Subscribe to Updates
Get the latest creative news from FooBar about art, design and business.
Author: kannadanewsnow09
ಕಲಬುರ್ಗಿ:”ನ್ಯಾಷನಲ್ ಹೆರಾಲ್ಡ್ ವಿಚಾರದಲ್ಲಿ ಇಡಿ ಸಲ್ಲಿಸಿರುವ ಆರೋಪಪಟ್ಟಿಯ ಯಾವುದೇ ವಿಚಾರಗಳಿಗೆ ಸರಿಯಾದ ಆಧಾರವಿಲ್ಲ. ಇದು ಅನ್ಯಾಯ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ಹೇಳಿದರು. ಕಲಬುರ್ಗಿಯ ವಿಮಾನ ನಿಲ್ದಾಣದಲ್ಲಿ ಮಾಧ್ಯಮಗಳ ಪ್ರಶ್ನೆಗಳಿಗೆ ಶಿವಕುಮಾರ್ ಅವರು ಬುಧವಾರ ಉತ್ತರಿಸಿದರು. ನ್ಯಾಷನಲ್ ಹೆರಾಲ್ಡ್ ಪ್ರಕರಣದಲ್ಲಿ ಕಾಂಗ್ರೆಸ್ ನಾಯಕರಾದ ಸೋನಿಯಾ ಗಾಂಧಿ ಮತ್ತು ರಾಹುಲ್ ಗಾಂಧಿ ವಿರುದ್ಧ ಇಡಿ ಆರೋಪಪಟ್ಟಿ ಸಲ್ಲಿಸಿರುವ ಬಗ್ಗೆ ಕೇಳಿದಾಗ, “ಈ ಪ್ರಕರಣದಲ್ಲಿ ಯಾವುದೇ ರೀತಿಯಲ್ಲಿಯೂ ಗಾಂಧಿ ಕುಟುಂಬಕ್ಕೆ ಲಾಭವಾಗಿಲ್ಲ. ಇದು ಕಾಂಗ್ರೆಸ್ ಪಕ್ಷದ ಆಸ್ತಿ ಮತ್ತು ಅವರು ಪಕ್ಷದ ಮುಖ್ಯಸ್ಥರು, ಆದ್ದರಿಂದ ಅವರ ಹೆಸರು ಉಲ್ಲೇಖವಾಗಿದೆ. ಇದರಲ್ಲಿ ತಪ್ಪೇನಿದೆ? ಇದನ್ನು ಕೇವಲ ರಾಜಕೀಯ ದ್ವೇಷಕ್ಕಾಗಿ ಮಾಡಲಾಗುತ್ತಿದೆ” ಎಂದರು.
ಬೆಂಗಳೂರು: ರಾಜ್ಯದಲ್ಲಿ 1ನೇ ತರಗತಿಗೆ ಮಕ್ಕಳ ದಾಖಲಾತಿಗೆ ವಯೋಮಿತಿ ಸಡಿಲಿಕೆ ಮಾಡಲಾಗಿದೆ. ಇನ್ಮುಂದೆ 5 ವರ್ಷ 5 ತಿಂಗಳು ತುಂಬಿದ್ದರೇ 1ನೇ ತರಗತಿಗೆ ದಾಖಲಾತಿ ಮಾಡಬಹುದು ಅಂತ ಶಾಲಾ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದ್ದಾರೆ. ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, 1ನೇ ತರಗತಿಗೆ ಮಕ್ಕಳನ್ನು ಸೇರಿಸುವ ವಯೋಮಿತಿಯನ್ನು ಸಡಿಲಿಕೆ ಮಾಡಲಾಗಿದೆ. ಈ ಮೂಲಕ ಪೋಷಕರು ವಯೋಮಿತಿ ಬಗ್ಗೆ ಹೊಂದಿದ್ದಂತ ಗೊಂದಲಕ್ಕೆ ತೆರೆ ಎಳೆಯಲಾಗಿದೆ ಎಂದರು. ದೇಶಾಧ್ಯಂತ 1ನೇ ತರಗತಿಗೆ ಮಕ್ಕಳ ದಾಖಲಾಗಿತೆ 6 ವರ್ಷ ಕಡ್ಡಾಯವಿದೆ. ಆದರೇ ಈ ವರ್ಷ ಮಾತ್ರ ಕರ್ನಾಟಕದಲ್ಲಿ ವಯಸ್ಸಿನ ಮಿತಿಯನ್ನು ಸಡಿಲಿಕೆ ಮಾಡಲಾಗುತ್ತಿದೆ. ಈ ವರ್ಷ ಮಾತ್ರ 5 ವರ್ಷ 5 ತಿಂಗಳು ತುಂಬಿದ್ದಂತ ಮಕ್ಕಳನ್ನು 1ನೇ ತರಗತಿಗೆ ದಾಖಲಾತಿ ಮಾಡಬಹುದು ಎಂಬುದಾಗಿ ತಿಳಿಸಿದರು. ಮುಂದಿನ ವರ್ಷದಿಂದ 1ನೇ ತರಗತಿಗೆ ದಾಖಲಾತಿಯಲ್ಲಿ ಯಾವುದೇ ಬದಲಾವಣೆಯಿಲ್ಲ. ದೇಶದಲ್ಲಿ ಇರುವಂತೆಯೇ 1ನೇ ತರಗತಿಗೆ ಶಾಲಾ ಮಕ್ಕಳ ದಾಖಲಾತಿಗೆ 6 ವರ್ಷ ಕಡ್ಡಾಯವೆಂಬ ನಿಯಮ ಜಾರಿಯಲ್ಲಿ ಇರಲಿದೆ ಎಂದರು.…
ಬೆಂಗಳೂರು: ಬೆಂಗಳೂರು ಹವಾಮಾನ ಕ್ರಿಯಾ ಕೋಶ ಫೆಲೋಶಿಪ್ ನ ಎರಡು (02) ಹುದ್ದೆಗಳಿಗೆ ಅರ್ಜಿ ಆಹ್ವಾನಿಸಲಾಗಿದೆ ಎಂದು ಹವಾಮಾನ ಕ್ರಿಯಾ ಕೋಶದ ಅಧ್ಯಕ್ಷರಾದ ಪ್ರೀತಿ ಗೆಹ್ಲೋಟ್ ರವರು ತಿಳಿಸಿದ್ದಾರೆ. ಬೃಹತ್ ಬೆಂಗಳೂರು ಮಹಾನಗರ ಪಾಲಿಕೆಯ ಮುಖ್ಯ ಆಯುಕ್ತರ ಪರವಾಗಿ ಹವಾಮಾನ ಕ್ರಿಯಾ ಕೋಶ (ಸಿಎಸಿ) ದಲ್ಲಿ ಹವಾಮಾನ ಬದಲಾವಣೆ ಮತ್ತು ನಗರ ಆಡಳಿತದ ಬಗ್ಗೆ ಆಸಕ್ತಿ ಹೊಂದಿರುವ ಉಜ್ವಲ ಮನಸ್ಸಿನ ವೃತ್ತಿಪರರಿಂದ ಅರ್ಜಿಗಳನ್ನು ಆಹ್ವಾನಿಸುತ್ತಿದೆ. ಬೆಂಗಳೂರು ಎದುರಿಸುತ್ತಿರುವ ನಿಜ ಜೀವನದ ಸವಾಲುಗಳನ್ನು ಪರಿಹರಿಸಲು ಹೊಸ ದೃಷ್ಟಿಕೋನಗಳು, ಕೌಶಲ್ಯಗಳು ಮತ್ತು ನಾವೀನ್ಯತೆಯನ್ನು ತರಬಲ್ಲ ವ್ಯಕ್ತಿಗಳನ್ನು ತೊಡಗಿಸಿಕೊಳ್ಳಲು ಹವಾಮಾನ ಕ್ರಿಯಾ ಕೋಶವು ಪ್ರಯತ್ನಿಸುತ್ತದೆ. ಈ ಹಿನ್ನೆಲೆಯಲ್ಲಿ, ಈ ಕೆಳಗಿನ ಹುದ್ದೆಗಳಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ: * ಫೆಲೋ- ಎಂ.ಇ.ಆರ್, ಹವಾಮಾನ ಆಯವ್ಯಯ (1 ಹುದ್ದೆ) * ಸಲಹೆಗಾರ – ಸಂವಹನ ಮತ್ತು ಪ್ರಚಾರ (1 ಹುದ್ದೆ) 12 ತಿಂಗಳ ಅವಧಿಯ ಈ ಹುದ್ದೆಗಳಿಗೆ ಆಹ್ವಾನಿಸಲಾಗುತ್ತಿದ್ದು, ತಿಂಗಳಿಗೆ 50,000 ರೂ. ವೇತನವನ್ನು ನೀಡಲಾಗುವುದು. ಆಯ್ಕೆಯಾದ ಅಭ್ಯರ್ಥಿಗಳು ಹವಾಮಾನ…
ಬೆಂಗಳೂರು : ಹುಬ್ಬಳ್ಳಿ ಎನ್ಕೌಂಟರ್ ಪ್ರಕರಣದ ತನಿಖೆಯನ್ನು ಸಿಐಡಿಗೆ ವಹಿಸಲಾಗಿದ್ದು, ತನಿಖೆಯಲ್ಲಿ ಏನು ಬರುತ್ತದೆ ನೋಡೋಣ. ತನಿಖೆಯಲ್ಲಿ ಸತ್ಯಾಂಶ ಹೊರಬರಲಿದೆ ಎಂದು ಗೃಹ ಸಚಿವ ಜಿ.ಪರಮೇಶ್ವರ ಅವರು ಹೇಳಿದರು. ಸದಾಶಿವನಗರದಲ್ಲಿರುವ ಸಚಿವರ ಗೃಹಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು. ಒಕ್ಕಲಿಗ ಸಮುದಾಯದ ಸಭೆ ನಡೆದಿರುವ ಕುರಿತು ಮಾಧ್ಯಮದವರು ಕೇಳಿದ ಪ್ರಶ್ನೆಗೆ ಪ್ರತಿಯಿಸಿದ ಅವರು, ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ನೇತೃತ್ವದಲ್ಲಿ ಒಕ್ಕಲಿಗ ಸಮುದಾಯ ಸಭೆ ನಡೆದಿರುವುದಷ್ಟೆ ಗೊತ್ತು. ಒಳಗಡೆ ಏನೆಲ್ಲ ಚರ್ಚೆಯಾಗಿದೆ ಎಂಬುದು ನಮಗೆ ಮಾಹಿತಿ ಇಲ್ಲ. ಒಕ್ಕಲಿಗ ಸಮುದಾಯವು ತಮಗೆ ಅನ್ಯಾಯ ಆಗಬಾರದು ಎಂಬುದನ್ನು ಪ್ರಸ್ತಾಪ ಮಾಡಿದ್ದಾರೆ. ಇದನ್ನು ಹೊರತುಪಡಿಸಿ ಬೇರೆ ಏನು ಗೊತ್ತಿಲ್ಲ ಎಂದರು. ದಾವಣಗೆರೆಯಲ್ಲಿ ಮುಸ್ಲಿಂ ಮಹಿಳೆ ಮೇಲೆ ಹಲ್ಲೆ ಪ್ರಕರಣವನ್ನು ಸ್ಥಳೀಯ ಪೊಲೀಸರು ಗಮನಿಸುತ್ತಾರೆ. ಕಾನೂನು ಪ್ರಕಾರ ಕ್ರಮ ತೆಗೆದುಕೊಳ್ಳುತ್ತಾರೆ. ಇಂತಹ ಘಟನೆಗಳಾದಾಗ ಯಾವುದೇ ರೀತಿಯ ಮುಲಾಜಿಲ್ಲದೆ ಕಾನೂನಿನ ಚೌಕಟ್ಟಿನಲ್ಲಿ ಕಠಿಣವಾದ ಕ್ರಮ ತೆಗೆದುಕೊಳ್ಳುವಂತೆ ಈಗಾಗಲೇ ಸೂಚಿಸಿದ್ದೇನೆ. ಆ ನಿಟ್ಟಿನಲ್ಲಿ ಕೆಲಸ ಮಾಡುತ್ತಿದ್ದಾರೆ. ಅತ್ಯಾಚಾರ, ಮಹಿಳೆಯರ ಮೇಲೆ ಹಲ್ಲೆ…
ಕಲ್ಬುರ್ಗಿ : ವರ್ಷಕ್ಕೆ 2 ಕೋಟಿ ಉದ್ಯೋಗ ಕೊಡ್ತೀನಿ ಅಂದಿದ್ದ ಮೋದಿ 10 ವರ್ಷದಲ್ಲಿ 20 ಕೋಟಿ ಉದ್ಯೋಗ ಕೊಡಬೇಕಿತ್ತು. ಆದರೆ 20 ಲಕ್ಷ ಉದ್ಯೋಗವನ್ನೂ ಕೊಡದೆ ಪರಮ ಸುಳ್ಳು ಹೇಳಿ ಯುವ ಜನರನ್ನು ವಂಚಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಸಮಾಧನ ವ್ಯಕ್ತಪಡಿಸಿದರು. ಕಲ್ಯಾಣ ಕರ್ನಾಟಕದ ಜಿಲ್ಲೆಗಳ ಯುವಕ ಯುವತಿಯರಿಗೆ ಆಯೋಜಿಸಿದ್ದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಯುವ ಪದವೀಧರರಿಗೆ ನೇಮಕಾತಿ ಪತ್ರವನ್ನು ವಿತರಿಸಿ ಮಾತನಾಡಿದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಆದರೆ, ನಾವು ನುಡಿದಂತೆ ನಡೆಯುತ್ತಾ ಐದೂ ಗ್ಯಾರಂಟಿಗಳನ್ನು ಜಾರಿ ಮಾಡಿದೆವು. ಇದರಲ್ಲಿ ಯುವ ನಿಧಿ ಕಾರ್ಯಕ್ರಮ ಕೂಡ ಸೇರಿದೆ. ಭತ್ಯೆ ಜೊತೆಗೆ ಕೌಶಲ್ಯ ತರಬೇತಿ ನೀಡಿ ಉದ್ಯೋಗವನ್ನೂ ಒದಗಿಸುತ್ತಿದ್ದೇವೆ ಎಂದರು. ಮಾರುಕಟ್ಟೆ ಆಧಾರಿತ ಕೌಶಲ್ಯ ನೀಡಿ ಉದ್ಯೋಗ ಸೃಜಿಸಲು ಸಚಿವ ಶರಣ ಪ್ರಕಾಶ್…
ಕಲಬುರ್ಗಿ : ಉದ್ಯೋಗ ಮೇಳಗಳನ್ನು ಏರ್ಪಡಿಸುವ ಮೂಲಕ ಯುವಜನತೆಗೆ ಉದ್ಯೋಗ ನೀಡುವುದು ನಮ್ಮ ಸರ್ಕಾರದ ಬದ್ಧತೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕಲ್ಬುರ್ಗಿ ವಿಮಾನ ನಿಲ್ದಾಣದಲ್ಲಿ ಮಾಧ್ಯಮದವರ ಜೊತೆ ಮಾತನಾಡಿದರು. ವಿಭಾಗೀಯ ಮಟ್ಟದ ಉದ್ಯೋಗ ಮೇಳವನ್ನು ಕಲಬುರ್ಗಿಯಲ್ಲಿ ಇಂದು ಏರ್ಪಡಿಸಲಾಗಿದೆ. ಮೈಸೂರು ಹಾಗು ಹುಬ್ಬಳ್ಳಿ, ಧಾರವಾಡದಲ್ಲಿಯೂ ಉದ್ಯೋಗ ಮೇಳವನ್ನು ಏರ್ಪಡಿಸಲಾಗುತ್ತಿದೆ. ಯುವನಿಧಿ ಯೋಜನೆಯನ್ನು ಜಾರಿ ಮಾಡಿದ್ದು, ನಿರುದ್ಯೋಗದ ಸಮಸ್ಯೆ ನಿವಾರಣೆಯ ಉದ್ದೇಶವಿದೆ. ಉದ್ಯೋಗವನ್ನು ಕೊಡುವ ಕೆಲಸವನ್ನು ಸರ್ಕಾರ ಮಾಡುತ್ತಿದೆ ಎಂದರು. ಜಾತಿ ಸಾಮಾಜಿಕ ಸಮೀಕ್ಷೆ: ಯಾವ ಸಮುದಾಯದವರಿಗೂ ಅನ್ಯಾಯವಾಗಲು ನಾವು ಬಿಡುವುದಿಲ್ಲ ಚನ್ನಗಿರಿ ಶಾಸಕರು ಜಾತಿ ಗಣತಿ ಬಗ್ಗೆ ಲಿಂಗಾಯತ ಶಾಸಕರು ರಾಜಿನಾಮೆ ನೀಡುವಂತೆ ಹೇಳಿಕೆ ನೀಡಿರುವ ಬಗ್ಗೆ ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿ ನಾಳೆ ಸಾಮಾಜಿಕ, ಆರ್ಥಿಕ ಸಮೀಕ್ಷೆಯ ಕುರಿತು ಪ್ರತ್ಯೇಕವಾಗಿ ಸಚಿವ ಸಂಪುಟ ಸಭೆಯನ್ನು ಕರೆಯಲಾಗಿದ್ದು, ಈ ಬಗ್ಗೆ ಚರ್ಚೆ ಮಾಡಲಾಗುವುದು ಎಂದರು. ಶಾಸಕರು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ. ನಾಳೆ ಅಂತಿಮವಾಗಿ ತೀರ್ಮಾನ ಮಾಡಲಾಗುವುದು ಎಂದರು. ಸಾಮಾಜಿಕ,…
ಬೆಂಗಳೂರು: 160 ಕೆಜಿ ತೂಕ ಹೊಂದಿದ್ದ 35 ವರ್ಷದ ವ್ಯಕ್ತಿಗೆ “ರೋಬೋಟ್-ನೆರವಿನ ಬಾರಿಯಾಟ್ರಿಕ್ ಶಸ್ತ್ರಚಿಕಿತ್ಸೆ ನಡೆಸಿದ್ದು, ಬಳಿಕ ಬರೋಬ್ಬರಿ 48 ಕೆ.ಜಿ. ತೂಕ ಕಳೆದುಕೊಂಡಿದ್ದಾರೆ. ಫೋರ್ಟಿಸ್ ಆಸ್ಪತ್ರೆಯ ಸರ್ಜಿಕಲ್ ಗ್ಯಾಸ್ಟ್ರೋಎಂಟರಾಲಜಿ, ಬಾರಿಯಾಟ್ರಿಕ್ ಮತ್ತು ರೊಬೊಟಿಕ್ ಸರ್ಜರಿ ಹೆಚ್ಚುವರಿ ನಿರ್ದೇಶಕ ಡಾ. ಮನೀಶ್ ಜೋಶಿ ಅವರ ತಂಡವು ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ. ಈ ವೇಳೆ ಮಾತನಾಡಿದ ಡಾ. ಮನೀಶ್ ಜೋಶಿ, ಬೆಂಗಳೂರು ಮೂಲದ 35 ವರ್ಷದ ಸೂರಜ್ ಎಂಬ ವ್ಯಕ್ತಿ ಕಳೆದ ಐದು ವರ್ಷಗಳಿಂದ ಅತಿಯಾದ ಸ್ಥೂಲಕಾಯತೆ ಹೊಂದಿದ್ದು, ಇದರಿಂದ ಆತನಿಗೆ ಸ್ಲೀಪ್ ಅಪ್ನಿಯಾ(ನಿದ್ರೆಯಲ್ಲಿ ಉಸಿರುಗಟ್ಟುವಿಕೆ) ಸಮಸ್ಯೆಗೆ ಒಳಗಾಗಿದ್ದರು. ಕೋವಿಡ್ ಸಾಂಕ್ರಮಿಕದ ಬಳಿಕ ಇವರ ಅತಿಯಾದ ತೂಕದಿಂದ ನಡೆಯಲೂ ಸಾಧ್ಯವಾಗದೇ ಬಿಪ್ಯಾಪ್(BIPAP) ಯಂತ್ರದ ಮೇಲೆ ಅವಲಂಬಿತರಾಗಿದ್ದರು. ಈ ಯಂತ್ರವು ನಿದ್ರೆ ಸಂದರ್ಭದಲ್ಲಿ ಸರಾಗವಾಗಿ ಉಸಿರಾಡಲು ಅನುವು ಮಾಡಿಕೊಡುತ್ತದೆ. ಇದಷ್ಟೇ ಅಲ್ಲದೆ, ಇವರ ಅತಿಯಾದ ತೂಕವು ಇವರ ದೈನಂದಿನ ಕೆಲಸಕಾರ್ಯಗಳಿಗೂ ಅಡ್ಡಿಯಾಗಿ, ನಿರಂತರ ಆಯಾಸ, ಉಸಿರಾಟ ಮತ್ತು ನಡೆಯಲು ತೊಂದರೆ, ಅನಿಯಮಿತ ನಿದ್ರೆಯ…
ಬೆಳಗಾವಿ: ಡಾ. ಬಾಬಾಸಾಹೇಬ ಅಂಬೇಡ್ಕರರ ಹೆಸರಿನ ಪ್ರಶಸ್ತಿ ಕೊಡುವುದರಲ್ಲಿ ಭ್ರಷ್ಟಾಚಾರ ನಡೆದಿದೆ; ಹಣ ವಸೂಲಿ ಮಾಡಿದ್ದಾರೆ ಎಂದು ಸಾಹಿತಿಯೊಬ್ಬರು ಹೇಳಿದ್ದಾರೆ. ರಾಜ್ಯದಲ್ಲಿರುವುದು ನಾಚಿಕೆ ಪಡುವಂಥ ಸರಕಾರ ಎಂದು ಮಾಜಿ ಮುಖ್ಯಮಂತ್ರಿ ಮತ್ತು ಸಂಸದ ಜಗದೀಶ್ ಶೆಟ್ಟರ್ ಅವರು ಟೀಕಿಸಿದ್ದಾರೆ. ಇಲ್ಲಿ ಇಂದು ನಡೆದ ಜನಾಕ್ರೋಶ ಯಾತ್ರೆ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಬಿಜೆಪಿ ನಮ್ಮ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಅವರ ನೇತೃತ್ವದಲ್ಲಿ ಹೋರಾಟ ಮಾಡುತ್ತಿದೆ. ಎಲ್ಲ ಕಡೆ ಜನಾಕ್ರೋಶ ಹೆಚ್ಚಾಗಿದೆ. 2028ರಲ್ಲಿ ಕಾಂಗ್ರೆಸ್ ಪಕ್ಷ ಮನೆಗೆ ಹೋಗುವುದು ನಿಶ್ಚಿತ. ಬಿಜೆಪಿ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಇವತ್ತು ಅಭಿವೃದ್ಧಿ ಕೆಲಸ ಕಾರ್ಯಗಳಿಲ್ಲ. ಎಲ್ಲವೂ ನಿಂತು ಹೋಗಿವೆ. ಕೇವಲ ಭ್ರಷ್ಟಾಚಾರದ ಸರಕಾರವಿದು. ರಾಜಕೀಯದಲ್ಲಿ ತಮ್ಮ ಕೊನೆಯ ಹಂತದ ಕ್ಷಣಗಳೆಂದು ಸಿದ್ದರಾಮಯ್ಯನವರು ಭಾವಿಸಿರಬೇಕು. ಡಿಕೆ ಶಿವಕುಮಾರ್ ಕಾದುಕೊಂಡು ನಿಂತಿದ್ದಾರೆ. ಇನ್ನು ನವೆಂಬರೋ, ಡಿಸೆಂಬರೋ ಎಂದು ಸಿದ್ದರಾಮಯ್ಯನವರಿಗೆ ಕನಸು ಬೀಳುತ್ತಿರಬೇಕು ಎಂದು ವ್ಯಂಗ್ಯವಾಡಿದರು. ಕಾಂಗ್ರೆಸ್ಸಿನಲ್ಲಿ ಒಳಜಗಳ, ಪ್ರಾಕ್ಸಿ ಯುದ್ಧ ನಡೆದಿದೆ. ಸಿದ್ದರಾಮಯ್ಯರನ್ನು ಇಳಿಸಬೇಕೆಂದು ಕೆಲವರು,…
ಬೆಳಗಾವಿ: ಮಾನ್ಯ ಸಿದ್ದರಾಮಯ್ಯನವರೇ, ಬಾಬಾ ಸಾಹೇಬ ಅಂಬೇಡ್ಕರರನ್ನು ಸಾವರ್ಕರ್ ಸೋಲಿಸಿದ್ದಾಗಿ ಋಜುವಾತು ಪಡಿಸಿದರೆ ನನ್ನ ವಿಪಕ್ಷ ಸ್ಥಾನಕ್ಕೆ ಇವತ್ತೇ ರಾಜೀನಾಮೆ ಕೊಡುತ್ತೇನೆ ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಸವಾಲು ಹಾಕಿದರು. ಇಲ್ಲಿ ಇಂದು ನಡೆದ ಜನಾಕ್ರೋಶ ಯಾತ್ರೆ ಸಭೆಯಲ್ಲಿ ಮಾತನಾಡಿದ ಅವರು, ಆ ಸುಳ್ಳನ್ನು ನೀವು ಸಾಬೀತು ಮಾಡದಿದ್ದರೆ ನೀವು ಸಿಎಂ ಸ್ಥಾನಕ್ಕೆ ರಾಜೀನಾಮೆ ಕೊಡಲು ಸಿದ್ಧರಾಗಿ ಎಂದು ಆಗ್ರಹಿಸಿದರು. ನಿಮಗೆ ವಯಸ್ಸೂ ಆಗಿದೆ. ಎಲ್ಲ ಪದವಿ ಅನುಭವಿಸಿದ್ದೀರಿ. ಇದಕ್ಕಿಂತ ಹೆಚ್ಚಿನ ಪದವಿ ನಿಮಗೆ ಕಾಂಗ್ರೆಸ್ಸಿನಲ್ಲಿ ಸಿಗಲಾರದು ಎಂದು ತಿಳಿಸಿದರು. ನನಗೆ ಮೊದಲು ಆತ್ಮೀಯರಾಗಿದ್ದ ಸಿದ್ದರಾಮಯ್ಯನವರು ಈ ಹಿಂದೆ ಇಷ್ಟು ಸುಳ್ಳು ಹೇಳುತ್ತಿರಲಿಲ್ಲ; ಈಗ ಅವರನ್ನು ಪ್ರಶ್ನಿಸಿದರೆ ಹೇಗಾದರೂ ಮಾಡಿ ಅಧಿಕಾರದಲ್ಲಿ ಇರಬೇಕಲ್ಲಪ್ಪ; ಕಾಂಗ್ರೆಸ್ನವರು ಸುಳ್ಳು ಹೇಳದಿದ್ರೆ ಬಿಡ್ತಾರ ಎನ್ನುತ್ತಾರೆ ಎಂಬಂತೆ ಮಾತನಾಡುತ್ತಿದ್ದಾರೆ ಎಂದು ಟೀಕಿಸಿದರು. ಬಾಬಾ ಸಾಹೇಬ ಅಂಬೇಡ್ಕರರನ್ನು ಚುನಾವಣೆಯಲ್ಲಿ ಸೋಲಿಸಿದ್ದು ಸಾವರ್ಕರ್ ಎಂಬುದಾಗಿ ಬಾಬಾ ಸಾಹೇಬರೇ ಬರೆದಿದ್ದಾರೆ ಎಂದು ಸಿದ್ದರಾಮಯ್ಯನವರು ಹೇಳಿದ್ದಾರೆ. ಇದಕ್ಕಿಂತ ಅಪ್ಪಟ…
ಬೆಳಗಾವಿ: ಜಿಲ್ಲೆಯಲ್ಲಿ ಮಣ್ಣು ಕುಸಿದು ಇಬ್ಬರು ಕಾರ್ಮಿಕರು ಧಾರುಣವಾಗಿ ಸಾವನ್ನಪ್ಪಿರುವಂತ ಘಟನೆ ನಡೆದಿದೆ. ಬೆಳಗಾವಿ ಜಿಲ್ಲೆಯ ಕನಕದಾಸ ಸರ್ಕಲ್ ನಲ್ಲಿ ಕುಡಿಯುವ ನೀರಿನ ಯೋಜನೆಗಾಗಿ ಕಾಮಗಾರಿಯನ್ನು ನಡೆಸಲಾಗುತ್ತಿತ್ತು. ಈ ಕಾಮಗಾರಿಯಲ್ಲಿ ಕಾರ್ಮಿಕರು ನಿರತರಾಗಿದ್ದರು. ಕುಡಿಯುವ ನೀರಿನ ಕಾಮಗಾರಿಯ ವೇಳೆಯಲ್ಲಿ ದಿಢೀರ್ ಮಣ್ಣು ಕುಸಿದ ಪರಿಣಾಮ ಅದರಡಿ ಸಿಲುಕಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದಾರೆ. ಮೃತ ಕಾರ್ಮಿಕರನ್ನು ಶಿವಲಿಂಗ, ಬಸವರಾಜ್ ಎಂಬುದಾಗಿ ಗುರುತಿಸಲಾಗಿದೆ. ಈ ಸಂಬಂಧ ಬೆಳಗಾವಿಯ ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.











