Subscribe to Updates
Get the latest creative news from FooBar about art, design and business.
Author: kannadanewsnow09
BIG NEWS: ಡಿ.9ರಿಂದ ಬೆಳಗಾವಿಯ ಸುವರ್ಣ ಸೌಧದಲ್ಲಿ ಚಳಿಗಾಲದ ಅಧಿವೇಶನ: ಹೀಗಿದೆ ಸಿಎಂ, ಡಿಸಿಎಂ, ಸಚಿವರ ಕೊಠಡಿ ಸಂಖ್ಯೆ
ಬೆಂಗಳೂರು: ಬೆಳಗಾವಿಯ ಸುವರ್ಣ ಸೌಧದ ಕಟ್ಟಡದಲ್ಲಿ ದಿನಾಂಕ 09-12-2024ರಿಂದ ನಡೆಯುವ ವಧಆನ ಮಂಡಲದ ಅಧಿವೇಶನದಲ್ಲಿ ಭಾಗವಹಿಸುವಂತ ಮುಖ್ಯಮಂತ್ರಿ ಸಿದ್ಧರಾಮಯಯ, ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಹಾಗೂ ಸಚಿವರಿಗೆ ಕೊಠಡಿಗಳನ್ನು ಹಂಚಿಕೆ ಮಾಡಲಾಗಿದೆ. ಈ ಸಂಬಂಧ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಬೆಳಗಾವಿ ಸುವರ್ಣ ಸೌಧದ ಕಟ್ಟಡದಲ್ಲಿ ಮುಖ್ಯಮಂತ್ರಿ, ಉಪ ಮುಖ್ಯಮಂತ್ರಿ ಹಾಗೂ ಸಚಿವರುಗಳಿಗೆ ಈ ಕೆಳಕಂಡಂತೆ ಕೊಠಡಿಗಳನ್ನು ಹಂಚಿಕೆ ಮಾಡಿರುವುದಾಗಿ ತಿಳಿಸಿದ್ದಾರೆ. ಹೀಗಿದೆ ಬೆಳಗಾವಿ ಸುವರ್ಣಸೌಧದ ಸಿಎಂ, ಡಿಸಿಎಂ, ಸಚಿವರ ಕೊಠಡಿಗಳ ಸಂಖ್ಯೆ ಸಿಎಂ ಸಿದ್ಧರಾಮಯ್ಯ – 346, 347 ಡಿಸಿಎಂ ಡಿ.ಕೆ ಶಿವಕುಮಾರ್ – 306, 306ಎ ಗೃಹ ಸಚಿವ ಡಾ.ಜಿ ಪರಮೇಶ್ವರ್ – 302, 302ಎ ಕಾನೂನು ಸಚಿವ ಹೆಚ್.ಕೆ ಪಾಟೀಲ್ – 3030, 303ಎ ಆಹಾರ ಸಚಿವ ಕೆ.ಹೆಚ್ ಮುನಿಯಪ್ಪ – 320, 320ಎ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ – 321, 321ಎ ಬೃಹತ್ ಮತ್ತು ಕೈಗಾರಿಕೆ ಸಚಿವ…
ಬೆಂಗಳೂರು: ಚೆನ್ನೈ ಮತ್ತು ಸೇಲಂ ವಿಭಾಗಗಳಲ್ಲಿ ನಡೆಯುತ್ತಿರುವ ಎಂಜಿನಿಯರಿಂಗ್ ಕಾಮಗಾರಿ ಹಿನ್ನಲೆಯಲ್ಲಿ, ಈ ಕೆಳಗಿನ ರೈಲುಗಳ ಸಂಚಾರ ರದ್ದು, ಮರು ವೇಳಾಪಟ್ಟಿ ಮಾಡಲಾಗುತ್ತಿದೆ ಎಂದು ದಕ್ಷಿಣ ರೈಲ್ವೆಯು ಸೂಚಿಸಿದೆ. ಭಾಗಶಃ ರದ್ದು: ಡಿಸೆಂಬರ್ 6 ರಂದು ರೈಲು ಸಂಖ್ಯೆ 12610 ಮೈಸೂರು-ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಡೈಲಿ ಎಕ್ಸ್ ಪ್ರೆಸ್ ರೈಲು ಕಟಪಾಡಿ-ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ನಿಲ್ದಾಣಗಳ ನಡುವೆ ಭಾಗಶಃ ರದ್ದಾಗಲಿದೆ. ಈ ರೈಲು ಡಾ. ಎಂಜಿಆರ್ ಚೆನ್ನೈ ಸೆಂಟ್ರಲ್ ಬದಲು ಕಟಪಾಡಿಯಲ್ಲಿ ಕೊನೆಗೊಳ್ಳಲಿದೆ. ಡಿಸೆಂಬರ್ 6 ರಂದು ರೈಲು ಸಂಖ್ಯೆ 12607 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕೆಎಸ್ಆರ್ ಬೆಂಗಳೂರು ಲಾಲ್ಬಾಗ್ ಡೈಲಿ ಎಕ್ಸ್ ಪ್ರೆಸ್ ರೈಲು ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್ ಬದಲಿಗೆ ಕಟಪಾಡಿಯಿಂದ ಪ್ರಾರಂಭವಾಗಲಿದೆ. ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಕಟಪಾಡಿ ನಿಲ್ದಾಣಗಳ ನಡುವಿನ ಪ್ರಯಾಣ ಭಾಗಶಃ ರದ್ದಾಗಿರುತ್ತದೆ. ಮರು ವೇಳಾಪಟ್ಟಿ: ಡಿಸೆಂಬರ್ 11, 18 ಮತ್ತು 25 ರಂದು ಚೆನ್ನೈ ನಿಲ್ದಾಣದಿಂದ ಹೊರಡುವ ರೈಲು ಸಂಖ್ಯೆ 22601 ಡಾ.ಎಂಜಿಆರ್ ಚೆನ್ನೈ ಸೆಂಟ್ರಲ್-ಸಾಯಿನಗರ ಶಿರಡಿ ಸಾಪ್ತಾಹಿಕ…
ನವದೆಹಲಿ: ವಸಂತ್ ವಿಹಾರ್ ಶಾಲೆಯಲ್ಲಿ ಮಂಗಳವಾರ ಬೆಳಿಗ್ಗೆ 12 ವರ್ಷದ ಬಾಲಕ ಸಾವನ್ನಪ್ಪಿದ ನಂತರ ದೆಹಲಿ ಪೊಲೀಸರು ತನಿಖೆ ಆರಂಭಿಸಿದ್ದಾರೆ. ಶಾಲೆಯ ಹೇಳಿಕೆಯು ವಿದ್ಯಾರ್ಥಿಯು “ಜಗಳ” ದ ನಂತರ ಕುಸಿದುಬಿದ್ದಿದ್ದಾನೆ ಎಂದು ಸೂಚಿಸಿದೆ. 6 ನೇ ತರಗತಿ ವಿದ್ಯಾರ್ಥಿಯನ್ನು ಫೋರ್ಟಿಸ್ ಆಸ್ಪತ್ರೆಗೆ ಸಾಗಿಸಲಾಯಿತು. ಅಲ್ಲಿ ಅವನು ಬೆಳಿಗ್ಗೆ 10.15 ರ ಸುಮಾರಿಗೆ ಮೃತಪಟ್ಟಿದ್ದಾನೆ ಎಂದು ಘೋಷಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ತನಿಖಾಧಿಕಾರಿಗಳ ಪ್ರಕಾರ, ಮಗುವಿಗೆ ಸೆಳೆತ ಉಂಟಾಗಿರಬಹುದು ಎಂದು ವೈದ್ಯರು ಭಾವಿಸಿದ್ದಾರೆ. ಬಾಲಕನ ದೇಹದ ಮೇಲೆ ಯಾವುದೇ ಗಾಯಗಳಾಗಿಲ್ಲ ಎಂದು ಉಪ ಪೊಲೀಸ್ ಆಯುಕ್ತ (ನೈಋತ್ಯ) ಸುರೇಂದ್ರ ಚೌಧರಿ ತಿಳಿಸಿದ್ದಾರೆ. ಅವನ ಬಾಯಿಯಿಂದ ನೊರೆಯಂತಹ ವಸ್ತು ಹೊರಬರುತ್ತಿತ್ತು… ವಿಚಾರಣೆ ಪ್ರಕ್ರಿಯೆಗಳು ನಡೆಯುತ್ತಿವೆ. ಶಾಲಾ ಬಾಲಕರು ಮತ್ತು ಶಿಕ್ಷಕರನ್ನು ಪರೀಕ್ಷಿಸಲಾಗುತ್ತಿದೆ ಮತ್ತು ಅಗತ್ಯ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ಅವರು ಹೇಳಿದರು. ಶಾಲಾ ಪ್ರಾಂಶುಪಾಲರ ಹೇಳಿಕೆಯು “ತರಗತಿ ಪರಿವರ್ತನೆಯ ಸಮಯದಲ್ಲಿ (ಶಾಲೆಯ) ಆವರಣದಲ್ಲಿ ಸಂಭವಿಸಿದ ದುರಂತ ಘಟನೆಯ ಬಗ್ಗೆ ತೀವ್ರ ದುಃಖಿತವಾಗಿದೆ” ಎಂದು…
ಬೆಂಗಳೂರು: ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ನಿನ್ನೆ ಮಹಿಳೆಯೊಬ್ಬರು ಭೇಟಿಯಾಗಿ, ತನಗೆ ನಿವೇಶನ ಇಲ್ಲ. ಗಂಡ ಮತ್ತು ಇಬ್ಬರು ಮಕ್ಕಳಿದ್ದಾರೆ. ಬಾಡಿಗೆ ಕಟ್ಟೋದಕ್ಕೂ ಕಷ್ಟವಾಗುತ್ತಿದೆ ಎಂಬುದಾಗಿ ಅಲವತ್ತುಕೊಂಡು, ನಿವೇಶನಕ್ಕೆ ಮನವಿ ಮಾಡಿದ್ದರು. ಅವರು ಮನವಿ ಮಾಡಿದಂತ ಒಂದೇ ದಿನದಲ್ಲಿ ನಿವೇಶನ ಮಂಜೂರು ಮಾಡಿ ಆದೇಶಿಸಲಾಗಿದೆ. ಈ ಸಂಬಂಧ ತುಮಕೂರು ಜಿಲ್ಲೆಯ ಶಿರಾ ನಗರಸಭೆಯ ಪೌರಾಯುಕ್ತರು ಜಿಲ್ಲಾಧಿಕಾರಿಗಳಿಗೆ ಮಾಹಿತಿ ನೀಡಿದ್ದು, ದಿನಾಂಕ 02-12-2024ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ತುಮಕೂರಿಗೆ ಭೇಟಿ ನೀಡಿದಂತ ಸಂದರ್ಭದಲ್ಲಿ ರಾಬಿಯಾ ಕೋಂ ಅಸ್ಲಂ ಪಾಷಾ ಎಂಬುವರು ತಾತ್ಕಾಲಿಕ ನಿವೇಶನ ಕೋರಿ ಮನವಿ ಸಲ್ಲಿಸಿದ್ದರು. ಅವರು ಸಲ್ಲಿಸಿದಂತ ಮನವಿಯಲ್ಲಿ ತಾನು ಶಿರಾ ಟೌನ್ ನಿವಾಸಿಯಾಗಿದ್ದು, ಕಡು ಬಡವರಾಗಿದ್ದೇವೆ. ಗಂಡ ಮತ್ತು ಎರಡು ಪುಟ್ಟ ಮಕ್ಕಳನ್ನು ನೋಡಿಕೊಂಡು ಬಾಡಿಗೆ ಕಟ್ಟಲು ಸಾಧ್ಯವಿಲ್ಲದ ಕಾರಣ ತಾತ್ಕಾಲಿಕವಾಗಿ ನಿವೇಶನವನ್ನು ಕಲ್ಪಿಸುವಂತೆ ಕೋರಿದ್ದರು ಎಂದಿದ್ದಾರೆ. ಸದರಿ ಕೋರಿಯನ್ನು ಶಿರಾ ಆಶ್ರಯ ಸಮಿತಿಯ ಸಭೆಯಲ್ಲಿ ಪರಿಗಣಿಸಿ, ಶಿರಾ ನಗರದ ಸರ್ವೆ ನಂಬಬರ್.100ರಲ್ಲಿ ನಗರ ಆಶ್ರಯ ಯೋಜನೆಯಡಿ ರಚಿಸಲಾಗಿರುವ ನಿವೇಶನಗಳ…
ಭರೂಚ್: ಗುಜರಾತ್ನ ಭರೂಚ್ ಜಿಲ್ಲೆಯ ಅಂಕಲೇಶ್ವರ ಜಿಐಡಿಸಿ ಪ್ರದೇಶದ ಕೈಗಾರಿಕಾ ಘಟಕದಲ್ಲಿ ಮಂಗಳವಾರ ಮಧ್ಯಾಹ್ನ ಶೇಖರಣಾ ಟ್ಯಾಂಕ್ ಸ್ಫೋಟಗೊಂಡು ನಾಲ್ವರು ಕಾರ್ಮಿಕರು ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಕೈಗಾರಿಕಾ ತ್ಯಾಜ್ಯ ಸಂಸ್ಕರಣೆಯಲ್ಲಿ ತೊಡಗಿರುವ ಡಿಟಾಕ್ಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಆವರಣದಲ್ಲಿರುವ ಶೇಖರಣಾ ಟ್ಯಾಂಕ್ ಮೇಲೆ ಕಾರ್ಮಿಕರು ಕೆಲಸ ಮಾಡುತ್ತಿದ್ದಾಗ ಸ್ಫೋಟ ಸಂಭವಿಸಿದೆ ಎಂದು ಭರೂಚ್ ಪೊಲೀಸ್ ವರಿಷ್ಠಾಧಿಕಾರಿ ಮಯೂರ್ ಚಾವ್ಡಾ ತಿಳಿಸಿದ್ದಾರೆ. ಹೆಚ್ಚಿನ ತನಿಖೆಗಾಗಿ ಪೊಲೀಸ್ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದ್ದಾರೆ ಎಂದು ಚಾವ್ಡಾ ಹೇಳಿದರು. https://kannadanewsnow.com/kannada/ias-officer-srinivas-appointed-head-of-state-drug-control-department/
ಬೆಂಗಳೂರು: ಬಳ್ಳಾರಿ ಜಿಲ್ಲಾಸ್ಪತ್ರೆಯಲ್ಲಿ ಬಾಣಂತಿಯರ ಸಾವಿನ ಪ್ರಕರಣಕ್ಕೆ ಸಂಬಂಧಪಟ್ಟಂತೆ ಕರ್ತವ್ಯಲೋಪಕ್ಕಾಗಿ ಡ್ರಗ್ ಕಂಟ್ರೋಲರ್ ಉಮೇಶ್ ಅವರನ್ನು ಸಸ್ಪೆಂಡ್ ಮಾಡಲಾಗಿತ್ತು. ಈಗ ರಾಜ್ಯ ಸರ್ಕಾರದಿಂದ ಔಷಧ ನಿಯಂತ್ರಣ ಇಲಾಖೆಯ ಮುಖ್ಯಸ್ಥರನ್ನಾಗಿ ಐಎಎಸ್ ಅಧಿಕಾರಿ ಶ್ರೀನಿವಾಸ ಅವರನ್ನು ನೇಮಕ ಮಾಡಿ ಆದೇಶಿಸಿದೆ. ಈ ಕುರಿತಂತೆ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ. ಆಹಾರ ಸುರಕ್ಷತೆ ಮತ್ತು ಗುಣಮಟ್ಟ ಇಲಾಖೆಯ ಆಯುಕ್ತರಾಗಿದ್ದಂತ ಐಎಎಸ್ ಅಧಿಕಾರಿ ಶ್ರೀನಿವಾಸ ಇವರನ್ನು ಔಷಧ ನಿಯಂತ್ರಣ ಇಲಾಖೆಯ ಆಡಳಿತಾತ್ಮಕ ಮುಖ್ಯಸ್ಥರನ್ನಾಗಿ ಆದೇಶಿಸಲಾಗಿದೆ. ಅಂದಹಾಗೇ ಈ ಹುದ್ದೆಯಲ್ಲಿದ್ದಂತ ಉಮೇಶ್ ಅವರನ್ನು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಅಮಾನತುಗೊಳಿಸಿದ್ದರು. ಹೀಗಾಗಿ ಐಎಎಸ್ ಅಧಿಕಾರಿ ಶ್ರೀನಿವಾಸ ಅವರನ್ನು ಸಾರ್ವಜನಿಕ ಹಾಗೂ ಆಡಳಿತಾತ್ಮಕ ಹಿತದೃಷ್ಟಿಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಔಷಧ ನಿಯಂತ್ರಣ ಇಲಾಖೆಯ ಆಡಳಿತಾತ್ಮಕ ಮುಖ್ಯಸ್ಥರನ್ನಾಗಿ ನೇಮಿಸಿ ಆದೇಶಿದ್ದಾರೆ
ಬೆಂಗಳೂರು: ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಸೇರಿದಂತೆ ಮತ್ತಿತರರ ವಿರುದ್ಧ ಚುನಾವಣಾ ಬಾಂಡ್ ಹೆಸರಿನಲ್ಲಿ ಸುಲಿಗೆ ಆರೋಪದಲ್ಲಿ ದಾಖಲಾಗಿದ್ದಂತ ಪ್ರಕರಣವನ್ನು ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಗೆ ಬಿಗ್ ರಿಲೀಫ್ ನೀಡಿದೆ. ಚುನಾವಣಾ ಬಾಂಡ್ ಹೆಸರಿನಲ್ಲಿ ಆದರ್ಶ ಅಯ್ಯರ್ ಎಂಬುವರು ದಾಖಲಿಸಿದ್ದಂತ ಖಾಸಗಿ ದೂರು ನೀಡಿದ್ದರು. ಈ ಸಂಬಂಧ ಕೇಂದ್ರ ಸಚಿವ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಮತ್ತಿತರರ ವಿರುದ್ಧ ಕೇಸ್ ದಾಖಲಾಗಿತ್ತು. ಈ ಕೇಸ್ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ನಳೀನ್ ಕುಮಾರ್ ಕಟೀಲ್ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಏಕ ಸದಸ್ಯ ನ್ಯಾಯಪೀಠವು ಪ್ರಕರಣ ರದ್ದುಗೊಳಿಸಿ, ಅರ್ಜಿಯನ್ನು ಪರಸ್ಕರಿಸಿದೆ. ಈ ಮೂಲಕ ನಿರ್ಮಲಾ ಸೀತಾರಾಮನ್, ನಳೀನ್ ಕುಮಾರ್ ಕಟೀಲ್ ಸೇರಿದಂತೆ ಇತರರಿಗೆ ಬಿಗ್ ರಿಲೀಫ್ ನೀಡಿದೆ.
ಚಿತ್ರದುರ್ಗ : ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ವತಿಯಿಂದ 2024-25ನೇ ಸಾಲಿನಲ್ಲಿ ಗಿರಿಜನ ಉಪಯೋಜನೆ ಅಡಿಯಲ್ಲಿ ಕುರಿ, ಮೇಕೆ ಘಟಕ ಪೂರೈಕೆ ಯೋಜನೆಯನ್ನು ನಿಗಮದಲ್ಲಿ ನೋಂದಾಯಿತ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಪರಿಶಿಷ್ಟ ಪಂಗಡದ ಸದಸ್ಯರಿಗಾಗಿ ಮಾತ್ರ ಅರ್ಜಿ ಆಹ್ವಾನಿಸಲಾಗಿದೆ. ಡಿ.15 ಅರ್ಜಿ ಸಲ್ಲಿಸಲು ಕೊನೆಯ ದಿನ. ಅರ್ಜಿ ಸಲ್ಲಿಸುವವರು 18 ರಿಂದ 60 ವರ್ಷ ಒಳಗಿನ ಮಹಿಳಾ, ಪುರುಷ ಸದಸ್ಯರಾಗಿದ್ದು, ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘಗಳ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ. ಈ ಯೋಜನೆಯಡಿ 10 ಸುಧಾರಿತ ಹೆಣ್ಣು ಕುರಿ, ಮೇಕೆ, 01 ಟಗರು, ಹೋತಕ್ಕೆ ಒಟ್ಟು ಘಟಕ ದರ ರೂ.66,000/-ಗಳಿದ್ದು, ಶೇ.90ರಷ್ಟು ಸಹಾಯಧನ ಹೊಂದಿರುತ್ತದೆ. ಚಿತ್ರದುರ್ಗ ಜಿಲ್ಲೆಗೆ ಒಟ್ಟು 14 ಗುರಿ ನಿಗಧಿಪಡಿಸಲಾಗಿದೆ. ಹೆಚ್ಚಿನ ಮಾಹಿತಿಗಾಗಿ ಹತ್ತಿರದಲ್ಲಿರುವ ಕುರಿ ಮತ್ತು ಉಣ್ಣೆ ಉತ್ಪಾದಕರ ಸಹಕಾರ ಸಂಘ ಅಥವಾ ಸಹಾಯಕ ನಿರ್ದೇಶಕರು, ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ, ಪಶು ಆಸ್ಪತ್ರೆ…
ಚಿತ್ರದುರ್ಗ : ಹೊಳಲ್ಕೆರೆ ಪುರಸಭೆ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನ ಮಾರಾಟ ಮಾಡಲು ವ್ಯಾಪಾರಿಗಳು ಪ್ರತ್ಯೇಕವಾಗಿ ಪರವಾನಿಗೆ ಪಡೆಯುವುದು ಕಡ್ಡಾಯವಾಗಿದೆ. ಪುರಸಭೆಯಿಂದ ಅರ್ಜಿ ನಮೂನೆ ಪಡೆದು, ಅಗತ್ಯ ಮಾಹಿತಿಗಳೊಂದಿಗೆ, ಅರ್ಜಿ ಶುಲ್ಕ ರೂ.500/- ಆಗಿದ್ದು, 1 ವರ್ಷ ಚಾಲ್ತಿಯಲ್ಲಿರುತ್ತದೆ. ಡಿಸೆಂಬರ್ 15 ರೊಳಗೆ ಅರ್ಜಿ ಸಲ್ಲಿಸಬೇಕು. ಅರ್ಜಿ ಸಲ್ಲಿಸಲು ಆಧಾರ್ ಕಾರ್ಡ್, ಬಾಡಿಗೆ ಕರಾರು ಪತ್ರ, ಉದ್ಯಮ ಪರವಾನಿಗೆ, ಉದ್ಯಮ ಫೋಟೋ ಹಾಗೂ ಮಾಲೀಕರ ಫೋಟೋ ದಾಖಲೆಗಳು ಬೇಕು. ಡಿ.15ರ ನಂತರ ಪ್ರತ್ಯೇಕ ಪರವಾನಿಗೆ ಪಡೆಯದೇ ತಂಬಾಕು ಉತ್ಪನ್ನಗಳನ್ನು ಮಾರಾಟ ಮಾಡುವ ತಂಬಾಕು ವ್ಯಾಪಾರಸ್ಥರ ಮೇಲೆ ದಂಡ ವಿಧಿಸುವುದಲ್ಲದೆ ಉದ್ದಿಮೆ ಪರವಾನಿಗೆಯನು ಸಹ ರದ್ದುಪಡಿಸಿ, ಶಿಸ್ತುಕ್ರಮ ಕೈಗೊಳ್ಳಲಾಗುವುದು ಎಂದು ಹೊಳಲ್ಕೆರೆ ಪುರಸಭೆ ಮುಖ್ಯಾಧಿಕಾರಿ ತಿಳಿಸಿದ್ದಾರೆ. https://kannadanewsnow.com/kannada/sc-youth-of-the-state-applications-invited-for-training-camp-on-folk-art-forms/ https://kannadanewsnow.com/kannada/breaking-lok-sabha-rajya-sabha-to-discuss-constitution-from-december-13-all-party-meeting-ends-logjam/ https://kannadanewsnow.com/kannada/karnataka-sslc-ii-puc-exam-1-tentative-schedule-released-heres-the-subject-wise-exam/
ಚಿತ್ರದುರ್ಗ : ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಪರಿಶಿಷ್ಟ ಜಾತಿ ಉಪಯೋಜನೆ ಅಡಿಯಲ್ಲಿ ಪರಿಶಿಷ್ಟ ಜಾತಿ ಯುವಜನರಿಗೆ ಅನುಷ್ಠಾನಗೊಳಿಸಿರುವ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರಕ್ಕೆ ಅರ್ಜಿ ಆಹ್ವಾನಿಸಲಾಗಿದೆ. ಡಿ.08 ಅರ್ಜಿ ಸಲ್ಲಿಸಲು ಕೊನೆಯ ದಿನ. ಎಸ್ಎಸ್ಎಲ್ಸಿ ಪಾಸ್, ಫೇಲ್ ಆದ 16 ರಿಂದ 40 ವರ್ಷ ವಯೋಮಿತಿಯವರಿಗೆ ಡಿಸೆಂಬರ್ 10 ರಿಂದ 17 ರವರೆಗೆ ಬೆಂಗಳೂರಿನಲ್ಲಿ ಜಾನಪದ ಕಲಾ ಪ್ರಕಾರಗಳ ತರಬೇತಿ ಶಿಬಿರ ನಡೆಯಲಿದೆ. ತರಬೇತಿ ಶಿಬಿರಕ್ಕೆ ಅರ್ಜಿ ಸಲ್ಲಿಸಲು ಪರಿಶಿಷ್ಟ ಜಾತಿಯ ಯುವ ಜನರು ಹಾಗೂ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ ಅರ್ಜಿ ಪಡೆದು ಇದೇ ಡಿ.08ರೊಳಗಾಗಿ ಕಚೇರಿಗೆ ಸಲ್ಲಿಸಬೇಕು. ತರಬೇತಿ ಶಿಬಿರಗಳಲ್ಲಿ ಭಾಗವಹಿಸುವ ಕ್ರೀಡಾಪಟುಗಳಿಗೆ ಊಟೋಪಹಾರ, ಪ್ರಮಾಣ ಪತ್ರ ಹಾಗೂ ಈ ಶಿಬಿರದಲ್ಲಿ ಭಾಗಹಿಸುವವರಿಗೆ ಸಾಮಾನ್ಯ ವಸತಿ ವ್ಯವಸ್ಥೆ ಇರುತ್ತದೆ. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08194-235635ಗೆ ಮತ್ತು ಸಹಾಯವಾಣಿ ಸಂಖ್ಯೆ 155265 ಹಾಗೂ ಮೊಬೈಲ್ 9731251411 ಸಂಪರ್ಕಿಸಬಹುದು ಎಂದು ಯುವಸಬಲೀಕರಣ ಮತ್ತು ಕ್ರೀಡಾ ಇಲಾಖೆ…