Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ವೈದ್ಯಕೀಯ, ಎಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆ ಆರಂಭವಾಗಿದ್ದು, ಅರ್ಹರು ಕಾಷನ್ ಡೆಪಾಸಿಟ್ ಪಾವತಿ ಮತ್ತು ಆಯ್ಕೆ/ಇಚ್ಛೆಗಳನ್ನು ಬದಲಿಸಿಕೊಳ್ಳಲು/ ತೆಗೆದುಹಾಕಲು ಆಗಸ್ಟ್ 26ರಂದು ಮಧ್ಯಾಹ್ನ 1ಗಂಟೆವರೆಗೆ ಸಮಯ ವಿಸ್ತರಿಸಲಾಗಿದೆ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಎಚ್.ಪ್ರಸನ್ನ ತಿಳಿಸಿದ್ದಾರೆ. ಮೊದಲ ಸುತ್ತಿನಲ್ಲಿ ಹಂಚಿಕೆಯಾದ ಸೀಟುಗಳನ್ನು ರದ್ದುಪಡಿಸಿಕೊಳ್ಳಲು ಕೂಡ ಆಗಸ್ಟ್ 26ರಂದು ಬೆಳಿಗ್ಗೆ 11 ಗಂಟೆವರೆಗೆ ಅವಕಾಶ ನೀಡಲಾಗಿದೆ. ಎರಡನೇ ಸುತ್ತಿನ ಅಣಕು/ ತಾತ್ಕಾಲಿಕ ಸೀಟು ಹಂಚಿಕೆಯ ಫಲಿತಾಂಶವನ್ನು ಆಗಸ್ಟ್ 29ರಂದು ಮಧ್ಯಾಹ್ನ 1ಗಂಟೆ ನಂತರ ಪ್ರಕಟಿಸಲಾಗುತ್ತದೆ. ಅಂತಿಮ ಫಲಿತಾಂಶದ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಅವರು ಹೇಳಿಕೆಯಲ್ಲಿ ತಿಳಿಸಿದ್ದಾರೆ. ಎಂಜಿನಿಯರಿಂಗ್, ಆರ್ಕಿಟೆಕ್ಚರ್, ಕೃಷಿ ವಿಜ್ಞಾನ, ವೆಡರಿನರಿ, ಫಾರ್ಮಸಿ, ಬಿಎಸ್ಸಿ ನರ್ಸಿಂಗ್, ಯೋಗಾ- ನ್ಯಾಚುರೋಪತಿ, ಬಿಪಿಟಿ, ಬಿಪಿಒ, ಅಲೈಡ್ ಹೆಲ್ತ್ ಸೈನ್ಸ್ ಇತ್ಯಾದಿ ಯುಜಿಸಿಇಟಿ ಕೋರ್ಸ್ ಗಳಿಗೆ ಎರಡನೇ ಸುತ್ತಿನ ಸೀಟು ಹಂಚಿಕೆಯ ಫಲಿತಾಂಶದ ನಂತರ ಅಭ್ಯರ್ಥಿಗಳು ಛಾಯ್ಸ್- 1 ಅಥವಾ…
ಹೊನ್ನಾವರದಿಂದ ಕೇವಲ 15 ಕಿಲೋ ಮೀಟರ್ ಹಾಗೂ ಮುರ್ಡೇಶ್ವರದಿಂದ 23 ಕಿಲೋ ಮೀಟರ್ ದೂರದಲ್ಲಿರುವ ಈ ಪವಿತ್ರ ಪುಣ್ಯಧಾಮಕ್ಕೆ ಇಡಗುಂಜಿ ಎಂದು ಹೆಸರು ಹೇಗೆ ಬಂತು ಗೊತ್ತೆ. ಇಡಾ ಎಂದರೆ ಎಡ, ಕುಂಜು ಎಂದರೆ ಗಿಡಗಂಟೆಗಳಿಂದ ತುಂಬಿರುವ ಅರಣ್ಯಪ್ರದೇಶ. ಶರಾವತಿಯ ಎಡ ಭಾಗದಲ್ಲಿರುವ ಅರಣ್ಯದ ರಮಣೀಯತೆಗೆ ಮನಸೋತು ನಾರದ ಮರ್ಷಿಗಳು ಈ ಹೆಸರು ಇಟ್ಟರೆಂದು ಸ್ಥಳ ಪುರಾಣ ಹೇಳುತ್ತದೆ. ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564 ಇತಿಹ್ಯ: ಪ್ರಾಚೀನ ಕಾಲದಲ್ಲಿ ಇಲ್ಲಿ ವಾಲಖಿಲ್ಯಾದಿ ಋಷಿಗಳೂ…
ರಾಜಸ್ಥಾನ: ಶಾಲಾ ಶಿಕ್ಷಕಿಯೊಬ್ಬರು ವರದಕ್ಷಿಣೆ ಕಿರುಕುಳಕ್ಕೆ ಬೇಸತ್ತು ತನ್ನ ಮೂರು ವರ್ಷದ ಮಗಳೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿರುವಂತ ಘಟನೆ ರಾಜಸ್ಥಾನದ ಜೋಧ್ ಪುರದಲ್ಲಿ ನಡೆದಿದೆ. ರಾಜಸ್ಥಾನದ ಜೋಧ್ ಪುರದಲ್ಲಿ ವರದಕ್ಷಿಣೆ ಕಿರುಕುಳದಿಂದಾಗಿ ಶಾಲಾ ಶಿಕ್ಷಕಿ ಸಂಜು ಬಿಷ್ಣೋಯಿ ಹಾಗೂ 3 ವರ್ಷದ ಮಗಳು ಯಶಸ್ವಿಯೊಂದಿಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಶರಣಾಗಿದದಾರೆ. ಆತ್ಮಹತ್ಯೆಗೂ ಮುನ್ನ ಶಾಲಾ ಶಿಕ್ಷಕಿ ಸಂಜು ಬಿಷ್ಣೋಯಿ ಬರೆದಿರುವಂತ ಡೆತ್ ನೋಟ್ ಮನೆಯಲ್ಲಿ ಪತ್ತೆಯಾಗಿದೆ. ಅದರಲ್ಲಿ ವರದಕ್ಷಿಣೆಗಾಗಿ ಪತಿ, ಅತ್ತೆ-ಮಾವ, ಅತ್ತಿಗೆ ಕಿರುಕುಳ ನೀಡುತ್ತಿದ್ದರು ಎಂಬುದಾಗಿ ಉಲ್ಲೇಖಿಸಿದ್ದಾರೆ. ಕಳೆದ ಶುಕ್ರವಾರದಂದು ಶಾಲೆಯಿಂದ ಮನೆಗೆ ಬಂದಿದ್ದಂತ ಶಿಕ್ಷಕಿ ಸಂಜು, ತಾನು, ಮಗಳ ಮೇಲೆ ಪೆಟ್ರೋಲ್ ಸುರಿದುಕೊಂಡು ಬೆಂಕಿ ಹಚ್ಚಿಕೊಂಡಿದ್ದಾರೆ. ಅವರನ್ನು ರಕ್ಷಿಸಿ, ಆಸ್ಪತ್ರೆಗೆ ದಾಖಲಿಸಲಾಗಿತ್ತಾದರೂ ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದಾರೆ. https://kannadanewsnow.com/kannada/names-finalized-for-the-nomination-of-four-members-to-the-karnataka-legislative-council/ https://kannadanewsnow.com/kannada/the-auspicious-time-for-the-renowned-marikamba-jatra-mahotsav-has-been-fixed/
ಬೆಂಗಳೂರು: ಅಂತೂ ಇಂತು ವಿಧಾನ ಪರಿಷತ್ತಿಗೆ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿದೆ. ರಮೇಶ್ ಬಾಬು, ಆರತಿ ಕೃಷ್ಣ, ಶಿವಕುಮಾರ್ ಹಾಗೂ ಜಕ್ಕಪ್ಪ ಹೆಸರನ್ನು ಫೈನಲ್ ಮಾಡಲಾಗಿದೆ. ಕಾಂಗ್ರೆಸ್ ವಕ್ತಾರ ಹಾಗೂ ಕೆಪಿಸಿಸಿ ಮಾಧ್ಯಮ ವಿಭಾಗದ ಅಧ್ಯಕ್ಷ ರಮೇಶ್ ಬಾಬು, ಎನ್ಆರ್ ಐ ಸೆಲ್ ಉಪಾಧ್ಯಕ್ಷೆಯಾಗಿರುವಂತ ಡಾ.ಆರತಿ ಕೃಷ್ಣ, ಮೈಸೂರು ಮೂಲದ ಪತ್ರಕರ್ತರಾಗಿರುವಂತ ಶಿವಕುಮಾರ್ ಹಾಗೂ ದಲಿತ ಮುಖಂಡ ಜಕ್ಕಪ್ಪ ಸೇರಿ ನಾಲ್ವರ ಹೆಸರನ್ನು ಅಂತಿಮಗೊಳಿಸಲಾಗಿದೆ. https://kannadanewsnow.com/kannada/how-is-pop-harmful-to-the-environment-here-is-the-information/ https://kannadanewsnow.com/kannada/the-auspicious-time-for-the-renowned-marikamba-jatra-mahotsav-has-been-fixed/
ಬೆಂಗಳೂರು: ನಾಡಿನೆಲ್ಲೆಡೆ ಗಣೇಶ ಹಬ್ಬದ ತಯಾರಿ ಕಳೆಗಟ್ಟಿದೆ. ಈ ವೇಳೆಯಲ್ಲೇ ಪಿಒಪಿ ಗಣೇಶ ಮೂರ್ತಿ ಬದಲಾಗಿ ಮಣ್ಣಿನ ಗಣಪತಿಯನ್ನು ಪ್ರತಿಸ್ಠಾಪಿಸುವಂತೆ ಸರ್ಕಾರ ಸೂಚಿಸಿದೆ. ಒಂದು ವೇಳೆ ಪಿಒಪಿ ಗಣಪತಿ ಕೂರಿಸಿದರೇ ಅಂತವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳುವುದಾಗಿಯೂ ಸರ್ಕಾರ ಎಚ್ಚರಿಸಿದೆ. ಹಾಗಾದ್ರೆ ಪಿಒಪಿ ಗಣೇಶ ಮೂರ್ತಿ ಪರಿಸರಕ್ಕೆ ಹಾನಿಕಾರಕ ಹೇಗೆ ಎನ್ನುವ ಬಗ್ಗೆ ಮುಂದೆ ಓದಿ. ಈ ಬಗ್ಗೆ ರಾಜ್ಯ ಸರ್ಕಾರವೇ ಮಾಹಿತಿ ನೀಡಿದ್ದು, ಪಿಒಪಿ ಗಣೇಶ ಮೂರ್ತಿಗಳ ಬದಲು ಮಣ್ಣಿನ ಗಣಪನನ್ನು ಪ್ರತಿಷ್ಠಾಪಿಸಿ ಪೂಜಿಸುವಂತೆ ಮನವಿ ಮಾಡಿದೆ. ಪಿಒಪಿ ಗಣಪತಿ ತಯಾರಿಸದಂತೆ, ಕೂರಿಸದಂತೆ ಖಡಕ್ ಸೂಚನೆ ನೀಡಿದೆ. ಪಿಒಪಿ ಪರಿಸರಕ್ಕೆ ಹಾನಿಕಾರಕ ಹೇಗೆ.? ನೀರಿನಲ್ಲಿ ನಿಧಾನವಾಗಿ ಕರಗುತ್ತದೆ. ಪಿಒಪಿ ನೀರಿನಲ್ಲಿ ನಿಧಾನವಾಗಿ ಕರಗುವುದರಿಂದ ಆಮ್ಲಜನಕ ಪ್ರಮಾಣ ಇಳಿಕೆ ಲವಣಾಂಶದಿಂದ ನೀರಿನಲ್ಲಿ ಶಾಶ್ವತ ಗಡಸುತನ ಉಂಟಾಗಲಿದೆ. ರಾಸಾಯನಿಕಯುಕ್ತ ಬಣ್ಣಗಳಿಂದ ನೀರಿನ ಮೂಲಗಳು ಕಲುಷಿತಗೊಳ್ಳಲಿದೆ ಜಲಚರಗಳ ಜೀವಕ್ಕೆ ಕಂಟಕ https://twitter.com/KarnatakaVarthe/status/1959927702313734569
ಬೆಂಗಳೂರು: ನಗರದಲ್ಲಿ ಗಣೇಶ ಹಬ್ಬದ ತಯಾರಿ ಚೋರಾಗಿಯೇ ನಡೆದಿದೆ. ಇದೇ ವೇಳೆಯಲ್ಲಿ ಪೊಲೀಸರು ಯಾವುದೇ ಅಹಿತಕರ ಘಟನೆ ನಡೆಯದಂತೆ ಮುನ್ನೆಚ್ಚರಿಕೆ ವಹಿಸಿದ್ದಾರೆ. ಬೆಂಗಳೂರಿಗರಿಗೆ ಎಚ್ಚರಿಕೆ ಎನ್ನುವಂತೆ ಗಣೇಶೋತ್ಸವಕ್ಕೆ ಬಲವಂತವಾಗಿ ಚಂದಾ ವಸೂಲಿ ಮಾಡಿದ್ರೆ ಅಂತವರ ವಿರುದ್ಧ ಪೊಲೀಸರು ಕಾನೂನು ಕ್ರಮ ಕೈಗೊಳ್ಳಲಿದ್ದಾರೆ. ಇಂದು ಬೆಂಗಳೂರಲ್ಲಿ ಗಣೇಶ ವಿಸರ್ಜನೆ ವೇಳೆಯಲ್ಲಿ ಅಹಿತಕರ ಘಟನೆ ಸಂಭವಿಸದಂತೆ ಕ್ರಮ ವಹಿಸಲು ಡಿಸಿಪಿ, ಎಸಿಪಿಗಳ ಜೊತೆಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಸೀಮಂತ್ ಕುಮಾರ್ ಸಿಂಗ್ ಅವರು ಸಭೆ ನಡೆಸಿದರು. ಈ ಬಳಿಕ ಮಾತನಾಡಿದಂತ ಕಮೀಷನರ್ ಸೀಮಂತ್ ಕುಮಾರ್ ಸಿಂಗ್ ಅವರು, ಎಲ್ಲಾ ವಿಭಾಗದ ಡಿಸಿಪಿಗಳು, ಎಸಿಪಿಗಳ ಜೊತೆಗೆ ಸಭೆ ಮಾಡಿದ್ದೇನೆ. ನಿಯಮ ಉಲ್ಲಂಘನೆಯಾದರೇ ಕಾನೂನು ಕ್ರಮ ಕೈಗೊಳ್ಳುತ್ತೇವೆ ಎಂದರು. ಬಲವಂತವಾಗಿ ಯಾರೂ ಸಹ ಚಂದಾ ವಸೂಲಿ ಮಾಡುವಂತಿಲ್ಲ. ಬಲವಂತವಾಗಿ ವಸೂಲಿ ಮಾಡಿದ್ರೆ ಪ್ರಕರಣ ದಾಖಲಿಸಲಾಗುತ್ತದೆ. ಇದುವರೆಗೂ ಆ ರೀತಿಯ ಯಾವುದೇ ದೂರುಗಳು ಬಂದಿಲ್ಲ. ಭದ್ರತೆ ವಿಚಾರದಲ್ಲಿ ಎಲ್ಲಾ ಸಿಬ್ಬಂದಿಗೂ ಕ್ರಮಕ್ಕೆ ಸೂಚಿಸಲಾಗಿದೆ ಎಂಬುದಾಗಿ ಬೆಂಗಳೂರು ಕಮಿಷನರ್…
ಬೆಂಗಳೂರು: ನಟ ಕಿಚ್ಚ ಸುದೀಪ್ ಅವರ ಹುಟ್ಟಿದ ಹಬ್ಬ ಮುಂಬರುವ ಸೆಪ್ಟೆಂಬರ್.2 ಆಗಿದೆ. ಅವರು ಸೆಪ್ಟೆಂಬರ್.2ರ ಬದಲಾಗಿ ಸೆಪ್ಟೆಂಬರ್.1ರ ಮಧ್ಯರಾತ್ರಿಯೇ ಅಭಿಮಾನಿಗಳ ಜೊತೆಗೆ ಆಚರಿಸಿಕೊಳ್ಳುವುದಾಗಿ ಪತ್ರದಲ್ಲಿ ಮಾಹಿತಿಯನ್ನು ಹಂಚಿಕೊಂಡಿದ್ದಾರೆ. ಇಂದು ಎಕ್ಸ್ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿರುವಂತ ನಟ ಕಿಚ್ಚ ಸುದೀಪ್, ಪ್ರಿಯ ಸ್ನೇಹಿತರೇ.. ಸೆಪ್ಟೆಂಬರ್ ಎರಡರ ಬೆಳಗಿನಲ್ಲಿ ಅಲ್ಲ ಸೆಪ್ಟೆಂಬರ್ ಒಂದರ ರಾತ್ರಿಯೇ ಸಿಗೋಣವಾ…! ಎಂದಿದ್ದಾರೆ. ಸೆಪ್ಟೆಂಬರ್ ಎರಡರಂದು ನೀವು ನನ್ನನ್ನು ಭೇಟಿಮಾಡುವುದಕ್ಕಾಗಿ ಎಷ್ಟು ಕಾಯುವಿರೋ ಅದಕ್ಕಿಂತ ಹೆಚ್ಚಾಗಿ ನಾನು ನಿಮಗಾಗಿ ಕಾಯುತ್ತೇನೆ. ಆ ದಿನ ನೀವು ಪಡುವ ಸಂಭ್ರಮ, ಆಚರಿಸುವ ವಿಡಿಯೋಗಳನ್ನು ನೋಡಿದಾಗ ಪ್ರತಿಸಲವೂ ನನಗೆ ಮರುಹುಟ್ಟು ಪಡೆದಂತಾಗುತ್ತದೆ. ನಿಸ್ಸಂದೇಹವಾಗಿ ನನ್ನ ಬದುಕಿಗೆ ಮೌಲ್ಯ ತುಂಬಿದವರು ನೀವು. ನಿಮ್ಮೆದರು ನಿಂತು ವಿನೀತನಾಗುವುದಕ್ಕಿಂತ ಖುಷಿ ಏನಿದೆ? ಆದ್ದರಿಂದಲೇ ದಶಕಗಳಿಂದ ನಿಮ್ಮನ್ನು ಮನೆಯ ಹತ್ತಿರ ಭೇಟಿಮಾಡುತ್ತಲೇ ನಾನೂ ಸಂಭ್ರಮಸಿದ್ದೇನೆ. ಆದರೆ ಈ ಸಲ ತುಂಬಾ ಕಷ್ಟವಾಗುತ್ತಿದೆ ಏಕೆಂದರೆ ಅಮ್ಮನಿಲ್ಲದ ಮೊದಲ ವರ್ಷವಿದು, ಅಮ್ಮನಿಲ್ಲದ ಸಂಭ್ರಮವನ್ನು ಊಹಿಸಿಕೊಳ್ಳುವುದೂ ನನಗೆ ಕಷ್ಟವಾಗುತ್ತಿದೆ. ಆದರೆ ನಿಮ್ಮನ್ನು ನಿರಾಸೆಗೊಳಿಸುವುದು ನನಗಿಷ್ಟವಿಲ್ಲ!…
ವಿಜಯಪುರ: ಜಿಲ್ಲೆಯ ಸೆಷನ್ಸ್ ಕೋರ್ಟ್ ಜಡ್ಜ್ ಸಚಿನ್ ಮನೆಯಲ್ಲಿ ಕಳ್ಳರು ಕೈಚಳಕ ಮೆರೆದಿದ್ದಾರೆ. ನ್ಯಾಯಮೂರ್ತಿಗಳ ಬಾಡಿಗೆ ಮನೆಗೆ ಕನ್ನ ಹಾಕಿದ್ದಾರೆ. ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ಪಟ್ಟಣದ ಹುಡ್ಕೋ ಕಾಲೋನಿಯಲ್ಲಿ ಸೆಷನ್ಸ್ ನ್ಯಾಯಧೀಶರಾದಂತ ಸಚಿನ್ ಕೌಶಿಕ್ ಬಾಡಿಗೆ ಮನೆಯಲ್ಲಿದ್ದರು. ಅವರು ಊರಿಗೆ ತೆರಳಿದ್ದಂತ ಸಂದರ್ಭದಲ್ಲಿ ಕಳ್ಳತನ ನಡೆಸಲಾಗಿದೆ. ಈ ವಿಷಯ ತಿಳಿದು ಸ್ಥಳಕ್ಕೆ ವಿಜಯಪುರ ಹೆಚ್ಚುವರಿ ಎಸ್ಪಿ ರಾಮನಗೌಡ ಹಟ್ಟಿ ಭೇಟಿ ನೀಡಿ, ಪರಿಶೀಲನೆ ನಡೆಸಿದರು. ಈ ಸಂಬಂಧ ಮುದ್ದೇಬಿಹಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. https://kannadanewsnow.com/kannada/in-dharmasthala-activities-of-conversion-jihad-are-taking-place-similar-to-love-jihad-r-ashok/ https://kannadanewsnow.com/kannada/big-news-the-investigation-into-the-dharmasthala-case-is-90-complete-nia-cbi-not-needed-minister-ramalinga-reddy/
ವಿಜಯನಗರ: ಧರ್ಮಸ್ಥಳದಲ್ಲಿ ಇರುವುದು ಬುರುಡೆ ಗ್ಯಾಂಗ್ ಎಂದು ವಿಧಾನಸಭೆಯಲ್ಲಿ ಹೇಳಿದಾಗ ಕಾಂಗ್ರೆಸ್ ನಾಯಕರು ಅದನ್ನು ವಿರೋಧಿಸಿದ್ದರು. ಲವ್ ಜಿಹಾದ್ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ ಎಂಬುದಾಗಿ ವಿಧಾನಸಭೆಯ ವಿಪಕ್ಷ ನಾಯಕ ಆರ್.ಅಶೋಕ್ ಹೇಳಿದ್ದಾರೆ. ಇಂದು ತುಂಗಭದ್ರಾ ಜಲಾಶಯ ವೀಕ್ಷಣೆ ಮಾಡಿದ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು. ಧರ್ಮಸ್ಥಳದಲ್ಲಿ ಇರುವುದು ಬುರುಡೆ ಗ್ಯಾಂಗ್ ಎಂದು ವಿಧಾನಸಭೆಯಲ್ಲಿ ಹೇಳಿದಾಗ ಕಾಂಗ್ರೆಸ್ ನಾಯಕರು ಅದನ್ನು ವಿರೋಧಿಸಿದ್ದರು. ಲವ್ ಜಿಹಾದ್ನಂತೆಯೇ ಮತಾಂತರದ ಜಿಹಾದಿ ಕಾರ್ಯ ನಡೆಯುತ್ತಿದೆ. ಅನನ್ಯ ಭಟ್ ಇರುವುದೇ ಸುಳ್ಳು ಎಂದು ತಿಳಿದುಬಂದಿದೆ. ಆ ವ್ಯಕ್ತಿಗೆ ಮಾಸ್ಕ್ ಹಾಕಿಸಿದ್ದೇ ಸಿಎಂ ಸಿದ್ದರಾಮಯ್ಯನವರ ಸರ್ಕಾರ. ಪ್ರಗತಿಪರರು ಸಿದ್ದರಾಮಯ್ಯನವರ ಕಚೇರಿಗೆ ಹೋಗಿ ನೂರಾರು ಕೊಲೆಯಾಗಿದೆ ಎಂದು ಹೇಳಿದ್ದರು. ಇಂತಹವರ ಮಾತು ಕೇಳಿ ಸಿಎಂ ಸಿದ್ದರಾಮಯ್ಯ 2-3 ಕೋಟಿ ರೂ. ಖರ್ಚು ಮಾಡಿದ್ದಾರೆ. ಯಾವನೋ ದಾರಿಹೋಕ ಬಂದು ಎಸ್ಐಟಿಗೆ ಆಗ್ರಹ ಮಾಡಿದರೆ, ಅದಕ್ಕಾಗಿ ಎಸ್ಐಟಿ ರಚಿಸಿದ್ದಾರೆ. ಧರ್ಮಸ್ಥಳ ಕ್ಷೇತ್ರವನ್ನು ಮುಜರಾಯಿ ಇಲಾಖೆಗೆ ಸೇರಿಸಲು ಇಷ್ಟೆಲ್ಲ ಮಾಡಲಾಗಿದೆ ಎಂದು ದೂರಿದರು. ಮಸೀದಿ, ಚರ್ಚ್…
ಮೈಸೂರು: ಮೈಸೂರಿನ ವಾಕ್ ಮತ್ತು ಶ್ರವಣ ಸಂಸ್ಥೆಯ ವಜ್ರ ಮಹೋತ್ಸವದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಸೆಪ್ಟೆಂಬರ್.1, 2ರಂದು ಭಾಗಿಯಾಗಲಿದ್ದಾರೆ. ಅಲ್ಲದೇ ಮೈಸೂರು ಅರಮನೆಗೂ ಭೇಟಿ ನೀಡಲಿದ್ದಾರೆ. ಈ ಹಿನ್ನಲೆಯಲ್ಲಿ ಸೆಪ್ಟೆಂಬರ್.1 ಮತ್ತು 2ರಂದು ಮೈಸೂರು ಅರಮನೆಗೆ ಸಾರ್ವಜನಿಕರ ಪ್ರವೇಶವನ್ನು ನಿಷೇಧಿಸಲಾಗಿದೆ. ಈ ಕುರಿತಂತೆ ಅರಮನೆ ಆಡಳಿತ ಮಂಡಳಿಯು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಮೈಸೂರು ಅರಮನೆಗೆ ಸೆಪ್ಟೆಂಬರ್.1ರಂದು ಭೇಟಿ ನೀಡುತ್ತಿರುವ ಹಿನ್ನಲೆಯಲ್ಲಿ ಸಾರ್ವಜನಿಕರ ಪ್ರವೇಶವನ್ನು ಅರಮನೆಗೆ ಸಂಪೂರ್ಣ ನಿಷೇಧಿಸಲಾಗಿದೆ. ಸೆಪ್ಟೆಂಬರ್.2ರ ಮಧ್ಯಾಹ್ನದವರೆಗೆ ಪ್ರವೇಶ ನಿಷೇಧ ಮುಂದುವರೆಯಲಿದೆ ಎಂದು ತಿಳಿಸಿದೆ. ರಾಷ್ಟ್ರಪತಿ ಮುರ್ಮು ಭೇಟಿ ಹಿನ್ನಲೆಯಲ್ಲಿ ಮೈಸೂರು ಅರಮನೆಗೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ. ಯಾವುದೇ ಅಹಿತಕರ ಘಟನೆ ನಡೆಯದಂತೆ ಜಿಲ್ಲಾಡಳಿತದಿಂದ ಎಲ್ಲಾ ಮುನ್ನೆಚ್ಚರಿಕೆ ಕೈಗೊಳ್ಳಲಾಗಿದೆ. ಪ್ರವಾಸಿಗರು ಸೆಪ್ಟೆಂಬರ್.1, 2ರಂದು ಮೈಸೂರು ಅರಮನೆ ವೀಕ್ಷಣೆಗೆ ಪ್ಲಾನ್ ಮಾಡಿದ್ದರೇ ಕೈಬಿಡುವುದು ಒಳಿತು. https://kannadanewsnow.com/kannada/on-the-27th-in-the-context-of-ganesh-chaturthi-animal-slaughter-and-meat-sale-ban-in-bangalore/ https://kannadanewsnow.com/kannada/the-auspicious-time-for-the-renowned-marikamba-jatra-mahotsav-has-been-fixed/













