Author: kannadanewsnow09

ಬೆಂಗಳೂರು: ಮುಸ್ಲಿಮರಿಗೆ ರಂಜಾನ್ ಕಿಟ್ ಘೋಷಣೆ ಮಾಡಿರುವ ಮೋದಿ ಅವ್ರೇ, ಹಿಂದೂಗಳಿಗೆ ಯುಗಾದಿ ಕಿಟ್ ಯಾವಾಗ ಕೊಡ್ತೀರೀ? ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಪ್ರಶ್ನಿಸಿದ್ದಾರೆ. ಸದಾ ಧರ್ಮದ ಆಧಾರದಲ್ಲಿ ರಾಜಕಾರಣ ಮಾಡುವ ಪ್ರಧಾನಿ ನರೇಂದ್ರ ಮೋದಿ ಅವರು ದೇಶದ ಮುಸ್ಲಿಮರಿಗೆ ರಂಜಾನ್ ಕಿಟ್ ಕೊಟ್ಟಿರುವುದಕ್ಕೆ ಸ್ವಾಗತ. ಅದೇ ರೀತಿ ದೇಶದಲ್ಲಿರುವ ಎಲ್ಲ ಹಿಂದೂಗಳು ಯುಗಾದಿ ಕಿಟ್ ನಿರೀಕ್ಷೆಯಲ್ಲಿದ್ದಾರೆ. ನೀವು ಆದಷ್ಟು ಬೇಗ ಯುಗಾದಿ ಕಿಟ್ ಘೋಷಣೆ ಮಾಡಿ ಬಹುಸಂಖ್ಯಾತ ಹಿಂದೂಗಳ ಹಬ್ಬದ ಸಂಭ್ರಮವನ್ನು ಹೆಚ್ಚಿಸಿ ಎಂದು ಸಲಹೆ ನೀಡಿದ್ದಾರೆ. ಧರ್ಮದ ಆಧಾರದಲ್ಲಿ ಚುನಾವಣೆ ಎದುರಿಸುತ್ತಾ ಮುಸ್ಲಿಂ ದ್ವೇಷ ಕಾರುವ ಬಿಜೆಪಿ, ಈಗ ಕಿಟ್ ಕೊಟ್ಟು ಮುಸ್ಲಿಮರ ಓಲೈಕೆಗೆ ಮುಂದಾಗಿದೆ. ಅದೇ ರಾಜ್ಯದಲ್ಲಿ ಬಿಜೆಪಿ ನಾಯಕರು ರಾಜ್ಯ ಬಜೆಟ್ ಅನ್ನು ಹಲಾಲ್ ಬಜೆಟ್ ಎಂದು ಟೀಕೆ ಮಾಡ್ತಾರೆ. ಇಂತಹ ಡಬಲ್ ಸ್ಟಾಂಡರ್ಡ್ ಮನಸ್ಥಿತಿಯನ್ನು ಬಿಜೆಪಿ ನಾಯಕರು ಬಿಟ್ಟರೆ ಒಳ್ಳೆಯದು ಎಂದಿದ್ದಾರೆ. ನಮ್ಮ ಸರಕಾರ ಅಲ್ಪಸಂಖ್ಯಾತರು, ದಲಿತರು, ಹಿಂದುಳಿದ ವರ್ಗದವರು…

Read More

ಶಿವಮೊಗ್ಗ: ನಾನು ರೈತ ವಿರೋಧಿ ಅಂತ ಹೇಳಿದ್ದಾರೆ. ಒಬ್ಬನೇ ಒಬ್ಬ ರೈತ ನನ್ನು ಕಡೆಗೆ ಬೊಟ್ಟು ಮಾಡಿ ತೋರಿಸಲಿ. ನಾನು ಒಂದೇ ಮನೆಯಲ್ಲಿ ಎರಡು ಬೋರು ಇರೋರು ಕನೆಕ್ಷನ್ ಕಟ್ ಮಾಡಿ. ಟ್ರಾನ್ಸ್ ಫಾರ್ಮರ್ ಮೇಲಿನ ಲೋಡ್ ಕಡಿಮೆ ಆಗಲಿದೆ ಅಂತ ಹೇಳಿದ್ದೇನೆ ವಿನಹ ಬೇರೇನು ಅಲ್ಲ. ಏ ಹಾಲಪ್ಪ 9,000 ಮುಳುಗಡೆ ರೈತರಿಗೆ ವಿಷ ಕೊಟ್ಟ ಪಾಪಿ ನೀನು ಮತ್ತು ರಾಘವೇಂದ್ರ ಎಂಬುದಾಗಿ ಸಾಗರ ಶಾಸಕ ಗೋಪಾಲಕೃಷ್ಣ ಬೇಳೂರು ವಾಗ್ಧಾಳಿ ನಡೆಸಿದ್ದಾರೆ. ಇಂದು ಸಾಗರ ನೆಹರು ಮೈದಾನದಲ್ಲಿ ನಡೆದಂತ ಕಾಂಗ್ರೆಸ್  ಕಾರ್ಯಕರ್ತರ ಸಮಾವೇಶದಲ್ಲಿ ಪಾಲ್ಗೊಂಡು ಮಾತನಾಡಿದಂತ ಅವರು, ನಾನು ರೈತ ವಿರೋಧಿ ಅಂತ ಹೇಳ್ತಾರೆ. ನಿನ್ನೆ ಸ್ಟೇಟ್ಮೆಂಟ್ ನೋಡಿದೆ. ಗೋಪಾಲಕೃಷ್ಣ ಬೇಳೂರು ರೈತರ ವಿರೋಧಿ. ನಾನು ರೈತರ ವಿರೋಧಿ ಅಂತ ಯಾರಾದರೂ ಒಬ್ಬರು ಬೆಟ್ಟು ಮಾಡಿ ತೋರಿಸಲಿ. ಬಡವರ ವಿರೋಧಿ ಅಂತ ತೋರಿಸಲಿ. ನಾನು ಹೇಳಿದ್ದು ಏನೆಂದ್ರೇ ಎರಡು ಪಂಪ್ ಸೆಟ್ ಇಟ್ಟುಕೊಂಡಿದ್ದಂತ ವ್ಯಕ್ತಿಗೆ ಒಂದಕ್ಕೆ ಅವಕಾಶ ಕೊಡ್ರಪ್ಪ. ಒಂದೊಂದು ಮನೆಗೆ…

Read More

ಹಾವೇರಿ: ಬ್ಯಾಂಕಾಕ್ ಗೆ ಪ್ರವಾಸಕ್ಕೆ ತೆರಳಿದ್ದಂತ ಹಾವೇರಿಯ ಐವರು ಕನ್ನಡಿಗರು ಸುರಕ್ಷಿತರಾಗಿರುವುದಾಗಿ ವೀಡಿಯೋ ಕರೆ ಮಾಡಿ ಸ್ಪಷ್ಟ ಪಡಿಸಿದ್ದಾರೆ. ಈ ಮೂಲಕ ಬೆಂಗಳೂರಿನಿಂದ ತೆರಳಿದ್ದಂತ 22 ಮಂದಿಯೂ ಸುರಕ್ಷಿತರಾಗಿದ್ದಾರೆ. ಇಂದು ಮ್ಯಾನ್ಮಾರ್ ಹಾಗೂ ಬ್ಯಾಂಕಾಕ್ ನಲ್ಲಿ ಪ್ರಬಲ ಭೂಕಂಪನ ಉಂಟಾಗಿತ್ತು. 7.7ರ ತೀವ್ರತೆಯಲ್ಲಿ ಭೂಕಂಪ ಉಂಟಾಗಿತ್ತು. ಈ ಭೂಕಂಪನದಿಂದಾಗಿ ಹಲವು ಬಹುಮಹಡಿ ಕಟ್ಟಡಗಳು ಕ್ಷಣಾರ್ಧದಲ್ಲಿ ನೆಲಸಮಗೊಂಡಿದ್ದಾವೆ. ಈ ಎಲ್ಲಾ ವೀಡಿಯೋಗಳು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ. ಬ್ಯಾಂಕಾಕ್ ಗೆ ಐದು ದಿನಗಳ ಪ್ರವಾಸಕ್ಕೆಂದು 22 ಮಂದಿ ಬೆಂಗಳೂರಿನಿಂದ ತೆರಳಿದ್ದರು. ಇವತ್ತು ಸಫಾರಿ ವರ್ಡ್ ಗೆ ಹೋಗಿದ್ದಂತ ಸಂದರ್ಭದಲ್ಲಿ ಭೂಕಂಪನದ ಅನುಭವ ಉಂಟಾಗಿತ್ತು. ಬಳಿಕ ಸುವರ್ಣ ಭೂಮಿ ಏರ್ ಪೋರ್ಟ್ ಗೆ ಸುರಕ್ಷಿತವಾಗಿ ಕನ್ನಡಿಗರು ತೆರಳಇದ್ದರು. ಇದೀಗ ಬ್ಯಾಂಕಾಕ್ ನಲ್ಲಿ ಎಲ್ಲರೂ ಸುರಕ್ಷಿತವಾಗಿದ್ದೇವೆ. ವಿಮಾನ ಬಿಡುವ ವೇಳೆಯಲ್ಲಿ ವ್ಯತ್ಯಾಯಸವಾಗಿದೆ ಎಂಬುದಾಗಿ ವಿಮಾನ ನಿಲ್ದಾಣದಿಂದಲೇ ವೀಡಿಯೋ ಮಾಡಿ ಐವರು ಕನ್ನಡಿಗರು ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/reels-case-court-grants-bail-to-vinay-rajat/ https://kannadanewsnow.com/kannada/breaking-setback-for-h-d-kumaraswamy-in-the-supreme-court-petition-filed-to-stay-kethamaranhalli-encroachment-eviction-dismissed/

Read More

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಹಿನ್ನಲೆಯಲ್ಲಿ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ವಿರುದ್ಧ ಕೇಸ್ ದಾಖಲಿಸಿ ಪೊಲೀಸರು ಬಂಧಿಸಿದ್ದರು. ಈ ಪ್ರಕರಣದಲ್ಲಿ ಕೋರ್ಟ್ ಇಬ್ಬರಿಗೂ ಜಾಮೀನು ಮಂಜೂರು ಮಾಡಿದೆ. ಇಂದು ಪೊಲೀಸರ ವಶದಲ್ಲಿದ್ದಂತ ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ಕಸ್ಟಡಿ ಅವಧಿ ಮುಕ್ತಾಯಗೊಂಡಿತ್ತು. ಈ ಹಿನ್ನಲೆಯಲ್ಲಿ ಅವರನ್ನು ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ ಗೆ ಹಾಜರುಪಡಿಸಲಾಗಿದೆ. ಈ ಪ್ರಕರಣದ ವಿಚಾರಣೆ ನಡೆಸಿದಂತ ಬೆಂಗಳೂರಿನ 24ನೇ ಎಸಿಜೆಎಂ ಕೋರ್ಟ್ ನ್ಯಾಯಾಧೀಶರು ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಹಾಗೂ ವಿನಯ್ ಗೆ ಷರತ್ತು ಬದ್ಧ ಜಾಮೀನು ಮಂಜೂರು ಮಾಡಿದೆ. ವಿನಯ್ ಹಾಗೂ ರಜತ್ ಗೆ ತಲಾ 10 ಸಾವಿರ ರೂಪಾಯಿ ಶೂರಿಟಿಯ ಷರತ್ತು ಬದ್ಧ ಜಾಮೀನನ್ನು ಕೋರ್ಟ್ ನೀಡಿದೆ. ಈ ಮೂಲಕ ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್, ವಿನಯ್ ಗೆ ಮಚ್ಚು ಹಿಡಿದು ರೀಲ್ಸ್ ಮಾಡಿದಂತ ಪ್ರಕರಮದಲ್ಲಿ ಬಿಗ್ ರಿಲೀಫ್ ನೀಡಿದಂತೆ…

Read More

ಬೆಂಗಳೂರು: ನಗರದ ಜನತೆಗೆ ಗುಡ್ ಎನ್ನುವಂತೆ ಬೆಂಗಳೂರಿನ ಹೊಸ ಮಾರ್ಗವೊಂದರಲ್ಲಿ ಬಿಎಂಟಿಸಿ ಬಸ್ ಸಂಚಾರವನ್ನು ಆರಂಭಿಸುತ್ತಿರುವುದಾಗಿ ಸಂಸ್ಥೆ ತಿಳಿಸಿದೆ. ಈ ಬಗ್ಗೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬಿಎಂಟಿಸಿಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ಬೆಂ.ಮ.ಸಾ.ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರ ಅನುಕೂಲಕ್ಕಾಗಿ ಹವಾನಿಯಂತ್ರಣ ರಹಿತ ಸೇವೆಯಲ್ಲಿ ನೂತನ ನೂತನ ಮಾರ್ಗವನ್ನು  ದಿನಾಂಕ 02.04.2025 ರಿಂದ ರಿಂದ ಪರಿಚಯಿಸಿದ್ದು, ವಿವರ ಕೆಳಕಂಡಂತಿದೆ: ಕ್ರ.ಸಂ ಮಾರ್ಗ ಸಂಖ್ಯೆ ಎಲ್ಲಿಂದ ಎಲ್ಲಿಗೆ ಮಾರ್ಗ ಬಸ್ಸುಗಳ ಸಂಖ್ಯೆ 01 220-ಬಿ/1 ಕೆ.ಆರ್ ಮಾರುಕಟ್ಟೆ ಉಪಾಧ್ಯಾಯ ಬಡಾವಣೆ ಸಿರ್ಸಿ ಸರ್ಕಲ್, ನಾಯಂಡಹಳ್ಳಿ, ಬೆಂಗಳೂರು ವಿಶ್ವವಿದ್ಯಾಲಯ ಗೇಟ್, ಚಂದ್ರಮೌಳೇಶ್ವರ ದೇವಸ್ಥಾನ, ಭೈರವನಗರ 01 02 220-ಸಿ/1 ಕೆಂಪೇಗೌಡ ಬಸ್ ನಿಲ್ದಾಣ ಜ್ಞಾನ ಭಾರತಿ ಲೇಔಟ್ 01ನೇ ಬ್ಲಾಕ್ ಸಿರ್ಸಿ ಸರ್ಕಲ್, ನಾಯಂಡಹಳ್ಳಿ, ಬೆಂಗಳೂರು ವಿಶ್ವವಿದ್ಯಾಲಯ ಗೇಟ್, ಚಂದ್ರಮೌಳೇಶ್ವರ ದೇವಸ್ಥಾನ, ಭೈರವನಗರ 01                …

Read More

ಬೆಂಗಳೂರು: ಮಚ್ಚು ಹಿಡಿದು ರೀಲ್ಸ್ ಮಾಡಿ ವಿವಾದಕ್ಕೆ ಸಿಲುಕಿ ನ್ಯಾಯಾಂಗ ಬಂಧನದಲ್ಲಿರುವಂತ ಮಾಜಿ ಬಿಗ್ ಬಾಸ್ ಸ್ಪರ್ಧಿ ರಜತ್ ಹಾಗೂ ವಿನಯ್ ಅವರ ಪೊಲೀಸ್ ಕಸ್ಟಡಿ ಇಂದು ಕೊನೆಗೊಂಡಿತ್ತು. ಅವರನ್ನು ಪೊಲೀಸರು ಕೋರ್ಟ್ ಗೆ ಹಾಜರುಪಡಿಸಿದ್ದರು. ಇಂತಹ ಇಬ್ಬರು ಮಾಜಿ ಬಿಗ್ ಬಾಸ್ ಸ್ಪರ್ಧಿಗಳಿಗೆ ಮತ್ತೆ ನ್ಯಾಯಾಂಗ ಬಂಧನ ನೀಡಿ ಕೋರ್ಟ್ ಆದೇಶಿಸಿದೆ. ಮಚ್ಚು ಹಿಡಿದು ಮಾಜಿ ಬಿಗ್ ಬಾಸ್ ಸ್ಪರ್ಧಿಗಳಾದಂತ ವಿನಯ್ ಹಾಗೂ ರಜತ್ ರೀಲ್ಸ್ ಮಾಡಿದ್ದರು. ಈ ಸಂಬಂಧ ಇಬ್ಬರ ವಿರುದ್ಧ ಕೇಸ್ ದಾಖಲಿಸಿದ್ದಂತ ಪೊಲೀಸರು ಬಂಧಿಸಿದ್ದರು. ಆ ಬಳಿಕ ಕೋರ್ಟ್ ಗೆ ಹಾಜರುಪಡಿಸಿ ಹೆಚ್ಚಿನ ವಿಚಾರಣೆಗಾಗಿ ತಮ್ಮ ವಶಕ್ಕೆ ಪಡೆದಿದ್ದರು. ಇಂದು ರಜತ್ ಹಾಗೂ ವಿನಯ್ ಪೊಲೀಸರ ವಶದಲ್ಲಿದ್ದಂತ ಅವಧಿ ಮುಕ್ತಾಯಗೊಂಡಿತ್ತು. ಬೆಂಗಳೂರಿನ 24ನೇ ಎಸಿಜೆಎಂ ನ್ಯಾಯಾಲಯಕ್ಕೆ ಪೊಲೀಸರು ಇಬ್ಬರನ್ನು ಹಾಜರುಪಡಿಸಿದ್ದರು. ಈ ಸಂಬಂಧ ವಿಚಾರಣೆ ನಡೆಸಿದಂತ ಕೋರ್ಟ್, ಏಪ್ರಿಲ್ 9ರವರೆಗೆ ವಿನಯ್ ಹಾಗೂ ರಜತ್ ಗೆ ನ್ಯಾಯಾಂಗ ಬಂಧನಕ್ಕೆ ನೀಡಿ ಆದೇಶಿಸಿದೆ. ಈ ಮೂಲಕ ಮಾಜಿ…

Read More

ನವದೆಹಲಿ: ಬಂಡೀಪುರ ರಾತ್ರಿ ಸಂಚಾರ ನಿರ್ಬಂಧ ವಿಷಯ ಅತ್ಯಂತ ಸೂಕ್ಷ್ಮವಾಗಿದ್ದು, ಮುಖ್ಯಮಂತ್ರಿಯವರೊಂದಿಗೆ ಸಮಾಲೋಚಿಸಿ, ಕಾನೂನು ತಜ್ಞರ ಅಭಿಪ್ರಾಯ ಪಡೆದು ಸರ್ವಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ದೆಹಲಿಯಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಸ್ತುತ ಈ ಪ್ರಕರಣ ಸರ್ವೋನ್ನತ ನ್ಯಾಯಾಲಯದಲ್ಲಿದ್ದು, ಪ್ರಸ್ತುತ ರಾತ್ರಿ 9ರಿಂದ ಬೆಳಗ್ಗೆ 6ಗಂಟೆಯವರೆಗೆ ನಿರ್ಬಂಧ ಜಾರಿಯಲ್ಲಿದೆ. ಹೊಸ ಪ್ರಕರಣಕ್ಕೆ ಸಂಬಂಧಿಸಿದಂತೆ ಎರಡೂ ರಾಜ್ಯಗಳ ಬಾಂಧವ್ಯವನ್ನು ಗಮನದಲ್ಲಿಟ್ಟುಕೊಂಡು, ಎಲ್ಲರೊಂದಿಗೆ ಚರ್ಚಿಸಿ ಸೂಕ್ತವಾದ ತೀರ್ಮಾನ ಮಾಡಲು ಕ್ರಮ ವಹಿಸಲಾಗುವುದು ಎಂದರು. ಹಾಲಿನ ದರ ಏರಿಕೆ ಸಮರ್ಥನೆ: ಬೇರೆ ರಾಜ್ಯಗಳಲ್ಲಿನ ಹಾಲಿನ ದರಕ್ಕೆ ಹೋಲಿಸಿದರೆ ಕರ್ನಾಟಕದಲ್ಲಿ ದರ ಕಡಿಮೆ ಇದೆ. ಜೊತೆಗೆ ಮೇವುನ ದರ ಮತ್ತು ಹೈನುಗಾರಿಕೆ ನಿರ್ವಹಣಾ ವೆಚ್ಚ ಅಧಿಕವಾಗಿದ್ದು ಇದಕ್ಕೆ ಹೋಲಿಸಿದರೆ ಹಾಲಿನ ದರ ಏರಿಕೆ ಮಾಡಿರುವುದು ಕಡಿಮೆಯೇ ಇದೆ. ಹೈನುಗಾರಿಕೆ ಮಾಡುವ ರೈತರಿಗೆ ನೆರವಾಗಲು ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸ್ಪಷ್ಟನೆ ನೀಡಿದರು. ಖರ್ಗೆ, ವೇಣುಗೋಪಾಲ್ ಭೇಟಿ:…

Read More

ಕೆಎನ್ಎನ್ ಡಿಜಿಟಲ್ ಡೆಸ್ಕ್: ಥೈಲ್ಯಾಂಡ್‌ನ ಬ್ಯಾಂಕಾಕ್‌ನಲ್ಲಿ ಪ್ರಬಲ ಭೂಕಂಪ ಸಂಭವಿಸಿದ ನಂತರ, ಪ್ರಧಾನಿ ಪೇಟೊಂಗ್‌ಟಾರ್ನ್ ಶಿನವಾತ್ರ ರಾಜಧಾನಿಯಲ್ಲಿ ತುರ್ತು ಪರಿಸ್ಥಿತಿ ಘೋಷಿಸಿದ್ದಾರೆ. X ನಲ್ಲಿ ಪೋಸ್ಟ್‌ನಲ್ಲಿ, ಥಾಯ್ ಸಾರ್ವಜನಿಕ ಸಂಪರ್ಕ ಇಲಾಖೆ, “ಮ್ಯಾನ್ಮಾರ್‌ನಲ್ಲಿ ಭೂಕಂಪವು ಕಟ್ಟಡ ಕುಸಿತಕ್ಕೆ ಕಾರಣವಾದ ನಂತರ ಥಾಯ್ ಪ್ರಧಾನಿ ಬ್ಯಾಂಕಾಕ್ ಅನ್ನು ತುರ್ತು ವಲಯವೆಂದು ಘೋಷಿಸಿದ್ದಾರೆ. ಅಧಿಕಾರಿಗಳು ರಾಷ್ಟ್ರವ್ಯಾಪಿ ಎಚ್ಚರಿಕೆಗಳನ್ನು ನೀಡುತ್ತಿದ್ದಾರೆ. SMS ಮತ್ತು ಮಾಧ್ಯಮಗಳ ಮೂಲಕ ಸಾರ್ವಜನಿಕರಿಗೆ ಸಲಹೆ ನೀಡುತ್ತಿದ್ದಾರೆ. ಭದ್ರತಾ ಪಡೆಗಳನ್ನು ಸಜ್ಜುಗೊಳಿಸಲಾಗಿದೆ. ವಿಮಾನ ನಿಲ್ದಾಣಗಳು, ಆಸ್ಪತ್ರೆಗಳು ಮತ್ತು ಸಾರಿಗೆ ವ್ಯವಸ್ಥೆ ಸಿದ್ಧವಾಗಿದೆ. ನಾಗರಿಕರು ಎತ್ತರದ ಕಟ್ಟಡಗಳನ್ನು ತಪ್ಪಿಸಲು ಒತ್ತಾಯಿಸಲಾಗಿದೆ. ಇದಕ್ಕೂ ಮೊದಲು, ಶುಕ್ರವಾರ, ಮ್ಯಾನ್ಮಾರ್‌ನಲ್ಲಿ 7.7 ತೀವ್ರತೆಯ ಭೂಕಂಪ ಸಂಭವಿಸಿದೆ. ಸಾಗೈಂಗ್ ನಗರದ ವಾಯುವ್ಯಕ್ಕೆ 16 ಕಿ.ಮೀ ದೂರದಲ್ಲಿ 10 ಕಿ.ಮೀ ಆಳದಲ್ಲಿ ಕಂಪನ ಸಂಭವಿಸಿದೆ. ಭೂಕಂಪದ ನಂತರ, ಮ್ಯಾನ್ಮಾರ್ ಆರು ಪ್ರದೇಶಗಳು ಮತ್ತು ರಾಜ್ಯಗಳಲ್ಲಿ ತುರ್ತು ಪರಿಸ್ಥಿತಿಯನ್ನು ಘೋಷಿಸಿದೆ. ಭೂಕಂಪ ಮತ್ತು ಮಧ್ಯಾಹ್ನ ಸಂಭವಿಸಿದ ಬಲವಾದ ನಂತರದ ಆಘಾತದ ನಂತರ ಮಿಲಿಟರಿ-ಚಾಲಿತ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಪ್ರಕೃತಿ ವಿಕೋಪಗಳಿಂದ ಉಂಟಾಗುವ ಹಾನಿಗಳಿಗೆ ಪರಿಹಾರ ಪಾವತಿಸಲು ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಜಿಲ್ಲಾಧಿಕಾರಿಗಳಿಗೆ ಹಾಗೂ ನಿರ್ದೇಶಕರು, ಕೆ ಎಸ್ ಎನ್ ಡಿ  ಸಿ ಅವರಿಗೆ ಅನುದಾನ ಬಿಡುಗಡೆ ಮಾಡಿ ಆದೇಶಿಸಿದೆ. ಈ ಮೂಲಕ ನೆರೆಹಾನಿಯಿಂದ ಬೆಳೆಹಾನಿಗೊಂಡ ರೈತರಿಗೆ ಗುಡ್ ನ್ಯೂಸ್ ನೀಡಲಾಗಿದೆ. ಈ ಸಂಬಂಧ ಕಂದಾಯ ಇಲಾಖೆ ಸರ್ಕಾರದ ಉಪ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದಾರೆ. ಅದರಲ್ಲಿ 2024-25ನೇ ಸಾಲಿನಲ್ಲಿ ನೈಸರ್ಗಿಕ ವಿಕೋಪಗಳಿಂದ ಸ್ಥಳೀಯವಾಗಿ ಉಂಟಾಗುವ ಬೆಳೆ ಹಾನಿಗೆ ಕೇಂದ್ರ ಸರ್ಕಾರದ ಗೃಹ ಮಂತ್ರಾಲಯವು ದಿನಾಂಕ: 11.07.2023 ರಂದು ಹೊರಡಿಸಿರುವ Revised Items of Expenditure and Norms of assistance from the State Disaster Response Fund (SDRF) ರ ಮಾರ್ಗಸೂಚಿಗಳನ್ವಯ ನಿಯಮಾನುಸಾರ ರಾಜ್ಯ ವಿಪತ್ತು ಪರಿಹಾರ ನಿಧಿಯಿಂದ ಪಾವತಿಸಬಹುದಾದ ಪರಿಹಾರ ಮೊತ್ತವನ್ನು ಸಂಬಂಧಪಟ್ಟ ಜಿಲ್ಲೆಯ ಜಿಲ್ಲಾಧಿಕಾರಿಗಳ ಹಂತದಲ್ಲಿಯೇ ಪರಿಹಾರ ತಂತ್ರಾಂಶದ ಮುಖಾಂತರ ಮಾತ್ರವೇ ನಿಯಮಾನುಸಾರ ಅರ್ಹ ರೈತ ಫಲಾನುಭವಿಗಳಿಗೆ ಅರ್ಹತೆಗನುಗುಣವಾಗಿ ಪಾವತಿಸಲು, ಕಾರ್ಯವಿಧಾನ…

Read More

ನವದೆಹಲಿ: ಕೇಂದ್ರ ಸರ್ಕಾರಿ ನೌಕರರಿಗೆ ತುಟ್ಟಿ ಭತ್ಯೆ (DA) ಯಲ್ಲಿ 2% ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ. ಇದು ತಕ್ಷಣದಿಂದ ಜಾರಿಗೆ ಬರುತ್ತದೆ. ಈ ಪರಿಷ್ಕರಣೆಯೊಂದಿಗೆ, ತುಟ್ಟಿ ಭತ್ಯೆ ಮೂಲ ವೇತನದ 53% ರಿಂದ 55% ಕ್ಕೆ ಏರಿಕೆಯಾಗಲಿದೆ. ಹೆಚ್ಚುತ್ತಿರುವ ಹಣದುಬ್ಬರದ ನಿರಂತರ ಒತ್ತಡವನ್ನು ಎದುರಿಸುತ್ತಿರುವ ಉದ್ಯೋಗಿಗಳಿಗೆ ಈ ನಿರ್ಧಾರವು ಬಹಳ ಅಗತ್ಯವಾದ ವೇತನ ಹೆಚ್ಚಳವನ್ನು ನೀಡುತ್ತದೆ. ಎಕನಾಮಿಕ್ ಟೈಮ್ಸ್‌ನ ಮೂಲಗಳ ಪ್ರಕಾರ, ತುಟ್ಟಿ ಭತ್ಯೆಯಲ್ಲಿ ಕೊನೆಯ ಹೆಚ್ಚಳವನ್ನು ಜುಲೈ 2024 ರಲ್ಲಿ ಮಾಡಲಾಯಿತು. ಆಗ ಅದನ್ನು 50% ರಿಂದ 52% ಕ್ಕೆ ಹೆಚ್ಚಿಸಲಾಯಿತು. ತುಟ್ಟಿ ಭತ್ಯೆ ಹೆಚ್ಚಳ: ತುಟ್ಟಿ ಭತ್ಯೆ ಹೆಚ್ಚಳದಿಂದ ಯಾರು ಪ್ರಯೋಜನ ಪಡೆಯುತ್ತಾರೆ? ಇತ್ತೀಚಿನ ತುಟ್ಟಿ ಭತ್ಯೆ ಹೆಚ್ಚಳವು ಕೇಂದ್ರ ಸರ್ಕಾರದೊಳಗಿನ ನೌಕರರಿಗೆ ಪ್ರಯೋಜನವನ್ನು ನೀಡುತ್ತದೆ. ಕೇಂದ್ರ ಸರ್ಕಾರಿ ನೌಕರರು ಈ ಹೆಚ್ಚಳದ ಪ್ರಾಥಮಿಕ ಫಲಾನುಭವಿಗಳು ಸಕ್ರಿಯ ಕೇಂದ್ರ ಸರ್ಕಾರಿ ನೌಕರರಾಗಿದ್ದು, ಅವರು ತಮ್ಮ ಮಾಸಿಕ ವೇತನದಲ್ಲಿ ತಕ್ಷಣದ ಏರಿಕೆಯನ್ನು ನೋಡುತ್ತಾರೆ. ಪಿಂಚಣಿದಾರರು: ಸರ್ಕಾರದಿಂದ ಪಿಂಚಣಿ…

Read More