Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರು ಹಾವೇರಿಯಲ್ಲಿ ರಾಜ್ಯ ಸರ್ಕಾರದ ಮತ್ತೊಂದು ಯೋಜನೆಯಾಗಿರುವಂತ ಆಶಾಕಿರಣ ಯೋಜನೆಗೆ ಚಾಲನೆ ನೀಡಿದ್ದಾರೆ. ಹೀಗಾಗಿ ಇನ್ಮುಂದೆ ಆಶಾಕಿರಣ ಯೋಜನೆಯಡಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರೋರಿಗೆ ಶಸ್ತ್ರಚಿಕಿತ್ಸೆ ಉಚಿತವಾಗಿ ಮಾಡಲಾಗುತ್ತದೆ. ಅಲ್ಲದೇ ಫ್ರೀಯಾಗಿ ಕನ್ನಡಕ ಕೂಡ ನೀಡಲಾಗುತ್ತದೆ. ಈ ಕುರಿತಂತೆ ಮಾಹಿತಿಯನ್ನು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹಂಚಿಕೊಂಡಿದ್ದು, ಹಾವೇರಿಯಲ್ಲಿ ಇಂದು ಸಿಎಂ ಸಿದ್ದರಾಮಯ್ಯ ಅವರು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆಶಾಕಿರಣ ಯೋಜನೆಯಡಿ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣಾ ಕಾರ್ಯವನ್ನ ಆಶಾ ಕಾರ್ಯಕರ್ತೆಯರು ನಡೆಸಿದ್ದರು. ಮೊದಲ ಹಂತದಲ್ಲಿ ಹಾವೇರಿ, ಕಲಬುರಗಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ ಒಟ್ಟು 56, 59, 036 ಜನರನ್ನು ಆಶಾ ಕಾರ್ಯಕರ್ತೆಯರ ಮೂಲಕ ಪ್ರಾಥಮಿಕ ತಪಾಸಣೆಗೆ ಒಳಪಡಿಸಲಾಗಿತ್ತು. ಇವರಲ್ಲಿ 8,28, 884 ಜನರಿಗೆ ನೇತ್ರ ಸಂಬಂಧಿ ತೊಂದರೆಗಳು ಕಂಡುಬಂದಿದ್ದು, ದ್ವಿತೀಯ ಹಂತದ ಚಿಕಿತ್ಸೆಗೆ ಒಳಪಡಿಸಿದಾಗ 2,45,588 ಮಂದಿಗೆ ದೃಷ್ಟಿ ದೋಷ ಇರುವುದು ಪತ್ತೆಯಾಗಿದೆ. 2.45,588 ಜನರಿಗೂ…
ಬೆಂಗಳೂರು: ರಾಜ್ಯ ಸರ್ಕಾರದಿಂದ ಕೆಎಸ್ಆರ್ ಟಿಸಿ ನೌಕರರಿಗೆ ಈಗಾಗಲೇ ಗುಂಪು ವಿಮಾ ಯೋಜನೆಯ ಪರಿಹಾರದ ಮೊತ್ತವನ್ನು 3 ಲಕ್ಷದಿಂದ 10 ಲಕ್ಷ ಮಾಡಲಾಗಿತ್ತು. ಅಲ್ಲದೇ ವೈಯಕ್ತಿಕ ಅಪಘಾತದಿಂದ ಮೃತಪಟ್ಟ ನೌಕರರಿಗೆ ಗುಂಪು ವಿಮಾ ಯೋಜನೆಯಡಿ ಪರಿಹಾರ ಮೊತ್ತ 50 ಲಕ್ಷಗಳನ್ನು ಹೆಚ್ಚಿಸಿತ್ತು. ಈಗ ಈ ವಿಮಾ ಪರಿಹಾರವನ್ನು ಬಿಎಂಟಿಸಿ ನೌಕರರಿಗೂ ವಿಸ್ತರಿಸಲಾಗಿದೆ. ಈ ಕುರಿತಂತೆ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರು ಸುತ್ತೋಲೆ ಹೊರಡಿಸಿದ್ದು, ಅದರಲ್ಲಿ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯು ಜನ ಸಾಮಾನ್ಯರಿಗೆ ಸಾರ್ವಜನಿಕ ಸಾರಿಗೆ ವ್ಯವಸ್ಥೆಯನ್ನು ಕಲ್ಪಿಸುವ ಮಹತ್ವದ ಜವಾಬ್ದಾರಿಯನ್ನು ಹೊಂದಿರುವ ಸಂಸ್ಥೆಯಾಗಿದೆ. ಸೇವೆಯಲ್ಲಿರುವಾಗ ಮೃತಪಟ್ಟಲ್ಲ, ಅವರ ಅವಲಂಬಿತರ ಜೀವನಕ್ಕೆ ಆರ್ಥಿಕವಾಗಿ ಸಹಾಯ ಮಾಡುವ ಹಿತದೃಷ್ಠಿಯಿಂದ ನೌಕರರ ಮಾಸಿಕ ವೇತನದಲ್ಲಿ ರೂ.70/- ಗಳ ವಂತಿಗೆಯೊಂದಿಗೆ ನೌಕರರು ಮೃತಪಟ್ಟಲ್ಲಿ ಅವರ ಕುಟುಂಬದವರಿಗೆ ರೂ.3.00 ಲಕ್ಷಗಳನ್ನು ಪಾವತಿಸುವ ಸಲುವಾಗಿ ಗುಂಪು ವಿಮಾ ಯೋಜನೆಯನ್ನು ದಿನಾಂಕ:01.01.2008 ರಿಂದ ಜಾರಿಗೆ ತರಲಾಗಿರುತ್ತದೆ. ಪ್ರಸ್ತುತ ಈ ಯೋಜನೆಯು ಜಾರಿಯಲ್ಲಿರುತ್ತದೆ ಎಂದಿದ್ದಾರೆ. ಕರಾರಸಾಸಂಸ್ಥೆಯಲ್ಲಿ ದಿನಾಂಕ:20.11.2023 ರಂದು…
ಬಳ್ಳಾರಿ : ಸಾರ್ವಜನಿಕರು ತಮ್ಮಲ್ಲಿರುವ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಟ್ರೋಫಿಗಳು, ಸಂಸ್ಕರಿಸಿದ ಟ್ರೋಫಿಗಳು ಮತ್ತು ಪದಾರ್ಥಗಳಿದ್ದಲ್ಲಿ ಹಿಂತಿರುಗಿಸಬೇಕು ಎಂದು ಬಳ್ಳಾರಿ ವಿಭಾಗ ಉಪ ಅರಣ್ಯ ಸಂರಕ್ಷಣಾಧಿಕಾರಿ ಸಂದೀಪ್ ಸೂರ್ಯವಂಶಿ ಅವರು ತಿಳಿಸಿದ್ದಾರೆ. ವನ್ಯಜೀವಿ (ರಕ್ಷಣಾ) ಕಾಯ್ದೆ 1972 ರ ಕಲಂ64(2) (ಎಫ್) (ಹೆಚ್) ರಡಿಯಲ್ಲಿ ಪ್ರದತ್ತವಾದ ಅಧಿಕಾರವನ್ನು ಬಳಸಿ Wildlife (Protection) and surrender of un declared Wildlife or Animal Article, Trophy and Uncured Trophy (Karnataka) Rules, 2024 ನಿಯಮದಡಿ ದಿ.11-01-2024 ರಿಂದ ಹೊಸ ನಿಯಮವನ್ನು ಜಾರಿ ತಂದಿರುತ್ತದೆ. ಆದ್ದರಿಂದ ಅಘೋಷಿತ ವನ್ಯಜೀವಿ, ಪ್ರಾಣಿಗಳ ಅಂಗಾಂಗಗಳ ಟ್ರೋಫಿಗಳು, ಸಂಸ್ಕರಿಸಿದ ಟ್ರೋಫಿಗಳು ಮತ್ತು ಪದಾರ್ಥಗಳಿದ್ದಲ್ಲಿ ಸಂಬಂಧಪಟ್ಟ ವಲಯ ಅರಣ್ಯಾಧಿಕಾರಿ, ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ಉಪ ಅರಣ್ಯ ಸಂರಕ್ಷಣಾಧಿಕಾರಿಗಳಿಗೆ ಸಲ್ಲಿಸಬೇಕು. ಸರ್ಕಾರಕ್ಕೆ ಮರಳಿಸಲು 90 ದಿನಗಳ ಕಾಲಾವಕಾಶ ನೀಡಿದ್ದು, ದಿನಾಂಕ 11-01-2024 ರಿಂದ ದಿನಾಂಕ 11-04-2024 ರವರೆಗೂ ಮರಳಿಸಲು ಅವಕಾಶವಿರುತ್ತದೆ ಎಂದು ತಿಳಿಸಿದ್ದಾರೆ. ಮರಳಿಸಲು ನಿಗಧಿತ-1 ನಮೂನೆಯಲ್ಲಿ ದ್ವಿ…
ಬೆಂಗಳೂರು: ವಿಧಾನಸಭೆಯಲ್ಲಿ ಕರ್ನಾಟಕದ ಅಂಗಡಿ ಮುಂಗಟ್ಟುಗಳ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯಲ್ಲಿ ಇರೋದು ಕಡ್ಡಾಯಗೊಳಿಸೋ ಮಸೂದೆಗೆ ಅಂಕಿತ ದೊರೆತಿದೆ. ಇನ್ನೂ ವಿಧಾನಪರಿಷತ್ ನಲ್ಲಿ ಪಾಸ್ ಆಗಿ ಕಾಯ್ದೆಯಾಗಿ ಜಾರಿಯಾಗೋದು ಮಾತ್ರ ಬಾಕಿ ಇದೆ. ಇದರ ನಡುವೆ ಬೆಂಗಳೂರಲ್ಲಿ ಕನ್ನಡ ನಾಮಫಲಕ ಅಳವಡಿಸದಂತ 18 ಅಂಗಟಿಗಳಿಗೆ ಬಿಬಿಎಂಪಿ ಬೀಗ ಜಡಿದಿದೆ. ಬೆಂಗಳೂರು ನಗರದ ಪೂರ್ವ ವಲಯ ವ್ಯಾಪ್ತಿಯಲ್ಲಿ ಬರುವ ವಾಣಿಜ್ಯ ಮಳಿಗೆಗಳ ನಾಮಫಲಕಗಳಲ್ಲಿ ಶೇ. 60 ರಷ್ಟು ಕನ್ನಡ ಭಾಷೆ ಬಳಸದ ಉದ್ದಿಮೆಗಳ ಮೇಲೆ ಕ್ರಮ ಕೈಗೊಳ್ಳಲಾಗುತ್ತಿದ್ದು, ಉದ್ದಿಮೆ ಮಾಲೀಕರಿಗೆ ಕೂಡಲೆ ಕನ್ನಡ ನಾಮಫಲಕಗಳನ್ನು ಅಳವಡಿಸಲು ಸೂಚನೆ ನೀಡಲಾಗುತ್ತಿದೆ. ಅದರಂತೆ ಪೂರ್ವ ವಲಯ ವ್ಯಾಪ್ತಿಯಲ್ಲಿ ಇಂದು ಶಾಂತಿನಗರ ಹಾಗೂ ಸಿ.ವಿ ರಾಮನ್ನಗರ ವ್ಯಾಪ್ತಿಯಲ್ಲಿ ವಲಯ ಆಯುಕ್ತರಾದ ಶ್ರೀಮತಿ ಸ್ನೇಹಲ್, ವಲಯ ಜಂಟಿ ಆಯುಕ್ತರಾದ ಶ್ರೀಮತಿ ಪಲ್ಲವಿ ರವರ ನಿರ್ದೇಶನದಂತೆ ವಲಯ ಆರೋಗ್ಯಾಧಿಕಾರಿಯಾದ ಡಾ. ಸವಿತಾ ರವರ ನೇತೃತ್ವದಲ್ಲಿ ಆರೋಗ್ಯ ವೈದ್ಯಾಧಿಕಾರಿಗಳ ತಂಡವು ಉದ್ದಿಮೆಗಳನ್ನು ಪರಿಶೀಲಿಸಿ ನಿಯಮಾನುಸಾರ ಶೇ.60% ರಷ್ಟು ಕನ್ನಡ ಭಾಷೆ ನಾಮಫಲಕಗಳನ್ನು ಅಳವಡಿಸದಿರುವ…
ದೆಹಲಿ: ನಾನು ಹಾವೇರಿ ಲೋಕಸಭಾ ಟಿಕೆಟ್ ಆಕಾಂಕ್ಷಿಯಲ್ಲ ಎಂದು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಎರಡು ದಿನಗಳ ಪಕ್ಷದ ರಾಷ್ಟ್ರೀಯ ಕಾರ್ಯಕಾರಿಣಿಯಲ್ಲಿ ಪಾಲ್ಗೊಳ್ಳಲು ದೆಹಲಿಗೆ ತೆರಳಿರುವ ಅವರು, ಮಾಧ್ಯಮಗಳೊಂದಿಗೆ ಮಾತನಾಡಿದರು. ಹಾವೇರಿ ಲೋಕಸಭಾ ಟಿಕೆಟ್ ಗೆ ಆಕಾಂಕ್ಷಿಯ ನಾನು ಯಾವುದೇ ಆಕಾಂಕ್ಷೆಯನ್ನು ಇಟ್ಟುಕೊಂಡಿಲ್ಲ. ಹಿಂದೆಯೂ ನಾನು ಹಲವು ಬಾರಿ ಸ್ಪಷ್ಟಪಡಿಸಿದ್ದೇನೆ ಎಂದು ಹೇಳಿದರು. ಹೈಕಮಾಂಡ್ ನಾಯಕರು ಯಾರಿಗೆ ಟಿಕೆಟ್ ನೀಡುತ್ತಾರೋ ಅವರ ಪರವಾಗಿ ನಾವು ಕೆಲಸವನ್ನು ಮಾಡುತ್ತೇವೆ. ಈಗಾಗಲೇ ಹಾವೇರಿ ಮತ್ತು ಗದಗನ ಬಿಜೆಪಿಯ ನಾಯಕರ ಜೊತೆಗೆ ಸಭೆ ಮಾಡಲಾಗಿದೆ. ಶಿವಕುಮಾರ್ ಉದಾಸಿಯನ್ನು ಮತ್ತೊಮ್ಮೆ ಮನವೊಲಿಸುವ ಕೆಲಸ ಮಾಡಲಾಗುತ್ತದೆ. ಆದರೆ, ಅವರು ಈ ಬಾರಿ ಗಟ್ಟಿಯಾಗಿ ನಿಂತಿದ್ದಾರೆ ಎಂದು ಹೇಳಿದರು. https://kannadanewsnow.com/kannada/paytm-crisis-how-to-transfer-money-through-upi-and-imps-heres-the-answer-to-all-your-questions/ https://kannadanewsnow.com/kannada/good-news-for-bmtc-employees-group-insurance-scheme-compensation-amount-increased-to-rs-10-lakh/ https://kannadanewsnow.com/kannada/allu-arjun-hints-at-pushpa-3-at-berlin-film-festival-2024/
ಮಂಗಳೂರು : ನಿಮ್ಮನ್ನು ಮಂಗಳೂರು, ಉಡುಪಿ ಜನ ಯಾಕೆ ಗೆಲ್ಲಿಸಬೇಕು ಕಟೀಲ್ ಅವರೇ, ಕರಂದ್ಲಾಜೆ ಅವರೇ, ಬನ್ನಿ ಜಿಲ್ಲೆಯ ಸ್ವಾಭಿಮಾನಿ ಜನತೆಗೆ ಉತ್ತರ ಕೊಡಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕರೆ ನೀಡಿದರು. ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನಲ್ಲಿ ನಡೆದ ಕಾಂಗ್ರೆಸ್ ಕಾರ್ಯಕರ್ತರ ಬೃಹತ್ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಮಾತನಾಡಿದರು. ನಳಿನ್ ಕುಮಾರ್ ಕಟೀಲ್ ಅವರೇ ಒಂದೇ ಒಂದು ದಿನ ರಾಜ್ಯದ ಪರವಾಗಿ ಪಾರ್ಲಿಮೆಂಟಿನಲ್ಲಿ ಧ್ವನಿ ಎತ್ತಿದಿಯೇನಪ್ಪಾ? ತಾಯಿ ಶೋಭಾ ಕರಂದ್ಲಾಜೆ ನೀನಾದ್ರೂ ರಾಜ್ಯದ ಪರವಾಗಿ ಒಂದೇ ಒಂದು ಮಾತಾಡಿದ್ದೀಯೇನಮ್ಮಾ ಎಂದು ಪ್ರಶ್ನಿಸಿದ ಮುಖ್ಯಮಂತ್ರಿಗಳು ನಿಮ್ಮನ್ನು ಮಂಗಳೂರು, ಉಡುಪಿ ಜಿಲ್ಲೆಯ ಸ್ವಾಭಿಮಾನಿ ಜನತೆ ಏಕೆ ಗೆಲ್ಲಿಸಬೇಕು ಎಂದು ಕೇಳಿದರು. ಮೋದಿಯವರಷ್ಟು ಸುಳ್ಳು ಹೇಳುವ ಪ್ರಧಾನಿ ಸ್ವತಂತ್ರ ಭಾರತದಲ್ಲಿ ಹಿಂದೆಂದೂ ಇರಲಿಲ್ಲ. ಮೋದಿಯವರು ಇದುವರೆಗೂ ಹೇಳಿದ್ದರಲ್ಲಿ ಯಾವುದನ್ನಾದರೂ ಈಡೇರಿಸಿದ್ದಾರಾ? ಜನರ ಬದುಕಿಗೆ ನೆರವಾಗು, ದೇಶದ ಮಕ್ಕಳು-ಯುವಜನರ ಬದುಕು-ಭವಿಷ್ಯಕ್ಕೆ ಅನುಕೂಲ ಆಗುವ ಒಂದೇ ಒಂದನ್ನಾದರೂ ಈಡೇರಿಸಿದ್ದಾರಾ? ಎಂದು ಸಿ.ಎಂ.ಸಿದ್ದರಾಮಯ್ಯ ಅವರು ಜನಸ್ತೋಮದ ಎದುರು…
ಮಹಾತ್ತೋಭಾರ ಸುಬ್ರಹ್ಮಣ್ಯೇಶ್ವರ ದೇವಸ್ಥಾನವು ಆದಿ ಶಂಕರರ ಕಾಲದಿಂದ ಸ್ಥಾನಿಕ ಸ್ಮಾರ್ತ ಮೊರೋಜ(ಮೋರ-ಮೈಯೂರ ಓಜಜಾಚಾರ್ಯ) ಮನೆತನದ ಆಡಳಿಕೆ ಒಳಪಟ್ಟಿದ್ದ ದೇವಾಲಯವಾಗಿದೆ. ಹಿಂದೆ ಸ್ಮಾರ್ತ ಬ್ರಾಹ್ಮಣರಿಂದ ಪೂಜೆಗೊಳ್ಳುತ್ತಿದ್ದ ಸುಬ್ರಹ್ಮಣ್ಯ ಈಗ ಮಾಧ್ವ ಬ್ರಾಹ್ಮಣರ ಪೂಜಾಧೀನದಲ್ಲಿ ಈ ದೇವಾಲಯವಿದೆ ಸದ್ಯ ಈಗ ಕರ್ನಾಟಕ ಸರಕಾರದ ಮುಜರಾಯಿ (ಧಾರ್ಮಿಕ ದತ್ತಿ) ಇಲಾಖೆಗೆ ಒಳಪಟ್ಟಿದೆ. ಸುಬ್ರಹ್ಮಣ್ಯ ಗ್ರಾಮವು ಸುಳ್ಯ ತಾಲೂಕುದಕ್ಷಿಣ ಕನ್ನಡ ಜಿಲ್ಲೆಯಲ್ಲಿದೆ. ಶ್ರೀ ಸಿಗಂದೂರು ಚೌಡೇಶ್ವರಿ ಜ್ಯೋತಿಷ್ಯ ಪೀಠ ಸಿಂಗದೂರು ಚೌಡಮ್ಮನವರ ಉಪಾಸಕರು ನಂ 1ಕೇರಳ ಕೊಳ್ಳೇಗಾಲದ ಮಹಾ ಮಾಂತ್ರಿಕ ಜ್ಯೋತಿಷ್ಯರು ವಿದ್ವಾನ್ ವಿದ್ಯಾಧರ್ ತಂತ್ರಿ ನಂ:- 9686268564 ನಂ 1ವಶೀಕರಣ ಸ್ಪೆಷಲಿಸ್ಟ್ ಒಂದು ಕರೆಯಲ್ಲಿ ಪರಿಹಾರ ತಿಳಿಸುತ್ತಾರೆ ತಾವು ಎಷ್ಟೋ ಜ್ಯೋತಿಷ್ಯರಲ್ಲಿ ಕೇಳಿಯು ಪರಿಹಾರ ಸಿಗದೇ ಮನನೊಂದಿದ್ದರೆ ಪರಿಹಾರ ಇಲ್ಲಿ ಶತಸಿದ್ಧ ನಿಮ್ಮ ಸಮಸ್ಯೆಗಳಾದ ಅತ್ತೆ-ಸೊಸೆ ಕಿರಿಕಿರಿ, ಪ್ರೀತಿಯಲ್ಲಿ ನಂಬಿ ಮೋಸ, ಇಷ್ಟ ಪಟ್ಟವರು ನಿಮ್ಮಂತೆ ಆಗಲು, ಗಂಡ ಹೆಂಡತಿ ಕಿರಿಕಿರಿ, ಮದುವೆಯಲ್ಲಿ ಅಡೆತಡೆ, ಸಂತಾನ ಸಮಸ್ಯೆ, ಮಕ್ಕಳು ಹೇಳಿದ ಮಾತು ಕೇಳದಿದ್ದರೆ, ವಿದ್ಯಾಭ್ಯಾಸದಲ್ಲಿ ಕಿರಿಕಿರಿ, ಆರೋಗ್ಯ ಸಮಸ್ಯೆ, ಆಸ್ತಿಯಲ್ಲಿ ಕಿರಿಕಿರಿ, ಮಾಟ ಮಂತ್ರ, ಶತ್ರು…
ಕೆಎನ್ಎನ್ ಸಿನಿಮಾ ಡೆಸ್ಕ್: ಪ್ರಸ್ತುತ ಬರ್ಲಿನ್ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪುಷ್ಪಾ: ದಿ ರೈಸ್ ಅಕಾ ಪುಷ್ಪಾ 1 ಚಿತ್ರದ ಪ್ರದರ್ಶನಕ್ಕಾಗಿ ಭಾಗವಹಿಸುತ್ತಿರುವ ತೆಲುಗು ಸೂಪರ್ ಸ್ಟಾರ್ ಅಲ್ಲು ಅರ್ಜುನ್, ಪುಷ್ಪಾ 2 ಅಥವಾ ಪುಷ್ಪ: ದಿ ರೂಲ್ ಈ ಸ್ವಾತಂತ್ರ್ಯ ದಿನದಂದು ಬಿಡುಗಡೆಯಾಗಲಿರುವ ಫ್ರ್ಯಾಂಚೈಸ್ನ ಮೂರನೇ ಕಂತಿನ ಬಗ್ಗೆ ಸುಳಿವು ನೀಡಿದರು. ಅಲ್ಲದೇ ಪುಷ್ಪ-3 ಚಿತ್ರ ಆಗಸ್ಟ್.15, 2024ರ ಸ್ವಾತಂತ್ರ್ಯ ದಿನಾಚರಣೆಯಂದು ಬಿಡುಗಡೆಯಾಗೋ ಸುಳಿವು ನೀಡಿದ್ದಾರೆ. ಬರ್ಲಿನೇಲ್ 2024 ಅಥವಾ ಬರ್ಲಿನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್ (ಫೆಬ್ರವರಿ 15-25) ನ ಗ್ಲಿಟ್ಜ್ ಮತ್ತು ಗ್ಲಾಮರ್ ನಡುವೆ, ಅಲ್ಲು ಅರ್ಜುನ್ ಪುಷ್ಪಾ ಬ್ರಹ್ಮಾಂಡವನ್ನು ವಿಸ್ತರಿಸುವ ತಮ್ಮ ಯೋಜನೆಗಳನ್ನು ಪ್ರಕಟಣೆಗೆ ತಿಳಿಸಿದರು. ನೀವು ಖಂಡಿತವಾಗಿಯೂ ಮೂರನೇ ಭಾಗವನ್ನು ನಿರೀಕ್ಷಿಸಬಹುದು. ನಾವು ಅದನ್ನು ಫ್ರ್ಯಾಂಚೈಸ್ ಮಾಡಲು ಬಯಸುತ್ತೇವೆ. ನಾವು ಶ್ರೇಣಿಗಾಗಿ ಅತ್ಯಾಕರ್ಷಕ ಆಲೋಚನೆಗಳನ್ನು ಹೊಂದಿದ್ದೇವೆ ಎಂದು ಸೂಪರ್ ಸ್ಟಾರ್ ಅಲ್ಲು ಅರ್ಜುನ್ ಹೇಳಿದರು. ಈ ಮೂಲಕ ಅಭಿಮಾನಿಗಳಲ್ಲಿ ಕುತೂಹಲವನ್ನು ಹುಟ್ಟುಹಾಕಿದರು. ಉತ್ಸವದ ಸಮಯದಲ್ಲಿ ಇಂಡಿಯಾ ಪೆವಿಲಿಯನ್ನಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ರೈತ ವಿದ್ಯಾನಿಧಿ ವಿದ್ಯಾರ್ಥಿ ವೇತನಕ್ಕಾಗಿ ವಿದ್ಯಾರ್ಥಿಗಳು ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ಫೆಬ್ರವರಿ.29, 2024ರವರೆಗೆ ಅವಕಾಶ ನೀಡಲಾಗಿದೆ. ಈ ಸಂಬಂಧ ಕೃಷಿ ಇಲಾಖೆಯಿಂದ ಅಧಿಕೃತ ಆದೇಶವನ್ನು ಹೊರಡಿಸಲಾಗಿದ್ದು 2023-24ನೇ ಸಾಲಿನ ಮುಖ್ಯಮಂತ್ರಿ ರೈತ ವಿದ್ಯಾನಿಧಿ ವಿದ್ಯಾರ್ಥಿವೇತನಕ್ಕೆ ಆದಾಯ ಪ್ರಮಾಣ ಪತ್ರವನ್ನು ಸಲ್ಲಿಸಲು ಫೆ.29ರವರೆಗೆ ಕಾಲಾವಕಾಶವನ್ನು ನೀಡಲಾಗಿದೆ ಎಂದು ತಿಳಿಸಿದೆ. ಈ ವಿದ್ಯಾರ್ಥಿವೇತನವನ್ನು ಭೂರಹಿತ ಕೃಷಿ ಕಾರ್ಮಿಕರ ಮಕ್ಕಳಿಗೆ ನೀಡಲಾಗುತ್ತಿದೆ. ಇದಕ್ಕಾಗಿ ಅರ್ಜಿ ಸಲ್ಲಿಸುವಂತ ವಿದ್ಯಾರ್ಥಿಗಳು ಅವರ ಪೋಷಕರ ಆದಾಯವು ಸಾಮಾನ್ಯ ವರ್ಗದವರಿಗೆ 2.50 ಲಕ್ಷ ರೂಪಾಯಿ ಮೀರಬಾರದು ಎಂಬುದಾಗಿ ಷರತ್ತು ವಿಧಿಸಿದೆ. ರೈತರ ಮಕ್ಕಳಿಗೆ ವಿದ್ಯಾರ್ಥಿ ವೇತನ ನೀಡುವಂತ ಮುಖ್ಯ ಉದ್ದೇಶವನ್ನು ರೈತ ವಿದ್ಯಾನಿಧಿ ವಿದ್ಯಾರ್ಥಿವೇತನದ ಉದ್ದೇಶವಾಗಿದೆ. ಈ ಯೋಜನೆಯಡಿ 2500 ರೂ ಮತ್ತು ಗರಿಷ್ಠ 110000 ರೂ ವಿದ್ಯಾರ್ಥಿವೇತನ ನೀಡಲಾಗುತ್ತದೆ ಎಂಬುದಾಗಿ ತಿಳಿಸಿದೆ. https://kannadanewsnow.com/kannada/isro-successfully-launches-insat-3ds-satellite-to-improve-disaster-warning-systems/ https://kannadanewsnow.com/kannada/education-department-to-take-major-steps-to-prevent-irregularities-in-sslc-ii-puc-annual-exams/
ಬೆಂಗಳೂರು: ಎಸ್ ಎಸ್ ಎಲ್ ಸಿ ಹಾಗೂ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಯಲ್ಲಿ ಅಕ್ರಮ ತಡೆಗೆ ಶಿಕ್ಷಣ ಇಲಾಖೆಯಿಂದ ಮಹತ್ವದ ಕ್ರಮ ವಹಿಸಲಾಗಿದೆ. ಇದರ ಭಾಗವಾಗಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವಂತ ಸಿಸಿ ಕ್ಯಾಮರಾಗಳನ್ನು ದುರಸ್ತಿಗೆ ಸೂಚಿಸಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಸುತ್ತೋಲೆ ಹೊರಡಿಸಿದ್ದು, ಮಾರ್ಚ್, ಏಪ್ರಿಲ್ 2024ರಲ್ಲಿ ನಡೆಯುವ ಎಸ್ ಎಸ್ ಎಲ್ ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಲ್ಲಿ ಅಳವಡಿಸಿರುವ ಸಿಸಿ ಕ್ಯಾಮರಾಗಳು ಸುಸ್ಥಿತಿಯಲ್ಲಿರುವುದನ್ನು ದೃಢಪಡಿಸಿಕೊಳ್ಳಲು, ಪರೀಕ್ಷಾ ಕೇಂದ್ರಗಳಿಗೆ ಆಯಾ ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ದ್ವಿತೀಯ ಪಿಯುಸಿ ಪರೀಕ್ಷಾ ಕೇಂದ್ರಗಳಿಗೆ ಸಂಬಂಧಿಸಿದಂತೆ ಆಯಾ ಪರೀಕ್ಷಾ ಕೇಂದ್ರದ ಮುಖ್ಯ ಅಧೀಕ್ಷಕರಿಗೆ ಆಯಾ ಜಿಲ್ಲಾ ಉಪನಿರ್ದೇಶಕರ ಮೂಲಕ ಸೂಚಿಸಲಾಗಿತ್ತು ಎಂದಿದ್ದಾರೆ. ಈ ರೀತಿ ಪರೀಕ್ಷಿಸುವಾಗ ಸಿಸಿ ಕ್ಯಾಮರಾಗಳು ಸುಸ್ಥಿತಿಯಲ್ಲಿ ಇಲ್ಲದೇ ಇದ್ದ ಪಕ್ಷದಲ್ಲಿ ಅವುಗಳನ್ನು ದುರಸ್ಥಿಗೊಳಿಸಲು ತಗಲುವ ವೆಚ್ಚವನ್ನು ಆಯಾ ಪರೀಕ್ಷಾ ಕೇಂದ್ರಗಳಿರುವ ಶಾಲೆ, ಕಾಲೇಜುಗಳಲ್ಲಿ ಲಭ್ಯವಿರುವ ಸಂಚಿತ ನಿಧಿಯಿಂದ ಭರಿಸುವಂತೆ…