ. ಅನುದಾನ ಮಂಜೂರು ಮಾಡಿದೆ. ಈ ಸಂಬಂಧ ಆದೇಶ ಕೂಡ ಹೊರಡಿಸಲಾಗಿದೆ. ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ 125ನೇ ವರ್ಷಾಚರಣೆ ಸಂದರ್ಭದಲ್ಲಿಯೇ ಈ ಮಹತ್ವದ ಕೇಂದ್ರ ಇಲ್ಲಿ ಆರಂಭವಾಗುತ್ತಿರುವುದು ಮತ್ತೊಂದು ಗಮನಾರ್ಹ ಸಂಗತಿಯಾಗಿದೆ. ಮುಂದಿನ ನಾಲ್ಕರಿಂದ ಆರು ತಿಂಗಳಲ್ಲಿ ಈ ಅಂಗಾಂಗ ಮರು ಪಡೆಯುವಿಕೆ ಕೇಂದ್ರವು ಕಾರ್ಯಾರಂಭ ಮಾಡಲಿದೆ ಎಂದು ವೈದ್ಯಕೀಯ ಶಿಕ್ಷಣ, ಕೌಶಲ್ಯಾಭಿವೃದ್ಧಿ ಮತ್ತು ಜೀವನೋಪಾಯ ಹಾಗೂ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವರಾದ ಡಾ. ಶರಣ್ ಪ್ರಕಾಶ್ ಪಾಟೀಲ್ ಪತ್ರಿಕಾ ಪ್ರಕಟಣೆಯಲ್ಲಿ ಸೋಮವಾರ ಮಾಹಿತಿ ನೀಡಿದ್ದಾರೆ. https://twitter.com/KarnatakaVarthe/status/1907013677967884586 “ಕಸಿ ಮಾಡಲು ಅಂಗಾಂಗಗಳ ಖರೀದಿಯನ್ನು…
ಬೆಂಗಳೂರು: ಬೆಂಗಳೂರು ಕಂಟೋನ್ಮೆಂಟ್ ಮತ್ತು ಬೈಯಪ್ಪನಹಳ್ಳಿ ನಡುವೆ ರಸ್ತೆ ಕೆಳ ಸೇತುವೆ ಕಾಮಗಾರಿಗಾಗಿ ಲೈನ್ ಬ್ಲಾಕ್ ಮತ್ತು ಪವರ್ ಬ್ಲಾಕ್ ಇರುವುದರಿಂದ, ಈ ಕೆಳಗಿನ ರೈಲುಗಳನ್ನು ಕೆಳಗೆ ತಿಳಿಸಿದಂತೆ ಭಾಗಶಃ ರದ್ದು/ ಮಾರ್ಗಬದಲಾವಣೆ/ ಸಮಯ ಬದಲಾವಣೆ /ನಿಯಂತ್ರಣ ಮಾಡಲಾಗುವುದು: ರೈಲುಗಳ ಭಾಗಶಃ ರದ್ದತಿ: 02.04.2025 ಮತ್ತು 06.04.2025 ರಂದು ಹೊರಡುವ ರೈಲು ಸಂಖ್ಯೆ 07339 ಎಸ್.ಎಸ್.ಎಸ್ ಹುಬ್ಬಳ್ಳಿ- ಕೆಎಸ್ಆರ್ ಬೆಂಗಳೂರು ಎಕ್ಸ್ಪ್ರೆಸ್ ವಿಶೇಷ ರೈಲು ಯಶವಂತಪುರ ಮತ್ತು ಕೆ.ಎಸ್.ಆರ್. ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ. 03.04.2025 ಮತ್ತು 07.04.2025 ರಂದು ಹೊರಡುವ ರೈಲು ಸಂಖ್ಯೆ 07340 ಕೆಎಸ್ಆರ್ ಬೆಂಗಳೂರು- ಎಸ್ಎಸ್ಎಸ್ ಹುಬ್ಬಳ್ಳಿ ಎಕ್ಸ್ಪ್ರೆಸ್ ವಿಶೇಷ ರೈಲು ಕೆಎಸ್ಆರ್ ಬೆಂಗಳೂರಿನ ಬದಲಿಗೆ ಯಶವಂತಪುರದಿಂದ ಸಂಚಾರವನ್ನು ಆರಂಭಿಸಲಿದೆ. 03.04.2025 ಮತ್ತು 07.04.2025 ರಂದು ಹೊರಡುವ ರೈಲು ಸಂಖ್ಯೆ 16521 ಬಂಗಾರಪೇಟೆ- ಕೆಎಸ್ಆರ್ ಬೆಂಗಳೂರು ಮೆಮು ರೈಲು ಬೈಯ್ಯಪ್ಪನಹಳ್ಳಿ ಮತ್ತು ಕೆಎಸ್ಆರ್ ಬೆಂಗಳೂರು ನಡುವೆ ಭಾಗಶಃ ರದ್ದಾಗಲಿದೆ. ದಿನಾಂಕ 03.04.2025 ಮತ್ತು 07.04.2025 ರಂದು ಪ್ರಯಾಣ ಆರಂಭಿಸುವ…
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ (BMTC) ತನ್ನ ಪ್ರಯಾಣಿಕರ ಅನುಕೂಲಕ್ಕಾಗಿ ಯುನೈಟೆಡ್ ಪೇಮೆಂಟ್ ಇಂಟರ್ಫೇಸ್ (UPI) ಪಾವತಿ ವ್ಯವಸ್ಥೆಯನ್ನು ವ್ಯಾಪಕವಾಗಿ ಪ್ರಚಾರ ಮಾಡಿದ್ದು, ಅದನ್ನು ಯಶಸ್ವಿಯಾಗಿ ಜಾರಿಗೆ ತಂದಿದೆ. ಇದರ ಫಲಿತಾಂಶವಾಗಿ, 2025ರ ಮಾರ್ಚ್ ತಿಂಗಳಲ್ಲಿ BMTC ಟಿಕೆಟ್ ದರದ ಒಟ್ಟಾರೆ ಆದಾಯದಲ್ಲಿ 39.80% ರಷ್ಟು ಪಾವತಿ ಯುಪಿಐ ಮುಖಾಂತರ ನಡೆದಿದೆ. ಸಂಸ್ಥೆಯ ಇತ್ತೀಚಿನ ಮಾಹಿತಿ ಪ್ರಕಾರ, ಈ ಬೆಳವಣಿಗೆ ಸಾರ್ವಜನಿಕ ಸಾರಿಗೆ ಕ್ಷೇತ್ರದಲ್ಲಿ ಡಿಜಿಟಲ್ ಪಾವತಿ ಸ್ವೀಕೃತಿಯ ಮಹತ್ತರ ಸಾಧನೆಯಾಗಿ ಗುರುತಿಸಲಾಗಿದೆ. ಡಿಜಿಟಲ್ ಪಾವತಿಯ ಭವಿಷ್ಯ UPI ಪಾವತಿ ವಿಧಾನವನ್ನು ಪ್ರಯಾಣಿಕರು ಹೆಚ್ಚು ಅನುಸರಿಸುತ್ತಿರುವುದರಿಂದ ಟಿಕೆಟ್ ಸಂಗ್ರಹ ವ್ಯವಸ್ಥೆಯ ಸರಳತೆ, ವೇಗ ಮತ್ತು ಪಾರದರ್ಶಕತೆ ಹೆಚ್ಚಳ ಕಾಣುತ್ತಿದೆ. ಇದರಿಂದ BMTC ಪ್ರಯಾಣಿಕರಿಗೆ ಸುಲಭ, ಸುರಕ್ಷಿತ ಮತ್ತು ನಗದುರಹಿತ ಪಾವತಿ ಅನುಭವ ಒದಗಿಸುತ್ತಿದೆ. UPI ಪಾವತಿಯ ಪ್ರಭಾವ BMTCಯ ಆದಾಯದಲ್ಲಿ ಡಿಜಿಟಲ್ ಪಾವತಿಯ ಒಟ್ಟಾರೆ ಶೇಕಡವಾರು ಗಣನೀಯವಾಗಿ ಏರಿಕೆ. ಪ್ರಯಾಣಿಕರು ನಗದುರಹಿತ ಪ್ರಯಾಣದ ಜೊತೆಗೆ , ಸುಲಭ UPI ಪಾವತಿ…
ಬೆಂಗಳೂರು: ರಾಜ್ಯ ಸರಕಾರವು ಜನವಿರೋಧಿ ಬೆಲೆ ಏರಿಕೆಯನ್ನು ಕೂಡಲೇ ಹಿಂದಕ್ಕೆ ಪಡೆಯಬೇಕೆಂದು ಆಗ್ರಹಿಸಿ ಬಿಜೆಪಿ ನಾಳೆ ಅಹೋರಾತ್ರಿ ಧರಣಿ ಸತ್ಯಾಗ್ರಹ ಮಾಡಲಿದ್ದು, ನಾನು ಅದರಲ್ಲಿ ಪಾಲ್ಗೊಳ್ಳುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಬಿಜೆಪಿ ಕೇಂದ್ರೀಯ ಸಂಸದೀಯ ಮಂಡಳಿ ಸದಸ್ಯ ಬಿ.ಎಸ್. ಯಡಿಯೂರಪ್ಪ ಅವರು ಪ್ರಕಟಿಸಿದರು. ಬೆಂಗಳೂರಿನ ಡಾಲರ್ಸ್ ಕಾಲೋನಿಯ ಧವಳಗಿರಿ ನಿವಾಸದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಎಲ್ಲ ಬೆಲೆ ಏರಿಕೆಯಿಂದ ಜನಸಾಮಾನ್ಯರಿಗೆ ಉಸಿರು ಕಟ್ಟುವ ಪರಿಸ್ಥಿತಿ ಬಂದಿದೆ. ಫ್ರೀಡಂ ಪಾರ್ಕಿನಲ್ಲಿ ಪ್ರತಿಭಟನೆ ಪ್ರಾರಂಭ ಮಾಡುತ್ತಿದ್ದೇವೆ. ನೋವು ಅನುಭವಿಸುತ್ತಿರುವ ಎಲ್ಲರೂ ಪಕ್ಷಭೇದ ಮರೆತು ಈ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಬೇಕೆಂದು ಹಾಗೂ ಹೋರಾಟ ಯಶಸ್ವಿ ಮಾಡುವಂತೆ ವಿನಂತಿಸಿದರು. ಸಿಎಂ ಕುರ್ಚಿಗಾಗಿ ಕಾಂಗ್ರೆಸ್ಸಿನಲ್ಲಿ ಮುಸುಕಿನ ಗುದ್ದಾಟ ನಡೆದಿದೆ. ಮುಖ್ಯಮಂತ್ರಿ ಯಾರಾಗಬೇಕು ಎಂಬುದು ಅವರಿಗೆ ಮುಖ್ಯವೇ ಹೊರತು ಜನರು ಪ್ರಮುಖರಲ್ಲ ಎಂದು ಟೀಕಿಸಿದರು. ಬಿಜೆಪಿಯ ಹೋರಾಟ ಇನ್ನೂ ಅನೇಕ ದಿನ ನಡೆಯಲಿದೆ. ಮೈಸೂರಿನಲ್ಲಿ ನಡೆಯುವ ಹೋರಾಟದಲ್ಲಿ ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರೂ ಭಾಗವಹಿಸುತ್ತಾರೆ ಎಂದು…
ಬೆಂಗಳೂರು: ಕರ್ನಾಟಕ ವಿಧಾನಸಭೆಯ 18 ಸದಸ್ಯರನ್ನು ಅಮಾನತ್ತು ಮಾಡಿ ಹೊರಡಿಸಿರುವಂತ ಆದೇಶವನ್ನು ಹಿಂಪಡೆಯುವಂತೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಸಭಾದ್ಯಕ್ಷರಿಗೆ ಪತ್ರ ಬರೆದು ಆಗ್ರಹಿಸಿದ್ದಾರೆ. ಇಂದು ವಿಧಾನಸಭೆ ಸ್ಪೀಕರ್ ಯು.ಟಿ ಖಾದರ್ ಅವರಿಗೆ ಪತ್ರ ಬರೆದಿರುವಂತ ಅವರು, ದಿನಾಂಕ: 21.03.2025ರ ಕರ್ನಾಟಕ ವಿಧಾನಸಭೆಯ ಅಧಿವೇಶನದ ಸಮಯದಲ್ಲಿ ಸದನದಲ್ಲಿ ಹನಿಟ್ರ್ಯಾಪ್ ಹಾಗೂ ಮುಸ್ಲಿಮರಿಗೆ 4% ಮೀಸಲಾತಿ ವಿಚಾರದ ಚರ್ಚೆಯು ವಿಕೋಪಕ್ಕೆ ತಿರುಗಿದಾಗ ವಿರೋಧ ಪಕ್ಷದವರಾದ ನಾವೆಲ್ಲ ಸಭಾಧ್ಯಕ್ಷರ ಪೀಠದ ಸುತ್ತ ನಿಂತುಕೊಂಡು ಪ್ರತಿಭಟನೆ ಮಾಡಿರುತ್ತೇವೆ. ಈ ಸಂದರ್ಭದಲ್ಲಿ ತಾವು, ಸದನದಲ್ಲಿ ಪೀಠದ ಆದೇಶವನ್ನು ಲೆಕ್ಕಿಸದ ಸದನದ ಕಾರ್ಯಕಲಾಪಗಳಿಗೆ ಅಡ್ಡಿಯುಂಟು ಮಾಡಿರುತ್ತೀರೆಂದು, ಅಶಿಸ್ತಿನಿಂದ ಹಾಗೂ ಅಗೌರವದಿಂದ ನಡೆದುಕೊಂಡಿರುತ್ತೀರೆಂದು ವಿಧಾನಸಭೆಯ 18 ಸದಸ್ಯರನ್ನು ಕರ್ನಾಟಕ ವಿಧಾನಸಭೆಯ ಕಾರ್ಯವಿಧಾನ ಮತ್ತು ನಡವಳಿಕೆಯ ನಿಯಾಮಾವಳಿಗಳ ನಿಯಮ 348ರ ಮೇರೆಗೆ ತಕ್ಷಣದಿಂದ ಜಾರಿಗೆ ಬರುವಂತೆ 6 ತಿಂಗಳುಗಳ ಕಾಲ ಸದನಕ್ಕೆ ಬಾರದಂತೆ ತಡೆಹಿಡಿದು ಅಮಾನತ್ತುಗೊಳಿಸಲಾಗಿರುತ್ತದೆ ಹಾಗೂ ಅದರ ಜೊತೆಗೆ ಇತರ ನಿರ್ಬಂಧಗಳನ್ನು ವಿಧಿಸಲಾಗಿರುತ್ತದೆ ಎಂದಿದ್ದಾರೆ. ರಾಜ್ಯದ ವಿಧಾನಮಂಡಲದ ಉಭಯ ಸದನಗಳು…
ಬೆಂಗಳೂರು: ನಮ್ಮ ಮೆಟ್ರೋ ದರವನ್ನು ಹೆಚ್ಚಳ ಮಾಡಲಾಗಿತ್ತು. ಆ ಬಳಿಕ ಪ್ರಯಾಣಿಕರ ಸಂಖ್ಯೆಯೂ ಇಳಿಕೆಯಾಗಿತ್ತು. ಅಲ್ಲದೇ ಅವೈಜ್ಞಾನಿಕವಾಗಿ ದರ ಹೆಚ್ಚಳ ಮಾಡಿದ್ದರ ವಿರುದ್ಧ ಪ್ರಯಾಣಿಕರು ಆಕ್ರೋಶ ಹೊರ ಹಾಕಿದ್ದರು. ಹೀಗಾಗಿ ಕೆಲ ವ್ಯತ್ಯಾಸದ ದರಗಳನ್ನು ಸರಿ ಮಾಡಲಾಗಿತ್ತು. ಆದರೇ ಈ ದರ ಏರಿಕೆ ಪ್ರಶ್ನಿಸಿ ಹೈಕೋರ್ಟ್ ಗೆ ಸಲ್ಲಿಸಿದ್ದಂತ ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ವಜಾಗೊಳಿಸಲಾಗಿದೆ. ಬೆಂಗಳೂರಿನ ನಮ್ಮ ಮೆಟ್ರೋ ಪ್ರಯಾಣದ ದರ ಏರಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಗೆ ಸನತ್ ಕುಮಾರ್ ಶೆಟ್ಟಿ ಎಂಬುವರು ಸಾರ್ವಜನಿಕ ಹಿತಾಸಕ್ತಿಯ ಅರ್ಜಿಯನ್ನು ಸಲ್ಲಿಸಿದ್ದರು. ಈ ಅರ್ಜಿಯನ್ನು ಇಂದು ವಿಚಾರಣೆ ನಡೆಸಿದಂತ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ಅಂಜಾರಿಯಾ ಹಾಗೂ ನ್ಯಾಯಮೂರ್ತಿ ಕೆ.ವಿ ಅರವಿಂದ್ ನ್ಯಾಯಪೀಠವು ಅರ್ಜಿಯನ್ನು ವಜಾಗೊಳಿಸಿದೆ. ಇದು ತಜ್ಞರ ಸಮಿತಿಯ ನಿರ್ಧಾರವಾಗಿದೆ. ಈ ತೀರ್ಮಾನದಲ್ಲಿ ಹೈಕೋರ್ಟ್ ಮಧ್ಯ ಪ್ರವೇಶಿಸುವುದಿಲ್ಲ. ದರ ನಿಗದಿ ಸಮಿತಿಯೇ ಈ ಬಗ್ಗೆ ನಿರ್ಧಾರ ಕೈಗೊಳ್ಳಬೇಕಿದೆ ಎಂಬುದಾಗಿ ಅಭಿಪ್ರಾಯ ಪಟ್ಟು, ಸತತ್ ಕುಮಾರ್ ಶೆಟ್ಟಿ ಎಂಬುವರು ಸಲ್ಲಿಸಿದ್ದಂತ ಪಿಐಎಲ್ ವಜಾಗೊಳಿಸಿದೆ.…
ಮ್ಯಾನ್ಮಾರ್: ಕಳೆದ ವಾರ ಮ್ಯಾನ್ಮಾರ್ನಲ್ಲಿ ಸಂಭವಿಸಿದ 7.7 ತೀವ್ರತೆಯ ಭೂಕಂಪದಿಂದ ಉಂಟಾದ ವಿನಾಶವನ್ನು ಸೆರೆಹಿಡಿದ ಉಪಗ್ರಹ ಚಿತ್ರಗಳನ್ನು ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆ (Indian Space Research Organisation -ISRO) ಬಿಡುಗಡೆ ಮಾಡಿದೆ. ಇಸ್ರೋದ ಕಾರ್ಟೊಸಾಟ್ -3 ಉಪಗ್ರಹದ ಸಹಾಯದಿಂದ ತೆಗೆದ ಚಿತ್ರಗಳ ಪ್ರಕಾರ, ಭೂಕಂಪವು ಮ್ಯಾನ್ಮಾರ್ನಲ್ಲಿ ಮಾತ್ರವಲ್ಲದೆ ಅದರ ಪಕ್ಕದ ದೇಶಗಳಲ್ಲಿಯೂ ಭಾರಿ ವಿನಾಶಕ್ಕೆ ಕಾರಣವಾಯಿತು. ಕಾರ್ಟೊಸಾಟ್ -3 ರ ಸುಧಾರಿತ ಇಮೇಜಿಂಗ್ ಸಾಮರ್ಥ್ಯಗಳು 500 ಕಿಲೋಮೀಟರ್ ಎತ್ತರದಿಂದ 50 ಸೆಂಟಿಮೀಟರ್ಗಳಿಗಿಂತ ಕಡಿಮೆ ನಿಖರತೆಯಲ್ಲಿ ಹೆಚ್ಚಿನ ರೆಸಲ್ಯೂಶನ್ ಫೋಟೋಗಳನ್ನು ನೀಡುತ್ತವೆ. ಇತ್ತೀಚೆಗೆ ಬಿಡುಗಡೆಯಾದ ಚಿತ್ರಗಳು ಬಾಹ್ಯಾಕಾಶದಿಂದ ಭೂಕಂಪದ ದುರಂತದ ಸ್ಪಷ್ಟ ನೋಟವನ್ನು ನೀಡುತ್ತವೆ, ನಿರ್ಣಾಯಕ ಮೂಲಸೌಕರ್ಯಗಳ ಕುಸಿತ, ಐತಿಹಾಸಿಕ ಹೆಗ್ಗುರುತುಗಳು ಮತ್ತು ನಗರಗಳಿಗೆ ವ್ಯಾಪಕ ಹಾನಿಯನ್ನು ಎತ್ತಿ ತೋರಿಸುತ್ತವೆ. ಇಸ್ರೋ ಉಪಗ್ರಹ ಚಿತ್ರಗಳು ಏನನ್ನು ತೋರಿಸುತ್ತವೆ? ಇರಾವಡ್ಡಿ ನದಿಗೆ ಅಡ್ಡಲಾಗಿ ಕಟ್ಟಲಾದ ಅವಾ ಸೇತುವೆ, ಮಂಡಲೆ ವಿಶ್ವವಿದ್ಯಾಲಯ ಹಾಗೂ ಯುನೆಸ್ಕೋ ಮಾನ್ಯತೆ ಪಡೆದ ಸಾಂಸ್ಕೃತಿಕ ಪರಂಪರೆಯ ತಾಣವಾದ ಆನಂದ ಪಗೋಡಾದ…
ಬೆಳಗಾವಿ: ಪಾಪಿ ಮಗನೊಬ್ಬ ತನ್ನ ತಂದೆಯನ್ನು ಆಸ್ಪತ್ರೆಗೆ ಸೇರಿಸಿ ಕಾಲ್ಕಿತ್ತಿದ್ದಾನೆ. ಸೂಕ್ತ ರೀತಿಯ ಚಿಕಿತ್ಸೆ ಸಿಗದೇ ಆಸ್ಪತ್ರೆಯಲ್ಲೇ ಅನಾಥವಾಗಿ ತಂದೆ ಸಾವನ್ನಪ್ಪಿದ್ದಾರೆ. ಇಂತಹ ತಂದೆಯನ್ನು ದೂರದ ಗೋವಾದಿಂದ ಬಂದಂತ ಮಗಳು ಅಂತ್ಯಸಂಸ್ಕಾರ ನೆರವೇರಿಸಿದಂತ ಅಮಾನವೀಯ ಘಟನೆ ರಾಜ್ಯದಲ್ಲಿ ನಡೆದಿದೆ. ಬೆಳಗಾವಿಯ ಬಿಮ್ಸ್ ಆಸ್ಪತ್ರೆಗೆ ಅನಾರೋಗ್ಯದಿಂದ ಬಳಲುತ್ತಿದ್ದಂತ ಸತೀಶ್ವರ್ ಅವರನ್ನು ಅವರ ಪುತ್ರ ಸೇರಿಸಿ ಹೋಗಿದ್ದಾನೆ. ಆದರೇ ಸೂಕ್ತ ರೀತಿಯಲ್ಲಿ ಚಿಕಿತ್ಸೆ ಕೊಡಿಸಬೇಕಿದ್ದಂತ ಪುತ್ರ ಹೋದ ಬಳಿಕ, ಅನಾಥವಾಗಿದ್ದಂತ ಅವರ ತಂದೆ ಅದೇ ಕೊರಗಿನಲ್ಲಿ ಸಾವನ್ನಪ್ಪಿದ್ದಾರೆ. ಅನಾರೋಗ್ಯದಿಂದ ಚಿಕಿತ್ಸೆ ಫಲಿಸದೇ ಸತೀಶ್ವರ್ ಸಾವನ್ನಪ್ಪಿದ್ದಾರೆ. ಸಾವಿನ ಬಳಿಕ ಸತೀಶ್ವರ್ ಪುತ್ರನನ್ನು ಹುಡುಕುವ ಪ್ರಯತ್ನ ಮಾಡಿದರೂ ಸಿಕ್ಕಿಲ್ಲ. ಕೊನೆಗೆ ಅವರ ಪುತ್ರಿಯನ್ನು ಪೊಲೀಸರು ಸಂಪರ್ಕಿಸಿದ್ದಾರೆ. ಗೋವಾದಲ್ಲಿದ್ದಂತ ಸತೀಶ್ವರ್ ಪುತ್ರಿ ಆಗಮಿಸಿ ತಂದೆಯ ಅಂತ್ಯಸಂಸ್ಕಾರವನ್ನು ನೆರವೇರಿಸಿದ್ದಾರೆ. ಈ ಮೂಲಕ ಆಸ್ಪತ್ರೆಯಲ್ಲೇ ಅನಾಥವಾಗಿ ಸತೀಶ್ವರ್ ಸಾವನ್ನಪ್ಪಿದ್ರೇ, ಅವರ ಪುತ್ರಿ ಅಂತ್ಯ ಸಂಸ್ಕಾರ ನಡೆಸಿದಂತ ಹೃದಯ ವಿದ್ರಾವಕ ಘಟನೆ ಬೆಳಗಾವಿಯಲ್ಲಿ ನಡೆದಿದೆ. https://kannadanewsnow.com/kannada/construction-of-helipad-for-organ-transportation-facility-at-victoria-hospital-in-bengaluru/ https://kannadanewsnow.com/kannada/breaking-two-killed-three-injured-in-head-on-collision-between-two-bikes-in-mysuru/
ಬೆಂಗಳೂರು: ನಗರದ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಅಂಗಾಂಗ ಸಾಗಾಣೆಯ ಅನುಕೂಲಕ್ಕಾಗಿ ಹೆಲಿಪ್ಯಾಡ್ ನಿರ್ಮಾಣಕ್ಕೆ ಸರ್ಕಾರ ಕ್ರಮವಹಿಸಿದೆ. ಈ ಮೂಲಕ ಅಂಗಾಂಗ ದಾನಿಗಳಿಗೆ, ಅಂಗಾಂಗ ನೆರವಿರೋರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಅಪಘಾತ ಮತ್ತು ತುರ್ತು ಆರೈಕೆ ಕೇಂದ್ರವನ್ನು ಹೊಂದಿರುವ ವಿಕ್ಟೋರಿಯಾ ಆಸ್ಪತ್ರೆ, ಗ್ಯಾಸ್ಟ್ರೋ ಎಂಟರಾಲಜಿ ಸಂಸ್ಥೆ ಮತ್ತು ಮೂತ್ರಶಾಸ್ತ್ರ ಅಂಗಾಂಗ ಕಸಿ ಸಂಸ್ಥೆ, ಮಿಂಟೋ ಆಸ್ಪತ್ರೆಯಲ್ಲಿ ಪ್ರಾದೇಶಿಕ ನೇತ್ರಶಾಸ್ತ್ರ ಸಂಸ್ಥೆ ಮತ್ತು ಸ್ಕಿನ್ ಬ್ಯಾಂಕ್ – ಹೀಗೆ ಎಲ್ಲವನ್ನೂ ಹೊಂದಿರುವ ಆಸ್ಪತ್ರೆಗಳ ಪೈಕಿ ನಮ್ಮ ವಿಕ್ಟೋರಿಯಾ ಆಸ್ಪತ್ರೆ ದಕ್ಷಿಣ ಭಾರತದ ಅತಿದೊಡ್ಡ ಆಸ್ಪತ್ರೆಗಳಲ್ಲಿ ಒಂದಾಗಿದೆ. ಇಲ್ಲಿ ಈಗ ನವೀಕೃತ ಕೇಂದ್ರ ಬರಲಿದೆ. ಸಂಭಾವ್ಯ ದಾನಿಗಳ ಗುರುತಿಸುವಿಕೆ ಮತ್ತು ಸುರಕ್ಷಿತ ಅಂಗಾಂಗ ದಾನ ಪ್ರಕ್ರಿಯೆಗೆ ಕುಟುಂಬ ಸಮಾಲೋಚನೆ, ಉನ್ನತ ಮಟ್ಟದ ಐಸಿಯು ಆರೈಕೆ ಮತ್ತು ಕಾನೂನು ಕ್ರಮಗಳು ಅಗತ್ಯವಿರುತ್ತದೆ. ಈ ನಿಟ್ಟಿನಲ್ಲಿ ಸಮಗ್ರ ಅಭಿವೃದ್ಧಿಗೆ ಅನುದಾನ ಒದಗಿಸಲಾಗಿದೆ. “ಈ ಯೋಜನೆಯು ಅತ್ಯಂತ ಅರ್ಥಪೂರ್ಣವಾಗಿದೆ. ಇದು ಬಡ ರೋಗಿಗಳಿಗೆ ಅನುಕೂಲವಾಗಲಿದೆ”ಎಂದು ಡಾ. ಪಾಟೀಲ್ ತಿಳಿಸಿದ್ದಾರೆ. https://twitter.com/KarnatakaVarthe/status/1907016766158733810 “ವಿಕ್ಟೋರಿಯಾ ಆಸ್ಪತ್ರೆಯಲ್ಲಿ…
ಮುಂಬೈ : ಕ್ರಿಕೆಟ್ ಪ್ರೇಮಿಗಳಿಗೆ ಒಳ್ಳೆಯ ಸುದ್ದಿ. ಜಿಯೋ ತನ್ನ ಅಸ್ತಿತ್ವದಲ್ಲಿರುವ ಮತ್ತು ಹೊಸ ಗ್ರಾಹಕರಿಗೆ ತಂದಿದ್ದ ವಿಶೇಷ ಕ್ರಿಕೆಟ್ ಕೊಡುಗೆಯನ್ನು 15 ಏಪ್ರಿಲ್ 2025 ರವರೆಗೆ ವಿಸ್ತರಿಸಲಾಗಿದೆ. ಈ ಮೊದಲು ಈ ಕೊಡುಗೆ ಮಾರ್ಚ್ 31 ಕ್ಕೆ ಕೊನೆಗೊಳ್ಳಬೇಕಿತ್ತು. ಈ ಆಫರ್ ಅಡಿಯಲ್ಲಿ, ಜಿಯೋ ಗ್ರಾಹಕರು 299 ಅಥವಾ ಅದಕ್ಕಿಂತ ಹೆಚ್ಚಿನ ಯೋಜನೆಯೊಂದಿಗೆ ಹೊಸ ಜಿಯೋ ಸಿಮ್ ಸಂಪರ್ಕವನ್ನು ಪಡೆದರೆ ಅಥವಾ ಕನಿಷ್ಠ 299 ರೂ.ಗಳೊಂದಿಗೆ ರೀಚಾರ್ಜ್ ಮಾಡಿದರೆ ಜಿಯೋ ಹಾಟ್ಸ್ಟಾರ್ನಲ್ಲಿ ಐಪಿಎಲ್ ಕ್ರಿಕೆಟ್ ಋತುವನ್ನು ಉಚಿತವಾಗಿ ಆನಂದಿಸಬಹುದು. ಈಗಾಗಲೇ ರೀಚಾರ್ಜ್ ಮಾಡಿರುವ ಗ್ರಾಹಕರು 100 ರೂ.ಗಳ ಆಡ್-ಆನ್ ಪ್ಯಾಕ್ ತೆಗೆದುಕೊಳ್ಳುವ ಮೂಲಕ ಕೊಡುಗೆಯ ಲಾಭವನ್ನು ಪಡೆಯಲು ಸಾಧ್ಯವಾಗುತ್ತದೆ. ಈ ಅನಿಯಮಿತ ಕ್ರಿಕೆಟ್ ಕೊಡುಗೆಯಲ್ಲಿ, ಗ್ರಾಹಕರು ಟಿವಿ / ಮೊಬೈಲ್ನಲ್ಲಿ 90 ದಿನಗಳ ಉಚಿತ ಜಿಯೋ ಹಾಟ್ಸ್ಟಾರ್ ಚಂದಾದಾರಿಕೆಯನ್ನು ಪಡೆಯುತ್ತಿದ್ದಾರೆ ಮತ್ತು ಅದೂ 4 ಕೆ ಗುಣಮಟ್ಟದಲ್ಲಿ. ಈ ಕಾರಣದಿಂದಾಗಿ ಗ್ರಾಹಕರು ಐಪಿಎಲ್ ಕ್ರಿಕೆಟ್ ಋತುವನ್ನು ಉಚಿತವಾಗಿ ಆನಂದಿಸಲು ಸಾಧ್ಯವಾಗುತ್ತಿದೆ.…













