Subscribe to Updates
Get the latest creative news from FooBar about art, design and business.
Author: kannadanewsnow09
ಅಸ್ಸಾಂ: ನಮ್ಮ ಹೋರಾಟ ಮುಗಿದಿಲ್ಲ. ಒಬ್ಬನೇ ಒಬ್ಬ ಭಯೋತ್ಪಾದಕನನ್ನು ದೇಶದಲ್ಲಿ ಬಿಡುವುದಿಲ್ಲ. ಹುಡುಕಿ ಹುಡುಕಿ ಉಗ್ರರನ್ನು ಮಟ್ಟ ಹಾಕುವುದಾಗಿ ಕೇಂದ್ರ ಗೃಹ ಸಚಿವ ಅಮಿತ್ ಶಾ ಪಾಕಿಸ್ತಾನಕ್ಕೆ ಬಹುದೊಡ್ಡ ಸಂದೇಶವನ್ನು ನೀಡಿದ್ದಾರೆ. ಪಹಲ್ಗಾಮ್ ದಾಳಿಯಲ್ಲಿ ಭಾಗಿಯಾಗಿರುವ ಭಯೋತ್ಪಾದಕರು “ಯುದ್ಧವನ್ನು ಗೆದ್ದಿದ್ದಾರೆ” ಎಂದು ಭಾವಿಸಬಾರದು ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಎಚ್ಚರಿಕೆ ನೀಡಿದರು. ತಮ್ಮ ಮೊದಲ ಸಾರ್ವಜನಿಕ ಹೇಳಿಕೆಯಲ್ಲಿ ಹೋರಾಟ ಇನ್ನೂ ಮುಗಿದಿಲ್ಲ. ನಮ್ಮ 27 ಜನರನ್ನು ಕೊಂದ ನಂತರ ಅವರು ಯುದ್ಧವನ್ನು ಗೆದ್ದಿದ್ದಾರೆ ಎಂದು ಅವರು (ಭಯೋತ್ಪಾದಕರು) ಭಾವಿಸಬಾರದು. ನಾವು ಉಗ್ರರನ್ನು ಹುಡುಕಿ ಹುಡುಕಿ ಹೊಡೆದುರುಳಿಸುವುದಾಗಿ ಅವರು ಅಸ್ಸಾಂನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ಹೇಳಿದರು. ಪಹಲ್ಗಾಮ್ನಲ್ಲಿ ನಾಗರಿಕರನ್ನು ಕೊಂದ ಪ್ರತಿಯೊಬ್ಬ ಭಯೋತ್ಪಾದಕನನ್ನು ಹುಡುಕಿ ಶಿಕ್ಷಿಸಲಾಗುವುದು ಎಂದು ಶಾ ಹೇಳಿದರು. ನರೇಂದ್ರ ಮೋದಿ ಸರ್ಕಾರ ಭಯೋತ್ಪಾದನೆಯನ್ನು ಬೇರುಸಹಿತ ಕಿತ್ತುಹಾಕುತ್ತದೆ ಮತ್ತು ಪಹಲ್ಗಾಮ್ ಭಯೋತ್ಪಾದಕ ದಾಳಿಗೆ ತಕ್ಕ ಉತ್ತರ ನೀಡುತ್ತದೆ ಎಂದು ಹೇಳಿದರು. https://twitter.com/AmitShah/status/1917910515398988034 ಕಳೆದ ವಾರ, ಬಿಹಾರದ ಮಧುಬನಿಯಲ್ಲಿ ನಡೆದ…
ಬೆಂಗಳೂರು: ಜನಗಣತಿ ಯೊಂದಿಗೆ ಜಾತಿಗಣತಿ ಮಾಡುವ ಕೇಂದ್ರ ಸರ್ಕಾರದ ನಿರ್ಧಾರವನ್ನು ಸ್ವಾಗತಿಸುತ್ತೇವೆ. ಅದರೊಂದಿಗೆ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ ಸಮೀಕ್ಷೆಯೂ ನಡೆಯಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೇಂದ್ರ ಸರ್ಕಾರವನ್ನು ಆಗ್ರಹಿಸಿದರು. ಅವರು ಇಂದು ಕಾವೇರಿ ನಿವಾಸದಲ್ಲಿ ಪತ್ರಿಕಾಗೋಷ್ಠಿಯಲ್ಲಿಮಾತನಾಡಿದರು. ದೇಶದ ಜನತೆಗೆ ಸಾಮಾಜಿಕ ನ್ಯಾಯ ಒದಗಿಸುವ ನಿಟ್ಟಿನಲ್ಲಿ ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ನಡೆಸಬೇಕು. ಮೀಸಲಾತಿಯಲ್ಲಿ ಶೇ.50% ಗರಿಷ್ಠ ಪರಿಮಿತಿಯನ್ನು ಸಡಿಲಗೊಳಿಸಿ ಜನಸಂಖ್ಯೆ ಅನುಗುಣವಾಗಿ ಮೀಸಲಾತಿ ಕಲ್ಪಿಸಬೇಕು. ಜಾತಿ ಗಣತಿಗೆ ಕೂಡಲೇ ದಿನಾಂಕ ನಿಗದಿಗೊಳಿಸಬೇಕು ಎಂದರು. ರಾಹುಲ್ ಗಾಂಧಿಯವರು ಕೂಡಾ ಇದನ್ನೇ ಆಗ್ರಹಿಸಿದ್ದು, ಜಾತಿ ಗಣತಿ ವೇಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆ ನಡೆಸಲು ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು. ಬಡವರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ಅನುಕೂಲ ಸಾಮಾಜಿಕವಾಗಿ , ಶೈಕ್ಷಣಿಕವಾಗಿ ಹಿಂದುಳಿದವರಿಗೆ ಮೀಸಲಾತಿ ನೀಡಬೇಕೆಂದು ಸಂವಿಧಾನ ಹೇಳುತ್ತದೆ. ಜಾತಿ ಗಣತಿ ಯೊಂದಿಗೆ ಸಾಮಾಜಿಕ, ಆರ್ಥಿಕ , ಶೈಕ್ಷಣಿಕ ಮಾಡಿದರೆ ಜನಸಂಖ್ಯೆಗನುಗುಣವಾಗಿ ಮೀಸಲಾತಿ ನೀಡಲು ಅನುಕೂಲವಾಗುತ್ತದೆ ಮತ್ತು ಅವರನ್ನು ಮುಖ್ಯವಾಹಿನಿಗೆ ತರಲು ಸಾಧ್ಯವಾಗುತ್ತದೆ ಎಂದರು. ಬಿಹಾರ ಚುನಾವಣೆ ಹಿನ್ನೆಲೆಯಲ್ಲಿ…
ನವದೆಹಲಿ: ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಇಂದು ಮುಂಬೈನ ಜಿಯೋ ವರ್ಲ್ಡ್ ಸೆಂಟರ್ ನಲ್ಲಿ ಭಾರತದ ಮೊದಲ ಜಾಗತಿಕ ಶ್ರವಣ-ದೃಶ್ಯ ಮತ್ತು ಮನರಂಜನಾ ಶೃಂಗಸಭೆ-ವೇವ್ಸ್ 2025 ಅನ್ನು ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಇಂದು ಆಚರಿಸಲಾಗುತ್ತಿರುವ ಮಹಾರಾಷ್ಟ್ರ ದಿನ ಮತ್ತು ಗುಜರಾತ್ ರಾಜ್ಯೋತ್ಸವದ ಸಂದರ್ಭದಲ್ಲಿ ಎಲ್ಲರಿಗೂ ಶುಭಾಶಯ ಕೋರಿದರು. ಎಲ್ಲಾ ಅಂತರರಾಷ್ಟ್ರೀಯ ಗಣ್ಯರು, ರಾಯಭಾರಿಗಳು ಮತ್ತು ಸೃಜನಶೀಲ ಉದ್ಯಮದ ನಾಯಕರ ಉಪಸ್ಥಿತಿಯನ್ನು ಶ್ಲಾಘಿಸಿದ ಪ್ರಧಾನಿ, 100 ಕ್ಕೂ ಹೆಚ್ಚು ದೇಶಗಳ ಕಲಾವಿದರು, ನಾವೀನ್ಯಕಾರರು, ಹೂಡಿಕೆದಾರರು ಮತ್ತು ನೀತಿ ನಿರೂಪಕರು ಒಟ್ಟಾಗಿ ಪ್ರತಿಭೆ ಮತ್ತು ಸೃಜನಶೀಲತೆಯ ಜಾಗತಿಕ ಪೂರಕ ವ್ಯವಸ್ಥೆಗೆ ಅಡಿಪಾಯ ಹಾಕಿದ್ದಾರೆ ಎಂದು ಒತ್ತಿ ಹೇಳಿದರು. “ವೇವ್ಸ್ ಕೇವಲ ಒಂದು ಸಂಕ್ಷಿಪ್ತ ರೂಪವಲ್ಲ, ಸಂಸ್ಕೃತಿ, ಸೃಜನಶೀಲತೆ ಮತ್ತು ಜಾಗತಿಕ ಸಂಪರ್ಕವನ್ನು ಪ್ರತಿನಿಧಿಸುವ ಅಲೆಯಾಗಿದೆ” ಎಂದು ಅವರು ಹೇಳಿದರು. ಶೃಂಗಸಭೆಯು ಚಲನಚಿತ್ರಗಳು, ಸಂಗೀತ, ಗೇಮಿಂಗ್, ಅನಿಮೇಷನ್ ಮತ್ತು ಕಥೆ ಹೇಳುವಿಕೆಯ ವಿಸ್ತಾರವಾದ ಜಗತ್ತನ್ನು ಪ್ರದರ್ಶಿಸುತ್ತದೆ, ಕಲಾವಿದರು ಮತ್ತು ಕಂಟೆಂಟ್ ಸೃಷ್ಟಿಕರ್ತರು…
ಬೆಂಗಳೂರು: ನೈಋತ್ಯ ರೈಲ್ವೆಯು ತನ್ನ ವ್ಯಾಪ್ತಿಯಲ್ಲಿ ಚಲಿಸುವ ಮಾಲ್ಗುಡಿ ಎಕ್ಸ್ ಪ್ರೆಸ್ ಮತ್ತು ಪ್ಯಾಸೆಂಜರ್ ರೈಲುಗಳ ವೇಳಾಪಟ್ಟಿಯನ್ನು ಪರಿಷ್ಕರಿಸಿದೆ. ಈ ಪರಿಷ್ಕೃತ ಸಮಯವು ಮೇ 5, 2025 ರಿಂದ ಜಾರಿಗೆ ಬರಲಿದೆ. ಪರಿಷ್ಕೃತ ವೇಳಾಪಟ್ಟಿಯ ಪ್ರಕಾರ, ರೈಲು ಸಂಖ್ಯೆ 20623 ಅಶೋಕಪುರಂ-ಕೆಎಸ್ಆರ್ ಬೆಂಗಳೂರು ಮಾಲ್ಗುಡಿ ಡೈಲಿ ಎಕ್ಸ್ ಪ್ರೆಸ್ ಇನ್ನು ಮುಂದೆ ಅಶೋಕಪುರಂನಿಂದ ಬೆಳಿಗ್ಗೆ 08.30ರ ಬದಲು 10 ನಿಮಿಷ ಮುಂಚಿತವಾಗಿ, ಅಂದರೆ 08.20ಕ್ಕೆ ಹೊರಡಲಿದೆ. ಈ ರೈಲು ಮೈಸೂರು ಜಂಕ್ಷನ್ಗೆ ನಿಗದಿತ ಸಮಯಕ್ಕಿಂತ ಮುಂಚಿತವಾಗಿ 08.30ಕ್ಕೆ ಆಗಮಿಸಿ, 08.35ಕ್ಕೆ ನಿರ್ಗಮಿಸಲಿದೆ. ನಂತರ, ಈ ರೈಲು ಪಾಂಡವಪುರಕ್ಕೆ 08.54ಕ್ಕೆ ಆಗಮಿಸಿ 08.55ಕ್ಕೆ, ಮಂಡ್ಯಕ್ಕೆ 09.11ಕ್ಕೆ ಆಗಮಿಸಿ 09.12ಕ್ಕೆ, ಮದ್ದೂರಿಗೆ 09.26ಕ್ಕೆ ಆಗಮಿಸಿ 09.27ಕ್ಕೆ, ಚನ್ನಪಟ್ಟಣಕ್ಕೆ 09.42ಕ್ಕೆ ಆಗಮಿಸಿ 09.43ಕ್ಕೆ, ರಾಮನಗರಂ ನಿಲ್ದಾಣಕ್ಕೆ 09.52ಕ್ಕೆ ಆಗಮಿಸಿ 09.53ಕ್ಕೆ, ಬಿಡದಿಗೆ 10.05ಕ್ಕೆ ಆಗಮಿಸಿ 10.06ಕ್ಕೆ ಮತ್ತು ಕೆಂಗೇರಿಗೆ 10.22ಕ್ಕೆ ಆಗಮಿಸಿ 10.23ಕ್ಕೆ ನಿರ್ಗಮಿಸಲಿದೆ. ಅಂತಿಮವಾಗಿ, ಈ ರೈಲು ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ಬೆಂಗಳೂರು ನಿಲ್ದಾಣವನ್ನು ಬೆಳಿಗ್ಗೆ…
ಮಂಗಳೂರು: ಮಂಗಳೂರಲ್ಲಿ ಗುಂಪಿನಿಂದ ಕೇರಳ ಮೂಲದ ವ್ಯಕ್ತಿಯೊಬ್ಬನ ಮೇಲೆ ದಾಳಿ ಮಾಡಿ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದ ಮೂವರು ಪೊಲೀಸರನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ. ಈ ಬಗ್ಗೆ ಮಂಗಳೂರು ಕಮೀಷನರ್ ಅನುಪಮ್ ಅಗರ್ವಾಲ್ ಮಾಹಿತಿ ನೀಡಿದ್ದು, ಮಂಗಳೂರಲ್ಲಿ ಕೇರಳ ಮೂಲದ ವ್ಯಕ್ತಿಯ ಕೊಲೆ ಪ್ರಕರಣ ಸಂಬಂಧ ಕರ್ತವ್ಯ ನಿರ್ಲಕ್ಷ್ಯ ತೋರಿದಂತ ಮೂವರು ಪೊಲೀಸರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಕರ್ತವ್ಯ ಲೋಪದ ಆರೋಪದಡಿ ಮಂಗಳೂರು ಗ್ರಾಮಾಂತರ ಠಾಣೆಯ ಇನ್ಸ್ ಪೆಕ್ಟರ್ ಶಿವಕುಮಾರ್, ಹೆಡ್ ಕಾನ್ಸ್ ಟೇಬಲ್ ಪಿ.ಚಂದ್ರ ಹಾಗೂ ಪೊಲೀಸ್ ಕಾನ್ಸ್ ಸ್ಟೇಬಲ್ ಯಲ್ಲಾಲಿಂಗ ಅವರನ್ನು ಅಮಾನತುಗೊಳಿಸಿರುವುದಾಗಿ ತಿಳಿಸಿದ್ದಾರೆ. ಕೇರಳ ಮೂಲದ ವ್ಯಕ್ತಿ ಕೊಲೆ ಪ್ರಕರಣ ಸಂಬಂಧ 20 ಜನರನ್ನು ಬಂಧಿಸಲಾಗಿದೆ. ತಲೆಮರೆಸಿಕೊಂಡಿರುವಂತ ಇತರೆ ಆರೋಪಿಗಳಿಗಾಗಿ ಹುಡುಕಾಟ ಮಾಡಲಾಗುತ್ತಿದೆ. ಈಗಾಗಲೇ ಘಟನಾ ಸ್ಥಳದಲ್ಲಿದ್ದಂತ 15 ಜನರಿಗೆ ನೋಟಿಸ್ ಜಾರಿ ಮಾಡಿದ್ದೇವೆ. ಘಟನಾ ಸ್ಥಳದಲ್ಲಿ ಇರುವಂತ ಸಿಸಿಟಿವಿಗಳನ್ನು ಪರಿಶೀಲನೆ ಮಾಡಲಾಗುತ್ತಿದೆ ಎಂದರು. https://kannadanewsnow.com/kannada/pakistan-partially-closes-karachi-lahore-airspace-till-may-31/ https://kannadanewsnow.com/kannada/pahalgam-terror-attack-sc-refuses-to-entertain-plea-seeking-judicial-probe/
ಕರಾಚಿ: ಪಾಕಿಸ್ತಾನ ವಿಮಾನ ನಿಲ್ದಾಣ ಪ್ರಾಧಿಕಾರ (Pakistan Airports Authority – PAA) ಎರಡು ನಗರಗಳಲ್ಲಿ ವಾಯುಪ್ರದೇಶದ ನಿರ್ದಿಷ್ಟ ಭಾಗಗಳನ್ನು ತಾತ್ಕಾಲಿಕವಾಗಿ ಮುಚ್ಚುವುದಾಗಿ ಘೋಷಿಸಿ ಹೊಸ ನೋಟಾಮ್ (ವಾಯುಪಡೆಗೆ ನೋಟಿಸ್) ನೀಡಿದೆ ಎಂದು ಎಆರ್ವೈ ನ್ಯೂಸ್ ವರದಿ ಮಾಡಿದೆ. ನಿರ್ಬಂಧಿತ ವಾಯುಪ್ರದೇಶವನ್ನು ಮೇ 1 ರಿಂದ ಮೇ 31, 2025 ರವರೆಗೆ ಪ್ರತಿದಿನ ಬೆಳಿಗ್ಗೆ 4 ರಿಂದ ರಾತ್ರಿ 8 ರವರೆಗೆ (ಸ್ಥಳೀಯ ಸಮಯ) ಮುಚ್ಚಲಾಗುವುದು. ಭದ್ರತಾ ಕಾರಣಗಳಿಗಾಗಿ ಮುಚ್ಚುವಿಕೆಯನ್ನು ಜಾರಿಗೆ ತರಲಾಗಿದೆ ಎಂದು ವಿಮಾನಯಾನ ಮೂಲಗಳು ತಿಳಿಸಿವೆ. ನಿರ್ಬಂಧಗಳ ಹೊರತಾಗಿಯೂ, ವಾಣಿಜ್ಯ ವಿಮಾನ ಕಾರ್ಯಾಚರಣೆಗಳು ಪರ್ಯಾಯ ಮಾರ್ಗಗಳ ಮೂಲಕ ತಡೆರಹಿತವಾಗಿ ಮುಂದುವರಿಯುತ್ತವೆ. ಸುರಕ್ಷಿತ ಮತ್ತು ಸುಗಮ ಕಾರ್ಯಾಚರಣೆಯನ್ನು ಖಚಿತಪಡಿಸಿಕೊಳ್ಳಲು ಏರ್ ಟ್ರಾಫಿಕ್ ಕಂಟ್ರೋಲರ್ ಗಳು ಬೇರೆ ಬೇರೆ ಮಾರ್ಗ ವಿಮಾನಗಳನ್ನು ನಿರ್ವಹಿಸುತ್ತಾರೆ. https://kannadanewsnow.com/kannada/pahalgam-attack-indias-attari-wagah-border-sealed/ https://kannadanewsnow.com/kannada/pahalgam-terror-attack-sc-refuses-to-entertain-plea-seeking-judicial-probe/
ಅಟ್ಟಾರಿ: ಪಹಲ್ಗಾಮ್ ಭಯೋತ್ಪಾದಕ ದಾಳಿಯ ನಂತರ ಅಲ್ಪಾವಧಿಯ ವೀಸಾ ಹೊಂದಿರುವ ಎಲ್ಲಾ ಪಾಕಿಸ್ತಾನಿ ನಾಗರಿಕರು ಭಾರತವನ್ನು ತೊರೆಯುವಂತೆ ಕೇಂದ್ರ ಸರ್ಕಾರ ಆದೇಶಿಸಿದ ನಂತರ, ಭಾರತ ಮತ್ತು ಪಾಕಿಸ್ತಾನದ ನಡುವಿನ ‘ಅಟ್ಟಾರಿ-ವಾಘಾ ಗಡಿ’ ಕ್ರಾಸಿಂಗ್ ಪಾಯಿಂಟ್ ಅನ್ನು ಗುರುವಾರ (ಮೇ 1) ಸಂಪೂರ್ಣವಾಗಿ ಮುಚ್ಚಲಾಯಿತು. ಅಟ್ಟಾರಿ-ವಾಘಾ ಗಡಿ ಕ್ರಾಸಿಂಗ್ ಪಾಯಿಂಟ್ ಈಗ ಸಂಪೂರ್ಣವಾಗಿ ಮುಚ್ಚಲ್ಪಟ್ಟಿದೆ. ಇಂದು ಎರಡೂ ದೇಶಗಳಿಂದ ಯಾರೂ ಇನ್ನೊಂದು ಬದಿಗೆ ದಾಟಿಲ್ಲ ಎಂದು ಮೂಲಗಳು ದೃಢಪಡಿಸಿವೆ. ಬುಧವಾರ (ಏಪ್ರಿಲ್ 30) ಅಟ್ಟಾರಿ-ವಾಘಾ ಗಡಿಯ ಮೂಲಕ ಒಟ್ಟು 125 ಪಾಕಿಸ್ತಾನಿ ಪ್ರಜೆಗಳು ಭಾರತವನ್ನು ತೊರೆದಿದ್ದು, ಕಳೆದ ಏಳು ದಿನಗಳಲ್ಲಿ ದೇಶವನ್ನು ತೊರೆದ ಒಟ್ಟು ಪಾಕಿಸ್ತಾನಿಗಳ ಸಂಖ್ಯೆ 911 ಕ್ಕೆ ತಲುಪಿದೆ. ಪಾಕಿಸ್ತಾನಿ ವೀಸಾ ಹೊಂದಿರುವ ಹದಿನೈದು ಭಾರತೀಯ ನಾಗರಿಕರು ನಿನ್ನೆ ಪಾಕಿಸ್ತಾನಕ್ಕೆ ಗಡಿ ದಾಟಿದ್ದಾರೆ. ಇದರೊಂದಿಗೆ ಭಾರತದಿಂದ ನಿರ್ಗಮಿಸುತ್ತಿರುವವರ ಒಟ್ಟು ಸಂಖ್ಯೆ 23 ಕ್ಕೆ ಏರಿದೆ. ಅದೇ ರೀತಿ, ಪಂಜಾಬ್ನ ಅಮೃತಸರ ಜಿಲ್ಲೆಯ ಅಂತರರಾಷ್ಟ್ರೀಯ ಗಡಿ ದಾಟುವ ಸ್ಥಳದ ಮೂಲಕ 152…
ಕೋಲಾರ: ಪಹಲ್ಗಾಮ್ ನಲ್ಲಿ ಉಗ್ರರು ದಾಳಿ ನಡೆಸಿದ್ದಾರೆ. ಇದಕ್ಕೆ ಪಾಕಿಸ್ತಾನದ ಕುಮ್ಮಕ್ಕು ಇದೆ ಎನ್ನಲಾಗುತ್ತಿದೆ. ಇಂತಹ ಪಾಕಿಸ್ತಾನಕ್ಕೆ ಒಂದೇ ಒಂದು ಟೊಮ್ಯಾಟೋ ಕೊಡೋದಿಲ್ಲ ಅಂತ ಕರ್ನಾಟಕದ ರೈತರು ನಿರ್ಧರಿಸಿದ್ದಾರೆ. ಕೋಲಾರದಲ್ಲಿ ರೈತನೊಬ್ಬ ಮಾತನಾಡಿ, ಪಹಲ್ಗಾಮ್ ಉಗ್ರರ ದಾಳಿಗೆ ಕಾರಣವಾದಂತ ಪಾಕಿಸ್ತಾನಕ್ಕೆ ಟೊಮ್ಯಾಟೋ ಸರಬರಾಜು ನಿಲ್ಲಿಸೋದಾಗಿ ತಿಳಿಸಿದರು. ಈಗಾಗಲೇ ಕೋಲಾರದಿಂದ ಪಾಕಿಸ್ತಾನಕ್ಕೆ ಟನ್ ಗಟ್ಟಲೇ ಸರಬರಾಜು ಮಾಡಲಾಗುತ್ತಿದ್ದಂತ ಟೊಮ್ಯಾಟೋ ನಿಲ್ಲಿಸಲಾಗಿದೆ. ಪಹಲ್ಗಾಮ್ ದಾಳಿಯ ಬಳಿಕ ಕೇಂದ್ರ ಸರ್ಕಾರದ ನಿರ್ದೇಶನಕ್ಕೆ ಬದ್ಧವಾಗಿದ್ದೇವೆ ಎಂದರು. ಮಾನವೀಯತೆ ದೃಷ್ಠಿಯಿಂದ ಟೊಮ್ಯಾಟೋ ಕೊಡುತ್ತೇವೆ. ಆದರೇ ಕಾಶ್ಮೀರದ ಪಹಲ್ಗಾಮ್ ಮೇಲೆ ಉಗ್ರರು ನಡೆಸಿದ ನಂತ್ರ ಪಾಕಿಸ್ತಾನಕ್ಕೆ ಟೊಮ್ಯಾಟೋ ಸರಬರಾಜನ್ನೇ ನಿಲ್ಲಿಸುವುದಾಗಿ ತಿಳಿಸಿದರು. https://kannadanewsnow.com/kannada/sslc-exam-1-result-to-be-declared-tomorrow-at-11-30-am/ https://kannadanewsnow.com/kannada/pahalgam-terror-attack-sc-refuses-to-entertain-plea-seeking-judicial-probe/
ಬೆಂಗಳೂರು: ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ( Karnataka SSLC Exam ) ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಬೆಳಗ್ಗೆ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ( Karnataka SSLC Exam-1 Results ) ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು…
ಬೆಂಗಳೂರು: ವಿದ್ಯಾರ್ಥಿಗಳು ಕಾತುರಲಿಂದ ಕಾಯುತ್ತಿರುವಂತ ಎಸ್ ಎಸ್ ಎಲ್ ಸಿ ಪರೀಕ್ಷೆ ಫಲಿತಾಂಶದ ಬಗ್ಗೆ ಅಥಿಕೃತ ಮಾಹಿತಿ ಹೊರ ಬಿದ್ದಿದೆ. ನಾಳೆ ಮಧ್ಯಾಹ್ನ 12.30ಕ್ಕೆ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಫಲಿತಾಂಶ ಘೋಷಣೆಯಾಗಲಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರಾದಂತ ಹೆಚ್.ಬಸವರಾಜೇಂದ್ರ ಅವರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2025ನೇ ಸಾಲಿನ ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಪರೀಕ್ಷೆಗಳು ದಿನಾಂಕ: 21-03-2025 ರಿಂದ 04-04-2025ರವರೆವಿಗೆ ನಡೆಸಲಾಯಿತು ಎಂದಿದ್ದಾರೆ. ಉಚಿತ ಸುದ್ದಿ ಪಡೆದುಕೊಳ್ಳುವುದಕ್ಕೆ ನಮ್ಮ ವಾಟ್ಸಪ್ ಗುಂಪು ಸೇರಿಕೊಳ್ಳಿ 👉 https://chat.whatsapp.com/LE44dr3kKYG7AHE6b6ksTh ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ. ಎಸ್.ಎಸ್.ಎಲ್.ಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 02-05-2025 ರಂದು ಬೆಳಿಗ್ಗೆ 11-30 ಗಂಟೆಗೆ ಕರ್ನಾಟಕ ಶಾಲಾ ವರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಮಾನ್ಯ ಸಚಿವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದ್ದಾರೆ. ಈ…