Author: kannadanewsnow09

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಮತ್ತೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಸಂಚಾರ ನಿಯಮ ಉಲ್ಲಂಘಿಸಿದಂತ ವಾಹನ ಸವಾರರಿಗೆ ಮತ್ತೆ ಶೇ.50ರಷ್ಟು ದಂಡ ಪಾವತಿಗೆ ಡಿಸೆಂಬರ್.12ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ಹೊರಡಿಸಿದ್ದಾರೆ. ವಾಹನ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ದಂಡ ಪಾವತಿಗೆ ನವೆಂಬರ್.21ರಿಂದ ಡಿಸೆಂಬರ್.12ರವರೆಗೆ ಅವಧಿ ವಿಸ್ತರಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ನಾಳೆಯಿಂದ ಡಿಸೆಂಬರ್ 12ರವರೆಗೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಲಾಗಿದೆ. ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಪಾವತಿಸಲು ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ. https://kannadanewsnow.com/kannada/alert-using-these-passwords-could-lead-to-your-data-leak-be-careful/ https://kannadanewsnow.com/kannada/it-is-a-superstition-that-if-i-come-to-chamarajanagar-i-will-lose-power-my-power-is-secure-now-and-in-the-future-cm/

Read More

ಬೆಂಗಳೂರು: ರಾಜ್ಯದ ವಾಹನ ಸವಾರರಿಗೆ ಮತ್ತೆ ಸಾರಿಗೆ ಇಲಾಖೆಯಿಂದ ಗುಡ್ ನ್ಯೂಸ್ ನೀಡಲಾಗಿದೆ. ಅದೇ ಶೇ.50ರಷ್ಟು ದಂಡ ಪಾವತಿಗೆ ಡಿಸೆಂಬರ್.12ರವರೆಗೆ ಕಾಲಾವಕಾಶ ನೀಡಲಾಗಿದೆ. ಈ ಕುರಿತಂತೆ ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿ ರಂಗಪ್ಪ ಕರಿಗಾರ ಅವರು ಆದೇಶ ಹೊರಡಿಸಿದ್ದಾರೆ. ವಾಹನ ಸವಾರರಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.50ರಷ್ಟು ದಂಡ ಪಾವತಿಗೆ ನವೆಂಬರ್.21ರಿಂದ ಡಿಸೆಂಬರ್.12ರವರೆಗೆ ಅವಧಿ ವಿಸ್ತರಿಸಿರುವುದಾಗಿ ಆದೇಶದಲ್ಲಿ ತಿಳಿಸಿದ್ದಾರೆ. ನಾಳೆಯಿಂದ ಡಿಸೆಂಬರ್ 12ರವರೆಗೆ ಶೇ.50ರಷ್ಟು ದಂಡ ಕಟ್ಟಲು ಅವಕಾಶ ನೀಡಲಾಗಿದೆ. ದಂಡದ ಮೊತ್ತ ಪಾವತಿಯಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಆದೇಶಿಸಿದ್ದಾರೆ. ಸಂಚಾರ ನಿಯಮ ಉಲ್ಲಂಘನೆ ದಂಡದಲ್ಲಿ ಶೇ.50ರಷ್ಟು ರಿಯಾಯಿತಿ ನೀಡಿ ಪಾವತಿಸಲು ಅವಧಿ ವಿಸ್ತರಿಸಿ ಆದೇಶಿಸಿದ್ದಾರೆ. https://kannadanewsnow.com/kannada/alert-using-these-passwords-could-lead-to-your-data-leak-be-careful/ https://kannadanewsnow.com/kannada/it-is-a-superstition-that-if-i-come-to-chamarajanagar-i-will-lose-power-my-power-is-secure-now-and-in-the-future-cm/

Read More

ದಕ್ಷಿಣ ಕನ್ನಡ: ಧರ್ಮಸ್ಥಳ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸುತ್ತಿದ್ದಂತ ವಿಶೇಷ ತನಿಖಾ ದಳದ(ಎಸ್ಐಟಿ) ಅಧಿಕಾರಿಗಳು ನ್ಯಾಯಾಲಯಕ್ಕೆ ಚಾರ್ಜ್ ಶೀಟ್ ಸಲ್ಲಿಸಿದ್ದಾರೆ. ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಆಗಮಿಸಿದಂತ ಎಸ್ಐಟಿ ಅಧಿಕಾರಿಗಳ ತಂಡವು ಸುಳ್ಳು ಸಾಕ್ಷ್ಯ, ವರದಿಯನ್ನೂ ಸಲ್ಲಿಕೆ ಮಾಡಿದ್ದಾರೆ ಎನ್ನಲಾಗಿದೆ. ಚಾರ್ಜ್ ಶೀಟ್ ಹಾಗೂ ಸುಳ್ಳು ಸಾಕ್ಷ್ಯ ವರದಿಯನ್ನು ಎಸ್ಐಟಿ ಅಧಿಕಾರಿಗಳು ಸಲ್ಲಿಸಿದ್ದಾರೆ ಎಂದು ಹೇಳಲಾಗುತ್ತಿದೆ. 7 ಫೈಲ್ ಗಳಲ್ಲಿ ವರದಿ ತಯಾರು ಮಾಡಿದ್ದಂತ ಎಸ್ಐಟಿ ಅಧಿಕಾರಿಗಳು, ಅದನ್ನು ಇಂದು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ ಎನ್ನಲಾಗುತ್ತಿದೆ.  ತನಿಖಾಧಿಕಾರಿ ಜಿತೇಂದ್ರ ಕುಮಾರ್ ದಯಾಮ ನೇತೃತ್ವದಲ್ಲಿ ಎಸ್ಐಟಿ ಟೀಂ ಕೋರ್ಟ್ ಗೆ ಚಾರ್ಜ್ ಶೀಟ್ ಸಲ್ಲಿಸಿದೆ. ಧರ್ಮಸ್ಥಳದ ಬುರುಡೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳ್ತಂಗಡಿ ಜೆಎಂಎಫ್ ಸಿ ನ್ಯಾಯಾಲಯಕ್ಕೆ ಮಹೇಶ್ ಶೆಟ್ಟಿ ತಿಮರೋಡಿ, ಚಿನ್ನಯ್ಯ, ಗಿರೀಶ್ ಮಟ್ಟಣ್ಣನವರ್, ಸುಜಾತ ಭಟ್, ವಿಠಲ್ ಗೌಡ ಸೇರಿದಂತೆ 6 ಮಂದಿ ವಿರುದ್ಧ ಎಸ್ಐಟಿ ಚಾರ್ಜ್ ಶೀಟ್ ಸಲ್ಲಿಸಿಸಿದೆ ಎನ್ನಲಾಗುತ್ತಿದೆ. https://kannadanewsnow.com/kannada/breaking-no-cabinet-reshuffle-in-the-state-for-now-cm-siddaramaiah-clarifies/ https://kannadanewsnow.com/kannada/if-i-had-stayed-in-jds-i-would-not-have-become-the-chief-minister-siddaramaiah/

Read More

ಚಾಮರಾಜನಗರ: ಗ್ರಾಮೀಣ ಭಾರತದ ಆರ್ಥಿಕ ಅಭಿವೃದ್ಧಿಗೆ ಪ್ರತೀ ಗ್ರಾಮದಲ್ಲಿ ಒಂದು ಶಾಲೆ, ಒಂದು ಗ್ರಾಮ ಪಂಚಾಯ್ತಿ, ಒಂದು ಸಹಕಾರ ಸಂಘ ಅತ್ಯಗತ್ಯ ಎನ್ನುವುದು ನೆಹರೂ ಅವರ ದೃಷ್ಟಿಯಾಗಿತ್ತು. ಇವರ ಈ ದೂರದೃಷ್ಟಿಯ ಕಾರಣಕ್ಕೆ ದೇಶದಲ್ಲಿ ಸಹಕಾರ ಚಳವಳಿ ಗಟ್ಟಿಯಾಯಿತು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನುಡಿದರು. 72ನೇ ಅಖಿಲ ಭಾರತ ಸಹಕಾರ ಸಪ್ತಾಹವನ್ನು ಉದ್ಘಾಟಿಸಿ, ಸಮಾರೋಪ ಮಾತುಗಳನ್ನಾಡಿದರು. ನೆಹರೂ ಅವರ ಈ ದೂರದೃಷ್ಟಿ ಕಾರಣಕ್ಕೆ ಅವರ ಜನ್ಮ ದಿನದಂದೇ ಪ್ರತೀ ವರ್ಷ ಸಹಕಾರ ಸಪ್ತಾಹ ಉದ್ಘಾಟನೆಯಾಗುತ್ತದೆ ಎಂದರು. ಇಂದು ರಾಜ್ಯದಲ್ಲಿ ಕೃಷಿ, ಹೈನುಗಾರಿಕೆ, ಕೈಗಾರಿಕೆ, ಬ್ಯಾಂಕಿಂಗ್ ಸೇರಿ ಹಲವಾರು ಕ್ಷೇತ್ರಗಳಲ್ಲಿ ಸಹಕಾರಿ ಚಳವಳಿ, ಸಹಕಾರಿ ಸಂಘಗಳು ಬೆಳೆಯುತ್ತಲೇ ಇವೆ. ಇದು ಆರೋಗ್ಯಕಾರಿ ಬೆಳವಣಿಗೆ ಎಂದರು. ನಾನು ಪಶು ಸಂಗೋಪನಾ ಸಚಿವನಾಗಿದ್ದಾಗ ಹಾಲು ಉತ್ಪಾದಕರ ಸಹಕಾರ ಸಂಘಗಳ ಸ್ವಾಯತ್ತತೆ ಮತ್ತು ಸ್ವಾವಲಂಭನೆಗೆ ಪೂರ್ಣ ಸಹಕಾರ ನೀಡಿದ್ದೆ. ಈಗ ಒಂದು ದಿನಕ್ಕೆ ಒಂದು ಕೋಟಿ ಲೀಟರ್ ಹಾಲು ಉತ್ಪಾದನೆಯಾಗುತ್ತಿದೆ. ನಾನು ಹಾಲು ಉತ್ಪಾದಕರ ಅನುಕೂಲಕ್ಕಾಗಿ…

Read More

ಬೆಂಗಳೂರು : ನಮ್ಮ ಸರ್ಕಾರವು ಎರಡೂವರೆ ವರ್ಷದ ಅವಧಿಯಲ್ಲಿ ಜನಸಮುದಾಯಕ್ಕೆ ನಾವು ನೀಡಿದ್ದ ಭರವಸೆಗಳನ್ನು ಆದ್ಯತೆಯ ಮೇಲೆ ಈಡೇರಿಸಿದ್ದೇವೆ ಎಂಬ ಸಮಾದಾನವಿದೆ‌ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ ಅವರು ಹೇಳಿದರು. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಆದ್ಯತೆಯ ಮೇಲೆ ಗ್ಯಾರಂಟಿ ಯೋಜನೆಗಳನ್ನು ಈಡೇರಿಸಿದ್ದೇವೆ. ಮುಂದೆ ಹೆಚ್ಚಿನ ರೀತಿಯಲ್ಲಿ ಹಣಕಾಸಿನ ವಿಚಾರದಲ್ಲಿ ಅನವಶ್ಯಕ ಖರ್ಚುಗಳನ್ನು ಸರಿಪಡಿಸುವ ಪ್ರಯತ್ನ ಮಾಡಬೇಕು ಎಂದರು. ಕೇಂದ್ರ ಸರ್ಕಾರ ನಮಗೆ ಕೊಡಬೇಕಾದ ಹಣ ಕಡಿಮೆ ಕೊಟ್ಟಿದೆ. ಜಿಎಸ್‌ಟಿ ಪಾಲಿನಲ್ಲಿ ಕಡಿಮೆ ನೀಡಿದೆ‌. ಕೇಂದ್ರ ಸರ್ಕಾರದ ಸಹಯೋಗದಲ್ಲಿ ಆಗುವ ಯೋಜನೆಗಳಲ್ಲಿ ಸರಿಯಾದ ಸಮಯದಲ್ಲಿ ಅನುದಾನ ಬಿಡುಗಡೆ ಮಾಡುವುದಿಲ್ಲ. ಜಲ ಜೀವನ್ ಮಿಷನ್ ಯೋಜನೆಯ ಸಾಕಷ್ಟು ಅನುದಾನ ಬಾಕಿ ಇದೆ. ಇಡೀ ದೇಶದಲ್ಲಿ ಮನೆಮನೆಗೆ ಗಂಗೆ, ನೀರು ತಲುಪಿಸುತ್ತೇವೆ ಎಂದು ಹೇಳುತ್ತಾರೆ. ಅದರ ಹಣವನ್ನು ರಾಜ್ಯ ಸರ್ಕಾರವೇ ಭರಿಸುತ್ತಿದೆ. ಮುಖ್ಯಮಂತ್ರಿಗಳು ಅನುಭವಿ ಹಣಕಾಸು ಸಚಿವರು. 17ನೇ ಬಾರಿ ಬಜೆಟ್ ಮಂಡಿಸುವವರಿದ್ದಾರೆ. ಇದನ್ನೆಲ್ಲ ಚರ್ಚೆ ಮಾಡಿ, ಹಣಕಾಸಿನ ವಿಚಾರದಲ್ಲಿ ಒಂದಷ್ಟು ತೀರ್ಮಾನ…

Read More

ಚಾಮರಾಜನಗರ: ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಐದು ವರ್ಷಗಳಲ್ಲಿ ಜನರಿಗೆ ನೀಡಿದ ಭರವಸೆಗಳನ್ನು ಈಡೇರಿಸಲು ಪ್ರಾಮಾಣಿಕ ಪ್ರಯತ್ನ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಚಾಮರಾಜನಗರ ಹೆಲಿಪ್ಯಾಡ್ ನಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. ಮೂಢನಂಬಿಕೆ ಮತ್ತು ಕಂದಾಚಾರಗಳಲ್ಲಿ ನಂಬುವುದಿಲ್ಲವಾದ್ದರಿಂದ ಚಾಮರಾಜನಗರಕ್ಕೆ ಭೇಟಿ ನೀಡುತ್ತಿರುತ್ತೇನೆ. ರಾಜ್ಯದ ಎಲ್ಲ ಜಿಲ್ಲೆಗಳನ್ನೂ ಸಮಾನವಾಗಿ ಕಂಡು, ಎಲ್ಲ ಜಿಲ್ಲೆಗಳಿಗೆ ಭೇಟಿ ನೀಡುತ್ತೇನೆ. ಚಾಮರಾಜನಗರಕ್ಕೆ ಬಂದರೆ ಅಧಿಕಾರ ಕಳೆದುಕೊಳ್ಳುತ್ತಾರೆ ಎಂಬುದು ಮೂಢನಂಬಿಕೆ. ಆ ಮೌಢ್ಯವನ್ನು ಹೋಗಲಾಡಿಸಲು ಇಲ್ಲಿಗೆ ಭೇಟಿ ನೀಡಿದ್ದು, ಅಧಿಕಾರ ಈಗಲೂ ಮತ್ತು ಭವಿಷ್ಯದಲ್ಲಿಯೂ ಭದ್ರವಾಗಿರುತ್ತದೆ ಎಂದು ತಿಳಿಸಿದರು. 2028 ರಲ್ಲಿ ಕಾಂಗ್ರೆಸ್ ಪಕ್ಷವೇ ಅಧಿಕಾರಕ್ಕೆ ಬರಲಿದೆ ಮಾಜಿ ಸಂಸದ ಡಿ.ಕೆ.ಸುರೇಶ್ ಅವರು ಡಿ.ಕೆ.ಶಿವಕುಮಾರ್ ಅವರು ಸಿಎಂ ಆಗುವ ಬಗ್ಗೆ ಮಾಡಿದ ಹೇಳಿಕೆಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಇಂತಹ ಹೇಳಿಕೆಗೆ ಪ್ರತಿಕ್ರಿಯೆ ನೀಡುವುದಿಲ್ಲ. ರಾಜ್ಯದಲ್ಲಿ ಕಾಂಗ್ರೆಸ್ ಪಕ್ಷವು ಐದು ವರ್ಷ ಆಡಳಿತ ನಡೆದು ಜನಾದೇಶ ಇದೆ. ನಮ್ಮ ಪ್ರಣಾಳಿಕೆಯಲ್ಲಿ ನೀಡಲಾಗಿದ್ದ ಭರವಸೆಯನ್ನು ಈಡೇರಿಸಲು…

Read More

ಕಠ್ಮಂಡು: ನೇಪಾಳದಲ್ಲಿ ಪ್ರತಿಭಟನೆಗಳು ಮತ್ತೆ ಭುಗಿಲೆದ್ದಿದ್ದು, ಅಧಿಕಾರಿಗಳು ಹಲವಾರು ಪ್ರದೇಶಗಳಲ್ಲಿ ಕರ್ಫ್ಯೂ ವಿಧಿಸಿದ್ದಾರೆ. ಗುರುವಾರ ಬೆಳಿಗ್ಗೆ 11 ಗಂಟೆ ಸುಮಾರಿಗೆ ಸಿಮಾರಾ ಚೌಕ್‌ನಲ್ಲಿ ಪ್ರತಿಭಟನಾಕಾರರು ಜಮಾಯಿಸಿದರು, ನಂತರ ಪೊಲೀಸರು ಅವರನ್ನು ಚದುರಿಸಲು ಲಾಠಿ ಪ್ರಹಾರದಂತ ಬಲಪ್ರಯೋಗ ಮಾಡಿದರು ಮತ್ತು ಅಧಿಕಾರಿಗಳು ನಂತರ ಕರ್ಫ್ಯೂ ವಿಧಿಸಿದರು ಎಂದು ದಿ ಕಠ್ಮಂಡು ಪೋಸ್ಟ್ ವರದಿ ಮಾಡಿದೆ. ಸಿಮಾರಾದಲ್ಲಿ ಕರ್ಫ್ಯೂ ಮಧ್ಯಾಹ್ನ 12.45 ರ ಸುಮಾರಿಗೆ ವಿಧಿಸಲಾಯಿತು ಮತ್ತು ರಾತ್ರಿ 8 ಗಂಟೆಯವರೆಗೆ ಇರುತ್ತದೆ ಎಂದು ವರದಿ ತಿಳಿಸಿದೆ. ಬುಧವಾರ ಭುಗಿಲೆದ್ದ ಘರ್ಷಣೆಗಳ ಕುರಿತು ತಮ್ಮ ದೂರುಗಳಲ್ಲಿ ಹೆಸರಿಸಲಾದ ವ್ಯಕ್ತಿಗಳನ್ನು ಬಂಧಿಸಲು ಪೊಲೀಸರು ವಿಫಲರಾಗಿದ್ದಾರೆ ಎಂದು ಜನರಲ್ ಝಡ್ ಪ್ರತಿಭಟನಾಕಾರರು ಆರೋಪಿಸಿದರು. ನವೆಂಬರ್ 19 ರಂದು, ಆರು ಜನರಲ್ ಝಡ್ ಬೆಂಬಲಿಗರು ಗಾಯಗೊಂಡರು. ಸಿಮಾರಾ ವಿಮಾನ ನಿಲ್ದಾಣದ ಬಳಿಯ ಸಿಮಾರಾ ಚೌಕ್‌ನಲ್ಲಿ ನಡೆದ ಘರ್ಷಣೆಯ ಕುರಿತು ಗುಂಪು ಆರು ಯುಎಂಎಲ್ ಕಾರ್ಯಕರ್ತರ ವಿರುದ್ಧ ದೂರು ದಾಖಲಿಸಿತು. https://kannadanewsnow.com/kannada/breaking-no-cabinet-reshuffle-in-the-state-for-now-cm-siddaramaiah-clarifies/ https://kannadanewsnow.com/kannada/radiologist-who-sexually-harassed-woman-during-scan-finally-arrested/

Read More

ಬೆಂಗಳೂರು: ನಗರದ ಆನೇಕಲ್ ನಲ್ಲಿ ಮಹಿಳೆಯೊಬ್ಬರು ಸ್ಕ್ಯಾನಿಂಗ್ ಗೆ ತೆರಳಿದ್ದಂತ ಸಂದರ್ಭದಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ರೇಡಿಯಾಲಜಿಸ್ಟ್ ಜಯಕುಮಾರ್ ಖಾಸಗಿ ಅಂಗಾಂಗ ಮುಟ್ಟಿ ಲೈಂಗಿಕ ಕಿರುಕುಳ ನೀಡಿದ್ದರು. ಈ ವೀಡಿಯೋ ವೈರಲ್ ಕೂಡ ಆಗಿತ್ತು. ಮಹಿಳೆ ನಾಲ್ಕೈದು ದಿನಗಳ ಹಿಂದೆಯೇ ದೂರು ನೀಡಿದ್ದರೂ ಬಂಧಿಸಿರಲಿಲ್ಲ. ಆದರೇ ಠಾಣೆಯ ಮುಂದೆ ಸಾರ್ವಜನಿಕರು ಪ್ರತಿಭಟನೆ ನಡೆಸಿ ಬಂಧನಕ್ಕೆ ಒತ್ತಾಯಿಸಿದ್ದರು. ಹೀಗಾಗಿ ಕೊನೆಗೂ ಸ್ಕ್ಯಾನಿಂಗ್ ವೇಳೆ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿದಂತ ರೇಡಿಯಾಲಜಿಸ್ಟ್ ಜಯಕುಮಾರ್ ಪೊಲೀಸರು ಬಂಧಿಸಿದ್ದಾರೆ. ಬೆಂಗಳೂರು ಸಮೀಪದ ಆನೇಕಲ್ ಪಟ್ಟಣದಲ್ಲಿ ಸ್ಕ್ಯಾನಿಂಗ್ ಸೆಂಟರ್ ವೊಂದರಲ್ಲಿ ರೆಡಿಯಾಲಜಿಸ್ಟ್ ಆಗಿ ಕೆಲಸ ಮಾಡುತ್ತಿದ್ದಂತ ಜಯಕುಮಾರ್ ಎಂಬುವರೇ ಹೀಗೆ ಲೈಂಗಿಕ ಕಿರುಕುಳ ನೀಡಿದಂತ ಆರೋಪಿಯಾಗಿದ್ದಾರೆ. ಅವರ ವಿರುದ್ಧ ಮಹಿಳೆಯೊಬ್ಬರು ನೀಡಿದಂತ ದೂರಿನ ಹಿನ್ನಲೆಯಲ್ಲಿ ಎಫ್ಐಆರ್ ದಾಖಲಾಗಿತ್ತು. ಕೆಲ ದಿನಗಳ ಹಿಂದೆ ಸ್ಕ್ಯಾನಿಂಗ್ ಮಾಡಿಸೋದಕ್ಕೆ ಮಹಿಳೆಯೊಬ್ಬರು ತೆರಳಿದ್ದರು. ಈ ವೇಳೆಯಲ್ಲಿ ಸ್ಕ್ಯಾನಿಂಗ್ ಮಾಡುವ ನೆಪದಲ್ಲಿ ಮಹಿಳೆಯ ಖಾಸಗಿ ಅಂಗಾಂಗವನ್ನು ರೆಡಿಯಾಲಜಿಸ್ಟ್ ಜಯಕುಮಾರ್ ಮುಟ್ಟಿದ್ದರು.. ಇದಕ್ಕೆ ಮಹಿಳೆ ವಿರೋಧ ವ್ಯಕ್ತ…

Read More

ಬೆಂಗಳೂರು: ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರಿಗೆ ಗೌರವಧನವನ್ನು ಇನ್ನೂ ₹1 ಸಾವಿರ ಹೆಚ್ಚಿಸಲಾಗುವುದು. ಈ ಮೊದಲು 2017ರಲ್ಲಿ ₹2 ಸಾವಿರ ಗೌರವಧನ ಏರಿಸಲಾಗಿತ್ತು. ಈ ಬಾರಿಯೂ ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ಮೇಲೆ ₹1 ಸಾವಿರ ಹೆಚ್ಚಿಸಿದ್ದೇವೆ. ಮುಂದಿನ ದಿನಗಳಲ್ಲಿ ಇನ್ನೂ ₹1 ಸಾವಿರ ಜಾಸ್ತಿ ಮಾಡಲಾಗುವುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವರಾದ ಲಕ್ಷ್ಮಿ ಹೆಬ್ಬಾಳ್ಕರ್‌ ತಿಳಿಸಿದ್ದಾರೆ. https://twitter.com/KarnatakaVarthe/status/1991145354797133858 ಪಂಚ ಗ್ಯಾರಂಟಿ ಯೋಜನೆ ಗಳನ್ನು ನೀಡುವ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರ ಸಾರಥ್ಯದ ನಮ್ಮ ಸರ್ಕಾರ ಗ್ಯಾರಂಟಿ ಸರ್ಕಾರ ಆಗಿದ್ದು, 2028ಕ್ಕೂ ನಮ್ಮದೆ ಸರ್ಕಾರ ಅಧಿಕಾರಕ್ಕೆ ಬರಲಿದೆ ಎಂದರು. ನಮ್ಮ ಪಕ್ಷದ ಯೋಜನೆಗಳನ್ನು ಬಿಜೆಪಿ ಬೇರೆ ರಾಜ್ಯಗಳಲ್ಲಿ ನಕಲು ಮಾಡುತ್ತಿದೆ. ಮಹಾರಾಷ್ಟ್ರದಲ್ಲಿ ನಮ್ಮ ಗೃಹಲಕ್ಷ್ಮಿ ಯೋಜನೆ ಮಾದರಿಯಲ್ಲಿ ಲಾಡ್ಲಿಬೆಹನ್ ಯೋಜನೆಯನ್ನು ಜಾರಿಗೊಳಿಸಲಾಗಿತ್ತು. ಚುನಾವಣೆ ವೇಳೆ ತಿಂಗಳಿಗೆ 2,500 ರೂಪಾಯಿಯಂತೆ ಮೂರು ತಿಂಗಳ ಹಣ ಹಾಕಲಾಗಿತ್ತು. ಆದರೆ, ಚುನಾವಣೆಯಲ್ಲಿ ಗೆದ್ದ ಬಳಿಕ ಯೋಜನೆಯನ್ನೆ ಪರಿಷ್ಕರಿಸಲಾಗಿದೆ. 2,500…

Read More

ಚಿಕ್ಕಮಗಳೂರು: ಕಾರ್ತಿಕ ಮಾಸಕ್ಕೂ ಮುನ್ನ ಶಬರಿ ಮಾಲೆ ಹಾಕೋದು ಹಲವರ ರೂಢಿಯಾಗಿದೆ. ಅದರಂತೆ ವಿದ್ಯಾರ್ಥಿಯೊಬ್ಬ ಶಬರಿ ಮಾಲೆ ಹಾಕಿ ಕಾಲೇಜಿಗೆ ತೆರಳಿದ್ದಕ್ಕೆ ಕಾಲೇಜಿನಿಂದ ಹೊರ ಹಾಕಿದಂತ ಘಟನೆ ಚಿಕ್ಕಮಗಳೂರಿನ ಎನ್ ಆರ್ ಪುರದ ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ನಡೆದಿದೆ. ಚಿಕ್ಕಮಗಳೂರು ಜಿಲ್ಲೆಯ ಎನ್ ಆರ್ ಪುರ ತಾಲ್ಲೂಕಿನ ಬಾಳೆಹೊನ್ನೂರಿನಲ್ಲಿರುವಂತ ಕಡ್ಲೆಮಕ್ಕಿ ಸರ್ಕಾರಿ ಸ್ವತಂತ್ರ ಪದವಿ ಪೂರ್ವ ಕಾಲೇಜಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದಂತ ವಿದ್ಯಾರ್ಥಿಯೊಬ್ಬ ಶಬರಿ ಮಾಲೆ ಹಾಕಿ ಕಾಲೇಜಿಗೆ ತೆರಳಿದ್ದನು. ಈ ವೇಳೆ ಕಾಲೇಜು ಆಡಳಿತ ಮಂಡಳಿಯು ಮಾಲೆ ತೆಗೆದು ಒಳಗೆ ಬಾ. ಇಲ್ಲವೇ ಹೊರ ಹೋಗುವಂತೆ ತಿಳಿಸಿದ್ದಾರೆ. ಇದಷ್ಟೇ ಅಲ್ಲದೇ ಮಾಲೆ ಧರಿಸಿ ಬರುವುದರಿಂದ ಕಾಲೇಜಿನಲ್ಲಿ ಜಾತಿ ಬೇಧ ಮಾಡ್ತೀರ ಎಂಬುದಾಗಿಯೂ ತರಾಟೆಗೆ ತೆಗೆದುಕೊಳ್ಳಲಾಗಿದೆ. ಕಾಲೇಜಿಗೆ ಬರುವುದಾದರೇ ಮಾಲೆ ತೆಗೆದು ಬರುವಂತೆ ತಾಕೀತ ಮಾಡಲಾಗಿದೆ. ಆದರೇ ಮಾಲಾಧಾರಿ ವಿದ್ಯಾರ್ಥಿ ನಾನು ತೆಗೆಯುವುದಿಲ್ಲ ಎಂಬುದಾಗಿ ಹೇಳಿ, ವಾಗ್ವಾದಕ್ಕೆ ಇಳಿದಿದ್ದಾನೆ. ಈ ವಿಷಯ ತಿಳಿದು ಸ್ಥಳಕ್ಕೆ ಹೋದಂತ ಹಿರಿಯ…

Read More