Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಮುಂಬೈ ದಾಳಿಯ ಮಾಸ್ಟರ್ ಮೈಂಡ್ ಉಗ್ರ ತಹವ್ವೂರ್ ರಾಣಾಗೆ ಕುಟುಂಬಸ್ಥರ ಜೊತೆಗೆ ಮಾತನಾಡಲು ಕೋರ್ಟ್ ಅನುಮತಿ ನೀಡಿದೆ. ಈ ಕುರಿತಂತೆ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ದೆಹಲಿಯ ಪಟಿಯಾಲ ಹೌಸ್ ಕೋರ್ಟ್ ಕುಟುಂಬಸ್ಥರಿಗೆ ಕರೆ ಮಾಡಿ ಪೋನ್ ಮೂಲಕ ಮಾತನಾಡಲು ಉಗ್ರ ಉಗ್ರ ತಹವ್ವೂರ್ ರಾಣಾಗೆ ಅವಕಾಶ ನೀಡಿದೆ. ಒಮ್ಮೆ ಮಾತ್ರ ಕರೆ ಮಾಡಿ ಮಾತನಾಡಲು ಕೋರ್ಟ್ ಅವಕಾಶ ನೀಡಿದೆ. ಉಗ್ರ ಉಗ್ರ ತಹವ್ವೂರ್ ರಾಣಾ ಮಾತನಾಡುವಾಗ ಜೈಲಾಧಿಕಾರಿ ಸಹ ಇರುವಂತೆ ಷರತ್ತು ವಿಧಿಸಲಾಗಿದೆ. ಸದ್ಯ ಉಗ್ರ ರಾಣಾ ದೆಹಲಿಯ ತಿಹಾರ್ ಜೈಲಿನಲ್ಲಿ ಇರಿಸಲಾಗಿದೆ. https://kannadanewsnow.com/kannada/heavy-rain-in-various-parts-of-bengaluru-metropolis/ https://kannadanewsnow.com/kannada/explosion-reported-aboard-singapore-flagged-container-ship-off-kerala-coast/
ಬೆಂಗಳೂರು: ನಗರದಲ್ಲಿ ಮಳೆ ಆರಂಭಗೊಂಡಿದೆ. ಬೆಂಗಳೂರಿನ ಹಲವೆಡೆ ಧಾರಾಕಾರ ಮಳೆಯಾಗುತ್ತಿದ್ದು, ವಾಹನ ಸವಾರರು ಪರದಾಡುವಂತೆ ಆಗಿದೆ. ಬೆಂಗಳೂರಿನ ಶಾಂತಿನಗರ, ಕಬ್ಬನ್ ಪಾರ್ಕ್, ಲಾಲ್ ಬಾಗ್, ರಿಚ್ಮಂಡ್ ಸರ್ಕಲ್, ಎಂ.ಜಿ ರೋಡ್, ಟೌನ್ ಹಾನ್, ಕೆ ಆರ್ ಮಾರ್ಕೆಟ್ ಸೇರಿದಂತೆ ವಿವಿಧೆಡೆ ಮಳೆಯಾಗುತ್ತಿದೆ. ಧಾರಾಕಾರ ಮಳೆಯಿಂದಾಗಿ ಅಲ್ಲಲ್ಲಿ ರಸ್ತೆಯ ಮೇಲೆ ನೀರು ಹರಿದ ಪರಿಣಾಮ ಟ್ರಾಫಿಕ್ ಜಾಮ್ ಉಂಟಾಗಿದೆ. ವಾಹನ ಸವಾರರು ಟ್ರಾಫಿಕ್ ಜಾಮ್ ನಲ್ಲಿ ಸಿಲುಕಿಕೊಂಡು ಪರದಾಡುವಂತೆ ಆಗಿದೆ. https://kannadanewsnow.com/kannada/june-14-is-the-deadline-for-free-aadhar-card-renewal-follow-this-step-update/ https://kannadanewsnow.com/kannada/explosion-reported-aboard-singapore-flagged-container-ship-off-kerala-coast/
ಬೆಂಗಳೂರು: ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್ಸೈಟ್ http://sevasindhu.karnataka.gov.in ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜುಲೈ 4 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ http://ambigaradevelopment.karnataka.gov.in ಅಥವಾ ದೂ.ಸಂ: 08192-230934 ನ್ನು ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕರು ತಿಳಿಸಿದ್ದಾರೆ. ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯಕ್ಕೆ ಅರ್ಜಿ ಆಹ್ವಾನ ದಾವಣಗೆರೆ (ಕರ್ನಾಟಕ ವಾರ್ತೆ)ಜೂನ್ 6: ಕರ್ನಾಟಕ ಅಲೆಮಾರಿ ಮತ್ತು ಅರೆ ಅಲೆಮಾರಿ ಅಭಿವೃದ್ದಿ ನಿಗಮದಿಂದ ಪ್ರಸಕ್ತ ಸಾಲಿಗೆ ವಿವಿಧ ಯೋಜನೆಗಳಡಿ ಸಾಲ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿಯನ್ನು ವೆಬ್ಸೈಟ್ www.kaushalkar.com ಮುಖಾಂತರ ಗ್ರಾಮಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಜೂನ್ 30 ರೊಳಗಾಗಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗಾಗಿ ವೆಬ್ಸೈಟ್ www.kadd.karnataka.gov.in…
ಬೆಂಗಳೂರು: ರಾಜ್ಯದ ದೇವಸ್ಥಾನಗಳಲ್ಲಿ ಆಗಸ್ಟ್.15ರಿಂದ ಪ್ಲಾಸ್ಟಿಕ್ ಬಳಕೆಯನ್ನು ಮಾಡುವಂತಿಲ್ಲ ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಕಳೆದ ಮೂರು ತಿಂಗಳಲ್ಲಿ 1,253 ದೇವಾಲಯಗಳನ್ನು ಗುರುತಿಸಲಾಗಿದೆ. 11,322 ಆಸ್ತಿ ಗುರುತಿಸಿ ನಮೂದಿಸಲಾಗಿದೆ ಎಂದರು. ಹೊರರಾಜ್ಯಗಳಲ್ಲಿ ವಸತಿ ಗೃಹಗಳನ್ನು ನಿರ್ಮಿಸಲು ಯೋಜಿಸಲಾಗಿದೆ. ತಿರುಪತಿಯ ಗಾಂಧಿ ರಸ್ತೆಯಲ್ಲಿರುವ ಜಾಗದಲ್ಲಿ ವಸತಿಗೃಹ ನಿರ್ಮಿಸಲಾಗುತ್ತಿದೆ. ವಸತಿಗೃಹ ಸಂಕೀರ್ಣ ನಿರ್ಮಾಣ ಮಾಡಲು ಸೂಚಿಸಲಾಗಿದೆ ಎಂದರು. ದೇವಾಲಯದ ಅರ್ಚಕರ ಮಕ್ಕಳಿಗೆ ವಿದ್ಯಾರ್ಥಿ ವೇತನ ಸೌಲಭ್ಯ ಕಲ್ಪಿಸಲಾಗಿದೆ. ಅರ್ಚಕರ 249 ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡಲಾಗಿದೆ. ಅರ್ಚಕರ ಮಕ್ಕಳ ವಿದ್ಯಾರ್ಥಿ ವೇತನಕ್ಕೆ ರೂ.34,37,000 ನೀಡಲಾಗಿದೆ. ಮರಣ ಹೊಂದಿದ 7 ಅರ್ಚಕರ ಕುಟುಂಬಕ್ಕೆ ಪರಿಹಾರ ನೀಡಿದ್ದೇವೆ. ಮರಣೋತ್ತರ ಪರಿಹಾರವಾಗಿ 14 ಲಕ್ಷ ರೂಪಾಯಿ ನೀಡಲಾಗಿದೆ ಎಂದರು. ರಾಜ್ಯದಲ್ಲಿ ಪ್ಲಾಸ್ಟಿಕ್ ಬಳಕೆಗೆ ನಿಯಂತ್ರಣ ಏರುವಂತ ಕ್ರಮ ಕೈಗೊಳ್ಳಲಾಗಿದೆ. ಮುಂದುವರೆದು ರಾಜ್ಯದ ದೇವಾಲಯಗಳಲ್ಲಿ ಆಗಸ್ಟ್.15ರ ಬಳಿಕ ಪ್ಲಾಸ್ಟಿಕ್ ಬಳಕೆಯನ್ನು ನಿಷೇಧಿಸಲಾಗುತ್ತಿದೆ ಎಂಬುದಾಗಿ ಹೇಳಿದರು. https://kannadanewsnow.com/kannada/explosion-reported-aboard-singapore-flagged-container-ship-off-kerala-coast/ https://kannadanewsnow.com/kannada/after-rcbs-victory-bjp-and-jds-had-requested-to-allow-the-procession-now-u-turn-d-k-shivakumars-remark/
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಕಾಲ್ತುಳಿತ ದುರಂತದಿಂದ ಆರ್ ಸಿ ಬಿಯ 11 ಅಭಿಮಾನಿಗಳು ಸಾವನ್ನಪ್ಪಿದ್ದರು. ಈ ಘಟನೆ ಸಂಬಂಧ ವಿವರಣೆ ನೀಡುವಂತೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಗೆ ಕಾಂಗ್ರೆಸ್ ಹೈಕಮಾಂಡ್ ಬುಲಾವ್ ನೀಡಿದೆ. ಈ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಗೆ ದೆಹಲಿಗೆ ಬರುವಂತೆ ಸೂಚಿಸಿದೆ. ಹೀಗಾಗಿ ನಾಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣಿಸಲಿದ್ದಾರೆ. ದೆಹಲಿಯಲ್ಲಿ ನಾಳೆ ರಾಹುಲ್ ಗಾಂಧಿ ಜೊತೆಗೆ ಸಿಎಂ, ಡಿಸಿಎಂ ಸಭೆ ನಡೆಸಲಿದ್ದಾರೆ. ಆರ್ ಸಿ ಬಿ ಸಂಭ್ರಮಾಚರಣೆ ವೇಳೆ ಕಾಲ್ತುಳಿತದ ಬಗ್ಗೆ ಗಂಭೀರವಾದಂತ ಚರ್ಚೆ ನಡೆಯಲಿದೆ. ಕಾಲ್ತುಳಿತ ದುರಂತದ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಸಮಾಧಾನಗೊಂಡಿದ್ದು, ನಾಳೆ ದುರಂತದ ಬಗ್ಗೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರಿಂದ ಮಾಹಿತಿ ಪಡೆಯಲಿದೆ. https://kannadanewsnow.com/kannada/after-rcbs-victory-bjp-and-jds-had-requested-to-allow-the-procession-now-u-turn-d-k-shivakumars-remark/ https://kannadanewsnow.com/kannada/explosion-reported-aboard-singapore-flagged-container-ship-off-kerala-coast/
ಬೆಂಗಳೂರು: “ಆರ್ಸಿಬಿ ಗೆದ್ದ ನಂತರ ಬಿಜೆಪಿ ಹಾಗೂ ದಳದ ನಾಯಕರು ತಂಡದ ಮೆರವಣಿಗೆಗೆ ಅವಕಾಶ ನೀಡಬೇಕು ಎಂದು ಎಕ್ಸ್ (ಟ್ವೀಟ್) ಮಾಡಿದ್ದರು. ಆದರೆ ಇಂದು ವರಸೆ ಬದಲಾಯಿಸಿದ್ದಾರೆ. ಬಿಜೆಪಿ ಯೂ ಟರ್ನ್ ಮಾಡುವುದು ಹೊಸದೇನಲ್ಲ” ಎಂದು ನಿಕಟಪೂರ್ವ ಸಂಸದ ಡಿ.ಕೆ.ಸುರೇಶ್ ಅವರು ಹೇಳಿದರು. ಸದಾಶಿವನಗರದ ನಿವಾಸದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಸುರೇಶ್ ಅವರು ಸೋಮವಾರ ಉತ್ತರಿಸಿದರು. ಬಿಜೆಪಿಯವರು ಡಿ.ಕೆ.ಶಿವಕುಮಾರ್ ಹಾಗೂ ಮುಖ್ಯಮಂತ್ರಿಗಳ ರಾಜಿನಾಮೆಗೆ ಒತ್ತಾಯ ಮಾಡುತ್ತಿರುವ ಬಗ್ಗೆ ಕೇಳಿದಾಗ, “ಎರಡೂ ಪಕ್ಷಗಳು ಮೆರವಣಿಗೆಗೆ ಒತ್ತಾಯ ಮಾಡಿದ್ದರು. ಕ್ರೀಡಾ ಅಭಿಮಾನಿಗಳಿಗೆ ಅವಮಾನ ಮಾಡುತ್ತಿದ್ದೀರಿ, ನಿಮಗೆ ಮೆರವಣಿಗೆ ನಡೆಸಲು ಆಗುವುದಿಲ್ಲವೇ ಎಂದು ಕೇಳಿದ್ದರು. ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದಾಗಿನಿಂದಲೂ ಬಿಜೆಪಿಯವರು ಇದೇ ಪ್ರವೃತ್ತಿ ಹೊಂದಿದ್ದಾರೆ. ಜನ ಅವರಿಗೆ ಬಹುಮತ ನೀಡಿಲ್ಲ. ಬಿಜೆಪಿ ಆಡಳಿತದಲ್ಲಿ ಇರುವ ರಾಜ್ಯಗಳಲ್ಲಿ ಆಗಿರುವ ಘೋರ ದುರಂತಗಳ ಪಟ್ಟಿ ನೀಡುತ್ತೇವೆ. ಬಿಜೆಪಿ ನಾಯುಕರಿಗೆ ನೈತಿಕತೆ ಇದ್ದರೆ ಅವರು ಮೊದಲು ರಾಜಿನಾಮೆ ನೀಡಲಿ” ಎಂದು ಹೇಳಿದರು. ಮುಂಬೈ ದಾಳಿಯಾದಾಗ ಮನಮೋಹನ್ ಸಿಂಗ್ ಅವರು ರಾಜಿನಾಮೆ ನೀಡಿದ್ದರೆ…
ಬೆಂಗಳೂರು: ದ್ವಿತೀಯ ಪಿ.ಯು.ಸಿ ಪರೀಕ್ಷೆ-03 ರ ವಿದ್ಯಾರ್ಥಿಗಳಿಗೆ ಪರೀಕ್ಷಾ ಅವಧಿಯಲ್ಲಿ ಪರೀಕ್ಷಾ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಗಳವರೆಗೆ BMTCಯ ಸಾಮಾನ್ಯ ಸೇವೆಯ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅನುಮತಿಸಲಾಗಿದೆ. ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ವಿದ್ಯಾರ್ಥಿ ಸಮುದಾಯದ ಹಿತವನ್ನು ಗಮನದಲ್ಲಿಟ್ಟುಕೊಂಡು ರಿಯಾಯಿತಿ ದರದಲ್ಲಿ ವಿದ್ಯಾರ್ಥಿ ಪಾಸುಗಳನ್ನು ವಾಸಸ್ಥಳದಿಂದ ಶಾಲಾ/ಕಾಲೇಜಿಗೆ ಪ್ರಯಾಣಿಸಲು ಅವಕಾಶ ಕಲ್ಪಿಸಿ ವಿತರಣೆ ಮಾಡುತ್ತಿದೆ. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳ ಪರೀಕ್ಷೆ-03 ಬೇರೆ ಬೇರೆ ಕಾಲೇಜುಗಳಲ್ಲಿ ಇರುವುದರಿಂದ ಸಂಸ್ಥೆಯು ವಿದ್ಯಾರ್ಥಿಗಳ ಹಿತವನ್ನು ಗಮನದಲ್ಲಿಟ್ಟುಕೊಂಡು ಕೆಳಕಂಡ ಸೌಲಭ್ಯಗಳನ್ನು ಕಲ್ಪಿಸಿರುತ್ತದೆ. ದ್ವಿತೀಯ ಪಿ.ಯು.ಸಿ ವಿದ್ಯಾರ್ಥಿಗಳಿಗೆ ದಿನಾಂಕ 09.06.2025 ರಿಂದ 20.06.2025 ರವರೆಗೆ ಪರೀಕ್ಷೆಗಳು ನಡೆಯುವ ದಿನಾಂಕಗಳಂದು ಪರೀಕ್ಷೆಗೆ ಹಾಜರಾಗಲು ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ ಹೋಗುವಾಗ ಮತ್ತು ಹಿಂದಿರುಗುವಾಗ ಸಂಸ್ಥೆಯ ಸಾಮಾನ್ಯ ಸೇವೆಗಳಲ್ಲಿ ದ್ವಿತೀಯ ಪಿ.ಯು.ಸಿ ಪರೀಕ್ಷಾ ಪ್ರವೇಶ ಪತ್ರವನ್ನು ತೋರಿಸಿ, ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಲಾಗಿದೆ. ದ್ವಿತೀಯ ಪಿ.ಯು.ಸಿ ಪರೀಕ್ಷಾ ದಿನಾಂಕಗಳಂದು ಪರೀಕ್ಷಾ ಕೇಂದ್ರಗಳ ಮಾರ್ಗಗಳಲ್ಲಿ ಕಡ್ಡಾಯವಾಗಿ ಎಲ್ಲಾ ಮಾರ್ಗಗಳನ್ನು, ಸುತ್ತುವಳಿಗಳನ್ನು…
ಬೆಂಗಳೂರು: ನಗರದ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಲ್ಲಿ ಉಂಟಾಗಿದ್ದಂತ ಕಾಲ್ತುಳಿತ ದುರಂತದಲ್ಲಿ 11 ಮಂದಿ ಸಾವನ್ನಪ್ಪಿದ್ದರು. ಈ ಬಗ್ಗೆ ವರದಿ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್, ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿಕೆ ಶಿವಕುಮಾರ್ ಕೇಳಿದೆ. ಇದಕ್ಕಾಗಿ ನಾಳೆ ದೆಹಲಿಗೆ ಬುಲಾವ್ ಕೂಡ ಕಾಂಗ್ರೆಸ್ ಹೈಕಮಾಂಡ್ ನೀಡಿದೆ. ಹೀಗಾಗಿ ನಾಳೆ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಾಳೆ ದೆಹಲಿಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರನ್ನು ಭೇಟಿ ಮಾಡಲಿರುವಂತ ಸಿಎಂ ಸಿದ್ಧರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ಅವರು ಅವರೊಂದಿಗೆ ಚರ್ಚೆ ನಡೆಸಲಿದ್ದು, ಕಾಲ್ತುಳಿತ ದುರಂತದ ಬಗ್ಗೆ ಮಾಹಿತಿ ನೀಡಲಿದ್ದಾರೆ. https://kannadanewsnow.com/kannada/explosion-reported-aboard-singapore-flagged-container-ship-off-kerala-coast/
ಕೊಚ್ಚಿ: ಸೋಮವಾರ ಬೆಳಿಗ್ಗೆ ಕೇರಳ ಕರಾವಳಿಯಲ್ಲಿ ಸಿಂಗಾಪುರ ಧ್ವಜ ಹೊತ್ತ ಕಂಟೇನರ್ ಹಡಗಿನ ಎಂವಿ ವಾನ್ ಹೈ 503 ನಲ್ಲಿ ಸ್ಫೋಟ ಸಂಭವಿಸಿದೆ ಎಂದು ವರದಿಯಾಗಿದೆ. ಇದು ಭಾರತೀಯ ನೌಕಾಪಡೆಯಿಂದ ತ್ವರಿತ ಪ್ರತಿಕ್ರಿಯೆಗೆ ಕಾರಣವಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಈ ಘಟನೆ ಬೆಳಿಗ್ಗೆ 10:30 ರ ಸುಮಾರಿಗೆ ಸಂಭವಿಸಿದ್ದು, ಮುಂಬೈನಲ್ಲಿರುವ ಸಾಗರ ಕಾರ್ಯಾಚರಣೆ ಕೇಂದ್ರ (ಎಂಒಸಿ) ಮೊದಲು ಕೊಚ್ಚಿಯ ತಮ್ಮ ಸಹವರ್ತಿಗಳಿಗೆ ಮಾಹಿತಿಯನ್ನು ರವಾನಿಸಿತು. ಹಡಗು ಕೊಲಂಬೊದಿಂದ ಮುಂಬೈಗೆ ತೆರಳುತ್ತಿದ್ದಾಗ ಅಂಡರ್ ಡೆಕ್ ಸ್ಫೋಟ ಸಂಭವಿಸಿದೆ. ಹಡಗು ಜೂನ್ 7 ರಂದು ಕೊಲಂಬೊದಿಂದ ಹೊರಟಿತ್ತು ಮತ್ತು ಜೂನ್ 10 ರೊಳಗೆ ಮುಂಬೈ ತಲುಪಬೇಕಿತ್ತು. https://twitter.com/ANI/status/1931987319705178270 ಭಾರತೀಯ ನೌಕಾಪಡೆ ಹೇಳಿದ್ದೇನು? ಅಧಿಕಾರಿಗಳ ಪ್ರಕಾರ, MV ವಾನ್ ಹೈ 503 ಸಿಂಗಾಪುರ ಧ್ವಜವನ್ನು ಹಾರಿಸುವ 270 ಮೀಟರ್ ಉದ್ದದ ಕಂಟೇನರ್ ಹಡಗಾಗಿದ್ದು, 12.5 ಮೀಟರ್ ಡ್ರಾಫ್ಟ್ ಹೊಂದಿದೆ. ಎಚ್ಚರಿಕೆಯ ನಂತರ, ಭಾರತೀಯ ನೌಕಾಪಡೆಯು ಕೊಚ್ಚಿಯಲ್ಲಿ ಡಾಕ್ ಮಾಡಲು ನಿಗದಿಯಾಗಿದ್ದ INS ಸೂರತ್ ಅನ್ನು ತಕ್ಷಣದ…
ತಿಂಗಳ ಕೊನೆಯಲ್ಲಿ ಬಹಳಷ್ಟು ಜನರ ಕೈಯಲ್ಲಿ ನಗದು ಇರುವುದಿಲ್ಲ. ಮುಂದಿನ ತಿಂಗಳು ಸಂಬಳ ಬಂದರೆ ಮಾತ್ರ ಹಣ ಬರುವ ಪರಿಸ್ಥಿತಿ ಇರುತ್ತದೆ. ಅವರು ಬರಿಗೈಯಲ್ಲಿ ಇರುತ್ತಾರೆ ಮತ್ತು ಖರ್ಚಿಗೆ 500 ರೂಪಾಯಿ ಬಂದರೂ ಪರವಾಗಿಲ್ಲ. ಕುಟುಂಬಕ್ಕೆ ಬೇಕಾದ ವಸ್ತುಗಳನ್ನು ಖರೀದಿಸುವ ಪರಿಸ್ಥಿತಿ ಇದೆ. ಅಂದರೆ ಕೆಲವರಿಗೆ ದಿನನಿತ್ಯದ ಜೀವನಕ್ಕೆ ಬೇಕಾಗುವ ಹಾಲು, ತರಕಾರಿಗಳನ್ನು ಕೊಳ್ಳಲು ಕೂಡ ತಿಂಗಳ ಕೊನೆಯಲ್ಲಿ ಹಣವಿರುವುದಿಲ್ಲ. ಇಂಥವರ ಪರಿಸ್ಥಿತಿ ಬದಲಾಗಬೇಕು. ಕೈಯಿಂದ ಕೈಗೆ ಆದಾಯ ಬರುತ್ತಲೇ ಇರಬೇಕು. ವಾಕ್ಯ ಸಿದ್ದಿ, ಮಂತ್ರಸಿದ್ದಿ ಯಂತ್ರ ಸಿದ್ದಿಯಿಂದ ಪ್ರಖ್ಯಾತಿ ಪಡೆದಿರುವ ಭಾರತದ ಏಕ್ಕೈಕ ಜೋತಿಷ್ಯರು ವಿದ್ವಾನ್ ವಿದ್ಯಾಧರ್ ನಕ್ಷತ್ರಿ ತಂತ್ರಿ 9686268564 ಇಷ್ಟ ಪಟ್ಟವರು ನೀಮ್ಮಂತೇ ಆಗಲು, ಪ್ರೀತಿಯಲ್ಲಿ ಮೋಸ ಹೋಗಿದ್ದರೆ ಮದುವೆ ವಿಳಂಬ, ಸತಿ ಪತಿ ಕಲಹ, ಸಂತಾನ, ಅತ್ತೆ ಸೋಸೆ ಕಲಹ, ಶತ್ರು ಭಾದೆ, ಅನಾರೋಗ್ಯ, ಸಾಲದ ಭಾದೆ, ಮನೆಯಲ್ಲಿ ಅಶಾಂತಿ, ಬೀಜೀನೇಸ್ಸ ನಲ್ಲಿ ನಷ್ಟ , ಕೋರ್ಟ್ ಕೇಸ್, ಎಷ್ಟೇ ಪ್ರಯತ್ನ ಜೀವನದಲ್ಲಿ ಏಳಿಗೆ ಅಭಿವೃದ್ಧಿ…














