Author: kannadanewsnow09

ಚಿಕ್ಕಬಳ್ಳಾಪುರ: ಜಿಲ್ಲೆಯ ವಿಶ್ವವಿಖ್ಯಾತ ನಂದಿ ಗಿರಿಧಾಮವನ್ನು ನವೀಕರಣ ಕಾಮಗಾರಿಯ ಹಿನ್ನಲೆಯಲ್ಲಿ ನಾಳೆಯಿಂದ ಒಂದು ತಿಂಗಳುಗಳ ಕಾಲ ಬಂದ್ ಮಾಡಲಾಗುತ್ತಿದೆ. ಈ ಸಂಬಂಧ ಆದೇಶ ಹೊರಡಿಸಿರುವಂತ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿಎನ್ ರವೀಂದ್ರ ಅವರು, ನಂದಿ ಗಿರಿಧಾಮದಲ್ಲಿ ರಸ್ತೆ ಡಾಂಬಾರೀಕರಣ ಕಾಮಗಾರಿ ಸೇರಿದಂತೆ ಇತರೆ ನವೀಕರಣ ಕಾಮಗಾರಿಯನ್ನು ಕೈಗೆತ್ತಿಕೊಳ್ಳಲಾಗುತ್ತಿದೆ. ಈ ಹಿನ್ನಲೆಯಲ್ಲಿ ಮಾರ್ಚ್.24ರ ನಾಳೆಯಿಂದ ಏಪ್ರಿಲ್ 25ರವರೆಗೆ ಒಂದು ತಿಂಗಳವರೆಗೆ ಬಂದ್ ಮಾಡಲಾಗುತ್ತಿದೆ ಎಂದಿದ್ದಾರೆ. ಪ್ರವಾಸಿಗರ ಹಿತದೃಷ್ಠಿಯಿಂದ ವೀಕೆಂಡ್ ಶುಕ್ರವಾರ ಸಂಜೆ 6.30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆಯಿಂದ ಮಾತ್ರವೇ ಪ್ರವಾಸಿಗರ ಪ್ರವೇಶಕ್ಕೆ ಅವಕಾಶ ನೀಡಲಾಗುತ್ತದೆ. ಇನ್ನುಳಿದಂತೆ ಸೋಮವಾರ, ಮಂಗಳವಾರ, ಬುಧವಾರ, ಗುರುವಾರ, ಶುಕ್ರವಾರದಂದು ವಾಹನಗಳ ಸಂಚಾರವನ್ನು ಬಂದ್ ಮಾಡಲಾಗುತ್ತಿದೆ ಎಂದು ತಿಳಿಸಿದ್ದಾರೆ. ವಾರಾಂತ್ಯದ ದಿನವಾದಂತ ಶುಕ್ರವಾರ ಸಂಜೆ 6:30ರಿಂದ ಸೋಮವಾರ ಬೆಳಿಗ್ಗೆ 8 ಗಂಟೆ ವರೆಗೆ ಮಾತ್ರ ವಾಹನಗಳ ಸಂಚಾರಕ್ಕೆ ಅವಕಾಶ ನೀಡಲಾಗಿದೆ. ಉಳಿದಂತೆ ವಾರದ 5 ದಿನಗಳು ಸಂಚಾರಕ್ಕೆ ಸಂಪೂರ್ಣ ನಿರ್ಬಂಧಿಸಲಾಗಿದೆ. ಮಾರ್ಚ್ 24ರ ನಾಳೆಯಿಂದ ಏಪ್ರಿಲ್ 25ರ ವರೆಗೂ 1…

Read More

ಬೆಂಗಳೂರು: ದಿನಾಂಕ 02.04.2025, 10.04.2025, 18.04.2025, 24.04.2025, 03.05.2025,13.05.2025 ಹಾಗೂ 17.05.2025 ಗಳಂದು  ಎಂ.ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯಲಿರುವ  TATA Indian Premier League 2025-IPL T20 ಕ್ರಿಕೆಟ್‌  ಪಂದ್ಯಾವಳಿಗಳ ವೀಕ್ಷಣೆಗೆ ಬಂದು  ಹೋಗುವ ಸಾರ್ವಜನಿಕ ಪ್ರಯಾಣಿಕರಿಗೆ ಬಿಎಂಟಿಸಿ ಸಾರಿಗೆ  ಸೌಲಭ್ಯ ಒದಗಿಸುತ್ತಿದೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಸಾರ್ವಜನಿಕ ಪ್ರಯಾಣಿಕರಿಗೆ ದಕ್ಷ, ವಿಶ್ವಾಸನೀಯ, ಆರಾಮದಾಯಕ ಹಾಗೂ ಮಿತವ್ಯಯಕರ ದರದಲ್ಲಿ ಉತ್ತಮ ಸಾರಿಗೆ ಸೌಲಭ್ಯವನ್ನು ಒದಗಿಸುತ್ತಿದೆ ಎಂದಿದೆ. ದಿನಾಂಕ 02.04.2025, 10.04.2025, 18.04.2025, 24.04.2025, 03.05.2025, 13.05.2025 ಹಾಗೂ 17.05.2025  ಗಳಂದು  ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ  TATA Indian Premier League 2025-IPL T20 ಕ್ರಿಕೆಟ್‌ ಪಂದ್ಯಾವಳಿಗಳು ನಡೆಯಲಿದ್ದು, ಸದರಿ ಕ್ರಿಕೆಟ್‌ ಪಂದ್ಯಾವಳಿಗೆ ಬಂದು-ಹೋಗುವ ವೀಕ್ಷಕರಿಗೆ ಬೇಡಿಕೆಗನುಗುಣವಾಗಿ ಬೆಂ.ಮ.ಸಾ.ಸಂಸ್ಥೆಯಿಂದ ಸಾರಿಗೆಗಳನ್ನು ಕಾರ್ಯಾಚರಿಸಲು ಕ್ರಮ ಕೈಗೊಳ್ಳಲಾಗಿದೆ. ಎಂ. ಚಿನ್ನಸ್ವಾಮಿ ಕ್ರೀಡಾಂಗಣದಿಂದ ವಿವಿಧ ಪ್ರದೇಶಗಳಿಗೆ ನಡುವೆ ಕಾರ್ಯಾಚರಿಸಲಾಗುವ ಸಾರಿಗೆಗಳ ವಿವರ ಕೆಳಕಂಡಂತಿದೆ: ಕ್ರ ಸಂ. ಮಾರ್ಗ ಸಂಖ್ಯೆ…

Read More

ಹಾಸನ: ಜಿಲ್ಲೆ ಸಕಲೇಶಪುರ, ಬೇಲೂರು ಸುತ್ತಮುತ್ತ ಜನರಿಗೆ ತೀವ್ರ ಉಪಟಳ ನೀಡುತ್ತಿದ್ದ ಆನೆಗಳನ್ನು ಹಿಡಿಯಲು ಮಾ.16ರಿಂದ ಕಾರ್ಯಾಚರಣೆ ಆರಂಭಿಸಿರುವ ಅರಣ್ಯ ಇಲಾಖೆ ಇಂದು ಹೆಬ್ಬನಹಳ್ಳಿ ಗ್ರಾಮದ ಬಳಿ 3ನೆ ಆನೆಯನ್ನು ಯಶಸ್ವಿಯಾಗಿ ಸೆರೆ ಹಿಡಿದಿದೆ. ಇದರೊಂದಿಗೆ ಕಳೆದ ಒಂದು ವಾರದಲ್ಲಿ ಒಟ್ಟು 3 ಆನೆ ಸೆರೆ ಹಿಡಿದಂತಾಗಿದ್ದು, ಈ ಭಾಗದ ಜನರು ನಿಟ್ಟುಸಿರು ಬಿಟ್ಟಿದ್ದಾರೆ. ಪ್ರಾಣದ ಹಂಗು ತೊರೆದು ಪುಂಡಾನೆಗಳ ಸೆರೆ ಕಾರ್ಯಾಚರಣೆ ನಡೆಸುತ್ತಿರುವ ಅರಣ್ಯ ಇಲಾಖೆಯ ಅಧಿಕಾರಿಗಳು, ಮಾವುತರು, ಪಶುವೈದ್ಯರು, ಮುಂಚೂಣಿ ಕಾರ್ಯಕರ್ತರಿಗೆ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಖಂಡ್ರೆ ಅಭಿನಂದನೆ ಸಲ್ಲಿಸಿದ್ದಾರೆ. ಮಾನವ-ಆನೆ ಸಂಘರ್ಷ ನಿಯಂತ್ರಿಸಲು ಸರ್ಕಾರ ಎಲ್ಲ ಅಗತ್ಯ ಕ್ರಮ ಕೈಗೊಳ್ಳಲಿದೆ ಎಂದು ತಿಳಿಸಿದ್ದಾರೆ. https://kannadanewsnow.com/kannada/6th-guarantee-to-be-implemented-in-the-state-soon-who-knows/ https://kannadanewsnow.com/kannada/alert-google-pay-phone-pay-will-not-work-for-these-phone-numbers-from-april-1st-check-if-your-number-is-available/

Read More

ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಆರನೇ ಗ್ಯಾರಂಟಿ ನೀಡುವುದರ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುವರು. 2017ರಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾಗ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲಾಗಿತ್ತು. ಈಗ ಮತ್ತೆ ಅವರೇ ಗೌರವ ಧನವನ್ನು ಏರಿಸಿದ್ದಾರೆ. ಜೊತೆಗೆ 2023ರಿಂದ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿಯನ್ನು ನೀಡಿಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.‌ ಗೃಹಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದರು. ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು. ಸ್ತ್ರೀಶಕ್ತಿ ಗುಂಪುಗಳನ್ನು ಉತ್ತೇಜಿಸಲು ವಿಭಾಗೀಯ ಮಟ್ಟದ ವಸ್ತು ಪ್ರದರ್ಶನ ಮತ್ತು ಮಾರಾಟ ಮಳಿಗೆ…

Read More

ಬೆಂಗಳೂರು: ರಾಜ್ಯ ರಾಜಕಾರಣದಲ್ಲಿ ಅಲ್ಲೋಲ ಕಲ್ಲೋಲ ಸೃಷ್ಠಿಸಿರುವಂತ ಸಚಿವರ ವಿರುದ್ಧದ ಹನಿಟ್ರ್ಯಾಪ್ ಆರೋಪ ಯತ್ನದ ಬಗ್ಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಏನು ಹೇಳಿದ್ರು ಅಂತ ಮುಂದೆ ಓದಿ. ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರನ್ನು ಭೇಟಿಯಾದಂತ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು, ಒಂದು ಗಂಟೆಗೂ ಹೆಚ್ಚು ಕಾಲ ರಾಜ್ಯ ರಾಜಕೀಯ, ರಾಜ್ಯದ ವಿದ್ಯಮಾನಗಳ ಕುರಿತಂತೆ ಚರ್ಚೆ ನಡೆಸಿದರು. ಈ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಹನಿಟ್ರ್ಯಾಪ್ ಬಗ್ಗೆ ನಾನು ಹೇಳಲು ಆಗುತ್ತಾ? ಇಲ್ಲಿಯವರನ್ನೇ ಕೇಳಿ ಎಂಬುದಾಗಿ ತಿಳಿಸಿದರು. ಸಿಎಂ ಸಿದ್ಧರಾಮಯ್ಯ ಅವರನ್ನು ಸೌಹಾರ್ಧ ಯುತವಾಗಿ ಭೇಟಿಯಾಗಿದ್ದೇನೆ. ಯೋಗಕ್ಷೇಮ ಕೇಳೋದು ನಮ್ಮ ಕರ್ತವ್ಯವಾಗಿದೆ. ಆ ಕಾರಣದಿಂದಲೇ ಇಂದು ಸಿದ್ಧರಾಮಯ್ಯ ಭೇಟಿಯಾಗಿರೋದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ತಿಳಿಸಿದರು. https://kannadanewsnow.com/kannada/good-news-from-south-western-railway-for-those-going-home-for-ugadi-ramzan/ https://kannadanewsnow.com/kannada/alert-google-pay-phone-pay-will-not-work-for-these-phone-numbers-from-april-1st-check-if-your-number-is-available/

Read More

ಬೆಂಗಳೂರು: ಮುಂಬರುವ ಯುಗಾದಿ ಮತ್ತು ರಂಜಾನ್ ಹಬ್ಬಗಳ ಸಂದರ್ಭದಲ್ಲಿ ಪ್ರಯಾಣಿಕರ ಹೆಚ್ಚುವರಿ ದಟ್ಟಣೆಯನ್ನು ಸರಿದೂಗಿಸಲು ಮೈಸೂರು ಮತ್ತು ವಿಜಯಪುರ ನಡುವೆ ಒಂದು ಟ್ರಿಪ್ ವಿಶೇಷ ಎಕ್ಸ್ ಪ್ರೆಸ್ ರೈಲು ಕಾರ್ಯಾಚರಣೆಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ವಿಶೇಷ ರೈಲು ಸೇವೆಯ ವಿವರಗಳು ಈ ಕೆಳಗಿನಂತಿವೆ: ಈ ಬಗ್ಗೆ ಮೈಸೂರು ವಿಭಾಗದ ವಿಭಾಗೀಯ ವಾಣಿಜ್ಯ ವ್ಯವಸ್ಥಾಪಕರು ಮತ್ತು ಸಾರ್ವಜನಿಕ ಸಂಪರ್ಕ ಅಧಿಕಾರಿ ಗಿರೀಶ ಧರ್ಮರಾಜ ಕಲಗೊಂಡ ಅವರು ಮಾಹಿತಿ ನೀಡಿದ್ದು, ರೈಲು ಸಂಖ್ಯೆ 06567 ಮೈಸೂರು-ವಿಜಯಪುರ ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.28ರಂದು ಸಂಜೆ 7.10ಕ್ಕೆ ಮೈಸೂರಿನಿಂದ ಹೊರಟು, ಮರುದಿನ ಮಧ್ಯಾಹ್ನ 2.05ಕ್ಕೆ ವಿಜಯಪುರ ತಲುಪಲಿದೆ ಎಂದಿದ್ದಾರೆ. ರೈಲು ಸಂಖ್ಯೆ 06568 ವಿಜಯಪುರ – ಮೈಸೂರು ವಿಶೇಷ ಎಕ್ಸ್ ಪ್ರೆಸ್ ರೈಲು ಮಾ.31ರಂದು ಸಂಜೆ 7.00 ಗಂಟೆಗೆ ವಿಜಯಪುರದಿಂದ ಹೊರಟು, ಮರುದಿನ ಮಧ್ಯಾಹ್ನ 2.20ಗಂಟೆಗೆ ಮೈಸೂರು ನಿಲ್ದಾಣಕ್ಕೆ ಆಗಮಿಸಲಿದೆ ಎಂದು ಹೇಳಿದ್ದಾರೆ. ಈ ರೈಲು ಎರಡೂ ಮಾರ್ಗಗಳಲ್ಲಿ ಮಂಡ್ಯ, ಕೆಂಗೇರಿ, ಕೆಎಸ್ಆರ್ ಬೆಂಗಳೂರು, ಯಶವಂತಪುರ, ತುಮಕೂರು, ಅರಸೀಕೆರೆ,…

Read More

ಬೆಂಗಳೂರು: ಸಹಕಾರ ಸಚಿವ ರಾಜಣ್ಣ ವಿರುದ್ಧ ಸುಮೋಟೋ ಕೇಸ್ ಹಾಕಿ ಅವರ ಬಳಿಯಲ್ಲಿ 48 ಜನರ ಹೆಸರು ಬಾಯಿ ಬಿಡಿಸಬೇಕು. ಅದಕ್ಕಾಗಿ ಅವರನ್ನು ಮಂಪರು ಪರೀಕ್ಷೆಗೆ ಒಳಪಡಿಸುವಂತೆ ಬಿಜೆಪಿ ಶಾಸಕ ಮುನಿರತ್ನ ಆಗ್ರಹಿಸಿದ್ದಾರೆ. ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ರಾಜಣ್ಣ ಬಳಿಲ್ಲಿ 48 ಜನರ ಹೆಸರು ಬಾಯಿ ಬಿಡಿಸ್ಬೇಕು. ಮಂಪರು ಪರೀಕ್ಷೆ ಮಾಡಿಸಿ ಸತ್ಯ ಹೊರಗೆ ತರಬೇಕು. ರಾಜಣ್ಣ ವಿರುದ್ಧ ಸುಮೋಟೋ ಕೇಸ್ ದಾಖಲಿಸಿ ಎಂದರು. ಹನಿಟ್ರ್ಯಾಪ್ ಆಗಿದೆ ಎಂಬುದಾಗಿ ಕಲಾಪದಲ್ಲಿ ಹೇಳಿದ್ದಾರೆ. ಹೀಗೆ ಇದನ್ನು ಮುಚ್ಚಿ ಹಾಕಿದ್ರೇ ಬೇರೆ ಏನೇನೋ ಆಗಬಹುದು. ಅದಕ್ಕೂ ಮುನ್ನಾ ಸೂಕ್ತ ರೀತಿಯಲ್ಲಿ ತನಿಖೆ ನಡೆಸುವಂತೆ ಆಗ್ರಹಿಸಿದರು. ನನ್ನ ವಿರುದ್ಧ ಸಂಚು ರೂಪಿಸಿದ್ರು, ರಾಮೇಶ್ ಜಾರಕಿಹೊಳಿ ವಿರುದ್ಧ ಸಂಚು ಹೂಡಿದ್ರು. ರೇವಣ್ಣ ವಿರುದ್ಧ ರೇಪ್ ಕೇಸ್ ಹಾಕಿಸಿದ್ರು. ಸೂರಜ್ ರೇವಣ್ಣ, ನನ್ನ ಮೇಲೆ ಕೇಸ್ ಹಾಕಿದ್ರು. ಇದಕ್ಕೆ ಡಿಸಿಎಂ ಡಿ.ಕೆ ಶಿವಕುಮಾರ್ ನೇರಹೊಣೆ ಎಂಬುದಾಗಿ ಡಿಕೆಶಿ ವಿರುದ್ಧ ಮುನಿರತ್ನ ಮತ್ತೆ ಕಿಡಿಕಾರಿದರು. https://kannadanewsnow.com/kannada/alert-google-pay-phone-pay-will-not-work-for-these-phone-numbers-from-april-1st-check-if-your-number-is-available/ https://kannadanewsnow.com/kannada/big-news-for-the-first-time-in-the-state-a-mass-seemantha-program-for-3000-pregnant-women-minister-lakshmi-hebbalkar/

Read More

ನವದೆಹಲಿ: ದೆಹಲಿ ಹೈಕೋರ್ಟ್ನ ಹಾಲಿ ನ್ಯಾಯಾಧೀಶ ಯಶವಂತ್ ವರ್ಮಾ ಅವರ ನಿವಾಸದ ಹೊರಗೆ ಸುಟ್ಟ ಹಣದ ಕುರುಹುಗಳನ್ನು ತೋರಿಸುವ ಹೊಸ ವೀಡಿಯೊ ಹೊರಬಂದಿದೆ. ಸ್ಫೋಟಕ “ಜಡ್ಜ್ ಕ್ಯಾಶ್” ವೀಡಿಯೊದ ಹಿನ್ನೆಲೆಯಲ್ಲಿ ಈ ಬೆಳವಣಿಗೆ ಸಂಭವಿಸಿದೆ. ಇದು ದೇಶಾದ್ಯಂತ ಆಘಾತಗಳನ್ನು ಉಂಟುಮಾಡಿದೆ. ಇದು ಭಾರತೀಯ ನ್ಯಾಯಾಂಗದಲ್ಲಿ ಪಾರದರ್ಶಕತೆ ಮತ್ತು ನಂಬಿಕೆಯನ್ನು ಹೆಚ್ಚಿಸಿದೆ. ಫ್ರೆಶ್ ವೀಡಿಯೊ ಏನು ತೋರಿಸುತ್ತದೆ? ಇತ್ತೀಚಿನ ದೃಶ್ಯಗಳು ರಾಷ್ಟ್ರ ರಾಜಧಾನಿಯ ತುಘಲಕ್ ಕ್ರೆಸೆಂಟ್ನಲ್ಲಿರುವ ನ್ಯಾಯಮೂರ್ತಿ ವರ್ಮಾ ಅವರ ಮನೆಯ ಹೊರಗೆ ಸುಟ್ಟ 500 ರೂಪಾಯಿ ಕರೆನ್ಸಿ ನೋಟುಗಳ ಅವಶೇಷಗಳನ್ನು ಸೆರೆಹಿಡಿಯುತ್ತವೆ. https://twitter.com/ANI/status/1903519539566141716 ಕಿರಿಯ ಅಧಿಕಾರಿಗಳು ಚಿತ್ರೀಕರಿಸಿದ ವೀಡಿಯೊಗಳನ್ನು ಅಳಿಸಲಾಗಿದೆ. ಪ್ರಸಾರ ಮಾಡದಂತೆ ಕೇಳಲಾಗಿದೆ ಮತ್ತೊಂದು ಆಘಾತಕಾರಿ ಬೆಳವಣಿಗೆಯಲ್ಲಿ, ಹಣವನ್ನು ಸುಡುವ ಸ್ಥಳದಲ್ಲಿದ್ದ ದೆಹಲಿ ಪೊಲೀಸರ ಕಿರಿಯ ಅಧಿಕಾರಿಗಳು ವೀಡಿಯೊವನ್ನು ರೆಕಾರ್ಡ್ ಮಾಡಿದ್ದಾರೆ ಎಂದು ಮೂಲಗಳು ರಿಪಬ್ಲಿಕ್ ಗೆ ತಿಳಿಸಿವೆ. ಆದಾಗ್ಯೂ, ನಂತರ ಅದನ್ನು ಅಳಿಸಲು ಆದೇಶಿಸಲಾಯಿತು ಮತ್ತು ಯಾವುದೇ ಪ್ರತಿಗಳನ್ನು ಮಾಡುವುದನ್ನು ನಿಷೇಧಿಸಲಾಯಿತು. ನಿರ್ಣಾಯಕ ಪುರಾವೆಗಳನ್ನು ಒಳಗೊಂಡಿದೆ ಎಂದು ನಂಬಲಾದ…

Read More

ಬೆಳಗಾವಿ: ರಾಜ್ಯದ ಸಚಿವರೊಬ್ಬರಿಗೆ ಹನಿಟ್ರ್ಯಾಪ್ ಮಾಡಲು ಯತ್ನಿಸಿರುವುದು ದುರದೃಷ್ಟಕರ ಸಂಗತಿ. ಸದನದಲ್ಲಿ ರಾಜ್ಯದ ಹಿರಿಯ ಸಚಿವರು ತಮಗಾದ ಅನುಭವವನ್ನು ಹಂಚಿಕೊಂಡಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವರಾದ ಲಕ್ಷ್ಮೀ ಹೆಬ್ಬಾಳಕರ್ ಪ್ರತಿಕ್ರಿಯಿಸಿದ್ದಾರೆ. ಹನಿಟ್ರ್ಯಾಪ್ ಯತ್ನಕ್ಕೆ ಸಂಬಂಧಿಸಿದಂತೆ ಈಗಾಗಲೇ ಮುಖ್ಯಮಂತ್ರಿಗಳು, ಉಪ ಮುಖ್ಯಮಂತ್ರಿಗಳು ಹಾಗೂ ಗೃಹಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಗೃಹ ಸಚಿವರು ಇದನ್ನು ನೋಡಿಕೊಳ್ಳುತ್ತಾರೆ. ನಾನು ಅದರ ಕುರಿತು ಹೆಚ್ಚು ಮಾತನಾಡಲ್ಲ ಎಂದರು. ಘರ್ಜಿಸುವ ಹುಲಿಗಳಿಗೆ ಸಿಡಿ ತೋರಿಸಿ ಹೆದರಿಸಲಾಗುತ್ತಿದೆ ಎಂದು ಸಚಿವ ಸತೀಶ್ ಜಾರಕಿಹೊಳಿ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಸಚಿವರು, ಅದಕ್ಕೆ ನೀವು ( ಮಾಧ್ಯಮದವರು) ಅವರಿಂದಲೇ ಉತ್ತರ ಪಡೆಯಬೇಕು. ನಾನು ಅದಕ್ಕೆ ಉತ್ತರ ನೀಡುವುದು ಸಮಂಜಸವಲ್ಲ. ಅಲ್ಲದೆ ಇಂತಹ ವಿಚಾರಗಳ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಹೇಳಿದರು. ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಸಚಿವರ ಮಾಧ್ಯಮ ಸಲಹೆಗಾರ ಎಂ.ಕೆ.ಹೆಗಡೆ, ಇಲಾಖೆಯ ಉಪನಿರ್ದೇಶಕ ನಾಗರಾಜ ಪತ್ರಿಕಾಗೋಷ್ಠಿಯಲ್ಲಿ ಇದ್ದರು. https://kannadanewsnow.com/kannada/3000-pregnant-women-to-be-screened-on-international-womens-day-minister-lakshmi-hebbalkar/ https://kannadanewsnow.com/kannada/alert-google-pay-phone-pay-will-not-work-for-these-phone-numbers-from-april-1st-check-if-your-number-is-available/

Read More

ಬೆಂಗಳೂರು: ಕರ್ನಾಟಕದಲ್ಲಿ ಈಗಾಗಲೇ ಪಂಚ ಗ್ಯಾರಂಟಿ ಯೋಜನೆಗಳು ಜಾರಿಯಲ್ಲಿದ್ದು, ಅಂಗನವಾಡಿ ಕಾರ್ಯಕರ್ತೆಯರಿಗೆ ಆರನೇ ಗ್ಯಾರಂಟಿ ನೀಡುವುದರ ಬಗ್ಗೆ ಸಿಎಂ ತೀರ್ಮಾನ ಕೈಗೊಳ್ಳುವರು. 2017ರಲ್ಲಿ ಸಿದ್ದರಾಮಯ್ಯನವರೇ ಸಿಎಂ ಆಗಿದ್ದಾಗ, ಅಂಗನವಾಡಿ ಕಾರ್ಯಕರ್ತೆಯರಿಗೆ ಗೌರವ ಧನ ಹೆಚ್ಚಿಸಲಾಗಿತ್ತು. ಈಗ ಮತ್ತೆ ಅವರೇ ಗೌರವ ಧನವನ್ನು ಏರಿಸಿದ್ದಾರೆ. ಜೊತೆಗೆ 2023ರಿಂದ ನಿವೃತ್ತಿಯಾದವರಿಗೆ ಗ್ರ್ಯಾಚ್ಯುಟಿಯನ್ನು ನೀಡಿಲಾಗುತ್ತಿದೆ ಎಂದು ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ತಿಳಿಸಿದರು.‌ ಗೃಹಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಚಿವರು, 3000 ಗರ್ಭಿಣಿಯರಿಗೆ ಸೀರೆ, ಹೂವು, ಹಣ್ಣು ಕಾಯಿ, ಅರಿಶಿನ-ಕುಂಕುಮ, ಬಳೆ ಹೀಗೆ ಪಂಚ ಬಗೆಯ ಮಂಗಳಕರ ಸಾಮಗ್ರಿಗಳನ್ನೊಳಗೊಂಡು ಉಡಿ ತುಂಬುವ ಶಾಸ್ತ್ರದೊಂದಿಗೆ ಸೀಮಂತ ಕಾರ್ಯಕ್ರಮವನ್ನು ನೆರವೇರಿಸಲಾಗುವುದು ಎಂದರು. ವಿಶ್ವ ವಿಕಲಚೇತನರ ದಿನಾಚರಣೆ ಹಾಗೂ ಹಿರಿಯ ನಾಗರಿಕರ ದಿನಾಚರಣೆ ಪ್ರಯುಕ್ತ 1000 ಹಿರಿಯ ನಾಗರಿಕರು ಹಾಗೂ ವಿಕಲಚೇತನರು ಕಾರ್ಯಕ್ರಮದಲ್ಲಿ ಭಾಗವಹಿಸಲ್ಲಿದ್ದು, ವಿಕಲಚೇತನರಿಗೆ – ತ್ರಿಚಕ್ರ ಸ್ಕೂಟರ್ ವಿತರಣೆ ಮಾಡಲಾಗುವುದು ಎಂದು ಸಚಿವರು ಹೇಳಿದರು. https://kannadanewsnow.com/kannada/3000-pregnant-women-to-be-screened-on-international-womens-day-minister-lakshmi-hebbalkar/ https://kannadanewsnow.com/kannada/big-news-for-the-first-time-in-the-state-a-mass-seemantha-program-for-3000-pregnant-women-minister-lakshmi-hebbalkar/

Read More