Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಇಂದಿನಿಂದ ಮಾರ್ಚ್.1ರವರೆಗೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಢಾಂಗಣದಲ್ಲಿ ಮಹಿಳಾ ಐಪಿಎಲ್ ಪಂದ್ಯಾವಳಿ ನಡೆಯಲಿದೆ. ಈ ಹಿನ್ನಲೆಯಲ್ಲಿ ಕೆಲ ರಸ್ತೆಗಳಲ್ಲಿ ಸಂಚಾರ ನಿಷೇಧ ಮಾಡಲಾಗಿದೆ. ವಾಹನ ಸವಾರರಿಗೆ ಪರ್ಯಾಯ ಸಂಚಾರದ ಮಾರ್ಗದ ಮಾಹಿತಿಯನ್ನು ನೀಡಲಾಗಿದೆ. ಈ ಬಗ್ಗೆ ಬೆಂಗಳೂರು ಸಂಚಾರ ಪೊಲೀಸರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಟಾಟಾ ಐ.ಪಿ.ಎಲ್ 2024 ಕ್ರಿಕೆಟ್ TATA WPL-03 – 2025 ಕ್ರಿಕೆಟ್ ಪಂದ್ಯಾವಳಿಯ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಸುಗಮ ಸಂಚಾರಕ್ಕಾಗಿ ಈ ಕೆಳಕಂಡಂತೆ ಸೂಕ್ತ ಸಂಚಾರ ವ್ಯವಸ್ಥೆಯನ್ನು ಮಾಡಲಾಗಿದೆ. ದಿನಾಂಕ:21/02/2025 ರಿಂದ01.03.2025 ರವೆಗೆ ಸಂಜೆ 03.00 ಗಂಟೆಯಿಂದ ರಾತ್ರಿ 11.00 ವಾಹನಗಳ ನಿಲುಗಡೆ ನಿಷೇಧವಿರುವ ರಸ್ತೆಗಳ ವಿವರ. 1. ಕ್ಲೀನ್ಸ್ ರಸ್ತೆಯಲ್ಲಿ, ಬಾಳೇಕುಂದ್ರಿ ವೃತ್ತದಿಂದ ಕೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. 2. ಎಂ.ಜಿ ರಸ್ತೆಯಲ್ಲಿ ಅನಿಲ್ ಕುಂಬ್ಳೆ ವೃತ್ತದಿಂದ ಕ್ಲೀನ್ಸ್ ವೃತ್ತದ ವರೆಗೆ ರಸ್ತೆಯ ಎರಡೂ ಕಡೆ. 3. ಲಿಂಕ್ ರಸ್ತೆಯಲ್ಲಿ ಎಂ.ಜಿ ರಸ್ತೆಯಿಂದ ಕಬ್ಬನ್ ರಸ್ತೆ ವರೆಗೆ 4. ರಾಜಭವನ…
ಬೆಂಗಳೂರು: ನಿನ್ನೆ ಸಿಎಂ ಸಿದ್ಧರಾಮಯ್ಯ ನೇತೃತ್ವದಲ್ಲಿ ನಡೆದಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಅನ್ನಭಾಗ್ಯ ಯೋಜನೆಯ ಫಲಾನುಭವಿಗಳಿಗೆ ಹಣದ ಬದಲಾಗಿ 5 ಕೆಜಿ ಅಕ್ಕಿ ವಿತರಣೆ, ಅಧಿಕ ಬಡ್ಡಿ ನಿಷೇಧ ತಿದ್ದುಪಡಿ ಕಾಯ್ದೆ ಸೇರಿದಂತೆ 5 ಮಹತ್ವದ ವಿಧೇಯಕಗಳಿಗೆ ಅನುಮೋದನೆ ನೀಡಲಾಗಿದೆ. ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಮಗಾರಿಗಳ ಅಂದಾಜು ತಯಾರಿ ಸಮಿತಿ ರಚನೆ ಮಾಡಲಾಗಿತ್ತು. ಗುರುಪ್ರಸಾದ್ ಅನ್ನೋರ ನೇತೃತ್ವದಲ್ಲಿ ಈ ಸಮಿತಿ ರಚನೆ ಆಗಿತ್ತು. ಗುರುವಾರದ ಸಂಪುಟ ಸಭೆಯಲ್ಲಿ ಈ ವರದಿ ಪರಿಶೀಲಿಸಿ ಮುಂದುವರೆಯಲು ನಿರ್ಧರಿಸಲಾಗಿದೆ. ಡಿಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಚರ್ಚಿಸಿ ಮುಂದಿನ ಸಚಿವ ಸಂಪುಟಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು. ಹುನಗುಂದದಲ್ಲಿ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆ ನಿರ್ಮಿಸಲು ಸಂಪುಟದ ಒಪ್ಪಿಗೆ ನೀಡಲಾಗಿದೆ. ಮೈಸೂರು ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಯೋಜನೆ ಅಡಿ 70 ಕೋಟಿ ವೆಚ್ಚದ ಸೀಡ್ ಫಂಡ್ ಮೀಸಲಿಡಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರ ಬಹು ಮುಖ್ಯ ಬೇಡಿಕೆಯಾದಂತ ಓಪಿಎಸ್ ಯೋಜನೆಯನ್ನು ಜಾರಿಗೊಳಿಸಿಯೇ ತೀರುತ್ತೇವೆ. ನೀವು ಬಿಟ್ಟರೂ ನಾವು ಬಿಡಲ್ಲ. ಆದರೇ ಸ್ವಲ್ಪ ತಾಳ್ಮೆ ಇರಲಿ ಅಂತ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ತಿಳಿಸಿದ್ದಾರೆ. ಗುರುವಾರದಂದು ಬೆಂಗಳೂರು ಅರಮನೆ ಮೈದಾನದಲ್ಲಿ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. ಓಲ್ಡ್ ಪೆನ್ಷನ್ ಸ್ಕೀಮ್ ಸಂಬಂಧ ಸಮಿತಿ ರಚನೆ ಮಾಡಲಾಗಿದೆ. ಅಂಜುಮಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದೆ. ಸಮಿತಿ ನೀಡುವಂತ ವರದಿಯನ್ನು ಪರಿಶೀಲಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು. ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲೂ ಓಪಿಎಸ್ ಜಾರಿ ಭರವಸೆ ನೀಡಲಾಗಿದೆ. ಒಪಿಎಸ್ ಸ್ಕೀಮ್ ಜಾರಿಗೆ ನಮ್ಮ ಸರ್ಕಾರ ಬದ್ಧವಾಗಿದೆ ಎಂದರು. ಎನ್ ಪಿ ಎಸ್ ರದ್ದುಗೊಳಿಸಿ ಒಪಿಎಸ್ ಜಾರಿಯ ವಿಚಾರವನ್ನು ನೀವು ಬಿಟ್ಟರೂ ನಾವು ಬಿಡೋದಿಲ್ಲ. ಆದರೇ ಸ್ವಲ್ಪ ತಾಣ್ಮೆ ಇರಲಿ ಎಂಬುದಾಗಿ ತಿಳಿಸಿದರು. ಓಪಿಎಸ್ ಜಾರಿ ವಿಚಾರವಾಗಿ ಡಿಸಿಎಂ ಭರವಸೆ ನೀಡಿದಾಗ ನೌಕರರು ಡಿಕೆ,…
ಬೆಂಗಳೂರು: ಮಾರ್ಚ್.1ರಿಂದ 20ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-1 ನಡೆಯಲಿದೆ. ಮಾರ್ಚ್.21ರಿಂದ ಏಪ್ರಿಲ್.4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆ-1 ನಡೆಯಲಿದೆ. ಈ ಪರೀಕ್ಷೆಯ ಕುರಿತಂತೆ ವಿದ್ಯಾರ್ಥಿಗಳಿಗೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಹತ್ವದ ಮಾಹಿತಿಯನ್ನು ನೀಡಲಾಗಿದೆ. ಅದೇನು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಮಾಹಿತಿ ನೀಡಲಾಗಿದ್ದು, 2024-25ನೇ ಸಾಲಿನ ದ್ವಿತೀಯ ಪಿಯುಸಿ ಮತ್ತು ಎಸ್ ಎಸ್ ಎಲ್ ಸಿ ಪರೀಕ್ಷೆ-1 ಅನ್ನು ಮಾರ್ಚ್ ಮತ್ತು ಏಪ್ರಿಲ್ ತಿಂಗಳಿನಲ್ಲಿ ನಡೆಸಲಾಗುತ್ತಿದೆ ಎಂದಿದೆ. ಈಗಾಗಲೇ ಪರೀಕ್ಷಾ ವೇಳಾಪಟ್ಟಿಯನ್ನು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ಈ ಪರೀಕ್ಷೆಗೆ ಸಂಬಂಧ ಪಟ್ಟಂತೆ ಅಂಕಿ ಅಂಶಗಳನ್ನು ಈ ಕೆಳಕಂಡಂತಿವೆ ಎಂದಿದೆ. 2024-25ನೇ ಸಾಲಿನ ದ್ವಿತೀಯ ಪಿಯುಸಿ ಪರೀಕ್ಷೆ-1ಕ್ಕೆ 7,13,862 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಇವರಲ್ಲಿ 6,61,474 ವಿದ್ಯಾರ್ಥಿಗಳು ಹೊಸಬರು. 34,071 ಪುನರಾವರ್ತಿತ ವಿದ್ಯಾರ್ಥಿಗಳು. 18,317…
ಬೆಂಗಳೂರು: “ಓಪಿಎಸ್ (ಓಲ್ಡ್ ಪೆನ್ಷನ್ ಸ್ಕೀಮ್) ಜಾರಿ ಸಂಬಂಧ ಅಂಜುಮ್ ಪರ್ವೇಜ್ ಅವರ ಅಧ್ಯಕ್ಷತೆಯಲ್ಲಿ ಸಮಿತಿ ರಚನೆ ಮಾಡಲಾಗಿದ್ದು, ಆ ಸಮಿತಿಯ ವರದಿಯನ್ನು ಪರಿಶೀಲಿಸಿ ಅನುಷ್ಠಾನಕ್ಕೆ ಅಗತ್ಯ ಕ್ರಮ ಕೈಗೊಳ್ಳಲಾಗುವುದು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಭರವಸೆ ನೀಡಿದರು. ಬೆಂಗಳೂರು ಅರಮನೆ ಮೈದಾನದಲ್ಲಿ ಗುರುವಾರ ಏರ್ಪಡಿಸಿದ್ದ ರಾಜ್ಯ ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳ ಸಮಾವೇಶದಲ್ಲಿ ಶಿವಕುಮಾರ್ ಅವರು ಗುರುವಾರ ಮಾತನಾಡಿದರು. “ಕಾಂಗ್ರೆಸ್ ಪಕ್ಷದ ಪ್ರಣಾಳಿಕೆಯಲ್ಲಿ ಓಪಿಎಸ್ ಬಗ್ಗೆ ನಾವು ಭರವಸೆ ನೀಡಿದ್ದೆವು. ಅದರಂತೆ ಅದನ್ನು ಜಾರಿಗೆ ತರಲು ಬದ್ದರಾಗಿದ್ದೇವೆ. ನೀವು ಬಿಟ್ಟರೂ ಈ ವಿಚಾರವನ್ನು ನಾವು ಬಿಡುವುದಿಲ್ಲ. ಆದರೆ ಸ್ವಲ್ಪ ತಾಳ್ಮೆಯಿರಲಿ” ಎಂದು ತಿಳಿಸಿದರು. ಆರೋಗ್ಯ ಗಟ್ಟಿಯಾಗಿದೆ; ಇನ್ನೂ ಎಂಟತ್ತು ವರ್ಷ ರಾಜಕೀಯದಲ್ಲಿ ಇರುತ್ತೇನೆ ಓಪಿಎಸ್ ಜಾರಿ ವಿಚಾರವಾಗಿ ಡಿಸಿಎಂ ಭರವಸೆ ನೀಡಿದಾಗ ನೌಕರರು ಡಿಕೆ, ಡಿಕೆ ಎಂದು ಘೋಷಣೆ ಕೂಗಿದರು. ಆಗ ಸಭಿಕರಿಗೆ ಸುಮ್ಮನಿರಲು ಹೇಳಿದ ಡಿಸಿಎಂ ಅವರು, “ನಾನು ಮುಂದಿನ ಬಾರಿ ಚುನಾವಣೆಗೆ ನಿಂತಾಗ, ನನ್ನ ನಾಯಕತ್ವದಲ್ಲಿ ನಡೆದಾಗ…
ಕಾರವಾರ: ಪ್ರವಾಸೋದ್ಯಮ ಇಲಾಖೆಯ ಕಚೇರಿಯಲ್ಲೇ ಬೆಡ್ ರೂಮ್ ಮಾಡಿಕೊಂಡಿದ್ದಂತ ಉತ್ತರ ಕನ್ನಡ ಪ್ರವಾಸೋದ್ಯಮ ಇಲಾಖೆಯ ಉಪ ನಿರ್ದೇಶಕನನ್ನು ಅಮಾನತುಗೊಳಿಸಲಾಗಿದೆ. ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಇಲಾಖೆಯ ಉಪನಿರ್ದೇಶಕ ಜಯಂತ್ ಎಂಬುವರು ಇಲಾಖೆಯ ಕಚೇರಿಯ ಒಂದು ಕೋಣೆಯನ್ನು ಬೆಡ್ ರೂಮ್ ಮಾಡಿಕೊಂಡಿದ್ದರು. ಆ ರೂಮ್ ನಲ್ಲಿಯೇ ಮಂಚ, ಹಾಸಿಗೆ ಹಾಕಿಕೊಂಡಿದ್ದ ಬಗ್ಗೆ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಗಿತ್ತು. ಈ ವರದಿಯ ನಂತ್ರ ಪ್ರವಾಸೋದ್ಯಮ ಸಚಿವ ಹೆಚ್.ಕೆ ಪಾಟೀಲ್ ಅವರು ಗಂಭೀರವಾಗಿ ಪರಿಗಣಿಸಿದ್ದರು. ಕೂಡಲೇ ಅಧಿಕಾರಿಯನ್ನು ಅಮಾನತುಗೊಳಿಸುವಂತೆ ಸೂಚಿಸಿದ್ದರು. ಈ ಸೂಚನೆಯ ಮೇರೆಗೆ ಉತ್ತರ ಕನ್ನಡ ಜಿಲ್ಲೆಯ ಪ್ರವಾಸೋದ್ಯಮ ಉಲಾಖೆಯ ಉಪ ನಿರ್ದೇಶಕ ಜಯಂತ್ ನನ್ನು ಅಮಾನತುಗೊಳಿಸಲಾಗಿದೆ. https://kannadanewsnow.com/kannada/dy-cm-dk-shivakumar-assures-that-ops-will-be-implemented/ https://kannadanewsnow.com/kannada/pakistans-opener-fakhar-zaman-ruled-out-of-champions-trophy-2025-reports/
ಬೆಂಗಳೂರು: ಮೈಸೂರಿನ ಉದಯಗಿರಿ ಪೊಲೀಸ್ ಠಾಣೆಯ ಮೇಲೆ ಕಲ್ಲು ತೂರಾಟ ಪ್ರಕರಣವನ್ನು ಖಂಡಿಸಿ ಫೆಬ್ರವರಿ 24ರಂದು ಬಿಜೆಪಿಯಿಂದ ಪ್ರತಿಭಟನೆಗೆ ನಿರ್ಧರಿಸಲಾಗಿದೆ. ಈ ಪ್ರತಿಭಟನೆಯಲ್ಲಿ ಭಾಗವಹಿಸಲು ರೆಬೆಲ್ಸ್ ನಾಯಕರು ಕೂಡ ನಿರ್ಧಾರವನ್ನು ಕೈಗೊಂಡಿದ್ದಾರೆ. ಇಂದು ರೆಬಲ್ಸ್ ನಾಯಕರಿಂದ ಮಹತ್ವದ ಸಭೆಯನ್ನು ನಡೆಸಲಾಯಿತು. ಇಂದಿನ ಸಭೆಯಲ್ಲಿ ಫೆಬ್ರವರಿ.24ರಂದು ಮೈಸೂರಿನಲ್ಲಿ ಬಿಜೆಪಿ ಪಕ್ಷದಿಂದ ನಡೆಯುತ್ತಿರುವಂತ ಪ್ರತಿಭಟನೆಯಲ್ಲಿ ಭಾಗವಹಿಸಲು ನಿರ್ಧಾರ ಕೈಗೊಳ್ಳಲಾಗಿದೆ. ರಾಜ್ಯ ಬಿಜೆಪಿಯ ರೆಬೆಲ್ಸ್ ನಾಯಕಾರದಂತ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್, ರಮೇಶ್ ಜಾರಕಿಹೊಳಿ, ಪ್ರತಾಪ್ ಸಿಂಹ, ಅರವಿಂದ್ ಲಿಂಬಾವಳಿ ಸೇರಿದಂತೆ ಇತರೆ ನಾಯಕರು ಭಾಗಿಯಾಗಲು ನಿರ್ಧರಿಸಿದ್ದಾರೆ. https://kannadanewsnow.com/kannada/pakistans-opener-fakhar-zaman-ruled-out-of-champions-trophy-2025-reports/ https://kannadanewsnow.com/kannada/rs-315-crore-investment-in-vemagal-in-kolar-550-jobs-created-m-b-patil/
ಬೆಳಗಾವಿ: ಮನೆಯಲ್ಲಿ ಅಡುಗೆ ಮಾಡುತ್ತಿದ್ದಂತ ಸಂದರ್ಭದಲ್ಲೇ ಎಲ್ ಪಿ ಜಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡ ಪರಿಣಾಮ, ಒಂದೇ ಕುಟುಂಬದ ಐವರು ಗಂಭೀರವಾಗಿ ಗಾಯಗೊಂಡಿರುವಂತ ಘಟನೆ ಬೆಳಗಾವಿಯಲ್ಲಿ ನಡೆದಿದೆ. ಬೆಳಗಾವಿ ಜಿಲ್ಲೆಯ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿನ ಜನತಾ ಕಾಲೋನಿಯಲ್ಲಿ ಇಂದು ಮನೆಯಲ್ಲಿ ಅಡುಗೆ ಮಾಡುತ್ತಿದ್ದಾಗ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿದೆ. ಈ ಘೋರ ದುರಂತದಲ್ಲಿ ಮನೆ ಮಾಲೀಕ ರಘುನಾಥ ಮಾದರ(35), ಮಷನವ್ವ ಕಾಂಬಳೆ(55), ನಾಗರಾಜ್ ಕೋಲಕಾರ (30), ಮನುಷಾ ಕಾಂಬಳೆ(26) ಹಾಗೂ ಪ್ರಕೃತಿ(2), ನಿಲಜೀಕರ್(9) ಎಂಬುವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗ್ಯಾಸ್ ಸಿಲಿಂಡರ್ ಸ್ಪೋಟ ಘಟನೆಯಲ್ಲಿ ಗಾಯಗೊಂಡಿರುವಂತ ಗಾಯಾಳುಗಳ್ನು ಬೆಳಗಾವಿ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಐಸಿಯುನಲ್ಲಿ ಗಾಯಾಳುಗಳಿಗೆ ಚಿಕಿತ್ಸೆ ಮುಂದುವರೆದಿದ್ದು, ಕೆಲವರ ಸ್ಥಿತಿ ಗಂಭೀರವಾಗಿರೋದಾಗಿ ಹೇಳಲಾಗುತ್ತಿದೆ. https://kannadanewsnow.com/kannada/here-are-the-key-highlights-of-the-state-cabinet-meeting-chaired-by-todays-cm-siddaramaiah-aadss/ https://kannadanewsnow.com/kannada/new-delhi-who-will-get-which-ministerial-berth-heres-the-list/
ನವದೆಹಲಿ: ರಾಷ್ಟ್ರ ರಾಜಧಾನಿಯ ರಾಮ್ ಲೀಲಾ ಮೈದಾನದಲ್ಲಿ ನಡೆದ ಭವ್ಯ ಪ್ರಮಾಣವಚನ ಸಮಾರಂಭದ ನಂತರ ದೆಹಲಿ ಮುಖ್ಯಮಂತ್ರಿ ರೇಖಾ ಗುಪ್ತಾ ಗುರುವಾರ ಅಧಿಕಾರ ವಹಿಸಿಕೊಂಡರು. ಗುಪ್ತಾ ಅವರೊಂದಿಗೆ ಪರ್ವೇಶ್ ವರ್ಮಾ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದರೆ, ಇತರ ಐವರು ಶಾಸಕರು ಕ್ಯಾಬಿನೆಟ್ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಪ್ರಮಾಣ ವಚನ ಸ್ವೀಕಾರ ಸಮಾರಂಭದ ನಂತರ, ಗುಪ್ತಾ ಅವರಿಗೆ ಗೃಹ ಮತ್ತು ಹಣಕಾಸು ಖಾತೆಗಳನ್ನು ನೀಡುವುದರೊಂದಿಗೆ ದೆಹಲಿ ಕ್ಯಾಬಿನೆಟ್ ತನ್ನ ರೂಪವನ್ನು ಪಡೆದುಕೊಂಡಿದೆ. ಪರ್ವೇಶ್ ವರ್ಮಾ ಅವರಿಗೆ ಶಿಕ್ಷಣ ಮತ್ತು ಮಂಜಿಂದರ್ ಸಿಂಗ್ ಸಿರ್ಸಾ ಅವರಿಗೆ ಆರೋಗ್ಯ ಇಲಾಖೆಯನ್ನು ನೀಡಲಾಗಿದೆ. ಯಾರಿಗೆ ಯಾವ ಸಚಿವ ಸ್ಥಾನ? ಇಲ್ಲಿದೆ ಪಟ್ಟಿ 1. ರೇಖಾ ಗುಪ್ತಾ (ಮುಖ್ಯಮಂತ್ರಿ) – ಗೃಹ, ಹಣಕಾಸು, ಸೇವೆಗಳು, ವಿಚಕ್ಷಣೆ, ಯೋಜನೆ 2. ಪರ್ವೇಶ್ ವರ್ಮಾ (ಉಪ ಮುಖ್ಯಮಂತ್ರಿ) – ಶಿಕ್ಷಣ, ಲೋಕೋಪಯೋಗಿ, ಸಾರಿಗೆ 3. ಮಂಜಿಂದರ್ ಸಿಂಗ್ ಸಿರ್ಸಾ – ಆರೋಗ್ಯ, ನಗರಾಭಿವೃದ್ಧಿ, ಕೈಗಾರಿಕೆ 4. ರವೀಂದ್ರ ಕುಮಾರ್ ಇಂದ್ರಜ್…
ಬೆಂಗಳೂರು: ಇಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದಲ್ಲಿ ಮಹತ್ವ ರಾಜ್ಯ ಸಚಿವ ಸಂಪುಟ ಸಭೆ ನಡೆಯಿತು. ಈ ಸಂಪುಟ ಸಭೆಯಲ್ಲಿ ಬಜೆಟ್ ಅಧಿವೇಶನಕ್ಕೆ ಅನುಮೋದನೆ ಸೇರಿದಂತೆ ಮಹತ್ವದ ನಿರ್ಧಾರಗಳನ್ನು ಕೈಗೊಳ್ಳಲಾಗಿದೆ. ಆ ಪ್ರಮುಖ ಹೈಲೈಟ್ಸ್ ಮುಂದಿದೆ ಓದಿ. ಇಂದಿನ ರಾಜ್ಯ ಸಚಿವ ಸಂಪುಟ ಸಭೆಯ ಬಳಿಕ ಬಳಿಕ ಕಾನೂನು ಸಚಿವ ಎಚ್ ಕೆ ಪಾಟೀಲ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಕಾಮಗಾರಿಗಳ ಅಂದಾಜು ತಯಾರಿ ಸಮಿತಿ ರಚನೆ ಮಾಡಲಾಗಿತ್ತು. ಗುರುಪ್ರಸಾದ್ ಅನ್ನೋರ ನೇತೃತ್ವದಲ್ಲಿ ಈ ಸಮಿತಿ ರಚನೆ ಆಗಿತ್ತು. ಇಂದಿನ ಸಂಪುಟ ಸಭೆಯಲ್ಲಿ ಈ ವರದಿ ಪರಿಶೀಲಿಸಿ ಮುಂದುವರೆಯಲು ನಿರ್ಧರಿಸಲಾಗಿದೆ. ಡಿಸಿಎಂ ನೇತೃತ್ವದಲ್ಲಿ ಸಭೆ ಮಾಡಿ ಚರ್ಚಿಸಿ ಮುಂದಿನ ಸಚಿವ ಸಂಪುಟಕ್ಕೆ ಸಲ್ಲಿಸಲು ನಿರ್ಧರಿಸಲಾಗಿದೆ ಎಂದರು. ಹುನಗುಂದದಲ್ಲಿ ಮಕ್ಕಳ ಮತ್ತು ಮಹಿಳಾ ಆಸ್ಪತ್ರೆ ನಿರ್ಮಿಸಲು ಸಂಪುಟದ ಒಪ್ಪಿಗೆ ನೀಡಲಾಗಿದೆ. ಮೈಸೂರು ಮಂಗಳೂರು ಮತ್ತು ಹುಬ್ಬಳ್ಳಿಯಲ್ಲಿ ಬಿಯಾಂಡ್ ಬೆಂಗಳೂರು ಕ್ಲಸ್ಟರ್ ಯೋಜನೆ ಅಡಿ 70 ಕೋಟಿ ವೆಚ್ಚದ ಸೀಡ್ ಫಂಡ್ ಮೀಸಲಿಡಲು ನಿರ್ಧಾರ ಕೈಗೊಳ್ಳಲಾಗಿದೆ. ಆರಂಭಿಕ ಹಂತದ ಸ್ಟಾರ್ಟಪ್ ಗಳಿಗೆ ಇದರಿಂದ…