Subscribe to Updates
Get the latest creative news from FooBar about art, design and business.
Author: ವಸಂತ ಬಿ ಈಶ್ವರಗೆರೆ
ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.
ಬೆಂಗಳೂರು: ಕಲ್ಯಾಣ ಕರ್ನಾಟಕದ ನೆರೆಪೀಡಿತ ಜಿಲ್ಲೆಗಳಿಗೆ ಈವರೆಗೆ ಏನೆಲ್ಲಾ ಪರಿಹಾರ ಒದಗಿಸಲಾಗಿದೆ ಎಂಬ ಬಗ್ಗೆ 48 ಗಂಟೆಗಳಲ್ಲಿ ಜನತೆಗೆ ಸಮಗ್ರ ಮಾಹಿತಿ ನೀಡಿಬೇಕು ಎಂದು ಮಾಜಿ ಪ್ರಧಾನಿಗಳಾದ ಹೆಚ್.ಡಿ. ದೇವೇಗೌಡರು ರಾಜ್ಯ ಸರಕಾರಕ್ಕೆ ಗಡುವು ನೀಡಿದ್ದಾರೆ. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿ ಮಾತನಾಡಿದ ಮಾಜಿ ಪ್ರಧಾನಿಗಳು; ನೆರೆ ಪರಿಹಾರ ಕಾರ್ಯಕ್ರಮಗಳನ್ನು ಸಮರೋಪಾದಿಯಲ್ಲಿ ಕೈಗೊಳ್ಳಬೇಕು. ಪ್ರವಾಹದಿಂದ ಜನರು ಅತೀವ ಸಂಕಷ್ಟಕ್ಕೆ ಸಿಲುಕಿದ್ದಾರೆ. ಮುಂದಿನ 3-4 ದಿನಗಳಲ್ಲಿ ನಾನೂ ನೆರೆ ಪೀಡಿತ ಪ್ರದೇಶಗಳಿಗೆ ಭೇಟಿ ನೀಡಿ ಈ ಸರಕಾರ ಏನೆಲ್ಲಾ ಪರಿಹಾರವನ್ನು ಒದಗಿಸಿದೆ ಎಂಬುದನ್ನು ಖುದ್ದು ನೋಡುತ್ತೇನೆ ಎಂದರು. ಸಾಧ್ಯವಿರುವ ಕಡೆಗಳಿಗೆ ನಾನು ರಸ್ತೆಯ ಮೂಲಕವೇ ತೆರಳಿ ನೆರೆ ಸಂತ್ರಸ್ತರನ್ನು ಭೇಟಿ ಮಾಡುತ್ತೇನೆ. ಅವರು ಎದುರಿಸುತ್ತಿರುವ ಸಮಸ್ಯೆಗಳನ್ನು ಕಣ್ಣಾರೆ ಕಂಡು ಅವರಿಂದ ಮಾಹಿತಿ ಪಡೆಯುತ್ತೇನೆ. ಆಗಿರುವ ನಷ್ಟದ ಬಗ್ಗೆ ವಿವರ ಪಡೆದು ಅದಕ್ಕೆ ತಕ್ಕಂತೆ ರಾಜ್ಯ ಸರಕಾರ ನೆರವಿಗೆ ಬಂದಿದೆಯೇ ಇಲ್ಲವೇ ಎಂಬುದನ್ನು ತಿಳಿದುಕೊಳ್ಳುತ್ತೇನೆ. ಬಳಿಕ ಸಮಗ್ರ ವರದಿ ಸಿದ್ಧಪಡಿಸಿ…
ಬೆಂಗಳೂರು ಗ್ರಾಮಾಂತರ: ಜಲ್ಲಿಕಲ್ಲು ಇದ್ದಿದ್ದರಿಂದ ರಸ್ತೆಗೆ ಪಲ್ಟಿಯಾದ ಯುವತಿಯರಿಬ್ಬರ ಮೇಲೆ ಲಾರಿಯೊಂದು ಹರಿದು ಸ್ಥಳದಲ್ಲೇ ಸಾವನ್ನಪ್ಪಿರುವಂತ ಘಟನೆ ಶಿವನಾಪುರ ಕ್ರಾಸ್ ನಲ್ಲಿ ನಡೆದಿದೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ಶಿವನಾಪುರದಲ್ಲಿ ಜಲ್ಲಿಕಲ್ಲು ರಸ್ತೆಯಲ್ಲಿದ್ದ ಕಾರಣ ಸ್ಕಿಡ್ ಆಗಿ ಬೈಕ್ ನಲ್ಲಿ ತೆರಳುತ್ತಿದ್ದಂತ ಇಬ್ಬರು ಯುವತಿಯರು ರಸ್ತೆಗೆ ಬಿದ್ದಿದ್ದಾರೆ. ಇವರ ಹಿಂದೆಯೇ ಬರುತ್ತಿದ್ದಂತ ಕ್ಯಾಂಟರ್ ನಿಯಂತ್ರಣ ಕಳೆದುಕೊಂಡು ಯುವತಿಯರ ಮೇಲೆ ಹರಿದಿದೆ. ಈ ಪರಿಣಾಮ ಯುವತಿಯರಿಬ್ಬರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಕ್ಯಾಂಟರ್ ಚಕ್ರಕ್ಕೆ ಸಿಲುಕಿ ಸ್ಥಳದಲ್ಲೇ ಸಾವನ್ನಪ್ಪಿದವರನ್ನು ಶೈಲಾ(25) ಹಾಗೂ ಶ್ವೇತಾ(22) ಎಂಬುದಾಗಿ ಗುರುತಿಸಲಾಗಿದೆ. ಶಿವನಾಪುರ ಕ್ರಾಸ್ ಬಳಿಯಲ್ಲಿ ಸಂಭವಿಸಿದಂತ ಈ ಭೀಕರ ಅಪಘಾತದಲ್ಲಿ ಇಬ್ಬರು ಯುವತಿಯರು ದುರ್ಮರಣ ಹೊಂದಿದ್ದಾರೆ. https://kannadanewsnow.com/kannada/alert-smokers-beware-cigarettes-can-cause-these-serious-diseases/ https://kannadanewsnow.com/kannada/breaking-i-am-getting-married-soon-dimple-queen-rachita-ram-gave-good-news-to-fans/
ಬೆಂಗಳೂರು: ವಿಜಯನಗರ ಜಿಲ್ಲೆ ಹೊಸಪೇಟೆಯ ಗಾದಿಗನೂರು ನಲ್ಲಿ ಸಿಲಿಂಡರ್ ಸ್ಫೋಟ ಗೊಂಡು ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗಾಯಾಳುಗಳ ಪೈಕಿ ಇಬ್ಬರು ಮೃತಪಟ್ಟಿದ್ದಾರೆ. ಇಂತಹ ಮೃತರ ಕುಟುಂಬಸ್ಥರಿಗೆ ತಲಾ ಐದು ಲಕ್ಷ ಪರಿಹಾರವನ್ನು ರಾಜ್ಯ ಸರ್ಕಾರ ಘೋಷಿಸಿದೆ. ಇಂದು ವಿಷಯ ತಿಳಿದು ವಿಕ್ಟೋರಿಯಾ ಆಸ್ಪತ್ರೆಗೆ ತೆರಳಿದಂತ ಜಿಲ್ಲಾ ಉಸ್ತುವಾರಿ ಸಚಿವ ಜಮೀರ್ ಅಹಮದ್ ಖಾನ್ ಅವರು ಆಸ್ಪತ್ರೆಗೆ ಭೇಟಿ ನೀಡಿ ಮೃತರ ಅಂತಿಮ ದರ್ಶನ ಪಡೆದು ನಮನ ಸಲ್ಲಿಸಿದರು. ಅಲ್ಲದೇ ಮೃತರ ಕುಟುಂಬ ಸದಸ್ಯರಿಗೆ ಸಾಂತ್ವನ ಹೇಳಿದರು. ಇದೇ ಸಂದರ್ಭದಲ್ಲಿ ರಾಜ್ಯ ಸರ್ಕಾರದ ಪರವಾಗಿ ಮೃತರಾದ ಹಾಲಪ್ಪ ಹಾಗೂ ಗಂಗಮ್ಮ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ಘೋಷಿಸಿದರು. ಈ ವೇಳೆ ಮಾತನಾಡಿದಂತ ಅವರು, ಈ ಘಟನೆಯಿಂದ ಮನೆಗೆ ಹಾನಿಯಾಗಿದ್ದು ವೈಯಕ್ತಿಕ ವೆಚ್ಚದಲ್ಲಿ ಮನೆ ನಿರ್ಮಿಸಿಕೊಡುವುದಾಗಿ ತಿಳಿಸಿದರು. ನಂತರ ಆಂಬುಲೆನ್ಸ್ ಮೂಲಕ ಪಾರ್ಥಿ ವ ಶರೀರ ಸ್ವ ಗ್ರಾಮಕ್ಕೆ ಕಳುಹಿಸಿಕೊಡಲು ಸಚಿವರು ವ್ಯವಸ್ಥೆ ಮಾಡಿಕೊಟ್ಟರು. ಅಂತ್ಯಕ್ರಿಯೆಗೆ ಎಲ್ಲ ರೀತಿಯ…
ಶಿವಮೊಗ್ಗ: ರಾಜ್ಯದಲ್ಲಿ ನಡೆಯುತ್ತಿರುವ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸಮೀಕ್ಷೆ ಯಶಸ್ವಿಯಾಗಿ ಮುಂದುವರೆಯುತ್ತಿದ್ದು, ಸಮೀಕ್ಷೆಯನ್ನು ನಿಗದಿತ ಅವಧಿಗಿಂತ ಮುಂಚಿತವಾಗಿ ಪೂರ್ಣಗೊಳಿಸಿದ 25 ಶಿಕ್ಷಕರಿಗೆ ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಮತ್ತು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಎಸ್. ಮಧು ಬಂಗಾರಪ್ಪ ಅವರು ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವರ ಕಾರ್ಯಾಲಯ, ಶಿವಮೊಗ್ಗದಲ್ಲಿ ಇಂದು ಅಭಿನಂದಿಸಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಸಚಿವರು, ಸಮೀಕ್ಷೆಯನ್ನು ವಿರೋಧಿಸುತ್ತಿರುವ ಬಿಜೆಪಿ ನಾಯಕರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಸಮೀಕ್ಷೆಯನ್ನು ತ್ವರಿತವಾಗಿ ಪೂರ್ಣಗೊಳಿಸಿದ ಶಿಕ್ಷಕರನ್ನು ಉದ್ದೇಶಿಸಿ ಮಾತನಾಡಿದ ಸಚಿವರು, “ಸಂವಿಧಾನದ ಪೀಠಿಕೆಯನ್ನು ಓದಿ ಪ್ರಮಾಣ ಮಾಡಿದಂತೆ, ನಮ್ಮ ಶಿಕ್ಷಕರು ಈ ಕೆಲಸವನ್ನು ಅತ್ಯುತ್ತಮವಾಗಿ ಮಾಡಿದ್ದಾರೆ. ಇದು ಕೇವಲ ಸಮೀಕ್ಷೆ ಅಲ್ಲ, ಸಂವಿಧಾನವನ್ನು ಎತ್ತಿ ಹಿಡಿಯುವ ಮತ್ತು ಡಾ. ಬಿ.ಆರ್. ಅಂಬೇಡ್ಕರ್ ಅವರಿಗೆ ಗೌರವ ಸಲ್ಲಿಸುವ ಕೆಲಸವಾಗಿದೆ” ಎಂದರು. ಜಿಲ್ಲೆಯಲ್ಲಿ ಸಮೀಕ್ಷೆಯ ಪ್ರಗತಿಯನ್ನು ಮೆಚ್ಚಿದ ಅವರು, ರಾಜ್ಯದ ಸರಾಸರಿ 54% ರಷ್ಟಿದ್ದರೆ, ಶಿವಮೊಗ್ಗ ಜಿಲ್ಲೆಯಲ್ಲಿ 63.46% ರಷ್ಟು ಗಣತಿ ಪೂರ್ಣಗೊಂಡಿದೆ.…
ಚಿಕ್ಕಮಗಳೂರು: ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ವಿಶ್ವಕ್ಕೆ ಶಾಂತಿಯ ಭಂಗ, ಸರ್ವರು ಎಚ್ಚರ ಪರಾಕ್ ಎಂಬುದಾಗಿ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಕಾರ್ಣಿಕ ನುಡಿಯನ್ನು ನುಡಿಯಲಾಗಿದೆ. ಚಿಕ್ಕಮಗಳೂರು ಜಿಲ್ಲೆಯ ಬೀರೂರಿನಲ್ಲಿ ಇರುವಂತ ಮೈಲಾರಲಿಂಗೇಶ್ವರ ದೇವಾಲಯದಲ್ಲಿ ಮಹಾನವಮಿಯಂದು ಕಾರ್ಣಿಕ ನುಡಿಯನ್ನು ನುಡಿಯಲಾಗುತ್ತದೆ. ದೇವಸ್ಥಾನದ ಅರ್ಚಕ ದಶರಥ ಪೂಜಾರ್ ಬಿಲ್ಲನೇರಿ ಕಾರ್ಣಿಕ ನುಡಿಯನ್ನು ನುಡಿಯುತ್ತಾರೆ. ಇದೀಗ ಇತಿಹಾಸ ಪ್ರಸಿದ್ಧ ಬೀರೂರು ಮೈಲಾರಲಿಂಗೇಶ್ವರ ಸ್ವಾಮಿ ಕಾರ್ಣಿಕ ನುಡಿಯನ್ನು ನುಡಿಯಲಾಗಿದ್ದು ಇಟ್ಟ ರಾಮನ ಬಾಣಕ್ಕೆ ಹುಸಿಯಿಲ್ಲ, ಧರ್ಮ, ಅಧರ್ಮ ಸಂಕಷ್ಟವಾಯಿತು. ವಿಶ್ವಕ್ಕೆ ಶಾಂತಿಯ ಭಂಗವಾಯಿತು. ಧರೆಗೆ ವರುಣನ ಆಗಮನವಾಯಿತು. ಸರ್ವರು ಎಚ್ಚರದಿಂದ ಇರಬೇಕು ಪರಾಕ್ ಎಂಬುದಾಗಿ ನುಡಿಯಲಾಗಿದೆ. https://kannadanewsnow.com/kannada/nifty-nears-24900-sensex-rises-200-points/ https://kannadanewsnow.com/kannada/alert-smokers-beware-cigarettes-can-cause-these-serious-diseases/
ನವದೆಹಲಿ: ಅಕ್ಟೋಬರ್ 3 ರಂದು ಭಾರತೀಯ ಮಾನದಂಡ ಸೂಚ್ಯಂಕಗಳು ನಿಫ್ಟಿಯೊಂದಿಗೆ 24,900 ಕ್ಕೆ ಏರಿಕೆಯಾಗಿ ಕೊನೆಗೊಂಡವು. ಸೆನ್ಸೆಕ್ಸ್ 200 ಅಂಕಗಳಿಗೆ ಏರಿಕೆಯಾಗಿದೆ. ಟಾಟಾ ಸ್ಟೀಲ್, ಪವರ್ ಗ್ರಿಡ್ ಕಾರ್ಪ್, ಹಿಂಡಾಲ್ಕೊ, ಕೋಟಕ್ ಮಹೀಂದ್ರಾ ಬ್ಯಾಂಕ್ ಮತ್ತು ಎಲ್ & ಟಿ ಪ್ರಮುಖ ಲಾಭ ಗಳಿಸಿದವುಗಳಲ್ಲಿ ಸೇರಿವೆ, ಆದರೆ ಮ್ಯಾಕ್ಸ್ ಹೆಲ್ತ್ಕೇರ್, ಕೋಲ್ ಇಂಡಿಯಾ, ಮಾರುತಿ ಸುಜುಕಿ, ಟೆಕ್ ಮಹೀಂದ್ರಾ ಮತ್ತು ಎಸ್ಬಿಐ ಲೈಫ್ ಇನ್ಶುರೆನ್ಸ್ ನಷ್ಟ ಅನುಭವಿಸಿದವು. ಫಾರ್ಮಾ, ರಿಯಾಲ್ಟಿ, ಎಫ್ಎಂಸಿಜಿ ಹೊರತುಪಡಿಸಿ, ಇತರ ಎಲ್ಲಾ ವಲಯ ಸೂಚ್ಯಂಕಗಳು ಲೋಹವು ಶೇಕಡಾ 2 ರಷ್ಟು ಮತ್ತು ಪಿಎಸ್ಯು ಬ್ಯಾಂಕ್ ಶೇಕಡಾ 1 ರಷ್ಟು ಏರಿಕೆಯಾಗಿ ಕೊನೆಗೊಂಡಿತು. ಬಿಎಸ್ಇ ಮಿಡ್ಕ್ಯಾಪ್ ಸೂಚ್ಯಂಕವು ಶೇಕಡಾ 0.8 ರಷ್ಟು ಮತ್ತು ಸ್ಮಾಲ್ಕ್ಯಾಪ್ ಸೂಚ್ಯಂಕವು ಶೇಕಡಾ 1 ರಷ್ಟು ಏರಿಕೆಯಾಗಿದೆ. https://kannadanewsnow.com/kannada/the-central-government-is-patting-itself-on-the-back-by-cutting-the-gst-it-itself-had-increased-cm-siddaramaiah-sarcastically/ https://kannadanewsnow.com/kannada/alert-smokers-beware-cigarettes-can-cause-these-serious-diseases/
ಮೈಸೂರು: ಬಿಹಾರ ಚುನಾವಣೆಯ ಹಿನ್ನಲೆಯಲ್ಲಿ ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿರುವ ಕೇಂದ್ರ ಸರ್ಕಾರದ ಈ ನಿರ್ಧಾರದಿಂದ ರಾಜ್ಯಕ್ಕೆ ಅಂದಾಜು 15 ಸಾವಿರ ಕೋಟಿ ರೂ.ಗಳ ನಷ್ಟವಾಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಮೈಸೂರಿನ ತಮ್ಮ ನಿವಾಸದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಜಿಎಸ್ ಟಿ ಉತ್ಸವ ಆಚರಿಸುವಂತೆ ಕೇಂದ್ರ ಸರ್ಕಾರ ತಿಳಿಸಿರುವ ಬಗ್ಗೆ ಪ್ರತಿಕ್ರಿಯೆ ನೀಡಿ, 2017 ರಲ್ಲಿ ಕೇಂದ್ರ ಸರ್ಕಾರವೇ ಜಿಎಸ್ ಟಿ ಯನ್ನು ಜಾರಿಗೆ ತಂದು ಜಿಎಸ್ ಟಿ ದರ ನಿಗದಿಪಡಿಸಿದರು. ಕಳೆದ ಎಂಟು ವರ್ಷದಿಂದ ಹೆಚ್ಚಿನ ದರ ಪಡೆದಿರುವ ಕೇಂದ್ರಸರ್ಕಾರ, ಆ ಹಣವನ್ನು ಮರಳಿ ನೀಡುವರೇ? ತಾವೇ ಹೆಚ್ಚಿಸಿದ ಜಿಎಸ್ ಟಿ ದರವನ್ನು ತಾವೇ ಕಡಿಮೆ ಮಾಡಿ, ತಮ್ಮ ಬೆನ್ನು ತಾವೇ ತಟ್ಟಿಕೊಳ್ಳುವ ಕೆಲಸದಲ್ಲಿ ಕೇಂದ್ರ ತೊಡಗಿದೆ. ಬಿಹಾರದ ಚುನಾವಣೆಯಿರುವ ಕಾರಣ, ಜಿಎಸ್ ಟಿ ಯನ್ನು ಸರಳೀಕರಣಗೊಳಿಸಿ, ಕಡಿತಗೊಳಿಸಿದ್ದೇವೆ ಎಂದು ಹೇಳಿಕೊಳ್ಳುವ ಅವಶ್ಯಕತೆಯಿಲ್ಲ ಎಂದು ತಿಳಿಸಿದರು. ರಾಜ್ಯಕ್ಕೆ ಕೇಂದ್ರದ ಸುಮಾರು 17000 ಕೋಟಿ ಅನುದಾನದಲ್ಲಿ ಖೋತಾ ಕೇಂದ್ರದಿಂದ…
ಬೆಳಗಾವಿ : ಮಳೆ ಹಾನಿ ಪ್ರದೇಶಗಳಿಗೆ ಸಚಿವರು, ಅಧಿಕಾರಿಗಳು ಭೇಟಿ ನೀಡುತ್ತಿಲ್ಲ. ಎಲ್ಲರೂ ಜಾತಿ ಸಮೀಕ್ಷೆಯಲ್ಲಿ ಹಾಗೂ ಸಿಎಂ ಬದಲಾವಣೆಯ ಕ್ರಾಂತಿಯಲ್ಲಿ ನಿರತರಾಗಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಉತ್ತರ ಕರ್ನಾಟಕದಲ್ಲಿ ವಿವಿಧೆಡೆ ಮಳೆ ಹಾನಿ ಪರಿಶೀಲನೆ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕುಷ್ಕಿಗೆ ಎಕರೆಗೆ 25,000 ರೂ. ನೀರಾವರಿ ಜಮೀನಿಗೆ ಎಕರೆಗೆ 50,000 ರೂ. ಪರಿಹಾರ ನೀಡಬೇಕು. ಎನ್ಡಿಆರ್ಎಫ್ ನಿಯಮದ ಪ್ರಕಾರ ನೀಡಿದರೂ. ರೈತರು ಖರ್ಚು ಮಾಡಿದಷ್ಟಾದರೂ ನೀಡಲಿ. ಸರ್ಕಾರವೇ ಕಳಪೆ ಬೀಜ ನೀಡಿದೆ ಎಂದು ರೈತರು ಹೇಳಿದ್ದಾರೆ. ನಾನೂ ಸೇರಿದಂತೆ ಬಿಜೆಪಿ ನಾಯಕರು ಪ್ರವಾಹವಾದ ಕಡೆಗಳಲ್ಲಿ ಪ್ರವಾಸ ಮಾಡಿದ್ದೇವೆ. ಆದರೆ ಸರ್ಕಾರದ ವತಿಯಿಂದ ಯಾರೂ ಪ್ರವಾಸ ಮಾಡಿಲ್ಲ. ಬಿಜೆಪಿ ಅವಧಿಯಲ್ಲಿ ಹಾನಿಯಾದಾಗ, ದುಪ್ಪಟ್ಟು ಪರಿಹಾರ ನೀಡಲಾಗಿತ್ತು. ಬೆಳೆ ಪರಿಹಾರ ಹಾಗೂ ಮನೆ ಹಾನಿ ಪರಿಹಾರವನ್ನು ಡಬಲ್ ಮಾಡಲಾಗಿತ್ತು. ಮನೆ ಬಾಗಿಲಿಗೆ ನೀರು ಬಂದರೂ 24 ಗಂಟೆಯೊಳಗೆ ಪರಿಹಾರ ನೀಡಲಾಗಿತ್ತು. ಜೊತೆಗೆ ಪ್ರತಿ ಮನೆಗೆ ಆಹಾರ ಕಿಟ್ಗಳನ್ನು ನೀಡಲಾಗಿತ್ತು.…
ತಿರುಪತಿ: ತಿರುಪತಿಯ ಹಲವಾರು ಪ್ರದೇಶಗಳಲ್ಲಿ ಬಾಂಬ್ ಬೆದರಿಕೆ ಇಮೇಲ್ಗಳು ಬಂದಿವೆ. ಭಯೋತ್ಪಾದಕರಿಂದ ಬಾಂಬ್ ಬೆದರಿಕೆ ಬಂದಿರುವುದರಿಂದ ಪೊಲೀಸರು ಅಲರ್ಟ್ ಆಗಿದ್ದಾರೆ. ಬಾಂಬ್ ನಿಷ್ಕ್ರಿಯ ದಳಗಳು ಹಲವಾರು ಪ್ರದೇಶಗಳಲ್ಲಿ ತಪಾಸಣೆ ನಡೆಸಿವೆ. ಭಕ್ತರು ಕಿಕ್ಕಿರಿದು ತುಂಬಿರುವ ರೈಲ್ವೆ ನಿಲ್ದಾಣ, ಬಸ್ ನಿಲ್ದಾಣ ಮತ್ತು ವಿಷ್ಣು ನಿವಾಸದಲ್ಲಿ ವಿಶೇಷ ಬಾಂಬ್ ದಳ ಮತ್ತು ಶ್ವಾನ ದಳಗಳನ್ನು ನಡೆಸಲಾಗಿದೆ. ತಮಿಳುನಾಡಿನಲ್ಲಿ ಬಾಂಬ್ ಬೆದರಿಕೆ ವಿಷಯ ಮತ್ತೊಮ್ಮೆ ಕೋಲಾಹಲ ಸೃಷ್ಟಿಸಿದೆ. ಶುಕ್ರವಾರ ಬೆಳಿಗ್ಗೆ ರಾಜ್ಯ ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, ರಾಜ್ಯಪಾಲ ಆರ್.ಎನ್. ರವಿ ಅವರ ನಿವಾಸ, ಚಲನಚಿತ್ರ ನಟಿ ತ್ರಿಶಾ ಅವರ ನಿವಾಸ ಮತ್ತು ಬಿಜೆಪಿ ಪ್ರಧಾನ ಕಚೇರಿಗೆ ಬೆದರಿಕೆ ಕರೆಗಳು ಬಂದಿವೆ. ಈ ಹಿನ್ನೆಲೆಯಲ್ಲಿ, ತಕ್ಷಣ ಎಚ್ಚೆತ್ತ ಪೊಲೀಸರು ಮತ್ತು ಅಧಿಕಾರಿಗಳು ಶೋಧ ನಡೆಸುತ್ತಿದ್ದಾರೆ. ಬಾಂಬ್ ದಳ ಮತ್ತು ಶ್ವಾನ ದಳಗಳು ಪರಿಶೀಲನೆ ನಡೆಸಿವೆ. ತಮಿಳುನಾಡಿನ ಹಲವಾರು ರಾಜಕೀಯ ಮತ್ತು ಚಲನಚಿತ್ರ ವ್ಯಕ್ತಿಗಳಿಗೆ ಬಾಂಬ್ ಬೆದರಿಕೆ ಕರೆಗಳು ಬಂದ ಹಿನ್ನೆಲೆಯಲ್ಲಿ.. ತಿರುಪತಿಯಲ್ಲಿರುವ ಪೊಲೀಸ್ ವಿಶೇಷ ಘಟಕವನ್ನು…
ಚೆನ್ನೈ: ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಕನಿಷ್ಠ ಎಂಟು ಮಕ್ಕಳ ಸಾವಿಗೆ ಈ ಸಿರಪ್ ಕಾರಣ ಎಂಬ ಮಾಧ್ಯಮ ವರದಿಗಳ ನಂತರ, ಔಷಧ ನಿಯಂತ್ರಣ ಆಡಳಿತ ಇಲಾಖೆ (ಡಿಡಿಸಿಎ) ತಮಿಳುನಾಡಿನಲ್ಲಿ ಕೋಲ್ಡ್ರಿಫ್ ಕೆಮ್ಮಿನ ಸಿರಪ್ ಮಾರಾಟವನ್ನು ನಿಷೇಧಿಸಿದೆ ಮತ್ತು ತಯಾರಕರ ಕಾಂಚೀಪುರಂ ಸ್ಥಾವರದಲ್ಲಿ ಅದರ ಎಲ್ಲಾ ಸ್ಟಾಕ್ ಅನ್ನು ಸ್ಥಗಿತಗೊಳಿಸಿದೆ. ರಾಜ್ಯದ ಚಿಂದ್ವಾರ ಜಿಲ್ಲೆಯಲ್ಲಿ ಮಕ್ಕಳ ಸಾವಿಗೆ ಸಂಬಂಧಿಸಿದಂತೆ ಮಧ್ಯಪ್ರದೇಶ (ಎಂಪಿ) ನಿಯಂತ್ರಕ, ಆಹಾರ ಮತ್ತು ಔಷಧ ಆಡಳಿತದಿಂದ ಬಂದ ಸಂವಹನದ ನಂತರ ಈ ಕ್ರಮ ಕೈಗೊಳ್ಳಲಾಗಿದೆ. ಕಳೆದ ಮೂರು ವಾರಗಳಲ್ಲಿ ಆರು ಮಕ್ಕಳ ಸಾವಿಗೆ ಈ ಸಿರಪ್ ಕಾರಣ ಎಂದು ಶಂಕಿಸಲಾಗಿದೆ. ಔಷಧ ನಿಯಂತ್ರಣ ಮತ್ತು ನಿಯಂತ್ರಣ ಮತ್ತು ಪರವಾನಗಿ ಪ್ರಾಧಿಕಾರದ ಉಪ ನಿರ್ದೇಶಕಿ ಎಸ್ ಗುರುಭಾರತಿ, ರಾಜ್ಯಾದ್ಯಂತದ ಎಲ್ಲಾ ಔಷಧ ನಿರೀಕ್ಷಕರಿಗೆ ಔಷಧಾಲಯಗಳು ಕೋಲ್ಡ್ರಿಫ್ ಮಾರಾಟವನ್ನು ತಡೆಯಲು ಮತ್ತು ಮುಂದಿನ ಆದೇಶದವರೆಗೆ ಲಭ್ಯವಿರುವಲ್ಲೆಲ್ಲಾ ಸ್ಟಾಕ್ ಅನ್ನು ಸ್ಥಗಿತಗೊಳಿಸಲು ಕೇಳಲಾಗಿದೆ ಎಂದು ಟಿಎನ್ಐಇಗೆ ತಿಳಿಸಿದರು. ಸಾವಿಗೆ ಕಾರಣವೆಂದು ಶಂಕಿಸಲಾದ ಕೋಲ್ಡ್ರಿಫ್ನ ಒಂದೇ…













