Author: kannadanewsnow09

ಬೆಂಗಳೂರು: ರಾಜ್ಯದಲ್ಲಿ ಕಣ್ಣಿನ ಸಮಸ್ಯೆಯಿಂದ ಬಳಲುತ್ತಿರುವಂತ ಜನರಿಗೆ, ಆಶಾಕಿರಣ ಯೋಜನೆಯ ಅಡಿಯಲ್ಲಿ ಉಚಿತವಾಗಿ ತಪಾಸಣೆ ಮಾಡಿ, ಕನ್ನಡಕವನ್ನು ಕೂಡ ರೋಗಿಗಳಿಗೆ ಉಚಿತವಾಗಿ ನೀಡಲಾಗುತ್ತಿದೆ.  ಹೌದು. ಆಶಾಕಿರಣ ಯೋಜನೆಯಡಿ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣೆ ಬಹುತೇಕ ಪೂರ್ಣಗೊಂಡಿದ್ದು, ದೃಷ್ಟಿ ದೋಷ ಹೊಂದಿರುವ ಸುಮಾರು 2.45 ಲಕ್ಷ ಜನರಿಗೆ ಉಚಿತವಾಗಿ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ನಾಳೆ ಚಾಲನೆ ದೊರೆಯಲಿದೆ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದ್ದಾರೆ.‌ ಮಂಗಳೂರಿನಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಚಿವರು, “ಆಶಾಕಿರಣ” ಯೋಜನೆ ದೃಷ್ಟಿ ದೋಷ ಹೊಂದಿದ ಅನೇಕ ಜನಸಾಮಾನ್ಯರ ಪಾಲಿಗೆ ಬೆಳಕಾಗಲಿದ್ದು, ಯೋಜನೆಯನ್ನ ಹಂತ ಹಂತವಾಗಿ ರಾಜ್ಯಾದ್ಯಂತ ವಿಸ್ತರಿಸುವುದಾಗಿ ತಿಳಿಸಿದರು. ಹಾವೇರಿಯಲ್ಲಿ ನಾಳೆ ಸಿಎಂ ಸಿದ್ದರಾಮಯ್ಯ ಅವರು ಉಚಿತ ಕನ್ನಡಕ ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಲಿದ್ದಾರೆ. ಆಶಾಕಿರಣ ಯೋಜನೆಯಡಿ ರಾಜ್ಯದ 8 ಜಿಲ್ಲೆಗಳಲ್ಲಿ ಎಲ್ಲ ಜನರ ಕಣ್ಣಿನ ತಪಾಸಣಾ ಕಾರ್ಯವನ್ನ ಆಶಾ ಕಾರ್ಯಕರ್ತೆಯರು ನಡೆಸಿದ್ದರು. ಮೊದಲ ಹಂತದಲ್ಲಿ ಹಾವೇರಿ, ಕಲಬುರಗಿ, ಚಾಮರಾಜನಗರ, ಚಿಕ್ಕಬಳ್ಳಾಪುರ ಸೇರಿದಂತೆ ನಾಲ್ಕು ಜಿಲ್ಲೆಗಳಲ್ಲಿ…

Read More

ವಿಜಯನಗರ: ಜಿಲ್ಲೆಯಲ್ಲಿ ಕೌಟುಂಬಿಕ ಕಲಬದಿದಂ ಬೇಸತ್ತು ತಂದೆಯೊಬ್ಬ ಮಕ್ಕಳಿಗೆ ವಿಷ ಕುಡಿಸಿ, ತಾನು ಕುಡಿದು ಆತ್ಮಹತ್ಯೆಗೆ ಯತ್ನಿಸಿದ ಘಟನೆ ನಡೆದಿದೆ.  ವಿಜಯನಗರ ಜಿಲ್ಲೆಯ ಕೂಡ್ಲಿಗಿ ತಾಲೂಕಿನ ಕಂಚೋಬನಹಳ್ಳಿಯಲ್ಲಿ ಈ ಘಟನೆ ನಡೆದಿದೆ. ಕೌಟುಂಬಿಕ ಕಲಬದಿಂದ ಬೇಸತ್ತಂತ ಮಾರಪ್ಪ ಎಂಬುವರು ತನ್ನ ಇಬ್ಬರು ಮಕ್ಕಳಿಗೆ ವಿಷ ಕುಡಿಸಿ, ತಾನು ಆತ್ಮಹತ್ಯೆಗೆ ಯತ್ನಿಸಿದ್ದಾರೆ. ಈ ವಿಷಯ ತಿಳಿದಂತ ಸ್ಥಳೀಯರು ಅವರನ್ನು ಕೂಡಲೇ ಕೂಡ್ಲಗಿ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಿದ್ದಾರೆ. ವಿಷ ಸೇವಿಸಿದಂತ ಮೂವರಲ್ಲಿ ಮಾರಪ್ಪ ಆರೋಗ್ಯ ಸ್ಥಿತಿ ಗಂಭೀರಗೊಂಡಿದ್ದು, ಇಬ್ಬರು ಮಕ್ಕಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಸಂಬಂಧ ಖಾನಾಹೊಸಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/i-will-not-contest-lok-sabha-elections-minister-hc-mahadevappa/ https://kannadanewsnow.com/kannada/former-madhya-pradesh-cm-kamal-nath-son-nakul-nath-to-join-bjp-soon/

Read More

ಬೆಂಗಳೂರು: ನಾನು ಲೋಕಸಭಾ ಚುನಾವಣೆಗೆ ಸ್ಪರ್ಧಿಸಲ್ಲ. ಇದರ ಬಗ್ಗೆ ಅನಗತ್ಯ ಗೊಂದಲ ಬೇಡ ಎಂಬುದಾಗಿ ಸಚಿವ ಹೆಚ್.ಸಿ ಮಹದೇವಪ್ಪ ಸ್ಪಷ್ಟ ಪಡಿಸಿದ್ದಾರೆ. ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದಂತ ಅವರು, ನಾನು ಲೋಕಸಭಾ ಚುನಾವಣೆಗೆ ಚಾಮರಾಜನಗರ ಕ್ಷೇತ್ರದಿಂದ ಆಕಾಂಕ್ಷಿಯಲ್ಲ. ನಾನು ಸ್ಪರ್ಧೆ ಕೂಡ ಮಾಡಲ್ಲ. ಆ ಬಗ್ಗೆ ವರಿಷ್ಠರಲ್ಲಿ ಟಿಕೆಟ್ ಕೂಡ ಕೇಳಿಲ್ಲ. ಕಾಂಗ್ರೆಸ್ ಹೈಕಮಾಂಡ್ ಯಾರನ್ನೇ ನಿಲ್ಲಿಸಿದರೇ ನಾನು ಬೆಂಬಲಿಸೋದಾಗಿ ತಿಳಿಸಿದರು. ಚಾಮರಾಜನಗರ ಕ್ಷೇತ್ರದ ಲೋಕಸಭಾ ಚುನಾವಣೆಯ ಟಿಕೆಟ್ ಸುನೀಲ್ ಬೋಸ್ ಗೆ ಕೊಡಿ ಎಂಬುದಾಗಿ ಕ್ಷೇತ್ರದ ಶಾಸಕರು, ಮುಖಂಡರು ಹೇಳುತ್ತಿದ್ದಾರೆ. ಸುನೀಲ್ ಬೋಸ್ ಹೆಸರು ಕೂಡ ಚಾಲ್ತಿಯದಲ್ಲಿದೆ ಎಂಬುದಾಗಿ ಹೇಳುವ ಮೂಲಕ ಪುತ್ರ ಲೋಕಸಭಾ ಚುನಾವಣೆಗೆ ನಿಲ್ಲೋದಕ್ಕೆ ಟಿಕೆಟ್ ಆಕಾಂಕ್ಷಿಯಾಗಿರೋ ಸುಳಿವನ್ನು ನೀಡಿದರು. ನಾನು ರಾಜಕೀಯಕ್ಕೆ ಬಂದು 40 ವರ್ಷಗಳಾಗಿವೆ. ಅನಗತ್ಯ ಗೊಂದಲ ಬೇಡ. ನಾನು ಚಾಮರಾಜನಗರ ಕ್ಷೇತ್ರದಿಂದ ಲೋಕಸಭಾ ಚುನಾವಣೆಗೆ ಸ್ಪರ್ಧಿಸೋದಿಲ್ಲ. ಇಲ್ಲಿ ಯಾರೇ ಕಾಂಗ್ರೆಸ್ ಪಕ್ಷದಿಂದ ನಿಂತರೂ ಅವರು ಗೆಲ್ಲಲಿದ್ದಾರೆ ಎಂಬುದಾಗಿ ತಿಳಿಸಿದರು. https://kannadanewsnow.com/kannada/anti-hindu-siddaramaiah-bjp-workers-raise-slogans-against-cm-attempt-to-gherao-car/ https://kannadanewsnow.com/kannada/former-madhya-pradesh-cm-kamal-nath-son-nakul-nath-to-join-bjp-soon/

Read More

ಮಂಗಳೂರು: ಜಿಲ್ಲೆಯಲ್ಲಿ ನಡೆಯುತ್ತಿರುವಂತ ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದಂತ ಸಿಎಂ ಸಿದ್ಧರಾಮಯ್ಯ ಅವರ ಕಾರಿಗೆ ಮುತ್ತಿಗೆ ಹಾಕೋದಕ್ಕೆ ಬಿಜೆಪಿ ಕಾರ್ಯಕರ್ತರು ಯತ್ನಿಸಿದ ಘಟನೆ ಇಂದು ನಡೆದಿದೆ. ಅಲ್ಲದೇ ಹಿಂದೂ ವಿರೋಧಿ ಸಿದ್ಧರಾಮಯ್ಯ ಎಂಬುದಾಗಿ ಕಪ್ಪು ಬಾವುಟ ಪ್ರದರ್ಶಿಸಿ, ಘೋಷಣೆ ಕೂಗಿ ಹೈಡ್ರಾಮಾವನ್ನೇ ಏರ್ಪೋರ್ಟ್ ಬಳಿಯ್ಲಲಿ ನಡೆಸಲಾಗಿದೆ. ಮಂಗಳೂರಿನ ಬಜ್ಪೆ ವಿಮಾನ ನಿಲ್ದಾಣಕ್ಕೆ ಇಂದು ಕಾಂಗ್ರೆಸ್ ಸಮಾವೇಶಕ್ಕೆ ಆಗಮಿಸಿದಂತ ಸಿಎಂ ಸಿದ್ಧರಾಮಯ್ಯ ಅವರಿಗೆ ಬಿಜೆಪಿ ಕಾರ್ಯಕರ್ತರ ಪ್ರತಿಭಟನೆಯ ಬಿಸಿ ಮುಟ್ಟಿದೆ. ವಿಮಾನ ನಿಲ್ದಾಣ ಬಳಿಯಲ್ಲಿ ಸಿಎಂ ಕಾರಿಗೆ ಕಪ್ಪು ಭಾವುಟ ಪ್ರದರ್ಶಿಸಿರುವಂತ ಬಿಜೆಪಿ ಕಾರ್ಯಕರ್ತರು, ಕಾರಿಗೆ ಮುತ್ತಿಗೆ ಹಾಕೋದಕ್ಕೂ ಯತ್ನಿಸಿದ್ದಾರೆ. ಇನ್ನೂ ಹಿಂದೂ ವಿರೋಧಿ ಸಿದ್ಧರಾಮಯ್ಯ ಎಂಬುದಾಗಿ ಘೋಷಣೆ ಕೂಗಿರುವಂತ ಬಿಜೆಪಿ ಕಾರ್ಯಕರ್ತರು, ಕೆಲಕಾಲ ಏರ್ ಪೋರ್ಟ್ ಬಳಿಯಲ್ಲಿ ಹೈಡ್ರಾಮಾವನ್ನೇ ನಡೆಸಿದ್ದಾರೆ. ಈ ವೇಳೆ ಸ್ಥಳದಲ್ಲಿದ್ದಂತ ಪೊಲೀಸರು ಬಿಜೆಪಿ ಕಾರ್ಯಕರ್ತರನ್ನು ವಶಕ್ಕೆ ಪಡೆದು, ಕರೆದೊಯ್ದಿರೋದಾಗಿ ತಿಳಿದು ಬಂದಿದೆ. https://kannadanewsnow.com/kannada/explosion-at-tamil-nadu-firecracker-factory-several-feared-dead/ https://kannadanewsnow.com/kannada/former-madhya-pradesh-cm-kamal-nath-son-nakul-nath-to-join-bjp-soon/

Read More

ಬೆಂಗಳೂರು: ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮದ ಅಧ್ಯಕ್ಷರನ್ನಾಗಿ ಶಾಸಕ ವಿಜಯಾನಂದ ಕಾಶಪ್ಪವನವರನ್ನು ನೇಮಕ ಮಾಡಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಆದೇಶ ಹೊರಡಿಸಿದ್ದಾರೆ. ಈ ಸಂಬಂಧ ಟಿಪ್ಪಣಿ ಹೊರಡಿಸಿರುವಂತ ಅವರು,  ಹುನಗುಂದ ವಿಧಾನಸಭಾ ಕ್ಷೇತ್ರದ ಶಾಸಕರಾಗಿರುವಂತ ಕಾಶಪ್ಪನವರ್ ವಿಜಯಾನಂದ ಶಿವಶಂಕರಪ್ಪ ಅವರನ್ನು ಕರ್ನಾಟಕ ಕ್ರೀಢಾ ಪ್ರಾಧಿಕಾರದ ಅಧ್ಯಕ್ಷರನ್ನಾಗಿ ದಿನಾಂಕ 26-01-2024ರಂದು ನೇಮಿಸಲಾಗಿತ್ತು. ಈ ಆದೇಶವನ್ನು ರದ್ದುಪಡಿಸಲಾಗಿದೆ ಎಂದಿದ್ದಾರೆ. ಶಾಸಕರಾದಂತ ವಿಜಯಾನಂದ ಕಾಶಪ್ಪನವರನ್ನು ಮುಂದಿನ ಎರಡು ವರ್ಷಗಳ ಅವಧಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ನಿಯಮಿತದ ಅಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಅಲ್ಲದೇ ಅವರಿಗೆ ಸಚಿವ ಸಂಪುಟ ದರ್ಜೆಯ ಸ್ಥಾನಮಾನ ನೀಡಲಾಗಿದೆ. ಸಚಿವ ಸಂಪುಟ ದರ್ಜೆಯ ಸಚಿವರಿಗೆ ನೀಡುವ ಎಲ್ಲಾ ಸೌಲಭ್ಯಗಳನ್ನು ನೀಡಿ, ಆದೇಶ ಹೊರಡಿಸುವಂತ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿಗೆ ಟಿಪ್ಪಣಿಯಲ್ಲಿ ಸಿಎಂ ಸಿದ್ಧರಾಮಯ್ಯ ಸೂಚಿಸಿದ್ದಾರೆ. https://kannadanewsnow.com/kannada/former-madhya-pradesh-cm-kamal-nath-son-nakul-nath-to-join-bjp-soon/ https://kannadanewsnow.com/kannada/explosion-at-tamil-nadu-firecracker-factory-several-feared-dead/

Read More

ಬೆಂಗಳೂರು: ರಾಜ್ಯದ ಜನರಿಗೆ ಉತ್ತಮ ಸಾರಿಗೆ ಸೇವೆ ಒದಗಿಸುತ್ತಿರುವಂತ ಕೆ ಎಸ್ ಆರ್ ಟಿ ಸಿಗೆ, ಸಾಲು ಸಾಲು ಪ್ರಶಸ್ತಿಗಳೇ ಹರಿಸಿಕೊಂಡು ಬರುತ್ತಿವೆ. ಇದೀಗ ಉತ್ತಮ ಸೇವೆಗಾಗಿ ಕೆ ಎಸ್ ಆರ್ ಟಿ ಸಿ ಗೆ 6 ಪ್ರಶಸ್ತಿಗಳ ಗರಿಮೆ ಸಂದಿದೆ. ಇದರೊಂದಿಗೆ ನಿಗಮವು ಕಳೆದ 8 ತಿಂಗಳುಗಳಲ್ಲಿ 51 ಪ್ರಶಸ್ತಿ ಸಂದಂತೆ ಆಗಿದೆ. ಈ ಕುರಿತಂತೆ ನಿಗಮ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಕ್ಕೆ, World Manufacturing Congress ಹಾಗೂ World Marketing Congressನ 5 ಪ್ರಶಸ್ತಿಗಳು ಹಾಗೂ ನಿಗಮದ ಮಂಡಳಿ ಕಾರ್ಯದರ್ಶಿ ಮತ್ತು ಮುಖ್ಯ ಸಾರ್ವಜನಿಕ ಸಂಪರ್ಕಾಧಿಕಾರಿಯವರಿಗೆ ಜಾಗತಿಕ ಮಹಿಳಾ ನಾಯಕಿ ಪ್ರಶಸ್ತಿ ಲಭಿಸಿರುತ್ತದೆ ಎಂದು ತಿಳಿಸಿದೆ. ಈ ಕೆಳಕಂಡ ವರ್ಗಗಳಲ್ಲಿ ನಿಗಮಕ್ಕೆ ಪ್ರಶಸ್ತಿಯು ಲಭಿಸಿರುತ್ತದೆ. • ವಿದ್ಯುತ್ ವಾಹನಗಳ ಕೈಗಾರಿಕಾ ನಾಯಕತ್ವ ಪ್ರಶಸ್ತಿ. ಇ.ವಿ.ಪವರ್ ಪ್ಲಸ್ • ಜಾಗತಿಕ ಬ್ರಾಂಡ್ ಉತ್ಕೃಷ್ಟತೆ ಪ್ರಶಸ್ತಿ- ಅತ್ಯುತ್ತಮ ಬ್ರಾಂಡಿಂಗ್ ಮತ್ತು ಮಾರ್ಕೆಟಿಂಗ್ ಉಪಕ್ರಮ • ವರ್ಷದ…

Read More

ಶಿವಮೊಗ್ಗ : ಶಿವಮೊಗ್ಗ ಮಾಚೇನಹಳ್ಳಿ 110/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ರಸ್ತೆ ಅಗಲೀಕರಣ ಕಾಮಗಾರಿ ಹಮ್ಮಿಕೊಂಡಿರುವುದರಿಂದ ಫೆ. 18 ರಂದು ಬೆಳಗ್ಗೆ 11.00 ರಿಂದ ಸಂಜೆ 6.00 ರವರೆಗೆ ಬಿದರೆ, ಮಲ್ನಾಡ್ ಆಸ್ಪತ್ರೆ, ಜಯಂತಿಗ್ರಾಮ, ಕೆ.ಎಸ್.ಆರ್.ಪಿ. ಕಾಲೋನಿ, ಯಲವಟ್ಟಿ, ಹಸೂಡಿ, ಹಸೂಡಿ ಫಾರಂ, ವೀರಭದ್ರಕಾಲೋನಿ, ಸದಾಶಿವಪುರ, ಬಂಗಾರಪ್ಪ ಕಾಲೋನಿ, ಜಿ.ಜಿ.ಕ್ಯಾಂಪ್, ಚಿಕ್ಕಮರಡಿ ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಣೆಯಲ್ಲಿ ತಿಳಿಸಿದೆ.  ಸೊರಬ: ಸಾಂತ್ವನ ಯೋಜನೆಗೆ ಸ್ವಯಂಸೇವಾ ಸಂಸ್ಥೆಗಳಿಂದ ಅರ್ಜಿ ಆಹ್ವಾನ ಶಿವಮೊಗ್ಗ: ಜಿಲ್ಲಾ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯು ಸೊರಬ ತಾಲೂಕಿನಲ್ಲಿ ಮಹಿಳೆಯರ ಮೇಲಿನ ವರದಕ್ಷಿಣೆ. ಕಿರುಕುಳ, ಅತ್ಯಾಚಾರ, ಲೈಂಗಿಕ ಕಿರುಕುಳ, ದೌರ್ಜನ್ಯ ಹಾಗೂ ಇನ್ನಿತರ ರೀತಿಯ ದೌರ್ಜನ್ಯಕ್ಕೆ ಒಳಗಾಗಿ ದೈಹಿಕ ಹಾಗೂ ಮಾನಸಿಕವಾಗಿ ಹಿಂಸೆಯನ್ನು ಅನುಭವಿಸುತ್ತಿರುವ ಮಹಿಳೆಯರಿಗೆ ಸ್ವಯಂ ಸೇವಾ ಸಂಸ್ಥೆಗಳ ಮೂಲಕ ಕಾನೂನು ಸಲಹೆ, ಆರ್ಥಿಕ ಪರಿಹಾರ, ತಾತ್ಕಾಲಿಕ ಆಶ್ರಯ, ರಕ್ಷಣೆ ನೀಡುವುದರ ಜೊತೆಗೆ ಸ್ವಾವಲಂಭನೆ ಸಾಧಿಸಲು ತರಬೇತಿ…

Read More

ತಮಿಳುನಾಡು: ಇಂದು ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ಈ ಘಟನೆಯಲ್ಲಿ ಈವರೆಗೆ 10 ಮಂದಿ ಸಜೀವ ದಹನವಾಗಿದ್ದು, ನಾಲ್ವರಿಗೆ ಗಂಭೀರ ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ತಮಿಳುನಾಡಿ ವಿರುದುನಗರದ ವೆಂಬಕುಟ್ಟೈ ಎಂಬಲ್ಲಿನ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ ಪರಿಣಾಮ 10 ಮಂದಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ವಿಜಯ್ ಎಂಬುವರಿದೆ ಸೇರಿದ ಪಟಾಕಿ ಕಾರ್ಖಾನೆಯಲ್ಲಿ ಈ ಅವಘಡ ಸಂಭವಿಸಿದೆ. ಪಟಾಕಿ ಕಾರ್ಖಾನೆಯಲ್ಲಿ ಉಂಟಾದಂತ ಸ್ಪೋಟದಿಂದಾಗಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಸ್ಪೋಟದಿಂದ ಕಾರ್ಖಾನೆ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://twitter.com/ANI/status/1758773282893959513 https://kannadanewsnow.com/kannada/former-madhya-pradesh-cm-kamal-nath-son-nakul-nath-to-join-bjp-soon/ https://kannadanewsnow.com/kannada/breaking-govt-gives-z-plus-security-to-aicc-president-mallikarjun-kharge-over-threat-to-his-life/

Read More

ಶಿವಮೊಗ್ಗ : ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ ಶಿವಮೊಗ್ಗ ಇವರ ಅಧೀನದ ಸಮುದಾಯ ಆರೋಗ್ಯ ಕೇಂದ್ರಗಳಲ್ಲಿ ಮತ್ತು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಖಾಲಿ ಇರುವ ತಜ್ಞ ವೈದ್ಯರ ಹುದ್ದೆಗಳನ್ನು ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಆಯ್ಕೆ ಮಾಡಲು ನೇರ ಸಂದರ್ಶನ ಏರ್ಪಡಿಸಲಾಗಿದೆ. ಖಾಲಿ ಇರುವ ಫಿಸಿಷಿಯನ್-02, ಸರ್ಜರಿ-02, ಸ್ತ್ರೀರೋಗ ತಜ್ಞ-05, ಅರಿವಳಿಕೆ-09, ಇಎನ್‍ಟಿ-01, ನೇತ್ರ ತಜ್ಞ-03, ಮಕ್ಕಳ ತಜ್ಞ-03, ಕೀಲುಮೂಳೆ-01 ಮತ್ತು ನೆಫ್ರೋಲಜಿಸ್ಟ್ 01 ಒಟ್ಟು 27 ತಜ್ಞ ವೈದ್ಯಾಧಿಕಾರಿಗಳ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಮತ್ತು ಆರೋಗ್ಯ ವಿಸ್ತರಣಾ ಕೇಂದ್ರಗಲಲ್ಲಿ ಖಾಲಿ ಇರುವ ಎಂಬಿಬಿಎಸ್ ವೈದ್ಯರ ಹುದ್ದೆಗಳಿಗೆ ತಾತ್ಕಾಲಿಕವಾಗಿ ಗುತ್ತಿಗೆ ಆಧಾರದಲ್ಲಿ ಒಂದು ವರ್ಷದ ಅವಧಿಗೆ ರೋಸ್ಟರ್ ಮತ್ತು ಮೆರಿಟ್ ಆಧಾರದಲ್ಲಿ ನೇಮಕ ಮಾಡಲು ಅರ್ಹ ಅಭ್ಯರ್ಥಿಗಳ ನೇರ ಸಂದರ್ಶನ ಕರೆಯಲಾಗಿದೆ. ತಜ್ಞರಿಗೆ ಎನ್‍ಹೆಚ್‍ಎಂ ಮಾರ್ಗಸೂಚಿಗಳನುಸಾರ ಸಂಭಾವನೆ ನೀಡಲಾಗುವುದು. ಆಸಕ್ತ ಅಭ್ಯರ್ಥಿಗಳು ಫೆ.21 ರ ಬೆಳಿಗ್ಗೆ 11 ರಿಂದ ಮಧ್ಯಾಹ್ನ 1 ಗಂಟೆವರೆಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ…

Read More

ತಮಿಳುನಾಡು: ಇಂದು ತಮಿಳುನಾಡಿನಲ್ಲಿ ಪಟಾಕಿ ಕಾರ್ಖಾನೆಯೊಂದರಲ್ಲಿ ಭೀಕರ ಸ್ಪೋಟ ಸಂಭವಿಸಿದೆ. ಈ ಘಟನೆಯಲ್ಲಿ ಈವರೆಗೆ 9 ಮಂದಿ ಸಾವನ್ನಪ್ಪಿ, ಹಲವರು ಗಾಯಗೊಂಡಿರೋದಾಗಿ ತಿಳಿದು ಬಂದಿದೆ. ತಮಿಳುನಾಡಿ ವಿರುದುನಗರದಲ್ಲಿರುವಂತ ಪಟಾಕಿ ಕಾರ್ಖಾನೆಯಲ್ಲಿ ಭೀಕರ ಸ್ಪೋಟ ಸಂಭವಿಸಿದ ಪರಿಣಾಮ 9 ಮಂದಿ ಸಾವನ್ನಪ್ಪಿರೋದಾಗಿ ತಿಳಿದು ಬಂದಿದೆ. ಪಟಾಕಿ ಕಾರ್ಖಾನೆಯಲ್ಲಿ ಉಂಟಾದಂತ ಸ್ಪೋಟದಿಂದಾಗಿ ಹಲವರು ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಇನ್ನೂ ಸ್ಪೋಟದಿಂದ ಕಾರ್ಖಾನೆ ಹೊತ್ತಿ ಉರಿಯುತ್ತಿದ್ದು, ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ ಆಗಮಿಸಿ, ಬೆಂಕಿ ನಂದಿಸುವ ಕಾರ್ಯದಲ್ಲಿ ತೊಡಗಿದ್ದಾರೆ. ಈ ಬಗ್ಗೆ ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ. https://kannadanewsnow.com/kannada/balarama-ayodhye/

Read More