Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಪಿಎಫ್ಐ, ಎಸ್ ಡಿಪಿಐ, ಭಜರಂಗದಳ, ಶ್ರೀರಾಮಸೇನೆ ಮತ್ತು ಇತರೆ ಸಂಘಟನೆಗಳ ಕಾರ್ಯಕರ್ತರ ಮೇಲೆ 2009-10 ರಿಂದ ಈಚೆಗೆ ಒಟ್ಟು 949 ಕೋಮು ಸಂಬಂಧಿತ ಗಲಾಟೆಯ ಪ್ರಕರಣಗಳು ದಾಖಲಾಗಿವೆ. ಅವುಗಳಲ್ಲಿ 127 ಪ್ರಕರಣಗಳನ್ನು ಹಿಂಪಡೆಯಲಾಗಿದೆ ಎಂಬುದಾಗಿ ಸರ್ಕಾರ ಲಿಖಿತ ಉತ್ತರ ನೀಡಿದೆ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಆರೋಪಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು ಹಾಗೂ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮನೋಹರ್ ಅವರು ಮಾಹಿತಿ ಹಂಚಿಕೊಂಡಿದ್ದಾರೆ. 1. ಕ್ರಿಮಿನಲ್ ಪಕ್ರಿಯ ಸಂಹಿತೆ ಕಲಂ 321ರ ಅಡಿಯಲ್ಲಿ ಸಂಪುಟ ಸಭೆಯ ಅನುಮೋದನೆಯೊಂದಿಗೆ ಪ್ರಾಸಿಕ್ಯೂಷನ್ ಅನುಮತಿಯನ್ನು ವಾಪಸ್ಸು ಪಡೆಯಲು ರಾಜ್ಯ ಸರ್ಕಾರಕ್ಕೆ ಅವಕಾಶವಿರುತ್ತದೆ. ಸಾಮಾನ್ಯವಾಗಿ ಗೃಹ ಇಲಾಖೆಯ ಪ್ರಸ್ತಾವನೆಯೊಂದಿಗೆ, ಸಂಪುಟ ಸಭೆಯ ಉಪಸಮಿತಿಯು ನೀಡಿದ ಪ್ರಸ್ತಾವನೆಯನ್ನು ರಾಜ್ಯ ಸರ್ಕಾರ ಅಂಗೀಕರಿಸುವ ಅಥವಾ ತಿರಸ್ಕರಿಸುವ ಅವಕಾಶವಿರುತ್ತದೆ. ಇದೊಂದು ನಿರಂತರ ಪ್ರಕ್ರಿಯೆ ಆಗಿದ್ದು, ಬಿಜೆಪಿ ಸರ್ಕಾರದಲ್ಲಿ ಕಾನೂನು ಸಚಿವರಾಗಿದ್ದ ಶ್ರೀ ಜೆ.ಸಿ.ಮಾಧುಸ್ವಾಮಿ, ಬೊಮ್ಮಾಯಿರವರ ಬಿಜೆಪಿ…

Read More

ಬೆಂಗಳೂರು : ಜಾತಿ ಪ್ರಮಾಣ ಪತ್ರದ ಬಗ್ಗೆ ಇರುವ ಗೊಂದಲವನ್ನು ನಿವಾರಿಸಿ, ಸೂಕ್ತ ಸುತ್ತೋಲೆ ಹೊರಡಿಸುವಂತೆ ಸಮಾಜ ಕಲ್ಯಾಣ ಕಾರ್ಯದರ್ಶಿಗಳು ಹಾಗೂ ಕಾನೂನು ಇಲಾಖಾ ಕಾರ್ಯದರ್ಶಿಗಳಿಗೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ವಿಧಾನಸೌಧದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದರು. ಇಂದು ಪರಿಶಿಷ್ಟ ಪಂಗಡದ ಸಮುದಾಯಗಳ ಸಭೆ ನಡೆಸಲಾಗಿದ್ದು, ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಆಗಿರುವ ಅವ್ಯವಹಾರದ ಹಿನ್ನಲೆಯಲ್ಲಿ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಅನುದಾನದ ಕೊರತೆಯಾಗಬಾರದೆಂದು ಕೋರುತ್ತಾ, ಕೆಲವರು ಸುಳ್ಳು ಜಾತಿ ಪ್ರಮಾಣ ಪತ್ರಗಳನ್ನು ಪಡೆಯುತ್ತಿರುವುದನ್ನು ಬಗ್ಗೆಯೂ ಸಭೆಯ ಗಮನವನ್ನು ಸೆಳೆದಿರುವುದಾಗಿ ತಿಳಿಸಿದರು. ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಪೂರ್ಣ ಅನುದಾನ ವಾಲ್ಮೀಕಿ ಅಭಿವೃದ್ಧಿ ನಿಗಮಕ್ಕೆ ಈ ವರ್ಷದಲ್ಲಿ ನಿಗದಿಪಡಿಸಲಾಗಿರುವ ಅನುದಾನವನ್ನು ಸಂಪೂರ್ಣವಾಗಿ ಒದಗಿಸಲಾಗುವುದು. ನಿಗಮದಲ್ಲಿ ಸುಮಾರು 89.63 ಕೋಟಿ ರೂ.ಗಳ ಮೊತ್ತ ಅವ್ಯವಹಾರವಾಗಿದ್ದು, ಇದರಲ್ಲಿ 5 ಕೋಟಿ ರೂ.ಗಳನ್ನು ವಾಪಸ್ಸು ಪಡೆಯಲಾಗಿದೆ. ಉಳಿದ 84.63 ಕೋಟಿ ರೂ.ಗಳಲ್ಲಿ 71.54 ಕೋಟಿ ರೂ.ಗಳನ್ನು ವಸೂಲು ಮಾಡಲಾಗಿದೆ. ಇನ್ನುಳಿದ ಸುಮಾರು 13 ಕೋಟಿಗಳ ಮೊತ್ತವನ್ನು…

Read More

ಬೆಂಗಳೂರು: ರೈತರ ಬಗ್ಗೆ ಕೀಳರಿಮೆ ಇರುವ ಕೃಷ್ಣ ಭೈರೇಗೌಡರು ಐದು ವರ್ಷಗಳ ಕಾಲ ಕೃಷಿ ಸಚಿವರಾಗಿದ್ದು ಈ ರಾಜ್ಯದ ದೌರ್ಭಾಗ್ಯ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ಟೀಕಿಸಿದ್ದಾರೆ. ಕಂದಾಯ ಸಚಿವ ಕೃಷ್ಣ ಭೈರೇಗೌಡ ಅವರು ತಮ್ಮ ಬಗ್ಗೆ ಆಡಿದ ಮಾತಿನ ಬಗ್ಗೆ ಅವರು ಟ್ವೀಟ್‌ ಮೂಲಕ ಪ್ರತಿಕ್ರಿಯಿಸಿದ್ದಾರೆ. ನನ್ನನ್ನು ನಿಂದಿಸುವ ಭರದಲ್ಲಿ ಕಡಲೆಕಾಯಿ ಬೆಳೆಯುವ ಸಾಮಾನ್ಯ ರೈತನಿಗೆ ಇರುವಷ್ಟು ‘ಕನಿಷ್ಠ ಜ್ಞಾನ’ ಎಂದು ರೈತರನ್ನು ಕೃಷ್ಣ ಭೈರೇಗೌಡರು ಹೀಯಾಳಿಸಿದ್ದಾರೆ. ಎಲ್ಲರಿಗೂ ಅವರಂತೆ ವಿದೇಶಕ್ಕೆ ಹೋಗಿ ವಿದ್ಯಾಭ್ಯಾಸ ಮಾಡಿಕೊಂಡು ಬರುವಷ್ಟು ಅನುಕೂಲ ಇರುವುದಿಲ್ಲ. ರಾಜಕಾರಣದಲ್ಲಿ ಕುಟುಂಬದ ಹಿನ್ನೆಲೆ ಇಲ್ಲದಂತಹ ನಮ್ಮಂತಹ ಸಾಮಾನ್ಯರೂ ಇದ್ದೀವಿ. ರೈತರ ಬಗ್ಗೆ ಇಂತಹ ಕೀಳರಿಮೆ ಇರುವ ತಮ್ಮಂತಹವರು ಐದು ವರ್ಷಗಳ ಕಾಲ ರಾಜ್ಯದ ಕೃಷಿ ಸಚಿವರಾಗಿದ್ದೀರಲ್ಲ, ಅದೇ ನಮ್ಮ ರಾಜ್ಯದ ದೌರ್ಭಾಗ್ಯ ಎಂದು ಹೇಳಿದ್ದಾರೆ. ಜಿಎಸ್‌ಟಿ ಸಭೆಯಲ್ಲಿ ತೆರಿಗೆ ಹಂಚಿಕೆ ಬಗ್ಗೆ ಅಧಿಕೃತವಾಗಿ ಚರ್ಚೆ ನಡೆಯುವುದಿಲ್ಲ ಎಂಬ ಅರಿವು ನನಗೂ ಇದೆ. ಆದರೆ ಜಿಎಸ್‌ಟಿ ಸಭೆಯಲ್ಲಿ ಕೇಂದ್ರ ಹಣಕಾಸು ಸಚಿವರು,…

Read More

ಬೆಂಗಳೂರು: ಸೈಬರ್ ಕ್ರೈಂ ವಂಚನೆ ಎಸಗಿದಂತ ಆಕ್ಸಿಸ್ ಬ್ಯಾಂಕ್ ನೌಕರ ಸೇರಿದಂತೆ 8 ವಂಚಕರನ್ನು ಬೆಂಗಳೂರು ಸಿಟಿ ಪೊಲೀಸರು ಎಡೆಮುರಿ ಕಟ್ಟಿ ಬಂಧಿಸಿದ್ದಾರೆ. ಪತ್ರಿಕಾ ಪ್ರಕಟಣೆಯಲ್ಲಿ ಬೆಂಗಳೂರು ಸಿಟಿ ಪೊಲೀಸರು ಮಾಹಿತಿ ನೀಡಿದ್ದು, ದಿನಾಂಕ:01/07/2024 ರಂದು ಯಲಹಂಕ ವಾಸಿಯಾದ ಪಿರಾದುದಾರರು ಸೈಬರ್ ಕ್ರೈಂ ಪೊಲೀಸ್ ಠಾಣೆಗೆ ದೂರನ್ನು ಸಲ್ಲಿಸಿರುತ್ತಾರೆ. ದೂರಿನಲ್ಲಿ ಪಿರಾದುದಾರರನ್ನು ಮಾರ್ಚೆ-2024 ನೇ ಸಾಲಿನಲ್ಲಿ ಒಂದು ವ್ಯಾಟ್ಸ್ ಆಫ್ ಗ್ರೂಪ್ನ ಸದಸ್ಯರನ್ನಾಗಿ ಸೇರಿಸಿಕೊಂಡಿದ್ದು, ಗ್ರೂಪ್ ಮೆಸೆಜ್‌ನಲ್ಲಿ ಷೇರ್ ಬ್ರೆಡಿಂಗ್ ಬಗ್ಗೆ ತರಬೇತಿಯನ್ನು ನೀಡಿ, ನಂತರ ವಿ.ಐ.ಪಿ ಟ್ರೇಡಿಂಗ್ ಅಕೌಂಟ್‌ನಲ್ಲಿ ಹಣವನ್ನು ಹೂಡಿದರೆ ಹತ್ತು ಪಟ್ಟು ಹೆಚ್ಚಿನ ಹಣವನ್ನು ನೀಡುವುದಾಗಿ ಆಮಿಷವೊಡ್ಡಿರುತ್ತಾರೆ ಎಂದಿದೆ. ಪಿರಾದುದಾರರು ಈ ಆಮಿಷಕ್ಕೆ ಒಳಗಾಗಿ ಮೊದಲು 50 ಸಾವಿರ ಹಣವನ್ನು ವಿ.ಐ.ಪಿ ಟ್ರೇಡಿಂಗ್ ಅಕೌಂಟ್‌ಗೆ ಜಮಾ ಮಾಡಿದ ನಂತರ, ಏರಾದುದಾರರ ವಿ.ಐ.ಪಿ ಟ್ರೇಡಿಂಗ್ ಅಕೌಂಟ್‌ನಲ್ಲಿ ಹಣ ದ್ವಿಗುಣವಾಗಿರುವುದಾಗಿ ಮೇಸೆಜ್ ಬಂದಿರುತ್ತದೆ. ಹಾಗೂ ಪಿರಾದುದಾರರಿಗೆ ಮೇಲಿಂದ ಮೇಲೆ ಹಣವನ್ನು ಮತ್ತಷ್ಟು ಹೂಡುವಂತೆ ವ್ಯಾಟ್ಸ್ ಆಫ್ ಮುಖಾಂತರ ಒತ್ತಡವನ್ನು ಹೇರಿರುತ್ತಾರೆ.…

Read More

ಬೆಂಗಳೂರು: ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಾತಿ ಗಣತಿ ವರದಿಯನ್ನು ಮಂಡಿಸಿ, ಚರ್ಚಿಸಿದ ಬಳಿಕ ಜಾರಿಯ ನಿರ್ಧಾರ ಪ್ರಕಟಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದ್ದರು. ಈ ಕಾರಣಕ್ಕಾಗಿಯೇ ಅಕ್ಟೋಬರ್.18ರಂದು ರಾಜ್ಯ ಸಚಿವ ಸಂಪುಟ ಸಭೆಯನ್ನು, ಅಕ್ಟೋಬರ್.25ಕ್ಕೆ ಮುಂದೂಡಿಕೆ ಮಾಡಲಾಗಿದೆ. ಅಕ್ಟೋಬರ್.7, 2024ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಜಾತಿ ಗಣತಿ ವರದಿ ಅನುಷ್ಠಾನ ಸಂಬಂಧ ಹಿಂದುಳಿದ ವರ್ಗಗಳ ಸಚಿವರು, ಶಾಸಕರ ಸಭೆ ನಡೆಸಿದ್ದರು. ಈ ಸಭೆಯ ಬಳಿಕ ಅಕ್ಟೋಬರ್.18ರಂದು ನಡೆಯಲಿರುವಂತ ಸಚಿವ ಸಂಪುಟ ಸಭೆಯಲ್ಲೇ ಜಾತಿ ಗಣತಿ ವರದಿಯನ್ನು ಮಂಡಿಸೋದಾಗಿ ಘೋಷಿಸಿದ್ದರು. ಆದರೇ ಅಕ್ಟೋಬರ್.17ರಂದು ವಾಲ್ಮೀಕಿ ಜಯಂತಿ ಕಾರಣ ಅಕ್ಟೋಬರ್.18ಕ್ಕೆ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿತ್ತು. ಆದರೇ ಜಾತಿ ಗಣತಿ ವರದಿ ಮಂಡನೆ, ಅದರ ಮೇಲಿನ ಚರ್ಚೆಯ ಕಾರಣದಿಂದ ಈಗ ರಾಜ್ಯ ಸಚಿವ ಸಂಪುಟ ಸಭೆಯನ್ನು ಅಕ್ಟೋಬರ್.25ಕ್ಕೆ ನಿಗದಿ ಪಡಿಸಿ ಒಂದು ವಾರ ಮುಂದೂಡಲಾಗಿದೆ. https://kannadanewsnow.com/kannada/chicken-first-egg-first-this-is-the-answer-of-scientists/ https://kannadanewsnow.com/kannada/good-news-for-dosa-lovers-kmf-to-launch-nandini-dosa-flour-soon/

Read More

ಬೆಂಗಳೂರು: ಸಾಕ್ಷ್ಯಾಧಾರ ಸಮಂಜಸ, ನಂಬಲರ್ಹ, ವಿಶ್ವಾಸಾರ್ಹವಾಗಿದ್ದರೇ ಹತ್ಯೆಗೀಡಾದವನ ಬಂಧುಗಳ ಸಾಕ್ಷ್ಯ ನಿರ್ಲಕ್ಷಿಸುವಂತಿಲ್ಲ ಎಂಬುದಾಗಿ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ. ಪ್ರತ್ಯಕ್ಷ ಸಾಕ್ಷಿಯೊಬ್ಬ ಕೊಲೆಯಾದವರ ನಿಕಟ ಸಂಬಂಧಿ ಎಂಬ ಕಾರಣಕ್ಕೆ ಆ ಸಾಕ್ಷ್ಯವನ್ನು ನಿರ್ಲಕ್ಷ್ಯಿಸಲು ಸಾಧ್ಯವಿಲ್ಲ ಎಂಬುದಾಗಿ ಹೈಕೋರ್ಟ್ ಕೊಲೆ ಪ್ರಕರಣದಲ್ಲಿ ಮೃತರ ತಂದೆ ಹಾಗೂ ಸಹೋದರನ ಸಾಕ್ಷ್ಯ ಆಧರಿಸಿ ಇಬ್ಬರಿಗೆ ವಿಧಿಸಲಾಗಿದ್ದಂತ ಜೀವಾವಧಿ ಶಿಕ್ಷೆಯನ್ನು ಎತ್ತಿಹಿಡಿದಿದೆ. ಕೊಲೆ ಪ್ರಕರಣದಲ್ಲಿ ಒಬ್ಬ ಪ್ರತ್ಯಕ್ಷ ಸಾಕ್ಷಿ ಹತ್ಯೆಗೀಡಾದರ ಕುಟುಂಬದ ಸದಸ್ಯನಾಗಿರುವ ಮಾತ್ರಕ್ಕೆ ಅಂತಹ ಸಾಕ್ಷಿಯ ಸಾಕ್ಷ್ಯವನ್ನು ತಿರಸ್ಕರಿಸಲಾಗುವುದಿಲ್ಲ ಎಂಬುದಾಗಿ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ನಿಕಟ ಸಂಬಂಧಿಯಾಗಿರುವ ಪ್ರತ್ಯಕ್ಷದರ್ಶಿಯ ಸಾಕ್ಷ್ಯವು ಸಮಂಜಸ, ನಂಬಲರ್ಹ ಮತ್ತು ವಿಶ್ವಾಸಾರ್ಹವಾಗಿದ್ದರೇ ಅದನ್ನು ಪರಿಗಣಿಸಬಹುದು ಎಂಬುದಾಗಿ ಹೈಕೋರ್ಟ್ ಅಭಿಪ್ರಾಯ ಪಟ್ಟಿದೆ. ಏನಿದು ಪ್ರಕರಣ? ವಿಜಯಪುರದ ಅಮಸಿದ್ದ ಬರಕಡೆ ಕೊಲೆ ಪ್ರಕರಣದಲ್ಲಿ ತಮ್ಮನ್ನು ದೋಷಿಯಾಗಿ ತೀರ್ಮಾನಿಸಿ, ಜೀವಾವಧಿ ಶಿಕ್ಷೆಯನ್ನು ವಿಧಿಸಿದ್ದಂತ ವಿಚಾರಣಾ ನ್ಯಾಯಾಲಯದ ಆದೇಶ ರದ್ದುಗೊಳಿಸುವಂತೆ ಹೈಕೋರ್ಟ್ ಗೆ ಕಾಮಣ್ಣ(42) ಹಾಗೂ ಸೋಮಲಿಂಗ (36) ಅರ್ಜಿ ಸಲ್ಲಿಸಿದ್ದರು. ವಿಜಯಪುರದ ಕನ್ನೂರು ಗ್ರಾಮದಲ್ಲಿ 5…

Read More

ಬೆಂಗಳೂರು: ದೋಸೆ ಪ್ರಿಯರಿಗೆ ಗುಡ್ ನ್ಯೂಸ್ ಎನ್ನುವಂತೆ ಶೀಘ್ರವೇ ಕೆಎಂಎಫ್ ನಿಂದ ನಂದಿನಿ ಬ್ರ್ಯಾಂಡ್ ದೋಸೆ ಹಿಟ್ಟನ್ನು ಮಾರುಕಟ್ಟೆಗೆ ಬಿಡುಗಡೆ ಮಾಡಲಾಗುತ್ತಿದೆ. ಈಗಾಗಲೇ ಕೆಎಂಎಫ್ ನಿಂದ ಹಾಲೂ ಹಾಗೂ ಹಾಲಿನ ಉತ್ಪನ್ನಗಳನ್ನು ಪರಿಚಯಿಸಲಾಗಿದೆ. ಈಗ ಮಾರುಕಟ್ಟೆಗೆ ನಂದಿನಿ ಬ್ರ್ಯಾಂಡ್ ನಡಿ ದೋಸೆ ಹಿಟ್ಟನ್ನು ಪರಿಚಯಿಸಲಿದೆ. ಮುಖ್ಯವಾಗಿ ಬೆಂಗಳೂರು ಮಹಾನಗರದ ಮಾರುಕಟ್ಟೆ ಗಮನದಲ್ಲಿಟ್ಟುಕೊಂಡು ದೋಸೆ ಹಿಟ್ಟು ಮಾರಾಟಕ್ಕೆ ಸಿದ್ಧತೆಯನ್ನು ನಡೆಸಲಾಗುತ್ತಿದೆ. ರೆಡಿ ಟು ಕುಕ್ ಪರಿಕಲ್ಪನೆಯಡಿ ಜನರು ಸುಲಭವಾಗಿ ಮನೆಯಲ್ಲೇ ರುಚಿಕರ ದೋಸೆ ಸವಿಯುವ ಅವಕಾಶವನ್ನು ನಂದಿನಿಯ ದೋಸೆ ಹಿಟ್ಟು ಕಲ್ಪಿಸಲಿದೆ. ಈ ಮೂಲಕ ಕಡಿಮೆ ಅವಧಿಯಲ್ಲಿ ಸುಲಭವಾಗಿ ದೋಸೆ ಮಾಡಲು ಪೂರಕವಾಗಿ ಕೆಎಂಎಫ್ ದೋಸೆ ಹಿಟ್ಟು ಸಹಕಾರಿಯಾಗಲಿದೆ. ಅಂದಹಾಗೇ ಆರಂಭದಲ್ಲಿ ಪ್ರಾಯೋಗಿಕವಾಗಿ ಒಂದು ಮತ್ತು ಎರಡು ಕೆಜಿ ಪ್ರಮಾಣದ ದೋಸೆ ಹಿಟ್ಟಿನ ಪ್ಯಾಕೆಟ್ ಗಳನ್ನು ಕೆಎಂಎಫ್ ಬಿಡುಗಡೆ ಮಾಡುವಂತ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಈಗಾಗಲೇ ನಂದಿನಿ ಬ್ರ್ಯಾಂಡ್ ದೋಸೆ ಹಿಟ್ಟು ಸಿದ್ಧಪಡಿಸಲು ಟೆಂಡರ್ ಪ್ರಕ್ರಿಯೆಯನ್ನು ಪೂರ್ಣಗೊಳಿಸಲಾಗಿದ್ದು, ಸದ್ಯದಲ್ಲೇ ಮಾರುಕಟ್ಟೆಗೆ ಬಿಡುಗಡೆಯಾಗಲಿದೆ. https://kannadanewsnow.com/kannada/chicken-first-egg-first-this-is-the-answer-of-scientists/…

Read More

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಿಂದ ನಾಳೆ 63ನೇ ಸಂಸ್ಥಾಪನಾ ದಿನವನ್ನು ಆಚರಿಸಲಾಗುತ್ತಿದೆ. ಇದೇ ಸಂದರ್ಭದಲ್ಲಿ ವಿವಿಧ ಕಾರ್ಯಕ್ರಮಗಳನ್ನು ನಿಗಮ ಆಯೋಜಿಸಿದೆ. ನಾಳಿನ ಕೆ ಎಸ್ ಆರ್ ಟಿ ಸಿ 63ನೇ ಸಂಸ್ಥಾಪನಾ ದಿನಾಚರಣೆಯನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಅವರು ಜ್ಯೋತಿ ಬೆಳಗಿಸುವ ಮೂಲಕ ಚಾಲನೆ ನೀಡಲಿದ್ದಾರೆ. ಕೆ ಎಸ್ ಆರ್ ಟಿಸಿಯ ಅಧ್ಯಕ್ಷರು ಹಾಗೂ ಶಾಸಕ ಎಸ್.ಆರ್ ಶ್ರೀನಿವಾಸ್ ಉಪಸ್ಥಿತರಿರಲಿದ್ದಾರೆ. ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಹಾಗೂ ಶಾಂತಿನಗರ ಕ್ಷೇತ್ರದ ಶಾಸಕ ಎನ್ ಎ ಹ್ಯಾರಿಸ್ ಅವರು ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿರಲಿದ್ದಾರೆ. ಮುಖ್ಯ ಅತಿಥಿಗಳಾಗಿ ಕೆ ಎಸ್ ಆರ್ ಟಿಸಿ ಉಪಾಧ್ಯಕ್ಷರಾದಂತ ಮೊಹಮ್ಮದ್ ರಿಜ್ವಾನ್ ನವಾಬ್, ವಿಶೇಷ ಆಹ್ವಾನಿತರಾಗಿ ಸಾರಿಗೆ ಇಲಾಖೆಯ ಕಾರ್ಯದರ್ಶಿ ಡಾ.ಎನ್ ವಿ ಪ್ರಸಾದ್ ಭಾಗಿಯಾಗಲಿದ್ದಾರೆ. ಸಂಸ್ಥಾಪನಾ ದಿನಾಚರಣೆಯ ಕಾರ್ಯಕ್ರಮಗಳ ವಿವರ ಮೊದಲ ಬಾರಿಗೆ ಪುನಶ್ಚೇತನಗೊಂಡ ಐರಾವತ ಕ್ಲಬ್ ಕ್ಲಾಸ್ ಬಸ್ಸುಗಳಿಗೆ ಚಾಲನೆ ದೊರೆಯಲಿದೆ. ಅಪಘಾತದಲ್ಲಿ ಮೃತರ ಅವಲಂಬಿತ ಮೂವರಿಗೆ ಸಾರಿಗೆ…

Read More

ಬೆಂಗಳೂರು: ಬೃಹತ್‌ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಪೂರೈಸುವ ಬಹುನಿರೀಕ್ಷಿತ ಕಾವೇರಿ 5ನೇ ಹಂತದ ಯೋಜನೆಯನ್ನು ಅಕ್ಟೋಬರ್‌ 16ರ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್‌ ಅವರು ಲೋಕಾರ್ಪಣೆ ಮಾಡಲಿದ್ದಾರೆ. ಈ ಮೂಲಕ ಬೆಂಗಳೂರಿನ 110 ಹಳ್ಳಿಗಳ ಜನರಿಗೆ ಕಾವೇರಿ ನದಿ ನೀರು ಕುಡಿಯೋದಕ್ಕೆ ಸಿಗುವಂತೆ ಆಗಲಿದೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ ವ್ಯಾಪ್ತಿಯ 110 ಹಳ್ಳಿಗಳಿಗೆ ಕುಡಿಯುವ ನೀರು ಸರಬರಾಜಾಗುವ ಕಾವೇರಿ ಐದನೇ ಹಂತದ ಯೋಜನೆಗೆ ಅ.16ರ ನಾಳೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿಗಳಾದ ಡಿ.ಕೆ.ಶಿವಕುಮಾರ್ ಅವರಿಂದ ಲೋಕಾರ್ಪಣೆಗೊಳ್ಳಲಿದೆ. ಜೈಕಾ(ಜಪಾನ್ ಇಂಟರ್ ನ್ಯಾಷನಲ್ ಕೋ ಅಪರೇಶನ್ ಏಜೆನ್ಸಿ) ಸಹಭಾಗಿತ್ವದಲ್ಲಿ 4,336 ಕೋಟಿ ರೂ.ವೆಚ್ಚದಲ್ಲಿ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಬೆಂಗಳೂರಿಗೆ ಹೊಸದಾಗಿ ಸೇರ್ಪಡೆಯಾದ ಹಳ್ಳಿಗಳಿಗೆ ಸಮರ್ಪಕ ನೀರನ್ನು ಒದಗಿಸುವ ಹಾಗೂ ಬೆಂಗಳೂರಿನ ದೂರದೃಷ್ಟಿಯನ್ನಿಟ್ಟುಕೊಂಡು ಮಹತ್ವದ ನಿರ್ಧಾರವನ್ನು 2014ರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಸರಕಾರ ಈ ಯೋಜನೆ ರೂಪಿಸಿ ಚಾಲನೆ ನೀಡಿದ್ದನ್ನು ಸ್ಮರಿಸಬಹುದು. ಈ ಯೋಜನೆಯಿಂದ…

Read More

ಬೆಂಗಳೂರು: ರಾಜ್ಯದಲ್ಲಿ ಖಾಸಗಿಯಾಗಿ ಅನೇಕ ಫಿಟ್ ನೆಸ್ ಪರೀಕ್ಷಾ ಕೇಂದ್ರಗಳು ಇದ್ದಾವೆ. ಇವುಗಳ ನಡುವೆ ಈಗ ಬಿಎಂಟಿಸಿಯಿಂದಲೂ ತನ್ನ ವಾಹನಗಳ ಫಿಟ್ ನೆಸ್ ಪರೀಕ್ಷೆ ಮಾಡೋದಕ್ಕೆ ಹಾಗೂ ಖಾಸಗಿ ವಾಹನಗಳನ್ನು ಪರೀಕ್ಷೆ ಮಾಡಲು ಫಿಟ್ ನೆಸ್ ಕೇಂದ್ರವನ್ನು ಸ್ಥಾಪಿಸಲಿದೆ. ಹೌದು ಬಿಎಂಟಿಸಿ ಬಸ್ ಸೇರಿದಂತೆ ಇತರೆ ವಾಹನಗಳ ಸದೃಢತೆಯನ್ನು ಪರೀಕ್ಷೆ ಮಾಡುವುದಕ್ಕಾಗಿ ಆಟೋ ಮ್ಯಾಟಿಕ್ ವಾಹನ ಪರೀಕ್ಷಾ ಕೇಂದ್ರ ಸ್ಥಾಪಿಸಲು ನಿಗಮವು ಮುಂದಾಗಿದೆ. ಈ ಕೇಂದ್ರದಲ್ಲಿ ವಾಹನಗಳ ಸದೃಢತೆ ಪರೀಕ್ಷೆ, ವಾಹನ ಚಾಲನಾ ಪರವಾನಗಿ ನೀಡುವುದು ಸೇರಿದಂತೆ ಇನ್ನಿತರ ಕಾರ್ಯಗಳನ್ನು ಮ್ಯಾನುಯಲ್ ಬದಲು ಆಟೋಮ್ಯಾಟಿಕ್ ಅಂದರೆ ಸ್ವಯಂ ಚಾಲಿತವಾದಂತ ರೀತಿಯಲ್ಲಿ ಮಾಡಲಾಗುತದೆ. ಈ ಬಗ್ಗೆ ಈಗಾಗಲೇ ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಆದೇಶಿಸಿದೆ. ಕೇಂದ್ರ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯದ ಆದೇಶದಂತೆ ರಾಜ್ಯ ಸಾರಿಗೆ ಇಲಾಖೆ ಈಗಾಗಲೇ ಆಟೋ ಮ್ಯಾಟಿಕ್ ಪರೀಕ್ಷಾ ಪಥಗಳನ್ನು ಸ್ಥಾಪಿಸಲು ಮುಂದಾಗಿದೆ. ಅದರ ಜೊತೆ ಜೊತೆಗೆ ಈಗ ಬಿಎಂಟಿಸಿ ಕೂಡ ತನ್ನ ಬಸ್…

Read More