Author: kannadanewsnow09

ಬೆಂಗಳೂರು: ರಾಜ್ಯ ಸರ್ಕಾರದಿಂದ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ಗುತ್ತಿಗೆ ನೌಕರರಿಗೆ ಗುಂಪು ವಿಮಾ ಯೋಜನೆಗಾಗಿ ಆಕ್ಸಿಸ್ ಬ್ಯಾಂಕ್ ಜೊತೆಗೆ ಒಡಂಬಡಿಕೆ ಮಾಡಿಕೊಳ್ಳೋದಕ್ಕೆ ಸಹಿ ಮಾಡಲಾಗಿದೆ. ಈ ಮೂಲಕ ರಾಜ್ಯ ಆರೋಗ್ಯ ಇಲಾಖೆಯ ಎನ್ ಹೆಚ್ ಎಂ ನೌಕರರಿಗೆ ಸಾಮಾಜಿಕ ಭದ್ರತೆಗಾಗಿ ವಿಮಾ ಯೋಜನೆ ಜಾರಿಗೊಳಿಸಲಾಗಿದೆ. ಈ ಕುರಿತಂತೆ ಮಾಹಿತಿ ನೀಡಿರುವಂತ KSHCOEA ಸಂಘದ ಪ್ರಧಾನ ಕಾರ್ಯದರ್ಶಿ ಗವಿಸಿದ್ಧಪ್ಪ ಉಪ್ಪಾರ ಅವರು, ಶುಕ್ರವಾರದಂದು ಕರ್ನಾಟಕ ರಾಜ್ಯ ಆರೋಗ್ಯ ಇಲಾಖೆ ಗುತ್ತಿಗೆ ಹಾಗೂ ಹೊರಗುತ್ತಿಗೆ ನೌಕರರ ಸಂಘ ಹಾಗೂ ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ನ ಜಂಟಿ ಸಹಭಾಗಿತ್ವದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಆಧಾರದ ಸಿಬ್ಬಂದಿಗಳಿಗೆ ಗುಂಪು ವಿಮೆ ಯೋಜನೆಯ ಜಾರಿ ಮಾಡಲು ಎನ್.ಎಚ್.ಎಂ ಕರ್ನಾಟಕ ಹಾಗೂ ಆಕ್ಸಿಸ್ ಬ್ಯಾಂಕ್ ಲಿಮಿಟೆಡ್ ನಡುವೆ ಒಡಂಬಡಿಕೆಗೆ ಸಹಿ ಮಾಡುವ ಕಾರ್ಯಕ್ರಮವನ್ನು KSHCOEA BMS ಸಂಘದ ರಾಜ್ಯಾಧ್ಯಕ್ಷರಾದ ಶ್ರೀಕಾಂತ ಸ್ವಾಮಿ ಇವರ ಅಧ್ಯಕ್ಷತೆಯಲ್ಲಿ ಬೆಂಗಳೂರಿ ಆರೋಗ್ಯ ಸೌಧದಲ್ಲಿ ಕಾರ್ಯಕ್ರಮ ಆಯೋಜಿಸಲಾಗಿತ್ತು ಎಂದಿದ್ದಾರೆ. ಈ ಕಾರ್ಯಕ್ರಮವನ್ನು…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (National Testing Agency – NTA) ಯುಜಿಸಿ ನೆಟ್ ಡಿಸೆಂಬರ್ 2024 ರ ಫಲಿತಾಂಶಗಳನ್ನು ಇಂದು ಪ್ರಕಟಿಸುವ ನಿರೀಕ್ಷೆಯಿದೆ. ಪರೀಕ್ಷೆಯಲ್ಲಿ ಭಾಗವಹಿಸಿದ ಅಭ್ಯರ್ಥಿಗಳು ತಮ್ಮ ಅರ್ಜಿ ಸಂಖ್ಯೆ ಮತ್ತು ಹುಟ್ಟಿದ ದಿನಾಂಕವನ್ನು ನಮೂದಿಸುವ ಮೂಲಕ ಅಧಿಕೃತ ವೆಬ್ಸೈಟ್ ugcnet.nta.ac.in ನಲ್ಲಿ ತಮ್ಮ ಫಲಿತಾಂಶಗಳನ್ನು ಪ್ರವೇಶಿಸಬಹುದು. ಅರ್ಹತೆ ಪಡೆಯಲು, ಸಾಮಾನ್ಯ ವರ್ಗದ ಅಭ್ಯರ್ಥಿಗಳು ಎರಡೂ ಪತ್ರಿಕೆಗಳಲ್ಲಿ ಕನಿಷ್ಠ 40% ಒಟ್ಟು ಅಂಕಗಳನ್ನು ಗಳಿಸಬೇಕು, ಒಬಿಸಿ-ಎನ್ಸಿಎಲ್, ಪಿಡಬ್ಲ್ಯೂಡಿ, ಎಸ್ಸಿ, ಎಸ್ಟಿ ಮತ್ತು ತೃತೀಯ ಲಿಂಗಿ ವರ್ಗದ ಅಭ್ಯರ್ಥಿಗಳು ಕನಿಷ್ಠ 35% ಅಂಕಗಳನ್ನು ಪಡೆಯಬೇಕು. ಹಿಂದಿನ ಪ್ರವೃತ್ತಿಗಳನ್ನು ಅನುಸರಿಸಿ, ಎನ್ಟಿಎ ಯುಜಿಸಿ ನೆಟ್ ಫಲಿತಾಂಶಗಳನ್ನು ( UGC NET results ) ಪರೀಕ್ಷೆಯ ನಂತರ 30 ರಿಂದ 45 ದಿನಗಳಲ್ಲಿ ಬಿಡುಗಡೆ ಮಾಡುತ್ತದೆ. ಯುಜಿಸಿ ನೆಟ್ ಡಿಸೆಂಬರ್ 2024 ಪರೀಕ್ಷೆಯನ್ನು ಜನವರಿ 3 ಮತ್ತು ಜನವರಿ 27, 2025 ರ ನಡುವೆ ದೇಶಾದ್ಯಂತ 284 ನಗರಗಳಲ್ಲಿ ಅನೇಕ ಪಾಳಿಗಳಲ್ಲಿ ನಡೆಸಲಾಯಿತು.…

Read More

ಬೆಂಗಳೂರು : ಬೆಂಗಳೂರಿನ ಅಭಿವೃದ್ಧಿಗಾಗಿ ಆದಷ್ಟು ಬೇಗ ಬಿಬಿಎಂಪಿ ಚುನಾವಣೆ ನಡೆಸಬೇಕು. ಇದಕ್ಕಾಗಿ ನ್ಯಾಯಾಲಯದಲ್ಲಿ ವಾದ ಮಾಡಲು ತಜ್ಞರ ತಂಡ ರಚಿಸಲಾಗಿದೆ ಎಂದು ಪ್ರತಿಪಕ್ಷ ನಾಯಕ ಆರ್‌.ಅಶೋಕ ತಿಳಿಸಿದರು. ಬಿಬಿಎಂಪಿ ಚುನಾವಣೆ ಹಾಗೂ ಬೆಂಗಳೂರಿನ ಅಭಿವೃದ್ಧಿ ಕುರಿತು ನಡೆದ, ಬಿಜೆಪಿ ಶಾಸಕರು, ಮುಖಂಡರ ಸಭೆಯಲ್ಲಿ ಪಾಲ್ಗೊಂಡ ಬಳಿಕ ಅವರು ಮಾಧ್ಯಮಗಳೊಂದಿಗೆ ಮಾತನಾಡಿದರು. ಆದಷ್ಟು ಬೇಗ ಚುನಾವಣೆ ನಡೆಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸುತ್ತೇವೆ. ಈ ಸಂಬಂಧ ನ್ಯಾಯಾಲಯದಲ್ಲಿ ವಾದ ಮಾಡಲು 15 ತಜ್ಞರ ತಂಡವನ್ನು ರಚಿಸಲಾಗಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದ ನಂತರ ಬೆಂಗಳೂರಿನ ಅಭಿವೃದ್ಧಿ ಸೊನ್ನೆಯಾಗಿದೆ. ರಸ್ತೆಗುಂಡಿಗಳ ಆಕಾರ ಸೊನ್ನೆಯಾಗಿರುವಂತೆಯೇ ಅಭಿವೃದ್ಧಿಯೂ ಸೊನ್ನೆಯೇ ಆಗಿದೆ. ರಸ್ತೆಗುಂಡಿಗಳಿಂದ ಬಿದ್ದು ಗಾಯಕ್ಕೊಳಗಾಗಿ ಜನರು ಆಸ್ಪತ್ರೆ ಸೇರುತ್ತಿದ್ದಾರೆ. ಎಲ್ಲ ಕಡೆ ಕಸದ ರಾಶಿ ಕಂಡುಬರುತ್ತಿದೆ. ಕಾಂಗ್ರೆಸ್‌ ಅಧಿಕಾರಕ್ಕೆ ಬಂದಾಗ ಹಿಮಾಲಯದ ಶಿಖರದಂತೆ ನಗರದ ಅಭಿವೃದ್ಧಿಯನ್ನು ಬ್ರ್ಯಾಂಡ್‌ ಮಾಡುತ್ತೇವೆ ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಹೇಳಿದ್ದರು. ಈಗ ಅವರೇ ಬೆಂಗಳೂರನ್ನು ಉದ್ಧಾರ ಮಾಡಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದರ ವಿರುದ್ಧ ಹೋರಾಟ…

Read More

ಬೆಂಗಳೂರು: ಜಾತಿ ಪ್ರಮಾಣಪತ್ರದ ನೈಜತೆ ಪರಿಶೀಲಿಸೋದಕ್ಕೆ ಪೋನ್ ಪೇ ಮೂಲಕ ಲಂಚ ಪಡೆದಂತ ಮಹಿಳಾ ಪೊಲೀಸ್ ಇನ್ಸ್ ಪೆಕ್ಟರ್ ಸೇರಿದಂತೆ ಇಬ್ಬರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ನಾಗರೀಕ ಹಕ್ಕು ಜಾರಿ ನಿರ್ದೇಶನಾಲಯದ ಇನ್ಸ್ ಪೆಕ್ಟರ್ ಗೀತಾ ಮತ್ತು ಖಾಸಗಿ ವ್ಯಕ್ತಿ ರಿಚರ್ಡ್ ಎಂಬಾತನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ರಾಜ್ಯ ಕೊಳಚೆ ನಿರ್ಮೂಲನಾ ಮಂಡಳಿ ವತಿಯಿಂದ ಮನೆ ಹಕ್ಕು ಪಡೆಯಲು ಜಾತಿ ಪ್ರಮಾಣಪತ್ರ ಸಲ್ಲಿಸಬೇಕಾಗಿತ್ತು. ಇದಕ್ಕಾಗಿ ದಾಖಲೆ ನೀಡುವಂತೆ ದೂರುದಾರರು ಮನವಿ ಸಲ್ಲಿಸಿದ್ದರು. ಈ ಸಂಬಂಧ 25,000 ಲಂಚ ನೀಡುವಂತೆ ಆರೋಪಿಗಳು ಕೇಳಿದ್ದರು. ಈ ಹಿನ್ನಲೆಯಲ್ಲಿ ಆರೋಪಿಗಳ ವಿರುದ್ಧ ಲೋಕಾಯುಕ್ತಕ್ಕೆ ದೂರು ನೀಡಲಾಗಿತ್ತು. ಲಂಚ ನೀಡಲು ಇಷ್ಟವಿಲ್ಲದ ಲೋಕೇಶ್ ಅವರು ಪೋನ್ ಪೇ ಮೂಲಕ ಹಣ ಕಳುಹಿಸಿದ್ದರು. ಈ ಹಿನ್ನಲೆಯಲ್ಲಿ ಇನ್ಸ್ ಪೆಕ್ಟರ್ ಗೀತಾ ಮತ್ತು ಖಾಸಗಿ ವ್ಯಕ್ತಿ ರಿಚರ್ಡ್ ನನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. https://kannadanewsnow.com/kannada/indian-oil-corporation-invites-applications-for-various-vacancies/ https://kannadanewsnow.com/kannada/9-injections-in-use-in-the-state-are-not-of-good-quality-lab-report/

Read More

ನವದೆಹಲಿ: ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ನಲ್ಲಿ ಖಾಲಿ ಇರುವಂತ ವಿವಿಧ ಹುದ್ದೆಗಳ ಭರ್ತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಜೂನಿಯರ್ ಆಪರೇಟರ್ ನ 215 ಹುದ್ದೆಗಳು, ಜೂನಿಯರ್ ಅಟೆಂಡೆಂಟ್ 23 ಹುದ್ದೆಗಳು, ಜೂನಿಯರ್ ಬಿಸಿನೆಸ್ ಅಸಿಸ್ಟೆಂಟ್ 08 ಹುದ್ದೆಗಳಿಗೆ ಉದ್ಯೋಗಾಕಾಂಕ್ಷಿಗಳಿಂದ ಅರ್ಜಿ ಆಹ್ವಾನಿಸಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಫೆಬ್ರವರಿ 28, 2025 ಕೊನೆಯ ದಿನವಾಗಿದೆ. ಅರ್ಜಿಯನ್ನು www.iocl.com ಗೆ ಭೇಟಿ ನೀಡಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸಲು ಈ ಹಂತ ಅನುಸರಿಸಿ www.iocl.com ಜಾಲತಾಣಕ್ಕೆ ಭೇಟಿ ನೀಡಬೇಕು. ಇಂಡಿಯನ್ ಆಯಿಲ್ ವೆಬ್ ಸೈಟ್ ನ ಕ್ಯಾರಿಯರ್ ಲಿಂಕ್ ಮೇಲೆ ಕ್ಲಿಕ್ ಮಾಡಬೇಕು. ಜಾಬ್ ಓಪನಿಂಗ್, ಆ ಬಳಿಕ ರಿಕ್ರೂಟ್ ಮೆಂಟ್ ಆಫ್ ನನ್ ಎಕ್ಸಿಕ್ಯೂಟಿವ್ ಪೆರ್ಸನಲ್ ಇನ್ ಮಾರ್ಕೆಟಿಂಗ್ ಡಿವಿಸನ್ 2025ರ ಮೇಲೆ ಕ್ಲಿಕ್ ಮಾಡಿ ಅರ್ಜಿ ಸಲ್ಲಿಸಬಹುದಾಗಿದೆ. https://kannadanewsnow.com/kannada/big-news-these-9-medicines-failed-in-state-lab-tests-minister-dinesh-gundu-rao-writes-to-centre-seeking-ban/ https://kannadanewsnow.com/kannada/9-injections-in-use-in-the-state-are-not-of-good-quality-lab-report/

Read More

ಬೆಂಗಳೂರು: ಬಾಣಂತಿಯರ ಸರಣಿ ಸಾವಿನ ಬೆನ್ನಲ್ಲೇ ರಾಜ್ಯದಲ್ಲಿ ಬಳಕೆಯಲ್ಲಿರುವಂತ 9 ಇಂಜೆಕ್ಷನ್ ಗುಣಮಟ್ಟ ಹೊಂದಿಲ್ಲ ಎಂಬಂತ ಆತಂಕಕಾರಿ, ಶಾಕಿಂಗ್ ಅಂಶ ಲ್ಯಾಬ್ ವರದಿಯಿಂದ ಬಹಿರಂಗವಾಗಿದೆ. ಈ ವಿಚಾರವನ್ನು ಗಂಭೀರವಾಗಿ ಪರಿಗಣಿಸಿರುವಂತ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಗುಣಮಟ್ಟವಿಲ್ಲದ ಈ ಇಂಜೆಕ್ಷನ್ ಕೂಡಲೇ ಹಿಂತೆಗೆದುಕೊಳ್ಳುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದು ಒತ್ತಾಯಿಸಿದ್ದಾರೆ. ಅಂದಹಾಗೇ ಈ ವರ್ಷ ಜನವರಿ 1ರಿದಂ ಫೆಬ್ರವರಿ 16ರ ನಡುವೆ ಹೊರ ರಾಜ್ಯಗಳಲ್ಲಿ ತಯಾರಾಗಿ ಕರ್ನಾಟಕಕ್ಕೆ ಪೂರೈಕೆಯಾಗಿರುವ ಔಷಧಗಳ 9 ಇಂಜೆಕ್ಷನ್ ಯೋಗ್ಯವಲ್ಲ ಎಂದು ರಾಜ್ಯ ಸರ್ಕಾರದ ಪ್ರಯೋಗಾಲಯಗಳಲ್ಲಿ ನಡೆದ ಗುಣಮಟ್ಟ ಪರೀಕ್ಷೆ ವರದಿಯಲ್ಲಿ ಸಾಬೀತಾಗಿದೆ. ಯಾವೆಲ್ಲ ಔಷದಗಳು ಕಳಪೆ? ಕಳಪೆ ಗುಣಮಟ್ಟದ 9 ಇಂಜೆಕ್ಷನ್ ಗಳ ಪೈಕಿ ಎರಡು ಬ್ಯಾಚ್ ನ ಇಂಜೆಕ್ಷನ್ ಗಳು ಆಂಟಿ ಬಯೋಟಿಕ್ ಆಗಿದ್ದು ವಾಂತಿ, ಬೇಧಿ ಸಂದರ್ಭದಲ್ಲಿ ನೀಡಲಾಗುತ್ತದೆ. ಇವಲ್ಲದೇ ನೋವು ನಿವಾರಕವಾಗಿ, ಬಳಲಿಕೆ ಮತ್ತು ನಿಶ್ಯಕ್ತಿಗೆ, ಕಿಡ್ನಿ ಸಮಸ್ಯೆ ಹೊಂದಿದವರಿಗೆ, ಹಾವು ಕಡಿತ, ವಿಷ ಸೇವನೆ ಸಂದರ್ಭದಲ್ಲಿ ನೀಡುವ ಇಂಜೆಕ್ಷನ್ ಗಳು…

Read More

ಬೆಂಗಳೂರು: ಹಣಕಾಸು ವಿಷಯಕ್ಕೆ ಸಂಬಂಧಿಸಿದಂತೆ ವಿರೋಧ ಪಕ್ಷದ ಮುಖಂಡರ ಆರೋಪಗಳಿಗೆ ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಈ ಕೆಳಕಂಡಂತೆ ತಿರುಗೇಟು ನೀಡಿದ್ದಾರೆ. ಬಿಜೆಪಿಯ ರಾಜ್ಯಾಧ್ಯಕ್ಷರಾದ ಬಿ.ವೈ.ವಿಜಯೇಂದ್ರ, ಮಾಜಿ ಮುಖ್ಯಮಂತ್ರಿಗಳು ಹಾಗೂ  ಹಾಲಿ ಸಂಸದರಾದ ಬಸವರಾಜ್ ಬೊಮ್ಮಾಯಿಯವರು ಹಾಗೂ ಇತರೆ ವಿರೋಧ ಪಕ್ಷದ ಮುಖಂಡರುಗಳು  ರಾಜ್ಯದ ಆರ್ಥಿಕತೆಯ ಬಗ್ಗೆ ಮಾತನಾಡಿದ್ದಾರೆ. ರಾಜ್ಯದ ಆರ್ಥಿಕತೆ ಕುಸಿಯುತ್ತಿದೆ, ರಾಜ್ಯ ದಿವಾಳಿಯಾಗುತ್ತಿದೆ. ಹಣಕಾಸಿನ ವ್ಯವಸ್ಥೆ ನೆಲ ಕಚ್ಚಿದೆ ಎಂದೆಲ್ಲ ಆರೋಪಿಸಿ ಮಾತನಾಡಿದ್ದಾರೆ. ಆ ಮೂಲಕ ಜನರನ್ನು ಸಶಕ್ತಗೊಳಿಸುತ್ತಿರುವ ನಮ್ಮ ಗ್ಯಾರಂಟಿ  ಹಾಗೂ ಇನ್ನಿತರೆ ಯೋಜನೆಗಳನ್ನು ಟೀಕಿಸಿದ್ದಾರೆ. ವಾಸ್ತವವೇನೆಂದರೆ, ರಾಜ್ಯದಲ್ಲಿ ಬಿಜೆಪಿಯವರು ಆಡಳಿತ ನಡೆಸುತ್ತಿದ್ದಾಗ ನಮ್ಮ ಆರ್ಥಿಕ ವ್ಯವಸ್ಥೆಯನ್ನು ಪಾತಾಳಕ್ಕೆ ಕುಸಿಯುವಂತೆ ಮಾಡಿದ್ದರು. ಆದರೆ ವಿರೋಧ ಪಕ್ಷದಲ್ಲಿ ಕೂತು ದೊಡ್ಡ ಅರ್ಥಶಾಸ್ತ್ರಜ್ಞರಂತೆ ಮಾತನಾಡುತ್ತಿದ್ದಾರೆ. ಬಿಜೆಪಿಯವರ ಅರಾಜಕ ಆರ್ಥಿಕ ನಿರ್ವಹಣೆಗಳಿಂದಾಗಿ ಪಾತಾಳದತ್ತ ಕುಸಿಯುತ್ತಿದ್ದ ರಾಜ್ಯದ ಅರ್ಥ ವ್ಯವಸ್ಥೆಯನ್ನು ಸರಿದಾರಿಗೆ ತರುವ ಪ್ರಯತ್ನವನ್ನು ನಮ್ಮ ಸರ್ಕಾರ ಮಾಡುತ್ತಿದೆ. ಇದನ್ನು ಸಹಿಸಿಕೊಳ್ಳಲಾಗದೆ ಅಥವಾ ಅರಿತುಕೊಳ್ಳಲಾರದೆ ಬಿಜೆಪಿಯವರು ಮಾತಾಡುತ್ತಿರುವುದು ದುರಂತವೆಂದು ಸರ್ಕಾರವು ಭಾವಿಸುತ್ತದೆ. ಬಿಜೆಪಿಯವರು ಮಾಡಿದ್ದ ಅವಾಂತರಗಳ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಧಾರ್ಮಿಕ ದತ್ತಿ ಇಲಾಖೆಯ ದೇವಾಲಯಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವಂತ ಸರ್ಕಾರಿ ನೌಕರರಿಗೆ ಗುಡ್ ನ್ಯೂಸ್ ಹೊರ ಬಿದ್ದಿದೆ. ಇನ್ಮುಂದೆ ವೇತನ ಮತ್ತು ಭತ್ಯೆಗಳನ್ನು ರಾಜ್ಯದ ಸಂಚಿತ ನಿಧಿಯಿಂದಲೇ ನೀಡುವುದಾಗಿ ಆದೇಶ ಮಾಡಿದೆ. ಈ ಸಂಬಂಧ ಧಾರ್ಮಿಕ ದತ್ತಿಯ ಕಂದಾಯ ಇಲಾಖೆಯ ಸರ್ಕಾರದ ಅಧೀನ ಕಾರ್ಯದರ್ಶಿ ಆದೇಶ ಹೊರಡಿಸಿದ್ದು, ಉಲ್ಲೇಖಿತ(1)ರ ಪ್ರಸ್ತಾವನೆ ಕುರಿತು, ಉಲ್ಲೇಖಿತ(2)ರ ಆರ್ಥಿಕ ಇಲಾಖೆಯ ಟಿಪ್ಪಣಿಯಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಸರ್ಕಾರಿ ಅಧಿಕಾರಿ/ನೌಕರರ ವೇತನ ಮತ್ತಿತರ ಭತ್ಯೆಗಳನ್ನು ರಾಜ್ಯ ಸರ್ಕಾರದ ಸಂಚಿತ ನಿಧಿಯಿಂದ ಪಾವತಿಸಲು ಆರ್ಥಿಕ ಇಲಾಖೆಯು ಸಹಮತಿ ನೀಡಿರುತ್ತದೆ ಎಂದಿದ್ದಾರೆ. ಧಾರ್ಮಿಕ ದತ್ತಿ ಇಲಾಖೆಯ ಅಧಿಸೂಚಿತ ಸಂಸ್ಥೆಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ 131 ಅಧಿಕಾರಿ/ಸಿಬ್ಬಂದಿಗಳ ವೇತನಕ್ಕೆ ಅನುದಾನವನ್ನು ಲೆಕ್ಕ ಶೀರ್ಷಿಕೆ:2250-00-102-4-00 ಹಿಂದೂ ಧಾರ್ಮಿಕ ಸಂಸ್ಥೆಗಳು & ಧರ್ಮಾದಾಯ ದತ್ತಿಗಳು ಅಡಿ ಒದಗಿಸಲಾಗುವುದು. DDO ರವರು ಈ ಲೆಕ್ಕಶೀರ್ಷಿಕೆ ಅನ್ನು ಮ್ಯಾಪ್ ಮಾಡಿಕೊಳ್ಳುವಂತೆ ಹಾಗೂ ಈ ಅಧಿಕಾರಿ ಸಿಬ್ಬಂದಿಗಳ ವಿವರಗಳನ್ನು HRMS…

Read More

ಮಂಗಳೂರು: ಮುಡಾ ಕೇಸ್ ದೂರುದಾರ ಸ್ನೇಹಮಯಿ ಕೃಷ್ಣ ಸೇರಿದಂತೆ ಇಬ್ಬರ ಮೇಲೆ ವಾಮಾಚಾರ ನೆಡಸಿದ್ದಂತ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಈ ಸಂಬಂಧ ಪ್ರಕರಣ ದಾಖಲಿಸಿಕೊಂಡಿದ್ದಂತ ಪೊಲೀಸರು ತನಿಖೆ ಕೈಗೊಂಡಿದ್ದರು. ಸ್ನೇಹಮಯಿ ಕೃಷ್ಣ, ಗೋವಿಂದರಾಜು ಮೇಲೆ ವಾಮಾಚಾರ ನಡೆಸಿದಂತ ಇಬ್ಬರನ್ನು ಮಂಗಳೂರು ಪೊಲೀಸರು ಬಂಧಿಸಿರುವುದಾಗಿ ತಿಳಿದು ಬಂದಿದೆ. ಸ್ನೇಹಮಯಿ ಕೃಷ್ಣ ಮೇಲೆ ಬೆಂಗಳೂರಿನ ಅಶೋಕ ನಗರದಲ್ಲಿರುವಂತ ಸ್ಮಶಾನದಲ್ಲಿ ವಾಮಾಚಾರ ಮಾಡಿಸಿದ್ದರು. ಸ್ಮಶಾನ ಕಾಳಿಕಾಂಬ ಗುಡಿಯಲ್ಲಿ ಕುರಿಗಳನ್ನು ಬಲಿ ನೀಡಿದ್ದರು. ಈ ವಿಚಾರವನ್ನು ಸ್ಮಶಾನ ಕಾಳಿಕಾಂಬ ದೇವಸ್ಥಾನದ ಅರ್ಚಕರಿಗೆ ತಿಳಿಯದಂತೆ ಬಲಿ ನೀಡಿದ್ದರು. ಸ್ನೇಹಮಯಿ ಕೃಷ್ಣ, ಗಂಗರಾಜು, ಪ್ರಸಾದ್ ಅತ್ತಾವರ, ಶ್ರೀನಿಧಿ, ಸುಮಾ ಆಚಾರ್ಯ ಹೆಸರಿನ ಚೀಟಿ ನೀಡಿ ದೇವಿಗೆ ಪೂಜೆ. ಬಲಿ ನೀಡಿದ್ದ ಕುರಿಗಳ ರಕ್ತವನ್ನು ಸ್ನೇಹಮಯಿ ಕೃಷ್ಣ, ಗಂಗರಾಜು ಪೋಟೋಗೆ ಅರ್ಪಣೆ ಮಾಡಲಾಗಿತ್ತು. ವಾಮಾಚಾರದ ದೃಶ್ಯವನ್ನು ಪ್ರಸಾದ್ ಅತ್ತಾವರ್ ಮೊಬೈಲ್ ನಲ್ಲಿ ಪತ್ತೆಯಾಗಿತ್ತು. ಮೊಬೈಲ್ ಅತ್ತಾವರ ರಾಮಸೇನಾ ಸಂಘಟನೆಯ ಸಂಸ್ಥಾಪಕ ಆಗಿದ್ದಾರೆ. ಮಸಾಜ್ ಪಾರ್ಲರ್ ಗಲಾಟೆಯಲ್ಲಿ ಬಂಧನಕ್ಕೆ ಒಳಗಾಗಿದ್ದರು. ಮೊಬೈಲ್…

Read More

ಪ್ರಯಾಗ್ ರಾಜ್ : ಗಂಗಾ, ಯಮುನಾ ಮತ್ತು ಪೌರಾಣಿಕ ಸರಸ್ವತಿಯ ಪವಿತ್ರ ಸಂಗಮಕ್ಕೆ 550 ಮಿಲಿಯನ್ ಭಕ್ತರನ್ನ ಆಕರ್ಷಿಸುವ ಮಹಾಕುಂಭ ಮೇಳ 2025ರಲ್ಲಿ, ವೈಯಕ್ತಿಕವಾಗಿ ಅಲ್ಲಿರಲು ಸಾಧ್ಯವಾಗದವರಿಗೆ ಆಶ್ಚರ್ಯಕರ ಹೊಸ ಸೇವೆ ವೈರಲ್ ಆಗುತ್ತಿದೆ. ಹೌದು, ವ್ಯಕ್ತಿಯೊಬ್ಬ ತನ್ನ ವಿಶಿಷ್ಟ ವ್ಯವಹಾರವನ್ನ ಉತ್ತೇಜಿಸುವ ವೀಡಿಯೊ ಇತ್ತೀಚೆಗೆ ಇನ್ಸ್ಟಾಗ್ರಾಮ್ನಲ್ಲಿ ವೈರಲ್ ಆಗಿದೆ. ಸ್ಥಳೀಯ ಉದ್ಯಮಿ “ಡಿಜಿಟಲ್ ಸ್ನಾನ್” (ಪವಿತ್ರ ಸ್ನಾನ) ಸೇವೆಯನ್ನ ಪರಿಚಯಿಸಿದ್ದಾನೆ. ಅಲ್ಲಿ ಭಕ್ತರು ತಮ್ಮ ಫೋಟೋಗಳನ್ನ ವಾಟ್ಸಾಪ್ ಮೂಲಕ ಆತನಿಗೆ ಕಳುಹಿಸುತ್ತಾರೆ ಮತ್ತು ಆತ ಅವರ ಪರವಾಗಿ ಪವಿತ್ರ ಸಂಗಮದಲ್ಲಿ ಫೋಟೋಗಳನ್ನ ಮುಳುಗಿಸುತ್ತಾನೆ. ಅಂದ್ಹಾಗೆ, ಈ ವ್ಯಕ್ತಿ ಪಾಸ್ಪೋರ್ಟ್ ಗಾತ್ರದ ಪೋಟೋಗಳನ್ನ ನೀರಿನಲ್ಲಿ ಮುಳುಗಿಸುತ್ತಾನೆ. ಡಿಜಿಟಲ್ ಸೃಷ್ಟಿಕರ್ತ ಆಕಾಶ್ ಬ್ಯಾನರ್ಜಿ ಇದನ್ನು ವ್ಯಂಗ್ಯದ ಸ್ಪರ್ಶದೊಂದಿಗೆ ಹಂಚಿಕೊಂಡಿದ್ದು, ಅವರು ಇದನ್ನು ‘ಕೃತಕ ಸ್ನಾನ’ ಎಂದು ಕರೆದರು ಮತ್ತು “ಮುಂದಿನ ಹಂತದ ಎಐ ಐಡಿಯಾ ನೆಕ್ಸ್ಟ್ ಯುನಿಕಾರ್ನ್ ಕಂಪನಿ ಗುರುತಿಸಿದೆ” ಎಂದು ತಮಾಷೆಯಾಗಿ ಹೇಳಿದ್ದಾರೆ. ಅಚ್ಚರಿಯೆಂದ್ರೆ, ಈ ಸಾಂಕೇತಿಕ ಆಚರಣೆಯನ್ನ ಪ್ರತಿ ವ್ಯಕ್ತಿಗೆ…

Read More