Author: kannadanewsnow09

ಮಡಿಕೇರಿ : ಕೊಡಗು ಪ್ರಯಾಣ ಅನುಭವಗಳಿಗಾಗಿ ವಿಶ್ವಾಸಾರ್ಹ ಮೂಲ- ಪ್ರವಾಸೋದ್ಯಮ ಇಲಾಖೆಯ ಅಧಿಕೃತ ವೆಬ್‍ಸೈಟ್ explorekodagu.com ನ್ನು ಜಿಲ್ಲಾಧಿಕಾರಿಗಳು ಹಾಗೂ ಅಧ್ಯಕ್ಷರು, ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಸಮಿತಿ, ಕೊಡಗು ಜಿಲ್ಲೆಯ ಮುಖಾಂತರ ಕೊಡಗು ಪ್ರವಾಸೋದ್ಯಮದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲೆಯ ಸಮಗ್ರ ಮಾಹಿತಿ ಹೊಂದಿರುವ ಅಧಿಕೃತ ವೆಬ್‍ಸೈಟ್ ಅನ್ನು ಕರ್ನಾಟಕ ಘನ ಸರ್ಕಾರದ ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ಧರಾಮಯ್ಯ ಅವರು ತಮ್ಮ ಅಮೃತ ಹಸ್ತದಿಂದ ಶುಕ್ರವಾರ ಬಿಡುಗಡೆ ಮಾಡಿದರು. ಈ ವೆಬ್‍ಸೈಟ್‍ನಲ್ಲಿ ಕೊಡಗಿನ ಸುಂದರ ಪ್ರವಾಸಿ ತಾಣಗಳನ್ನು ಅತ್ಯುತ್ತಮವಾಗಿ ಪ್ರದರ್ಶಿಸಲು ಮೀಸಲಾಗಿರುವ ಸಮಗ್ರ ಆನ್‍ಲೈನ್ ವೇದಿಕೆಯಾಗಿದೆ ಎಂದು ಘೋಷಿಸಲು ಹೆಮ್ಮೆ ಸಂಗತಿಯಾಗಿದೆ. ಜಿಲ್ಲೆಗೆ ಭೇಟಿ ನೀಡುವ ಪ್ರವಾಸಿಗರಿಗೆ ಉತ್ತಮ ಗುಣಮಟ್ಟದ, ವಿಶ್ವಾಸಾರ್ಹ ಪ್ರಯಾಣ ಅನುಭವವನ್ನು ಖಚಿತಪಡಿಸಿಕೊಳ್ಳಲು ವೆಬ್‍ಸೈಟ್‍ನಲ್ಲಿ ಅಧಿಕೃತವಾಗಿ ನೋಂದಾಯಿತ ಮತ್ತು ಪ್ರಮಾಣೀಕೃತ ಹೋಂಸ್ಟೇಗಳು, ರೆಸಾರ್ಟ್‍ಗಳು, ರೆಸ್ಟೋರೆಂಟ್‍ಗಳು, ಪ್ರವಾಸಿ ಮಾರ್ಗದರ್ಶಿಗಳು, ಟ್ಯಾಕ್ಸಿ ನಿರ್ವಾಹಕರು ಮತ್ತು ಜಿಲ್ಲೆಯ ಅಧೀಕೃತ ಕಾರ್ಯ ಕ್ರಮಗಳನ್ನು ಮಾತ್ರ ಪಟ್ಟಿ ಮಾಡಲಾಗಿರುತ್ತದೆ. ವೆಬ್‍ಸೈಟ್‍ನಲ್ಲಿ ಪ್ರಮುಖ ಲಕ್ಷಣಗಳು: ಜಿಲ್ಲೆಯ ನೋಂದಾಯಿತ…

Read More

ಧಾರವಾಡ: 2024-25 ನೇ ಸಾಲಿನ ಹಿಂಗಾರು ಹಂಗಾಮಿನಲ್ಲಿ ಈಗಾಗಲೇ (ಖಾಸಗಿ ನಿವಾಸಿ) ಪಿಆರ್‍ಗಳು ರೈತರ ಜಮೀನಿನಲ್ಲಿ ಬೆಳೆದ ಬೆಳೆಗಳ ಛಾಯಾ ಚಿತ್ರವನ್ನು ಬೆಳೆ ಸಮೀಕ್ಷೆ ಮೊಬೈಲ್ ರೈತರ ಆಪ್‍ನಲ್ಲಿ ದಾಖಲಿಸಿದ್ದು, ಸದರಿ ಮಾಹಿತಿಯು ಬೆಳೆ ವಿಮೆ, ಬೆಳೆ ನಷ್ಟ, ಪರಿಹಾರ ಬೆಂಬಲ ಬೆಲೆ ಹಾಗೂ ಇನ್ನಿತರ ಸರ್ಕಾರದ ಯೋಜನೆಗಳಡಿ ಸವಲತ್ತುಗಳನ್ನು ಒದಗಿಸಲು ಆರ್‍ಟಿಸಿಯಲ್ಲಿ ಅಳವಡಿಸಲು ಬಳಸಲಾಗುತ್ತದೆ. ಈಗಾಗಲೇ ಮಾಡಿರುವ ಬೆಳೆ ಸಮೀಕ್ಷೆ ಕುರಿತು ಏನಾದರೂ ಅಕ್ಷಪಣೆಗಳಿದ್ದಲ್ಲಿ ರೈತರು ಬೆಳೆ ದರ್ಶಕ ಮೊಬೈಲ್ ಆಪ್ (ಒobiಟe ಂಠಿಠಿ) ಮೂಲಕ ಫೆಬ್ರವರಿ 15, 2025 ರೊಳಗಾಗಿ ಆಕ್ಷೇಪಣೆ ಸಲ್ಲಿಸಬಹುದು. ತಮ್ಮ ಗ್ರಾಮಗಳ ಪಿಆರ್‍ಗಳನ್ನು ಅಥವಾ ಸಮೀಪದ ಕಂದಾಯ, ಕೃಷಿ, ತೋಟಗಾರಿಕೆ ಇಲಾಖೆಯ ಅಧಿಕಾರಿಗಳ ಸಹಾಯ ಪಡೆದು ಆಕ್ಷೇಪಣೆ ಸಲ್ಲಿಸಬಹುದು ಎಂದು ಸಹಾಯಕ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. https://kannadanewsnow.com/kannada/microfinance-harassment-helpline-launched-in-dharwad/ https://kannadanewsnow.com/kannada/tomorrows-kmf-employees-strike-postponed-no-disruption-in-supply-of-nandini-products/

Read More

ಧಾರವಾಡ: ಕರ್ನಾಟಕ ರಾಜ್ಯದಲ್ಲಿ ಮೈಕ್ರೋಫೈನಾನ್ಸ್ ಕಂಪನಿಗಳು ಸಾಲ ವಸೂಲಾತಿ ನೆಪದಲ್ಲಿ ಸಾಲಗಾರರಿಗೆ ಕಿರುಕುಳ ನೀಡುತ್ತಿರುವ ಪ್ರಕರಣಗಳು ಹೆಚ್ಚುತ್ತಿರುವದರಿಂದ ಮುಖ್ಯ ಮಂತ್ರಿಗಳ ಸೂಚನೆಯಂತೆ ಧಾರವಾಡ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಹಾಯವಾಣಿ ಕೇಂದ್ರವನ್ನು ಸ್ಥಾಪಿಸಲಾಗಿದೆ. ನೊಂದವರು ದೂರವಾಣಿ ಸಂಖ್ಯೆ 0836-2445508 ಅಥವಾ ಟೋಲ ಪ್ರೀ ನಂ: 1077 ಗೆ ಕರೆ ಮಾಡಿ ಮಾಹಿತಿ ನೀಡಬಹುದು. ಮಾಹಿತಿದಾರರ ವಿವರಗಳನ್ನು ಗೌಪ್ಯವಾಗಿ ಇಡಲಾಗುವುದೆಂದು ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು ತಿಳಿಸಿದ್ದಾರೆ. ಈ ಕುರಿತು ಪ್ರಕಟಣೆ ನೀಡಿರುವ ಅವರು, ಮೈಕ್ರೋಫೈನಾನ್ಸ್ ಕಂಪನಿಗಳಿಂದ ಆಗುತ್ತಿರುವ ಕಿರುಕುಳಕ್ಕೆ ಸಂಬಂಧಿಸಿದಂತೆ ಸಹಾಯವಾಣಿ ಕೇಂದ್ರಗಳಲ್ಲಿ ಕರೆಗಳನ್ನು ಸ್ವೀಕರಿಸಲು ವಾರದ ಏಳು ದಿನಗಳಲ್ಲಿ ಹಗಲು ರಾತ್ರಿ ಪಾಳೆಯಲ್ಲಿ (ಮೂರು ಶಿಫ್ಟ್‍ನಲ್ಲಿ) ಅಧಿಕಾರಿಗಳು ಕಾರ್ಯನಿರ್ವಹಿಸುತ್ತಾರೆ. ಸಿಬ್ಬಂದಿಯವರು ನಿಗದಿತ ಸಮಯದಲ್ಲಿ ಸಹಾಯವಾಣಿ ಕೇಂದ್ರದಲ್ಲಿ ಹಾಜರಿದ್ದು, ದೂರವಾಣಿಯ ಮೂಲಕ ಸ್ವೀಕರಿಸುವ ಎಲ್ಲ ದೂರು ಮತ್ತು ಮಾಹಿತಿಗಳನ್ನು ಕಾರ್ಯಾಲಯದಲ್ಲಿ ನಿರ್ವಹಣೆ ಮಾಡಿದ ವಹಿಯಲ್ಲಿ ದಾಖಲಿಸಿ, ದೂರಿನ ಸಮಸ್ಯೆ ಅಂಶಗಳ ಬಗ್ಗೆ ಆಯಾ ತಾಲೂಕಿನ ತಹಶೀಲ್ದಾರರಿಗೆ ಮತ್ತು ಪೆÇಲೀಸ್ ಇಲಾಖೆಗೆ ತಕ್ಷಣ ಮಾಹಿತಿ ನೀಡುವರು.…

Read More

ಶಿವಮೊಗ್ಗ : ನಗರದ ಗಾಂಧಿಬಜಾರ್‌ನ ಸೊಪ್ಪಿನ ಮಾರುಕಟ್ಟೆ ಬಳಿ ವಿದ್ಯುತ್ ಪರಿಕರಗಳ ನಿರ್ವಹಣೆ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ.3ರಂದು ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂಬುದಾಗಿ ಮೆಸ್ಕಾಂ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಫೆ.3ರಂದು ಈ ಪ್ರದೇಶಗಳಲ್ಲಿ ಪವರ್ ಕಟ್ ಗಾಂಧಿಬಜಾರ್, ಬಿ.ಹೆಚ್.ರಸ್ತೆ, ಭರಮಪ್ಪನಗರ, ಉಪ್ಪಾರಕೇರಿ, ಹರಳೆಣ್ಣೆಕೇರಿ, ಕಸ್ತೂರಿ ಬಾ ರಸ್ತೆ. ಎಂ.ಕೆ.ಕೆ.ರಸ್ತೆ, ನಾಗಪ್ಪ ಕೇರಿ, ಸಾವರ್ಕರ್‌ನಗರ, ಎಲೆರೇವಣ್ಣಕೇರಿ, ಮೀನು ಮಾರುಕಟ್ಟೆ, ಯಾಲಕಪ್ಪಕೇರಿ, ಲಷ್ಕರ್ ಮೊಹಲ್ಲಾ, ಆನವೇರಪ್ಪಕೇರಿ, ಧರ್ಮರಾಯನಕೇರಿ ಮತ್ತು ಸುತ್ತಮುತ್ತಲಿನ ಪ್ರದೇಶಗಳ ವ್ಯಾಪ್ತಿಯಲ್ಲಿ ಫೆ.03 ರಂದು ಬೆಳಗ್ಗೆ 09.00 ಘಂಟೆಯಿಂದ ಸಂಜೆ 6.00 ಘಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ಕೋರಿದೆ. https://kannadanewsnow.com/kannada/good-news-for-shimul-milk-producers-milk-procurement-price-hiked-by-rs-2/ https://kannadanewsnow.com/kannada/breaking-court-allows-darshan-to-stay-in-mysuru-till-feb-10/

Read More

ಶಿವಮೊಗ್ಗ : ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಹಾಲು ಒಕ್ಕೂಟವು ತನ್ನ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಅವಲೋಕಿಸಿ ಹಾಲು ಖರೀದಿ ದರವನ್ನು ಕಾಲಕಾಲಕ್ಕೆ ಪರಿಷ್ಕರಿಸುತ್ತಿದ್ದು, ಬೇಸಿಗೆ ಹಂಗಾಮಿನಲ್ಲಿ ಹೈನುರಾಸುಗಳ ನಿರ್ವಹಣಾ ವೆಚ್ಚ ಅಧಿಕಾರವಾಗುವುದರಿಂದ ಉತ್ಪಾದನಾ ವೆಚ್ಚ ಹೆಚ್ಚಳವಾಗಿ ಲಾಭಾಂಶ ಕಡಿಮೆ ಆಗುವುದರಿಮದ ಹಾಲು ಉತ್ಪಾದಕರನ್ನು ಪ್ರೋತ್ಸಾಹಿಸಿ, ಉತ್ತೇಜಿಸುವ ಸಲುವಾಗಿ ಒಕ್ಕೂಟದ ಆರ್ಥಿಕ ಪರಿಸ್ಥಿತಿಯನ್ನು ಪರಿಗಣಿಸಿ ಶಿವಮೊಗ್ಗ, ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲೆಗಳಲ್ಲಿ ರೈತರಿಂದ ಖರೀದಿಸುವ ಹಾಲು ಖರೀದಿ ದರವನ್ನು ಪ್ರತಿ ಲೀಟರ್ ಗೆ ರೂ. 2.00 ಹೆಚ್ಚಿಸಿ ಪರಿಷ್ಕರಿಸಲು ಒಕ್ಕೂಟದ ಅಧ್ಯಕ್ಷ ಹೆಚ್.ಎನ್. ವಿದ್ಯಾಧರರವರ ಅದ್ಯಕ್ಷತೆಯಲ್ಲಿ ಜ.31 ರಂದು ನಡೆದ ಒಕ್ಕೂಟದ 453ನೇ ಆಡಳಿತ ಮಂಡಳಿ ಸಭೆಯಲ್ಲಿ ತೀರ್ಮಾನಿಸಿದೆ. ಒಕ್ಕೂಟದಿಂದ ಸಂಘಗಳಿಗೆ ಪ್ರಸ್ತುತ ಎಫ್‌ಎಟಿ 4.0%, ಎಸ್‌ಎನ್‌ಎಫ್ 8.50% ಇರುವ ಪ್ರತಿ ಕೆ.ಜಿ.ಹಾಲಿಗೆ 32.09 ರೂ. ಪರಿಷ್ಕೃತ ದರ 34.18 ರೂ. ಸಂಘದಿಂದ ಉತ್ಪಾದಕರಿಗೆ ಪ್ರಸ್ತುತ ಎಫ್‌ಎಟಿ4.0%, ಎಸ್‌ಎನ್‌ಎಫ್ 8.50% ಇರುವ ಪ್ರತಿ ಲೀ. ಹಾಲಿಗೆ 30.13 ರೂ. ಪರಿಷ್ಕೃತ ದರ…

Read More

ಕುಬೇರನು ಸಂಪತ್ತಿನ ಅಧಿಪತಿ. ಕಾರಣ ಅವರಿಗೆ ಸಂಘ ನೀತಿ ಮತ್ತು ಪದುಮ ನೀತಿ ಇದೆ. ಮತ್ತು ಅವನು ಶಿವನಿಂದ ಪಡೆದ ವರದಿಂದಲೇ ಅವನು ಸಂಪತ್ತಿನ ಅಧಿಪತಿ. ಆತನ ಕೃಪೆಯನ್ನು ಪರಿಪೂರ್ಣವಾಗಿ ಪಡೆದವರ ಜೀವನದಲ್ಲಿ ಎಂದೂ ಹಣದ ಕೊರತೆ ಇರುವುದಿಲ್ಲ. ಅಂತಹ ವಿಶೇಷ ದೇವತೆಯಾಗಬಲ್ಲವನು ಭಗವಂತ ಕುಬೇರ. ಅಂತಹ ಭಗವಂತ ಕುಬೇರನ ಕೃಪೆಗೆ ಪಾತ್ರರಾಗಲು ಮತ್ತು ಆರ್ಥಿಕ ಮುಗ್ಗಟ್ಟಿನ ಪರಿಹಾರಕ್ಕೆ ಹಚ್ಚಬೇಕಾದ ದೀಪದ ಬಗ್ಗೆ ಈ ಆಧ್ಯಾತ್ಮಿಕ ಪೋಸ್ಟ್‌ನಲ್ಲಿ ನಾವು ನೋಡಲಿದ್ದೇವೆ . ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರು ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ 9686268564 ನಗದು ಬಿಕ್ಕಟ್ಟು ಪರಿಹರಿಸಲು ಕುಬೇರ…

Read More

ಬೆಂಗಳೂರು: ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶದ ಅಭಿವೃದ್ಧಿಗೆ ವಿಶೇಷ ಹೊಂದಾಣಿಕೆ ಅನುದಾನ, ಮೇಕೆದಾಟು ಯೋಜನೆಗೆ ಅನುಮೋದನೆ ಮತ್ತು 15 ನೇ ಹಣಕಾಸು ಆಯೋಗದ ಶಿಫಾರಸು ಮಾಡಿದ 11,495 ಕೋಟಿ ರೂ.ಗಳ ವಿಶೇಷ ಅನುದಾನವನ್ನು ಕರ್ನಾಟಕ ಸರ್ಕಾರ ನಿರೀಕ್ಷಿಸಿದೆ.  ಕಳೆದ ತಿಂಗಳು, ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಅವರು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ (ಯುಟಿ) ಹಣಕಾಸು ಸಚಿವರನ್ನು ಭೇಟಿಯಾಗಿ ಫೆಬ್ರವರಿ 1 ರಂದು ಮಂಡಿಸಲಿರುವ 2025-26 ರ ಕೇಂದ್ರ ಬಜೆಟ್ಗಾಗಿ ಅವರ ಬೇಡಿಕೆಗಳನ್ನು ಮುಂದಿಡಲಾಗಿತ್ತು. ಬರಪೀಡಿತ ಮಧ್ಯ ಕರ್ನಾಟಕಕ್ಕೆ ನೀರು ಒದಗಿಸಲು ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಬಜೆಟ್ ನಲ್ಲಿ ಭರವಸೆ ನೀಡಿದ್ದ 5,300 ಕೋಟಿ ರೂ.ಗಳನ್ನು ಬಿಡುಗಡೆ ಮಾಡುವಂತೆ ಮತ್ತು ಕಲ್ಯಾಣ ಕರ್ನಾಟಕದ ಹಿಂದುಳಿದ ಪ್ರದೇಶ ಮತ್ತು ಜಾಗತಿಕ ಪರಿಸರ ಸೂಕ್ಷ್ಮ ಪಶ್ಚಿಮ ಘಟ್ಟಗಳ ಅಭಿವೃದ್ಧಿಗೆ ವಿಶೇಷ ಹೊಂದಾಣಿಕೆ ಅನುದಾನವನ್ನು ಬಿಡುಗಡೆ ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರದ ಪರವಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ಅವರು…

Read More

ನವದೆಹಲಿ: ದೆಹಲಿ ಚುನಾವಣೆಗೆ ಕೇವಲ ಐದು ದಿನಗಳ ಮೊದಲು ಆಮ್ ಆದ್ಮಿ ಪಕ್ಷದ (ಎಎಪಿ) 7 ಹಾಲಿ ಶಾಸಕರು ರಾಜೀನಾಮೆ ನೀಡಿದ್ದಾರೆ. ದೆಹಲಿ ವಿಧಾನಸಭಾ ಚುನಾವಣೆಗೆ ಫೆಬ್ರವರಿ 5 ರಂದು ಮತದಾನ ನಡೆಯಲಿದೆ. ಇದಕ್ಕೂ ಮುನ್ನ ಆಮ್ ಆದ್ಮಿ ಪಕ್ಷದ (ಎಎಪಿ) ಏಳು ಶಾಸಕರು ಪಕ್ಷಕ್ಕೆ ರಾಜೀನಾಮೆ ನೀಡಿದ್ದರು. ಭ್ರಷ್ಟಾಚಾರದ ಆರೋಪಗಳನ್ನು ಉಲ್ಲೇಖಿಸಿ ಮೆಹ್ರೌಲಿಯ ಶಾಸಕ ನರೇಶ್ ಯಾದವ್ ಅವರು ಮೊದಲು ರಾಜೀನಾಮೆ ನೀಡಿದರು. ಇದರ ಬೆನ್ನಲ್ಲೇ ಇನ್ನೂ ಏಳು ಶಾಸಕರು ಪಕ್ಷ ತೊರೆಯುವುದಾಗಿ ಘೋಷಿಸಿದ್ದಾರೆ. ಇದರಲ್ಲಿ ಜನಕ್ಪುರಿಯ ರಾಜೇಶ್ ರಿಷಿ, ಪಾಲಂನ ಭಾವನಾ ಗೌರ್, ಬಿಜ್ವಾಸನ್ನ ಬಿಎಸ್ ಜೂನ್, ಆದರ್ಶ್ ನಗರದ ಪವನ್ ಶರ್ಮಾ, ಕಸ್ತೂರ್ಬಾ ನಗರದ ಮದನ್ಲಾಲ್ ಮತ್ತು ತ್ರಿಲೋಕ್ಪುರಿಯ ರೋಹಿತ್ ಮಹಾರೋಲಿಯಾ ಸೇರಿದ್ದಾರೆ. ಈ ಚುನಾವಣೆಯಲ್ಲಿ ತಮ್ಮ ಟಿಕೆಟ್ ಕಡಿತದ ಬಗ್ಗೆ ಎಲ್ಲಾ ಶಾಸಕರು ಅಸಮಾಧಾನ ಹೊಂದಿದ್ದರು. ಈ 7 ಶಾಸಕರು ರಾಜೀನಾಮೆ ಪಾಲಂ- ಭಾವನಾ ಗೌಡ್ ಬಿಜ್ವಾಸನ್- ಬಿಎಸ್ ಜೂನ್ ಆದರ್ಶ್ ನಗರ- ಪವನ್ ಶರ್ಮಾ…

Read More

ಬೆಂಗಳೂರು: 220/66/11 kV ಎಸ್‌ಆರ್‌ಎಸ್ ಪೀಣ್ಯ ಸಬ್‌ಸ್ಟೇಷನ್ ಕೆಪಿಟಿಸಿಎಲ್ ವತಿಯಿಂದ ತುರ್ತು ನಿರ್ವಹಣಾ ಕಾಮಗಾರಿ ಹಿನ್ನೆಲೆಯಲ್ಲಿ ಪೀಣ್ಯ ವಿಭಾಗದ ಎನ್-4/ ಎನ್-5/ ಎನ್-7 ಉಪ ವಿಭಾಗದಲ್ಲಿ ಈ ಕೆಳಕಂಡ ಪ್ರದೇಶಗಳಲ್ಲಿ ದಿನಾಂಕ 02.02.2025 ರಂದು ಬೆಳಗ್ಗೆ 09:00 ಯಿಂದ ಮಧ್ಯಾಹ್ನ 05:00 ಗಂಟೆವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ. ಫೆ.2ರಂದು ಈ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ( Power Cut ) ಗೃಹಲಕ್ಷ್ಮಿ-ಅಪಾರ್ಟ್‌ಮೆಂಟ್, ಎಸ್‌ಎಂ ರಸ್ತೆ, ಜಲ್ಲಹಳ್ಳಿ ಕ್ರಾಸ್, ಚೊಕ್ಕಸಂದ್ರ, ಮಾರುತಿ ಲೇಔಟ್, ಕೆಂಪಯ್ಯ ಲೇಔಟ್, ಜಿಜಿ ಪಾಳ್ಯ, ಇಸ್ರೋ, ನಾರಾಯಣಪುರ, ಎನ್‌ಟಿಟಿಎಫ್ ಸರ್ಕಲ್, ಗಣಪತಿನಗರ ಮುಖ್ಯ ರಸ್ತೆ, ಪೊಲೀಸ್ ಠಾಣೆ ರಸ್ತೆ, ಚಾಮುಂಡಿಪುರ, ರಾಜೇಶ್ವರಿನಗರ, ಆಕಾಶ್ ಥಿಯೇಟರ್ ರಸ್ತೆ, ವಿ ಇಗ್ನಾನ ಪಬ್ಲಿಕ್ ಸರ್ಕಲ್ ರಸ್ತೆ. ಭೈರವೇಶ್ವರ ನಗರ, ಬ್ಯಾಂಕ್ ಕಾಲೋನಿ, ಮುನೇಶ್ವರ ಲೇಔಟ್, ಎಫ್ಎಫ್ ಲೇಔಟ್, ಎನ್ಎಸ್ ಬಡವಣೆ, ಕೆಜಿ ಲೇಔಟ್, ರಾಜೀವ್ ಗಾಂಧಿ ನಗರ ಭಾಗಶಃ, ಚೌಡೇಶ್ವರಿ ನಗರ ಭಾಗಶಃ, ಲಗ್ಗೆರೆ ಹಳೆ ಗ್ರಾಮ ಭಾಗಶಃ ಪೀಣ್ಯ 4…

Read More

ಚಿಕ್ಕಬಳ್ಳಾಪುರ: ಜಿಲ್ಲಿಯೆಲ್ಲಿ ಗ್ರಾಮಪಂಚಾಯ್ತಿ ಅಧ್ಯಕ್ಷನನೊಬ್ಬನನ್ನು ಬರ್ಬರವಾಗಿ ಕೊಲೆ ಮಾಡಿ ಚರಂಡಿಯಲ್ಲಿ ಬಿಸಾಕಿ ಹೋಗಿರುವಂತ ಘಟನೆ ನಡೆದಿದೆ. ಚಿಕ್ಕಬಳ್ಳಾಪುರ ತಾಲ್ಲೂಕಿನ ಮರಸನಹಳ್ಳಿಯ ಹಾರೋಬಂಡೆ ಗ್ರಾಮದಲ್ಲಿ ಗ್ರಾಮ ಪಂಚಾಯ್ತಿ ಅಧ್ಯಕ್ಷನ ಪುತ್ರನನ್ನು ಬರ್ಬರವಾಗಿ ಕೊಲೆ ಮಾಡಿ ಚರಂಡಿಗೆ ಬಿಸಾಕಿ ದುಷಅಕರ್ಮಿಗಳು ಪರಾರಿಯಾಗಿದ್ದಾರೆ. ಹಾರೋಬಂಡೆ ಗ್ರಾಮದ 30 ವರ್ಷದ ಮಾರುತೇಶ್ ಎಂಬಾತನನ್ನು ಕೊಲೆ ಮಾಡಿ, ಚರಂಡಿಯಲ್ಲಿ ಬಿಸಾಕಿ ಹೋಗಿದ್ದಾರೆ. ಪಾಳು ಬಿದ್ದ ಬಡಾವಣೆಯೊಂದರ ಚರಂಡಿಯಲ್ಲಿ ಮಾರುತೇಶ್ ಶವಪತ್ತೆಯಾಗಿದೆ. ಪ್ಲಂಬರ್ ಹಾಗೂ ಎಲೆಕ್ಟ್ರಿಕ್ ಕೆಲಸವನ್ನು ಮಾರುತೇಶ್ ಮಾಡುತ್ತಿದ್ದರು. ಕುಡಿದ ಅಮಲಿನಲ್ಲಿ ಜೊತೆಗಾರರೇ ಹತ್ಯೆಗೈದಿರುವ ಶಂಕೆ ವ್ಯಕ್ತವಾಗಿದೆ. ಘಟನಾ ಸ್ಥಳದಲ್ಲೇ ಬೈಕ್ ಹಾಗೂ ಮದ್ಯದ ಬಾಟಲಿ ಪತ್ತೆಯಾಗಿದೆ. ಚಿಕ್ಕಬಳ್ಳಾಪುರ ಎಸ್ಪಿ ಕುಶಾಲ್ ಚೌಕ್ಸಿ ಭೇಟಿ ನೀಡಿ, ಪರಿಶೀಲನೆ ನಡೆಸುತ್ತಿದ್ದಾರೆ. ಅಂದಹಾಗೇ ಕಳೆದ ಮೂರು ದಿನಗಳ ಹಿಂದೆ ಮಾರುತೇಶ್ ನಾಪತ್ತೆಯಾಗಿದ್ದರು. ಇಂದು ಅವರು ಕೊಲೆಯಾದಂತ ಸ್ಥಿತಿಯಲ್ಲಿ ಹಾರೋಬಂಡೆ ಗ್ರಾಮದ ಬಳಿಯ ಪಾಳು ಬಿದ್ದ ಬಡಾವಣೆಯೊಂದರ ಚರಂಡಿಯಲ್ಲಿ ಪತ್ತೆಯಾಗಿದ್ದಾರೆ. https://kannadanewsnow.com/kannada/breaking-court-allows-darshan-to-stay-in-mysuru-till-feb-10/ https://kannadanewsnow.com/kannada/tomorrows-kmf-employees-strike-postponed-no-disruption-in-supply-of-nandini-products/

Read More