Subscribe to Updates
Get the latest creative news from FooBar about art, design and business.
Author: kannadanewsnow09
ನವದೆಹಲಿ: ಪಾಕಿಸ್ತಾನದೊಂದಿಗೆ ಶಾಂತಿ ಸ್ಥಾಪಿಸುವ ಪ್ರತಿಯೊಂದು ಪ್ರಯತ್ನಕ್ಕೂ ಹಗೆತನ ಮತ್ತು ದ್ರೋಹ ಎದುರಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ ಮತ್ತು ದ್ವಿಪಕ್ಷೀಯ ಸಂಬಂಧಗಳನ್ನು ಸುಧಾರಿಸಲು ಇಸ್ಲಾಮಾಬಾದ್ನಲ್ಲಿನ ನಾಯಕತ್ವದ ಮೇಲೆ ಬುದ್ಧಿವಂತಿಕೆ ಮೇಲುಗೈ ಸಾಧಿಸುತ್ತದೆ ಎಂದು ಆಶಿಸಿದ್ದಾರೆ. ಭಾನುವಾರ ಬಿಡುಗಡೆಯಾದ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಪಾಡ್ಕ್ಯಾಸ್ಟ್ನಲ್ಲಿ, ಉಭಯ ದೇಶಗಳು ಹೊಸ ಜೀವನವನ್ನು ಪ್ರಾರಂಭಿಸಬಹುದು ಎಂಬ ಭರವಸೆಯೊಂದಿಗೆ 2014 ರಲ್ಲಿ ತಮ್ಮ ಪ್ರಮಾಣವಚನ ಸಮಾರಂಭಕ್ಕೆ ಪಾಕಿಸ್ತಾನದ ಪ್ರತಿಸ್ಪರ್ಧಿ ನವಾಜ್ ಷರೀಫ್ ಅವರನ್ನು ವಿಶೇಷವಾಗಿ ಆಹ್ವಾನಿಸಿದ್ದಾಗಿ ಮೋದಿ ನೆನಪಿಸಿಕೊಂಡರು. ಆದರೂ, ಶಾಂತಿಯನ್ನು ಬೆಳೆಸುವ ಪ್ರತಿಯೊಂದು ಉದಾತ್ತ ಪ್ರಯತ್ನಕ್ಕೂ ಹಗೆತನ ಮತ್ತು ದ್ರೋಹ ಎದುರಾಗಿದೆ. ಅವರ ಮೇಲೆ ಬುದ್ಧಿವಂತಿಕೆ ಮೇಲುಗೈ ಸಾಧಿಸುತ್ತದೆ. ಅವರು ಶಾಂತಿಯ ಮಾರ್ಗವನ್ನು ಆರಿಸಿಕೊಳ್ಳುತ್ತಾರೆ ಎಂದು ನಾವು ಪ್ರಾಮಾಣಿಕವಾಗಿ ಆಶಿಸುತ್ತೇವೆ ಎಂದು ಪ್ರಧಾನಿ ತಮ್ಮ ಮೂರು ಗಂಟೆಗಳಿಗೂ ಹೆಚ್ಚು ಕಾಲದ ಸಂವಾದದಲ್ಲಿ ಹೇಳಿದರು. ಪಾಕಿಸ್ತಾನದ ಜನರು ಸಹ ಶಾಂತಿಯನ್ನು ಬಯಸುತ್ತಾರೆ ಎಂದು ತಾನು ನಂಬುತ್ತೇನೆ ಎಂದು ಮೋದಿ ಹೇಳಿದರು. ಏಕೆಂದರೆ ಅವರು ಮುಗ್ಧ…
ಚಿತ್ರದುರ್ಗ: ಬೇಸಿಗೆ ಹೆಚ್ಚಾದಂತೆ ಬೆಂಕಿಯ ಅವಗಢಗಳು ಹೆಚ್ಚಾಗುತ್ತಿವೆ. ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿದ್ದಂತ ಬೈಕ್ ಒಂದರಲ್ಲಿ ದಿಢೀರ್ ಬೆಂಕಿ ಕಾಣಿಸಿಕೊಂಡು ಧಗಧಗಿಸಿ ಹೊತ್ತಿ ಉರಿದು, ಸುಟ್ಟು ಕರಕಲಾದಂತ ಘಟನೆ ಹಿರಿಯೂರಲ್ಲಿ ನಡೆದಿದೆ. ಚಿತ್ರದುರ್ಗ ಜಿಲ್ಲೆಯ ಹಿರಿಯೂರು ನಗರ ಪೊಲೀಸ್ ಠಾಣೆಯ ಆವರಣದಲ್ಲಿ ಇಂದು ಇಂತಹ ಘಟನೆ ನಡೆದಿದೆ. ಪೊಲೀಸ್ ಇಲಾಖೆಯ ಬೈಕ್ ಗೆ ಆಕಸ್ಮಿಕ ಬೆಂಕಿ ತಲುಗುಲಿ ಹೊತ್ತಿ ಉರಿದಿರುವಂತ ಘಟನೆ ನಡೆದಿದೆ. ಹಿರಿಯೂರು ನಗರ ಪೊಲೀಸ್ ಠಾಣೆಯ ಮುಂದೆ ನಿಲ್ಲಿಸಿದ್ದಂತ ಪೊಲೀಸರ ಬೈಕ್ ಇದ್ದಕ್ಕಿದ್ದಂತೆ ಬೆಂಕಿ ಹೊತ್ತಿಕೊಂಡಿದೆ. ಹೀಗೆ ಹೊತ್ತಿಕೊಂಡಂತ ಬೆಂಕಿ ಕ್ಷಣಾರ್ಧದಲ್ಲಿ ಇಡೀ ಬೈಕಿಗೆ ವ್ಯಾಪಿಸಿ ಧಗಧಗಿಸಿ ಹೊತ್ತಿ ಉರಿದಿದೆ. ಸ್ಥಳದಲ್ಲಿದ್ದಂತ ಪೊಲೀಸರು ಹರಸಾಹಸ ಪಟ್ಟು ಬೆಂಕಿಯನ್ನು ನಂದಿಸಿದ್ದಾರೆ. ಈ ವೇಳೆಗಾಗೇ ಬೈಕ್ ಸಂಪೂರ್ಣ ಸುಟ್ಟು ಕರಕಲಾಗಿರುವುದಾಗಿ ತಿಳಿದು ಬಂದಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/my-strength-lies-in-1-4-billion-indians-pm-modi/ https://kannadanewsnow.com/kannada/shocking-incident-transgender-stripped-naked-shaved-off-and-assaulted-in-kalaburagi/
ನವದೆಹಲಿ: ಅಮೆರಿಕದ ಕಂಪ್ಯೂಟರ್ ವಿಜ್ಞಾನಿ ಮತ್ತು ಜನಪ್ರಿಯ ಪಾಡ್ಕ್ಯಾಸ್ಟರ್ ಲೆಕ್ಸ್ ಫ್ರಿಡ್ಮನ್ ಅವರೊಂದಿಗಿನ ಸಂವಾದದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು, ನನ್ನ ಶಕ್ತಿ ನನ್ನ ಹೆಸರಿನಲ್ಲಿಲ್ಲ, ಬದಲಾಗಿ 1.4 ಬಿಲಿಯನ್ ಭಾರತೀಯರು ಮತ್ತು ದೇಶದ ಕಾಲಾತೀತ ಸಂಸ್ಕೃತಿ ಮತ್ತು ಪರಂಪರೆಯಲ್ಲಿದೆ ಎಂದು ಹೇಳಿದ್ದಾರೆ. ಅವರ ಶಕ್ತಿ ಅವರ ಹೆಸರಿನಲ್ಲಿಲ್ಲ ಬದಲಾಗಿ 1.4 ಬಿಲಿಯನ್ ಭಾರತೀಯರ ಬೆಂಬಲದಲ್ಲಿದೆ ಎಂದು ಅವರು ಒತ್ತಿ ಹೇಳಿದರು. ಪಾಡ್ಕ್ಯಾಸ್ಟ್ ಸಮಯದಲ್ಲಿ, ಭಾರತದ ಧ್ವನಿ ವಿಶ್ವಾದ್ಯಂತ ಹೇಗೆ ಪ್ರತಿಧ್ವನಿಸುತ್ತದೆ ಎಂಬುದನ್ನು ಪ್ರಧಾನಿ ಮೋದಿ ಒತ್ತಿ ಹೇಳಿದರು. ನಾನು ಎಲ್ಲೋ ಹೋದಾಗಲೆಲ್ಲಾ, ಜನರ ಆಕಾಂಕ್ಷೆಗಳು ಮತ್ತು ಕನಸುಗಳೊಂದಿಗೆ ಹೋಗುತ್ತೇನೆ. ನಾನು ವಿಶ್ವ ನಾಯಕನೊಂದಿಗೆ ಕೈಕುಲುಕಿದಾಗಲೆಲ್ಲಾ, ಭಾರತದ 140 ಕೋಟಿ ನಾಗರಿಕರು ನನ್ನೊಂದಿಗೆ ಕೈಕುಲುಕುತ್ತಾರೆ ಎಂದು ಅವರು ಹೇಳಿದರು. ಶಾಂತಿಯ ಸಂದೇಶವಾಹಕನಾಗಿ ಭಾರತ ಭಾರತದ ಇತಿಹಾಸದಲ್ಲಿ ಆಳವಾಗಿ ಬೇರೂರಿರುವ ಶಾಂತಿಯ ಪರಂಪರೆಯ ಬಗ್ಗೆಯೂ ಪಿಎಂ ಮೋದಿ ಮಾತನಾಡಿದರು. ನಾವು ಶಾಂತಿಯ ಬಗ್ಗೆ ಮಾತನಾಡುವಾಗ, ಜಗತ್ತು ಕೇಳುತ್ತದೆ ಏಕೆಂದರೆ ಈ ದೇಶವು ಗೌತಮ…
ಚಿತ್ರದುರ್ಗ: ಜಿಲ್ಲೆಯ ಪ್ರಸಿದ್ಧ ಜಾತ್ರೆಯಲ್ಲಿ ನಾಯಕನಹಟ್ಟಿ ರಥೋತ್ಸವೂ ಒಂದಾಗಿದೆ. ಈ ರಥೋತ್ಸವದ ವೇಳೆಯಲ್ಲಿ ಸ್ವೀಟ್ ಕಾರ್ನ್ ಗಾಡಿಯೊಂದಕ್ಕೆ ದಿಢೀರ್ ಬೆಂಕಿ ಹೊತ್ತಿಕೊಂಡು ಧಗಧಗಿಸಿ ಉರಿದಿದೆ. ಕೂಡಲೇ ಸ್ಥಳದಲ್ಲಿದ್ದವರು ನಂದಿಸಿದ ಪರಿಣಾಮ ಭಾರೀ ಅನಾಹುತವೊಂದು ತಪ್ಪಿದಂತೆ ಆಗಿದೆ. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕಿನ ಪ್ರಸಿದ್ಧ ನಾಯಕನಹಟ್ಟಿಯ ಶ್ರೀ ಗುರು ತಿಪ್ಪೇರುದ್ರಸ್ವಾಮಿಯವರ ರಥೋತ್ಸವ ಅದ್ಧೂರಿಯಾಗಿ ನಡೆಯಿತು. ಇಂದು ನಡೆದಂತ ರಥೋತ್ಸವದ ಸಂದರ್ಭದಲ್ಲೇ ಸ್ವೀಟ್ ಕಾರ್ನ್ ಗಾಡಿಯೊಂದಕ್ಕೆ ಬೆಂಕಿ ಬಿದ್ದಿದೆ. ಇದರಿಂದಾಗಿ ಜಾತ್ರೆಗೆ ಆಗಮಿಸಿದ್ದಂತ ಭಕ್ತರು ದಿಕ್ಕಾಪಾಲಾಗಿ ಓಡಿ ಹೋಗಿದ್ದಾರೆ. ಸ್ವೀಟ್ ಕಾರ್ನ್ ಗಾಡಿಗೆ ಹೊತ್ತಿಕೊಂಡಿದ್ದಂತ ಬೆಂಕಿಯನ್ನು ಸ್ಥಳದಲ್ಲಿದ್ದಂತ ಕಾರ್ಯಕರ್ತರು ನಂದಿಸಿದ್ದಾರೆ. ಈ ಹೀಗಾಗಿ ಕಾರ್ಯಕರ್ತರ ಸಮಯಪ್ರಜ್ಞೆಯಿಂದ ದುರಂತವೊಂದು ತಪ್ಪಿದಂತೆ ಆಗಿದು. ನಾಯಕನಹಟ್ಟಿ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. https://kannadanewsnow.com/kannada/make-fasal-bima-yojana-more-farmer-friendly-bommai-to-union-agriculture-minister/ https://kannadanewsnow.com/kannada/shocking-incident-transgender-stripped-naked-shaved-off-and-assaulted-in-kalaburagi/
ಹಾವೇರಿ: ಫಸಲ್ ಬಿಮಾ ಯೋಜನೆಯನ್ನು ಇನ್ನಷ್ಟು ರೈತಸ್ನೇಹಿಯನ್ನಾಗಿ ಮಾಡಲು ಬೆಳೆ ಹಾನಿಗೊಳಗಾದ ಪ್ರತಿ ರೈತರ ಜಮೀನಿನ ಸರ್ವೆನಂಬರ್ ಆಧಾರದಲ್ಲಿ ಸಟಲೈಟ್ ಮೂಲಕ ಬೆಳೆ ಹಾನಿ ಸಮೀಕ್ಷೆ ನಡೆಸುವಂತೆ ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬವರಾಜ ಬೊಮ್ಮಾಯಿ ಕೇಂದ್ರ ಕೃಷಿ ಮತ್ತು ರೈತ ಕಲ್ಯಾಣ ಸಚಿವ ಶಿವರಾಜ್ ಸಿಂಗ್ ಚೌಹ್ವಾಣ್ ಅವರಿಗೆ ಮನವಿ ಮಾಡಿದ್ದಾರೆ. ಈ ಕುರಿತು ಪತ್ರ ಬರೆದಿರುವ ಅವರು, ಫಸಲ್ ಬಿಮಾ ಯೋಜನೆ ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಮಹತ್ವಾಕಾಂಕ್ಷೆಯ ರೈತ ಪರವಾದ ಯೋಜನೆಯಾಗಿದ್ದು, ಈ ಯೋಜನೆಯನ್ನು ಇನ್ನಷ್ಟು ರೈತ ಪರ ಹಾಗೂ ಪಾರದರ್ಶಕವಾಗಿ ಜಾರಿ ಮಾಡುವುದರಿಂದ ರೈತರಿಗೆ ಹೆಚ್ಚಿನ ಅನುಕೂಲವಾಗಲಿದೆ. ಬರ, ಪ್ರವಾಹದಂತಹ ಅನೇಕ ಕಾರಣಗಳಿಂದ ಬೆಳೆ ಹಾನಿಗೊಳಗಾದಾಗ ಗ್ರಾಮ ಪಂಚಾಯತಿ ಮಟ್ಟದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಲಾಗುತ್ತಿದೆ. ಅದರ ಬದಲು ಪ್ರತಿ ರೈತರ ಜಮೀನಿನ ಸರ್ವೆ ನಂಬರ್ ಆಧಾರದಲ್ಲಿ ಬೆಳೆ ಹಾನಿ ಸಮೀಕ್ಷೆ ನಡೆಸಿದರೆ ನಿಜವಾಗಲೂ ಬೆಳೆಹಾನಿಗೊಳಗಾದ ಎಲ್ಲ ರೈತರೂ ವಿಮಾ ಪರಿಹಾರ ಪಡೆಯಲು ಅನುಕೂಲವಾಗುತ್ತದೆ. ಅಲ್ಲದೇ…
ಬೆಂಗಳೂರು: ರಾಜ್ಯ ಬಜೆಟ್ ನಲ್ಲಿ ತಸ್ತೀಕ್ ಮೊತ್ತವನ್ನು ರೂ.60,000 ದಿಂದ ರೂ.72,000 ಹೆಚ್ಚಳ ಮಾಡಿದಂತ ಮುಖ್ಯಮಂತ್ರಿ ಸಿದ್ಧರಾಮಯ್ಯ ಹಾಗೂ ಸಾರಿಗೆ, ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಅವರಿಗೆ ಅರ್ಚಕ ಸಮುದಾಯವು ಧನ್ಯವಾದ ಅರ್ಪಿಸಿದೆ. ಈ ಮೊದಲು ಕೂಡ ಅಂದರೆ 2013, 2015 ಮತ್ತು 2017 ಹಾಗೂ ಪ್ರಸ್ತುತ 2025 ರಲ್ಲಿ ಒಟ್ಟು 4 ಬಾರಿ ರೂ.48,000 ತಸ್ತೀಕ್ ಮೊತ್ತವನ್ನು ಹೆಚ್ಚಿಸಿದ್ದು ಮುಖ್ಯಮಂತ್ರಿ ಸಿದ್ಧರಾಮಯ್ಯರವರೇ ಎಂಬುದು ಗಮನಾರ್ಹವಾದ್ದದ್ದು. ಅರ್ಚಕರ, ಆಗಮಿಕರ ಹಾಗೂ ಉಪಾಧಿವಂತರುಗಳ ಕಷ್ಟ ಕಾರ್ಪಣ್ಯಗಳಿಗಾಗಿ ಅವರ ದುಃಖ, ದುಮ್ಮಾನಗಳಿಗೆ ಸ್ಪಂದಿಸುವ ನಿಟ್ಟಿನಲ್ಲಿ ಧಾರ್ಮಿಕ, ಸಾಂಸ್ಕೃತಿಕ ಸಾಮಾಜಿಕ ನೆಲೆಯಲ್ಲಿ, ಇತ್ತೀಚಿನ ದಿನಗಳಲ್ಲಿ ಮುಜರಾಯಿ ಇಲಾಖೆಯಲ್ಲಿ ಅಭಿವೃದ್ಧಿಯ ಪ್ರವಾಹವೇ ಜರುಗಿದೆ. ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಈಗಾಗಲೇ ಅರ್ಚಕರ ಕಣ್ಮಣಿ, ಕರ್ನಾಟಕದ ಬಂಗಾರದ ಮನುಷ್ಯ ಎಂದು ಅರ್ಚಕ ಸಮೂಹದಿಂದ ಮನೆಮಾತಾಗಿದ್ದಾರೆ. ಮುಜರಾಯಿ ಇಲಾಖೆಯಲ್ಲಿ ಧಾರ್ಮಿಕ ಸ್ನೇಹಿ ಯೋಜನೆ ಹಾಗೂ ಕಾರ್ಯಕ್ರಮಗಳನ್ನು ರೂಪಿಸಿ, ಐತಿಹಾಸಿಕ ನಿರ್ಣಯಗಳನ್ನು ಕೈಗೊಂಡು ಇತಿಹಾಸ ಸೃಷ್ಟಿಸಿರುವ ಏಕೈಕ ಮುಜರಾಯಿ…
ನವದೆಹಲಿ: ಮಂಡ್ಯ ಜಿಲ್ಲೆಯ ಮಳವಳ್ಳಿ ತಾಲ್ಲೂಕಿನಲ್ಲಿ ಟಿ.ಕಾಗೇಪುರ ಗ್ರಾಮದ ಖಾಸಗಿ ವಸತಿ ಶಾಲೆ ಕಲುಷಿತ ಆಹಾರ ಸೇವನೆಯಿಂದ ಓರ್ವ ವಿದ್ಯಾರ್ಥಿ ಸಾವನ್ನಪ್ಪಿರುವ ಬಗ್ಗೆ ತೀವ್ರ ಕಳವಳ ವ್ಯಕ್ತಪಡಿಸಿರುವ ಮಂಡ್ಯ ಸಂಸದರು ಹಾಗೂ ಕೇಂದ್ರ ಸಚಿವರಾದ ಹೆಚ್.ಡಿ.ಕುಮಾರಸ್ವಾಮಿ ಅವರು, ಅಸ್ವಸ್ಥ ಮಕ್ಕಳ ಆರೋಗ್ಯದ ಬಗ್ಗೆ ತುರ್ತು ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ಈ ಸಂಬಂಧ ಮಳವಳ್ಳಿ ತಹಶೀಲ್ದಾರ್ ಸೇರಿದಂತೆ ಸಂಬಂಧಪಟ್ಟ ಅಧಿಕಾರಿಗಳಿಂದ ಘಟನೆಯ ಬಗ್ಗೆ ಮಾಹಿತಿ ಪಡೆದುಕೊಂಡಿರುವ ಸಚಿವರು; ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ವಿದ್ಯಾರ್ಥಿಗಳ ಆರೋಗ್ಯ ಪರಿಸ್ಥಿತಿಯನ್ನು ವಿಚಾರಿಸಿಕೊಂಡರು. ಬೇಸಿಗೆಯಲ್ಲಿ ಕುಡಿಯುವ ನೀರು ಹಾಗೂ ಆಹಾರದ ಬಗ್ಗೆ ಜಾಗ್ರತೆಯಿಂದ ಇರಬೇಕು. ಮಕ್ಕಳಿಗೆ ನೀಡಲಾಗುವು ಆಹಾರದ ಬಗ್ಗೆ ಕಟ್ಟೆಚ್ಚರ ವಹಿಸಬೇಕು ಎಂದು ಸ್ಪಷ್ಟ ನೀಡಿರುವ ಸಚಿವರು; ಮೃತಪಟ್ಟಿರುವ ವಿದ್ಯಾರ್ಥಿ ಬಗ್ಗೆ ಸಂತಾಪ ವ್ಯಕ್ತಪಡಿಸಿದ್ದಾರೆ. ಸರ್ಕಾರಿ ಅಥವಾ ಖಾಸಗಿ ವಸತಿ ಶಾಲೆಗಳಲ್ಲಿ ಆಹಾರದ ಬಗ್ಗೆ ಅಧಿಕಾರಿಗಳು, ಸಂಬಂಧಪಟ್ಟ ಸಿಬ್ಬಂದಿ ಎಚ್ಚರಿಕೆ ವಹಿಸಬೇಕು. ಈ ಬಗ್ಗೆ ಕಠಿಣ ನಿಗಾ ಇಡಬೇಕು ಎಂದು ತಹಶೀಲ್ದಾರ್ ಅವರಿಗೆ ಸಚಿವರು…
ಗದಗ : “ಸಮಬಾಳು ಸಮಪಾಲು ಎನ್ನುವ ವಿಜೆಯೇಂದ್ರ ಅವರು ಅಲ್ಪಸಂಖ್ಯಾತರಲ್ಲಿ ಯಾರದರೊಬ್ಬರನ್ನು ಎಂಎಲ್ಸಿ, ರಾಜ್ಯಸಭಾ ಸದ್ಯಸರನ್ನಾಗಿ, ಕೇಂದ್ರ ಸಂಪುಟದಲ್ಲಿ ಮಂತ್ರಿ ಮಾಡಿಕೊಳ್ಳಲಿ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ತಿರುಗೇಟು ನೀಡಿದರು. ಗದಗದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಭಾನುವಾರ ಪ್ರತಿಕ್ರಿಯೆ ನೀಡಿದರು. ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರ ಎಕ್ಸ್ (ಟ್ವೀಟ್) ಬಗ್ಗೆ ಕೇಳಿದಾಗ, “ಅವರ ಪಕ್ಷದಲ್ಲಿ ಇಬ್ಬರು ಕ್ರಿಶ್ಚಿಯನ್ಸ್, ಮೂರು ಜನ ಮುಸ್ಲಿಮರಿಗೆ ಅವಕಾಶ ಮಾಡಿಕೊಡಲಿ. ಹೀಗೆ ಮಾಡಿದಾಗ ಮಾತ್ರ ವಿಜಯೇಂದ್ರ ಅವರಿಗೆ ಸಮಬಾಳು ಸಮಪಾಲು ಎಂದು ಮಾತನಾಡಲು ಒಂದು ಅವಕಾಶ ಸಿಗುತ್ತದೆ” ಎಂದರು. ವಿಜಯೇಂದ್ರ ಕುವೆಂಪು ಅವರು ಬರೆದಿರುವ ನಾಡಗೀತೆಯನ್ನು ವಿಜಯೇಂದ್ರ ಸರಿಯಾಗಿ ಓದಲಿ. ಯಾರು, ಯಾರು ಸೇರಿದರೆ ಶಾಂತಿಯ ತೋಟ ಆಗುತ್ತದೆ ಎನ್ನುವುದನ್ನು ತಿಳಿದುಕೊಳ್ಳಲಿ. ಇನ್ನು ಪಾಪ ಈಗ ಪಕ್ಷದ ಅಧ್ಯಕ್ಷರಾಗಿದ್ದಾರೆ. ಅವರ ಲೆವೆಲ್ ನಲ್ಲಿ ಇರಲಿ” ಎಂದರು. “ಮುಸ್ಲಿಂ, ಸಿಕ್, ಜೈನ, ಪಾರ್ಸಿ, ಬೌದ್ದರು ಇವರೆಲ್ಲಾ ನಮ್ಮ ದೇಶದ ಹಾಗೂ ಕರ್ನಾಟಕದ ಪ್ರಜೆಗಳು. ನಾವು ಎಲ್ಲಾ ಅಲ್ಪಸಂಖ್ಯಾತರು, ಹಿಂದುಳಿದವರ…
ಮ್ಯಾಸಿಡೋನಿಯಾ: ಉತ್ತರ ಮ್ಯಾಸಿಡೋನಿಯಾದ ನೈಟ್ಕ್ಲಬ್ನಲ್ಲಿ ಸಂಗೀತ ಕಚೇರಿಯ ಸಂದರ್ಭದಲ್ಲಿ ಸಂಭವಿಸಿದ ಬೆಂಕಿ ಅವಘಡದಲ್ಲಿ ಸುಮಾರು 51 ಜನರು ಸಾವನ್ನಪ್ಪಿದ್ದಾರೆ ಮತ್ತು 100 ಜನರು ಗಾಯಗೊಂಡಿದ್ದಾರೆ ಎಂದು ಸುದ್ದಿ ಸಂಸ್ಥೆ ವರದಿ ಮಾಡಿದೆ. ವರದಿಯ ಪ್ರಕಾರ, ಕೊಕಾನಿಯ ಡಿಸ್ಕೋಥೆಕ್ನಲ್ಲಿ ಸುಮಾರು 1,500 ಜನರು ಸಂಗೀತ ಕಚೇರಿಯನ್ನು ವೀಕ್ಷಿಸಲು ಸೇರಿದ್ದರು. ದೇಶದ ಪ್ರಸಿದ್ಧ ಹಿಪ್-ಹಾಪ್ ಜೋಡಿಯಾದ ಡಿಎನ್ಕೆ ಅವರ ಪ್ರದರ್ಶನದ ಸಮಯದಲ್ಲಿ ಕೊಕಾನಿಯ ‘”ಪಲ್ಸ್” ಎಂಬ ನೈಟ್ಕ್ಲಬ್ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಭಾನುವಾರ ಮಧ್ಯರಾತ್ರಿ ಸಂಗೀತ ಕಚೇರಿ ಪ್ರಾರಂಭವಾಯಿತು. “ಇದು ಮ್ಯಾಸಿಡೋನಿಯಾಗೆ ಕಷ್ಟಕರ ಮತ್ತು ಅತ್ಯಂತ ದುಃಖದ ದಿನ. ಹಲವಾರು ಯುವ ಜೀವಗಳ ನಷ್ಟವನ್ನು ಸರಿಪಡಿಸಲಾಗದು, ಮತ್ತು ಕುಟುಂಬಗಳು, ಪ್ರೀತಿಪಾತ್ರರು ಮತ್ತು ಸ್ನೇಹಿತರ ನೋವು ಅಳೆಯಲಾಗದು” ಎಂದು ಉತ್ತರ ಮ್ಯಾಸಿಡೋನಿಯಾದ ಪ್ರಧಾನಿ ಕ್ರಿಸ್ಟಿಜನ್ ಮಿಕೊಸ್ಕಿ ‘X’ ನಲ್ಲಿ ಪೋಸ್ಟ್ನಲ್ಲಿ ಬರೆದಿದ್ದಾರೆ. ಸಂತ್ರಸ್ತರಿಗೆ ಸಹಾಯ ಮಾಡಲು ಸರ್ಕಾರ ಎಲ್ಲವನ್ನೂ ಮಾಡುತ್ತದೆ ಎಂದು ಪ್ರಧಾನಿ ಭರವಸೆ ನೀಡಿದರು. “ಜನರು ಮತ್ತು ಸರ್ಕಾರವು ಅವರ ನೋವನ್ನು ಸ್ವಲ್ಪವಾದರೂ ಕಡಿಮೆ ಮಾಡಲು…
ಬೆಂಗಳೂರು: ರಾಜ್ಯಾದ್ಯಂತ ಹಬ್ಬಿರುವ ಡ್ರಗ್ಸ್ ಜಾಲವನ್ನು ಬೇರುಸಹಿತ ಕಿತ್ತೊಗೆಯುವುದು ನಮ್ಮ ಸರ್ಕಾರದ ಗುರಿಯಾಗಿದೆ ಎಂಬುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಿಸಿದ್ದಾರೆ. ಈ ಬಗ್ಗೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ರಾಜ್ಯದ ಇತಿಹಾಸದಲ್ಲೇ ಅತಿದೊಡ್ಡ ಪ್ರಮಾಣದ ಮಾದಕ ದ್ರವ್ಯವನ್ನು ಪತ್ತೆಹಚ್ಚಿ, ಇಬ್ಬರು ಆರೋಪಿಗಳನ್ನು ಬಂಧಿಸಿರುವ ಮಂಗಳೂರು ಸಿಟಿ ಪೊಲೀಸರ ಕಾರ್ಯಾಚರಣೆ ಶ್ಲಾಘನೀಯ. ಸುಮಾರು ₹75 ಕೋಟಿಗೂ ಅಧಿಕ ಮೌಲ್ಯದ 37 ಕೆ.ಜಿ ಎಂಡಿಎಂಎ ಮಾದಕ ದ್ರವ್ಯವನ್ನು ವಶಕ್ಕೆ ಪಡೆದು, ಸಾವಿರಾರು ಯುವ ಜನರ ಬದುಕಿಗೆ ಎದುರಾಗಲಿದ್ದ ಬಹುದೊಡ್ಡ ಅಪಾಯವೊಂದನ್ನು ನಮ್ಮ ಪೊಲೀಸರು ನಿವಾರಿಸಿದ್ದಾರೆ ಎಂದಿದ್ದಾರೆ. ನಾವು ಅಧಿಕಾರಕ್ಕೆ ಬಂದ ಮೊದಲ ದಿನದಿಂದಲೇ ಮಾದಕದ್ರವ್ಯ ವ್ಯಸನಮುಕ್ತ ಸಮಾಜ ನಿರ್ಮಾಣದ ಪಣತೊಟ್ಟು, ಡ್ರಗ್ಸ್ ಮಾರಾಟ ಮತ್ತು ಸೇವನೆಯ ವಿರುದ್ಧ ಸಮರ ಸಾರಿದ್ದೇವೆ. ಕೆಲವು ತಿಂಗಳುಗಳ ಹಿಂದೆ ನಾನು ಮಂಗಳೂರಿಗೆ ಭೇಟಿನೀಡಿದ್ದ ವೇಳೆ ಜಿಲ್ಲೆಯಲ್ಲಿ ಡ್ರಗ್ಸ್ ಹಾವಳಿ ತಡೆಗಟ್ಟಿ ಸ್ವಸ್ಥ ಪರಿಸರ ಕಟ್ಟಿಕೊಡುವ ವಾಗ್ದಾನವನ್ನು ಜಿಲ್ಲೆಯ ಜನರಿಗೆ ನೀಡಿದ್ದೆ. ನಮ್ಮ ಈ ಪ್ರಯತ್ನದ ಭಾಗವಾಗಿ ಈಗ ಬಹುದೊಡ್ಡ…











