Author: kannadanewsnow09

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಮುಂಬರುವ ಪ್ರವೇಶ ಪರೀಕ್ಷೆಗಳು 2025 ರ ಪ್ರಮುಖ ಪರೀಕ್ಷಾ ದಿನದ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ. ಬಿಡುಗಡೆಯಾದ ವೇಳಾಪಟ್ಟಿಯ ಪ್ರಕಾರ, ಜಂಟಿ ಪ್ರವೇಶ ಪರೀಕ್ಷೆಯ ಮುಖ್ಯ ಸೆಷನ್ 1 ಜನವರಿ 22 ರಂದು ಪೇಪರ್ 1 ಪರೀಕ್ಷೆಯೊಂದಿಗೆ ಪ್ರಾರಂಭವಾಗಲಿದೆ. ಜೆಇಇ ಮೇನ್ ಪೇಪರ್ 1 ಬಿಇ/ ಬಿಟೆಕ್ ಪೇಪರ್ (ಪೇಪರ್ 1) ಅನ್ನು ಒಳಗೊಂಡಿರುತ್ತದೆ. ಜೆಇಇ ಮೇನ್ 2025 ಪರೀಕ್ಷೆಗಳು ಜನವರಿ 22 ರಿಂದ ಜನವರಿ 30, 2025 ರವರೆಗೆ ನಡೆಯಲಿವೆ. ಜೆಇಇ ಮೇನ್ 2025 ರ ಎರಡನೇ ಸೆಷನ್ ಏಪ್ರಿಲ್ನಲ್ಲಿ ನಡೆಯಲಿದೆ. ಪೇಪರ್ 1 (ಬಿಇ/ ಬಿಟೆಕ್) ಪರೀಕ್ಷೆಯ ಅವಧಿ ಮೂರು ಗಂಟೆಗಳು. ಮತ್ತು ಎರಡೂ ಪತ್ರಿಕೆಗಳಿಗೆ, ಅಂದರೆ, ಬಿಆರ್ಕ್ ಮತ್ತು ಬಿಪ್ಲಾನಿಂಗ್ಗೆ, ಇದು ಮೂರು ಗಂಟೆ 30 ನಿಮಿಷಗಳು. ಜೆಇಇ ಮೇನ್ ಪೇಪರ್ 2 ಪರೀಕ್ಷೆಯು ಜನವರಿ 30 ರಂದು ಮಧ್ಯಾಹ್ನ 3 ಗಂಟೆಯಿಂದ ಎರಡನೇ ಪಾಳಿಯಲ್ಲಿ…

Read More

ಬೆಂಗಳೂರು: ಬಿಪಿಎಲ್, ಎಪಿಎಲ್ ಕಾರ್ಡ್ ನಲ್ಲಿನ ತಪ್ಪುಗಳ ತಿದ್ದುಪಡಿ, ಹೊಸ ಸದಸ್ಯರ ಸೇರ್ಪಡೆ ಸೇರಿದಂತೆ ಇತರೆ ತಿದ್ದುಪಡಿಗಾಗಿ ಜನವರಿ.31, 2025ರವರೆಗೆ ಮಾತ್ರವೇ ಅವಕಾಶ ನೀಡಲಾಗಿದೆ. ಆ ನಂತರ ಅವಕಾಶವಿಲ್ಲ ಎಂಬುದಾಗಿ ಸುದ್ದಿಯೊಂದು ವೈರಲ್ ಆಗಿದೆ. ಈ ಕಾರಣಕ್ಕೆ ಓನ್ ಕೇಂದ್ರಗಳ ಬಳಿಯಲ್ಲಿ ಜನರು ಸಾಲುಗಟ್ಟಿಯೂ ಕೆಲವೆಡೆ ನಿಂತಿದ್ದಾರೆ. ಆದರೇ ವೈರಲ್ ಸುದ್ದಿ ಹಿಂದಿನ ಅಸಲಿ ಸತ್ಯವೇನು ಅಂತ ಮುಂದೆ ಓದಿ. ಬೆಂಗಳೂರಿನ ರಾಜಾಜಿನಗರ ಸೇರಿದಂತೆ ರಾಜ್ಯದ ಇತರೆಡೆಗಳಲ್ಲಿ ಜನವರಿ.31 ರೇಷನ್ ಕಾರ್ಡ್ ನಲ್ಲಿನ ತಪ್ಪುಗಳನ್ನು ತಿದ್ದುಪಡಿ ಮಾಡೋದಕ್ಕೆ ಕೊನೆಯ ದಿನ. ಅಂದಿನ ಟೋಕನ್ ಇಂದೇ ಕೊಡ್ತೀದ್ದಾರೆ. ತಿದ್ದುಪಡಿ ಮಾಡ್ತಿದ್ದಾರೆ ಎನ್ನುವ ವದಂತಿಯಿಂದಾಗಿ ಜನರು ಕ್ಯೂ ನಿಂತು, ಸರಿ ಪಡಿಸಿಕೊಳ್ಳೋದಕ್ಕೆ ಮುಂದಾಗಿದ್ದಾರೆ. ಆದರೇ ಆಹಾರ ಇಲಾಖೆಯಿಂದ ಪಡಿತರ ಚೀಟಿಯಲ್ಲಿನ ತಪ್ಪುಗಳ ತಿದ್ದುಪಡಿಗೆ ಮಾತ್ರ ಯಾವುದೇ ಕಾಲಮಿತಿಯನ್ನು ನಿಗದಿ ಪಡಿಸಿಲ್ಲ. ಈ ಬಗ್ಗೆ ಪತ್ರಿಕಾ ಪ್ರಕಟಣೆಯನ್ನು ಹೊರಡಿಸಿರುವಂತ ಆಹಾರ ಇಲಾಖೆಯು, ರೇಷನ್ ಕಾರ್ಡ್ ತಿದ್ದುಪಡಿಗಾಗಿ ಜನವರಿ.31, 2025 ಕೊನೆಯ ದಿನ ಎಂಬುದು ಸುಳ್ಳು. ಇಲಾಖೆಯಿಂದ…

Read More

ಬೆಂಗಳೂರು: ಕೆಸೆಟ್ ಪರೀಕ್ಷೆ-2024ಕ್ಕೆ ಅರ್ಹತೆ ಪಡೆದವರಿಗೆ ಮಹತ್ವದ ಮಾಹಿತಿ ಎನ್ನುವಂತೆ ಕೆಇಎ ಕೊನೆಯ ಅವಕಾಶ ಎನ್ನುವಂತೆ ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾದವರಿಗೆ ಅವಕಾಶ ನೀಡಿದೆ. ಈ ಕುರಿತಂತೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕರ್ನಾಟಕ ರಾಜ್ಯ ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ-2024 (ಕೆಸೆಟ್-2024) ರಲ್ಲಿ ಅರ್ಹರಾದ ಎಲ್ಲಾ 41 ವಿಷಯಗಳ ಅಭ್ಯರ್ಥಿಗಳಿಗೆ ದಿನಾಂಕ 13.01.2025 ರಿಂದ ದಿನಾಂಕ 20.01.2025 ರ ವರೆಗೆ ಮೂಲ ದಾಖಲೆಗಳ ಪರಿಶೀಲನೆಗೆ ಹಾಜರಾಗುವಂತೆ ತಿಳಿಸಲಾಗಿತ್ತು. ಆದರೆ ಕೆಲವು ಅಭ್ಯರ್ಥಿಗಳು ಮೂಲ ದಾಖಲೆಗಳ ಪರಿಶೀಲನೆಗೆ ಗೈರು ಹಾಜರಾಗಿರುವುದು ಕಂಡುಬಂದಿರುತ್ತದೆ ಎಂದಿದೆ. ಆದ್ದರಿಂದ ದಿನಾಂಕ 13.01.2025 ರಿಂದ 20.01.2025 ರವರೆಗೆ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾದ ಕೆಸೆಟ್-2024 ತಾತ್ಕಾಲಿಕ ಅರ್ಹ ಅಭ್ಯರ್ಥಿಗಳ ಪಟ್ಟಿಯಲ್ಲಿನ ಗೈರುಹಾಜರಾದ ಅಭ್ಯರ್ಥಿಗಳು ಮತ್ತು ಸ್ನಾತಕೋತ್ತರ ಪದವಿ ಪೂರ್ಣಗೊಂಡು ಫಲಿತಾಂಶ ಘೋಷಣೆಗೊಂಡಿರುವ ಅರ್ಹ ಅಭ್ಯರ್ಥಿಗಳು ಮಾತ್ರ ದಿನಾಂಕ 31.01.2025 ರಂದು ಬೆಳಿಗ್ಗೆ 10.00 ಕ್ಕೆ ಎಲ್ಲಾ ಮೂಲ ದಾಖಲೆಗಳೊಂದಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಲ್ಲಿ…

Read More

ನವದೆಹಲಿ: ನಕಲಿ ಗಾಂಧಿಗಳ ಪಕ್ಷ ಈಗ ಬೆಳಗಾವಿಯಲ್ಲಿ ಅಸಲಿ ಗಾಂಧಿಯವರ ಹಾಡಿನಲ್ಲಿ ಪುಕ್ಕಟೆ ಪ್ರಚಾರ ಪಡೆಯುತ್ತಿದೆ ಎಂದು ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ ಅವರು ಲೇವಡಿ ಮಾಡಿದರು. ನವದೆಹಲಿಯಲ್ಲಿ ಮಾಧ್ಯಮಗಳು ಕೇಳಿದ ಪ್ರಶ್ನೆಗಳಿಗೆ ಉತ್ತರಿಸಿದ ಸಚಿವರು; ರಾಜ್ಯದಲ್ಲಿ ಅತ್ಯಾಚಾರ, ದರೋಡೆಗಳು ನಡೆಯುತ್ತಿವೆ. ಅಪರಾಧಿ ಚಟುವಟಿಕೆಗಳು ಮಿತಿ ಮೀರಿವೆ. ಕಾನೂನು ಸುವ್ಯವಸ್ಥೆ ಹದಗೆಟ್ಟು ಜನರಿಗೆ ಭದ್ರತೆ ಇಲ್ಲದಾಗಿದೆ ಎಂದು ಆರೋಪಿಸಿದರು. ಸರಕಾರದಲ್ಲಿ ಒಬ್ಬ ತಹಶಿಲ್ದಾರ್, ಉಪ ವಿಭಾಗಾಧಿಕಾರಿಯನ್ನು ನಿಯಂತ್ರಣ ಮಾಡುವುದು ಇವರಿಗೆ ಆಗುತ್ತಿಲ್ಲ. ಕಾನೂನು ಸುವ್ಯವಸ್ಥೆ ಮೇಲೆ ನಿಯಂತ್ರಣ ಇಲ್ಲ. ಕಾಂಗ್ರೆಸ್ಸಿನವರು ಕರ್ನಾಟಕವನ್ನು ಸಂಪೂರ್ಣ ಮುಗಿಸಲಿಕ್ಕೇ ಬಂದಿದ್ದಾರೆ. ಇದೇನಾ ಗಾಂಧಿ ತತ್ವದ ಆಡಳಿತ ಸಿದ್ದರಾಮಯ್ಯನವರೇ..? ಎಂದು ಕೇಂದ್ರ ಸಚಿವರು ಗುಡುಗಿದರು. ರಾಜ್ಯದಲ್ಲಿ ಗರ್ಭಿಣಿಯರ ಸಾರಾಣಿ ಸಾವಿನ ಪ್ರಕರಣಗಳ ವಾಸ್ತವಾಂಶವನ್ನು ಜನರ ಮುಂದೆ ಇಟ್ಟಿಲ್ಲ, ಯಾಕೆ? ಯಾಕೆ ಅಷ್ಟು ಜನ ತಾಯಂದಿರು, ನವಜಾತ ಶಿಶುಗಳು ಬಲಿಯಾದದ್ದು? ಇಲ್ಲಿಯೂ 40% ಕಮೀಶನ್ ಎನ್ನುವ ಮಾತು ಕೇಳಿ ಬರುತ್ತಿದೆ. ರಾಜ್ಯದ ಜನರ ತೆರಿಗೆ ಹಣವನ್ನು ಯಾವ ರೀತಿ ಬಳಕೆ…

Read More

ಹುಬ್ಬಳ್ಳಿ : “ನಾನು ನನ್ನ ಕರ್ತವ್ಯ ಮಾಡುತ್ತೇನೆ. ಮಿಕ್ಕಿದ್ದು ಪಕ್ಷ ತೀರ್ಮಾನ ಮಾಡುತ್ತದೆ” ಎಂದು ತಿಳಿಸಿದರು. ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಮಂಗಳವಾರ ಪ್ರತಿಕ್ರಿಯೆ ನೀಡಿದರು. ನೀವು ಸಿಎಂ ಆಗಲಿ ಎಂದು ಸ್ವಾಮೀಜಿಗಳು ಆಶೀರ್ವಾದ ಮಾಡಿದ್ದಾರೆ ಎಂದು ಕೇಳಿದ ಪ್ರಶ್ನೆಗೆ “ಧರ್ಮಗುರುಗಳು ಆಶೀರ್ವಾದ ಮಾಡುವಾಗ ನಾವು ಏನು ಹೇಳಲು ಸಾಧ್ಯ? ಅದು ಅವರ ಇಚ್ಛೆ. ಏನೇ ಇದ್ದರೂ ನಮ್ಮ ಪಕ್ಷವಷ್ಟೇ. ಪಕ್ಷ ಮುಖ್ಯ. ಪಕ್ಷ ಏನು ತೀರ್ಮಾನ ಮಾಡುತ್ತದೋ, ಅದನ್ನು ನಾವು ಮಾಡುತ್ತೇವೆ. ನಾನು ಯಾವುದೇ ಸ್ಥಾನವನ್ನು ಹುಡುಕಿಕೊಂಡು ಹೋಗುವ ಅವಶ್ಯಕತೆ ಇಲ್ಲ. ಪಕ್ಷಕ್ಕೆ ಹಾಗೂ ಸರ್ಕಾರಕ್ಕೆ ಏನು ಕೆಲಸ ಮಾಡಬೇಕೋ ಅದನ್ನು ನಾನು ಮಾಡುತ್ತೇನೆ. ನಾನು ಆತುರದಲ್ಲಿಲ್ಲ” ಎಂದು ತಿಳಿಸಿದರು. ಎಸ್.ಟಿ ಸೋಮಶೇಖರ್ ಅವರು ನಿಮ್ಮ ಸಮಾವೇಶದಲ್ಲಿ ಭಾಗವಹಿಸಿದ್ದರು ಎಂದು ಕೇಳಿದಾಗ, “ಅವರು ಸುವರ್ಣಸೌಧದಲ್ಲಿ ಗಾಂಧಿ ಪ್ರತಿಮೆ ಅನಾವರಣ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು” ಎಂದರು. https://kannadanewsnow.com/kannada/praveen-nettaru-murder-case-nia-arrests-key-conspirator-ateeq-ahmed/ https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/

Read More

ನವದೆಹಲಿ: ರಾಜ್ಯದಲ್ಲಿ ಸಂಚಲನ ಸೃಷ್ಠಿಸಿದ್ದಂತ ಹಿಂದೂ ಕಾರ್ಯಕರ್ತ ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಸಂಚುಕೋರರನ್ನು ಬಂಧಿಸುವಲ್ಲಿ ಎನ್ಐಎ ಯಶಸ್ವಿಯಾಗಿದೆ. ಪ್ರವೀಣ್ ನೆಟ್ಟಾರು ಹತ್ಯೆ ಕೇಸ್ ಪ್ರಮುಖ ಆರೋಪಿ ಅತೀಕ್ ಅಹಮ್ಮದ್ ಎಂಬಾತನನ್ನು ಬಂಧಿಸಿರುವುದಾಗಿ ಎನ್ಐಎ ತಿಳಿಸಿದೆ. ಈ ಸಂಬಂಧ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಪ್ರವೀಣ್ ನೆಟ್ಟಾರು ಕೊಲೆ ಪ್ರಕರಣದ ಪ್ರಮುಖ ಆರೋಪಿಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (ಎನ್ಐಎ) ಬಂಧಿಸಿದೆ. ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ಳಾರೆ ಗ್ರಾಮದಲ್ಲಿ 2022 ರ ಜುಲೈನಲ್ಲಿ ನಿಷೇಧಿತ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (ಪಿಎಫ್ಐ) ಸದಸ್ಯರು ನೆಟ್ಟಾರು ಅವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧಿಸಲ್ಪಟ್ಟ 21 ನೇ ಆರೋಪಿ ಅತೀಕ್ ಅಹ್ಮದ್ ಆಗಿದ್ದಾನೆ. ಪಿಎಫ್ಐ ನಾಯಕತ್ವದ ಮಾರ್ಗದರ್ಶನದಲ್ಲಿ ಅತೀಕ್ ಈ ಪ್ರಕರಣದ ಪ್ರಮುಖ ಸಂಚುಕೋರ ಎಂದು ಗುರುತಿಸಲ್ಪಟ್ಟ ಮುಸ್ತಫಾ ಪೈಚಾರ್ಗೆ ಆಶ್ರಯ ಮತ್ತು ಸಹಾಯ ಮಾಡಿದ್ದರು. ಜನರಲ್ಲಿ ಭಯ ಮತ್ತು ಕೋಮು ಅಶಾಂತಿಯನ್ನು ಪ್ರಚೋದಿಸಲು ಪಿಎಫ್ಐ ಕಾರ್ಯಸೂಚಿಯ ಭಾಗವಾಗಿ ಮುಸ್ತಫಾ…

Read More

ಬೆಂಗಳೂರು: ರಾಜ್ಯದ ಬಿಪಿಎಲ್ ಕಾರ್ಡ್ ದಾರರಿಗೆ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಅದೇ ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಈಗ ಆಸ್ತಿಮಜ್ಜೆ ಕಸಿಗೆ ಉಚಿತ ಚಿಕಿತ್ಸೆ ನೀಡಲು ಸರ್ಕಾರ ನಿರ್ಧರಿಸಿದೆ. ಹೀಗಾಗಿ ರಾಜ್ಯ ಸರ್ಕಾರಕ್ಕೆ ಸಂಸದ ಡಾ.ಸಿಎನ್ ಮಂಜುನಾಥ್ ಧನ್ಯವಾದಗಳನ್ನು ಅರ್ಪಿಸಿದ್ದಾರೆ. ಈ ಕುರಿತಂತೆ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವಂತ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ ಯೋಜನೆಯಡಿ ಅಸ್ಥಿಮಜ್ಜೆ ಕಸಿ ಈಗ ಉಚಿತವಾಗಿದೆ ಎಂದಿದ್ದಾರೆ. ಈ ಸಂಬಂಧ ರಾಜ್ಯದ ಆರೋಗ್ಯ ಇಲಾಖೆಯ ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ತಿಳಿಸಿರುವಂತ ಅವರು, ಆಯುಷ್ಮಾನ್ ಭಾರತ್ ಆರೋಗ್ಯ ಕರ್ನಾಟಕ / ಜೀವನ್ ಸಾರ್ಥಕತೆ ಯೋಜನೆಯಡಿ ಅಸ್ಥಿಮಜ್ಜೆ ಕಸಿಯನ್ನು ಕೋಡ್ ಮಾಡಲಾದ ಕಾರ್ಯವಿಧಾನವಾಗಿ ಸೇರಿಸಲು ನಾನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ಮೂಲಕ ರಾಜ್ಯ ಸರ್ಕಾರವನ್ನು ವಿನಂತಿಸಿದ್ದೆ ಮತ್ತು ನಿರಂತರವಾಗಿ ಅನುಸರಿಸುತ್ತಿದೆ ಎಂದಿದ್ದಾರೆ. ಮೂಳೆ ಕ್ಯಾನ್ಸರ್, ಥಲಸ್ಸೆಮಿಯಾ, ಅಪ್ಲಾಸ್ಟಿಕ್ ರಕ್ತಹೀನತೆ ಮತ್ತು ಇತರ ಎಂಟೋಲಾಜಿಕಲ್ ಸಂಬಂಧಿತ ಅಸ್ವಸ್ಥತೆಗಳಿಂದ ಬಳಲುತ್ತಿರುವ ರೋಗಿಗಳಿಗೆ ಮೂಳೆ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಆಡಳಿತ ಯಂತ್ರಕ್ಕೆ ಚುರುಕು ಮುಟ್ಟಿಸೋ ಸಲುವಾಗಿ ಬರೋಬ್ಬರಿ 45 ಪೊಲೀಸ್ ಇನ್ಸ್ ಪೆಕ್ಟರ್ (Police Inspecton ) ವರ್ಗಾವಣೆ ಮಾಡಿ ಆದೇಶಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ಆದೇಶ ಮಾಡಲಾಗಿದ್ದು, ಪೊಲೀಸ್ ಸಿಬ್ಬಂದಿ ಮಂಡಳಿಯ ಸಭೆಯ ನಿರ್ಣಯದಂತೆ ಈ ಕೆಳಕಂಡ ಪೊಲೀಸ್ ಇನ್ಸ್ ಪೆಕ್ಟರ್ (ಸಿವಿಲ್ ) ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಆದೇಶಿಸಿರುವುದಾಗಿ ತಿಳಿಸಿದೆ. ಬಾಲಾಜಿ ಬಾಬು ಹೆಚ್ ಎನ್ ಎಂಬುವರನ್ನು ಕರ್ನಾಟಕ ಲೋಕಾಯುಕ್ತದಿಂದ ಬೆಂಗಳೂರಿನ ಸಂಜಯನಗರ ಸಂಚಾರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಸ್ಥಳ ನಿರೀಕ್ಷೆಯಲ್ಲಿದ್ದಂತ ರಘು ಕೆ.ಕೆ ಅವರನ್ನು ಬೆಂಗಳೂರಿನ ಸೋಲದೇವನಹಳ್ಳಿ ಪೊಲೀಸ್ ಠಾಣೆಗೆ, ಐಎಸ್ ಡಿ ಕರ್ತವ್ಯದಲ್ಲಿದ್ದಂತ ರಾಜಶೇಖರ್ ಎನ್ ಹೆಚ್ ಅವರನ್ನು ಬೆಂಗಳೂರಿನ ರಾಮಮೂರ್ತಿನಗರ ಪೊಲೀಸ್ ಠಾಣೆಗೆ ವರ್ಗಾವಣೆ ಮಾಡಲಾಗಿದೆ. ಹೀಗಿದೆ 45 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ ಪಟ್ಟಿ https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/ https://kannadanewsnow.com/kannada/breaking-bengaluru-fir-filed-against-it-officer-for-assaulting-sexually-assaulting-lawyer/

Read More

ಮಡಿಕೇರಿ : ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಮತ್ತು ತೋಟಗಾರಿಕೆ ಇಲಾಖೆ ಇವರ ಸಂಯುಕ್ತ ಆಶ್ರಯದಲ್ಲಿ ಫಲಪುಷ್ಪ ಪ್ರದರ್ಶನವು ಜನವರಿ, 24 ರಿಂದ 27 ರವರೆಗೆ ನಗರದ ರಾಜಾಸೀಟು ಉದ್ಯಾನವನ ಹಾಗೂ ಗಾಂಧಿ ಮೈದಾನದಲ್ಲಿ ನಡೆಯಲಿದೆ. ಫಲಪುಷ್ಪ ಪ್ರದರ್ಶನದ ಉದ್ಘಾಟನಾ ಸಮಾರಂಭವು ಜನವರಿ, 24 ರಂದು ಮಧ್ಯಾಹ್ನ 3 ಗಂಟೆಗೆ ನಡೆಯಲಿದೆ. ಸಣ್ಣ ನೀರಾವರಿ, ವಿಜ್ಞಾನ ಮತ್ತು ತಂತ್ರಜ್ಞಾನ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಸಚಿವರಾದ ಎನ್.ಎಸ್.ಭೋಸರಾಜು, ತೋಟಗಾರಿಕೆ ಹಾಗೂ ಗಣಿ ಮತ್ತು ಭೂ ವಿಜ್ಞಾನ ಸಚಿವರಾದ ಎಸ್.ಎಸ್.ಮಲ್ಲಿಕಾರ್ಜುನ್, ಶಾಸಕರಾದ ಡಾ.ಮಂತರ್‍ಗೌಡ, ಮುಖ್ಯಮಂತ್ರಿ ಅವರ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಎ.ಎಸ್.ಪೊನ್ನಣ್ಣ, ಸಂಸದರಾದ ಯದುವೀರ್ ಕೃಷ್ಣದತ್ತ ಚಾಮರಾಜ ಒಡೆಯರ್, ಶಾಸಕರಾದ ಎಂ.ಪಿ.ಸುಜಾ ಕುಶಾಲಪ್ಪ, ಎಸ್.ಎಲ್.ಭೋಜೇಗೌಡ, ಡಾ.ಧನಂಜಯ ಸರ್ಜಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ.ಶಮ್ಲಾ ಇಕ್ಬಾಲ್, ಕೊಡಗು ಜಿ.ಪಂ.ಆಡಳಿತಾಧಿಕಾರಿ ಹಾಗೂ ಕೊಡಗು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ತೋಟಗಾರಿಕೆ ಇಲಾಖೆ ನಿರ್ದೇಶಕರಾದ ಡಿ.ಎಸ್.ರಮೇಶ್, ಕೊಡಗು ಜಿಲ್ಲಾ…

Read More

ಮಡಿಕೇರಿ : ರಾಷ್ಟ್ರೀಯ ಆಯುಷ್ ಅಭಿಯಾನದ ಯೋಜನೆಯಡಿ ಕೊಡಗು ಜಿಲ್ಲಾ ಆಯುಷ್ ಇಲಾಖೆಯಲ್ಲಿ ಆಯುಷ್ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್‍ಒ) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ. ತಮ್ಮ ಸಂಪೂರ್ಣ ವಿವರವುಳ್ಳ ಅರ್ಜಿಯನ್ನು ನಿಗಧಿಪಡಿಸಿದ ಕನಿಷ್ಠ ವಿದ್ಯಾರ್ಹತೆ, ವಯೋಮಿತಿ ಹಾಗೂ ಇತರೆ ಎಲ್ಲಾ ದಾಖಲಾತಿಗಳೊಂದಿಗೆ ಸಲ್ಲಿಸಲು ಜನವರಿ, 31 ಕೊನೆ ದಿನವಾಗಿದೆ. ನೇರ ಸಂದರ್ಶನಕ್ಕೆ ದಿನಾಂಕವನ್ನು ನಂತರ ತಿಳಿಸಲಾಗುವುದು. ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್‍ಒ) ಸ.ಆ.ಚಿ ಶ್ರೀಮಂಗಲ-01 ಹುದ್ದೆ, ಸ.ಹೋ.ಚಿ ಪಾರಾಣೆ-01 ಹುದ್ದೆ, ಕನಿಷ್ಠ ವಿದ್ಯಾರ್ಹತೆ ಬಿಎಎಂಎಸ್, ಬಿಎಚ್‍ಎಂಎಸ್ ಮಾಸಿಕ ವೇತನ ರೂ.40,000 (ರೂ.25,000 ಒಂದು ತಿಂಗಳಿಗೆ ಮತ್ತು ರೂ.15 ಸಾವಿರ ಒಂದು ತಿಂಗಳಿಗೆ ಪರ್ಮಾಪಾರ್ಮೆನ್ಸ್ ಪೇಮೆಂಟ್) ಸಾ.ಅಭ್ಯರ್ಥಿ 01. ಈ ಹುದ್ದೆಯು ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಿಗೆ ಕಮ್ಯುನಿಟಿ ಹೆಲ್ತ್ ಆಫಿಸರ್(ಸಿಎಚ್‍ಒ) ಹುದ್ದೆಗಳನ್ನು ಒಂದು ವರ್ಷದವರೆಗೆ ಅಥವಾ ಸದರಿ ಆರೋಗ್ಯ ಮತ್ತು ಕ್ಷೇಮ ಕೇಂದ್ರಗಳಲ್ಲಿ ಖಾಯಂ ವೈದ್ಯಾಧಿಕಾರಿಗಳ ಹುದ್ದೆಗಳು ಭರ್ತಿಯಾಗುವವರೆಗೆ ಯಾವುದು ಮೊದಲೋ ಅಲ್ಲಿಯವರೆಗೆ ಚಾಲ್ತಿಯಲ್ಲಿರುತ್ತದೆ. ಸ್ಥಳೀಯರಿಗೆ ಆದ್ಯತೆ ನೀಡಲಾಗುವುದು.…

Read More