Author: kannadanewsnow09

ಬೆಂಗಳೂರು: ರೈಲ್ವೆ ಪ್ರಯಾಣಿಕರಿಗೆ ಗುಡ್ ನ್ಯೂಸ್ ಎನ್ನುವಂತೆ ಬೆಂಗಳೂರು – ಹೊಸಪೇಟೆ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕ ನಿಲುಗಡೆ ಮಾಡಲಾಗುತ್ತಿದೆ. ಪ್ರಯಾಣಿಕರ ಅನುಕೂಲಕ್ಕಾಗಿ, ನೈಋತ್ಯ ರೈಲ್ವೆಯು ರೈಲು ಸಂಖ್ಯೆ 56519/56520 ಕೆಎಸ್ಆರ್ ಬೆಂಗಳೂರು – ಹೊಸಪೇಟೆ – ಕೆಎಸ್ಆರ್ ಬೆಂಗಳೂರು ದೈನಂದಿನ ಪ್ಯಾಸೆಂಜರ್ ರೈಲಿಗೆ ಹೊಳಲ್ಕೆರೆ ಮತ್ತು ಅಮೃತಾಪುರ ನಿಲ್ದಾಣಗಳಲ್ಲಿ ತಾತ್ಕಾಲಿಕವಾಗಿ ಒಂದು ನಿಮಿಷದ ನಿಲುಗಡೆಯನ್ನು ಕಲ್ಪಿಸಲು ನಿರ್ಧರಿಸಿದೆ. ಈ ಸೌಲಭ್ಯವು ಪ್ರಾಯೋಗಿಕವಾಗಿ ಮೂರು ತಿಂಗಳ ಅವಧಿಗೆ ಅಂದರೆ 2025ರ ಏಪ್ರಿಲ್ 18 ರಿಂದ ಜುಲೈ 17 ರವರೆಗೆ ಲಭ್ಯವಿರುತ್ತದೆ. ಈ ರೈಲುಗಳ ಆಗಮನ/ನಿರ್ಗಮನ ಸಮಯವು ಈ ಕೆಳಗಿನಂತಿರುತ್ತದೆ: ರೈಲು ಸಂಖ್ಯೆ 56519 ಕೆಎಸ್ಆರ್ ಬೆಂಗಳೂರು – ಹೊಸಪೇಟೆ ದೈನಂದಿನ ಪ್ಯಾಸೆಂಜರ್ ರೈಲು ಹೊಳಲ್ಕೆರೆಗೆ ಬೆಳಿಗ್ಗೆ 09:57 ಗಂಟೆಗೆ ಆಗಮಿಸಿ 09:58 ಗಂಟೆಗೆ ನಿರ್ಗಮಿಸಲಿದೆ. ನಂತರ ಅಮೃತಾಪುರಕ್ಕೆ ಬೆಳಿಗ್ಗೆ 10:30 ಗಂಟೆಗೆ ಆಗಮಿಸಿ 10:31 ಗಂಟೆಗೆ ನಿರ್ಗಮಿಸಲಿದೆ. ಹಿಂತಿರುಗುವ ಮಾರ್ಗದಲ್ಲಿ, ರೈಲು ಸಂಖ್ಯೆ 56520 ಹೊಸಪೇಟೆ –…

Read More

ಬೆಂಗಳೂರು: ಇಂದಿನ ಜಾತಿಗಣತಿ ವರದಿ ಸಂಬಂಧ ನಡೆದಂತ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಯಾವುದೇ ತೀರ್ಮಾನ ಆಗಿಲ್ಲ. ಎಲ್ಲಾ ಸಚಿವರು ಅಭಿಪ್ರಾಯ ತಿಳಿಸುವಂತೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಿಳಿಸಿದ್ದಾರೆ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. ಇಂದಿನ ವಿಶೇಷ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು, ಜಾತಿಗಣತಿ ವರದಿಯ ಬಗ್ಗೆ ಸಚಿವರು ತಮ್ಮ ಅಭಿಪ್ರಾಯ ತಿಳಿಸುವಂತೆ ಸಿಎಂ ಸೂಚಿಸಿದ್ದಾರೆ. ಮೌಖಿಕವಾಗಿ ನೀಡಬಹುದು ಅಥವಾ ಲಿಖಿತವಾಗಿ ನೀಡಬಹುದಾಗಿದೆ. ಸಚಿವರು ಅಭಿಪ್ರಾಯವನ್ನು ಇಂದು ಅಥವಾ ನಾಳೆ ನೀಡಬಹುದು ಎಂದರು. ಇಂದಿನ ವಿಶೇಷ ಸಚಿವ ಸಂಪುಟ ಸಭೆಯಲ್ಲಿ ಜಾತಿಗಣತಿ ವರದಿಯ ಬಗ್ಗೆ ಚರ್ಚೆಯಾಗಿದೆ. ಆದರೇ ಯಾವುದೇ ತೀರ್ಮಾನ ಆಗಿಲ್ಲ. ಮುಂದಿನ ಸಚಿವ ಸಂಪುಟ ಸಭೆಯಲ್ಲಿ ತೀರ್ಮಾನ ಆಗಲಿದೆ. ಮುಂದಿನ ಕ್ಯಾಬಿನೆಟ್ ನಲ್ಲಿ ಏನಾಗುತ್ತೋ ಗೊತ್ತಿಲ್ಲ ಅಂತ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದರು. https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/ https://kannadanewsnow.com/kannada/breaking-two-killed-two-others-seriously-injured-in-road-accident-in-dharwad/

Read More

ಬೆಂಗಳೂರು: ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ಜಾತಿಗಣತಿ ವರದಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯಿತು. ಈ ಸಭೆಯಲ್ಲಿ ಜಾತಿಗಣತಿ ವರದಿ ಬಗ್ಗೆ ಮಹತ್ವದ ಚರ್ಚೆ ನಡೆಸಲಾಯಿತು. ಅಂತಿಮವಾಗಿ ಯಾವುದೇ ತೀರ್ಮಾನ ಕೈಗೊಳ್ಳದೇ ಮುಂದಿನ ಸಭೆಯಲ್ಲಿ ಚರ್ಚೆಗೆ ಇರಿಸಿ ಅಂತ್ಯಗೊಂಡಿರೋದಾಗಿ ತಿಳಿದು ಬಂದಿದೆ. ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ವಿಶೇಷ ಸಚಿವ ಸಂಪುಟ ಸಭೆ ವಿಧಾನಸೌಧದಲ್ಲಿ ನಡೆಯಿತು. ಸಂಪುಟ ಸಭೆಯ ಮುಂದೆ 6 ಪುಟಗಳ ಟಿಪ್ಪಣಿಯನ್ನು ಆಯೋಗದ ಶಿಫಾರಸ್ಸುಗಳನ್ನು ಒಳಗೊಂಡು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೀಡಿತು. ಜಾತಿಗಣತಿ ವರದಿಯಲ್ಲಿರುವ ಶಿಫಾರಸ್ಸುಗಳ ಪ್ರಸ್ತಾವನೆಯನ್ನು ಸಲ್ಲಿಸಲಾಯಿತು. ಈಗಿರುವ ಒಬಿಸಿ ಮೀಸಲಾತಿ ಪ್ರಮಾಣ ಹೆಚ್ಚಳ ಮಾಡಬೇಕು. ಒಬಿಸಿ ಮೀಸಲಾತಿ ಪ್ರಮಾಣ ಶೇ.32ರಿಂದ 51ಕ್ಕೆ ಹೆಚ್ಚಿಸಬೇಕು ಅಂತ ಹಿಂದುಳಿದ ವರ್ಗಗಗಳ ಕಲ್ಯಾಣ ಇಲಾಖೆಯಿಂದ ವಿಶೇಷ ಸಚಿವ ಸಂಪುಟಕ್ಕೆ ಪ್ರಸ್ತಾವನೆ ಮಂಡನೆ ಮಾಡಲಾಯಿತು. ತಮಿಳುನಾಡಿನಲ್ಲಿ ಒಬಿಸಿ ಮೀಸಲಾತಿ ಶೇಕಡಾ 69ರಷ್ಟಿದೆ. ಜಾರ್ಖಂಡ್ ನಲ್ಲಿ ಹಿಂದುಳಿದ ವರ್ಗಕ್ಕೆ ಶೇ.77ರಷ್ಟು ಮೀಸಲಾತಿ ಇದೆ. ಆ ರಾಜ್ಯಗಳಂತೆ ನಮ್ಮ ರಾಜ್ಯದಲ್ಲೂ ಒಬಿಸಿ…

Read More

ಬೆಂಗಳೂರು: ಜಲಜೀವನ್ ಮಿಷನ್, ಸ್ವಚ್ಛ ಭಾರತ್ ಮಿಷನ್ ಮತ್ತು WQMS ಶಾಖೆ ಅಡಿ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸುತ್ತಿರುವ ಸಿಬಬಂದಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ಈ ಸಿಬ್ಬಂದಿಗಳ ಮಾಸಿಕ ಸಂಭಾವನೆಯನ್ನು ಪರಿಷ್ಕರಿಸಿ ಆದೇಶಿಸಿದೆ. ಈ ಕುರಿತಂತೆ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ನಿರ್ದೇಶಕರು, ಎಲ್ಲಾ ಜಿಲ್ಲಾಪಂಚಾಯ್ತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಪತ್ರದಲ್ಲಿ ಮಾಹಿತಿ ನೀಡಿದ್ದಾರೆ. ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯಡಿಯಲ್ಲಿ ಜಲ ಜೀವನ್ ಮಿಷನ್, ಸ್ವಚ್ಚ ಭಾರತ ಮಿಷನ್ (ಗ್ರಾ) ಯೋಜನೆಗಳಡಿ ಜಿಲ್ಲಾ ಮಟ್ಟದಲ್ಲಿ ಮತ್ತು WQMS ಶಾಖೆ ಅಡಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಪ್ರಯೋಗಾಲಯಗಳಲ್ಲಿ ಹಾಗೂ ಕೇಂದ್ರ ಕಛೇರಿಯಲ್ಲಿ ಗುತ್ತಿಗೆ/ಹೊರ ಗುತ್ತಿಗೆ ಆಧಾರದ ಮೇಲೆ ಮಾನವ ಸಂಪನ್ಮೂಲ ಸಂಸ್ಥೆಗಳ ಮೂಲಕ ಸಮಾಲೋಚಕರುಗಳು/ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿರುತ್ತಾರೆ. ಸದರಿ ಸಿಬ್ಬಂದಿಗಳಿಗೆ ಕಳೆದ ಮೂರು ವರ್ಷಗಳಿಂದ ಮಾಸಿಕ ಸೇವಾ ಶುಲ್ಕ ಪಾವತಿ ಪರಿಷ್ಕರಣೆಯಾಗಿರುವುದಿಲ್ಲವೆಂದು, ಮಾಸಿಕ ಸೇವಾ ಶುಲ್ಕ ಪರಿಷ್ಕರಿಸಲು ಉಲ್ಲೇಖ- ರಂತೆ ಮನವಿ ಪತ್ರಗಳನ್ನು ಸಲ್ಲಿಸಿರುತ್ತಾರೆ.…

Read More

ನವದೆಹಲಿ: ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜಂಟಿ ಪ್ರವೇಶ ಪರೀಕ್ಷೆ (ಮುಖ್ಯ) – 2025 (ಸೆಷನ್ 2) ಕೀ ಉತ್ತರಗಳನ್ನು ಬಿಡುಗಡೆ ಮಾಡಿದೆ. ಜೆಇಇ ಮೇನ್ 2025 ಸೆಷನ್ 2 ಪರೀಕ್ಷೆ ತೆಗೆದುಕೊಂಡ ಅಭ್ಯರ್ಥಿಗಳು ಅಂತಿಮ ಕೀ ಉತ್ತರಗಳನ್ನು ಅಧಿಕೃತ ವೆಬ್ಸೈಟ್ jeemain.nta.ac.in ರಿಂದ ಡೌನ್ಲೋಡ್ ಮಾಡಬಹುದು. ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್ಟಿಎ) ಜೆಇಇ ಮೇನ್ 2025 ಸೆಷನ್ 2 ಅನ್ನು ಏಪ್ರಿಲ್ 2, 3, 4, 7 ಮತ್ತು 8 ರಂದು ಪೇಪರ್ 1 ಬಿಇ / ಬಿಟೆಕ್ಗಾಗಿ ಮತ್ತು ಏಪ್ರಿಲ್ 9 ರಂದು ಪೇಪರ್ 2 ಎ: ಬಿಆರ್ಕ್ ಮತ್ತು ಪೇಪರ್ 2 ಬಿ: ಬಿ: ಬಿ.ಪ್ಲಾನಿಂಗ್ಗಾಗಿ ದೇಶಾದ್ಯಂತ 285 ನಗರಗಳಲ್ಲಿ ಮತ್ತು ಭಾರತದ ಹೊರಗಿನ 15 ನಗರಗಳಲ್ಲಿ 531 ಕೇಂದ್ರಗಳಲ್ಲಿ ನಡೆಸಿತು. ತಾತ್ಕಾಲಿಕ ಕೀ ಉತ್ತರಗಳನ್ನು ಏಪ್ರಿಲ್ 11 ರಂದು ಬಿಡುಗಡೆ ಮಾಡಲಾಗಿದ್ದು, ಆಕ್ಷೇಪಣೆ ಸಲ್ಲಿಸಲು ಏಪ್ರಿಲ್ 13 ಕೊನೆಯ ದಿನವಾಗಿದೆ. ಅಭ್ಯರ್ಥಿಗಳು ಸ್ವೀಕರಿಸಿದ ಪ್ರಾತಿನಿಧ್ಯಗಳು /…

Read More

ಬೆಂಗಳೂರು: 384 ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳ ನೇಮಕಾತಿಗಾಗಿ ಪೂರ್ವಭಾವಿ ಪರೀಕ್ಷೆಯ ನಂತ್ರ ಮುಖ್ಯ ಪರೀಕ್ಷೆಗೆ ಕೆಪಿಎಸ್ಸಿಯಿಂದ ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಲೋಕಸೇವಾ ಆಯೋಗದಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2023-24ನೇ ಸಾಲಿನ ಗೆಜೆಟೆಡ್ ಪ್ರೊಬೇಷನರಿ ಗ್ರೂಪ್-ಎ ಹಾಗೂ ಗ್ರೂಪ್-ಬಿ ವೃಂದದ 384 ಹುದ್ದೆಗಳ ನೇಮಕಾತಿಗಾಗಿ ಈಗಾಗಲೇ ಪೂರ್ವಭಾವಿ ಪರೀಕ್ಷೆಯನ್ನು ನಡೆಸಲಾಗಿತ್ತು ಎಂದಿದೆ. ಕೆಎಎಸ್ ಹುದ್ದೆಗಳ ಪೂರ್ವಭಾವಿ ಪರೀಕ್ಷೆಯ ಬಳಿಕ ಮುಖ್ಯಪರೀಕ್ಷೆಯನ್ನು ಮೇ.3, 5, 7 ಮತ್ತು 9ರಂದು ನಡೆಸಲು ನಿರ್ಧರಿಸಿರುವುದಾಗಿ ತಿಳಿಸಿದೆ. ಇನ್ನೂ ಅರ್ಹತಾ ಪರೀಕ್ಷೆ ಕನ್ನಡ ಮೇ.3ರಂದು ಬೆಳಿಗ್ಗೆ 10ರಿಂದ 12 ಗಂಟೆಯವರೆಗೆ ನಡೆಸಲಾಗುತ್ತದೆ. ಇಂಗ್ಲೀಷ್ ಪರೀಕ್ಷೆಯನ್ನು ಮೇ.3ರ ಮಧ್ಯಾಹ್ನ 2ರಿಂದ 4 ಗಂಟೆಯವರೆಗೆ ನಡೆಸಲಾಗುತ್ತಿದೆ ಎಂದಿದೆ. ಮೇ.5ರಂದು ಪತ್ರಿಕೆ-1ರ ಪ್ರಬಂಧ ವಿಷಯಕ್ಕೆ ಸಂಬಂಧಿಸಿದಂತ ಪರೀಕ್ಷೆಯು ಬೆಳಿಗ್ಗೆ 10ರಿಂದ 1 ಗಂಟೆಯವರೆಗೆ ನಡೆಯಲಿದೆ. ಪತ್ರಿಕೆ-2ರ ಸಾಮಾನ್ಯ ಅಧ್ಯಯನ-1ರ ಪರೀಕ್ಷೆಯೂ ಮೇ.7ರಂದು ಬೆಳಿಗ್ಗೆ 9ರಿಂದ 12ರವರೆಗೆ ನಡೆಯಲಿದೆ. ಪತ್ರಿಕೆ-3ರ ಸಾಮಾನ್ಯ ಅಧ್ಯಯನ-2 ಪರೀಕ್ಷೆಯು ಮೇ.7ರಂದು ಮಧ್ಯಾಹ್ನ 2ರಿಂದ 5ರವರೆಗೆ…

Read More

ರಾಂಚಿ: ಖ್ಯಾತ ಬರಹಗಾರ್ತಿ ಮತ್ತು ಬುಡಕಟ್ಟು ಹಕ್ಕುಗಳ ಕಾರ್ಯಕರ್ತೆ ರೋಸ್ ಕೆರ್ಕೆಟ್ಟಾ ಗುರುವಾರ ಇಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ. ಸಾಂಕ್ರಾಮಿಕ ಹಂತದಲ್ಲಿ ಕೋವಿಡ್ -19 ಸೋಂಕಿಗೆ ಒಳಗಾದ ನಂತರ 85 ವರ್ಷದ ಕೆರ್ಕೆಟ್ಟಾ ವಿವಿಧ ಕಾಯಿಲೆಗಳಿಂದ ಬಳಲುತ್ತಿದ್ದರು. ಅವರು ಮಗ ಸೋನಾಲ್ ಪ್ರಭಂಜನ್ ಮತ್ತು ಮಗಳು ವಂದನಾ ಟೆಟೆ ಅವರನ್ನು ಅಗಲಿದ್ದಾರೆ. ನನ್ನ ತಾಯಿ ಬೆಳಿಗ್ಗೆ 10.30 ರ ಸುಮಾರಿಗೆ ನಿಧನರಾದರು. ಅವರು 2023 ರಿಂದ ಹಾಸಿಗೆ ಹಿಡಿದಿದ್ದರು ಮತ್ತು ಕಳೆದ 10 ದಿನಗಳಿಂದ ಆಹಾರ ಸೇವಿಸುವುದನ್ನು  ಬಹುತೇಕ ನಿಲ್ಲಿಸಿದ್ದರು ಎಂದು ಟೆಟೆ ಪಿಟಿಐಗೆ ತಿಳಿಸಿದ್ದಾರೆ. ಕೆರ್ಕೆಟ್ಟಾ ಅವರ ಕಥಾಸಂಕಲನ ‘ಪಾಘಾ ಜೋರಿ-ಜೋರಿ ರೆ ಘಟೋ’ ಅವರ ಜನಪ್ರಿಯ ಸಾಹಿತ್ಯ ರಚನೆಗಳಲ್ಲಿ ಒಂದಾಗಿದೆ. ಹಿಂದಿ ಮತ್ತು ಖಾರಿಯಾ ಭಾಷೆಗಳನ್ನು ಶ್ರೀಮಂತಗೊಳಿಸಿದ ಕೀರ್ತಿ ಅವರಿಗೆ ಸಲ್ಲುತ್ತದೆ. ಕೆರ್ಕೆಟ್ಟಾ ಪ್ರೇಮ್ ಚಂದ್ ಅವರ ಕಥೆಗಳನ್ನು ಖರಿಯಾ ಭಾಷೆಗೆ ಅನುವಾದಿಸಿದರು. ಜಾರ್ಖಂಡ್ನ ಸಿಮ್ಡೆಗಾ ಜಿಲ್ಲೆಯಲ್ಲಿ ಜನಿಸಿದ ಕೆರ್ಕೆಟ್ಟಾ, ರಾಂಚಿಗೆ ಬರುವ ಮೊದಲು ಹಿಂದಿ…

Read More

ಬೆಂಗಳೂರು: ರಾಜ್ಯ ಸರ್ಕಾರದಿಂದ ಗುಡ್ ಪ್ರೈಡೇ, ಹೋಲಿ ಸಾಟರ್ಡೇ ಮತ್ತು ಈಸ್ಟರ್ ಸಂಡೇ ದಿನಗಳಂದು ಮೌಲ್ಯಮಾಪನ ಕಾರ್ಯದಿಂದ ಶಿಕ್ಷಕರಿಗೆ ವಿನಾಯಿತಿ ನೀಡಿ ಆದೇಶಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ನಿರ್ದೇಶಕರು ರಾಜ್ಯದ ಎಲ್ಲಾ ಜಿಲ್ಲಾ ಉಪನಿರ್ದೇಶಕರಿಗೆ ಪತ್ರ ಬರೆದಿದ್ದಾರೆ. ಅದರಲ್ಲಿ 2025ರ ಎಸ್ ಎಸ್ ಎಲ್ ಸಿ ಪರೀಕ್ಷೆ-1ರ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವನ್ನು ದಿನಾಂಕ 15-04-2025ರಿಂದ ರಾಜ್ಯಾಧ್ಯಂತ ಪ್ರಾರಂಭಿಸಲಾಗಿದೆ ಎಂದಿದ್ದಾರೆ. ದಿನಾಂಕ 18-04-25ರಂದು ಗುಡ್ ಪ್ರೈಡೇ, ದಿನಾಂಕ 19-04-2025ರಂದು ಹೋಲಿ ಸಾಟರ್ಡೆ ಮತ್ತು ದಿನಾಂಕ 20-04-2025ರಂದು ಈಸ್ಟರ್ ಸಂಡೇ ಇರುವುದರಿಂದ ಸದರಿ ದಿನಗಳಂದು ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯದಿಂದ ವಿನಾಯ್ತಿ ಕೋರುವ ಶಿಕ್ಷಕರಿಗೆ ಮೌಲ್ಯಮಾಪನ ಕಾರ್ಯದಿಂದ ವಿನಾಯ್ತಿ ನೀಡಲು ತಿಳಿಸಿದ್ದಾರೆ. https://kannadanewsnow.com/kannada/aicc-general-secretary-randeep-surjewala-slams-centre/ https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/

Read More

ಬೆಂಗಳೂರು: ನಗರದ ಫ್ರೀಡಂ ಪಾರ್ಕ್ ನಲ್ಲಿ ಗುರುವಾರ ನಡೆದ ರಾಜ್ಯಮಟ್ಟದ ಪ್ರತಿಭಟನೆಯಲ್ಲಿ ಭಾಗಿಯಾದ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಣದೀಪ್ ಸುರ್ಜೇವಾಲ ಅವರು, ಕೇಂದ್ರ ಬಿಜೆಪಿ ಸರ್ಕಾರದ ವಿರುದ್ಧ ಹಿಗ್ಗಾಮುಗ್ಗಾ ವಾಗ್ಧಾಳಿ ನಡೆಸಿದರು. ಕೇಂದ್ರ ಬಿಜೆಪಿ ಸರ್ಕಾರದ ಬೆಲೆ ಏರಿಕೆ ನೀತಿಯಿಂದ ಜನಸಾಮಾನ್ಯರು ತತ್ತರಿಸಿ ಹೋಗಿದ್ದಾರೆ. ಕೇಂದ್ರದಲ್ಲಿ ಬಿಜೆಪಿ ಜಾಲಿ ಜಾಲಿ, ಜನಸಾಮಾನ್ಯರ ಜೇಬು ಖಾಲಿ ಖಾಲಿ, ನಗರ, ಗ್ರಾಮ ಪ್ರದೇಶದ ಎಲ್ಲಾ ಜನರು ಬಸವಳಿದು ಹೋಗಿದ್ದಾರೆ. ಕೇಂದ್ರ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು 2 ರೂಪಾಯಿ, ಅಡುಗೆ ಸಿಲಿಂಡರ್ ಬೆಲೆ 50 ರೂಪಾಯಿ ಜಾಸ್ತಿ ಮಾಡಿ ಬರೆ ಹಾಕಿದೆ. ಜನವರಿ 1ನೇ ತಾರೀಕು 2014 ರಲ್ಲಿ ಗ್ಯಾಸ್ ಸಿಲಿಂಡರ್ ಬೆಲೆ ರೂ. 414 ಇತ್ತು. ಆದರೆ ಇಂದು ದುಪ್ಪಟ್ಟಾಗಿದೆ. ಬೆಂಗಳೂರಿನಲ್ಲಿ ರೂ. 855 ಆಗಿದೆ. ಕಾಂಗ್ರೆಸ್ ಸರ್ಕಾರದ ವೇಳೆಯಲ್ಲಿ ಏಕೆ ಸಿಲಿಂಡರ್ ಬೆಲೆ ಕಡಿಮೆಯಿತ್ತು ಎಂದರೆ ನಮ್ಮ ಸರ್ಕಾರ ಸುಮಾರು ರೂ.52 ಸಾವಿರ ಕೋಟಿಯನ್ನು ಸಬ್ಸಿಡಿ ಎಂದು ನೀಡುತ್ತಿತ್ತು. ಬಿಜೆಪಿ ಸರ್ಕಾರ…

Read More

ಬೆಂಗಳೂರು: ಒಂದೆಡೆ ಜಾತಿಗಣತಿ ವರದಿ ಜಾರಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದ್ದರೇ, ಮತ್ತೊಂದೆಡೆ ಇದಕ್ಕೂ ಮುನ್ನ ನಡೆದಂತ ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ಜಾತಿಗಣತಿ ವರದಿ ತಿರಸ್ಕಾರ ಮಾಡಬೇಕೆಂಬ ನಿರ್ಣಯವನ್ನು ಕೈಗೊಳ್ಳಲಾಗಿದೆ. ಸಿಎಂ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಜಾತಿಗಣತಿ ವರದಿ ಸಂಬಂಧ ವಿಶೇಷ ಸಚಿವ ಸಂಪುಟ ಸಭೆ ನಡೆಯುತ್ತಿದೆ. ಈ ಸಭೆಗೂ ಮುನ್ನ ಲಿಂಗಾಯತ ಸಮುದಾಯದ ಸಚಿವರಿಂದ ಮಹತ್ವದ ಸಭೆ ವಿಧಾನಸೌಧದಲ್ಲಿ ನಡೆದಿದೆ ಎನ್ನಲಾಗಿದೆ. ಇಂದು ನಡೆದಂತ ಲಿಂಗಾಯತ ಸಮುದಾಯದ ಸಚಿವರ ಸಭೆಯಲ್ಲಿ ಜಾತಿಗಣತಿ ವರದಿಯನ್ನು ತಿರಸ್ಕಾರ ಮಾಡಬೇಕು ಎನ್ನುವಂತ ನಿರ್ಣಯವನ್ನು ಕೈಗೊಳ್ಳಲಾಗಿದೆ ಎನ್ನಲಾಗುತ್ತಿದೆ. ಈ ನಿರ್ಧಾರವನ್ನು ಇಂದು ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆಯುತ್ತಿರುವಂತ ವಿಶೇಷ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸಿ, ಚರ್ಚಿಸಲಿದೆ ಎನ್ನಲಾಗುತ್ತಿದೆ. https://kannadanewsnow.com/kannada/the-only-achievement-of-the-bjp-government-at-the-centre-is-to-suck-the-blood-of-the-poor-and-fill-the-coffers-of-the-rich-minister-krishna-byre-gowda/ https://kannadanewsnow.com/kannada/good-news-good-news-for-women-in-the-state-aadhaar-card-no-longer-required-for-free-travel-by-bus/

Read More