Author: kannadanewsnow09

ಬೆಂಗಳೂರು: ಪರಿಸರ ಸ್ನೇಹಿ ಗಣೇಶೋತ್ಸವ ಆಚರಣೆಯ ಭಾಗವಾಗಿ ಇಂದು ಸಚಿವ ರಾಮಲಿಂಗಾರೆಡ್ಡಿ, ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯಾ ರೆಡ್ಡಿ ಅವರು ಉಚಿತವಾಗಿ ಮಣ್ಣಿನ ಗಣೇಶ ಮೂರ್ತಿಯನ್ನು ಬೆಂಗಳೂರಿನ ಈ ಸ್ಥಳಗಳಲ್ಲಿ ವಿತರಣೆ ಮಾಡಲಿದ್ದಾರೆ. ಕಳೆದ 10 ರಿಂದ 15 ವರ್ಷಗಳಿಂದ ಸಾರಿಗೆ ಹಾಗೂ ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ಮತ್ತು ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಸೌಮ್ಯರೆಡ್ಡಿ ಅವರು ಸಾರ್ವಜನಿಕರಿಗೆ ಉಚಿತವಾಗಿ ಮಣ್ಣಿನ ಗಣೇಶ ಮೂರ್ತಿಗಳನ್ನು ವಿತರಣೆ ಮಾಡುತ್ತಾ ಬಂದಿದ್ದಾರೆ. POP ಗಣಪಗಳ ವಿಸರ್ಜನೆಯಿಂದ ಮಾಲಿನ್ಯಕ್ಕೆ‌ ಅದರಲ್ಲೂ ಜಲ ಮಾಲಿನ್ಯವಾಗುತ್ತದೆ. ಪರಿಸರ ಮಾಲಿನ್ಯ ತಡೆಗಟ್ಟುವುದು ಮತ್ತು ಅಂತರ್ಜಲದ ಗುಣಮಟ್ಟಕ್ಕೆ ಯಾವುದೇ ಹಾನಿಕಾರಕವಾಗದಂತೆ, ನೈಸರ್ಗಿಕ ಸಮತೋಲನ ಕಾಪಾಡುವಲ್ಲಿ ಸಹಕಾರಿಯಾಗುವ ಈ‌ ಮಣ್ಣಿನ ಗಣಪತಿ ಸ್ಥಾಪನೆ ಮತ್ತು‌ ವಿಸರ್ಜನೆಯ ಉಪಕ್ರಮವು ಪರಿಸರ ಸ್ನೇಹಿಯಾಗಿದೆ. ಇಂದು ಈ ಕೆಳಕಂಡ ಸ್ಥಳದಲ್ಲಿ ರಾಮಲಿಂಗಾರೆಡ್ಡಿ, ಸೌಮ್ಯಾ ರೆಡ್ಡಿ ಅವರು ಮಣ್ಣಿನ ಗಣಪತಿಯನ್ನು ಉಚಿತವಾಗಿ ವಿತರಣೆ 1. ದಿನಾಂಕ: 26.08.2025 ರಂದು ಬೆಳಿಗ್ಗೆ 8.30 ಕ್ಕೆ ಶಾಸಕರ ಕಛೇರಿ, ಕೋರಮಂಗಲ 2. ಬೆಳಿಗ್ಗೆ…

Read More

ಬೆಂಗಳೂರು: ರಾಜ್ಯದ ರೈತರಿಗೆ ಗುಡ್ ನ್ಯೂಸ್ ಎನ್ನುವಂತೆ ಅರ್ಜಿ ಹಾಕದಿದ್ದರೂ ಪೌತಿ ಖಾತೆ ಅಭಿಯಾನವನ್ನು ಸರ್ಕಾರದಿಂದ ಆರಂಭಿಸಲಾಗುತ್ತಿದೆ. ಈ ಮೂಲಕ ವಾರಸುದಾರರ ಹಸರಿಗೆ ಜಮೀನು ವರ್ಗಾವಣೆ ಮಾಡುವುದಾಗಿ ಕಂದಾಯ ಸಚಿವ ಕೃಷ್ಣ ಬೈರೇಗೌಡ ತಿಳಿಸಿದ್ದಾರೆ. ಸೋಮವಾರ ವಿಕಾಸಸೌಧದಿಂದ ವಿಡಿಯೋ ಕಾನ್ಫರೆನ್ಸ್ ಮೂಲಕ ರಾಜ್ಯದ ಎಲ್ಲಾ ತಹಶೀಲ್ದಾರರುಗಳ ಜೊತೆ ಪ್ರಗತಿ ಪರಿಶೀಲನಾ ಸಭೆ ನಡೆಸಿ ಮಾತನಾಡಿದ ಅವರು, “ಕಳೆದ ಎರಡು ವರ್ಷಗಳಿಂದ ತಹಶೀಲ್ದಾರ್ ನ್ಯಾಯಾಲಯಗಳ ತಕರಾರು ಅರ್ಜಿಗಳ ವಿಲೇ ಕೆಲಸ ಗಮನಾರ್ಹ ರೀತಿಯಲ್ಲಿ ಪ್ರಗತಿ ಕಂಡಿತ್ತು. ಈ ಮೊದಲು ಒಂದು ಪ್ರಕರಣದ ಇತ್ಯರ್ಥಕ್ಕೆ 212 ದಿನ ತೆಗೆದುಕೊಳ್ಳುತ್ತಿದ್ದರೆ, ಪ್ರಸ್ತುತ 82 ದಿನಕ್ಕೆ ಇಳಿಸಲಾಗಿತ್ತು. ಆದರೆ, ಬರುಬರುತ್ತಾ ತಕರಾರು ಅರ್ಜಿಗಳ ವಿಲೇ ಕೆಲಸ ಮತ್ತೆ ವೇಗ ಕಳೆದುಕೊಳ್ಳುತ್ತಿರುವುದನ್ನು ಒಪ್ಪಲು ಸಾಧ್ಯವಿಲ್ಲ” ಎಂದು ಬೇಸರ ಹೊರಹಾಕಿದರು. ರಾಜ್ಯದಲ್ಲಿ 52 ಲಕ್ಷ ಜಮೀನುಗಳು ಮೃತರ ಹೆಸರಿನಲ್ಲಿದೆ. ಈ ಪೈಕಿ ಫೌತಿ ಖಾತೆ ಆಂದೋಲನದ ಮೂಲಕ 3,35,727 ಪ್ರಕರಣಗಳಲ್ಲಿ ಮೃತರ ಹೆಸರಿನಿಂದ ಅವರ ವಾರಸುದಾರರ ಹೆಸರಿಗೆ ಜಮೀನು ವರ್ಗಾವಣೆ…

Read More

ಇತ್ತೀಚೆಗೆ ಹೃದಯಾಘಾತಗಳ ಸಂಖ್ಯೆ ಹೆಚ್ಚಾಗುತ್ತಿದೆ. ಅದರಲ್ಲೂ ಅಧ್ಯಯನವೊಂದರ ಪ್ರಕಾರ ಬೆಳಗ್ಗೆ 7 ರಿಂದ 11 ಗಂಟೆಯ ಸಮಯದ ಒಳಗೆ ಹೆಚ್ಚಾಗಿ ಆಗುತ್ತಿದ್ದಾವೆ. ಹಾಗಾದ್ರೇ ಇದಕ್ಕೆ ಕಾರಣವೇನು ಎನ್ನುವ ಬಗ್ಗೆ ಮುಂದೆ ಓದಿ. ವಿಶ್ವ ಆರೋಗ್ಯ ಸಂಸ್ಥೆ (WHO) ಪ್ರಕಾರ, 2022 ರಲ್ಲಿ ಅಂದಾಜು 19.8 ಮಿಲಿಯನ್ ಜನರು ಹೃದಯ ಸಂಬಂಧಿ ಕಾಯಿಲೆಗಳಿಂದ ಸಾವನ್ನಪ್ಪಿದ್ದಾರೆ. ಇದು ಜಾಗತಿಕ ಸಾವುಗಳಲ್ಲಿ ಸುಮಾರು 32% ಆಗಿದೆ. ಇವುಗಳಲ್ಲಿ, 85% ಸಾವುಗಳು ಹೃದಯಾಘಾತ ಮತ್ತು ಪಾರ್ಶ್ವವಾಯು ಕಾರಣ. ಹೃದಯಕ್ಕೆ ರಕ್ತ ಮತ್ತು ಆಮ್ಲಜನಕವನ್ನು ಕಳುಹಿಸುವ ಅಪಧಮನಿಯಲ್ಲಿ ಅಡಚಣೆ ಉಂಟಾದಾಗ ಹೃದಯಾಘಾತ ಸಂಭವಿಸುತ್ತದೆ. ಇದು ವಿವಿಧ ಕಾರಣಗಳಿಂದ ಸಂಭವಿಸಬಹುದು. ಹೃದ್ರೋಗ ತಜ್ಞ ಡಾ. ಸಂಜಯ್ ಭೋಜರಾಜ್, ಹೃದಯಾಘಾತದ ಪ್ರಮುಖ ಕಾರಣಗಳಲ್ಲಿ ಒಂದನ್ನು ಹಂಚಿಕೊಳ್ಳಲು Instagram ಗೆ ಕರೆದೊಯ್ದರು ಮತ್ತು ಅದು ಒತ್ತಡವಲ್ಲ. ‘ನಿಮ್ಮ ಬೆಳಗಿನ ಸಮಯವು ನಿಮ್ಮ ಹೃದಯಕ್ಕೆ ಹೆಚ್ಚಿನ ಎಚ್ಚರಿಕೆಯ ಕಿಟಕಿಯಾಗಿದೆ’ ಎಂದು ಅವರು ಹೇಳುತ್ತಾರೆ. ಬೆಳಿಗ್ಗೆ ನಿಮ್ಮ ಹೃದಯಕ್ಕೆ ‘ಹೆಚ್ಚಿನ ಎಚ್ಚರಿಕೆಯ ಕಿಟಕಿ’ ಏಕೆ ಬೆಳಿಗ್ಗೆ ನಿಮ್ಮ…

Read More

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದಿಂದ ಪಂಚ ಗ್ಯಾರಂಟಿ ಯೋಜನೆಗಳನ್ನು ಜಾರಿಗೊಳಿಸಲಾಗಿದೆ. ಈ ಯೋಜನೆಗಳಿಗೆ ಈವರೆಗೆ ಯಾವುದಕ್ಕೆ ಎಷ್ಟು ಖರ್ಚು ಆಗಿದೆ ಎನ್ನುವ ಮಾಹಿತಿಯನ್ನು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ಹೆಚ್.ಎಂ ರೇವಣ್ಣ ನೀಡಿದ್ದಾರೆ. ಹಾಗಾದ್ರೆ ಯಾವ ಗ್ಯಾರಂಟಿ ಯೋಜನೆಗೆ ಎಷ್ಟು ಖರ್ಚು ಆಗಿದೆ ಎಂಬ ಮಾಹಿತಿ ಮುಂದಿದೆ ಓದಿ. ಇಂದು ವಿಧಾನಸೌಧದಲ್ಲಿ ಸುದ್ದಿಗೋಷ್ಠಿಯಲ್ಲಿ ಸಿಎಜಿ ರಿಪೋರ್ಟ್ ವಿಚಾರವಾಗಿ ಮಾತನಾಡಿದಂತ ಹೆಚ್.ಎಂ ರೇವಣ್ಣ ಅವರು, ಖರ್ಚು ಮಾಡಿದ ಲೆಕ್ಕ ಕೊಡಬೇಕು ಅಷ್ಟೇ. ಅದರೆ ಯೋಜನೆ ಟೀಕಿಸಬಾರದು. ಈ ರೀತಿಯ ಕಮೆಂಟ್ ಮಾಡಿರಲಿಲ್ಲ. ಇದಕ್ಕೆ ಸಿಎಂ‌‌ ಸಿದ್ದರಾಮಯ್ಯ ಉತ್ತರ ಕೊಡ್ತಾರೆ. ಗ್ಯಾರಂಟಿಯಿಂದ ಆರ್ಥಿಕವಾಗಿ ಹೊಡೆತ ಬೀಳುತ್ತೆ ಅನ್ನೋದು ಸತ್ಯಕ್ಕೆ ದೂರವಾಗಿದ್ದು. ಅವ್ರು ಯಾವ ಆಧಾರದ ಮೇಲೆ ಸರ್ವೇ ಮಾಡಿದ್ದಾರೆ ಗೊತ್ತಿಲ್ಲ. ಆಮೇಲೆ‌ ನಾವು ಅದಕ್ಕೆ ಉತ್ತರ ಕೊಡ್ತೇವೆ ಎಂದರು. ಗ್ಯಾರಂಟಿ ಯೋಜನೆಗಳು 98% ಜಾರಿಗೆ ಬಂದಿದೆ. ಅತ್ಯುತ್ತಮ ಪ್ರತಿಕ್ರಿಯೆ ಜನರಿಂದ ಸಿಗುತ್ತಿದೆ. ಶಕ್ತಿಯೋಜನೆಯಿಂದ ರಾಜ್ಯದ ಹಿರಿಮೆಗೆ ಸಾಕ್ಷಿಯಾಗಿದೆ. ಗೋಲ್ಡನ್ ಬುಕ್ ಆಫ್ ರೆಕಾರ್ಡ್‌ ಲಭಿಸಿದೆ. 500 ಕೋಟಿ ಹೆಚ್ಚು ಉಚಿತ ಪ್ರಯಾಣವನ್ನು ಮಾಹಿಳೆಯರು ಮಾಡಿದ್ದಾರೆ. ದೇಶ, ವಿದೇಶದಲ್ಲಿ ಪ್ರಶಂಸೆ ವ್ಯಕ್ತವಾಗಿದೆ. 94,177…

Read More

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಸರ್ಕಾರ ನಿಗದಿ ಪಡಿಸಿತ್ತು. ಇದೀಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಹಾಗಾದರೆ ಯಾರಿಗೆ ಎಷ್ಟು ಒಳ ಮೀಸಲಾತಿ ಪ್ರಮಾಣ ಅಂತ ಅಧಿಕೃತ ಆದೇಶ ಮುಂದೆ ಓದಿ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಧಿಕೃತವಾಗಿ ನಡವಳಿ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ಮಾನ್ಯ ಸರ್ವೋಚ್ಚ ನ್ಯಾಯಾಲಯವು CA No 2317 ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ರಾಜ್ಯ ಮತ್ತು ಇತರರು Vs ದೇವಿಂದರ್ ಸಿಂಗ್ ಪುಕರಣದಲ್ಲಿ ನೀಡಿರುವ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (ವರ್ಗೀಕರಣ) ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952 ರಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಇವರ ನೇತೃತ್ವದ ಏಕ ಸದಸ್ಯ ಆಯೋಗವನ್ನು ಸರ್ಕಾರದ ಆದೇಶ ಸಂಖ್ಯೆ : SWD/SLP/8 2024(P-1), ದಿನಾಂಕ: 12-11-2024 ಮತ್ತು…

Read More

ಬೆಂಗಳೂರು: ರಾಜ್ಯದಲ್ಲಿ ಪರಿಶಿಷ್ಟ ಜಾತಿಗಳಿಗೆ ಒಳ ಮೀಸಲಾತಿಯನ್ನು ಸರ್ಕಾರ ನಿಗದಿ ಪಡಿಸಿತ್ತು. ಇದೀಗ ಕರ್ನಾಟಕ ರಾಜ್ಯ ಪರಿಶಿಷ್ಟ ಜಾತಿಗಳಿಗೆ ಶಿಕ್ಷಣ, ಉದ್ಯೋಗದಲ್ಲಿ ಒಳ ಮೀಸಲಾತಿ ಕಲ್ಪಿಸಿ ಸರ್ಕಾರ ಅಧಿಕೃತ ಆದೇಶ ಹೊರಡಿಸಿದೆ. ಈ ಕುರಿತಂತೆ ಸಮಾಜ ಕಲ್ಯಾಣ ಇಲಾಖೆಯ ಜಂಟಿ ಕಾರ್ಯದರ್ಶಿ ಅಧಿಕೃತವಾಗಿ ನಡವಳಿ ಹೊರಡಿಸಿದ್ದು, ಕರ್ನಾಟಕ ಸರ್ಕಾರವು ಮಾನ್ಯ ಸರ್ವೋಚ್ಚ ನ್ಯಾಯಾಲಯವು CA No 2317 ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯವು ಪಂಜಾಬ್ ರಾಜ್ಯ ಮತ್ತು ಇತರರು Vs ದೇವಿಂದರ್ ಸಿಂಗ್ ಪುಕರಣದಲ್ಲಿ ನೀಡಿರುವ ತೀರ್ಪಿನ ಅನ್ವಯ ಪರಿಶಿಷ್ಟ ಜಾತಿಗಳ ಒಳಮೀಸಲಾತಿ (ವರ್ಗೀಕರಣ) ಬಗ್ಗೆ ಅಧ್ಯಯನ ನಡೆಸಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952 ರಂತೆ ನಿವೃತ್ತ ನ್ಯಾಯಮೂರ್ತಿ ಹೆಚ್.ಎನ್. ನಾಗಮೋಹನ್ ದಾಸ್ ಇವರ ನೇತೃತ್ವದ ಏಕ ಸದಸ್ಯ ಆಯೋಗವನ್ನು ಸರ್ಕಾರದ ಆದೇಶ ಸಂಖ್ಯೆ : SWD/SLP/8 2024(P-1), ದಿನಾಂಕ: 12-11-2024 ಮತ್ತು ದಿನಾಂಕ: 03-12-2024 ರಂತೆ ರಚಿಸಿ ಆದೇಶಿಸಲಾಗಿದೆ. ಅದರಂತೆ, ಸದರಿ ಆಯೋಗವು ದಿನಾಂಕ: 04-08-2025 ರಂದು…

Read More

ಬೆಂಗಳೂರು: ನಗರದಲ್ಲಿ ಗುಂಡಿ ಮುಚ್ಚಲು ಬಿಡಿಗಾಸು ಇಲ್ಲದ ಕಾಂಗ್ರೆಸ್ ಸರ್ಕಾರ, ಸುರಂಗ ಮಾಡುತ್ತೇವೆ ಎಂದು ಜನರಿಗೆ ಮಂಕುಬೂದಿ ಎರಚುತ್ತಿದೆ ಎಂದು ಮಾಜಿ ಶಾಸಕ ಹಾಗೂ ನಗರ ಜೆಡಿಎಸ್ ಅಧ್ಯಕ್ಷ ಹೆಚ್.ಎಂ. ರಮೇಶ್ ಗೌಡರು ದೂರಿದರು. ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡ ಬಿದರುಕಲ್ಲು ವಾರ್ಡಿನಲ್ಲಿ ಜೆಡಿಎಸ್ ಕಾರ್ಯಕರ್ತರ ಸಮಾವೇಶ ಹಾಗೂ ಪಕ್ಷದ ಸದಸ್ಯತ್ವ ನೊಂದಣಿ ಮಿಸ್ಡ್ ಕಾಲ್ ಅಭಿಯಾನಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಕಾಂಗ್ರೆಸ್ ಸರ್ಕಾರ ಗ್ಯಾರಂಟಿಗಳ ಹೆಸರಿನಲ್ಲಿ ಜನರನ್ನು ಮೋಸ ಮಾಡುತ್ತಿದೆ. ಅವುಗಳ ನೆಪದಲ್ಲಿ ಬರೀ ಘೋಷಣೆಗಳನ್ನು ಮಾಡುತ್ತಾ ಕಾಲಹರಣ ಮಾಡುತ್ತಿದೆ. ಗ್ಯಾರಂಟಿಗಳಿಂದ ರಾಜ್ಯದ ಅಭಿವೃದ್ಧಿ ಹಳಿ ತಪ್ಪಿದೆ ಎಂದು ಸಿಎಜಿ ವರದಿಯಲ್ಲಿ ಹೇಳಿದ್ದಾರೆ. ಇಡೀ ದೇಶಕ್ಕೆ ಕಾಂಗ್ರೆಸ್ ಸರ್ಕಾರ ಕೆಟ್ಟ ಪರಂಪರೆಯನ್ನು ಹಾಕಿಕೊಟ್ಟಿದೆ ಎಂದು ಅವರು ಆರೋಪಿಸಿದರು. ಅಭಿವೃದ್ಧಿ ಇಲ್ಲ, ನಿರ್ಮಾಣ ಕಾರ್ಯಗಳು ಇಲ್ಲ. ನೀರಾವರಿ ಯೋಜನೆಗಳು ನೆನೆಗುದಿಗೆ ಬಿದ್ದಿವೆ. ರಾಜ್ಯವನ್ನು ಮುಂದಕ್ಕೆ ಕೊಂಡೊಯ್ಯಬಲ್ಲ ದೂರದೃಷ್ಟಿ ಯೋಜನೆಗಳ ಜಾರಿ ಆಗುತ್ತಿಲ್ಲ. ಕೇವಲ ಜನರ ಮೇಲೆ ತೆರಿಗೆ ಮತ್ತು ಬೆಲೆ…

Read More

ಶಿವಮೊಗ್ಗ :  ಆ.27 ರಂದು ಗಣೇಶ ಹಬ್ಬದ ಪ್ರಯುಕ್ತ ಶಿವಮೊಗ್ಗ ಮಹಾನಗರ ಪಾಲಿಕೆ ವ್ಯಾಪ್ತಿಯಲ್ಲಿ ಪ್ರಾಣಿ ವಧೆ ಹಾಗೂ ಮಾಂಸ ಮಾರಾಟ ನಿಷೇಧಿಸಲಾಗಿದೆ. ಆದ್ದರಿಂದ ಮಾಂಸ ಮಾರಾಟದ ಮಾಲೀಕರು ತಮ್ಮ ಉದ್ದಿಮೆಯನ್ನು ಆ.27 ರಂದು ಬಂದ್ ಮಾಡಿ ಸಹಕರಿಸಬೇಕು. ಆದೇಶ ಉಲ್ಲಂಘಿಸುವ ಅಂಗಡಿ ಮಾಲೀಕರ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಲಾಗುವುದು ಎಂದು ಶಿವಮೊಗ್ಗ ಮಹಾನಗರ ಪಾಲಿಕೆಯ ಆಯುಕ್ತರು ಪ್ರಕಟಣೆ ತಿಳಿಸಿದ್ದಾರೆ.

Read More

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೆ. 08 ರಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿ ಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದ್ದು, ಆಸಕ್ತರಿಂದ ಅರ್ಜಿ ಆಹ್ವಾನಿಸಿದೆ. ಸ್ವಯಂ ಉದ್ಯೋಗಿಗಳಾಗಲು ಬಯಸುವ 18 ರಿಂದ 45 ವರ್ಷ ವಯಸ್ಸಿನ ಕರ್ನಾಟಕ ರಾಜ್ಯದ ಯಾವುದೇ ಜಿಲ್ಲೆಯ ನಿರುದ್ಯೋಗಿ ಪುರುಷರು ಈ ಶಿಬಿರದಲ್ಲಿ ಪಾಲ್ಗೊಳ್ಳಬಹುದಾಗಿದ್ದು, ಈ ಶಿಬಿರದ ಸಮಯದಲ್ಲಿ ತರಬೇತಿ, ಊಟ ಹಾಗೂ ವಸತಿ ಸೌಕರ್ಯಗಳು ಉಚಿತವಾಗಿ ಶಿಬಿರಾರ್ಥಿಗಳಿಗೆ ಕಲ್ಪಿಸಲಾಗುವುದು. ಗ್ರಾಮೀಣ ಭಾಗದ ಬಿಪಿಎಲ್ ಅಭ್ಯರ್ಥಿಗಳಿಗೆ ಮೊದಲ ಆದ್ಯತೆಯನ್ನು ನೀಡಲಾಗುವುದು. ಅಭ್ಯರ್ಥಿಗಳು ಸ್ಥಳಿಯ ಭಾಷೆ ಬಲ್ಲವರಾಗಿದ್ದು, ಕನ್ನಡ ಓದಲು ಮತ್ತು ಬರೆಯಲು ತಿಳಿದಿರಬೇಕು. ತರಬೇತಿ ನಂತರ ಕೇಂದ್ರ ಸರ್ಕಾರದ ಗ್ರಾಮೀಣ ಸಚಿವಾಲಯದಿಂದ ಪ್ರಮಾಣ ಪತ್ರವನ್ನು ವಿತರಿಸಲಾಗುವುದು. ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ. 08 ರ ಸೋಮವಾರ ಬೆಳಗ್ಗೆ 9.00 ಘಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವಉದ್ಯೋಗ ತರಬೇತಿ…

Read More

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಶ್ವವಿದ್ಯಾಲಯವು ಸೆ. 01 ರಿಂದ 30 ರವರೆಗೆ 1 ತಿಂಗಳು ಶಿವಮೊಗ್ಗ ಕೃಷಿ ಮಹಾವಿದ್ಯಾಲಯ ಆವರಣದ ಬೇಕರಿ ಘಟಕದಲ್ಲಿ ವಿವಿಧ ಬೇಕರಿ ಉತ್ಪನ್ನಗಳಾದ ಬೆಣ್ಣೆ ಬಿಸ್ಕತ್ತು, ಕೋಕೋನಟ್ ಕುಕಿಸ್, ಕೋಕೊನಟ್ ಬಿಸ್ಕತ್ತು, ಮಸಾಲ ಬಿಸ್ಕತ್ತು, ಕೋಕೊನಟ್ ಕ್ಯಾಸಲ್ಸ, ಫ್ರುಟ್ ಕೇಕ್, ಸ್ಪಾಂಜ್‌ಕೇಕ್, ಜೆಲ್‌ಕೇಕ್, ಬಟರ್ ಐಸಿಂಗ್, ಮಿಲ್ಕ್ ಬ್ರೆಡ್, ಪಪ್‌ಪೇಸ್ಟ್ರೀ, ದಿಲ್ ಪಸಂದ್, ಬಾಂಬೆ ಕಾರ ಹಾಗೂ ಇತರೆ ಬೇಕರಿ ಉತ್ಪನ್ನಗಳ ತಯಾರಿಕೆಯ ಬಗ್ಗೆ ಕೌಶಲ್ಯಾಭಿವೃದ್ಧಿ ತರಬೇತಿಯನ್ನು ಆಯೋಜಿಸಿದೆ. ಆಕಸ್ತರು ತರಬೇತಿ ಶುಲ್ಕ ರೂ. 4500/-ಗಳನ್ನು ಪಾವತಿಸಿ, ಆ.30 ರೊಳಗಾಗಿ ದೂರವಾಣಿ ಮೂಲಕ ಅಥವಾ ಖುದ್ದಾಗಿ ಕೃಷಿ ಮಹಾವಿದ್ಯಾಲಯವನ್ನು ಸಂಪರ್ಕಿಸಿ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಕೃಷಿ ಮತ್ತು ತೋಟಗಾರಿಕೆ ಮಹಾವಿದ್ಯಾಲಯದ ಪ್ರೋಫೆಸರ್ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ. ನೋಂದಾವಣೆ ಹಾಗೂ ಹೆಚ್ಚಿನ ಮಾಹಿತಿಗಾಗಿ ಡಾ. ಜಯಶ್ರೀ ಎಸ್. -9449187763 ಮತ್ತು ಜಯಶಂಕರ-9686555897 ಇವರುಗಳನ್ನು ಸಂಪರ್ಕಿಸುವುದು.

Read More