Author: kannadanewsnow09

ಬೆಂಗಳೂರು: ನನ್ನ ಜೀವನಾನುಭವವೇ ವಿದ್ಯಾಸಿರಿ ಯೋಜನೆ ಜಾರಿಗೆ ಪ್ರೇರಣೆಯಾಗಿದೆ. ವಿದ್ಯಾಸಿರಿ ಯೋಜನೆಯನ್ನು ವಿದ್ಯಾರ್ಥಿಗಳಿಗೆ ಅನುಕೂಲ ಆಗಲಿ ಎನ್ನುವ ನಿಟ್ಟಿನಲ್ಲಿ ಜಾರಿಗೊಳಿಸಿರುವುದಾಗಿ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದರು. ಮಡಿವಾಳ ಸಮುದಾಯದ ಮಕ್ಕಳು ಹೆಚ್ಚೆಚ್ಚು ಶಿಕ್ಷಣ ಪಡೆಯಬೇಕು ಎನ್ನುವ ಉದ್ದೇಶದಿಂದಲೇ ನಾವು ವಿದ್ಯಾಸಿರಿ ಯೋಜನೆ ಜಾರಿಗೆ ತಂದೆವು. ಈಗ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಎರಡು ಸಾವಿರಕ್ಕೆ ಹೆಚ್ಚಿಸಲಾಗುವುದು, ಜೊತೆಗೆ ಮಡಿವಾಳ ಸಮುದಾಯದ ಹಾಸ್ಟೆಲ್ ಗೆ ಅಗತ್ಯ ಸವಲತ್ತು ಒದಗಿಸಲಾಗುವುದು ಎಂದರು. https://twitter.com/siddaramaiah/status/1913226694652993981 ಮಡಿವಾಳ ಸಮುದಾಯದ ಪ್ರಗತಿಗೆ ಕಾಂಗ್ರೆಸ್ ಸರ್ಕಾರ ಬದ್ಧವಾಗಿದೆ: ಮುಖ್ಯವಾಹಿನಿಗೆ ಬರುವ ಪ್ರಯತ್ನ ನಿಮ್ಮಿಂದ ಹೆಚ್ಚೆಚ್ಚು ಆಗಬೇಕು. ಈ ಕಾರಣಕ್ಕೇ ವಿದ್ಯಾಸಿರಿ ಯೋಜನೆಯ ಮೊತ್ತವನ್ನು ಎರಡು ಸಾವಿರ ರೂಪಾಯಿಗೆ ಹೆಚ್ಚಳ ಮಾಡ್ತೀನಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಹತ್ವದ ಘೋಷಣೆ ಮಾಡಿದರು. ಮಡಿವಾಳ ಮತ್ತು ಹಿಂದುಳಿದ ಸಮುದಾಯದ ಮಕ್ಕಳು ಶಿಕ್ಷಣವಂತರಾಗಬೇಕು. ಇದಕ್ಕೇ ವಿದ್ಯಾಸಿರಿ ಮೊತ್ತವನ್ನು ಪ್ರತೀ ವಿದ್ಯಾರ್ಥಿಗೆ ಒಂದೂವರೆ ಸಾವಿರದಿಂದ ಎರಡು ಸಾವಿರ ರೂಪಾಯಿಗೆ ಹೆಚ್ಚಿಸಲಾಗುವುದು ಎಂದು ಘೋಷಿಸಿದರು. 12ನೇ ಶತಮಾನದಲ್ಲೇ…

Read More

ಬೆಂಗಳೂರು: ಯುಜಿ ಸಿಇಟಿ 2025ರ ಪರೀಕ್ಷೆಗೆ ಸಂಬಂಧಿಸಿದಂತೆ ಕೀ ಉತ್ತರಗಳನ್ನು ಪ್ರಕಟಿಸಿರುವುದಾಗಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಯುಜಿಸಿಇಟಿ 2025ರ ಪರೀಕ್ಷೆಯ ಭೌತಶಾಸ್ತ್ರ, ರಸಾಯನ ಶಾಸ್ತ್ರ, ಗಣಿತ ಶಾಸ್ತ್ರ ಮತ್ತು ಜೀವಶಾಸ್ತ್ರ ವಿಷಯಗಳಿಗೆ ಸಂಬಂಧಿಸಿದಂತೆ ದಿನಾಂಕ: 16.04.2025 ಮತ್ತು 17.04.2025 ರಂದು ಪರೀಕ್ಷೆಗಳನ್ನು ನಡೆಸಲಾಗಿದ್ದು, ಸದರಿ ಪರೀಕ್ಷೆಗಳ 16 ವರ್ಷನ್‌ಗಳ ಕೀ ಉತ್ತರಗಳನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಅಭ್ಯರ್ಥಿಗಳ ಮಾಹಿತಿಗಾಗಿ ಪ್ರಕಟಿಸಲಾಗಿರುತ್ತದೆ ಎಂದಿದೆ. ಈ ಪ್ರಕಟಿತ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ಅಭ್ಯರ್ಥಿಗಳು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಆನ್‌ಲೈನ್ ಪೋರ್ಟಲ್ https://cetonline.karnataka.gov.in/keaobjections/forms/login.aspx ಲಿಂಕ್ ಮೂಲಕ ಮಾತ್ರವೇ ದಿನಾಂಕ:22.04.2025 ಸಂಜೆ 5:00 ರೊಳಗೆ ಸಲ್ಲಿಸಬಹುದಾಗಿರುತ್ತದೆ ಎಂದು ಹೇಳಿದೆ. ಆಕ್ಷೇಪಣೆಗಳನ್ನು ಸಲ್ಲಿಸುವ ಸಂದರ್ಭದಲ್ಲಿ ಪತ್ರಿಕೆಯ ವಿವರ, ಪರೀಕ್ಷಾ ದಿನಾಂಕ, ವರ್ಷನ್ ಕೋಡ್, ಪ್ರಶ್ನೆ ಸಂಖ್ಯೆ ಹಾಗೂ ಪೂರಕ ದಾಖಲೆಗಳನ್ನು PDF ರೂಪದಲ್ಲಿ ಸಲ್ಲಿಸಬೇಕು. ಪ್ರಶ್ನೆ ಸಂಖ್ಯೆ ಅಥವಾ ವರ್ಷನ್ ಕೋಡ್ ನಮೂದಿಸದೇ ಇರುವ ಅಥವಾ ಆಧಾರರಹಿತವಾಗಿರುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ.…

Read More

ನವದೆಹಲಿ: ಭಾರತವು ತನ್ನ ಬಾಹ್ಯಾಕಾಶ ಪ್ರಯಾಣದಲ್ಲಿ ಮಹತ್ವದ ಮೈಲಿಗಲ್ಲು ಸಾಧಿಸುವ ನಿರೀಕ್ಷೆಯಿದೆ. ಏಕೆಂದರೆ ಗ್ರೂಪ್ ಕ್ಯಾಪ್ಟನ್ ಶುಭಾಂಶು ಶುಕ್ಲಾ ಅಂತರರಾಷ್ಟ್ರೀಯ ಬಾಹ್ಯಾಕಾಶ ನಿಲ್ದಾಣಕ್ಕೆ (ISS) ಭೇಟಿ ನೀಡುವ ಮೊದಲ ಭಾರತೀಯ ಗಗನಯಾತ್ರಿಯಾಗಲಿದ್ದಾರೆ. ಮೇ 29, 2025 ಕ್ಕಿಂತ ಮೊದಲು ಉಡಾವಣೆಗೆ ನಿಗದಿಪಡಿಸಲಾಗಿರುವ ಶುಕ್ಲಾ, ಆಕ್ಸಿಯಮ್ ಸ್ಪೇಸ್‌ನ ಆಕ್ಸ್-4 ಮಿಷನ್‌ನಲ್ಲಿ ಪೈಲಟ್ ಆಗಿ ಸೇವೆ ಸಲ್ಲಿಸಲಿದ್ದಾರೆ. ಇದು ಆಕ್ಸಿಯಮ್ ಸ್ಪೇಸ್, ​​ನಾಸಾ ಮತ್ತು ಸ್ಪೇಸ್‌ಎಕ್ಸ್ ಒಳಗೊಂಡ ಸಹಯೋಗದ ಪ್ರಯತ್ನವಾಗಿದೆ. ಬಾಹ್ಯಾಕಾಶ ಮತ್ತು ತಂತ್ರಜ್ಞಾನ ಸಚಿವ ಡಾ. ಜಿತೇಂದ್ರ ಸಿಂಗ್ ಈ ಸಮಯವನ್ನು ದೃಢಪಡಿಸಿದರು. ಇದು ಭಾರತದ ಬಾಹ್ಯಾಕಾಶ ಮಹತ್ವಾಕಾಂಕ್ಷೆಗಳಲ್ಲಿ ಒಂದು ನಿರ್ಣಾಯಕ ಅಧ್ಯಾಯವಾಗಿದೆ ಎಂದು ಕರೆದರು. “ಇಸ್ರೋ ಹೊಸ ಗಡಿಗಳನ್ನು ರೂಪಿಸುತ್ತಿದ್ದಂತೆ ಭಾರತೀಯ ಗಗನಯಾತ್ರಿಯೊಬ್ಬರು ಐತಿಹಾಸಿಕ ಬಾಹ್ಯಾಕಾಶ ಕಾರ್ಯಾಚರಣೆಗೆ ಸಜ್ಜಾಗಿದ್ದಾರೆ” ಎಂದು ಅವರು ಹೇಳಿದರು. ಭಾರತದ ಬಾಹ್ಯಾಕಾಶ ಗುರಿಗಳಲ್ಲಿ ಗಗನಯಾನ, ಐಎಸ್‌ಎಸ್ ಹಾರಾಟ ಮತ್ತು ಈ ಬೇಸಿಗೆಯಲ್ಲಿ ಉಪಗ್ರಹ ಉಡಾವಣೆಗಳ ಸರಣಿ ಸೇರಿವೆ ಎಂದು ಅವರು ಹೇಳಿದರು. ಭಾರತದ ಗಗನಯಾತ್ರಿಗಳಲ್ಲಿ ಅತ್ಯಂತ ಕಿರಿಯ…

Read More

ಮದ್ರಾಸ್: ಜಾತಿ-ನಿರ್ದಿಷ್ಟ ಹೆಸರುಗಳು ಮತ್ತು ನಿರ್ಬಂಧಿತ ಬೈಲಾಗಳ ಅಡಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಾತಿ ಆಧಾರಿತ ಸಂಘಗಳು / ಸೊಸೈಟಿಗಳು ಮತ್ತು ಶಿಕ್ಷಣ ಸಂಸ್ಥೆಗಳು ಅಸಂವಿಧಾನಿಕ ಮತ್ತು ತಮ್ಮ ಹೆಸರುಗಳು, ಉದ್ದೇಶಗಳು ಮತ್ತು ಸದಸ್ಯತ್ವ ಮಾನದಂಡಗಳನ್ನು ತಿದ್ದುಪಡಿ ಮಾಡದ ಹೊರತು ನೋಂದಾಯಿತ ಘಟಕಗಳಾಗಿ ಮುಂದುವರಿಯಲು ಸಾಧ್ಯವಿಲ್ಲ ಎಂದು ಮದ್ರಾಸ್ ಹೈಕೋರ್ಟ್ ಇತ್ತೀಚೆಗೆ ತೀರ್ಪು ನೀಡಿದೆ. ನ್ಯಾಯಮೂರ್ತಿ ಡಿ.ಭರತ ಚಕ್ರವರ್ತಿ ಅವರು ತೀಕ್ಷ್ಣವಾದ ತೀರ್ಪನ್ನು ನೀಡಿ, ಇಂತಹ ಸಂಘಗಳು ಸಾರ್ವಜನಿಕ ನೀತಿ ಮತ್ತು ಜಾತಿರಹಿತ ಸಮಾಜದ ಸಾಂವಿಧಾನಿಕ ದೃಷ್ಟಿಕೋನವನ್ನು ಉಲ್ಲಂಘಿಸುತ್ತವೆ ಎಂದು ಘೋಷಿಸಿದರು. ಸರ್ಕಾರದ ಆದೇಶಗಳನ್ನು ಪ್ರಶ್ನಿಸಿ ಅಥವಾ ಆಂತರಿಕ ಚುನಾವಣೆಗಳು ಮತ್ತು ನೋಂದಣಿ ನವೀಕರಣಗಳಿಗೆ ಸಂಬಂಧಿಸಿದ ಪರಿಹಾರಗಳನ್ನು ಕೋರಿ ಜಾತಿ ಆಧಾರಿತ ಸಂಘಗಳಾದ ದಕ್ಷಿಣ ಭಾರತೀಯ ಸೆಂಗುಂತ ಮಹಾಜನ ಸಂಗಮ್, ತಿರುಚೆಂಗೋಡ್ ವತ್ತ ಕೊಂಗು ವೇಲಾಲಾರ್ ಸಂಘಂ ಮತ್ತು ಬಡ ಶಿಕ್ಷಣ ನಿಧಿ ಸಲ್ಲಿಸಿದ್ದ ಮೂರು ರಿಟ್ ಅರ್ಜಿಗಳನ್ನು ನ್ಯಾಯಾಲಯ ವಿಚಾರಣೆ ನಡೆಸಿತು. ಆದರೆ ಸಂಕುಚಿತ ವಿವಾದಗಳನ್ನು ನಿರ್ಣಯಿಸುವ ಬದಲು, ನ್ಯಾಯಮೂರ್ತಿ ಚಕ್ರವರ್ತಿ ಒಂದು…

Read More

ಬೆಂಗಳೂರು: ನಗರದ ಕೇಂದ್ರ ಭಾಗದಲ್ಲಿರುವಂತ ಕಬ್ಬನ್ ಪಾರ್ಕ್ ನಲ್ಲಿ ಪ್ರತಿ ಭಾನುವಾರ ಮತ್ತು ಹೈಕೋರ್ಟ್ ಕಾರ್ಯನಿರ್ವಹಿಸದೇ ಇರುವಂತ ದಿನಗಳಲ್ಲಿ ನಿರ್ಧಿಷ್ಟ ಪ್ರದೇಶದಲ್ಲಿ ವಾಹನಗಳ ಪಾರ್ಕಿಂಗ್ ಗೆ ಅವಕಾಶ ಕಲ್ಪಿಸಿದೆ. https://twitter.com/KarnatakaVarthe/status/1913156987434524713 ಈ ಕುರಿತಂತೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಕಬ್ಬನ್ ಪಾರ್ಕ್‌ಗೆ ಭೇಟಿ ನೀಡುವ ಸಾರ್ವಜನಿಕರು ಪ್ರತಿ ಭಾನುವಾರದಂದು ಹಾಗೂ ಹೈಕೋರ್ಟ್‌ ಕಾರ್ಯನಿರ್ವಹಿಸದೇ ಇರುವ ಶನಿವಾರಗಳಂದು ಹಳೆಯ ಕೆಜಿಐಡಿ ಕಟ್ಟಡದ ಪಕ್ಕದಲ್ಲಿರುವ ಪಾರ್ಕಿಂಗ್ ಪ್ರದೇಶದಲ್ಲಿ ತಮ್ಮ ವಾಹನಗಳನ್ನು ನಿಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ ಎಂದಿದೆ. ಕಬ್ಬನ್ ಪಾರ್ಕ್‌ನ ಇತರ ಪಾರ್ಕಿಂಗ್ ಪ್ರದೇಶಗಳಿಗೆ ಅಸ್ತಿತ್ವದಲ್ಲಿರುವ ದರಗಳ ಪುಕಾರ ಪಾವತಿ ಆಧಾರದ ಮೇಲೆ ವಾಹನಗಳನ್ನು ಪಾರ್ಕಿಂಗ್ ಮಾಡಬಹುದಾಗಿದ್ದು, ಈ ಪಾರ್ಕಿಂಗ್ ಪ್ರದೇಶವು ಬೆಳಿಗ್ಗೆ 06:00 ರಿಂದ ಸಂಜೆ 06:30 ರವರೆಗೆ ವಾಹನಗಳನ್ನು ಪಾರ್ಕಿಂಗ್ ಮಾಡಲು ಮುಕ್ತವಾಗಿರುತ್ತದೆ ಎಂದು ಹೇಳಿದೆ. ಕಬ್ಬನ್ ಉದ್ಯಾನವನಕ್ಕೆ ಭೇಟಿ ನೀಡುವವರು ಈ ಸೌಲಭ್ಯವನ್ನು ಪಡೆದುಕೊಳ್ಳಲು ಪ್ರೋತ್ಸಾಹಿಸುತ್ತಾ, ಕಬ್ಬನ್ ಉದ್ಯಾನವನಕ್ಕೆ ಹೋಗುವ ರಸ್ತೆಗಳಲ್ಲಿ ವಾಹನ ನಿಲುಗಡೆ ಮಾಡುವುದನ್ನು ತಪ್ಪಿಸಲು ಕೋರಿದ್ದಾರೆ.…

Read More

ಬೀದರ್: ಬೆಲೆ ಏರಿಕೆಯೇ ಕಾಂಗ್ರೆಸ್ಸಿನ ರಾಜ್ಯ ಸರಕಾರದ ಅಭೂತಪೂರ್ವ ಕೊಡುಗೆ ಎಂದು ವಿಧಾನಪರಿಷತ್ ವಿರೋಧ ಪಕ್ಷದ ಮುಖ್ಯ ಸಚೇತಕ ಎನ್. ರವಿಕುಮಾರ್ ಅವರು ಟೀಕಿಸಿದ್ದಾರೆ. ಇಂದು ಇಲ್ಲಿ ಜನಾಕ್ರೋಶ ಯಾತ್ರೆಯಲ್ಲಿ ಮಾತನಾಡಿದ ಅವರು, ಬೆಳಿಗ್ಗೆ ಎದ್ದು ಕುಡಿಯುವ ಕಾಫಿ, ಚಹಾಕ್ಕೆ ಬಳಸುವ ಹಾಲು ಸೇರಿ, ಆಲ್ಕೋಹಾಲ್ ವರೆಗೆ 50 ದಿನಬಳಕೆ ವಸ್ತುಗಳ ಮೇಲೆ ಬೆಲೆ ಏರಿಸಿದ ರಾಜ್ಯದ್ರೋಹಿ, ಜನದ್ರೋಹಿ ಸರಕಾರ ಸಿದ್ದರಾಮಯ್ಯರದು ಎಂದು ಆಕ್ಷೇಪಿಸಿದರು. ರಾಜ್ಯದಲ್ಲಿ ಬೀದರ್‍ನ ಪರೀಕ್ಷೆ ಬರೆಯುವ ವಿದ್ಯಾರ್ಥಿಗಳು ಜನಿವಾರ, ಶಿವದಾರ ಹಾಕಬಾರದು ಎಂಬ ಜಾತ್ಯತೀತ ಸರಕಾರವಿದು. ಇದು ಸಿದ್ದರಾಮಯ್ಯ ಸರಕಾರದ ಹೊಸ ಸೆಕ್ಯುಲರ್ ನೀತಿಯೇ ಎಂದು ಕೇಳಿದರು. ಸರಕಾರದ ಈ ನೀತಿಯಿಂದಾಗಿ ಪರೀಕ್ಷೆ ತಪ್ಪಿಸಿಕೊಂಡ ವಿದ್ಯಾರ್ಥಿಗೆ ಮತ್ತೆ ಪರೀಕ್ಷೆ ಬರೆಯಲು ಅವಕಾಶ ಕೊಡಿ ಎಂದು ಆಗ್ರಹಿಸಿದರು. ಹಳೆ ಕಲ್ಲು ಹೊಸ ಬಿಲ್ಲು ಈ ಸರಕಾರದ ನೀತಿ ಎಂದು ಟೀಕಿಸಿದರು. ಕರ್ನಾಟಕದಲ್ಲಿ ಬೆಲೆ ಏರಿಕೆಯ ವಾರ್ ನಡೆದಿದೆ. ಜೀವನ ದುಸ್ತರವಾಗಿದೆ ಎಂದು ಆಕ್ಷೇಪಿಸಿದರು. ನಿಮ್ಮದ್ಯಾವ ಸಿಎಂ? ಲೂಟ್ ಸಿಎಂ?…

Read More

ನವದೆಹಲಿ: ಕೆಲವು ಮಾಧ್ಯಮಗಳು ಉಪಗ್ರಹ ಆಧಾರಿತ ಟೋಲಿಂಗ್ ವ್ಯವಸ್ಥೆಯನ್ನು ಮೇ 1, 2025 ರಿಂದ ಪ್ರಾರಂಭಿಸಲಾಗುವುದು ಮತ್ತು ಅಸ್ತಿತ್ವದಲ್ಲಿರುವ ಫಾಸ್ಟ್‌ಟ್ಯಾಗ್ ಆಧಾರಿತ ಟೋಲ್ ಸಂಗ್ರಹ ವ್ಯವಸ್ಥೆಯನ್ನು ಬದಲಾಯಿಸಲಿದೆ ಎಂದು ವರದಿ ಮಾಡಿವೆ. ಆದರೇ ಇದು ಸುಳ್ಳು. ಅಂತಹ ಯಾವುದೇ ನಿರ್ಧಾರವಿಲ್ಲ ಎಂಬುದಾಗಿ ಕೇಂದ್ರ ಸರ್ಕಾರ ಸ್ಪಷ್ಟ ಪಡಿಸಿದೆ. ಈ ಬಗ್ಗೆ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ  ಮಾಹಿತಿ ನೀಡಿದ್ದು, ಮೇ 1, 2025 ರಿಂದ ರಾಷ್ಟ್ರವ್ಯಾಪಿ ಉಪಗ್ರಹ ಆಧಾರಿತ ಟೋಲಿಂಗ್ ಅನುಷ್ಠಾನಕ್ಕೆ ಸಂಬಂಧಿಸಿದಂತೆ ರಸ್ತೆ ಸಾರಿಗೆ ಮತ್ತು ಹೆದ್ದಾರಿ ಸಚಿವಾಲಯ ಅಥವಾ ಭಾರತೀಯ ರಾಷ್ಟ್ರೀಯ ಹೆದ್ದಾರಿ ಪ್ರಾಧಿಕಾರ (NHAI) ಅಂತಹ ಯಾವುದೇ ನಿರ್ಧಾರವನ್ನು ತೆಗೆದುಕೊಂಡಿಲ್ಲ ಎಂದು ಸ್ಪಷ್ಟಪಡಿಸಿದೆ. ಟೋಲ್ ಪ್ಲಾಜಾಗಳ ಮೂಲಕ ತಡೆರಹಿತ, ಅಡೆತಡೆಯಿಲ್ಲದ ವಾಹನಗಳ ಚಲನೆಯನ್ನು ಸಕ್ರಿಯಗೊಳಿಸಲು ಮತ್ತು ಪ್ರಯಾಣದ ಸಮಯವನ್ನು ಕಡಿಮೆ ಮಾಡಲು ಆಯ್ದ ಟೋಲ್ ಪ್ಲಾಜಾಗಳಲ್ಲಿ ‘ಎಎನ್ಪಿಆರ್-ಫಾಸ್ಟ್ಯಾಗ್ ಆಧಾರಿತ ಬ್ಯಾರಿಯರ್-ಲೆಸ್ ಟೋಲ್ ಸಿಸ್ಟಮ್’ ಅನ್ನು ಜಾರಿಗೆ ತರಲಾಗುವುದು ಎಂಬುದಾಗಿ ತಿಳಿಸಿದೆ. ಸುಧಾರಿತ ಟೋಲ್ ವ್ಯವಸ್ಥೆಯು ವಾಹನಗಳ ನಂಬರ್…

Read More

ನಮಗೆ ಸಮಯ ಬಂದಾಗ, ನಮ್ಮ ಜೀವನದಲ್ಲಿ ಯಶಸ್ಸನ್ನು ಸಾಧಿಸಲು ನಾವು ಮಾಡಬಹುದಾದ ಸಣ್ಣ ಕೆಲಸಗಳು ಸಹ ದೊಡ್ಡ ಫಲಿತಾಂಶಗಳನ್ನು ನೀಡಬಹುದು. ಹೀಗೆ ಶುಕ್ರವಾರದಂದು ಈ ವೀಳ್ಯದ ಎಲೆಯ ಪರಿಹಾರವನ್ನು ಮನೆಯಲ್ಲಿ ಯಾರು ಅಭ್ಯಾಸ ಮಾಡುತ್ತಾರೋ, ಅವರ ಮನೆಗೆ ಯಶಸ್ಸು ಬೇಗನೆ ಬರಲು ಪ್ರಾರಂಭಿಸುತ್ತದೆ. ವೈಫಲ್ಯ ಎಂಬ ಪದ ಮನೆಯಲ್ಲಿ ಉಳಿಯುವುದಿಲ್ಲ. ಮನೆಯ ಪ್ರವೇಶದ್ವಾರದಲ್ಲಿ ಇರುವ ಮತ್ತು ಮನೆಗೆ ಒಳ್ಳೆಯ ವಸ್ತುಗಳು ಬರದಂತೆ ತಡೆಯುವ ಯಾವುದೇ ದುಷ್ಟ ಶಕ್ತಿಗಳನ್ನು ನಾಶಮಾಡಲು ಈ ಪರಿಹಾರವು ಒಂದು ಪರಿಹಾರವಾಗಿಯೂ ಕೆಲಸ ಮಾಡುತ್ತದೆ ಎಂಬುದು ಗಮನಾರ್ಹ. ಇಂದು, ಪೂರ್ಣ ನಂಬಿಕೆಯಿಂದ, ಈ ಒಂದು ವಸ್ತುವನ್ನು ಎರಡು ವೀಳ್ಯದ ಎಲೆಗಳ ಮೇಲೆ ಇರಿಸಿ ಮತ್ತು ಅದನ್ನು ನಿಮ್ಮ ಮನೆ ಬಾಗಿಲಿನಲ್ಲಿ ಇರಿಸಿ. ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ…

Read More

ಶಿವಮೊಗ್ಗ: ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿ ತಾಲೂಕು ಕೋಣಂದೂರು ಪ್ರಾಥಮಿಕ ಆರೋಗ್ಯ ಕೇಂದ್ರ ವ್ಯಾಪ್ತಿಯ ದತ್ತರಾಜಾಪುರ ಗ್ರಾಮದ 8 ವರ್ಷದ ಬಾಲಕ ರಚಿತ್ ಕೆ ಎಫ್ ಡಿ ಕಾಯಿಲೆಯಿಂದ ನಿನ್ನೆ ದಿ.17-04-2025 ರಂದು ಕೆಎಂಸಿ ಮಣಿಪಾಲ ಆಸ್ಪತ್ರೆಯಲ್ಲಿ ಮೃತಪಟ್ಟಿರುತ್ತಾರೆ. ಏಪ್ರಿಲ್ 4ನೇ ತಾರೀಕು ರಚಿತ್ ರವರ ಅಕ್ಕ ರಮ್ಯಾ ಇವರಿಗೆ ಜ್ವರ ಇದ್ದ ಪ್ರಯುಕ್ತ ಜೆಸಿ ಆಸ್ಪತ್ರೆ ತೀರ್ಥಹಳ್ಳಿ ಯಲ್ಲಿ ದಾಖಲಾಗಿ ಕೆಎಫ್ ಡಿ ಪರೀಕ್ಷೆ ಮಾಡಿಸಿದಾಗ ಕೆಎಫ್ ಡಿ ಪಾಸಿಟಿವ್ ಬಂದಿರುತ್ತದೆ. ರಚಿತ್ ಗೆ ಏಪ್ರಿಲ್ 5ನೇ ತಾರೀಕು ಸುಸ್ತು ಮತ್ತು ವಾಂತಿ ಇದ್ದ ಪ್ರಯುಕ್ತ ಜೆಸಿ ಆಸ್ಪತ್ರೆಗೆ ದಾಖಲಾಗಿ ಕೆಎಫ್ ಡಿ ಪರೀಕ್ಷೆ ಮಾಡಿಸಿದಾಗ ಪಾಸಿಟಿವ್ ಬಂದಿದ್ದು ರಮ್ಯಾ ಮತ್ತು ರಚಿತ್ ಇಬ್ಬರಿಗೂ 6ನೇ ತಾರೀಕು ಕೆಎಂಸಿ ಮಣಿಪಾಲ ಆಸ್ಪತ್ರೆಗೆ ದಾಖಲು ಮಾಡಿ ಎಬಿಎಆರ್ ಕೆ ಅಡಿ ಉಚಿತ ಚಿಕಿತ್ಸೆ ನೀಡಲಾಗಿದ್ದು ರಮ್ಯಾ ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿ ಮನೆಗೆ ಬಂದಿರುತ್ತಾರೆ. ರಚಿತ್ ಆರೋಗ್ಯ ಚೇತರಿಸದೇ ಇದ್ದುದರಿಂದ ಆಸ್ಪತ್ರೆಯಲ್ಲಿಯೇ ಇರಿಸಿ…

Read More

ಶಿವಮೊಗ್ಗ: ರಸ್ತೆ ಅಗಲೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ಸಾಗರ ನಗರದಲ್ಲಿ ದಿನಾಂಕ 19-04-2025ರ ನಾಳೆ ಕೆಲ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ. ಈ ಕುರಿತಂತೆ ಮೆಸ್ಕಾಂನಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ದಿನಾಂಕ 19-04-2025ರ ಶನಿವಾರದ ನಾಳೆ, ಸಾಗರದ ಕೆಳದಿ ರಸ್ತೆ ಅಗಲೀಕರಣ ಕಾಮಗಾರಿಯನ್ನು ಕೈಗೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ನಾಳೆ ಸಾಗರ ನಗರದ ಈ ಕೆಳಗಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯ ಉಂಟಾಗಲಿದೆ ಎಂದಿದೆ. ನಾಳೆ ಸಾಗರ ನಗರದ ಈ ಪ್ರದೇಶಗಳಲ್ಲಿ ಪವರ್ ಕಟ್ ದಿನಾಂಕ 19-04-2025ರಂದು ಬೆಳಿಗ್ಗೆ 10ರಿಂದ ಸಂಜೆ 5 ಗಂಟೆಯವರೆಗೆ ಸಾಗರ ನಗರದ ಅಣಲೆಕೊಪ್ಪ, ಟೀಚರ್ಸ್ ಲೇಔಟ್, ಶ್ರೀಧರ ನಗರ, ಜೆಪಿ ನಗರ, ಸುಭಾಷ ನಗರ, ಅರಮನೆ ಕೇರಿ, ಸೊರಬ ರಸ್ತೆ, ಗಡದಯ್ಯ ಲೇಔಟ್, ಈಳಿ ರಸ್ತೆ, ಕೆಳದಿ ರಸ್ತೆ ಮತ್ತು ಬಸವೇಶ್ವರ ನಗರ ಸೇರಿದಂತೆ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಪವರ್ ಕಟ್ ಆಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಮನವಿ ಮಾಡಿದೆ. ವರದಿ: ವಸಂತ ಬಿ ಈಶ್ವರಗೆರೆ https://kannadanewsnow.com/kannada/siddaramaiahs-gang-sat-somewhere-and-prepared-caste-census-report-r-ashoka/ https://kannadanewsnow.com/kannada/good-news-cm-great-good-news-for-the-students-of-the-state-vidyasiri-yojana-money-increased-to-rs-2000/

Read More