Subscribe to Updates
Get the latest creative news from FooBar about art, design and business.
Author: kannadanewsnow09
ಮಂಡ್ಯ : ಭೂಮಿ ಮೇಲೆ ಮನುಷ್ಯನಾಗಲಿ ಅಥವಾ ಯಾವುದೇ ಜೀವಿಯೂ ಶಾಶ್ವತವಲ್ಲ. ಇರುವಷ್ಟು ದಿನ ಎಲ್ಲರಲ್ಲೂ ಸಂತೋಷದಿಂದ ಸಾರ್ಥಕ ಬದುಕು ನಡೆಸುವುದೇ ಪರಮೋಚ್ಚ ಕೆಲಸ ಎಂದು ಸ್ಪಟಿಕಪುರಿ ಮಹಾ ಸಂಸ್ಥಾನದ ಪೀಠಾಧಿಪತಿ ನಂಜಾವಧೂತ ಸ್ವಾಮೀಜಿ ಭಾನುವಾರ ಹೇಳಿದರು. ಮದ್ದೂರು ತಾಲೂಕಿನ ಮಾದನಾಯಕನಹಳ್ಳಿ ಗ್ರಾಮದ ಶ್ರೀ ಸಿದ್ದರಾಮೇಶ್ವರಸ್ವಾಮಿ ದೇವರ ಪುನರ್ ಪ್ರತಿಷ್ಠೆ ಹಾಗೂ ಬ್ರಹ್ಮಕಳಶೋತ್ಸವದ ಉದ್ಘಾಟನಾ ಸಮಾರಂಭದ ದಿವ್ಯ ಸಾನಿಧ್ಯವಹಿಸಿ ಮಾತನಾಡಿದರು. ಮನುಷ್ಯನಿಗೆ ಮೊದಲು ತನ್ನ ಮೇಲೆ ತನಗೆ ನಂಬಿಕೆ ಇರಬೇಕು. ನಾವು ಮಾಡುವ ಕೆಲಸದಲ್ಲಿ ನಂಬಿಕೆ ನಿಷ್ಠೆ ಇಲ್ಲದೆ ಹಾಗೂ ಪ್ರಾಮಾಣಿಕತೆ ಇಲ್ಲದಿದ್ದರೆ ಎಷ್ಟು ದೊಡ್ಡ ದೇವಾಲಯ ಕಟ್ಟಿದರೂ ವ್ಯರ್ಥವಾಗುತ್ತದೆ. ಸಂಪನ್ಮೂಲಗಳನ್ನು ಕ್ರೋಡೀಕರಿಸಿ ದೇವಾಲಯ ಕಟ್ಟುವುದು ದೊಡ್ಡ ವಿಚಾರವಲ್ಲ. ಸಂಸ್ಕಾರದಿಂದ ಬದುಕುವುದು ಮುಖ್ಯ ಎಂದರು. ಜನತೆ ಸನ್ಮಾರ್ಗಗಳಲ್ಲಿ ನಡೆಯಬೇಕು ತನ್ನ ಸುತ್ತಮುತ್ತಲಿನ ಜನ ಹಾಗೂ ಪರಿಸರವನ್ನು ಸಂತೋಷವಾಗಿಡಲು ಸಕಲರೂ ಪ್ರಯತ್ನಿಸಬೇಕು. ಅದು ಬಿಟ್ಟು ದ್ವೇಷ, ಅಸೂಯೆ ಅಥವಾ ಸ್ವಾರ್ಥ ಬದುಕು ಸಲ್ಲದು ಆಗ ಮಾತ್ರ ಸಮಾಜದಲ್ಲಿ ಸುಭಿಕ್ಷೆಯಿಂದ ಇರಲು ಸಾಧ್ಯವಾಗುತ್ತದೆ, ಸದ್ವಿಚಾರಗಳು…
ಬೆಂಗಳೂರು: ಸಿಲಿಕಾನ್ ಸಿಟಿ ಜನರಿಗೆ ಮಹತ್ವದ ಮಾಹಿತಿ ಎನ್ನುವಂತೆ ಜುಲೈ.1, 2025ರಿಂದ ಕಟ್ಟಡ ನಕ್ಷೆ ಮಂಜೂರಾತಿಗೆ ಇ-ಖಾತಾ ಸಲ್ಲಿಸುವುದನ್ನು ಕಡ್ಡಾಯಗೊಳಿಸಲಾಗಿದೆ ಎಂಬುದಾಗಿ ಬಿಬಿಎಂಪಿ ಮುಖ್ಯ ಆಯುಕ್ತ ಮಹೇಶ್ವರ ರಾವ್ ತಿಳಿಸಿದ್ದಾರೆ. ಬಿಬಿಎಂಪಿ ವ್ಯಾಪ್ತಿಯಲ್ಲಿ ಈಗಾಗಲೇ ಇಒಡಿಬಿ-ಒಬಿಪಿಎಸ್ (EoDB-OBPS) ತಂತ್ರಾಂಶದ ಮೂಲಕ ಕಟ್ಟಡ ನಕ್ಷೆ ಮಂಜೂರಾತಿಯನ್ನು ಆನ್ಲೈನ್ ನಲ್ಲಿ ನೀಡಲಾಗುತ್ತಿರುತ್ತದೆ. ಪಾಲಿಕೆಯ ಕಂದಾಯ ವಿಭಾಗದಿಂದ ಇ-ಆಸ್ತಿ ತಂತ್ರಾಂಶವನ್ನು ಜಾರಿ ಮಾಡಲಾಗಿದ್ದು, ಪಾಲಿಕೆ ವ್ಯಾಪ್ತಿಯಲ್ಲಿನ ಸ್ವತ್ತುಗಳಿಗೆ ಈಗಾಗಲೇ ಇ-ಖಾತಾ ನೀಡಲಾಗುತ್ತಿರುತ್ತದೆ. ಇಂತಹ ಸ್ವತ್ತುಗಳ ದತ್ತಾಂಶವು ಇ-ಆಸ್ತಿ ತಂತ್ರಾಂಶದಲ್ಲಿ ಲಭ್ಯವಿರುತ್ತದೆ. ಪಾಲಿಕೆಯ ನಗರ ಯೋಜನಾ ವಿಭಾಗದಿಂದ ನಕ್ಷೆ ಮಂಜೂರಾತಿ ನೀಡುತ್ತಿರುವ ಇಒಡಿಬಿ-ಒಬಿಪಿಎಸ್ ಆನ್ ಲೈನ್ ತಂತ್ರಾಂಶವನ್ನು ಪಾಲಿಕೆಯ ಕಂದಾಯ ವಿಭಾಗದಿಂದ ಇ-ಖಾತಾ ನೀಡುತ್ತಿರುವ ಇ-ಆಸ್ತಿ ತಂತ್ರಾಂಶದೊಂದಿಗೆ ಏಕೀಕರಣಗೊಳಿಸಲು ಕ್ರಮ ಜರುಗಿಸಲಾಗಿದೆ. ನಿವೇಶನ /ಸ್ವತ್ತಿನ ಕಂದಾಯ ದಾಖಲಾತಿಗಳ ಪರಿಶೀಲನಾ ತಂತ್ರಾಂಶದಲ್ಲಿ ಸ್ವಯಂಚಾಲಿತವಾಗಿ ಕೈಗೊಳ್ಳಲು ದಿನಾಂಕ: 01-07-2025 ರಿಂದ ಸ್ವತ್ತಿನ ಇ-ಖಾತಾ/ಇಪಿಐಡಿ ಸಂಖ್ಯೆಯನ್ನು ಆನ್ಲೈನ್ ತಂತ್ರಾಂಶದಲ್ಲಿ ನಮೂದಿಸುವುದು ಹಾಗೂ ಇ-ಖಾತಾ ಸಲ್ಲಿಸುವುದು ಅವಶ್ಯವಿರುತ್ತದೆ. ಇದರಿಂದಾಗಿ ಪಾಲಿಕೆಯ ಕಂದಾಯ ವಿಭಾಗಕ್ಕೆ…
ಬೆಂಗಳೂರು: ಕಳೆದ ಎರಡು ದಿನಗಳ ಹಿಂದಷ್ಟೇ ಶಿವಮೊಗ್ಗ ಡಿಸಿಸಿ ಬ್ಯಾಂಕ್ ನಲ್ಲಿ ನಡೆದಿದ್ದಂತ ಹಣ ಅವ್ಯವಹಾರ ಸಂಬಂಧ ಮಾಜಿ ಅಧ್ಯಕ್ಷ ಆರ್.ಎಂ ಮಂಜುನಾಥ್ ಗೌಡ ಹಾಗೂ ಪತ್ನಿಗೆ ಸೇರಿದಂತ 13 ಕೋಟಿ ಮೊತ್ತದ ಆಸ್ತಿಪಾಸ್ತಿಯನ್ನು ಇಡಿ ಮುಟ್ಟುಗೋಲು ಹಾಕಿಕೊಂಡಿತ್ತು. ಇದೀಗ ಈ ಪ್ರಕರಣ ಸಂಬಂಧ ನ್ಯಾಯಾಲಯಕ್ಕೆ ಜಾರಿ ನಿರ್ದೇಶನಾಲದಯ ಅಧಿಕಾರಿಗಳು ಪ್ರಾಸಿಕ್ಯೂಷನ್ ದೂರು ಸಲ್ಲಿಸಿದೆ. ಈ ಬಗ್ಗೆ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವಂತ ಇಡಿ, ಶಿವಮೊಗ್ಗ ಜಿಲ್ಲಾ ಸಹಕಾರಿ ಬ್ಯಾಂಕಿನಿಂದ ಹಣವನ್ನು ವಂಚಿಸಿದ ಪ್ರಕರಣದಲ್ಲಿ ಬೆಂಗಳೂರಿನ ಇಡಿ, SDCC ಬ್ಯಾಂಕ್ ಮತ್ತು ಕರ್ನಾಟಕ ರಾಜ್ಯ ಸಹಕಾರಿ ಅಪೆಕ್ಸ್ ಬ್ಯಾಂಕಿನ ಮಾಜಿ ಅಧ್ಯಕ್ಷ ಆರ್.ಎಂ. ಮಂಜುನಾಥ ಗೌಡ ಅವರ ವಿರುದ್ಧ 06.06.2025 ರಂದು ಗೌರವಾನ್ವಿತ ವಿಶೇಷ ನ್ಯಾಯಾಲಯದಲ್ಲಿ (PMLA) PMLA, 2002 ರ ಅಡಿಯಲ್ಲಿ ಪ್ರಾಸಿಕ್ಯೂಷನ್ ದೂರು (Prosecution Complaint-PC) ಸಲ್ಲಿಸಿದೆ ಎಂದಿದೆ. https://TWITTER.com/dir_ed/status/1932047755721269441 https://kannadanewsnow.com/kannada/invitation-to-apply-for-various-schemes-from-nija-sharana-ambigar-choudappa-development-corporation/ https://kannadanewsnow.com/kannada/second-puc-exam-3-starts-from-june-9-free-travel-allowed-on-bmtc-buses/
ಬೆಂಗಳೂರು:ಪ್ರಸಕ್ತ (2025-26) ಸಾಲಿಗೆ ನಿಜಶರಣ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದಿಂದ ಅರಿವು ಶೈಕ್ಷಣಿಕ ಸಾಲ ಯೋಜನೆ(ಹೊಸದು ಮತ್ತು ರಿನೀವಲ್), ವಿದೇಶಿ ವಿಶ್ವವಿದ್ಯಾಲಯಗಳಲ್ಲಿ ಉನ್ನತ ಶಿಕ್ಷಣ ವ್ಯಾಸಂಗಕ್ಕೆ ಆರ್ಥಿಕ ನೆರವು, ಗಂಗಾ ಕಲ್ಯಾಣ ನೀರಾವರಿ ಯೋಜನೆ, ಸ್ವಯಂ ಉದ್ಯೋಗ ನೇರ ಸಾಲ ಮತ್ತು ಸಹಾಯಧನ ಯೋಜನೆ, ಸ್ವಾವಲಂಬಿ ಸಾರಥಿ ಯೋಜನೆಗಳಲ್ಲಿ ಸೌಲಭ್ಯ ಪಡೆಯಲು ಆನ್ಲೈನ್ ಮೂಲಕ(ಸೇವಾಸಿಂಧೂ) ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿದಾರರ ವಯಸ್ಸು ಕನಿಷ್ಠ 21 ವರ್ಷಗಳು ಹಾಗೂ ಗರಿಷ್ಠ 45 ವರ್ಷಗಳ ಮಿತಿಯೊಳಗಿರಬೇಕು. ಲಘು ವಾಹನ ಚಾಲನಾ ಪರವಾನಗಿ ಹೊಂದಿರಬೇಕು. ನಿರುದ್ಯೋಗಿ ಆಗಿರಬೇಕು. ಸ್ವಯಂ ಟ್ಯಾಕ್ಸಿ ಚಾಲನೆ ಉದ್ದೇಶಕ್ಕೆ ವಾಹನವನ್ನು ನೋಂದಾಯಿಸಬೇಕು. ಅರ್ಜಿ ಸಲ್ಲಿಸಲು ಜುಲೈ, 04 ಕೊನೆಯ ದಿನವಾಗಿದೆ. (ಅರಿವು ಶೈಕ್ಷಣಿಕ ಸಾಲ ಯೋಜನೆಗಳಿಗೆ ಕೊನೆಯ ದಿನಾಂಕ ಇರುವುದಿಲ್ಲ). ಹೆಚ್ಚಿನ ಮಾಹಿತಿಗೆ ನಿಗಮದ ಜಾಲತಾಣ http://ambigaradevelopment.karnataka.gov.in ಅಥವಾ ನಿಗಮದ ದೂ.ಸಂ.080-22864099 ನ್ನು ಸಂಪರ್ಕಿಸಬಹುದು. ಅಥವಾ ಜಿಲ್ಲಾ ವ್ಯವಸ್ಥಾಪಕರು, ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದ ಜಿಲ್ಲಾ ಕಚೇರಿಗಳನ್ನು ದೂ.ಸಂ.08272-221656 ನ್ನು…
ಮಡಿಕೇರಿ: ಮೂರ್ನಾಡು 66 ಕೆವಿ ವಿದ್ಯುತ್ ಉಪ ಕೇಂದ್ರ ನಿರ್ಮಾಣ ಆಗಲಿರುವುದರಿಂದ ಹಾಲಿ 33 ಕೆವಿ ವಿದ್ಯುತ್ ಉಪ ಕೇಂದ್ರದ 11 ಕೆವಿ ವಿದ್ಯುತ್ ಮಾರ್ಗಗಳ ಮರುಹೊಂದಾಣಿಕೆ ಕಾಮಗಾರಿ ನಿರ್ವಹಿಸಬೇಕಿದ್ದು, ಜೂನ್, 10 ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಮೂರ್ನಾಡು, ಮರಗೋಡು, ಹಾಕತ್ತೂರು, ಹೊಸ್ಕೇರಿ, ಹೊದ್ದೂರು, ನರಿಯಂದಡ, ನಾಪೋಕ್ಲು, ಕುಂಜಿಲ, ಎಮ್ಮೆಮಾಡು, ಬಲ್ಲಮಾವಟಿ ಹಾಗೂ ಸುತ್ತಮುತ್ತಲವ್ಯಾಪ್ತಿಯ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಕೋರಿದೆ. ಹಾಗೆಯೇ ಸುಂಟಿಕೊಪ್ಪ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಫ್1-ನಾಕೂರು, ಎಫ್4-ಮಾದಾಪುರ, ಎಫ್5-ಸುಂಟಿಕೊಪ್ಪ ಹಾಗೂ ಎಫ್6 ಹೊಸಕೋಟೆ ವಿದ್ಯುತ್ ಮಾರ್ಗದಲ್ಲಿ ವಿದ್ಯುತ್ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲಾಗಿದ್ದು, ಜೂನ್, 10 ರಂದು ಬೆಳಗ್ಗೆ 10 ರಿಂದ 5.30 ಗಂಟೆಯವರೆಗೆ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ. ಆದ್ದರಿಂದ ಸುಂಟಿಕೊಪ್ಪ ಟೌನ್, ಪನ್ಯಾ, ಹರದೂರು, ಬೆಟ್ಟಗೇರಿ, ಸಿಸಿಎಲ್ ನಾಕೂರು ಶಿರಂಗಾಲ, ಹೇರೂರು, ಅಂದಗೋವೆ, ಕೊಡಗರಹಳ್ಳಿ, ಹೊಸಕೋಟೆ,…
ಮಂಡ್ಯ : ಕೆಲ ದಿನಗಳ ಹಿಂದೆ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆಗೆ ಸೇರ್ಪಡೆಗೆ ವಿರೋಧಿಸಿ ಗೆಜ್ಜಲಗೆರೆ ಗ್ರಾಮ ಪಂಚಾಯಿತಿ ಮುಂದೆ ಪ್ರತಿಭಟನೆ ನಡೆಸಲಾಗಿತ್ತು. ಇದರಿಂದ ಎಚ್ಚೆತ್ತುಕೊಂಡ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಉಳಿವು ಹೋರಾಟ ಸಮಿತಿ ಸದಸ್ಯರು ಸೋಮನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯನ್ನು ಮದ್ದೂರು ನಗರಸಭೆ ವ್ಯಾಪ್ತಿಗೆ ಸೇರ್ಪಡೆಗೊಳಿಸುವುದನ್ನು ವಿರೋಧಿಸಿ ಗ್ರಾಮಸ್ಥರು ಹಾಗೂ ವಿವಿಧ ಪ್ರಗತಿಪರ ಸಂಘಟನೆಗಳು ಸೋಮವಾರ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಸೋಮವಾರ ಪ್ರತಿಭಟನೆ ನಡೆಸಿದರು. ಮದ್ದೂರು ತಾಲೂಕಿನ ಸೋಮನಹಳ್ಳಿ ಗ್ರಾಮ ಪಂಚಾಯಿತಿ ಮುಂದೆ ಜಮಾವಣೆಗೊಂಡ ಗ್ರಾಮಸ್ಥರು ಹಾಗೂ ಗ್ರಾಮ ಪಂಚಾಯತಿ ಉಳಿವು ಹೋರಾಟ ಸಮಿತಿಯ ಸದಸ್ಯರು ಜಿಲ್ಲಾಡಳಿತ ಮತ್ತು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ಈ ವೇಳೆ ಆಕ್ರೋಶ ವ್ಯಕ್ತಪಡಿಸಿದರು. ಪ್ರತಿಭಟನೆ ಉದ್ದೇಶಿಸಿ ದಲಿತ ಸಂಘರ್ಷ ಸಮಿತಿ ರಾಜ್ಯ ಸಂಚಾಲಕ ಸೋಮನಹಳ್ಳಿ ಅಂದಾನಿ ಮಾತನಾಡಿ, ಮದ್ದೂರು ಪುರಸಭೆಯನ್ನು ರಾಜ್ಯ ಸರ್ಕಾರವು ನಗರಸಭೆಯನ್ನಾಗಿ ಮೇಲ್ದರ್ಜೆಗೇರಿಸಲು ಸಚಿವ ಸಂಪುಟ ಸಭೆಯಲ್ಲಿ ಅನುಮೋದನೆ ನೀಡಿದೆ. ಆದರೆ, ಸೋಮನಹಳ್ಳಿ ಗ್ರಾಮ…
ಮಂಡ್ಯ : ಅಧಿಕಾರ ಇರಲಿ, ಇಲ್ಲದಿರಲಿ ನನ್ನ ಜೀವನದ ಕೊನೆಯುಸಿರಿರೋ ತನಕ ಕ್ಷೇತ್ರದ ಜನರ ಸೇವೆಯನ್ನು ನಿರಂತರವಾಗಿ ಮಾಡುತ್ತೇನೆ ಎಂದು ಶಾಸಕ ಕೆ.ಎಂ.ಉದಯ್ ವಿಶ್ವಾಸ ವ್ಯಕ್ತಪಡಿಸಿದರು. ಮದ್ದೂರು ಪಟ್ಟಣದ ತಾಲೂಕು ಕ್ರೀಡಾಂಗಣದಲ್ಲಿ ಭಾನುವಾರ ಸಂಜೆ ಶಾಸಕ ಕೆ.ಎಂ.ಉದಯ್ ಅವರ ಹುಟ್ಟು ಹಬ್ಬದ ಅಂಗವಾಗಿ ಕೆ.ಎಂ.ಉದಯ್ ಅಭಿಮಾನಿಗಳ ಬಳಗದಿಂದ ಹಮ್ಮಿಕೊಂಡಿದ್ದ ಎಸ್ಸೆಸ್ಸೆಲ್ಸಿ, ಪಿಯುಸಿಯಲ್ಲಿ ಅತಿ ಹೆಚ್ಚ ಅಂಕ ಪಡೆದ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ಸೈನಿಕರ ಕುಟುಂಬದವರಿಗೆ ಸನ್ಮಾನ ಕಾರ್ಯಕ್ರಮ ಮತ್ತು ಖ್ಯಾತ ಗಾಯಕರಿಂದ ರಸ ಮಂಜರಿ ಕಾರ್ಯಕ್ರಮದಲ್ಲಿ ತಮ್ಮ ಹುಟ್ಟು ಆಚರಿಸಿಕೊಂಡು ಕಾರ್ಯಕ್ರಮ ಉದ್ದೇಶಿಸಿ ಮಾತನಾಡಿದರು. ಜಗತ್ತನ್ನೆ ಕಾಡುತ್ತಿದ್ದ ಕೋವಿಡ್ ಸಂದರ್ಭದಲ್ಲಿ ಕ್ಷೇತ್ರದ ಜನರಿಗೆ ಏನಾದರೂ ಸಹಾಯ ಮಾಡಬೇಕೆಂಬ ಉದ್ದೇಶದಿಂದ ನಾನು ಸಮಾಜ ಸೇವೆ ಮಾಡಲು ಬಂದವನು. ರಾಜಕೀಯಕ್ಕೆ ಬರಬೇಕೆಂದು ಕನಸಿನಲ್ಲಿಯೂ ಅಂದುಕೊಂಡಿರಲಿಲ್ಲ. ಆದರೆ, ನಾನು ಮಾಡುತ್ತಿದ್ದ ಸಮಾಜ ಸೇವೆಯನ್ನು ಮೆಚ್ಚಿ ಮೊದಲ ಚುನಾವಣೆಯಲ್ಲೆ ನನ್ನನ್ನು ಶಾಸಕನಾಗಿ ಆಯ್ಕೆ ಮಾಡಿದ್ದಿರಿ ಹೀಗಾಗಿ ನಿಮಗೆ ಕೃತಜ್ಞನಾಗಿದ್ದಿನಿ ಎಂದರು. ಕ್ಷೇತ್ರದ ಜನರು ನನಗೆ ತೋರುತ್ತಿರುವ…
ನವದೆಹಲಿ: ಕಾಲ್ತುಳಿತ ಆಗಿರುವುದು ವಿಧಾನಸೌಧದ ಮುಂದೆ ಅಲ್ಲ, ಅದಕ್ಕೂ ತಮಗೂ ಸಂಬಂಧವಿಲ್ಲ ಎನ್ನುವಂತೆ ಹೇಳಿಕೆ ನೀಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ಕೇಂದ್ರ ಸಚಿವ ಹೆಚ್.ಡಿ. ಕುಮಾರಸ್ವಾಮಿ ಹರಿಹಾಯ್ದಿದ್ದಾರೆ. ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಖಾರವಾಗಿ ಪೋಸ್ಟ್ ಮಾಡಿರುವ ಅವರು; ವಿಧಾನಸೌಧ ಮೆಟ್ಟಿಲು ಮೇಲೆ ಸರಕಾರ ವಿಜಯೋತ್ಸವ ಆಚರಿಸಿತು. ಅಲ್ಲಿ ಯಾರೂ ಸಾಯಲಿಲ್ಲ. ಚಿನ್ನಸ್ವಾಮಿ ಕ್ರೀಡಾಂಗಣದ ಬಳಿಯಷ್ಟೇ ಕಾಲ್ತುಳಿತ ಸಂಭವಿಸಿ ಜನ ಸತ್ತಿದ್ದಾರೆ ಎಂದಿರುವ ಸಿಎಂ ಹೇಳಿಕೆಯನ್ನು ಸಿಎಂ ಖಂಡಿಸಿದ್ದಾರೆ. ಸನ್ಮಾನ್ಯ ಸಿದ್ದರಾಮಯ್ಯನವರೇ ನೀವು ಕರ್ನಾಟಕದ ಮುಖ್ಯಮಂತ್ರಿಯೋ ಅಥವಾ ವಿಧಾನಸೌಧ ಮೆಟ್ಟಿಲುಗಳಿಗಷ್ಟೇ ಮುಖ್ಯಮಂತ್ರಿಯೋ!? ದಯವಿಟ್ಟು ಹೇಳುವಿರಾ? ದುರಂತದ ಹೊಣೆಯನ್ನು ಪೊಲೀಸರ ಮೇಲಷ್ಟೇ ಎತ್ತಿಹಾಕಿ ‘ಕೈ’ ತೊಳೆದುಕೊಳ್ಳುವುದು ಎಷ್ಟು ಸರಿ? ಪ್ರತಿಪಕ್ಷಗಳನ್ನು ದೂರಿ ಪಾರಾಗುವ ಹುನ್ನಾರವೇಕೆ? ಎಂದು ಕೇಂದ್ರ ಸಚಿವರು ಪ್ರಶ್ನಿಸಿದ್ದಾರೆ. ಅಲ್ಲದೆ ಸಿದ್ದರಾಮಯ್ಯ ಅವರನ್ನು ‘ಮೆಟ್ಟಿಲು ಮುಖ್ಯಮಂತ್ರಿ’ ಎಂದು ಕೇಂದ್ರ ಸಚಿವರು ಟೀಕಿಸಿದ್ದಾರೆ. https://twitter.com/hd_kumaraswamy/status/1931956536621842617 https://kannadanewsnow.com/kannada/tomorrow-the-kusum-c-scheme-will-be-inaugurated-by-chief-minister-siddaramaiah-minister-k-j-george/ https://kannadanewsnow.com/kannada/explosion-reported-aboard-singapore-flagged-container-ship-off-kerala-coast/
ಬೆಂಗಳೂರು: ರೈತರ ಕೃಷಿ ಪಂಪ್ಸೆಟ್ಗಳಿಗೆ ಹಗಲಿನ ವೇಳೆಯೇ ಸಮರ್ಪಕ ವಿದ್ಯುತ್ ಪೂರೈಸುವ ಕುಸುಮ್-ಸಿ ಯೋಜನೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಜೂನ್ 11 ರಂದು ಅಧಿಕೃತವಾಗಿ ಉದ್ಘಾಟಿಸಲಿದ್ದಾರೆ ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಹೇಳಿದ್ದಾರೆ. ಕುಸುಮ್- ಸಿ ಯೋಜನೆಯ ಉದ್ಘಾಟನೆ ಕುರಿತ ಕರ್ಟನ್ ರೈಸರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಜೂನ್ 11, ಬುಧವಾರ ಬೆಳಗ್ಗೆ 10.30 ಗಂಟೆಗೆ ಗೌರಿಬಿದನೂರಿನ ನೇತಾಜಿ ಕ್ರೀಡಾಂಗಣದಲ್ಲಿ ಮುಖ್ಯಮಂತ್ರಿಯವರು ಯೋಜನೆಗೆ ಚಾಲನೆ ನೀಡಲಿದ್ದಾರೆ. ಕಾರ್ಯಕ್ರಮದಲ್ಲಿ ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಹಾಗೂ ಗ್ರಾಹಕ ವ್ಯವಹಾರಗಳು, ಆಹಾರ ಮತ್ತು ಪಡಿತರ ವಿತರಣೆ ಸಚಿವರಾದ ಪ್ರಲ್ಹಾದ್ ಜೋಶಿ, ಕೇಂದ್ರ ನವ ಮತ್ತು ನವೀಕರಿಸಬಹುದಾದ ಇಂಧನ ಖಾತೆ ರಾಜ್ಯ ಸಚಿವರಾದ ಶ್ರೀಪಾದ್ ಯೆಸ್ಸೋ ನಾಯಕ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಸಚಿವರಾದ ಕೃಷ್ಣ ಬೈರೇಗೌಡ, ಡಾ.ಎಂ.ಸಿ.ಸುಧಾಕರ್ ಮತ್ತಿತರರು ಪಾಲ್ಗೊಳ್ಳಲಿದ್ದಾರೆ,” ಎಂದರು. “ರೈತರಿಗೆ ಹಗಲು ವೇಳೆ ಸಮರ್ಪಕ ವಿದ್ಯುತ್ ಪೂರೈಸುವ ಉದ್ದೇಶದಿಂದ ಕುಸುಮ್-ಸಿ ಯೋಜನೆಯನ್ನು ಅನುಷ್ಠಾನಗೊಳಿಸಲಾಗುತ್ತಿದೆ. ನೀರಾವರಿಗೆ ವಿದ್ಯುತ್ ಪೂರೈಸುವ ಫೀಡರ್ಗಳ ಬಳಿ ಸೋಲಾರ್ ಘಟಕಗಳನ್ನು…
ಬೆಂಗಳೂರು: ಆರ್ ಸಿ ಬಿ ಸಂಭ್ರಮಾಚರಣೆಯ ವೇಳೆಯಲ್ಲಿ 11 ಅಭಿಮಾನಿಗಳು ಸಾವನ್ನಪ್ಪಿದಂತ ಪ್ರಕರಣ ಸಂಬಂಧ ನಿಖಿಲ್ ಸೋಸಲೆ ಎಂಬುವರನ್ನು ಬಂಧಿಸಲಾಗಿತ್ತು. ಈ ಬಂಧನ ಪ್ರಶ್ನಿಸಿ ಸಲ್ಲಿಸಲಾಗಿದ್ದಂತ ಅರ್ಜಿಯ ವಿಚಾರಣೆ ನಡೆಸಿದಂತ ಹೈಕೋರ್ಟ್ ಬಂಧನಕ್ಕೆ ಒಳಗಾದವರ ಅರ್ಜಿಯ ವಿಚಾರಣೆ ನಾಳೆಗೆ ಮುಂದೂಡಿಕೆ ಮಾಡಿದೆ. ಇಂದು ಸಿಸಿಬಿಯು ಅಕ್ರಮವಾಗಿ ತಮ್ಮನ್ನು ಬಂಧಿಸಲಾಗಿದೆ ಎಂಬುದಾಗಿ ಆರ್ ಸಿ ಬಿ ಮ್ಯಾನೇಜರ್ ನಿಖಿಲ್ ಸೋಸಲೆ ಸಲ್ಲಿಸಿದ್ದಂತ ಜಾಮೀನು ಅರ್ಜಿಯನ್ನು ಹೈಕೋರ್ಟ್ ವಿಚಾರಣೆ ನಡೆಸಿತು. ಈ ಸಂದರ್ಭದಲ್ಲಿ ನಿಖಿಲ್ ಸೋಸಲೆ ಪರವಾಗಿ ಹಿರಿಯ ವಕೀಲ ಸಂದೇಶ್ ಚೌಟ ಅವರು ವಾದಿಸಿದರು. ರಾಜ್ಯ ಸರ್ಕಾರ ಸಿಸಿಬಿಯಿಂದ ಪ್ರಕರಣವನ್ನು ಸಿಐಡಿಗೆ ವರ್ಗಾಯಿಸಲಾಗಿತ್ತು. ಈ ಸಂದರ್ಭದಲ್ಲಿ ಕಾಲ್ತುಳಿತ ದುರಂತ ಪ್ರಕರಣದಲ್ಲಿ ತಮ್ಮ ಕಕ್ಷಿದಾರರನ್ನು ಬಂಧಿಸಲಾಗಿದ. ಇದು ಕಾನೂನು ಉಲ್ಲಂಘಿಸಿ ಬಂಧಿಸಿದಂತ ಬಂಧನವಾಗಿದೆ. ನಿಖಿಲ್ ಸೋಸಲೆಗೆ ಮಧ್ಯಂತರ ಜಾಮೀನು ನೀಡುವಂತೆ ಹೈಕೋರ್ಟ್ ನ್ಯಾಯಪೀಠಕ್ಕೆ ಮನವಿ ಮಾಡಿದರು. ಈ ವೇಳೆ ಹೈಕೋರ್ಟ್ ನಿಖಿಲ್ ಸೋಸಲೆಯನ್ನು ಬಂಧಿಸುವಂತ ಅಧಿಕಾರ ಸಿಸಿಬಿಗೆ ಇತ್ತೆ ಎಂಬುದಾಗಿ ಪ್ರಶ್ನಿಸಿತು. ಇದಕ್ಕೆ ಉತ್ತರಿಸಿದಂತ…













