Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ನಮ್ಮ ಮೆಟ್ರೋ ಕಬ್ಬನ್ ಪಾರ್ಕ್ ಬಳಿಯ ಆದಾಯ ತೆರಿಗೆ ಇಲಾಖೆ ಕಚೇರಿಯ ಪ್ರವೇಶ ದ್ವಾರವನ್ನು ಪ್ರಯಾಣಿಕರ ಸೇವೆಗೆ ತೆರೆದಿರಲಿಲ್ಲ. ಇದೀಗ ಪ್ರಯಾಣಿಕರ ಪ್ರವೇಶಕ್ಕೆ ಮುಕ್ತಗೊಳಿಸಲಾಗಿದೆ. ಈ ಕುರಿತಂತೆ ಬಿಎಂಆರ್ ಸಿಎಲ್ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ದಿನಾಂಕ 13-01-2025ರಿಂದ ಕಬ್ಬನ್ ಪಾರ್ಕ್ ನ ಮೆಟ್ರೋ ಎಸ್ಟಿಎನ್ ಜಿ ಪ್ರವೇಶದ್ವಾರ ಅಂದರೆ ಆದಾಯ ತೆರಿಗೆ ಕಚೇರಿಯ ಬಳಿಯ ಪ್ರವೇಶದ್ವಾರವನ್ನು ಸಾರ್ವಜನಿಕರಿಗೆ ತೆರೆಯಲಾಗಿತ್ತು. ಆ ಬಳಿಕವೂ ಕೆಲ ನಿರ್ವಹಣಾ ಕಾಮಗಾರಿ ಮುಂದುವರೆದಿತ್ತು ಎಂದಿದೆ. ಇಂದಿನಿಂದ ಕಬ್ಬನ್ ಪಾರ್ಕ್ ಮೆಟ್ರೋ ಎಸ್ಟಿಎನ್ ಜಿ ಪ್ರವೇಶದ್ವಾರ (ಆದಾಯ ತೆರಿಗೆ) ಭಾಗವನ್ನು ಸಾರ್ವಜನಿಕರ ಅನುಕೂಲಕ್ಕಾಗಿ ತೆರೆಯಲಾಗಿದೆ. ಮೆಟ್ರೋ ಪ್ರಯಾಣಿಕರು ಈ ಪ್ರವೇಶ ಮಾರ್ಗದ ಅನುಕೂಲವನ್ನು ಪಡೆಯುವಂತೆ ಮನವಿ ಮಾಡಿದೆ. https://kannadanewsnow.com/kannada/big-shock-to-village-administrators-in-the-state-govt-orders-them-to-perform-duties-in-basic-posts/ https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/ https://kannadanewsnow.com/kannada/breaking-bengaluru-fir-filed-against-it-officer-for-assaulting-sexually-assaulting-lawyer/
ಬೆಂಗಳೂರು: ಕಾಂಗ್ರೆಸ್ಸಿಗರು ಇಂದಿನ ಸಮಾವೇಶಕ್ಕೆ ಬಳಸಿದ ಹಣ ಯಾವುದು? ಅದರ ಲೆಕ್ಕ ಕೊಡಬೇಕು ಎಂದು ವಿಧಾನಪರಿಷತ್ ವಿಪಕ್ಷ ನಾಯಕ ಛಲವಾದಿ ನಾರಾಯಣಸ್ವಾಮಿ ಅವರು ಆಗ್ರಹಿಸಿದ್ದಾರೆ. ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಅದು ಕಾಂಗ್ರೆಸ್ಸಿನ ಖಾತೆಯಿಂದ ಖರ್ಚಾದ ಹಣವೇ? ಅಥವಾ ನೀವು ಸರಕಾರದ ಬೊಕ್ಕಸದಿಂದ ಖರ್ಚು ಮಾಡಿದ್ದೀರಾ ಎಂಬುದನ್ನು ಜನರಿಗೆ ತಿಳಿಸಬೇಕು ಎಂದು ಒತ್ತಾಯಿಸಿದರು. ಸುವರ್ಣಸೌಧದ ಮುಂದೆ ಗಾಂಧಿ ಪ್ರತಿಮೆಯನ್ನು ಇವತ್ತು ಪ್ರತಿಷ್ಠಾಪನೆ ಮಾಡಿದ್ದಾರೆ. ಸರಕಾರಿ ಬೊಕ್ಕಸದಿಂದ ಗಾಂಧಿ ಪ್ರತಿಮೆ ಪ್ರತಿಷ್ಠಾಪನೆಗೆ ನಮ್ಮ ವಿರೋಧವಿಲ್ಲ ಎಂದು ತಿಳಿಸಿದರು. ಇದು ಮಹಾತ್ಮ ಗಾಂಧಿಯವರ ಕಾಲದ ಕಾಂಗ್ರೆಸ್ ಪಕ್ಷ ಅಲ್ಲ; ಮಹಾತ್ಮ ಗಾಂಧಿ ಸಿದ್ಧಾಂತಕ್ಕೂ ಇವತ್ತಿನ ಗಾಂಧಿಗಳ ಕಾಂಗ್ರೆಸ್ಸಿನ ಸಿದ್ಧಾಂತಕ್ಕೂ ಅಜಗಜಾಂತರವಿದೆ. ಅವತ್ತಿನ ಗಾಂಧಿ ಕಾಂಗ್ರೆಸ್ ಪಕ್ಷಕ್ಕೆ ಯಾರು ಮದ್ಯಪಾನ ಮಾಡುತ್ತಿದ್ದರೋ ಅವರು ಸದಸ್ಯರಾಗುವ ಹಾಗಿರಲಿಲ್ಲ; ಇವತ್ತಿನ ಕಾಂಗ್ರೆಸ್ಸಿನವರು ರಾತ್ರಿಯಿಡೀ ಕುಡಿದು ಮಲಗಿದ್ದು, ಬೆಳಿಗ್ಗೆ ಸಮಾವೇಶ ಮಾಡುತ್ತಾರೆ ಎಂದು ಟೀಕಿಸಿದರು. ಎಲ್ಲರೂ ಖಾದಿಧಾರಿಗಳಾಗಿ ಇರಬೇಕು ಎಂಬುದು ಹಳೆ ಕಾಂಗ್ರೆಸ್ಸಿನ ಸಿದ್ಧಾಂತ. ಇವತ್ತು ಶೇ 5-…
ಬೆಳಗಾವಿ : “ಗಾಂಧೀಜಿ ಹಾಗೂ ಕಾಂಗ್ರೆಸ್ ಕೊಟ್ಟ ಅಹಿಂಸೆಯ ಆದರ್ಶವನ್ನು ವಿಶ್ವ ಒಪ್ಪಿದೆ. ಇದನ್ನು ಉಳಿಸಿಕೊಂಡು, ಮುಂದಿನ ಪೀಳಿಗೆಗೆ ತಿಳಿಸಬೇಕು” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು. ಬೆಳಗಾವಿಯ ಸರ್ಕಿಟ್ ಹೌಸ್ ಬಳಿ ಶಿವಕುಮಾರ್ ಅವರು ಮಾಧ್ಯಮಗಳ ಪ್ರಶ್ನೆಗಳಿಗೆ ಮಂಗಳವಾರ ಪ್ರತಿಕ್ರಿಯೆ ನೀಡಿದರು. ಮಂಗಳವಾರದ ಕಾರ್ಯಕ್ರಮಗಳ ಬಗ್ಗೆ ಮಾಧ್ಯಮಗಳು ಕೇಳಿದಾಗ, “ಗಾಂಧೀಜಿ ಅವರ ತತ್ವ ಆದರ್ಶಗಳು, ಅಂಬೇಡ್ಕರ್ ಅವರು ಕೊಟ್ಟ ಸಂವಿಧಾನ ಉಳಿಸಬೇಕು. ಇದು ಕೇವಲ ಕಾಂಗ್ರೆಸ್ ಪಕ್ಷದ ಕಾರ್ಯಕ್ರಮ ಅಲ್ಲ, ದೇಶದ ಕಾರ್ಯಕ್ರಮ. ಗಾಂಧೀಜಿ ಅವರು ನಮ್ಮೊಂದಿಗೆ ಇಲ್ಲದಿದ್ದರೂ, ತತ್ವ ಸಿದ್ಧಾಂತಗಳ ಮೂಲಕ ಸದಾ ಜೀವಂತವಾಗಿರುತ್ತಾರೆ. ಗಾಂಧೀಜಿ ಅವರ ಪರಂಪರೆಯನ್ನು ನಾವು ಮುಂದುವರಿಸಿಕೊಂಡು ಹೋಗಬೇಕು” ಎಂದು ತಿಳಿಸಿದರು. “ಕಾಂಗ್ರೆಸ್ ಶಕ್ತಿ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ದೇಶದ ಇತಿಹಾಸ. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ನಿಧನದ ಹಿನ್ನೆಲೆಯಲ್ಲಿ ಈ ಕಾರ್ಯಕ್ರಮಗಳನ್ನು ಮುಂದೂಡಲಾಗಿತ್ತು. ಹೀಗಾಗಿ ಇಂದು ಜೈ, ಬಾಪು, ಜೈ ಭೀಮ್, ಜೈ ಸಂವಿಧಾನ ಸಮಾವೇಶ ನಡೆಸುತ್ತಿದ್ದೇವೆ. ಈ ಕಾರ್ಯಕ್ರಮದ ಮೂಲಕ…
ಬೆಂಗಳೂರು: ರಾಜ್ಯ ಸರ್ಕಾರಿ ನೌಕರರು ಹಳೆ ಪಿಂಚಣಿ ವ್ಯವಸ್ಥೆಯನ್ನು ಜಾರಿಗೊಳಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರಲು ಪ್ರತಿಭಟನೆ ಮುಂದಾಗಿದ್ದಾರೆ. ಈಗಾಗಲೇ ಜನವರಿ 20ರಿಂದ 31ರವರೆಗೆ ಓಪಿಎಸ್ ಜಾರಿಗಾಗಿ ಅನುದಾನಿತ ಶಾಲಾ-ಕಾಲೇಜುಗಳ ನೌಕರರು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರಿಗೆ ಪತ್ರ ಚಳುವಳಿಯನ್ನು ಆರಂಭಿಸಿದ್ದಾರೆ. ಆನಂತ್ರ ಫೆಬ್ರವರಿ 7ರಂದು ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ಬೃಹತ್ ಧರಣಿ ಉಪವಾಸ ಸತ್ಯಾಗ್ರಹ ಮಾಡಲು ನಿರ್ಧರಿಸಿದ್ದಾರೆ. ಈ ಕುರಿತು ಕರ್ನಾಟಕ ರಾಜ್ಯ ಅನುದಾನಿತ ಶಾಲಾ-ಕಾಲೇಜುಗಳ ಪಿಂಚಣಿ ವಂಚಿತ ನೌಕರರ ಸಂಘದ ರಾಜ್ಯಾಧ್ಯಕ್ಷ ಜಿ ಹನುಮಂತಪ್ಪ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿದ್ದು, ಅನುದಾನಿತ ಮತ್ತು ಸರ್ಕಾರಿ ನೌಕರರುಗಳಿಗೆ ಹಳೆಯ ನಿಶ್ಚಿತ ಪಿಂಚಣಿ ಸೌಲಭ್ಯವನ್ನು ದಿ:1.4.2006 ರಿಂದ ರದ್ದುಪಡಿಸಲಾಗಿದ್ದು, ಭವಿಷ್ಯದ ಬದುಕು ಅತಂತ್ರವಾಗಿದೆ. ಈ ಕುರಿತು ಕಳೆದ 15 ವರ್ಷಗಳಿಂದ ನಮ್ಮ ಸಂಘಟನೆ ಹಾಗೂ ರಾಜ್ಯ ಸರ್ಕಾರಿ NPS ನೌಕರರ ಸಂಘಟನೆ ಹೋರಾಟ ಮಾಡುತ್ತಾ ಬಂದಿದೆ. ಈ ಪರಿಣಾಮ ಪ್ರಸ್ತುತ ಆಡಳಿತ ರೂಢ ಸರ್ಕಾರ ತನ್ನ ಚುನಾವಣಾ ಪೂರ್ವದ ಪ್ರಣಾಳಿಕೆಯಲ್ಲಿ…
ಬೆಂಗಳೂರು: ಕರ್ನಾಟಕ ಬಿಜೆಪಿ ಪ್ರಧಾನ ಕಾರ್ಯದರ್ಶಿಯಾಗಿರುವಂತ ಶಾಸಕ ಸುನೀಲ್ ಕುಮಾರ್ ಅವರು, ಈ ಹುದ್ದೆಯನ್ನು ತೊರೆಯುವ ಇಂಗಿತವನ್ನು ವ್ಯಕ್ತಪಡಿಸಿದ್ದಾರೆ. ಆ ಮೂಲಕ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆ ತೊರೆಯುವ ಸುಳಿವನ್ನು ನೀಡಿದ್ದಾರೆ. ಇಂದು ಸುದ್ದಿಗಾರರೊಂದಿಗೆ ಮಾತನಾಡಿದಂತ ಅವರು ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯಲು ನಿರ್ಧಾರ ಮಾಡಿದ್ದೇನೆ. ವೈಯಕ್ತಿಕ ಕಾರಣದಿಂದ ತೊರೆಯಲು ನಿರ್ಧಾರ ಕೈಗೊಳ್ಳಲಾಗಿದೆ ಎಂದಿದ್ದಾರೆ. ಬಹಿರಂಗವಾಗಿ ನಾನು ಈ ವಿಚಾರವನ್ನು ಎಲ್ಲಿಯೂ ಚರ್ಚೆ ಮಾಡಿಲ್ಲ. ಈ ವಿಚಾರ ಪಕ್ಷದ ರಾಜ್ಯಾಧ್ಯಕ್ಷರಿಗೂ ಗೊತ್ತಿಲ್ಲ. ಯಾವುದೇ ಬಣ ರಾಜಕೀಯದಿಂದ ನಾನು ತೊರೆಯುತ್ತಿಲ್ಲ. ನಾನು ಯಾವುದೇ ಬಣ ರಾಜಕೀಯ ಟೀಂ ಜೊತೆಗೂ ಗುರ್ತಿಸಿಕೊಂಡಿಲ್ಲ ಎಂದರು. ಒತ್ತಡ, ವೈಯಕ್ತಿಕ ಸಮಸ್ಯೆಯಿಂದ ಬಿಜೆಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯನ್ನು ತೊರೆಯುವ ನಿರ್ಧಾರಕ್ಕೆ ಬಂದಿದ್ದೇನೆ ಎಂಬುದಾಗಿ ಶಾಸಕ ಸುನೀಲ್ ಕುಮಾರ್ ತಿಳಿಸಿದ್ದಾರೆ. https://kannadanewsnow.com/kannada/breaking-saif-ali-khan-discharged-from-mumbais-lilavati-hospital-photo-goes-viral-saif-ali-khan/ https://kannadanewsnow.com/kannada/breaking-bengaluru-fir-filed-against-it-officer-for-assaulting-sexually-assaulting-lawyer/
ಬೆಂಗಳೂರು: ರಾಜ್ಯದಲ್ಲಿ ನಿವೇಶನ ರಹಿತರಿಗೆ ಸರ್ಕಾರದಿಂದ ಸೈಟ್ ನೀಡೋದಕ್ಕೂ ಅವಕಾಶವಿದೆ. ಎಸ್ಸಿ, ಎಸ್ಟಿ ಹಾಗೂ ಇತರೆ ವರ್ಗದವರಿಗೆ ಸರ್ಕಾರಿ ದರದಲ್ಲಿ ನಿವೇಶನ ನೀಡಲು ಕಾನೂನಿನಡಿ ಅವಕಾಶವಿದೆ. ಆ ಬಗ್ಗೆ ಮಾಹಿತಿ ಮುಂದೆ ಓದಿ. ರಾಜ್ಯದಲ್ಲಿ ಆರ್ಥಿಕವಾಗಿ ಹಿಂದುಳಿದಂತ ನಿವೇಶನ ರಹಿತರು ಸ್ಥಳೀಯ ಆಡಳಿತಕ್ಕೆ ಅರ್ಜಿಯನ್ನು ಸಲ್ಲಿಸುವ ಮೂಲಕ ನಿವೇಶನ ಪಡೆಯಲು ಅವಕಾಶವಿದೆ. ಆದರೇ ಅದಕ್ಕೆ ಇಂತಿಷ್ಟೇ ಎನ್ನುವಂತ ಮಿತಿಯನ್ನು ಕೂಡ ವಿಧಿಸಲಾಗಿದೆ. ಸರ್ಕಾರಿ ಭೂಮಿಯನ್ನು ಅತಿಕ್ರಮಿಸಿ ವಾಸದ ಮನೆಯನ್ನು ದಿನಾಂಕ 14-04-1998 ರೊಳಗೆ ನಿರ್ಮಿಸಿದ್ದರೆ ಮಾತ್ರ ಕಟ್ಟಡ ನಿರ್ಮಿಸಿದ ವಿಸ್ತೀರ್ಣದ ಭೂಮಿಯನ್ನು ಸಕ್ರಮೀಕರಣಕ್ಕಾಗಿ ಕಾಲಂ 94 ಸಿ ಅಡಿಯಲ್ಲಿ ಅರ್ಜಿ ಸಲ್ಲಿಸುವುದಕ್ಕೆ ಅವಕಾಶ ಇದೆ. ತಹಶೀಲ್ದಾರ್ ಕೈಪಿಡಿಯಲ್ಲಿನ ಮಾಹಿತಿ ಪ್ರಕಾರ, ನಗರ ಪ್ರದೇಶದಲ್ಲಿ 20×30 ಅಡಿ ವಿಸ್ತೀರ್ಣದ ನಿವೇಶನ ಜಮೀನಿಗೆ ಮಾತ್ರ ಹಕ್ಕು ಪತ್ರ ನೀಡಲು ತಹಶೀಲ್ದಾರರಿಗೆ ಅಧಿಕಾರ ಇರುತ್ತದೆ. ಇನ್ನೂ ಗ್ರಾಮೀಣ ಪ್ರದೇಶದಲ್ಲಿ 30×40ರ ಅಳತೆಯ ನಿವೇಶನವನ್ನು ಮಂಜೂರು ಮಾಡಬಹುದಾಗಿದೆ. ತಹಶೀಲ್ದಾರರ ಕೈಪಿಡಿಯಲ್ಲಿ ಏನಿದೆ.? ಮಂಜೂರಾದ ನಿವೇಶನದ ಮೌಲ್ಯ ಷೆಡ್ಯೂಲ್ನಲ್ಲಿ ವಿಧಿಸಿರುವ ದರದಂತೆ…
ಬೆಂಗಳೂರು: ರಾಜ್ಯದಲ್ಲಿ ಪ್ರತಿಯೊಂದು ಗ್ರಾಮದಲ್ಲಿ ಜಾನುವಾರುಗಳ ಮೇವಿಗಾಗಿ ಗೋಮಾಳ ಮೀಸಲಿಡುವುದು ಕಡ್ಡಾಯ. ಹಾಗಾದ್ರೇ ರಾಜ್ಯ ಸರ್ಕಾರದ ನಿಯಮಗಳಂತೆ ಉಚಿತ ಗೋಮಾಳವನ್ನು ಒದಗಿಸುವ ರೀತಿ ಹೇಗೆ ಎನ್ನುವ ಮಹತ್ವದ ಮಾಹಿತಿಯನ್ನು ಮುಂದೆ ಓದಿ. ಈ ಕುರಿತಂತೆ ಕರ್ನಾಟಕ ಭೂ ಕಂದಾಯ ನಿಯಮಗಳು 19666, 1974ರ ಮಾರ್ಚ್ 7ರ ವರೆಗೆ ತಿದ್ದುಪಾಟಾದ ರೀತ್ಯಾ ನಿಯಮಗಳ ಅಳವಡಿಕೆ ಅನುಸಾರ ಪ್ರತಿ ನೂರು ಜಾನುವಾರಗಳಿಗೆ ಹನ್ನೆರಡು ಹೆಕ್ಟೇರುಗಳಂತೆ ಪ್ರತಿಯೊಂದು ಗ್ರಾಮದ ಜಾನುವಾರಿಗೂ ಸರ್ಕಾರಿ ಭೂಮಿಯನ್ನು ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇಡತಕ್ಕದ್ದು ಎಂದಿದೆ. ಜಾನುವಾರುಗಳನ್ನು ಲೆಕ್ಕ ಹಾಕುವಾಗ ಆಡು, ಕುರಿ ಅಥವಾ ಕರು ಅಥವಾ ಹಸು ಅಥವಾ ಎಮ್ಮೆ ಇವುಗಳೊಂದನ್ನೂ ಒಂದೊಂದು ಜಾನುವಾರೆಂದು ಪರಿಗಣಿಸಬೇಕು ಎಂಬುದಾಗಿ ತಿಳಿಸಿದೆ. ಸಂಬಂಧ ಪಟ್ಟ ಗ್ರಾಮದಲ್ಲಿ ಅಥವಾ ಪಕ್ಷದ ಗ್ರಾಮದಲ್ಲಿ ಗ್ರಾಮದ ಜಾನುವಾರು ಮೇಯುವುದಕ್ಕೆ ಅನುಕೂಲವಾಗುವಂತೆ ಸಾಕಷ್ಟು ಅರಣ್ಯ ಪ್ರದೇಶವಿದ್ದರೇ, ಅದರ ವಿಸ್ತೀರ್ಣಕ್ಕನುಗುಣವಾಗಿ ಉಚಿತ ಗೋಮಾಳವಾಗಿ ಪ್ರತ್ಯೇಕವಾಗಿ ಇದೆಯೆಂದು ಪ್ರದೇಶದ ವಿಸ್ತೀರಣವನ್ನು ಕಡಿಮೆ ಮಾಡಬಹುದಾಗಿದೆ. ಗ್ರಾಮದಲ್ಲಿ ಯಾವ ಗೋಮಾಳವೂ ಇಲ್ಲದಿದ್ದರೇ ಅಥವಾ ಇರುವ ಭೂಮಿಯನ್ನು (1)ನೇ…
ಬೆಂಗಳೂರು: ಪಡಿತರ ಚೀಟಿಯಲ್ಲಿನ ತಿದ್ದುಪಡಿಗೆ ಜನವರಿ 31, 2025 ಕೊನೆಯ ದಿನವಾಗಿದೆ. ತಿದ್ದುಪಡಿ ಮಾಡದೇ ಇದ್ದರೇ ರೇಷನ್ ಕೊಡೋದು ನಿಲ್ಲಿಸಲಾಗುತ್ತದೆ. ಹಾಗೇ ಹೀಗೆ ಅಂತ ವದಂತಿಯೊಂದು ಹರಿದಾಡಿತ್ತು. ಈ ಕಾರಣದಿಂದಾಗಿ ಬೆಂಗಳೂರು ಒನ್ ಕೇಂದ್ರದ ಮುಂದೆ ಜನರು ಕಿಲೋಮೀಟರ್ ಗಟ್ಟಲೇ ಕ್ಯೂ ನಿಂತಿರುವುದು ಕಂಡು ಬಂದಿದೆ. ಬೆಂಗಳೂರಿನ ರಾಜಾಜೀನಗರದ ಬೆಂಗಳೂರು ಓನ್ ಕೇಂದ್ರದ ಮುಂದೆ ರೇಷನ್ ಕಾರ್ಡ್ ತಿದ್ದುಪಡಿಗಾಗಿ ಜನವೋ ಜನ. ಕಿಲೋಮೀಟರ್ ಗಟ್ಟಲೇ ಕ್ಯೂ ನಿಂತ ಜನರಲ್ಲಿ ಒಂದೇ ವಿಚಾರ ಜನವರಿ.31 ಪಡಿತರ ಚೀಟಿ ತಿದ್ದುಪಡಿಗೆ ಕೊನೆಯ ದಿನವಾಗಿದೆ. ಇವತ್ತೇ ಜ.29ರ ಟೋಕನ್ ವಿತರಣೆ ಮಾಡ್ತಾರೆ. ಅದಕ್ಕಾಗಿ ಬೆಳಿಗ್ಗೆ 5 ಗಂಟೆಯಿಂದ ಸರದಿ ಸಾಲಿನಲ್ಲಿ ನಿಂತಿರುವುದಾಗಿ ಹೇಳುತ್ತಿದ್ದಾರೆ. ಈ ಬಗ್ಗೆ ಆಹಾರ ಇಲಾಖೆಯಿಂದ ಮಾಹಿತಿ ನೀಡಿದ್ದು, ಸಾರ್ವಜನಿಕರು ರೇಷನ್ ಕಾರ್ಡ್ ತಿದ್ದುಪಡಿ ಮಾಡೋದಕ್ಕೆ ಯಾವುದೇ ಕೊನೆಯ ದಿನಾಂಕವನ್ನು ನಿಗದಿಪಡಿಸಿಲ್ಲ. ಬೆಂಗಳೂರಿನ ಎಲ್ಲಾ ಸೆಂಟರ್ ಗಳಲ್ಲಿಯೂ ತಿದ್ದುಪಡಿಗೆ ಅವಕಾಶ ನೀಡಲಾಗಿದೆ. ಬೆಂಗಳೂರು ಒನ್, ಗ್ರಾಮ ಒನ್, ಕರ್ನಾಟಕ ಒನ್ ಕೇಂದ್ರಗಳಲ್ಲಿಯೂ ತಿದ್ದುಪಡಿ…
ಬೆಂಗಳೂರು: ಹಾಸನ ಜಿಲ್ಲೆ, ಯಸಳೂರು ಅರಣ್ಯದಲ್ಲಿ 2023ರ ಡಿ.4ರಂದು ಕಾಡಾನೆ ಸೆರೆ ಕಾರ್ಯಾಚರಣೆ ವೇಳೆ ಹುತಾತ್ಮನಾದ ದಸರಾ ಅಂಬಾರಿ ಹೊರುತ್ತಿದ್ದ ಗಜಶ್ರೇಷ್ಠ ಅರ್ಜುನನ ಸ್ಮಾರಕವನ್ನು ಫೆಬ್ರವರಿ ಮೊದಲ ವಾರ ಉದ್ಘಾಟಿಸುವುದಾಗಿ ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ವಿಧಾನಸೌಧದಲ್ಲಿ ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ಮುಖಾಮುಖಿರಹಿತ ಪ್ರಮಾಣಪತ್ರ ನೀಡಿಕೆ ವ್ಯವಸ್ಥೆಗೆ ಚಾಲನೆ ನೀಡಿ ಮಾತನಾಡಿದ ಅವರು, ಹುತಾತ್ಮ ಅರ್ಜುನನ ಸ್ಮಾರಕ ಸಂಪೂರ್ಣ ಸಿದ್ಧವಾಗಿದ್ದು ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಸಮಾಲೋಚಿಸಿ ಫೆಬ್ರವರಿ ಮೊದಲ ವಾರದಲ್ಲಿ ಉದ್ಘಾಟಿಸಲಾಗುವುದು ಎಂದರು. ಹುತಾತ್ಮ ಅರ್ಜುನನ ಸ್ಮಾರಕವನ್ನು ಡಿ.4ರ ಪ್ರಥಮ ಪುಣ್ಯ ತಿಥಿಯೊಳಗಾಗಿ ನೆರವೇರಿಸುವ ಉದ್ದೇಶ ಇತ್ತು. ಆದರೆ, ತಾಂತ್ರಿಕ ಕಾರಣಗಳಿಂದ ತಡವಾಗಿದೆ. ಸ್ಮಾರಕ ಅರಣ್ಯ ಪ್ರದೇಶದಲ್ಲಿದ್ದು, ಸಾರ್ವಜನಿಕರು ಸ್ಮಾರಕ ದರ್ಶನಕ್ಕೆ ಬರಲು ತೊಡಕಾಗದ ರೀತಿಯಲ್ಲಿ ಕ್ರಮ ವಹಿಸಲಾಗುವುದು ಎಂದರು. ಬಳ್ಳೆಯಲ್ಲೂ ಸ್ಮಾರಕ: ಕಾಕನಕೋಟೆಯಲ್ಲಿ 1968ರಲ್ಲಿ ನಡೆದ ಖೆಡ್ಡ ಕಾರ್ಯಾಚರಣೆಯಲ್ಲಿ ಸೆರೆಹಿಡಿಯಲಾಗಿದ್ದ ಅರ್ಜುನ ನಾಗರಹೊಳೆ ಅರಣ್ಯ ವ್ಯಾಪ್ತಿಯಲ್ಲಿರುವ ಬಳ್ಳೆ ಆನೆ ಶಿಬಿರದಲ್ಲಿದ್ದ…
ಶಿವಮೊಗ್ಗ: ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯು ಪರಿಶಿಷ್ಟ ಜಾತಿ ಉಪಯೋಜನೆಯಡಿಯಲ್ಲಿ ಪ. ಜಾ. ಯುವಜನರ ಸ್ವಾವಲಂಬನೆಗೆ ಉತ್ತೇಜಿಸುವ ತರಬೇತಿಗಾಗಿ ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಬೆಂಗಳೂರಿನ ಶ್ರೀ ಕಂಠೀರವ ಕ್ರೀಡಾಂಗಣದಲ್ಲಿ ನಡೆಯುವ ಜ.27 ರಿಂದ ಫೆ. 10ರವರೆಗೆ 15 ದಿನಗಳ ಜಿಮ್ ತರಬೇತಿ ಶಿಬಿರಕ್ಕಾಗಿ ದ್ವಿತೀಯ ಪಿಯುಸಿ (ಪಾಸ್/ಫೇಲ್) ವಿದ್ಯಾರ್ಹತೆಯುಳ್ಳ 18 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಯುವನಿಕ ಸಭಾಂಗಣದಲ್ಲಿ ನಡೆಯುವ ಫೆ.11 ರಿಂದ 18ರವರೆಗೆ 8 ದಿನಗಳ ನಿರುಪಣಾ ಮತ್ತು ವಾರ್ತಾ ವಾಚಕ ತರಬೇತಿ ಶಿಬಿರಕ್ಕೆ ದ್ವಿತೀಯ ಪಿಯುಸಿ ವಿದ್ಯಾರ್ಹತೆಯುಳ್ಳ 18 ರಿಂದ 40 ವಯೋಮಿತಿಯೊಳಗಿನ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದೆ. ಆಸಕ್ತರು ನಿಗದಿತ ನಮೂನೆ ಅರ್ಜಿಯನ್ನು ಸಹಾಯಕ ನಿರ್ದೇಶಕರ ಕಚೇರಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ನೆಹರೂ ಕ್ರೀಡಾಂಗಣ, ಶಿವಮೊಗ್ಗ ಇಲ್ಲಿಂದ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಜ. 24ರೊಳಗಾಗಿ ಸಲ್ಲಿಸುವಂತೆ ಇಲಾಖೆಯ ಸಹಾಯಕ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ಈ ತರಬೇತಿಯಲ್ಲಿ ಹಾಜರಾಗುವ ಅಭ್ಯರ್ಥಿಗಳಿಗೆ ಲಘು…