Subscribe to Updates
Get the latest creative news from FooBar about art, design and business.
Author: kannadanewsnow09
ಹಾಸನ: ಜಿಲ್ಲೆಯಲ್ಲಿ ಮೈಸೂರಿಗೆ ತೆರಳಿ, ಹಾಸನಕ್ಕೆ ಮರಳುತ್ತಿದ್ದಂತ ವೇಳೆಯಲ್ಲಿ ಕಾರು ಅಪಘಾತದಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದರು. ಇದೀಗ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಂತ ಅವರು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಇಂದು ಮೈಸೂರಿನಲ್ಲಿ ಐಜಿಪಿಯವರನ್ನು ಭೇಟಿಯಾಗಿ ಹಾಸನ ಡಿವೈಎಸ್ಪಿಯಾಗಿ ವರ್ಗಾವಣೆಯಾಗಿದ್ದ ಕಾರಣ, ವರದಿ ಮಾಡಿಕೊಳ್ಳಲು ಜಿಲ್ಲಾ ಪೊಲೀಸ್ ಕಚೇರಿಗೆ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಕಾರಿನಲ್ಲಿ ತೆರಳುತ್ತಿದ್ದರು. ಈ ವೇಳೆಯಲ್ಲಿ ಹಾಸನ ತಾಲ್ಲೂಕಿನ ಕಿತ್ತಾನೆಗಡಿ ಗ್ರಾಮದ ಬಳಿಯಲ್ಲಿ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ತಲೆಗೆ ಗಂಭೀರ ಪೆಟ್ಟು ಬಿದ್ದಿತ್ತು. ಕಾರು ಅಪಘಾತದಲ್ಲಿ ಗಾಯಗೊಂಡಿದ್ದಂತ ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿತ್ತು. ಅವರ ಸ್ಥಿತಿ ಚಿಂತಾಜನಕವಾಗಿತ್ತು. ಅಲ್ಲದೇ ಹೆಚ್ಚಿನ ಚಿಕಿತ್ಸೆಗಾಗಿ ಬೇರೆ ಆಸ್ಪತ್ರೆಗೆ ಕರೆದೊಯ್ಯುವ ಸ್ಥಿತಿಯಲ್ಲೂ ಅವರು ಇರಲಿಲ್ಲ. ಇದರ ನಡುವೆ ವೈದ್ಯರು ಚಿಕಿತ್ಸೆ ಮುಂದುವರೆಸಿದ್ದರು. ಕ್ಷಣ ಕ್ಷಣಕ್ಕೆ ಅವರ ಸ್ಥಿತಿ ಗಂಭೀರಗೊಂಡಿತ್ತು. ಈಗ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿರುವುದಾಗಿ ತಿಳಿದು ಬಂದಿದೆ. ಈ…
ಚಿಕ್ಕಬಳ್ಳಾಪುರ: ಫೆಂಗನ್ ಚಂಡಮಾರುತದ ಕಾರಣದಿಂದ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸುವ ಕಾರಣದಿಂದಾಗಿ ಚಿಕ್ಕಬಳ್ಳಾಪುರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ನಾಳೆ ರಜೆಯನ್ನು ಘೋಷಿಸಲಾಗಿದೆ. ಈ ಸಂಬಂಧ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ರವೀಂದ್ರ ಅವರು ಆದೇಶ ಹೊರಡಿಸಿದ್ದು, ಅದರಲ್ಲಿ ನಾಳೆ ಫೆಂಗಲ್ ಚಂಡಮಾರುತದ ಕಾರಣ ತುಂತುರು ಮಳೆಯ ಜೊತೆಗೆ ಚಳಿಗಾಳಿ ಬೀಸುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ನೀಡಿರುವುದಾಗಿ ತಿಳಿಸಿದ್ದಾರೆ. ಶಾಲಾ-ಕಾಲೇಜು ವಿದ್ಯಾರ್ಥಿಗಳ ಆರೋಗ್ಯದ ಹಿನ್ನಲೆಯಲ್ಲಿ ಈ ಮುಂಚಾಗ್ರತಾ ಕ್ರಮವನ್ನು ಕೈಗೊಳ್ಳಲಾಗಿದೆ. ನಾಳೆಯ ರಜೆಯ ದಿನದ ತರಗತಿಗಳನ್ನು ಮುಂದಿನ ಅವಧಿಯಲ್ಲಿ ಸರಿದೂಗಿಸುವಂತೆ ಸೂಚಿಸಿದ್ದಾರೆ. https://kannadanewsnow.com/kannada/young-ips-officer-harsh-vardhans-car-accident-condition-critical/ https://kannadanewsnow.com/kannada/cyclone-phengal-plane-flies-back-after-struggling-to-land-video-goes-viral/ https://kannadanewsnow.com/kannada/here-is-the-list-of-karnataka-high-court-general-holidays-for-the-year-2025/
ಹಾಸನ: ಜಿಲ್ಲೆಯಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಕಾರು ಅಪಘಾತಗೊಂಡಿದ್ದು, ಅವರು ಗಂಭೀರವಾಗಿ ಗಾಯಗೊಂಡಿರುವುದಾಗಿ ತಿಳಿದು ಬಂದಿದೆ. ಅಲ್ಲದೇ ಅವರ ಸ್ಥಿತಿ ಚಿಂತಾಜನಕವಾಗಿದೆ ಎನ್ನಲಾಗುತ್ತಿದೆ. ಹಾಸನದಲ್ಲಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದಂತ ವೇಳೆಯಲ್ಲಿ ಯುವ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಕಾರು ಅಪಘಾತವಾಗಿದೆ. ಈ ಅಪಘಾತದಲ್ಲಿ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಹಾಸನದ ಖಾಸಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. ಹಾಸದನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವಂತ ಐಪಿಎಸ್ ಅಧಿಕಾರಿ ಹರ್ಷವರ್ಧನ್ ಅವರ ಸ್ಥಿತಿ ಚಿಂತಾಜನಕವಾಗಿದೆಯಂತೆ. ಅಲ್ಲದೇ ಅವರನ್ನು ಬೇರೊಂದು ಆಸ್ಪತ್ರೆಗೂ ಸಾಗಿಸದಂತ ಕ್ರಿಟಿಕಲ್ ಸ್ಥಿತಿಯಲ್ಲಿದ್ದಾರಂತೆ. ಈ ವಿಖಯ ತಿಳಿದು ಆಸ್ಪತ್ರೆಗೆ ದಕ್ಷಿಣ ವಲಯದ ಐಜಿಪಿ ಡಾ.ಬೋರಲಿಂಗಯ್ಯ ಭೇಟಿ ನೀಡಿ, ಆಸ್ಪತ್ರೆಯ ವೈದ್ಯರಿಂದ ಮಾಹಿತಿ ಪಡೆದರು. ಜೊತೆಗೆ ಹಾಸನ ಎಸ್ಪಿ ಮೊಹಮ್ಮದ್ ಸುಜೀತಾ ಕೂಡ ಭೇಟಿ ನೀಡಿ ವೈದ್ಯರಿಂದ ಮಾಹಿತಿ ಪಡೆದಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/cyclone-phengal-plane-flies-back-after-struggling-to-land-video-goes-viral/ https://kannadanewsnow.com/kannada/district-taluk-panchayat-elections-to-be-held-soon-dk-shivakumar/ https://kannadanewsnow.com/kannada/here-is-the-list-of-karnataka-high-court-general-holidays-for-the-year-2025/
ಮುಂಬೈ: ಮಹಾರಾಷ್ಟ್ರದ ನೂತನ ಮುಖ್ಯಮಂತ್ರಿಯಾಗಿ ದೇವೇಂದ್ರ ಫಡ್ನವೀಸ್ ಅವರ ಹೆಸರನ್ನು ಅಂತಿಮಗೊಳಿಸಲಾಗಿದೆ ಎಂದು ಹಿರಿಯ ಬಿಜೆಪಿ ನಾಯಕರೊಬ್ಬರು ಭಾನುವಾರ ರಾತ್ರಿ ತಿಳಿಸಿದ್ದಾರೆ. ಡಿಸೆಂಬರ್ 2 ಅಥವಾ 3 ರಂದು ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಡೆಯಲಿದೆ ಎಂದು ಅವರು ಪಿಟಿಐಗೆ ತಿಳಿಸಿದ್ದಾರೆ. ಹೊಸ ಮಹಾಯುತಿ ಸರ್ಕಾರದ ಪ್ರಮಾಣವಚನ ಸಮಾರಂಭವು ಡಿಸೆಂಬರ್ 5 ರಂದು ಸಂಜೆ ದಕ್ಷಿಣ ಮುಂಬೈನ ಆಜಾದ್ ಮೈದಾನದಲ್ಲಿ ನಡೆಯಲಿದ್ದು, ಪ್ರಧಾನಿ ನರೇಂದ್ರ ಮೋದಿ ಭಾಗವಹಿಸಲಿದ್ದಾರೆ. ಫಡ್ನವೀಸ್ ಎರಡು ಬಾರಿ ಮುಖ್ಯಮಂತ್ರಿಯಾಗಿ ಸೇವೆ ಸಲ್ಲಿಸಿದ್ದರು. ನಿರ್ಗಮಿತ ಏಕನಾಥ್ ಶಿಂಧೆ ನೇತೃತ್ವದ ಸರ್ಕಾರದಲ್ಲಿ ಅವರು ಉಪಮುಖ್ಯಮಂತ್ರಿಯಾಗಿದ್ದರು. https://kannadanewsnow.com/kannada/important-information-for-registered-workers-in-the-state-here-are-the-facilities-available-from-the-board/ https://kannadanewsnow.com/kannada/cyclone-phengal-plane-flies-back-after-struggling-to-land-video-goes-viral/
ಬೆಂಗಳೂರು: ರಾಜ್ಯದ ನೋಂದಾಯಿತ ಕಾರ್ಮಿಕರಿಗೆ ಕಾರ್ಮಿಕ ಮಂಡಳಿಯಿಂದ ವಿವಿಧ ಸೌಲಭ್ಯಗಳನ್ನು ನೀಡಲಾಗುತ್ತಿದೆ. ಈ ಮೂಲಕ ಅವರ ಜೀವನ ನಿರ್ವಹಣೆಗೆ ಅನುಕೂಲ ಕಲ್ಪಿಸಿಕೊಡಲಾಗುತ್ತಿದೆ. ಈ ಬಗ್ಗೆ ಕಾರ್ಮಿಕ ಇಲಾಖೆಯಿಂದ ಮಾಹಿತಿ ನೀಡಲಾಗಿದ್ದು, ನೀವು ಮಂಡಳಿಯಲ್ಲಿ ನೋಂದಾಯಿತ ಕಾರ್ಮಿಕರಾಗಿದ್ದು, ಕಾರ್ಮಿಕ ಕಾರ್ಡ್ ಹೊಂದಿದ್ದರೆ ಮಂಡಳಿಯು ನೀಡುವ ಸೌಲಭ್ಯಗಳ ಲಾಭಗಳನ್ನು ಪಡೆದುಕೊಳ್ಳಬಹುದು. ಕಾರ್ಮಿಕರೇ ನೀವು ಮಂಡಳಿಯಲ್ಲಿ ನೋಂದಾಯಿತ ಸದಸ್ಯರಾಗಿದ್ದಲ್ಲಿ ಈ ಕೆಳಗಿನ ಎಲ್ಲಾ ಸೌಲಭ್ಯಗಳನ್ನು ಪಡೆಯಲು ಅರ್ಹರಾಗಿರುತ್ತೀರಿ ಎಂದಿದೆ. ಹೀಗಿವೆ ನೋಂದಾಯಿತ ಕಾರ್ಮಿಕರಿಗೆ ಸಿಗುವ ಸೌಲಭ್ಯಗಳ ಪಟ್ಟಿ ಪಿಂಚಣಿ ಸೌಲಭ್ಯ ಕುಟುಂಬ ಪಿಂಚಣಿ ಸೌಲಭ್ಯ ದುರ್ಬಲತೆ ಪಿಂಚಣಿ ಟೂಲ್ ಕಿಟ್ ಸೌಲಭ್ಯ ಹೆರಿಗೆ ಸಹಾಯಧನ ಅಂತ್ಯಕ್ರಿಯೆ ವೆಚ್ಚ ಶೈಕ್ಷಣಿಕ ಸಹಾಯಧನ ವೈದ್ಯಕೀಯ ಸಹಾಯಧನ ಅಪಘಾತ ಪರಿಹಾರ ಪ್ರಮುಖ ವೈದ್ಯಕೀಯ ವೆಚ್ಚ ಸಹಾಯಧನ ಮದುವೆ ಸಹಾಯಧನ ತಾಯಿ ಮಗು ಸಹಾಯಹಸ್ತ ಈ ಸೌಲಭ್ಯಗಳ ಬಗ್ಗೆ ಮಾಹಿತಿ ಪಡೆಯಲು ನೋಂದಾಯಿತ ಕಾರ್ಮಿಕರು ಕಾರ್ಮಿಕ ಸಹಾಯವಾಣಿ 155214ಗೆ ಕರೆ ಮಾಡಿ ಪಡೆಯಬಹುದಾಗಿದೆ. https://twitter.com/WorkersBoard/status/1858472392869437515 https://kannadanewsnow.com/kannada/cyclone-phengal-schools-colleges-in-kolar-district-to-remain-closed-tomorrow/ https://kannadanewsnow.com/kannada/cyclone-phengal-plane-flies-back-after-struggling-to-land-video-goes-viral/
ಕೋಲಾರ: ಜಿಲ್ಲೆಯಲ್ಲಿ ನಾಳೆ ಫೆಂಗಲ್ ಚಂಡಮಾರುತದ ಕಾರಣ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಈ ಹಿನ್ನಲೆಯಲ್ಲಿ ನಾಳೆ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆಯನ್ನು ಘೋಷಿಸಿ ಡಿಸಿ ಆದೇಶಿಸಿದ್ದಾರೆ. ಈ ಬಗ್ಗೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಅವರು ಆದೇಶಿಸಿದ್ದು ನಾಳೆ ಜಿಲ್ಲೆಯಲ್ಲಿ ಭಾರಿ ಮಳೆಯ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಈ ಹಿನ್ನಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ನಾಳೆ ಕೋಲಾರ ಜಿಲ್ಲೆಯ ಶಾಲಾ-ಕಾಲೇಜುಗಳಿಗೆ ರಜೆ ನೀಡಿರುವುದಾಗಿ ತಿಳಿಸಿದ್ದಾರೆ. ನಾಳೆ ಶಾಲಾ-ಕಾಲೇಜುಗಳಿಗೆ ರಜೆ ನೀಡಲಾಗಿದೆ. ನಾಳಿನ ರಜೆಯನ್ನು ಮತ್ತೊಂದು ರಜಾ ದಿನಗಳಲ್ಲಿ ತರಗತಿ ನಡೆಸಿ ಸರಿದೂಗಿಸುವಂತೆ ಕೋಲಾರ ಜಿಲ್ಲಾಧಿಕಾರಿ ಅಕ್ರಂ ಪಾಷಾ ಆದೇಶದಲ್ಲಿ ತಿಳಿಸಿದ್ದಾರೆ. https://kannadanewsnow.com/kannada/no-holiday-for-schools-colleges-in-bengaluru-tomorrow-dc-jagadish/ https://kannadanewsnow.com/kannada/cyclone-phengal-plane-flies-back-after-struggling-to-land-video-goes-viral/ https://kannadanewsnow.com/kannada/here-is-the-list-of-karnataka-high-court-general-holidays-for-the-year-2025/
ಬೆಂಗಳೂರು: ಫೆಂಗಲ್ ಚಂಡಮಾರುತದ ಹಿನ್ನಲೆಯಲ್ಲಿ ಮಳೆಯ ಮುನ್ಸೂಚನೆ ನೀಡಲಾಗಿದೆ. ಆದರೇ ತುಂತುರು ಹಾಗೂ ಮೋಡ ಕವಿತ ವಾತಾವರಣವಿರುವ ಕಾರಣ ನಾಳೆ ನಗರದಲ್ಲಿನ ಶಾಲಾ ಕಾಲೇಜುಗಳಿಗೆ ರಜೆಯಿಲ್ಲ ಎಂಬುದಾಗಿ ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟ ಪಡಿಸಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ನಗರದಲ್ಲಿ ತುಂತುರು ಮಳೆಯಾಗುತ್ತಿದೆ. ಮೋಡ ಕವಿದ ವಾತಾವರಣವಿದೆ. ಮಕ್ಕಳನ್ನು ಎಚ್ಚರಿಕೆಯಿಂದ ಶಾಲೆಗಳಿಗೆ ಕಳುಹಿಸುವಂತೆ ಪೋಷಕರಲ್ಲಿ ಮನವಿ ಮಾಡಿದರು. ಇನ್ನೂ ನಾಳೆ ಶಾಲಾ-ಕಾಲೇಜುಗಳಿಗೆ ರಜೆ ಎಂಬುದಾಗಿ ಸುಳ್ಳು ಸುದ್ದಿ ಹರಿದಾಡುತ್ತಿದೆ. ನಾಳೆ ಯಾವುದೇ ಶಾಲಾ ಕಾಲೇಜುಗಳಿಗೆ ರಜೆಯಿಲ್ಲ. ನಾಳೆ ಎಂದಿನಂತೆ ಶಾಲಾ-ಕಾಲೇಜುಗಳು ನಡೆಯಲಿದ್ದಾವೆ ಎಂಬುದಾಗಿ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಗದೀಶ್ ಸ್ಪಷ್ಟ ಪಡಿಸಿದ್ದಾರೆ. https://kannadanewsnow.com/kannada/good-news-for-sportspersons-in-the-state-cm-siddaramaiah-assures-25-attendance-10-grace-mark/ https://kannadanewsnow.com/kannada/cyclone-phengal-plane-flies-back-after-struggling-to-land-video-goes-viral/
ಬೆಂಗಳೂರು: ರಾಜ್ಯದ ಕ್ರೀಡಾಪಟುಗಳಿಗೆ ಗುಡ್ ನ್ಯೂಸ್ ಎನ್ನುವಂತೆ ಶೇ.25ರಷ್ಟು ಹಾಜರಾತಿ ಹೊಂದಿದ್ದರೂ, ಶೇ.10ರಷ್ಟು ಗ್ರೇಸ್ ಮಾರ್ಕ್ಸ ನೀಡುವ ಮೂಲಕ, ಹಾಜರಾತಿ ಕಡಿಮೆ ಆಗದಂತೆ ಕ್ರಮ ಕೈಗೊಳ್ಳುವ ಬಗ್ಗೆ ಸಿಎಂ ಸಿದ್ಧರಾಮಯ್ಯ ಅವರು ಭರವಸೆ ನೀಡಿದ್ದಾರೆ. ಕರ್ನಾಟಕ ಒಲಂಪಿಕ್ ಸಂಸ್ಥೆ ಯವನಿಕಾದಲ್ಲಿ ಆಯೋಜಿಸಿದ್ದ ಪ್ರಶಸ್ತಿ ಪ್ರದಾನ ಸಮಾರಂಭವನ್ನು ಉದ್ಘಾಟಿಸಿ, ಕ್ರೀಡಾಪಟುಗಳಿಗೆ ಪ್ರಶಸ್ತಿಗಳನ್ನು ವಿತರಿಸಿ ಮಾತನಾಡಿದರು. ಚಿನ್ನದ ಪದಕ ಪಡೆದವರಿಗೆ 6 ಕೋಟಿ ಹಣ ಮೀಸಲಿಟ್ಟಿದ್ದೀವಿ. ಬೆಳ್ಳಿ ಪದಕ ಪಡೆದವರಿಗೆ 4 ಕೋಟಿ ಹಣ ಇಟ್ಟಿದ್ದೇವೆ. ಆದರೆ ಯಾರೂ ಪದಕ ತರ್ತಾನೇ ಇಲ್ಲ. ದೇಶಕ್ಕೆ ಯಾರಾದರೂ ಚಿನ್ನ ತನ್ನಿ ಎಂದು ಕರೆ ನೀಡಿದರು. ಕ್ರೀಡಾಪಟುಗಳು ರಾಜ್ಯ, ರಾಷ್ಟ್ರ, ಅಂತಾರಾಷ್ಟ್ರೀಯ ಮಟ್ಟದಲ್ಲಿ ಭಾಗವಹಿಸಬೇಕು ಎನ್ನುವ ಪ್ರೋತ್ಸಾಹದಾಯಕ ಉದ್ದೇಶದಿಂದ ಕರ್ನಾಟಕ ಒಲಂಪಿಕ್ ಸಂಸ್ಥೆ 22 ವರ್ಷಗಳಿಂದ ಈ ಪ್ರಶಸ್ತಿಗಳನ್ನು ನೀಡುತ್ತಿದೆ. ಗೋವಿಂದರಾಜು ಅವರು ಒಲಂಪಿಕ್ ಸಂಸ್ಥೆ ಅಧ್ಯಕ್ಷರಾಗಿ ಕ್ರೀಡಾ ಕ್ಷೇತ್ರದ ಬೆಳವಣಿಗೆಗೆ ನಿರಂತರ ಶ್ರಮಿಸುತ್ತಿದ್ದಾರೆ. ನಾನು ಬಜೆಟ್ ರೂಪಿಸುವಾಗ ಚರ್ಚೆಯಲ್ಲಿ ಕುಳಿತು ಕ್ರೀಡಾಕ್ಷೇತ್ರಕ್ಕೆ ಅಗತ್ಯವಾದ ಎಲ್ಲವನ್ನೂ ಸೇರಿಸುತ್ತಾರೆ.…
ತೆಲುಗು ನಟ ಅಲ್ಲು ಅರ್ಜುನ್ ತಮ್ಮ ಮುಂಬರುವ ಚಿತ್ರ ಪುಷ್ಪ 2: ದಿ ರೂಲ್ ಕಾರ್ಯಕ್ರಮದ ಸಂದರ್ಭದಲ್ಲಿ ತಮ್ಮ ಅಭಿಮಾನಿ ಬಳಗವನ್ನು ‘ಸೇನೆ’ ಎಂದು ಉಲ್ಲೇಖಿಸಿದ ಆರೋಪದ ಮೇಲೆ ಅವರ ವಿರುದ್ಧ ಪೊಲೀಸ್ ದೂರು ದಾಖಲಾಗಿದೆ. ಈ ಘಟನೆಯು ಪ್ರಚಾರ ಕಾರ್ಯಕ್ರಮವೊಂದರಲ್ಲಿ ಸಂಭವಿಸಿದೆ, ಅಲ್ಲಿ ನಟ ತನ್ನ ದೊಡ್ಡ ಅನುಯಾಯಿಗಳನ್ನು ಉದ್ದೇಶಿಸಿ ಮಾತನಾಡುತ್ತಾ, ಅವರ ಬೆಂಬಲಕ್ಕೆ ಮೆಚ್ಚುಗೆಯ ಸಂಕೇತವಾಗಿ ಅವರನ್ನು ತನ್ನ “ಸೈನ್ಯ” ಎಂದು ಕರೆದರು. ಅಲ್ಲು ಅರ್ಜುನ್ ಅವರ ಹೇಳಿಕೆಗಳು ಅವರ ಅಭಿಮಾನಿಗಳಲ್ಲಿ ಹಿಂಸಾಚಾರ ಅಥವಾ ಆಕ್ರಮಣಶೀಲತೆಯನ್ನು ಪ್ರಚೋದಿಸಬಹುದು ಎಂದು ಸ್ಥಳೀಯ ನಾಗರಿಕರೊಬ್ಬರು ಸಲ್ಲಿಸಿದ ದೂರಿನಲ್ಲಿ ಹೇಳಲಾಗಿದೆ. ಅರ್ಜಿದಾರರು ತಮ್ಮ ಅಭಿಮಾನಿ ಬಳಗದ ಸಂದರ್ಭದಲ್ಲಿ ಮಿಲಿಟರಿ ಪರಿಭಾಷೆಯ ಬಳಕೆಯ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ, ಇದು ತಪ್ಪು ತಿಳುವಳಿಕೆ ಅಥವಾ ವಿಚ್ಛಿದ್ರಕಾರಿ ನಡವಳಿಕೆಗೆ ಕಾರಣವಾಗಬಹುದು ಎಂದು ಸೂಚಿಸಿದ್ದಾರೆ. ಪ್ರಕರಣದ ನಿರ್ದಿಷ್ಟತೆಗಳ ಬಗ್ಗೆ ಪೊಲೀಸರು ಇನ್ನೂ ಪ್ರತಿಕ್ರಿಯಿಸಿಲ್ಲ. ನಟನ ಹೇಳಿಕೆಗಳು ವಿವಿಧ ಭಾಗಗಳಿಂದ ಬೆಂಬಲ ಮತ್ತು ಟೀಕೆಗಳನ್ನು ಹುಟ್ಟುಹಾಕಿವೆ. ಅಲ್ಲು ಅರ್ಜುನ್ ಅವರ…
Rain in Karnataka: ಫೆಂಗಲ್ ಚಂಡಮಾರುತ: ನಾಳೆ ರಾಜ್ಯದ ಈ ಜಿಲ್ಲೆಗಳಲ್ಲಿ ಭಾರೀ ಮಳೆ, ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ
ಬೆಂಗಳೂರು: ತಮಿಳುನಾಡಿನ ಕರಾವಳಿ ತೀರದಲ್ಲಿ ಫೆಂಗಲ್ ಚಂಡಮಾರುತ ಉಂಟಾಗಿದೆ. ಈ ಪರಿಣಾಮ ಕರ್ನಾಟಕದಲ್ಲೂ ಭಾರೀ ಮಳೆಯಾಗುವ ಮುನ್ಸೂಚನೆಯನ್ನು ಹವಾಮಾನ ಇಲಾಖೆ ನೀಡಿದೆ. ಅಲ್ಲದೇ ರಾಜ್ಯದ 7 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಕಾರಣ ಆರೆಂಜ್, ಯೆಲ್ಲೋ ಅಲರ್ಟ್ ಘೋಷಣೆ ಮಾಡಿದೆ. ಈ ಸಂಬಂಧ ಹವಾಮಾನ ಕೇಂದ್ರದ ಪ್ರಾದೇಶಿಕ ನಿರ್ದೇಶಕ ಸಿ.ಎಸ್ ಪಾಟೀಲ್ ಅವರು ಮಾಹಿತಿ ಹಂಚಿಕೊಂಡಿದ್ದು, ನಾಳೆ ದಕ್ಷಿಣ ಒಳನಾಡಿನ ಜಿಲ್ಲೆಗಳಾದಂತ ಹಾಸನ, ಮಂಡ್ಯ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು, ಚಾಮರಾಜನಗರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಮುಂಜಾಗ್ರತಾ ಕ್ರಮವಾಗಿ ಆರೆಂಜ್ ಅಲರ್ಟ್ ನೀಡಲಾಗಿದೆ ಎಂದು ತಿಳಿಸಿದ್ದಾರೆ. ಇನ್ನೂ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಕೋಲಾರ ಹಾಗೂ ಕರಾವಳಿ ಜಿಲ್ಲೆಗಳಾದಂತ ಉಡುಪಿ, ದಕ್ಷಿಣ ಕನ್ನಡದಲ್ಲಿಯೂ ಭಾರೀ ಮಳೆಯಾಗಲಿದೆ. ಸಾರ್ವಜನಿಕರು ಎಚ್ಚರಿಕೆಯವಹಿಸುವಂತೆ ತಿಳಿಸಿ, ಯೆಲ್ಲೋ ಅಲರ್ಟ್ ನೀಡಿದ್ದಾರೆ. ಸೋಮವಾರದ ನಾಳೆ ಕೊಡಗು, ಚಾಮರಾಜನಗರ, ಮೈಸೂರು, ಚಿಕ್ಕಮಗಳೂರು, ಶಿವಮೊಗ್ಗ, ಮಂಡ್ಯ ಮತ್ತು ಹಾಸನ ಜಿಲ್ಲೆಯಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ. ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ರಾಮನಗರ,…