Author: kannadanewsnow09

ನವದೆಹಲಿ: ಟಾಟಾ ಕಮ್ಯುನಿಕೇಷನ್ಸ್ ಲಿಮಿಟೆಡ್ ನ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ಎನ್ ಗಣಪತಿ ಸುಬ್ರಮಣ್ಯಂ ಅವರನ್ನು ನೇಮಕ ಮಾಡಲು ಟಾಟಾ ಕಮ್ಯುನಿಕೇಷನ್ಸ್ ಮಂಡಳಿ ಶುಕ್ರವಾರ ಅನುಮೋದನೆ ನೀಡಿದೆ. ಎನ್ ಗಣಪತಿ ಸುಬ್ರಮಣ್ಯಂ ಅವರು ಡಿಸೆಂಬರ್ 2, 2021 ರಂದು ಟಾಟಾ ಕಮ್ಯುನಿಕೇಷನ್ಸ್ ಲಿಮಿಟೆಡ್ನ ಕಾರ್ಯನಿರ್ವಾಹಕೇತರ ನಿರ್ದೇಶಕರಾಗಿ ಮಂಡಳಿಗೆ ಸೇರಿದರು. ಗಣಪತಿ ಸುಬ್ರಮಣ್ಯಂ (ಎನ್ಜಿಎಸ್) 40 ವರ್ಷಗಳಿಂದ ಟಾಟಾ ಕನ್ಸಲ್ಟೆನ್ಸಿ ಸರ್ವೀಸಸ್ ಲಿಮಿಟೆಡ್ (ಟಿಸಿಎಸ್) ಮತ್ತು ಭಾರತೀಯ ಐಟಿ ಉದ್ಯಮದ ಭಾಗವಾಗಿದ್ದಾರೆ. ಅವರು ಮೇ 2024 ರಲ್ಲಿ ಟಿಸಿಎಸ್ನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮತ್ತು ಕಾರ್ಯನಿರ್ವಾಹಕ ನಿರ್ದೇಶಕ ಹುದ್ದೆಯಿಂದ ಕೆಳಗಿಳಿದರು. “ಕಂಪನಿಯ ನಿರ್ದೇಶಕರ ಮಂಡಳಿಯು ನಾಮನಿರ್ದೇಶನ ಮತ್ತು ಸಂಭಾವನೆ ಸಮಿತಿಯ ಶಿಫಾರಸಿನ ಆಧಾರದ ಮೇಲೆ, ಕಾರ್ಯನಿರ್ವಾಹಕೇತರ, ಸ್ವತಂತ್ರ ನಿರ್ದೇಶಕ ಶ್ರೀ ಎನ್ ಗಣಪತಿ ಸುಬ್ರಮಣ್ಯಂ ಅವರನ್ನು ಮಾರ್ಚ್ 14, 2025 ರಿಂದ ಜಾರಿಗೆ ಬರುವಂತೆ ಕಂಪನಿಯ ನಿರ್ದೇಶಕರ ಮಂಡಳಿಯ ಅಧ್ಯಕ್ಷರಾಗಿ ನೇಮಿಸಿದೆ ಎಂದು ತಿಳಿಸಲು ನಾವು ಸಂತೋಷಪಡುತ್ತೇವೆ” ಎಂದು ಟಾಟಾ ಕಮ್ಯುನಿಕೇಷನ್ಸ್ ಹೇಳಿಕೆಯಲ್ಲಿ ತಿಳಿಸಿದೆ.…

Read More

ನವದೆಹಲಿ: ದಕ್ಷಿಣ ವಜೀರಿಸ್ತಾನದ ಅಜಮ್ ವಾರ್ಸಕ್ನಲ್ಲಿರುವ ಮಸೀದಿಯಲ್ಲಿ ಶುಕ್ರವಾರದ ಪ್ರಾರ್ಥನೆಯ ಸಮಯದಲ್ಲಿ ಮಾರಣಾಂತಿಕ ಆತ್ಮಾಹುತಿ ಬಾಂಬ್ ದಾಳಿ ನಡೆದಿದ್ದು, ಜಮಿಯತ್ ಉಲೇಮಾ ಇಸ್ಲಾಂ-ಫಜಲ್ (ಜೆಯುಐ-ಎಫ್) ಜಿಲ್ಲಾ ಮುಖ್ಯಸ್ಥ ಮೌಲಾನಾ ಅಬ್ದುಲ್ಲಾ ನದೀಮ್ ಸೇರಿದಂತೆ ಹಲವರು ಗಾಯಗೊಂಡಿದ್ದಾರೆ. ವರದಿಗಳ ಪ್ರಕಾರ, ಮಸೀದಿಯಲ್ಲಿ ನಡೆದ ಆತ್ಮಾಹುತಿ ಬಾಂಬ್ ದಾಳಿಯಲ್ಲಿ ಗಾಯಗೊಂಡ ನಾಲ್ವರಲ್ಲಿ ಮಕ್ಕಳೂ ಸೇರಿದ್ದಾರೆ. ಪಾಕಿಸ್ತಾನದ ಬುಡಕಟ್ಟು ಪ್ರದೇಶಗಳಲ್ಲಿ ಹೆಚ್ಚುತ್ತಿರುವ ಉಗ್ರಗಾಮಿ ಹಿಂಸಾಚಾರದ ಮಧ್ಯೆ ಈ ದಾಳಿ ನಡೆದಿದ್ದು, ಹೆಚ್ಚಿನ ಸಾವುನೋವುಗಳಿಗೆ ಕಾರಣವಾಗಿದೆ ಎಂದು ಶಂಕಿಸಲಾಗಿದೆ. ಸ್ಥಳೀಯ ಪೊಲೀಸರ ಪ್ರಕಾರ, ಪ್ರಾರ್ಥನೆಗಾಗಿ ಭಕ್ತರು ಜಮಾಯಿಸುತ್ತಿದ್ದಾಗ ಬಾಂಬರ್ ಮಸೀದಿಯೊಳಗೆ ಸ್ಫೋಟಕಗಳನ್ನು ಸ್ಫೋಟಿಸಲಾಗಿದೆ. ಇದು ವ್ಯಾಪಕ ಭೀತಿ ಮತ್ತು ವಿನಾಶಕ್ಕೆ ಕಾರಣವಾಯಿತು. ರಕ್ಷಣಾ ತಂಡಗಳು ಮತ್ತು ಭದ್ರತಾ ಪಡೆಗಳು ಘಟನಾ ಸ್ಥಳಕ್ಕೆ ಧಾವಿಸಿದ್ದು, ದಾಳಿಯ ಹಿಂದಿನ ದುಷ್ಕರ್ಮಿಗಳ ಬಗ್ಗೆ ಅಧಿಕಾರಿಗಳು ತನಿಖೆ ಆರಂಭಿಸಿದ್ದಾರೆ. ಇದು ಎರಡು ವಾರಗಳಲ್ಲಿ ಪಾಕಿಸ್ತಾನದ ಮಸೀದಿಯ ಮೇಲೆ ನಡೆದ ಎರಡನೇ ದಾಳಿಯಾಗಿದ್ದು, ದೇಶದ ಹದಗೆಡುತ್ತಿರುವ ಭದ್ರತಾ ಪರಿಸ್ಥಿತಿಯ ಬಗ್ಗೆ ಕಳವಳವನ್ನು ಹೆಚ್ಚಿಸಿದೆ. ಭಯೋತ್ಪಾದಕ…

Read More

ಬೆಂಗಳೂರು : ತುಮಕೂರು ಜಿಲ್ಲೆಯ ಜಲಜೀವನ್ ಮಿಷನ್ ಯೋಜನೆ ಅನುಷ್ಠಾನದಲ್ಲಿ ನಾನಾ ತಪ್ಪುಗಳಾಗಿದ್ದು, ಸರ್ಕಾರ ತನಿಖೆ ನಡೆಸಿ ವರದಿ ನೀಡಲು ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಮೂವರು ಅಧಿಕಾರಿಗಳನ್ನೊಳಗೊಂಡ ತನಿಖಾ ತಂಡವನ್ನು ರಚಿಸಲಾಗಿದೆ ಎಂದು ಕಂದಾಯ ಸಚಿವ ಕೃಷ್ಣಬೈರೇಗೌಡ ವಿಧಾನಸಭೆಗೆ ತಿಳಿಸಿದರು. ಕಾಂಗ್ರೆಸ್ ಹಿರಿಯ ಶಾಸಕ ಟಿ.ಬಿ.ಜಯಚಂದ್ರ ಅವರ ಗಮನ ಸೆಳೆಯುವ ಸೂಚನೆಗೆ ಗ್ರಾಮೀಣಾಭಿವೃದ್ಧಿ ಸಚಿವ ಪ್ರಿಯಾಂಕ್ ಖರ್ಗೆ ಅವರ ಪರವಾಗಿ ಉತ್ತರಿಸಿದ ಸಚಿವರು, ತನಿಖಾ ತಂಡವು ತುಮಕೂರಿಗೆ ಭೇಟಿ ನೀಡಿ 571 ಕಾಮಗಾರಿಗಳನ್ನು ಆಯ್ಕೆ ಮಾಡಿ, 183 ಕಾಮಗಾರಿಗಳ ಕಡತಗಳನ್ನು ಪರಿಶೀಲಿಸಿದೆ. 25 ಅನರ್ಹ ಗುತ್ತಿಗೆದಾರರಿಗೆ 69 ಕಾಮಗಾರಿಗಳ ಟೆಂಡ‌ರ್ ನೀಡಿ, ಕಾರ್ಯಪಾಲಕ ಇಂಜಿನಿಯರ್ ಕರ್ತವ್ಯ ಲೋಪ ಎಸಗಿದ್ದಾರೆ ಎಂದು ಮಧ್ಯಂತರ ವರದಿ ನೀಡಿದೆ. ಕರ್ತವ್ಯಲೋಪ ಎಸಗಿದ ಕಾರ್ಯಪಾಲಕ ಇಂಜಿನಿಯರ್ (ನಿವೃತ್ತ) ಎಸ್. ರವೀಶ್ ಅವರ ವಿರುದ್ಧ ಇಲಾಖಾ ವಿಚಾರಣೆ ಕೈಗೊಳ್ಳಲು ಮತ್ತು ದೋಷಾರೋಪಪಟ್ಟಿ ಸಲ್ಲಿಸಲು ಸರ್ಕಾರ ಅನುಮತಿ ನೀಡಿದೆ. ತನಿಖೆ ಅರ್ಧ ನಡೆಯುವುದರಿಂದ ಲೋಕಾಯುಕ್ತ ತನಿಖೆಗೆ ವಹಿಸಿದರೆ…

Read More

ಬೆಂಗಳೂರು: “2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿ (BWSSB)ಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದ್ದು, ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು ಚಿಂತನೆ ಮಾಡಲಾಗಿದ್ದು. ಈ ಬಗ್ಗೆ ಸಧ್ಯದಲ್ಲೇ ನಗರದ ಶಾಸಕರ ಬಳಿ ಚರ್ಚಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಾದ ರಾಮೋಜಿ ಗೌಡರು, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವದಿಂದ ಖಾಸಗಿ ಟ್ಯಾಂಕರ್ ಗಳು ದುಪ್ಪಟ್ಟು ಹಣದ ಬೇಡಿಕೆ ಇಡುತ್ತಿದ್ದು, ಜನರಿಗೆ ಉಚಿತವಾಗಿ ನೀರು ಪೂರೈಸಬೇಕು ಹಾಗೂ ಕಾವೇರಿ ಸಂಪರ್ಕ ನೀಡಿರುವ ಮನೆಗಳಿಗೆ ಶೀಘ್ರ ನೀರು ಒದಗಿಸಬೇಕು ಎಂದು ಶುಕ್ರವಾರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು, “ಸದಸ್ಯರಾದ ರಾಮೋಜಿಗೌಡರು ಸೂಕ್ತ ಕಾಲದಲ್ಲಿ ಸೂಕ್ತ ವಿಚಾರ ಪ್ರಸ್ತಾಪಿಸಿದ್ದಾರೆ. ಶಿವರಾತ್ರಿ ಕಳೆದಿದ್ದು ಬೇಸಿಗೆ ತೀವ್ರತೆ ಹೆಚ್ಚಾಗಿ ಉಷ್ಣಾಂಶ ಏರಿಕೆಯಾಗಿದೆ. ಆದರೆ…

Read More

ಬೆಂಗಳೂರು: “2014ರ ನಂತರ ಬೆಂಗಳೂರಿನಲ್ಲಿ ನೀರಿನ ದರ ಪರಿಷ್ಕರಣೆ ಮಾಡಿಲ್ಲ. ಹೀಗಾಗಿ ಬೆಂಗಳೂರು ಜಲ ಮಂಡಳಿ (BWSSB)ಯು 7-8 ಪೈಸೆ ದರ ಏರಿಕೆಗೆ ಪ್ರಸ್ತಾಪ ನೀಡಿದ್ದು, ಸದ್ಯಕ್ಕೆ 1 ಪೈಸೆಯಷ್ಟು ಮಾತ್ರ ಏರಿಕೆ ಮಾಡಲು ಚಿಂತನೆ ಮಾಡಲಾಗಿದ್ದು. ಈ ಬಗ್ಗೆ ಸಧ್ಯದಲ್ಲೇ ನಗರದ ಶಾಸಕರ ಬಳಿ ಚರ್ಚಿಸಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ವಿಧಾನ ಪರಿಷತ್ ಶೂನ್ಯವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಾದ ರಾಮೋಜಿ ಗೌಡರು, ಬೇಸಿಗೆ ಆರಂಭವಾಗುತ್ತಿದ್ದು, ಬೆಂಗಳೂರಿನ ಪೂರ್ವ ಭಾಗದಲ್ಲಿ ಕುಡಿಯುವ ನೀರಿನ ಅಭಾವದಿಂದ ಖಾಸಗಿ ಟ್ಯಾಂಕರ್ ಗಳು ದುಪ್ಪಟ್ಟು ಹಣದ ಬೇಡಿಕೆ ಇಡುತ್ತಿದ್ದು, ಜನರಿಗೆ ಉಚಿತವಾಗಿ ನೀರು ಪೂರೈಸಬೇಕು ಹಾಗೂ ಕಾವೇರಿ ಸಂಪರ್ಕ ನೀಡಿರುವ ಮನೆಗಳಿಗೆ ಶೀಘ್ರ ನೀರು ಒದಗಿಸಬೇಕು ಎಂದು ಶುಕ್ರವಾರ ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯೆ ನೀಡಿದ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಶಿವಕುಮಾರ್ ಅವರು, “ಸದಸ್ಯರಾದ ರಾಮೋಜಿಗೌಡರು ಸೂಕ್ತ ಕಾಲದಲ್ಲಿ ಸೂಕ್ತ ವಿಚಾರ ಪ್ರಸ್ತಾಪಿಸಿದ್ದಾರೆ. ಶಿವರಾತ್ರಿ ಕಳೆದಿದ್ದು ಬೇಸಿಗೆ ತೀವ್ರತೆ ಹೆಚ್ಚಾಗಿ ಉಷ್ಣಾಂಶ ಏರಿಕೆಯಾಗಿದೆ. ಆದರೆ…

Read More

ಬಾಗಲಕೋಟೆ: ಜಿಲ್ಲೆಯಲ್ಲಿ ಪೊಲೀಸ್ ಸಮವಸ್ತ್ರದಲ್ಲೇ ಸ್ವಾಮೀಜಿಯೊಬ್ಬರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದಂತ ವೀಡಿಯೋ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿತ್ತು. ಈ ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವಂತ ಪೊಲೀಸ್ ಇಲಾಖೆಯು, ಆರು ಮಂದಿಯನ್ನು ವರ್ಗಾವಣೆ ಮಾಡಿ ಬಿಸಿ ಮುಟ್ಟಿಸಿದೆ. ಬಾಗಲಕೋಟೆ ಜಿಲ್ಲೆಯ ಬಾದಾಮಿ ಪೊಲೀಸ್ ಠಾಣೆಯ ಪೊಲೀಸರು ಸ್ವಾಮೀಜಿಯವರೊಬ್ಬರ ಕಾಲಿಗೆ ಬಿದ್ದು, ಆಶೀರ್ವಾದ ಪಡೆದು, ಅವರಿಂದ ಭಕ್ಷೀಸ್ ಆಗಿ ಹಣವನ್ನು ಪಡೆಯುತ್ತಿರುವಂತ ವೀಡಿಯೋ ವೈರಲ್ ಆಗಿತ್ತು. ಈ ವೀಡಿಯೋ ಕಂಡಂತ ಸಾರ್ವಜನಿಕರು ಪೊಲೀಸರ ನಡೆಯನ್ನು ತೀವ್ರವಾಗಿ ಖಂಡಿಸಿದ್ದರು. ಈ ಬೆನ್ನಲ್ಲೇ ಬಾಗಲಕೋಟೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅಮರನಾಥ್ ರೆಡ್ಡಿ ಅವರು ಸ್ವಾಮೀಜಿ ಕಾಲಿಗೆ ಬಿದ್ದು ಪೊಲೀಸ್ ಸಮವಸ್ತ್ರದಲ್ಲೇ ಆಶೀರ್ವಾದ ಪಡೆದಂತ ಆರು ಮಂದಿಯನ್ನು ವರ್ಗಾವಣೆ ಮಾಡಿ ಆದೇಶಿಸಿದ್ದಾರೆ. ಬಾದಾಮಿ ಪೊಲೀಸ್ ಠಾಣೆಯ ವಿವಿಧ ಠಾಣೆಗಳಿಗೆ ಸ್ವಾಮೀಜಿ ಕಾಲಿಗೆ ಬಿದ್ದಂತ ಆರು ಮಂದಿ ಪೊಲೀಸ್ ಅಧಿಕಾರಿ, ಸಿಬ್ಬಂದಿಗಳನ್ನು ವರ್ಗಾವಣೆ ಮಾಡಿ, ಬಿಸಿ ಮುಟ್ಟಿಸಿದ್ದಾರೆ. https://kannadanewsnow.com/kannada/islamic-leader-several-injured-in-pakistan-mosque-blast/ https://kannadanewsnow.com/kannada/is-the-banned-pfi-active-again-in-mangalore-police-bust-illegal-pistol-sales-racket/

Read More

ಇಸ್ಲಾಮಾಬಾದ್: ಪಾಕಿಸ್ತಾನದ ವಜಿರಿಸ್ತಾನ್ ಪ್ರದೇಶದ ಮಸೀದಿಯೊಂದರಲ್ಲಿ ಶುಕ್ರವಾರ ಸಂಭವಿಸಿದ ಸ್ಫೋಟದಲ್ಲಿ ಸ್ಥಳೀಯ ಇಸ್ಲಾಮಿಕ್ ನಾಯಕ ಮತ್ತು ಮಕ್ಕಳು ಸೇರಿದಂತೆ ಮೂವರು ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ದೇಶದ ವಾಯುವ್ಯ ಭಾಗದಲ್ಲಿರುವ ಜಮಿಯತ್ ಉಲೇಮಾ ಇಸ್ಲಾಂ-ಫಜಲ್ (ಜೆಯುಐ-ಎಫ್) ರಾಜಕೀಯ ಪಕ್ಷದ ಸ್ಥಳೀಯ ನಾಯಕ ಅಬ್ದುಲ್ಲಾ ನದೀಮ್ ಅವರನ್ನು ಗುರಿಯಾಗಿಸಿಕೊಂಡು ಈ ಸ್ಫೋಟ ಸಂಭವಿಸಿದೆ ಎಂದು ಅಧಿಕಾರಿಗಳು ನಂಬಿದ್ದಾರೆ. ನದೀಮ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಗಾಯಗೊಂಡವರಲ್ಲಿ ಇಬ್ಬರು ಮಕ್ಕಳೂ ಸೇರಿದ್ದಾರೆ ಎಂದು ದಕ್ಷಿಣ ವಜಿರಿಸ್ತಾನ್ ಜಿಲ್ಲಾ ಪೊಲೀಸ್ ಮುಖ್ಯಸ್ಥರು ತಿಳಿಸಿದ್ದಾರೆ. ಅಫ್ಘಾನಿಸ್ತಾನದೊಂದಿಗಿನ ಪಾಕಿಸ್ತಾನದ ಗಡಿ ಪ್ರದೇಶದಲ್ಲಿ ಸಂಭವಿಸಿದ ಸ್ಫೋಟಕ್ಕೆ ಯಾರು ಕಾರಣ ಎಂಬುದು ತಕ್ಷಣಕ್ಕೆ ಸ್ಪಷ್ಟವಾಗಿಲ್ಲ. https://kannadanewsnow.com/kannada/man-brutally-murdered-for-having-illicit-relationship-in-mysuru/ https://kannadanewsnow.com/kannada/is-the-banned-pfi-active-again-in-mangalore-police-bust-illegal-pistol-sales-racket/

Read More

ಮಂಗಳೂರು: ನಗರದಲ್ಲಿ ಬೃಹತ್ ಅಕ್ರಮ ಪಿಸ್ತೂಲ್ ಮಾರಾಟ ಜಾಲವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ಇದರ ಜೊತೆಗೆ ಕರಾವಳಿಯಲ್ಲಿ ನಿಷೇಧಿತ ಪಿಎಫ್ಐ ಸಂಘಟನೆ ಮತ್ತೆ ಆಕ್ಟೀವ್ ಆಗಿದ್ಯಾ ಎನ್ನುವಂತ ಸಂದೇಹವನ್ನು ಹುಟ್ಟು ಹಾಕಿದೆ. ಮಂಗಳೂರು ಸಿಸಿಬಿ ಪೊಲೀಸರು ಕೇರಳ ಮೂಲದ ನಟೋರಿಯಸ್ ಅಕ್ರಮ ಪಿಸ್ತೂಲ್ ಮಾರಾಟ ಡೀಲರ್ ಗಳನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಈ ಸಂಬಂಧ ಕೇರಳ ಮೂಲದ ಅಬ್ದುಲ್ ಲತೀಫ್, ಮನ್ಸೂರು, ನೌಫಾಲ್, ಮಹಮ್ಮದ್ ಅಸ್ಗರ್ ಹಾಗೂ ಮಹಮ್ಮದ್ ಸಾಲಿ ಎಂಬ ಆರೋಪಿಗಳನ್ನು ಬಂಧಿಸಿದ್ದಾರೆ. ಸಿಸಿಬಿ ಪೊಲೀಸರು ಬಂಧಿತ ಆರೋಪಿಗಳಿಂದ ಮೂರು ಪಿಸ್ತೂಲ್, 6 ಜೀವಂತ ಗುಂಡುಗಳನ್ನು ವಶಕ್ಕೆ ಪಡೆದಿದ್ದಾರೆ. ಬಂಧಿತ ಆರೋಪಿಗಳಲ್ಲಿ ಅಬ್ದುಲ್ ಲತೀಫ್ ಯಾನೆ ತೋಕ್ ಲತೀಫ್ ನಿಷೇಧಿತ ಪಿಎಫ್ಐ ಮುಖಂಡರಿಗೆ ಪಿಸ್ತೂಲ್ ನೀಡಿದ್ದಾಗಿ ಹೇಳಲಾಗುತ್ತಿದೆ. ಪಿಎಫ್ಐ ಕ್ಯಾಡರ್ ಗಳಿಗೆ ಶಸ್ತ್ರಾಸ್ತ್ರ ಸರಬರಾಜು ಮಾಡಿದ್ದಾಗಿ ವಿಚಾರಣೆಯ ವೇಳೆಯಲ್ಲಿ ತಿಳಿದು ಬಂದಿದೆ ಎನ್ನಲಾಗುತ್ತಿದೆ. https://kannadanewsnow.com/kannada/man-brutally-murdered-for-having-illicit-relationship-in-mysuru/ https://kannadanewsnow.com/kannada/bengaluru-gold-ornaments-valuables-worth-rs-2-40-lakh-seized-arrested-for-breaking-into-temple/

Read More

ಮೈಸೂರು: ನಗರದಲ್ಲಿ ಅನೈತಿಕ ಸಂಬಂಧಕ್ಕೆ ವ್ಯಕ್ತಿಯೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿರುವಂತ ಆರೋಪ ಕೇಳಿ ಬಂದಿದೆ. ಮದುವೆಯಾಗಿದ್ದರೂ ಬೇರೊಬ್ಬ ಯುವತಿಯೊಂದಿಗೆ ಅನೈತಿಕ ಸಂಬಂಧ ಹೊಂದಿದ್ದಂತ ವ್ಯಕ್ತಿಯನ್ನು ಬೆಳಗಾಗುವುದರೊಳಗೆ ಬರ್ಬರವಾಗಿ ಹತ್ಯೆ ಮಾಡಿರೋದಾಗಿ ಕುಟುಂಬಸ್ಥರು ಆರೋಪಿಸಿದ್ದಾರೆ. ಮೈಸೂರಿನ ಅನುಗನಹಳ್ಳಿಯಲ್ಲಿ ಇನ್ಟಾ ಗ್ರಾಂನಲ್ಲಿ ಪರಿಚಯವಾಗಿದ್ದಂತ ಶ್ವೇತಾ ಎಂಬಾಕೆಯೊಂದಿಗೆ ಸೂರ್ಯ ಎಂಬಾತ ಅನೈತಿಕ ಸಂಬಂಧವನ್ನು ಹೊಂದಿದ್ದನು. ಈತನನ್ನು ತೋಟದ ಮನೆಗೆ ನಿನ್ನೆ ರಾತ್ರಿ ಶ್ವೇತಾ ಕರೆದುಕೊಂಡು ಹೋಗಿದ್ದಳು. ಇಂದು ಬೆಳಗಾಗುವುದರೊಳಗೆ ತಲೆಗೆ ಮಾರಕಾಸ್ತ್ರಗಳಿಂದ ಹೊಡೆದು ಕೊಲೆ ಮಾಡಿರೋ ಆರೋಪಿವನ್ನು ಸೂರ್ಯ ಕುಟುಂಬಸ್ಥರು ಆರೋಪ ಮಾಡಿದ್ದಾರೆ. ಶ್ವೇತಾ ಇನ್ಟಾ ಗ್ರಾಂನಲ್ಲಿ ಪರಿಚಯವಾಗಿದ್ದರು. ಸೂರ್ಯನ ಅನೈತಿಕ ಸಂಬಂಧದ ಬಗ್ಗೆ ಕುಟುಂಬಸ್ಥರು ಎಚ್ಚರಿಸಿದ್ದರೂ ಆತ ಆಕೆಯ ಸಂಗವನ್ನು ಬಿಟ್ಟಿರಲಿಲ್ಲ. ನಿನ್ನೆ ಶ್ವೇತಾ ಕಡೆಯವರೇ ರಾತ್ರಿ ಮಾರಕಾಸ್ತ್ರಗಳಿಂದ ಬರ್ಬರವಾಗಿ ಕೊಲೆ ಮಾಡಿರೋದಾಗಿ ಸೂರ್ಯ ಕುಟುಂಬಸ್ಥರು ಆರೋಪಿಸಿದ್ದಾರೆ. ಈ ಬಗ್ಗೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. https://kannadanewsnow.com/kannada/bengaluru-gold-ornaments-valuables-worth-rs-2-40-lakh-seized-arrested-for-breaking-into-temple/ https://kannadanewsnow.com/kannada/american-airlines-flight-with-178-people-on-board-catches-fire-12-injured/

Read More

ಬೆಂಗಳೂರು: ನಗರದಲ್ಲಿ ನಡೆದಿದ್ದಂತ ಎರಡು ಪ್ರತ್ಯೇಕ ಪ್ರಕರಣವನ್ನು ಬೇಧಿಸುವಲ್ಲಿ ಪೊಲೀಸರು ಯಶಸ್ವಿಯಾಗಿದ್ದಾರೆ. ದೇವಸ್ಥಾನಕ್ಕೆ ಕನ್ನ ಹಾಕಿ ಆಭರಣ, ನಗದು ಕದ್ದ ಆರೋಪಿಯನ್ನು ಬಂಧಿಸಿದ್ದಾರೆ. ಬಂಧಿತ ಆರೋಪಿಯಿಂದ 2.40 ಲಕ್ಷ ಮೌಲ್ಯದ ಚಿನ್ನಾಭರಣ, ವಸ್ತುಗಳನ್ನು ಜಪ್ತಿ ಮಾಡಿದ್ದಾರೆ. ಇಂದು ನಡೆದ ಮಾಧ್ಯಮಗೋಷ್ಠಿಯಲ್ಲಿ ಬೆಂಗಳೂರು ನಗರ ಪೊಲೀಸ್ ಆಯುಕ್ತರಾದ ಬಿ. ದಯಾನಂದ ಅವರು, ಯಲಹಂಕ ಪೊಲೀಸರು ಒಂದು ದೇವಸ್ಥಾನದಿಂದ ಬೆಳ್ಳಿ ವಸ್ತುಗಳು ಮತ್ತು ನಗದು ಕದ್ದಿದ್ದ ವ್ಯಕ್ತಿಯನ್ನು ಬಂಧಿಸಿದ ಬಗ್ಗೆ ಮಾಹಿತಿ ನೀಡಿದರು. ವಿಗ್ರಹಗಳು, ಕಿರೀಟಗಳು, ದೀಪಗಳು, ಮತ್ತು ಬಟ್ಟಲುಗಳು ಸೇರಿದಂತೆ ಒಟ್ಟು 2 ಕೆಜಿ 740 ಗ್ರಾಂ ಬೆಳ್ಳಿಯ ವಸ್ತುಗಳು ಹಾಗೂ ₹4,000 ನಗದು, ಒಟ್ಟು ₹2.40 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಾಗರಿಕರು ಎಚ್ಚರಿಕೆಯಿಂದಿರಬೇಕು ಮತ್ತು ಯಾವುದೇ ಅನುಮಾನಾಸ್ಪದ ಚಟುವಟಿಕೆಯನ್ನು ಹತ್ತಿರದ ಪೊಲೀಸ್ ಠಾಣೆಗೆ ವರದಿ ಮಾಡಬೇಕೆಂದು ಬೆಂಗಳೂರು ನಗರ ಪೊಲೀಸರು ಕೋರಿದ್ದಾರೆ. ಅದೇ ರೀತಿ, ಮನೆಯೊಳಗೆ ನುಗ್ಗಿ ಕಳ್ಳತನ ಮಾಡಿದ ವ್ಯಕ್ತಿಯನ್ನು ಬಂಡೇಪಾಳ್ಯ ಪೊಲೀಸರು ಬಂಧಿಸಿದ್ದು, 83 ಗ್ರಾಂ ಕದ್ದ…

Read More