Author: ವಸಂತ ಬಿ ಈಶ್ವರಗೆರೆ

ವಸಂತ ಬಿ ಈಶ್ವರಗೆರೆ (Vasantha B Eshwaragere) ಅವರು ಕರ್ನಾಟಕದ ಪತ್ರಕರ್ತರು ಮತ್ತು ಕವಿ. ಉದಯ ನ್ಯೂಸ್, ಟಿವಿ5 ಕನ್ನಡ ಸೇರಿದಂತೆ ವಿವಿಧ ಸುದ್ದಿ ಮಾಧ್ಯಮಗಳಲ್ಲಿ ಸುಮಾರು 15 ವರ್ಷಗಳ ಅನುಭವವನ್ನು ಹೊಂದಿದ್ದಾರೆ. ಪ್ರಸ್ತುತ ಅವರು Kannada News Now ಡಿಜಿಡಿಲ್‌ ಮಾಧ್ಯಮದಲ್ಲಿ ಸಂಪಾದಕರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರು ತಾಜಾ ಸುದ್ದಿ, ಸಾಹಿತ್ಯ, ಸಾಮಾಜಿಕ ವರದಿಗಾರಿಕೆ, ನ್ಯಾಯಾಂಗ ಸಂಬಂಧಿತ ವರದಿ ಮತ್ತು ಶಿಕ್ಷಣ ಕ್ಷೇತ್ರಕ್ಕೆ ಸಂಬಂಧಿಸಿದ ಸುದ್ದಿಗಳ ವರದಿಯಲ್ಲಿ ಸಕ್ರಿಯರಾಗಿದ್ದಾರೆ. ಗುಡವಿ ಪಕ್ಷಿಧಾಮದಂತಹ ಪ್ರವಾಸಿ ತಾಣಗಳ ಕುರಿತು ಲೇಖನಗಳನ್ನು ಬರೆದಿದ್ದಾರೆ.

ಶಿವಮೊಗ್ಗ : ದೀಪಾವಳಿ ಹಬ್ಬದ ಹಿನ್ನಲೆಯಲ್ಲಿ ಸಾರ್ವಜನಿಕರು ಮೃಗಾಲಯ ವೀಕ್ಷಣೆಗೆ ಹಾಗೂ ಶಾಲಾ/ಕಾಲೇಜು ವಿದ್ಯಾರ್ಥಿಗಳು ಪ್ರವಾಸಕ್ಕೆಂದು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸುತ್ತಿರುವ ಕಾರಣ ಇಲ್ಲಿಗೆ ಆಗಮಿಸುವ ಪ್ರವಾಸಿಗರಿಗೆ ಪ್ರಕೃತಿ ಶಿಕ್ಷಣ ನೀಡುವ ಸಲುವಾಗಿ ಹುಲಿ-ಸಿಂಹಧಾಮದಲ್ಲಿನ ಜೂ ಹಾಗೂ ಸಫಾರಿ ವೀಕ್ಷಣೆಯನ್ನು ದಿನಾಂಕ:21.10.2025 ರ ಮಂಗಳವಾರವೂ ಸಹ ತೆರೆದಿರುತ್ತದೆ.  ಪ್ರವಾಸಿಗರು ಈ ಅವಕಾಶವನ್ನು ಸದುಪಯೋಗ ಪಡೆದುಕೊಳ್ಳುವಂತೆ ತ್ಯಾವರೆಕೊಪ್ಪ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.. https://kannadanewsnow.com/kannada/ban-on-private-events-in-government-school-premises-in-the-state-order-issued-in-2013-letter-goes-viral/ https://kannadanewsnow.com/kannada/good-news-for-the-people-of-maddur-mandya-government-orders-upgrading-these-schools-to-karnataka-public-schools/

Read More

ಬೆಂಗಳೂರು: ಬೈಕ್‌ ಖರೀದಿಯ ಕೂಡಲೇ ಇಎಂಐ ಪಾವತಿ ಶುರುವಾಗುವುದು ಸಹಜ, ಆದರೆ, ಕ್ಲಾಸಿಕ್‌ ಲೆಜೆಂಡ್ಸ್‌ ತನ್ನ ಗ್ರಾಹಕರಿಗಾಗಿ “ರೈಡ್ ನೌ, ಪೇ ಇನ್ 2026” ಎಂಬ ವಿಶೇಷ ಕೊಡುಗೆ ಘೊಷಿಸಿದ್ದು, ಈ ವರ್ಷದಲ್ಲಿ ಬೈಕ್‌ ಖರೀದಿಸುವ ಗ್ರಾಹಕರು, 2026ರ ಪ್ರಾರಂಭದಿಂದ ಇಎಂಐ ಪಾವತಿಸುವ ಅವಕಾಶ ನೀಡಿದೆ. ಎಲ್‌ & ಟಿ ಫೈನಾನ್ಸ್‌ ಸಹಭಾಗಿತ್ವದಲ್ಲಿ ಈ ಕೊಡುಗೆ ಘೊಷಿಸಿದದ್ದು, ಕ್ಲಾಸಿಕ್ ಮೋಟಾರ್‌ ಬೈಕ್‌ ಖರೀದಿಯ ಕನಸು ಹೊಂದಿರುವವರು ಈ ಕೊಡುಗೆ ಪಡೆದುಕೊಳ್ಳಬಹುದು. ಕ್ಲಾಸಿಕ್ ಲೆಜೆಂಡ್ಸ್ ನ ಮುಖ್ಯ ವ್ಯವಹಾರ ಅಧಿಕಾರಿ ಶರದ್‌ ಅಗರವಾಲ್‌ ಮಾತನಾಡಿ, ಖರೀದಿದಾರರು ಈಗ ಅಗತ್ಯವಿರುವ ಡೌನ್ ಪೇಮೆಂಟ್ ನಂತರ ತಮ್ಮ ನೆಚ್ಚಿನ ಜಾವಾ, ಯೆಜ್ಡಿ ಅಥವಾ BSA ಮೋಟಾರ್‌ಸೈಕಲ್‌ನ ವಿತರಣೆಯನ್ನು ಪಡೆಯಬಹುದು. ಸಾಲ ವಿತರಣೆಯ ದಿನಾಂಕದ ನಂತರದ ಮೊದಲ ಎರಡು ತಿಂಗಳು, ಸಂಗ್ರಹವಾದ ಬಡ್ಡಿಯನ್ನು ಮಾತ್ರ ಪಾವತಿಸಬೇಕಾಗುತ್ತದೆ ಮತ್ತು ಯಾವುದೇ ಮೂಲ EMI ಬಾಕಿ ಇರುವುದಿಲ್ಲ. ಅಕ್ಟೋಬರ್ 2025 ರಲ್ಲಿ ಸಾಲವನ್ನು ವಿತರಿಸಿದರೆ, ಮೊದಲ ನಿಯಮಿತ EMI ಜನವರಿ…

Read More

ಪಲು: ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಗುರುವಾರ 6.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ. ಭೂಕಂಪವು 70 ಕಿಮೀ (43.5 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು ಅದು ಹೇಳಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಹಾನಿ ಅಥವಾ ಯಾವುದೇ ರೀತಿಯ ಸಾವುನೋವು ವರದಿಯಾಗಿಲ್ಲ. ಯುಎಸ್‌ಜಿಎಸ್ ಪ್ರಕಾರ, 2.31 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 138.86 ಡಿಗ್ರಿ ಪೂರ್ವ ರೇಖಾಂಶದಲ್ಲಿ ಸಂಭವಿಸಿದ ಭೂಕಂಪದ ಕೇಂದ್ರಬಿಂದುವು ಅಬೆಪುರದಿಂದ ಸುಮಾರು 200 ಕಿ.ಮೀ ದೂರದಲ್ಲಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ತಿಳಿಸಿದೆ. ಫಿಲಿಪೈನ್ಸ್‌ನ ದಕ್ಷಿಣ ಕರಾವಳಿಯಲ್ಲಿ 7.4 ತೀವ್ರತೆಯ ಭೂಕಂಪ ಸಂಭವಿಸಿ ಕನಿಷ್ಠ ಏಳು ಜನರು ಸಾವನ್ನಪ್ಪಿದ ಮರುದಿನ ಇದು ಸಂಭವಿಸಿದೆ. ಭೂಕಂಪದ ನಂತರ, ಯುಎಸ್ ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರವು ಫಿಲಿಪೈನ್ಸ್‌ನ ದಕ್ಷಿಣ ಮಿಂಡಾನಾವೊ ಪ್ರದೇಶ ಮತ್ತು ಇಂಡೋನೇಷ್ಯಾದ ಉತ್ತರ ಸುಲಾವೆಸಿಗೆ ಸುನಾಮಿ ಎಚ್ಚರಿಕೆಯನ್ನು ನೀಡಿತು. ಆದಾಗ್ಯೂ, ನಂತರ…

Read More

ಮಂಡ್ಯ: ಜಿಲ್ಲೆಯ ಮದ್ದೂರಿನ ಜನತೆಗೆ ಗುಡ್ ನ್ಯೂಸ್ ಎನ್ನುವಂತೆ ಒಂದೇ ಸೂರಿನಡಿಯಲ್ಲಿ ದ್ವಿತೀಯ ಪಿಯುಸಿಯವರೆಗೆ ಶೈಕ್ಷಣಿಕ ವಿದ್ಯಾಭ್ಯಾಸಕ್ಕೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಮದ್ದೂರಲ್ಲಿ ಮೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಲು ಸರ್ಕಾರ ಅನುಮತಿ ನೀಡಿ ಅಧಿಕೃತ ಆದೇಶ ಮಾಡಿದೆ. ಈ ಬಗ್ಗೆ ಮಾಹಿತಿ ಹಂಚಿಕೊಂಡಿರುವಂತ ಮದ್ದೂರು ಕ್ಷೇತ್ರ ಶಾಸಕ ಕೆ.ಎಂ ಉದಯ್ ಅವರು, ಮದ್ದೂರು ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ವಿಧ್ಯಾರ್ಥಿಗಳಿಗೆ ಶೈಕ್ಷಣಿಕ ಅಭಿವೃದ್ಧಿ ದೃಷ್ಟಿಯಿಂದ ಕೆಪಿಎಸ್ ಶಾಲೆಗಳನ್ನಾಗಿ ಉನ್ನತಿಕರಿಸುವಂತೆ ಶಿಕ್ಷಣ ಸಚಿವರಾದ ಮಧು ಬಂಗಾರಪ್ಪ ಅವರಿಗೆ ಮನವಿ ಸಲ್ಲಿಸಲಾಗಿತ್ತು. ನಮ್ಮ ಮನವಿಗೆ ಪ್ರತಿಸ್ಪಂದಿಸಿರುವಂತ ಅವರು ಮದ್ದೂರು ತಾಲೂಕಿನ ಅಣ್ಣೂರು, ಮಲ್ಲನಕುಪ್ಪೆ ಹಾಗೂ ಕೆ.ಬೆಳ್ಳೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕ್ ಶಾಲೆಯನ್ನಾಗಿ ಉನ್ನತೀಕರಿಸಿ ಅಧಿಕೃತ ಆದೇಶ ಮಾಡಿದ್ದಾರೆ ಎಂದು ಹೇಳಿದ್ದಾರೆ. ಮದ್ದೂರು ತಾಲ್ಲೂಕಿನ ಮೂರು ಶಾಲೆಗಳನ್ನು ಕರ್ನಾಟಕ ಪಬ್ಲಿಕಾ ಶಾಲೆಗಳನ್ನಾಗಿ ಉನ್ನತೀಕರಿಸಿದ್ದಾರೆ. ಇದರಿಂದ ಈ ಶಾಲೆಗಳಲ್ಲಿ ಇನ್ಮುಂದೆ LKGಯಿಂದ ದ್ವಿತೀಯ ಪಿಯುಸಿವರೆಗೆ ಒಂದೆಡೆಯೇ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತೆ ಆಗಲಿದೆ. ನಮ್ಮ ಮನವಿಗೆ ಸ್ಪಂದಿಸಿ ಮದ್ದೂರಿಗೆ…

Read More

ಬೆಂಗಳೂರು: ರಾಜ್ಯದ ಸರ್ಕಾರಿ ಸ್ಥಳದಲ್ಲಿ ರಾಷ್ಟ್ರೀಯ ಸ್ವಯಂ ಸೇವಾ ಸಂಘ( RSS) ಚಟುವಟಿಕೆ ನಿಷೇಧಿಸುವಂತೆ ಸಚಿವ ಪ್ರಿಯಾಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಇದಕ್ಕೆ ಬಿಜೆಪಿ, RSS ನಾಯಕರು ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದಲ್ಲೇ, ನಿಷೇಧ ಮಾಡಿ ನೋಡಿ ಎಂಬುದಾಗಿ ಸವಾಲ್ ಹಾಕಿದ್ದರು. ಇದರ ನಡುವೆ ರಾಜ್ಯದ ಸರ್ಕಾರಿ ಶಾಲಾ ಆವರಣದಲ್ಲಿ ಖಾಸಗಿ ಕಾರ್ಯಕ್ರಮವನ್ನು ಬ್ಯಾನ್ ಮಾಡಲಾಗಿತ್ತು. 2013ರಲ್ಲಿಯೇ ಶಾಲಾ ಶಿಕ್ಷಣ ಇಲಾಖೆ ಹೊರಡಿಸಿದ್ದಂತ ಆದೇಶ ಪತ್ರ ಈಗ ವೈರಲ್ ಆಗಿದೆ. ರಾಜ್ಯದ ಸರ್ಕಾರಿ ಸ್ಥಳಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆ ನಿಷೇಧ ಮಾಡುವಂತೆ ಸಚಿವ ಪ್ರಿಯಾಂಕ್ ಖರ್ಗೆ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯಗೆ ಪತ್ರ ಬರೆದಿದ್ದು ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿತ್ತು. ಜೊತೆಗೆ ಸಚಿವ ಪ್ರಿಯಾಂಕ್ ಖರ್ಗೆಗೂ ಈ ಸಂಬಂಧ ಬೆದರಿಕೆ ಹಾಕಲಾಗಿತ್ತು. ಇದೀಗ ಬೆದರಿಕೆ ಹಾಕಿದಂತ ವ್ಯಕ್ತಿಯನ್ನು ಪತ್ತೆ ಹಚ್ಚಿರುವಂತ ಪೊಲೀಸರು, ಆತನ ವಿರುದ್ಧ ಎಫ್ಐಆರ್ ಕೂಡ ದಾಖಲಿಸಿದ್ದಾರೆ. ಸಿಎಂ ಸಿದ್ಧರಾಮಯ್ಯಗೆ ಮತ್ತೊಂದು ಪತ್ರ ಬರೆದ ಸಚಿವ ಪ್ರಿಯಾಂಕ್…

Read More

ಪಲು: ಇಂಡೋನೇಷ್ಯಾದ ಪಪುವಾ ಪ್ರಾಂತ್ಯದಲ್ಲಿ ಗುರುವಾರ 6.7 ತೀವ್ರತೆಯ ಭೂಕಂಪ ಸಂಭವಿಸಿದೆ ಎಂದು ಯುನೈಟೆಡ್ ಸ್ಟೇಟ್ಸ್ ಭೂವೈಜ್ಞಾನಿಕ ಸಮೀಕ್ಷೆ (ಯುಎಸ್‌ಜಿಎಸ್) ತಿಳಿಸಿದೆ. ಭೂಕಂಪವು 70 ಕಿಮೀ (43.5 ಮೈಲುಗಳು) ಆಳದಲ್ಲಿ ಸಂಭವಿಸಿದೆ ಎಂದು ಅದು ಹೇಳಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಹಾನಿ ಅಥವಾ ಯಾವುದೇ ರೀತಿಯ ಸಾವುನೋವು ವರದಿಯಾಗಿಲ್ಲ. ಯುಎಸ್‌ಜಿಎಸ್ ಪ್ರಕಾರ, 2.31 ಡಿಗ್ರಿ ದಕ್ಷಿಣ ಅಕ್ಷಾಂಶ ಮತ್ತು 138.86 ಡಿಗ್ರಿ ಪೂರ್ವ ರೇಖಾಂಶದಲ್ಲಿ ಸಂಭವಿಸಿದ ಭೂಕಂಪದ ಕೇಂದ್ರಬಿಂದುವು ಅಬೆಪುರದಿಂದ ಸುಮಾರು 200 ಕಿ.ಮೀ ದೂರದಲ್ಲಿದೆ. ಆದಾಗ್ಯೂ, ಇಲ್ಲಿಯವರೆಗೆ ಯಾವುದೇ ಸುನಾಮಿ ಎಚ್ಚರಿಕೆ ನೀಡಲಾಗಿಲ್ಲ ಎಂದು ಪೆಸಿಫಿಕ್ ಸುನಾಮಿ ಎಚ್ಚರಿಕೆ ಕೇಂದ್ರ ತಿಳಿಸಿದೆ.

Read More

ಶಿವಮೊಗ್ಗ: ರಾಜ್ಯ ಸರ್ಕಾರವು ಸಾಗರ ತಾಲ್ಲೂಕಿನ ಸಿರಿವಂತೆ, ತ್ಯಾಗರ್ತಿ, ಬ್ಯಾಕೋಡಿನಲ್ಲಿ ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ನಿರ್ಮಿಸಲು ಅನುಮತಿಸಿದೆ. ಇದರಿಂದಾಗಿ ಎಲ್ ಕೆ ಜಿಯಿಂದ ದ್ವಿತೀಯ ಪಿಯುಸಿ ವರೆಗೆ ಒಂದೇ ಸೂರಿನಡಿ ಮಕ್ಕಳಿಗೆ ಶಿಕ್ಷಣ ದೊರಕಿಸಿಕೊಡುವಂತ ವ್ಯವಸ್ಥೆಯನ್ನು ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ಮಾಡಿದ್ದಾರೆ. ಈ ಮೂಲಕ ಸಾಗರ ತಾಲ್ಲೂಕಿನ ಜನತೆಗೆ ಸರ್ಕಾರ ಗುಡ್ ನ್ಯೂಸ್ ನೀಡಿದ್ದಾರೆ. ಶಿವಮೊಗ್ಗ ಜಿಲ್ಲೆಯ ಸಾಗರ ವಿಧಾನಸಭಾ ಕ್ಷೇತ್ರಕ್ಕೂ ಕರ್ನಾಟಕ ಪಬ್ಲಿಕ್ ಶಾಲೆ ಮಂಜೂರು ಮಾಡುವಂತೆ ಜಿಲ್ಲಾ ಉಸ್ತುವಾರಿ ಹಾಗೂ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರಿಗೆ ಶಾಸಕ ಗೋಪಾಲಕೃಷ್ಣ ಬೇಳೂರು ಮನವಿ ಮಾಡಿದ್ದರು. ಈ ಮನವಿಗೆ ಪುರಸ್ಕರಿಸಿರುವಂತ ಅವರು ಸಾಗರದ ಸಿರಿವಂತೆ, ತ್ಯಾಗರ್ತಿ, ಬ್ಯಾಕೋಡು ಶಾಲೆ ವ್ಯಾಪ್ತಿಯ ಐದು ಕಿಲೋಮೀಟರ್ ನ ಎಲ್ಲಾ LKGಯಿಂದ ದ್ವಿತೀಯ ಪಿಯುಸಿವರೆಗಿನ ಶಾಲೆಗಳನ್ನು ಸೇರಿಸಿ ಕರ್ನಾಟಕ ಪಬ್ಲಿಕ್ ಶಾಲೆಯಾಗಿ ಉನ್ನತೀಕರಿಸಲು ಅನುಮೋದನೆ ನೀಡಲಾಗಿದೆ. ಹೀಗಾಗಿ ಎಲ್ ಕೆ ಜಿಯಿಂದ ದ್ವಿತೀಯ ಪಿಯುಸಿವರೆಗೆ ಒಂದೆಡೆಯೇ ವಿದ್ಯಾರ್ಥಿಗಳಿಗೆ ಶಿಕ್ಷಣ ದೊರೆಯುವಂತೆ ಆಗಲಿದೆ.…

Read More

ಬೆಂಗಳೂರು: ರಾಜ್ಯದ SSLC ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಇನ್ಮುಂದೆ ಆಂತರೀಕ ಮೌಲ್ಯಮಾಪನ ಮತ್ತು ಬಾಹ್ಯ ಪರೀಕ್ಷೆ ಎರಡೂ ಸೇರಿ ಒಟ್ಟಾರೆ ಶೇ.33% ಅಂಕಗಳನ್ನು ಪಡೆದರೇ ಪಾಸ್ ಮಾಡಲಿದೆ. ಅಂದರೇ ಆಂತರೀಕ ಮೌಲ್ಯ ಮಾಪನದಲ್ಲಿ 20 ಅಂಕದಲ್ಲಿ 20 ಪಡೆದು, ವಾರ್ಷಿಕ ಪರೀಕ್ಷೆಯಲ್ಲಿ 13 ಅಂಕವನ್ನು ಪಡೆದರೂ ಒಟ್ಟು 33 ಅಂಕ ತಗೆದೆರೂ ಎಸ್ ಎಸ್ ಎಲ್ ಸಿ ಪರೀಕ್ಷೆಯ ಆಯಾ ವಿಷಯದಲ್ಲಿ ಪಾಸ್ ಆಗಲಿದ್ದಾರೆ.  ಇಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದು, ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಕಾಯ್ದೆ, 1966 (1966ರ ಕರ್ನಾಟಕ ಅಧಿನಿಯಮ ಸಂಖ್ಯೆ 16) ಸೆಕ್ಷನ್ 26 ಮತ್ತು ಸೆಕ್ಷನ್ 27 ರ ಮೂಲಕ ಪದವಾದ ಅಧಿಕಾರವನ್ನು ಚಲಾಯಿಸಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯು, ಕರ್ನಾಟಕ ಸರ್ಕಾರದ ಅನುಮೋದನೆ ಮೇರೆಗೆ ಕರ್ನಾಟಕ ಪ್ರೌಢಶಿಕ್ಷಣ ಪರೀಕ್ಷಾ ಮಂಡಳಿ ಮೊದಲ ನಿಯಮಾವಳಿಗಳು, 1966ಗೆ…

Read More

ಬೆಂಗಳೂರು: ಪೊಲೀಸ್ ಮತ್ತು ಸೇನಾ‌ ಕ್ಯಾಂಟೀನ್ ಮಾದರಿಯಲ್ಲೇ ರಾಜ್ಯ ಸರಕಾರಿ ನೌಕರರಿಗೆ ದಿನನಿತ್ಯದ ಬದುಕಿಗೆ ಅಗತ್ಯವಿರುವ ಪ್ರತಿಯೊಂದು ವಸ್ತುವೂ ರಿಯಾಯಿತಿ ದರದಲ್ಲಿ ಸಿಗಬೇಕೆಂಬ ಉದ್ದೇಶದೊಂದಿಗೆ ಸರಕಾರಿ ಸ್ವಾಮ್ಯದ ಎಂಎಸ್‌ಐಎಲ್‌ ವತಿಯಿಂದ ಸೂಪರ್‌ ಮಾರ್ಕೆಟ್‌ ಆರಂಭಿಸುವ ಚಿಂತನೆ ಇದೆ ಎಂದು ಬೃಹತ್‌ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ ಬಿ ಪಾಟೀಲ ತಿಳಿಸಿದ್ದಾರೆ. ಈ ಸಂಬಂಧ ಅವರು ಖನಿಜ ಭವನದಲ್ಲಿ ಕೈಗಾರಿಕಾ ಇಲಾಖೆಯ ಪ್ರಧಾನ ಕಾರ್ಯದರ್ಶಿ ಸೆಲ್ವಕುಮಾರ್‌, ಎಂಎಸ್ಐಎಲ್ ವ್ಯವಸ್ಥಾಪಕ ನಿರ್ದೇಶಕ ಮನೋಜ ಕುಮಾರ ಸೇರಿದಂತೆ ಇತರ ಹಿರಿಯ ಅಧಿಕಾರಿಗಳೊಂದಿಗೆ ಬುಧವಾರ ಪ್ರಾಥಮಿಕ ಸುತ್ತಿನ ಸಭೆ ನಡೆಸಿದರು. ಬಳಿಕ ಮಾಹಿತಿ ನೀಡಿದ ಅವರು, ರಾಜ್ಯದ ಪೊಲೀಸ್, ಅರೆ ಸೇನಾ ಪಡೆಗಳ ನೌಕರರಿಗೆ ಈ ರೀತಿಯ ಕ್ಯಾಂಟೀನ್‌ ಸೌಲಭ್ಯವಿದೆ. ರಾಜ್ಯದಲ್ಲಿ 6 ಲಕ್ಷ ಸರಕಾರಿ ನೌಕರರಿದ್ದಾರೆ. ಅವರ ಕುಟುಂಬಗಳ ಹಿತದೃಷ್ಟಿಯಿಂದ ಇಂಥದ್ದೊಂದು ಉಪಕ್ರಮ ಆರಂಭಿಸುವುದು ನಮ್ಮ ಚಿಂತನೆಯಾಗಿದೆ. ಇದಕ್ಕೆ ಸಬ್ಸಿಡಿ ಅಥವಾ ತೆರಿಗೆ ವಿನಾಯಿತಿ ಪಡೆದುಕೊಳ್ಳುವುದು ಹೇಗೆಂದು ಆರ್ಥಿಕ ಇಲಾಖೆಯ ಜತೆ ಚರ್ಚಿಸಲಾಗುವುದು. ಒಟ್ಟಿನಲ್ಲಿ…

Read More

ಬೆಂಗಳೂರು: ರಾಜ್ಯದ ಪೊಲೀಸ್ ಇಲಾಖೆಯಲ್ಲಿ ಖಾಲಿ ಇರುವಂತ 2032 ಹುದ್ದೆಗಳ ಭರ್ತಿಗೆ ಸರ್ಕಾರ ಆದೇಶಿಸಿದೆ ಈ ಮೂಲಕ ಉದ್ಯೋಗಾಕಾಂಕ್ಷಿಗಳಿಗೆ ಸರ್ಕಾರ ಭರ್ಜರಿ ಸಿಹಿಸುದ್ದಿ ನೀಡಲಾಗಿದೆ.  ಈ ಕುರಿತಂತೆ ರಾಜ್ಯ ಸರ್ಕಾರ ಆದೇಶ ಮಾಡಿದ್ದು, ಕೆ.ಎಸ್.ಆರ್.ಪಿ. ಸ್ಪೆ.ಆರ್‌ಪಿಸಿ (ಪುರುಷ ಮತ್ತು ಮಹಿಳೆ) 1,500 ಹುದ್ದೆಗಳನ್ನು ಹಾಗೂ (ಸ್ಥಳೀಯ ವೃಂದದ) 336 ಹುದ್ದೆಗಳನ್ನು ಮತ್ತು ಐ.ಆರ್.ಬಿ., ಮುನಿರಾಬಾದ್ ಘಟಕದ 166 ಹುದ್ದೆಗಳಿಗೆ ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಈಗಾಗಲೇ ತಮ್ಮ ಕಛೇರಿಯಿಂದ ಕಳುಹಿಸಲಾದ ನೇರ ಮತ್ತು ಸಮತಳ ವರ್ಗೀಕರಣದ ವಿವರವನ್ನು ನೀಡಲಾಗಿದೆ ಎಂದಿದೆ. ಪೊಲೀಸ್‌ ಪ್ರಧಾನ ಕಛೇರಿಯ ಪತ್ರ ಸಂಖ್ಯೆ: 195/ಸಿಬ್ಬಂದಿ-1/2020-21 ದಿನಾಂಕ 13-10-2025ನ್ನು ಉಲ್ಲೇಖಿಸಿ, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಮತ್ತು ಕಾನ್ಸ್‌ ಟೇಬಲ್ ವೃಂದಗಳಿಗೆ ನೇರ ನೇಮಕಾತಿ ಪ್ರಕ್ರಿಯೆ ಕುರಿತು ಕೆಲವು ಅಂಶಗಳಿಗೆ ಸರ್ಕಾರದಿಂದ ಸ್ವೀಕೃತಗೊಂಡಿರುವ ಸ್ಪಷ್ಟಿಕರಣ ಹಾಗೂ ಆದೇಶಗಳಲ್ಲಿನ ನಿರ್ದೇಶನಗಳನ್ವಯ ಸಂಬಂಧಪಟ್ಟ ಘಟಕಗಳಿಂದ ವರ್ಗೀಕರಣವನ್ನು ಪಡೆದು ಪ್ರಸ್ತಾಪಿತ ಹುದ್ದೆಗಳನ್ನು ನೇರ ನೇಮಕಾತಿ ಮೂಲಕ ಭರ್ತಿ ಮಾಡಲು ಕ್ರಮಕ್ಕಾಗಿ ಕೋರಲಾಗಿರುತ್ತದೆ ಎಂದಿದೆ. ಆದ್ದರಿಂದ,…

Read More