Subscribe to Updates
Get the latest creative news from FooBar about art, design and business.
Author: kannadanewsnow09
ಬೆಂಗಳೂರು: ಪಿಜಿಸಿಇಟಿ-2025ಕ್ಕೆ ಅರ್ಜಿ ಸಲ್ಲಿಸಿದ್ದವರಿಗೆ ಮಹತ್ವದ ಮಾಹಿತಿ ಎನ್ನುವಂತೆ, ಇದೀಗ ಶುಲ್ಕ ಪಾವತಿಯ ದಿನಾಂಕವನ್ನು ವಿಸ್ತರಣೆ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರವು ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿದ್ದು, PGCET-2025 ಅರ್ಜಿ ಸಲ್ಲಿಸಲು ಮತ್ತು ಶುಲ್ಕ ಪಾವತಿಸುವ ಕೊನೆ ದಿನಾಂಕವನ್ನು ಮೇ 14ರವರೆಗೆ ವಿಸ್ತರಿಸಲಾಗಿದೆ. ಅಂದು ಬೆಳಿಗ್ಗೆ 11ರೊಳಗೆ ಅರ್ಜಿ ಸಲ್ಲಿಸಬೇಕು. ಅಂದೇ ಸಂಜೆ 6ರೊಳಗೆ ಶುಲ್ಕ ಪಾವತಿಸಲು ಅವಕಾಶ ನೀಡಲಾಗಿದೆ ಎಂಬುದಾಗಿ ತಿಳಿಸಿದೆ. https://twitter.com/KEA_karnataka/status/1921904596525490299 https://kannadanewsnow.com/kannada/our-tradition-is-one-of-tolerance-for-caste-and-religion-encompassing-everyone-cm-siddaramaiah/ https://kannadanewsnow.com/kannada/here-is-the-information-available-about-tourist-places-in-the-districts-and-taluks-of-karnataka/
ಮೈಸೂರು: ನಮ್ಮ ಸರ್ಕಾರ ಬುದ್ಧ, ಬಸವ, ಅಂಬೇಡ್ಕರ್, ಗಾಂಧಿ ಮತ್ತು ಸಂವಿಧಾನದ ಆಶಯಗಳ ಅಡಿಯಲ್ಲಿ ಕಾರ್ಯ ನಿರ್ವಹಿಸುತ್ತಿದೆ. ಜಾತಿ-ಧರ್ಮದ ಸಹಿಷ್ಣತೆ ಇರುವ, ಸರ್ವರನ್ನೂ ಒಳಗೊಳ್ಳುವ ಪರಂಪರೆ ನಮ್ಮದು. ಮನುಷ್ಯರನ್ನು ಜಾತಿ-ಧರ್ಮದ ನೆಪದಲ್ಲಿ ವಿರೋಧಿಸುವ ಕೆಲವರು ಪ್ರಾಣಿಗಳನ್ನು ಪ್ರೀತಿಸುತ್ತಾರೆ. ಪ್ರಾಣಿಗಳನ್ನು ಪ್ರೀತಿಸುವುದು ತಪ್ಪಲ್ಲ, ಆದರೆ ಮನುಷ್ಯರನ್ನು ವಿರೋಧಿಸುವುದು ತಪ್ಪು ಎಂಬುದಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಮೈಸೂರು ಜಿಲ್ಲಾಡಳಿತ ಇಂದು ಹೆಚ್.ಡಿ ಕೋಟೆಯಲ್ಲಿ ಆಯೋಜಿಸಿದ್ದ ಅಂಬೇಡ್ಕರ್ ಜಯಂತಿ ಮತ್ತು ವಿವಿಧ ಇಲಾಖೆಗಳ ಅಭಿವೃದ್ಧಿ ಕಾರ್ಯಗಳ ಉದ್ಘಾಟನೆ ಹಾಗೂ ಶಂಕುಸ್ಥಾಪನೆ ನೆರವೇರಿಸಿ ಮಾತನಾಡಿದರು ಆರ್ಥಿಕವಾಗಿ ಸರ್ವರಿಗೂ ಶಕ್ತಿ ಬಂದರೆ ಜಾತಿ ಹೋಗುತ್ತದೆ. ಬುದ್ಧ, ಬಸವಣ್ಣ ಅವರು ಜಾತಿ ಹೋಗಬೇಕೆಂದು ಹೋರಾಟ ಮಾಡಿದರೂ ಇನ್ನೂ ಜಾತಿ ಹೋಗಿಲ್ಲ. ಬಸವಣ್ಣನನ್ನು ಪ್ರೀತಿಸ್ತೀವಿ, ಪೂಜಿಸ್ತೀವಿ ಆದರೆ ಬಸವಣ್ಣರನ್ನು ಪಾಲಿಸುವುದಿಲ್ಲ. ಇದು ಇಂದಿನ ದುರಂತ. ಜಾತಿ ಅಸಮಾನತೆ ಕಾರಣಕ್ಕೆ ನೊಂದಿದ್ದ ಅಂಬೇಡ್ಕರ್ ಅವರು ಬೌದ್ಧ ಧರ್ಮಕ್ಕೆ ಸೇರಿ, ತಾನು ಹಿಂದೂವಾಗಿ ಹುಟ್ಟಿದರೂ ಹಿಂದೂವಾಗಿ ಸಾಯುವುದಿಲ್ಲ ಎಂದು ಘೋಷಿದಿದ್ದರು ಎಂದರು. ಒಳಮೀಸಲಾತಿ ಕುರಿತಾದ…
ನವದೆಹಲಿ: ಕದನ ವಿರಾಮಕ್ಕೆ ಒಪ್ಪಿದ ನಂತ್ರವೂ ಪಾಕಿಸ್ತಾನ ಜಮ್ಮು ಸೇರಿದಂತೆ ವಿವಿಧ ಭಾರತದ ಸ್ಥಳಗಳ ಮೇಲೆ ಡ್ರೋನ್, ಕ್ಷಿಪಣಿ ಬಳಸಿ ದಾಳಿ ನಡೆಸಿತ್ತು. ಈ ದಾಳಿಯನ್ನು ಭಾರತೀಯ ಸೇನೆ ವಿಫಲಗೊಳಿಸಿತ್ತು. ಈ ನಂತ್ರ ಇಂದು ಭಾರತ ಮತ್ತು ಪಾಕಿಸ್ತಾನದ ಡಿಜಿಎಂಒಗಳು ಮಾತುಕತೆ ನಡೆಸಿದರು. ಈ ಮಾತುಕತೆಯ ವೇಳೆ ಕದನ ವಿರಾಮ ಉಲ್ಲಂಘಿಸಲ್ಲ ಎಂಬುದಾಗಿ ಪಾಕಿಸ್ತಾನ ಸ್ಪಷ್ಟಪಡಿಸಿದೆ. ಆಪರೇಷನ್ ಪಹಲ್ಗಮ್ ನಂತರ ದೇಶಗಳು ಕದನ ವಿರಾಮ ಘೋಷಿಸಿದ ಎರಡು ದಿನಗಳ ನಂತರ, ಭಾರತ ಮತ್ತು ಪಾಕಿಸ್ತಾನದ ಮಿಲಿಟರಿ ಕಾರ್ಯಾಚರಣೆಗಳ ಮಹಾನಿರ್ದೇಶಕರು (ಡಿಜಿಎಂಒಗಳು) ಸೋಮವಾರ ಸಂಜೆ ಸಭೆ ನಡೆಸಿದರು ಎಂದು ಅಧಿಕೃತ ಮೂಲಗಳು ತಿಳಿಸಿವೆ. https://twitter.com/ANI/status/1921903364457021915 ಈ ಸಭೆಯಲ್ಲಿ ಭಾರತ ಮತ್ತು ಪಾಕಿಸ್ತಾನ ಪರಸ್ಪರ ಕದನ ವಿರಾಮಕ್ಕೆ ಒಪ್ಪಿಗೆ ಸೂಚಿಸಿದ್ದಾರೆ. ಇನ್ಮುಂದೆ ಭಾರತದ ಮೇಲೆ ಕದನ ವಿರಾಮ ಉಲ್ಲಂಘಿಸಿ ದಾಳಿ ನಡೆಸುವುದಿಲ್ಲ ಎಂಬುದಾಗಿ ಪಾಕಿಸ್ತಾನದ ಡಿಜಿಎಂಒ ಸ್ಪಷ್ಟಪಡಿಸಿರೋದಾಗಿ ತಿಳಿದು ಬಂದಿದೆ. ಕ್ಷಣ ಕ್ಷಣದ ಅಪ್ ಡೇಟ್ ಗಾಗಿ ಕನ್ನಡ ನ್ಯೂಸ್ ನೌ ಗ್ರೂಪ್ ಸೇರಲು…
ಬೆಂಗಳೂರು: ಸೋಷಿಯಲ್ ಮೀಡಿಯಾದಲ್ಲಿ ಭಾರತ ಮತ್ತು ಪಾಕಿಸ್ತಾನ ಉದ್ವಿಗ್ನತೆಯ ನಡುವೆ ತರಾವರಿ ವೀಡಿಯೋಗಳು ಹರಿದಾಡುತ್ತಿದ್ದಾವೆ. ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್ ಗಳನ್ನು ನಂಬಿ ಮೋಸ ಹೋಗಬೇಡಿ ಅಂತ ರಾಜ್ಯ ಸರ್ಕಾರ ಎಚ್ಚರಿಸಿದೆ. ಈ ಬಗ್ಗೆ ಕರ್ನಾಟಕ ಸರ್ಕಾರದ ವಾರ್ತಾ ಇಲಾಖೆಯ ಅಧಿಕೃತ ಎಕ್ಸ್ ಖಾತೆಯಲ್ಲಿ ಪೋಸ್ಟ್ ಮಾಡಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಯುದ್ಧದ ವಿಡಿಯೋ ಗೇಮ್ ದೃಶ್ಯಗಳ ಹಾವಳಿ ಇಂತಹ ಹಲವಾರು ಯುದ್ಧದ ವಿಡಿಯೋ ಗೇಮ್ ದೃಶ್ಯಗಳನ್ನು ಭಾರತ-ಪಾಕಿಸ್ತಾನ ಸಂಘರ್ಷದ ನೈಜ ದೃಶ್ಯಗಳೆಂದು ಬಿಂಬಿಸಲಾಗುತ್ತಿದೆ. ದಯವಿಟ್ಟು ಇಂತಹ ಪ್ರೊಪಗಾಂಡ ಪೋಸ್ಟ್ಗಳನ್ನು ನಂಬಿ ಮೋಸ ಹೋಗದಿರಿ ಎಂಬುದಾಗಿ ತಿಳಿಸಿದೆ. ಎಚ್ಚರವಾಗಿರಿ! ನೈಜ ಮಾಹಿತಿ ಪಡೆಯಿರಿ! ವೀಡಿಯೋ, ಪೋಟೋಗಳಿಗೆ ಸಂಬಂಧಿಸಿದಂತೆ ಫ್ಯಾಕ್ಟ್ ಚೆಕ್ ಮಾಡೋದಕ್ಕೂ ವಿನಂತಿಸಿದೆ. https://twitter.com/KarnatakaVarthe/status/1921875365427024316 https://kannadanewsnow.com/kannada/state-health-department-nhm-employees-have-not-received-salaries-for-2-months-union-appeals-to-the-government-for-payment/ https://kannadanewsnow.com/kannada/operation-sindoor-pm-modi-to-address-nation-today-at-8-pm/
ಬೆಂಗಳೂರು: ರಾಜ್ಯದ ಆರೋಗ್ಯ ಇಲಾಖೆಯಲ್ಲಿ ಎನ್ ಹೆಚ್ ಎಂ ಗುತ್ತಿಗೆ ನೌಕರರಾಗಿ ಸಾವಿರಾರು ನೌಕರರು ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ನೌಕರರಿಗೆ ಎರಡು ತಿಂಗಳೇ ಕಳೆದರು ವೇತನ ಪಾವತಿಯನ್ನು ಸರ್ಕಾರ ಮಾಡಿಲ್ಲ. ಹೀಗಾಗಿ ಕೂಡಲೇ ಪಾವತಿ ಮಾಡುವಂತೆ ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವೈದ್ಯಕೀಯ ಶಿಕ್ಷಣ ಇಲಾಖೆಯ ಗುತ್ತಿಗೆ, ಹೊರಗುತ್ತಿಗೆ ನೌಕರರ ಸಂಘವು ಒತ್ತಾಯಿಸಿದೆ. ಈ ಕುರಿತಂತೆ ಸಂಘದ ರಾಜ್ಯಾಧ್ಯಕ್ಷ ಶ್ರೀಕಾಂತ್ ಸ್ವಾಮಿ ಅವರು ಮುಖ್ಯಮಂತ್ರಿ ಸಿದ್ಧರಾಮಯ್ಯ, ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರಿಗೆ ಪತ್ರ ಬರೆದು ಮನವಿ ಮಾಡಿದ್ದಾರೆ. ಅವರು ಬರೆದಿರುವಂತ ಪತ್ರದಲ್ಲಿ ರಾಷ್ಟ್ರೀಯ ಆರೋಗ್ಯ ಅಭಿಯಾನದ ಗುತ್ತಿಗೆ ಮತ್ತು ಹೊರಗುತ್ತಿಗೆ ಸಿಬ್ಬಂದಿಗಳಿಗೆ ಅತ್ಯಂತ ಕಡಿಮೆ ವೇತನ ಇದ್ದು, ಮಾರ್ಚ್, ಎಪ್ರಿಲ್ 2025 ತಿಂಗಳ ವೇತನ ಪಾವತಿ ಆಗದೇ ಕಡಿಮೆ ವೇತನ ಪಡೆಯುತ್ತಿರುವ ಸಿಬ್ಬಂದಿಗಳ ಜೀವನ ನಿರ್ವಹಣೆ ಕಷ್ಟವಾಗಿದೆ. ಮಕ್ಕಳ ಶಾಲಾ ಫೀಸು ಪಾವತಿ, ಇ.ಎಮ್.ಐ ಹಾಗೂ ಮನೆ ಬಾಡಿಗೆ ಕಟ್ಟೋದಕ್ಕೂ ಕಷ್ಟವಾಗಿದೆ. ಕಳೆದ ಎರಡು ತಿಂಗಳುಗಳಿಂದ…
ಬೆಂಗಳೂರು: ಅರಣ್ಯ ಇಲಾಖೆಯ ವತಿಯಿಂದ ನೆಡಲಾಗುವ ಸಸಿಗಳ ಬೆಳವಣಿಗೆ ಮೇಲೆ ನಿಗಾವಹಿಸಲು ಪ್ರತಿ ಸಸಿಯನ್ನು ಜಿಯೊ ಟ್ಯಾಗ್ ಮೂಲಕ ದಾಖಲೀಕರಣ ಮಾಡುವಂತೆ ಅಧಿಕಾರಿಗಳಿಗೆ ಆದೇಶಿಸಿದ್ದೇನೆ. ಇದರಿಂದ ಸಸಿ ಯಾವ ವರ್ಷ ಎಷ್ಟು ಬೆಳೆಯಿತು? ಸ್ಥಿತಿಗತಿ ಏನಿದೆ ಎಂಬ ಮಾಹಿತಿ ಇಲಾಖೆ ವೆಬ್ಸೈಟ್ನಲ್ಲಿ ಸಿಗಲಿದೆ ಎಂದು ಅರಣ್ಯ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. https://twitter.com/KarnatakaVarthe/status/1921842055153611189 ಇತ್ತೀಚೆಗೆ ಸುಪ್ರೀಂಕೋರ್ಟ್ ಸಹ ಹೆಚ್ಚಿನ ಮರಗಳನ್ನು ಕಡಿಯುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದೆ. ಜಾಗತಿಕ ತಾಪಮಾನ ಏರಿಕೆ ಮತ್ತು ಹವಾಮಾನ ಬದಲಾವಣೆಯ ಪ್ರಸಕ್ತ ಸನ್ನಿವೇಶದಲ್ಲಿ ವೃಕ್ಷ ಸಂರಕ್ಷಣೆ ನಮ್ಮೆಲ್ಲರ ಹೊಣೆಯಾಗಿದೆ ಎಂದರು. ಅಭಿವೃದ್ಧಿಯ ಹೆಸರಲ್ಲಿ ನೂರಾರು ಮರಗಳ ಕಡಿತಲೆಗೆ ಅನುಮತಿ ನೀಡುತ್ತಿರುವ ಬಗ್ಗೆ ಜನಾಕ್ರೋಶ ವ್ಯಕ್ತವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಅನಗತ್ಯವಾಗಿ ಮರ ಕಡಿಯಲು ಅನುಮತಿ ನೀಡಬಾರದು ಎಂದು ಸೂಚನೆ ನೀಡಿದರು. 2015ರ ಪೂರ್ವದಲ್ಲಿ ಪಟ್ಟಾ ಜಮೀನು ಮತ್ತು ಒತ್ತುವರಿ ಸೇರಿ 3 ಎಕರೆಗಿಂತ ಕಡಿಮೆ ಇರುವ ಬಡ ಜನರಿಗೆ ಪುನರ್ವಸತಿ ಕಲ್ಪಿಸುವವರೆಗೆ ತೊಂದರೆ ನೀಡದೆ, ದೊಡ್ಡ ಒತ್ತುವರಿಯನ್ನು ನಿರ್ದಾಕ್ಷಿಣ್ಯವಾಗಿ ತೆರವು…
ಬೆಂಗಳೂರು: ನಾನು ಈ ಬಗ್ಗೆ ತುಂಬಾ ತೀಕ್ಷ್ಣವಾಗಿ ಪ್ರತಿಕ್ರಿಯಿಸಲು ಕಾರಣ, ಇತ್ತೀಚಿನ ದಿನಗಳಲ್ಲಿ ಅಪಘಾತದ ಬಗ್ಗೆ ಭಯ ಮತ್ತು ಸಂವೇದನಾ ಶೀಲತೆ ಇಲ್ಲದಂತಾಗಿರುವುದು. ನೂರು ಅಪಘಾತಗಳಲ್ಲಿ ನನ್ನದೊಂದು ಎಂಬ ಅಸಹನೀಯ ಭಾವನೆ ಚಾಲನಾ ಸಿಬ್ಬಂದಿಗಳಲ್ಲಿ ಇರಬಾರದು ಎಂಬುದಾಗಿ ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಚಾಲನಾ ಸಿಬ್ಬಂದಿಗಳಿಗೆ ಎಚ್ಚರಿಸಿದರು. ಇಂದು ನೂತನವಾಗಿ ಆಯ್ಕೆಯಾದಂತ 2,286 ಬಿಎಂಟಿಸಿ ನಿರ್ವಾಹಕರಿಗೆ ನೇಮಕಾತಿ ಆದೇಶ ಪತ್ರವನ್ನು ವಿತರಿಸಿ ಮಾತನಾಡಿದಂತ ಅವರು, ಅಪಘಾತಗಳಿಗೆ ಕಾರಣರಾದ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಕೈಗೊಳ್ಳುವುದಾಗಿ ಖಡಕ್ ಎಚ್ಚರಿಕೆ ನೀಡಿದರು. ಕಳೆದ 15 ದಿವಸಗಳ ಹಿಂದೆ ಅಪಘಾತದಲ್ಲಿ ಕಾಲುಕಳೆದುಕೊಂಡ ಚಾಲನಾ ಸಿಬ್ಬಂದಿಯೊಬ್ಬರಿಗೆ ರೂ.25 ಲಕ್ಷ ಪರಿಹಾರ ಹಣವನ್ನು ನಾವು ನೀಡುವಾಗ ನನಗೆ ಅರ್ಥವಾಗಿದ್ದು ಒಂದೇ ವಿಷಯ, ಯಾವುದೇ ಆರ್ಥಿಕ ಸೌಲಭ್ಯವು ಆ ಸಿಬ್ಬಂದಿಗೆ ತನ್ನ ಹಿಂದಿನ ಸಂತೋಷದ ಜೀವನ ತಂದುಕೊಡುವುದಿಲ್ಲ. ಬೇರೆಯವರನ್ನು ನೋಡಿದಾಗ ಅವನಿಗಾಗುವ ಮಾನಸಿಕ ವೇದನೆ ಪದಗಳಲ್ಲಿ ವಿವರಿಸಲು ಸಾಧ್ಯವಿಲ್ಲ ಎಂದು ಹೇಳಿದರು. ಬಸ್ಸು ರಸ್ತೆಯಲ್ಲಿ…
ಬೆಂಗಳೂರು: ರಾಜ್ಯ ಸರ್ಕಾರದಿಂದ ವರ್ಗಾವಣೆ ನಿರೀಕ್ಷೆಯಲ್ಲಿದ್ದಂತ ಸರ್ಕಾರಿ ನೌಕರರಿಗೆ ಸಿಹಿಸುದ್ದಿ ನೀಡಿದೆ. ಈ ಸಂಬಂಧ 2025-26ನೇ ಸಾಲಿನ ಸರ್ಕಾರಿ ನೌಕರರ ವರ್ಗಾವಣೆ ಮಾರ್ಗಸೂಚಿಯನ್ನು ಪ್ರಕಟಿಸಿದೆ. ಈ ಸಂಬಂಧ ರಾಜ್ಯ ಸರ್ಕಾರದಿಂದ ನಡವಳಿಯನ್ನು ಹೊರಡಿಸಲಾಗಿದೆ. ಅದರಲ್ಲಿ 2025-26 ಸಾಲಿನ ವರ್ಗಾವಣೆ ಮಾರ್ಗಸೂಚಿಗಳನ್ನು ಸರ್ಕಾರವು ಹೊರಡಿಸಲು ಇಚ್ಚಿಸುತ್ತದೆ. ಈ ವರ್ಗಾವಣೆ ಉದ್ದೇಶಕ್ಕಾಗಿ ಈಗಾಗಲೇ ಹೊರಡಿಸಲಾಗಿರುವ ಪ್ರತ್ಯೇಕ ಅಧಿನಿಯಮ / ನಿಯಮಗಳು ಅನ್ವಯವಾಗುವ ಸರ್ಕಾರಿ ನೌಕರರಿಗೆ ಈ ಮಾರ್ಗಸೂಚಿಗಳು ಅನ್ವಯವಾಗುವುದಿಲ್ಲ. 2. ವಿವರಣೆ:-ಈ ಆದೇಶದಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸದ ಹೊರತು,- (1) “ಸಕ್ಷಮ ಪ್ರಾಧಿಕಾರ” ಎಂದರೆ ನೇಮಕಾತಿ ಪ್ರಾಧಿಕಾರ ಅಥವಾ ವರ್ಗಾವಣೆ/ ಚಲನವಲನ ಮಾಡಲು ಅಧಿಕಾರ ಹೊಂದಿರುವ ಪ್ರಾಧಿಕಾರ. (2) “ವರ್ಗಾವಣೆ” ಎಂದರೆ ಒಬ್ಬ ಸರ್ಕಾರಿ ನೌಕರನನ್ನು ಒಂದು ಹುದ್ದೆಯಿಂದ ಮತ್ತೊಂದು ಹುದ್ದೆಯ ಕರ್ತವ್ಯಗಳನ್ನು ನಿರ್ವಹಿಸಲು ಒಂದು ಕೇಂದ್ರ ಸ್ಥಾನದಿಂದ ಮತ್ತೊಂದು ಕೇಂದ್ರ ಸ್ಥಾನಕ್ಕೆ ಅಥವಾ ಒಂದು ಇಲಾಖೆ/ಕ್ಷೇತ್ರ ಇಲಾಖೆ/ ಆಯುಕ್ತಾಲಯ/ನಿರ್ದೇಶನಾಲಯ, ಇತರೆ ಕಛೇರಿಯ ಪಸ್ತುತ ಇರುವ ಕೇಂದ್ರ ಸ್ನಾನವನ್ನು ಬದಲಾಯಿಸಿ ಬೇರೊಂದು ಕೇಂದ್ರ ಸ್ಥಾನಕ್ಕೆ…
ಬೆಂಗಳೂರು: ಇಂದು ನೂತನವಾಗಿ ಆಯ್ಕೆಯಾಗಿದ್ದಂತ ಬಿಎಂಟಿಸಿಯ 2,286 ನಿರ್ವಾಹಕರಿಗೆ ನೇಮಕಾತಿ ಆದೇಶ ಪತ್ರವನ್ನು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ವಿತರಿಸಿದರು. ಈ ಬಳಿಕ ಮಾತನಾಡಿದಂತ ಅವರು, ನೂತನ 2,286 ಬಿಎಂಟಿಸಿ ನಿರ್ವಾಹಕರಿಗೆ ನೇಮಕಾತಿ ಪತ್ರ ನೀಡಲಾಗುತ್ತಿರುವುದು ಸಂತೋಷದ ಸಂಗತಿ. ಬಸ್ ಅಪಘಾತಗಳಿಗೆ ಕಾರಣರಾದ ಸಂಬಂಧಪಟ್ಟ ಹಿರಿಯ ಅಧಿಕಾರಿಗಳ ಮೇಲೆ ನಿರ್ದಾಕ್ಷಿಣ್ಯವಾಗಿ ಶಿಸ್ತಿನ ಕ್ರಮ ಕೈಗೊಳ್ಳಲಾಗುತ್ತದೆ ಎಂಬುದಾಗಿ ಖಡಕ್ ಎಚ್ಚರಿಕೆ ನೀಡಿದರು. 2018 ರಿಂದ ಇಲ್ಲಿಯವರೆಗೂ ಬಿ.ಎಂ.ಟಿ.ಸಿಯಲ್ಲಿ ಯಾವುದೇ ನೇಮಕಾತಿ ಆಗಿರಲಿಲ್ಲ. ಸರ್ಕಾರಿ ವ್ಯವಸ್ಥೆಯಲ್ಲಿ ಪಾರದರ್ಶಕವಾಗಿ ನೇಮಕಾತಿ ಪೂರ್ಣಗೊಳಿಸುವುದು ಒಂದು ಸವಾಲಿನ ಕೆಲಸವೇ ಸರಿ ಎಂದು ನಾನು ಭಾವಿಸಿದ್ದೇನೆ. ಈಗಾಗಲೇ ನಮ್ಮ ಸರ್ಕಾರ ಬಂದ ಕೂಡಲೇ ನಾಲ್ಕು ಸಾರಿಗೆ ನಿಗಮಗಳಲ್ಲಿ 9000 ಹುದ್ದೆಗಳ ನೇಮಕಾತಿಗೆ ಚಾಲನೆ ನೀಡಲಾಗಿದೆ ಎಂದರು. ಕಳೆದ ಎರಡು ವರ್ಷದಲ್ಲಿ ಅತ್ಯಂತ ಪಾರದರ್ಶಕವಾಗಿ 4700 ಹೊಸ ನೇಮಕಾತಿ ಮತ್ತು 1000 ಅನುಕಂಪದ ನೇಮಕಾತಿ ಪೂರ್ಣಗೊಳಿಸಲಾಗಿದೆ. ಉಳಿದ 4300 ನೇಮಕಾತಿಗಳು ಇನ್ನೊಂದು ತಿಂಗಳಲ್ಲಿ ಪೂರ್ಣಗೊಳ್ಳಲಿದೆ ಎಂದು ಹೇಳಿದರು. ಸರ್ಕಾರಿ/ ಖಾಸಗಿವಲಯಗಳಲ್ಲಿ…
ನವದೆಹಲಿ: ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನತೆಯ ಕಾರಣದಿಂದ ಷೇರು ಮಾರುಕಟ್ಟೆ ಕುಸಿತಗೊಂಡಿತ್ತು. ಕದನ ವಿರಾಮದ ಬಳಿಕ ಷೇರು ಮಾರುಕಟ್ಟೆ ಮತ್ತೆ ಏರಿಕೆ ಕಂಡಿದೆ. ಇಂದು ಸೆನ್ಸೆಕ್ಸ್ 2000 ಅಂಕಗಳಿಗಿಂತ ಹೆಚ್ಚು ಏರಿಕೆಯಾಗಿ ಹೂಡಿಕೆದಾರರಿಗೆ 15 ಲಕ್ಷ ಕೋಟಿ ರೂ. ಗಳಿಸುವಂತೆ ಮಾಡಿದೆ. ಭಾರತ ಮತ್ತು ಪಾಕಿಸ್ತಾನ ನಡುವಿನ ಕದನ ವಿರಾಮ ಘೋಷಣೆಯನ್ನು ಹೂಡಿಕೆದಾರರು ಹರ್ಷೋದ್ಗಾರಗಳಿಂದ ಪ್ರೋತ್ಸಾಹಿಸಲ್ಪಟ್ಟಿದ್ದರಿಂದ, ಎಲ್ಲಾ ವಲಯಗಳಲ್ಲಿ ಘನ ಲಾಭಗಳು ಕಂಡುಬಂದಿದ್ದರಿಂದ ಸೋಮವಾರ ದೇಶೀಯ ಷೇರುಪೇಟೆಗಳು ತೀವ್ರವಾಗಿ ಏರಿದವು. 30 ಷೇರುಗಳ ಬಿಎಸ್ಇ ಸೆನ್ಸೆಕ್ಸ್ ಪ್ಯಾಕ್ 2,975 ಪಾಯಿಂಟ್ಗಳು ಅಥವಾ ಶೇಕಡಾ 3.74 ರಷ್ಟು ಏರಿಕೆಯಾಗಿ 82,429 ಕ್ಕೆ ಮುಕ್ತಾಯವಾಯಿತು. ಆದರೆ ವಿಶಾಲವಾದ ಎನ್ಎಸ್ಇ ನಿಫ್ಟಿ ಸೂಚ್ಯಂಕ 917 ಪಾಯಿಂಟ್ಗಳು ಅಥವಾ ಶೇಕಡಾ 3.82 ರಷ್ಟು ಏರಿಕೆಯಾಗಿ 24,925 ಕ್ಕೆ ಸ್ಥಿರವಾಯಿತು. ದೇಶೀಯ ಷೇರುಪೇಟೆಗಳಲ್ಲಿ ಇಂತಹ ಏರಿಕೆ ಕಂಡುಬಂದ ಕಾರಣ ಬಿಎಸ್ಇ ಮಾರುಕಟ್ಟೆ ಬಂಡವಾಳೀಕರಣ (ಎಂ-ಕ್ಯಾಪ್) ರೂ. 16 ಲಕ್ಷ ಕೋಟಿಗೂ ಹೆಚ್ಚು ಸೃಷ್ಟಿಯಾಯಿತು. ಎಚ್ಡಿಎಫ್ಸಿ ಬ್ಯಾಂಕ್, ಐಸಿಐಸಿಐ…













