Subscribe to Updates
Get the latest creative news from FooBar about art, design and business.
Author: kannadanewsnow09
ವ್ಯಾಂಕೋವರ್: ನೈತಿಕ ಮೌಲ್ಯಗಳು ಒಳ್ಳೆಯದು ಮತ್ತು ಕೆಟ್ಟದು, ಮತ್ತು ಸರಿ ಮತ್ತು ತಪ್ಪುಗಳ ಬಗ್ಗೆ ವ್ಯಕ್ತಿಯ ಗ್ರಹಿಕೆಗಳಿಗೆ ಮಾರ್ಗದರ್ಶನ ನೀಡುವ ತತ್ವಗಳಾಗಿವೆ. ಅವು ನಮ್ಮ ಪೂರ್ವಾಗ್ರಹಗಳು, ರಾಜಕೀಯ ಸಿದ್ಧಾಂತಗಳು ಮತ್ತು ಇತರ ಅನೇಕ ಪರಿಣಾಮಾತ್ಮಕ ವರ್ತನೆಗಳು ಮತ್ತು ಕ್ರಿಯೆಗಳನ್ನು ರೂಪಿಸುತ್ತವೆ. ಒಬ್ಬ ವ್ಯಕ್ತಿಯ ನೈತಿಕ ಮೌಲ್ಯಗಳು ಸಮಯ ಮತ್ತು ಸಂದರ್ಭಗಳಲ್ಲಿ ಸ್ಥಿರವಾಗಿವೆ ಎಂದು ಊಹಿಸುವುದು ಪ್ರಚೋದನಕಾರಿಯಾಗಿದೆ. ಸ್ವಲ್ಪ ಮಟ್ಟಿಗೆ ಅವು – ಆದರೆ ಸಂಪೂರ್ಣವಾಗಿ ಅಲ್ಲ. ನೈತಿಕ ಮೌಲ್ಯಗಳು ಮೃದುವಾಗಿರುತ್ತವೆ. ವಿಭಿನ್ನ ಸಂದರ್ಭಗಳಲ್ಲಿ ಉದ್ಭವಿಸುವ ನಿರ್ದಿಷ್ಟ ಆಲೋಚನೆಗಳು, ಭಾವನೆಗಳು ಮತ್ತು ಪ್ರೇರಣೆಗಳನ್ನು ಅವಲಂಬಿಸಿ ಕೆಲವೊಮ್ಮೆ ಬದಲಾಗಬಹುದು. ಋತುಗಳೊಂದಿಗೆ ನೈತಿಕ ಮೌಲ್ಯಗಳು ಬದಲಾಗಬಹುದೇ ಎಂದು ನಮ್ಮ ಸಂಶೋಧನೆ ಪರಿಶೀಲಿಸಿತು. ಬದಲಾಗುತ್ತಿರುವ ಮೌಲ್ಯಗಳು ಋತುಗಳು ಹವಾಮಾನದಲ್ಲಿನ ಬದಲಾವಣೆಗಳಿಂದ ಮಾತ್ರವಲ್ಲ, ನಮ್ಮ ಸುತ್ತಮುತ್ತಲಿನ ಅನೇಕ ಹೆಚ್ಚುವರಿ ಬದಲಾವಣೆಗಳು ಮತ್ತು ನಮ್ಮ ಜೀವನದ ಲಯಗಳಿಂದ ನಿರೂಪಿಸಲ್ಪಟ್ಟಿವೆ. ಇವುಗಳಲ್ಲಿ ವಸಂತಕಾಲದ ಶುಚಿಗೊಳಿಸುವಿಕೆ, ಬೇಸಿಗೆಯಲ್ಲಿ ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವುದು, ಶರತ್ಕಾಲದಲ್ಲಿ ಶಾಲೆಗೆ ಹಿಂತಿರುಗುವುದು ಅಥವಾ ಚಳಿಗಾಲದ ರಜಾದಿನಗಳಿಗೆ ತಯಾರಿ…
ಸವದತ್ತಿ : ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇದೇ ವೇಳೆಯಲ್ಲಿ ಸವದತ್ತಿ ಯಲ್ಲಮ್ಮ ದೇವಿ ಸನ್ನಿಧಿಯಲ್ಲಿ ತಿರುಪತಿ ಮಾದರಿಯಲ್ಲೇ ಸೌಲಭ್ಯ ಕಲ್ಪಿಸುವುದಾಗಿ ಸಿಎಂ ಸಿದ್ಧರಾಮಯ್ಯ ಘೋಷಿಸಿದರು. ಬಳಿಕ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು. ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದ ಮುಖ್ಯಮಂತ್ರಿ ಸಿದ್ದರಮಯ್ಯ ಅವರು ಪ್ರಮುಖ ಸಲಹೆ/ಸೂಚನೆಗಳನ್ನು ನೀಡಿದರು. *ರೇಣುಕಾ ಯಲ್ಲಮ್ಮ ದೇವಿ ಸನ್ನಿದಿಗೆ ಬರುವ ಭಕ್ತರೆಲ್ಲರಿಗೂ ತಾಯಿಯ ದರ್ಶನ ಕಡ್ಡಾಯವಾಗಿ ಸಿಗುವ ವ್ಯವಸ್ಥೆಯನ್ನು ಪ್ರಥಮ ಆಧ್ಯತೆಯಲ್ಲಿ ಒದಗಿಸಬೇಕು. *ಭಕ್ತಾದಿಗಳ ಆರೋಗ್ಯಕ್ಕೆ ಪೂರಕವಾದ ವ್ಯವಸ್ಥೆಗಳನ್ನು ಕಲ್ಪಿಸಬೇಕು. ಶೌಚಾಲಯ, ಕುಡಿಯುವ ನೀರು,…
ಬೆಂಗಳೂರು: ನಾಡಿನ ರೈತ ಬಾಂಧವರ ಶ್ರೇಯೋಭಿವೃದ್ಧಿಗಾಗಿ ಕೃಷಿ ಇಲಾಖೆಯಿಂದ ಹಲವು ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾದ್ರೇ ಯಾವೆಲ್ಲ ಅಂತ ಮುಂದೆ ಓದಿ. ಕರ್ನಾಟಕ ರಾಜ್ಯ ಕೃಷಿ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಭೂತಾಯಿ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ. ಮಣ್ಣಿಂದ ಜೀವ, ಮಣ್ಣಿಂದ ಕಾಯ ಎಂದಿದೆ. ಹೀಗಿದೆ ರೈತರಿಗಾಗಿ ಹಮ್ಮಿಕೊಂಡಿರುವಂತ ನೂತನ ಕಾರ್ಯಕ್ರಮಗಳ ಪಟ್ಟಿ -ರೈತ ಸಂಪರ್ಕ ಕೇಂದ್ರಗಳಲ್ಲಿ QR ಕೋಡ್ ಬಳಸಿ ಕೃಷಿ ಉಪಕರಣಗಳ ವಿತರಣೆಯ ಕ್ರಮ ವಹಿಸಲಾಗಿದೆ. ಈ ಮೂಲಕ ಪಾರದರ್ಶಕತೆಯೊಂದಿಗೆ ನಿರ್ವಹಣೆಯ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ. -ಭೂಸಾರ ನೂತನ ಮೊಬೈಲ್ ಆಪ್ ಬಳಸಿ 4.27 ಲಕ್ಷ ಮಣ್ಣು ಮಾದರಿಗಳ ಸಂಗ್ರಹಣೆ ಮಾಡಲಾಗಿದೆ. 1.26 ಲಕ್ಷ ಮಣ್ಣು ಆರೋಗ್ಯ ಕಾರ್ಡ್ ಸೂಕ್ತ ಶಿಫಾರಸ್ಸಿನೊಂದಿಗೆ ವಿತರಣೆ ಮಾಡಲಾಗಿದೆ. -ಕೃಷಿ ಣಲಾಖೆಯ ನೂತನ ರೈತ ಕರೆ ಕೇಂದ್ರದಲ್ಲಿ IVRS ತಂತ್ರಾಂಶ ಸ್ಪರ್ಶ ನೀಡಲಾಗಿದೆ. ಈವರೆಗೆ 1,28,987 ಕರೆಗಳಿಗೆ ಸೂಕ್ತ ಪರಿಹಾರ ನೀಡಲಾಗಿದೆ. ರೈತ ಕರೆ ಕೇಂದ್ರದ ಸಹಾಯವಾಣಿ ಸಂಖ್ಯೆ 18004253553 ಆಗಿದೆ. -ಇ-ಸ್ಯಾಪ್ ತಂತ್ರಾಂಶ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಅರ್ಚಕರಿಗೆ ಗುಡ್ ನ್ಯೂಸ್ ಎನ್ನುವಂತೆ, ಅರ್ಚಕರ ಮಕ್ಕಳ ವಿದ್ಯಾಭ್ಯಾಸಕ್ಕೆ ನೀಡುವಂತ ಪ್ರೋತ್ಸಾಹಧನ, ತಸ್ತೀಕ್, ವರ್ಷಾಸನ ಹಣ ನೇರವಾಗಿ ಅರ್ಚಕರ ಬ್ಯಾಂಕ್ ಖಾತೆಗೆ ಜಮಾ ಆಗುವಂತೆ ಮಾಡಿದೆ. ಇದಕ್ಕೆ ಮುಜರಾಯಿ ಮತ್ತು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಅಧಿಕೃತವಾಗಿ ಚಾಲನೆ ನೀಡಿದ್ದಾರೆ. ರಾಜ್ಯದ ಸಿʼ ವರ್ಗದ ಅಧಿಸೂಚಿತ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅರ್ಚಕರು ಹಾಗೂ ದೇವಾಲಯದ ನೌಕರರ ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರೋತ್ಸಾಹ ಧನ ಮತ್ತು ಮರಣ ಉಪದಾನ ವಿತರಣೆ ಹಾಗೂ ಅರ್ಚಕರುಗಳಿಗೆ ತಸ್ತೀಕ್ /ವರ್ಷಾಸನ ಹಣವನ್ನು ನೇರವಾಗಿ ಅರ್ಚಕರುಗಳ ಖಾತೆಗೆ ಜಮಾ ಮಾಡುವ ಕಾರ್ಯಕ್ರಮಕ್ಕೆ ಸಾರಿಗೆ ಹಾಗೂ ಮುಜರಾಯಿ ಸಚಿವರಾದ ಶ್ರೀ ರಾಮಲಿಂಗಾರೆಡ್ಡಿ ಅವರು ಚಾಲನೆ ನೀಡಿದ್ದಾರೆ. ಬೆಂಗಳೂರು ನಗರ ಮತ್ತು ಗ್ರಾಮಾಂತರ ಜಿಲ್ಲೆಗೆ ಸೇರಿದ 33 ವಿದ್ಯಾರ್ಥಿಗಳಿಗೆ ರೂ.4,88,000/-ಗಳ ವಿದ್ಯಾರ್ಥಿ ವೇತನವನ್ನು ಹಾಗೂ ಇಬ್ಬರು ಅರ್ಚಕರ ಕುಟುಂಬದವರಿಗೆ ತಲಾ ರೂ.2 ಲಕ್ಷಗಳಂತೆ ಒಟ್ಟು ರೂ.4 ಲಕ್ಷ ರೂಗಳ ನೌಕರರ ಮರಣ ಉಪಧನ ವಿತರಣೆವನ್ನು ಮಾನ್ಯ ಸಚಿವರು ವಿತರಿಸಿದರು. ಇದಲ್ಲದೆ…
ಮೈಸೂರು: ಜಂಬೂಸವಾರಿ ವೇಳೆ ಅಂಬಾರಿ ನೀಡಲು ಅರಮನೆ ವಿಳಂಬ ಎಸಗಿಗಿಲ್ಲ. ನಿಗಧಿತಯಂತೆ ಅಂಬಾರಿ ನೀಡಲಾಗಿದೆ. ಈ ಬಗ್ಗೆ ಬೇಜಾವ್ದಾರಿ ಹೇಳಿಕೆ ಸಲ್ಲದು. ಸಂಬಂಧಿಸಿದವರು ಜನ ನಿಯಂತ್ರಿಸಲು ವಿಫಲವಾದದ್ದು ಹಾಗೂ ಕಳಪೆ ನಿರ್ವಹಣೆಯಿಂದ ಸಮಸ್ಯೆ ಉದ್ಭವ ಎಂಬುದಾಗಿ ರಾಜವಂಶಸ್ಥೆ ಪ್ರಮೋದಾದೇವಿ ಒಡೆಯರ್ ಸ್ಪಷ್ಟಪಡಿಸಿದ್ದಾರೆ. ಈ ಬಗ್ಗೆ ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಲಾಗಿದ್ದು, ಅಕ್ಟೋಬರ್ 12, 2024 ರಂದು ಮೈಸೂರು ಅರಮನೆಯ ಮುಂಭಾಗದಲ್ಲಿ ಆನೆಯ ಮೇಲೆ ಸವಾರಿ ಮಾಡುವ ದಿನದಂದು ಆನೆಯ ಮೇಲೆ ಶ್ರೀ ಚಾಮುಂಡೇಶ್ವರಿ ದೇವಿಗೆ ಪುಷ್ಪಾರ್ಚನೆಗೆ ನಿಗದಿಪಡಿಸಿದ ಸಮಯದ ವಿಳಂಬದ ಬಗ್ಗೆ ಸುದ್ದಿ ಓದಿ ವಿಷಾದದಿಂದ ಗಮನಿಸಲಾಗಿದೆ ಎಂದಿದ್ದಾರೆ. ಅಂಬಾರಿಯನ್ನು ನಿಯೋಜಿತ / ಸಂಬಂಧಿತ ಸಿಬ್ಬಂದಿಗೆ ತಡವಾಗಿ ಹಸ್ತಾಂತರಿಸಿದ್ದು ವಿಳಂಬಕ್ಕೆ ಕಾರಣ ಎಂದು ಪತ್ರಿಕೆಗಳ ಒಂದು ವಿಭಾಗದಲ್ಲಿ ವರದಿಯಾಗಿದೆ. ಇದು ಬೇಜವಾಬ್ದಾರಿಯುತ ಹೇಳಿಕೆಯಾಗಿದೆ ಎಂದು ನಾನು ಹೇಳಲು ಬಯಸುತ್ತೇನೆ. ಏಕೆಂದರೆ ಮಧ್ಯಾಹ್ನ 2 ಗಂಟೆಯ ನಂತರ ಅಂಬಾರಿಯನ್ನು ಹಸ್ತಾಂತರಿಸಲಾಯಿತು ಎಂದು ತಿಳಿಸಿದ್ದಾರೆ. ಇದು ನಮಗೂ ಆತಂಕವನ್ನುಂಟುಮಾಡಿತು. ಎಲ್ಲವನ್ನೂ ಸೂಕ್ಷ್ಮವಾಗಿ ಮಾಡಲು ಮತ್ತು ಕಾರ್ಯಕ್ರಮವನ್ನು…
ಸವದತ್ತಿ: ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರದ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆಗಾಗಿ ಯಲ್ಲಮ್ಮ ಸನ್ನಿಧಿಗೆ ಆಗಮಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೇವಿಯ ದರ್ಶನ ಪಡೆದು ಪೂಜೆ ಸಲ್ಲಿಸಿದರು. ಇಂದು ಯಲ್ಲಮ್ಮನ ಗುಡ್ಡದಲ್ಲಿ ಸಿಎಂ ಸಿದ್ಧರಾಮಯ್ಯ ಆರತಿ ಆಗುವವರೆಗೂ ಗರ್ಭಗುಡಿಯಲ್ಲೇ ಇದ್ದು ರೇಣುಕಾ ಯಲ್ಲಮ್ಮನ ದರ್ಶನವನ್ನು ಪಡೆದರು. ಆರತಿ ತಟ್ಟೆಗೆ 500 ರೂ ಹಾಕಿದರು. ತಾವೇ ಕುಂಕುಮ ಇಟ್ಟುಕೊಂಡರು. ಈ ಸಂದರ್ಭದಲ್ಲಿ ಅರ್ಚಕರು ಸಿಎಂ ಪತ್ನಿ ಪಾರ್ವತಿ ಹೆಸರಿನಲ್ಲಿ ವಿಶೇಷ ಅರ್ಚನೆಯನ್ನು ಮಾಡಿದರು. ಬಳಿಕ, ಶ್ರೀ ರೇಣುಕಾ ಯಲ್ಲಮ್ಮ ದೇವಸ್ಥಾನ ಅಭಿವೃದ್ಧಿ ಪ್ರಾಧಿಕಾರ ಮತ್ತು ಶ್ರೀ ರೇಣುಕಾ ಯಲ್ಲಮ್ಮ ಕ್ಷೇತ್ರ ಪ್ರವಾಸೋದ್ಯಮ ಅಭಿವೃದ್ಧಿ ಮಂಡಳಿಯ ಪ್ರಥಮ ಸಭೆಯನ್ನು ತಮ್ಮದೇ ಅಧ್ಯಕ್ಷತೆಯಲ್ಲಿ ನಡೆಸಿದರು. ಸಭೆಯಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಪ್ರವಾಸೋದ್ಯಮ ಸಚಿವರಾದ ಹೆಚ್.ಕೆ.ಪಾಟೀಲ್, ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ, ಲೋಕೋಪಯೋಗಿ ಮತ್ತು ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್, ಕ್ಷೇತ್ರದ ಶಾಸಕರಾದ ವಿಶ್ವಾಸ್ ವ ವೈದ್ಯ ಮತ್ತು ಜಿಲ್ಲೆಯ…
ಬೆಂಗಳೂರು: ಒಳ ಮೀಸಲಾತಿಗೆ ಪ್ರಧಾನಿ ನರೇಂದ್ರ ಮೋದಿಯವರ ಸಹಮತವಿದೆ. ಹಿಂದೆ ಬಿಜೆಪಿ ಸರ್ಕಾರ ಕೂಡ ಈ ಕುರಿತು ಪ್ರಯತ್ನ ಮಾಡಿತ್ತು. ಆದರೆ ಕಾಂಗ್ರೆಸ್ ಸರ್ಕಾರ ಮಾತ್ರ ಒಳ ಮೀಸಲಾತಿ ಜಾರಿಗೆ ಮೀನಮೇಷ ಎಣಿಸುತ್ತಿದೆ ಎಂದು ಪ್ರತಿಪಕ್ಷ ನಾಯಕ ಆರ್.ಅಶೋಕ ಆಕ್ರೋಶ ವ್ಯಕ್ತಪಡಿಸಿದರು. ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮುಖ್ಯಮಂತ್ರಿ ಸಿದ್ದರಾಮಯ್ಯ ಸೇರಿದಂತೆ ಕಾಂಗ್ರೆಸ್ ನಾಯಕರು, ಒಳ ಮೀಸಲಾತಿ ಬಗ್ಗೆ ದೊಡ್ಡದಾಗಿ ಮಾತಾಡುತ್ತಾರೆ. ಜಾತಿ ಗಣತಿಯ ಬಗ್ಗೆ ಶಂಖ ಊದುತ್ತಿರುತ್ತಾರೆ. ಒಳ ಮೀಸಲಾತಿಯ ಅಧಿಕಾರವನ್ನು ರಾಜ್ಯ ಸರ್ಕಾರಗಳಿಗೆ ನೀಡಿರುವುದನ್ನು ಸುಪ್ರೀಂ ಕೋರ್ಟ್ ಎತ್ತಿ ಹಿಡಿದಿದೆ. ಹಿಂದಿನ ನಮ್ಮ ಬಿಜೆಪಿ ಸರ್ಕಾರ ಒಳ ಮೀಸಲಾತಿಯನ್ನು ಜಾರಿಗೆ ತಂದಿತ್ತು. ಪ್ರಧಾನಿ ನರೇಂದ್ರ ಮೋದಿ ತೆಲಂಗಾಣಕ್ಕೆ ಬಂದಾಗ ಒಳ ಮೀಸಲಾತಿಗೆ ಅನುಮೋದನೆ ನೀಡಿದ್ದರು. ಆದರೂ ಕಾಂಗ್ರೆಸ್ ಮಾತ್ರ ಇನ್ನೂ ಮೀನಮೇಷ ಎಣಿಸುತ್ತಿದೆ ಎಂದು ದೂರಿದರು. ರಾಜ್ಯದಲ್ಲಿ ಈಗ ಎಸ್ಐಟಿಯೇ ಕಂಡುಬರುತ್ತಿದೆ. ಒಳ ಮೀಸಲಾತಿ ಮತ್ತು ಜಾತಿ ಗಣತಿ ವಿಚಾರದಲ್ಲೂ ಕಾಂಗ್ರೆಸ್ ಸರ್ಕಾರ ಎಸ್ಐಟಿ ರಚಿಸಿದರೆ ಅಚ್ಚರಿ ಇಲ್ಲ. ಇಲ್ಲಿ…
ಶಿವಮೊಗ್ಗ: ಸಿಗಂದೂರಿಗೆ ತೆರಳುತ್ತಿದ್ದಂತ ಪ್ರವಾಸಿಗರ ಕಾರೊಂದು ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾಗಿದೆ. ಈ ಪರಿಣಾಮ ಅದರಲ್ಲಿದ್ದಂತ ಓರ್ವ ಯುವಕ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಶಿವಮೊಗ್ಗ ಜಿಲ್ಲೆಯ ಸಾಗರ ತಾಲ್ಲೂಕಿನ ಕುಂಸಿ ಸಮೀಪದ ಕೆರೆಕೋಡಿ ಬಳಿಯಲ್ಲಿ ಚಾಲಕನ ನಿಯಂತ್ರಣ ತಪ್ಪಿ ಗದ್ದೆಗೆ ಉರುಳಿ ಬಿದ್ದಿದೆ. ಈ ಅಪಘಾತದಲ್ಲಿ ಬೆಂಗಳೂರಿನ ನೆಲಮಂಗಲ ಮೂಲದ ಚಂದನ್ (26) ಎಂಬಾತ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಬೆಂಗಳೂರಿನಿಂದ ಯುವಕರ ತಂಡವು ಶಿವಮೊಗ್ಗ ಜಿಲ್ಲೆಯ ಸಾಗರದ ಸಿಗಂದೂರಿಗೆ ಪ್ರವಾಸಕ್ಕೆ ತೆರಳುತ್ತಿದ್ದರು. ಕಾರಿನಲ್ಲಿ ಕೊಡಗು ಮೂಲದ ನಂದನ್, ಕೋಲಾರದ ಕೋದಂಡ, ಹಾಸನದ ಭರತ್ ಹಾಗೂ ಮಂಡ್ಯ ಜಿಲ್ಲೆಯ ಯೋಗೇಶ್ ಎಂಬುವರಿದ್ದರು. ಇವರಿಗೆ ಗಂಭೀರ ಗಾಯವಾಗಿದ್ದು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. https://kannadanewsnow.com/kannada/after-siddaramaiahs-wife-mallikarjun-kharge-returns-5-acres-of-government-land/ https://kannadanewsnow.com/kannada/breaking-cm-siddaramaiah-clarifies-that-state-government-has-withdrawn-old-hubballi-riots-case/
ಬೆಂಗಳೂರು: ಮುಡಾ ಹಗರಣದ ಕಾನೂನು ಸಂಕಷ್ಟ ಬಿಗಿಯಾಗುತ್ತಿದ್ದಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ಪತ್ನಿ ತಮಗೆ ಮುಡಾದಿಂದ ನೀಡಿದ್ದಂತ 14 ಸೈಟ್ ಗಳನ್ನು ವಾಪಾಸ್ ಮಾಡಿದ್ದರು. ಇದೇ ಹಾದಿಯನ್ನು ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಕೂಡ ಹಿಡಿದಿದ್ದಾರೆ. ತಮಗೆ ಕೆಐಡಿಎಬಿಯಿಂದ ನೀಡಲಾಗಿದ್ದಂತ ಐದು ಎಕರೆ ಭೂಮಿಯನ್ನು ವಾಪಾಸ್ ನೀಡಿದ್ದಾರೆ. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರ ಕುಟುಂಬದಿಂದಲೂ ಭೂ ಹಗರಣ ನಡೆಸಲಾಗಿದೆ. ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವಂತೆ ಬಿಜೆಪಿ ನಾಯಕ ಎನ್ ಆರ್ ರಮೇಶ್ ಅವರು ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈ ಬೆನ್ನಲ್ಲೇ ಮಲ್ಲಿಕಾರ್ಜುನ ಖರ್ಗೆ ಕುಟುಂಬದಿಂದಲೂ 5 ಎಕರೆ ಭೂಮಿಯನ್ನು ಕೆಐಎಡಿಬಿ ಸಂಸ್ಥೆಗೆ ವಾಪಾಸ್ ನೀಡಲಾಗಿದೆ. ಅಂದಹಾಗೇ ಮಲ್ಲಿಕಾರ್ಜುನ ಖರ್ಗೆ ಕುಟುಂಬದಿಂದ ಸಿದ್ದಾರ್ಥ್ ವಿಹಾರ ಟ್ರಸ್ಟ್ ನಿಂದ ಒಂದೇ ಕಾರಣಕ್ಕೆ ಒಂದೇ ಸಂಸ್ಥೆಯಿಂದ ಎರಡು ಬಾರಿ ಸರ್ಕಾರಿ ಭೂಮಿಯನ್ನು ಪಡೆಯಲಾಗಿದೆ ಎಂಬುದಾಗಿ ಬಿಜೆಪಿಯ ಎನ್ ಆರ್ ರಮೇಶ್ ಲೋಕಾಯುಕ್ತಕ್ಕೆ ದೂರು ನೀಡಿದ್ದರು. ಈಗ ಈ ಟ್ರಸ್ಟ್ ಗೆ ಎರಡು ಬಾರಿ…
ಹುಬ್ಬಳ್ಳಿ : ಬಿಜೆಪಿಯವರು ನಿರಾಧಾರವಾದ ವಿಚಾರಗಳ ಬಗ್ಗೆಯೇ ಹೋರಾಟ ಮಾಡುತ್ತಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಹುಬ್ಬಳ್ಳಿ ಗಲಭೆ ಪ್ರಕರಣವನ್ನು ಸರ್ಕಾರ ವಾಪಸ್ಸು ಪಡೆದಿರುವ ಬಗ್ಗೆ ಬಿಜೆಪಿಯವರು ಪ್ರತಿಭಟನೆ ನಡೆಸುವ ಬಗ್ಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರಿಗೆ ಪ್ರತಿಕ್ರಿಯೆ ನೀಡುತ್ತಾ ಮಾತನಾಡಿದರು. ಸುಳ್ಳು ಮೊಕದ್ದಮೆಗಳು, ಹೋರಾಟಗಳನ್ನು ಕಾರಣವಾಗಿಸಿ ಮೊಕದ್ದಮೆಗಳಿದ್ದರೆ ಅವುಗಳ ಬಗ್ಗೆ ಸೂಕ್ತವಾಗಿ ತೀರ್ಮಾನಿಸಿ ಪ್ರಕರಣಗಳನ್ನು ವಾವಸ್ಸು ಪಡೆಯಲು ಸಚಿವಸಂಪುಟ ಉಪಸಮಿತಿಯನ್ನು ರಚಿಸಲಾಗಿದ್ದು , ಇಂತಹ ಸಮಿತಿಗಳು ಬಿಜೆಪಿ ಸೇರಿದಂತೆ ಎಲ್ಲರ ಅಧಿಕಾರವಧಿಯಲ್ಲಿಯೂ ಅಸ್ತಿತ್ವದಲ್ಲಿತ್ತು ಎಂದಿದ್ದಾರೆ. ಅಂತೆಯೇ ಹುಬ್ಬಳ್ಳಿ ಗಲಭೆ ಪ್ರಕರಣದ ಸುಳ್ಳು ಪ್ರಕರಣವೆಂದು ನಿರ್ಧರಿಸಿ ಪ್ರಕರಣವನ್ನು ವಾಪಸ್ಸು ಪಡೆಯಲಾಗಿದೆ. ಈ ತೀರ್ಮಾನವನ್ನು ನ್ಯಾಯಾಲಯದ ಮುಂದೆ ಮಂಡಿಸಿದ ನಂತರವಷ್ಟೇ ಪ್ರಕರಣವನ್ನು ವಾಪಸ್ಸು ಪಡೆಯಲು ಸಾಧ್ಯ. ಇದೇ ರೀತಿ ಬಿಜೆಪಿಯವರ ವಿರುದ್ಧ ಪ್ರಕರಣಗಳನ್ನೂ ಸಹ ವಾಪಸ್ಸು ಪಡೆಯಲಾಗಿದೆ ಎಂದು ಸ್ಪಷ್ಟಪಡಿಸಿದರು. https://kannadanewsnow.com/kannada/yajamani-builds-library-for-students-writing-competitive-exams-with-grihalakshmi-money/ https://kannadanewsnow.com/kannada/breaking-cm-siddaramaiah-clarifies-that-state-government-has-withdrawn-old-hubballi-riots-case/