Author: kannadanewsnow09

ಉಕ್ರೇನ್: ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್ ಶನಿವಾರ ಉಕ್ರೇನ್ನಲ್ಲಿ ಏಕಪಕ್ಷೀಯ ಈಸ್ಟರ್ ಕದನ ವಿರಾಮಕ್ಕೆ ಆದೇಶಿಸಿದ್ದಾರೆ. ಭಾನುವಾರ ಅಂತ್ಯದವರೆಗೆ ಶನಿವಾರ ರಾತ್ರಿ 8.30 ಕ್ಕೆ (ಭಾರತೀಯ ಕಾಲಮಾನ) ಹಗೆತನವನ್ನು ಕೊನೆಗೊಳಿಸುವಂತೆ ರಷ್ಯಾದ ಪಡೆಗಳಿಗೆ ಆದೇಶಿಸಿದ್ದಾರೆ. ಉಕ್ರೇನ್ ರಷ್ಯಾದ ಉದಾಹರಣೆಯನ್ನು ಅನುಸರಿಸುತ್ತದೆ ಎಂದು ಆಶಿಸುತ್ತೇನೆ ಎಂದು ರಷ್ಯಾದ ಅಧ್ಯಕ್ಷರು ಹೇಳಿದರು. ಆದಾಗ್ಯೂ, ಕೈವ್ ಕದನ ವಿರಾಮದ ಯಾವುದೇ ಉಲ್ಲಂಘನೆಯನ್ನು ಹಿಮ್ಮೆಟ್ಟಿಸಲು ರಷ್ಯಾದ ಪಡೆಗಳನ್ನು ಸನ್ನದ್ಧ ಸ್ಥಿತಿಯಲ್ಲಿಡುವಂತೆ ಅವರು ರಷ್ಯಾದ ಜನರಲ್ ಸ್ಟಾಫ್ ಮುಖ್ಯಸ್ಥ ವಾಲೆರಿ ಗೆರಾಸಿಮೊವ್ ಅವರಿಗೆ ಸೂಚನೆ ನೀಡಿದರು. ಮಾನವೀಯ ಪರಿಗಣನೆಗಳ ಆಧಾರದ ಮೇಲೆ, ರಷ್ಯಾದ ಕಡೆಯವರು ಈಸ್ಟರ್ ಕದನ ವಿರಾಮವನ್ನು ಘೋಷಿಸುತ್ತಾರೆ. ಈ ಅವಧಿಗೆ ಎಲ್ಲಾ ಮಿಲಿಟರಿ ಚಟುವಟಿಕೆಗಳನ್ನು ನಿಲ್ಲಿಸಲು ನಾನು ಆದೇಶಿಸುತ್ತೇನೆ” ಎಂದು ಪುಟಿನ್ ಕ್ರೆಮ್ಲಿನ್ನಲ್ಲಿ ನಡೆದ ಸಭೆಯಲ್ಲಿ ಗೆರಾಸಿಮೊವ್ಗೆ ತಿಳಿಸಿದ್ದಾರೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್ ಉಲ್ಲೇಖಿಸಿದೆ. https://kannadanewsnow.com/kannada/pm-modi-to-visit-saudi-arabia-on-april-22-23/ https://kannadanewsnow.com/kannada/check-website-avoid-unknown-links-mha-advisory-on-scams-targeting-pilgrims-tourists/

Read More

ನವದೆಹಲಿ: ಸೌದಿ ಅರೇಬಿಯಾದ ಯುವರಾಜ ಮತ್ತು ಪ್ರಧಾನಿ ಮೊಹಮ್ಮದ್ ಬಿನ್ ಸಲ್ಮಾನ್ ಅವರ ಆಹ್ವಾನದ ಮೇರೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಏಪ್ರಿಲ್ 22 ರಿಂದ 23 ರವರೆಗೆ ಸೌದಿ ಅರೇಬಿಯಾಕ್ಕೆ ಭೇಟಿ ನೀಡಲಿದ್ದಾರೆ ಎಂದು ಸರ್ಕಾರ ಪ್ರಕಟಿಸಿದೆ. ಈ ಭೇಟಿಯನ್ನು ಜೆಡ್ಡಾ ನಗರದಲ್ಲಿ ಆಯೋಜಿಸಲಾಗುವುದು, ಅಲ್ಲಿ ಪಿಎಂ ಮೋದಿಯವರ ಕಾರ್ಯಕ್ರಮಗಳಲ್ಲಿ ಯುವರಾಜರಿಂದ ಔಪಚಾರಿಕ ಸ್ವಾಗತವೂ ಸೇರಿದೆ. ಹೆಚ್ಚುವರಿಯಾಗಿ, ಉಭಯ ನಾಯಕರು ಈಗಾಗಲೇ ಬಲವಾದ ದ್ವಿಪಕ್ಷೀಯ ಸಂಬಂಧವನ್ನು ನಿರ್ಮಿಸುವ ಗುರಿಯನ್ನು ಹೊಂದಿರುವ ಕಾರ್ಯತಂತ್ರದ ಪಾಲುದಾರಿಕೆ ಮಂಡಳಿಯ ಎರಡನೇ ಸಭೆಯ ಸಹ ಅಧ್ಯಕ್ಷತೆ ವಹಿಸಲಿದ್ದಾರೆ. ಈ ಭೇಟಿಯು ದ್ವಿಪಕ್ಷೀಯ ಸಂಬಂಧಗಳನ್ನು ಬಲಪಡಿಸುವ ಮತ್ತು ಪರಸ್ಪರ ಹಿತಾಸಕ್ತಿಯ ಪ್ರಮುಖ ಕ್ಷೇತ್ರಗಳಲ್ಲಿ ಸಹಕಾರವನ್ನು ಹೆಚ್ಚಿಸುವ ಗುರಿಯನ್ನು ಹೊಂದಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ. ಭಾರತಕ್ಕೆ ಕಾರ್ಯತಂತ್ರದ ಪಾಲುದಾರನಾಗಿ ಸೌದಿ ಅರೇಬಿಯಾದ ಪಾತ್ರದಿಂದಾಗಿ ಈ ಭೇಟಿ ಮಹತ್ವದ್ದಾಗಿದೆ. ಈ ದೇಶವು ಜಾಗತಿಕವಾಗಿ ಅತಿದೊಡ್ಡ ಭಾರತೀಯ ವಲಸಿಗ ಸಮುದಾಯಗಳಲ್ಲಿ ಒಂದಕ್ಕೆ ನೆಲೆಯಾಗಿದೆ. ಹೆಚ್ಚುವರಿಯಾಗಿ, ಸೌದಿ ಅರೇಬಿಯಾ ಇಸ್ಲಾಮಿಕ್ ಜಗತ್ತಿನಲ್ಲಿ…

Read More

ಬೆಂಗಳೂರು: ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧದ ಮೊದಲ ಪ್ರಕರಣದಲ್ಲಿ ಈಗಾಗಲೇ ಜಾಮೀನು ಅರ್ಜಿಯನ್ನು ಕೋರ್ಟ್ ವಜಾಗೊಳಿಸಿತ್ತು. ಇಂದು ಮತ್ತೊಂದು ಪ್ರಕರಣದಲ್ಲಿ ಜಾಮೀನು ಅರ್ಜಿ ವಜಾಗೊಳಿಸಿ ಬಿಗ್ ಶಾಕ್ ನೀಡಿದೆ. ಮಾಜಿ ಸಂಸದ ಪ್ರಜ್ವಲ್ ರೇವಣ್ಣ ವಿರುದ್ಧ ದಾಖಲಾಗಿದ್ದಂತ ಕ್ರೈಂ ನಂಬರ್ 20/2024 ಪ್ರಕರಣದಲ್ಲಿ ಜಾಮೀನು ಕೋರಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯನ್ನು ನ್ಯಾಯಮೂರ್ತಿ ಸಂತೋಷ್ ಗಜಾನನ ಭಟ್ ಅವರು ವಿಚಾರಣೆ ನಡೆಸಿದರು. ಇಂದು ಪ್ರಜ್ವಲ್ ರೇವಣ್ಣ ಸಲ್ಲಿಸಿದ್ದಂತ 2ನೇ ಪ್ರಕರಣದಲ್ಲಿ ಜಾಮೀನು ಅರ್ಜಿಯನ್ನು ವಜಾಗೊಳಿಸಿ ಆದೇಶಿಸಿದ್ದಾರೆ. ಮತ್ತೊಂದೆಡೆ ಮಾಜಿ ಸಂಸದ ಪ್ರಜ್ವಲ್ ರೇವಣ್ಮ ವಿರುದ್ಧದ ಅತ್ಯಾಚಾರ ಪ್ರಕರಣದಲ್ಲಿ ಸಂಗ್ರಹಿಸಿದ ಡಿಜಿಟಲ್ ಸಾಕ್ಷ್ಯ ವಿಚಾರಣೆಗೆ ಕೋರ್ಟ್ ಅವಕಾಶ ನೀಡಿದೆ. ಐಟಿ ತಜ್ಞ ಶುಭನ್ ಸರ್ಕಾರ್ ಗೆ ಅವಕಾಶವನ್ನು ನೀಡಿ ಕೋರ್ಟ್ ಆದೇಶಿಸಿದೆ. ಪ್ರಜ್ವಲ್ ರೇವಣ್ಣ ಪರ ವಕೀಲರು ವೀಡಿಯೋ ವೀಕ್ಷಣೆಗೆ ಅವಕಾಶವನ್ನು ಕೋರಿದ್ದರು. https://kannadanewsnow.com/kannada/state-sarvottam-seva-awards-2023-30-government-officials-employees-honoured/ https://kannadanewsnow.com/kannada/check-website-avoid-unknown-links-mha-advisory-on-scams-targeting-pilgrims-tourists/

Read More

ವಸಂತ ಬಿ ಈಶ್ವರಗೆರೆ ಬೆಂಗಳೂರು: 2023ನೇ ಸಾಲಿನ ರಾಜ್ಯ ಸರ್ಕಾರದ ಸರ್ವೋತ್ತಮ ಸೇವಾ ಪ್ರಶಸ್ತಿಯನ್ನು ಪ್ರಕಟಿಸಲಾಗಿದೆ. 30 ಸರ್ಕಾರಿ ಅಧಿಕಾರಿ, ನೌಕರರಿಗೆ ಪ್ರಶಸ್ತಿಯನ್ನು ನೀಡಿ ಸರ್ಕಾರ ಗೌರವಿಸುತ್ತಿದೆ. ಈ ಕುರಿತಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖಎಯ ಸರ್ಕಾರದ ಅಧೀನ ಕಾರ್ಯದರ್ಶಿ ನಡವಳಿಯನ್ನು ಹೊರಡಿಸಿದ್ದು, ರಾಜ್ಯದಲ್ಲಿ ಅತ್ಯುನ್ನತ ಸೇವೆಗೈದ, ಸಾಧನೆಗೈದ ರಾಜ್ಯ ಸರ್ಕಾರಿ ನೌಕರರಿಗೆ ಸರ್ವೋತ್ತಮ ಸೇವಾ ಪ್ರಶಸ್ತಿ ನೀಡುವ ಯೋಜನೆ ಜಾರಿಗೆ ತರಲಾಗಿದೆ ಎಂದಿದ್ದಾರೆ. ರಾಜ್ಯಮಟ್ಟದ ಸರ್ವೋತ್ತಮ ಸೇವಾ ಪ್ರಶಸ್ತಿಗಳ ಸಂಖ್ಯೆಯನ್ನು 30ಕ್ಕೆ ಏರಿಸಲಾಗಿದೆ. ಅಲ್ಲದೇ ದಿನಾಂಕ 19-04-2022ರ ಆದೇಶದಲ್ಲಿ ಜಿಲ್ಲಾ ಪ್ರಶಸ್ತಿ ಮೊತ್ತವನ್ನು ರೂ.10,000ದಿಂದ 25,000ಕ್ಕೆ ಹಾಗೂ ರಾಜ್ಯ ಪ್ರಶಸ್ತಿಯ ಮೊತ್ತವನ್ನು ರೂ.25,000ದಿಂದ ರೂ.50,000ಕ್ಕೆ ಏರಿಸಲಾಗಿದೆ ಎಂದು ತಿಳಿಸಿದ್ದಾರೆ. ರಾಜ್ಯ ಸರ್ಕಾರದ ಅಧಿಕಾರಿ, ನೌಕರರಿಗೆ ರಾಜ್ಯ ಮಟ್ಟದ ಮತ್ತು ಜಿಲ್ಲಾ ಮಟ್ಟದ ಸರ್ಪೋತ್ತಮ ಸೇವಾ ಪ್ರಶಸ್ತಿಗೆ ಆನ್ ಲೈನ್ ಮುಖಾಂತರ ಸ್ವತಹ ನಾಮನಿರ್ದೇಶನ ಸಲ್ಲಿಸಲು ಅವಕಾಶ ನೀಡಲಾಗಿತ್ತು. ಅಪರ ಮುಖ್ಯ ಕಾರ್ಯದರ್ಶಿಗಳ ಆಯ್ಕೆ ಸಮಿತಿ ಸಭೆಯು ರಾಜ್ಯ ಮಟ್ಟದ…

Read More

ಬೆಂಗಳೂರು: ಜಾತಿಗಣತಿ ವರದಿಯ ಅಂಕಿ ಅಂಶಗಳ ಬಗ್ಗೆ ಚರ್ಚಿಸಲು ರಾಜ್ಯ ಸರ್ಕಾರ ಕೂಡಲೇ ಸರ್ವಪಕ್ಷ ಸಭೆ ಸಭೆ ಕರೆಯಬೇಕು ಎಂದು ಯುವ ಜನತಾದಳ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಒತ್ತಾಯ ಮಾಡಿದರು. ಅಲ್ಲದೆ, ಎಲ್ಲಾ ಸಮುದಾಯಗಳ ಸ್ವಾಮೀಜಿಗಳು, ಮುಖಂಡರು, ಬುದ್ದಿಜೀವಿಗಳನ್ನು ಆಹ್ವಾನಿಸಿ ಸಮಾಲೋಚನೆ ನಡೆಸಬೇಕು ಹಾಗೂ ಇದಕ್ಕೆ ಸರ್ವಸಮ್ಮತ ಪರಿಹಾರ ಕಂಡುಕೊಳ್ಳಬೇಕು ಎಂದು ಅವರು ಸರ್ಕಾರವನ್ನು ಆಗ್ರಹಪಡಿಸಿದರು. ಜೆಡಿಎಸ್ ರಾಜ್ಯ ಕಚೇರಿ ಜೆಪಿ ಭವನದಲ್ಲಿ ಕರೆಯಲಾಗಿದ್ದ ಮಾಧ್ಯಮಗೋಷ್ಠಿಯಲ್ಲಿ ಮಾತನಾಡಿದ ಅವರು; ಗಣತಿಗೆ ಜೆಡಿಎಸ್ ಯಾವುದೇ ಕಾರಣಕ್ಕೂ ವಿರೋಧ ಮಾಡುತ್ತಿಲ್ಲ. ಆದರೆ, ಸಮೀಕ್ಷೆ ಕ್ರಮಬದ್ಧವಾಗಿ ಇಲ್ಲ. ಸೋರಿಕೆ ಆಗಿರುವ ಅಂಕಿ ಅಂಶಗಳ ಸತ್ಯಾಸತ್ಯತೆ ಬಗ್ಗೆ ಪ್ರಶ್ನೆ ಮಾಡಿದ್ದೇವೆ ಹಾಗೂ ಆ ಅಂಕಿ ಅಂಶಗಳು ಸತ್ಯಕ್ಕೆ ದೂರವಾಗಿವೆ ಎಂದಷ್ಟೇ ಹೇಳಿದ್ದೇವೆ ಎಂದು ಹೇಳಿದರು. ಸಮೀಕ್ಷೆ ವಿಧಾನವೇ ಸರಿ ಇಲ್ಲ. ಯಾರ ಮನೆಗೆ ಹೋಗಿದ್ದಾರೆ, ಯಾವ ಮಾನದಂಡ ಇಟ್ಟುಕೊಂಡು ಸಮೀಕ್ಷೆ ಮಾಡಿದ್ದಾರೆ ಎಂಬ ಸರಿಯಾದ ಮಾಹಿತಿ ಇಲ್ಲ. ಹೀಗಾಗಿ ಇಡೀ ವರದಿಯನ್ನು ಪುನಾ ಪರಿಶೀಲನೆ ಮಾಡಬೇಕು.…

Read More

ಬೀದರ್: ಶಿವಮೊಗ್ಗ ಹಾಗೂ ಬೀದರ್ ನಲ್ಲಿ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ಘಟನೆ ವರದಿಯಾಗಿತ್ತು. ಈಗಾಗಲೇ ಶಿವಮೊಗ್ಗದಲ್ಲಿ ನಡೆದಿದ್ದಂತ ಘಟನೆ ಸಂಬಂಧ ಇಬ್ಬರು ಗೃಹ ರಕ್ಷಕ ದಳದ ಸಿಬ್ಬಂದಿಯನ್ನು ಅಮಾನುತುಗೊಳಿಸಲಾಗಿದೆ. ಈ ಬೆನ್ನಲ್ಲೇ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಲಾಗಿದೆ. ಈ ಸಂಬಂಧ ಸ್ವಯಂ ಪ್ರೇರಿತವಾಗಿ ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದಿಂದ ದೂರು ದಾಖಲಿಸಿಕೊಳ್ಳಲಾಗಿದೆ. ಅಲ್ಲದೇ ಸಿಇಟಿ ಪರೀಕ್ಷೆ ಬರೆಯಲು ಬಂದಿದ್ದಂತ ಅಭ್ಯರ್ಥಿಗೆ ಜನಿವಾರ ತೆಗೆಸಿದಂತ ಘಟನೆ ಸಂಬಂಧ ಸ್ವಯಂ ಪ್ರೇರಿತವಾಗಿ ತನಿಖೆಯನ್ನು ನಡೆಸಲಿದೆ. ಮತ್ತೊಂದೆಡೆ ಸಿಇಟಿ ಬರೆಯಲು ಬಂದಿದ್ದ ಅಭ್ಯರ್ಥಿಗೆ ಜನಿವಾರ ತೆಗೆಸಿದ ಆರೋಪ ಸಂಬಂಧ ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ ಬೀದರ್ ಜಿಲ್ಲಾಧಿಕಾರಿಗಳು ವರದಿಯನ್ನು ಸಲ್ಲಿಸಿದ್ದಾರೆ. ಘಟನೆ ಸಂಬಂಧ ಸಂಪೂರ್ಣ ವರದಿಯನ್ನು ಬೀದರ್ ಜಿಲ್ಲಾಧಿಕಾರಿಗಳು KEAಗೆ ಸಲ್ಲಿಸಿದ್ದಾರೆ. https://kannadanewsnow.com/kannada/kl-rahul-becomes-fastest-indian-to-hit-200-sixes-in-ipl-history/ https://kannadanewsnow.com/kannada/check-website-avoid-unknown-links-mha-advisory-on-scams-targeting-pilgrims-tourists/

Read More

ಕೆಎನ್ಎನ್ ಸ್ಪೋರ್ಟ್ಸ್ ಡೆಸ್ಕ್: ಡೆಲ್ಲಿ ಕ್ಯಾಪಿಟಲ್ಸ್ ತಂಡದ ವಿಕೆಟ್ ಕೀಪರ್ ಕೆಎಲ್ ರಾಹುಲ್ ಇಂಡಿಯನ್ ಪ್ರೀಮಿಯರ್ ಲೀಗ್‌ನಲ್ಲಿ 200 ಸಿಕ್ಸರ್‌ಗಳನ್ನು ಬಾರಿಸಿದ ಅತ್ಯಂತ ವೇಗದ ಭಾರತೀಯ ಮತ್ತು ಮೂರನೇ ಅತಿ ವೇಗದ ಆಟಗಾರ ಎಂಬ ಹೆಗ್ಗಳಿಕೆಗೆ ಪಾತ್ರರಾಗಿದ್ದಾರೆ. ಶನಿವಾರ ಅಹಮದಾಬಾದ್‌ನ ನರೇಂದ್ರ ಮೋದಿ ಕ್ರೀಡಾಂಗಣದಲ್ಲಿ ನಡೆದ ಐಪಿಎಲ್ 2025 ರ ಪಂದ್ಯದಲ್ಲಿ ಗುಜರಾತ್ ಟೈಟಾನ್ಸ್ ವಿರುದ್ಧದ ಪಂದ್ಯದಲ್ಲಿ ಅವರು ತಮ್ಮ ಮೊದಲ ಸಿಕ್ಸರ್‌ನೊಂದಿಗೆ, 129 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು. 128 ಇನ್ನಿಂಗ್ಸ್‌ಗಳಲ್ಲಿ 200 ಸಿಕ್ಸರ್‌ಗಳೊಂದಿಗೆ, ರಾಹುಲ್ ಕ್ರಿಸ್ ಗೇಲ್ ಮತ್ತು ಆಂಡ್ರೆ ರಸೆಲ್ ನಂತರ ವೇಗವಾಗಿ 200 ಸಿಕ್ಸರ್‌ಗಳ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿದ್ದಾರೆ. ವೆಸ್ಟ್ ಇಂಡೀಸ್‌ನ ಪವರ್‌ಹೌಸ್ ಗೇಲ್ ಕೇವಲ 69 ಇನ್ನಿಂಗ್ಸ್‌ಗಳಲ್ಲಿ 200 ಐಪಿಎಲ್ ಸಿಕ್ಸರ್‌ಗಳನ್ನು ತಲುಪಿದರೆ, ರಸೆಲ್ 97 ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದರು, ಇಬ್ಬರೂ 100 ಕ್ಕಿಂತ ಕಡಿಮೆ ಇನ್ನಿಂಗ್ಸ್‌ಗಳಲ್ಲಿ ಈ ಮೈಲಿಗಲ್ಲನ್ನು ತಲುಪಿದ ಏಕೈಕ ಇಬ್ಬರು ಆಟಗಾರರು. ಡೆಲ್ಲಿ ಡೇರ್‌ಡೆವಿಲ್ಸ್ (ಈಗ ಡೆಲ್ಲಿ ಕ್ಯಾಪಿಟಲ್ಸ್)…

Read More

ಬೆಂಗಳೂರು: ಬೀದರ್ ಮತ್ತು ಶಿವಮೊಗ್ಗದಲ್ಲಿ ಸಾಮಾನ್ಯ ಪ್ರವೇಶ ಪರೀಕ್ಷೆ (CET) ಕೇಂದ್ರದಲ್ಲಿ ಸಿಬ್ಬಂದಿ ವಿದ್ಯಾರ್ಥಿಗಳ ಜನಿವಾರ ತೆಗೆಸಿದ ಘಟನೆ ತಪ್ಪು ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದರು. ಬೆಂಗಳೂರಿನಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಅವರು; ಪ್ರತಿ ಜಾತಿ ಧರ್ಮದ ನಂಬಿಕೆ ಗೌರವಿಸುವುದನ್ನು ಕಲಿಯಬೇಕು. ಜನಿವಾರ ಹಾಕಿದ್ದಕ್ಕೆ ಪರೀಕ್ಷೆಗೆ ಕೂರಿಸದೇ ಇರುವುದು ಸರಿಯಲ್ಲ. ಈ ಘಟನೆಯನ್ನು ನಾನು ಖಂಡಿಸುತ್ತೇನೆ. ಮುಂದೆ ಇಂತಹ ಘಟನೆಗಳು ಮರುಕಳಿಸದಂತೆ ಸರ್ಕಾರ ಎಚ್ಚರಿಕೆ ವಹಿಸಬೇಕು ಎಂದು ಎಂದರು. ಜನಿವಾರ ಹಾಕಿಕೊಂಡು ಕಾಪಿ ಹೊಡೆಯೋಕೆ ಆಗುತ್ತಾ? ಜನಿವಾರದಲ್ಲಿ ಕಾಪಿ ಚೀಟಿ ಇಟ್ಟುಕೊಂಡು ಹೋಗೋಕೆ ಆಗುತ್ತಾ? ಜನಿವಾರ ಇದ್ದರೆ ಏನು ಸಮಸ್ಯೆ? ಸ್ಮಾರ್ಟ್ ವಾಚ್ ಕಟ್ಟಿಕೊಂಡು ಬಂದರೆ ನೀವು ತೆಗೆಸಬೇಕು ಎನ್ನುವುದು ಸರಿ. ಆದರೆ ಜನಿವಾರ ತೆಗೆದು ಒಂದು ಸಮುದಾಯಕ್ಕೆ ಅವಮಾನ ಮಾಡೋದು ಸರಿಯಲ್ಲ. ಈ ಘಟನೆ ಬಗ್ಗೆ ತಪ್ಪಿತಸ್ಥರ ವಿರುದ್ಧ ಕ್ರಮ ತೆಗೆದುಕೊಳ್ಳಬೇಕು. ಅವರಿಗೆ ಬುದ್ದಿವಾದ ಹೇಳಬೇಕು. ಮುಂದೆ ಇಂತಹ ಘಟನೆ ಆಗದಂತೆ ಕ್ರಮ ವಹಿಸಬೇಕು ಎಂದು ನಿಖಿಲ್ ಕುಮಾರಸ್ವಾಮಿ…

Read More

ತುಮಕೂರು : ಹಿಂದೆ ಸಂಸ್ಕೃತ ಕಲಿಯುವವರಿಗೆ, ಶಿಕ್ಷಣ ಕಲಿಯುವ ಇತರರಿಗೆ ಕಾದ ಸೀಸದ ಶಿಕ್ಷೆ ಇತ್ತು. ಆದರೆ ನಮಗೀಗ ಶಿಕ್ಷಣ ಸಿಕ್ಕಿದೆ. ಅನುಭವಗಳನ್ನು ದಾಖಲಿಸಿ. ಪ್ರತಿಭೆ ಯಾರೊಬ್ಬರ ಸ್ವತ್ತು ಅಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಕರೆ ನೀಡಿದರು. ಪ್ರಜಾ ಪ್ರಗತಿ ಪತ್ರಿಕೆ, ಕುರುಬ ಸಾಂಸ್ಕೃತಿಕ‌ ಪರಿಷತ್ ಹಾಗೂ ಶ್ರೀದೇವಿ ಸಮೂಹ ಶಿಕ್ಷಣ ಸಂಸ್ಥೆಗಳ ಸಂಯುಕ್ತಾಶ್ರಯದಲ್ಲಿ ನಡೆದ ಕುರುಬ ಸಮಾಜದ ಸಾಂಸ್ಕೃತಿಕ‌ ಸಂವಾದ ಕಾರ್ಯಕ್ರಮವನ್ನು ಉದ್ಘಾಟಿಸಿ, ಕುರುಬ ಸಮುದಾಯದ ಸಂಸ್ಕೃತಿ ದರ್ಶನ ಮಾಲೆಯ 31 ಪುಸ್ತಕಗಳನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದರು. ನಮ್ಮ ಜ್ಞಾನ ತಿಳಿವಳಿಕೆಯಲ್ಲಿ ಸ್ಪಷ್ಟತೆ ಇರಬೇಕು. ಕರ್ಮ ಸಿದ್ಧಾಂತವನ್ನು ದಿಕ್ಕರಿಸುವ ವೈಜ್ಞಾನಿಕವಾಗಿ, ವೈಚಾರಿಕವಾಗಿ ಇರಬೇಕು. ಆಗ ಮಾತ್ರ ಗುಲಾಮಗಿರಿಯಿಂದ ಹೊರಗೆ ಬರಬಹುದು. ಸತ್ಯ ಹೇಳುವ ಚಾತಿ ಬೆಳೆಸಿಕೊಳ್ಳಬಹುದು ಎಂದರು. ಕಾಳಿದಾಸನ ನಾಲಗೆ ಮೇಲೆ ಬ್ರಹ್ಮ‌ ಅಕ್ಷರ ಬರೆದದ್ದಕ್ಕೆ ಮಹಾ ಸಾಹಿತಿಯಾದ ಎನ್ನುವ ಮಾತನ್ನೆಲ್ಲಾ ನಂಬಬೇಡಿ. ವಾಲ್ಮೀಕಿ ದರೋಡೆಕೋರ ಆಗಿದ್ದ ಅನ್ನುವುದನ್ನೆಲ್ಲಾ ನಂಬಬೇಡಿ. ಶೂದ್ರರು ವಿದ್ಯಾವಂತರಾಗಿ ಏನಾದರೂ ಮಹತ್ವವಾದದ್ದನ್ನು ಬರೆದರೆ ಅವರ ಬಗ್ಗೆ ಇಂಥಾ…

Read More

ಬೆಂಗಳೂರು: ಬಿಜೆಪಿ ಪಕ್ಷಕ್ಕೆ ಮಾಜಿ ಶಾಸಕ ಎಟಿ ರಾಮಸ್ವಾಮಿ ಅವರು ರಾಜೀನಾಮೆ ನೀಡಿದ್ದಾರೆ. ಈ ಮೂಲಕ ಬಿಜೆಪಿ ಪಕ್ಷದಿಂದ ಹೊರನಡೆದು, ಗುಡ್ ಬೈ ಹೇಳಿದ್ದಾರೆ. ತಮ್ಮ ರಾಜೀನಾಮೆ ಪತ್ರವನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರಗೆ ಸಲ್ಲಿಸಿರುವುದಾಗಿ ತಿಳಿಸಿದ್ದಾರೆ. ತಾನು ಬಿಜೆಪಿ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ರಾಜಕೀಯದಿಂದ ದೂರ ತೆರಳಿ ಪರಿಸರ ಚಟುವಟಿಕೆಯಲ್ಲಿ ಭಾಗಿಯಾಗುವುದಾಗಿ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಅಂದಹಾಗೇ ಕಳೆದ ವಿಧಾನಸಭಾ ಚುನಾವಣೆ ವೇಳೆಯಲ್ಲಿ ಜೆಡಿಎಸ್ ಪಕ್ಷವನ್ನು ತೊರೆದು ಬಿಜೆಪಿಯನ್ನು ರಾಮಸ್ವಾಮಿ ಸೇರ್ಪಡೆಯಾಗಿದ್ದರು. ಬಿಜೆಪಿ-ಜೆಡಿಎಸ್ ಮೈತ್ರಿಯ ನಂತ್ರ ಬಿಜೆಪಿಯ ಎಲ್ಲಾ ಚಟುವಟಿಕೆಯಿಂದ ದೂರವೇ ಉಳಿದಿದ್ದರು. ಇದೀಗ ಮಾಜಿ ಶಾಸಕ ಎ.ಟಿ ರಾಮಸ್ವಾಮಿ ಅವರು ತಾನು ಪರಿಸರ ಚಟುವಟಿಕೆಯಲ್ಲಿ ತೊಡಗಿಕೊಳ್ಳುವ ನಿಟ್ಟಿನಲ್ಲಿ ಸಕ್ರೀಯವಾಗುತ್ತಿದ್ದೇನೆ. ಹೀಗಾಗಿ ಬಿಜೆಪಿ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿಸಿದ್ದೇನೆ ಅಂತ ತಿಳಿಸಿದ್ದಾರೆ. https://kannadanewsnow.com/kannada/new-utensils-for-16500-government-schools-in-the-state-smart-class-free-electricity-facility/ https://kannadanewsnow.com/kannada/shocking-man-chops-off-wifes-lovers-genitals-brings-him-to-police-station/

Read More